ಒಟ್ಟು 2071 ಕಡೆಗಳಲ್ಲಿ , 107 ದಾಸರು , 1650 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯೆ ಮೂಜಗದ ದೊರೆಯೆ ನಿನಗಿದು ಸರಿಯೆ ಪ. ಹರಿಯೆ ಮೂಜಗದ ದೊರೆಯೆ ನಿನ್ನನೆ ಮರೆಯಪೊಕ್ಕವರಲ್ಲಿ ಈ ಪರಿ ಬರಿಯ ಪಂಥದಿ ಮರುಗದಿರ್ಪುದು ಸರಿಯೆ ನಿನಗದು ಸರಸವಲ್ಲದುಅ.ಪ. ಉಕ್ಕಿನ ಕಂಬದಿಂದ ಉದಿಸಿ ಬಂದು ರಕ್ಕಸನುರವ ಸೀಳಿ ಕರುಳನು ಬಗೆದು ಉಕ್ಕುವ ಕೋಪದಿಂದ ರಕುತವು ಸುರಿಯೆ ಭಕ್ತ ಪ್ರಹ್ಲಾದನಾದರದಿ ಕಾಯ್ದು ಭಕ್ತ ವತ್ಸಲನೆನಿಸಲಹುದು ಶಕ್ತಿಹೀನತೆಯಿಂದ ಮರೆಹೊಕ್ಕ ಎನ್ನನು [ಕಾಯು]ವುದು 1 ಒಪ್ಪಿಡಿಯವಲಕ್ಕಿಯ ಒಪ್ಪಿಸಿನಿಂದ ವಿಪ್ರನ ನಲವಿಂದ ನೋಡುತಲಂತು ವಿಪುಲಸಂಪದವನ್ನು ಕರುಣಿಸಿದಂಥ ಅಪ್ರತಿಮ ಸಾಹಸಿಯೆನುತೆ ನಿನ್ನೊಳು ತಪಿಸಿ ಬೇಡುವ ಎನ್ನೊಳೀಪರಿ ಒಪ್ಪದೊಪ್ಪದೆನ್ನಪ್ಪ ಕೇಳಿದು ಸರಿಯೇ ಶ್ರೀನರಹರಿಯೇ 2 ಮಾನಿತÀಧ್ರುವ ಬಾಲನಂ ಮನ್ನಿಸಿ ಪೊರೆದೆ ಮಾನಿನಿ ಪಾಂಚಾಲಿಯ ಮಾನದಿ ಕಾಯ್ದೆ ಸಾನುರಾಗದಿಂ ಗಜನಂ ಉದ್ಧರಿಸಿದೆ ಕ್ಷೋಣಿಯೊಳಗತಿ ದೀನರಾದರ ಸಾನುರಾಗದಿ ಪೊರೆವ ಶ್ರೀಧರ ದಾನವಾಂತಕ ಶೇಷಗಿರೀಶನೆ ಸೂನುವೆಂಬಭಿಮಾನ ನಿನಗಿರೆ [ಮಾಣದೆನ್ನನು ಕಾಯೊ] ಹರಿಯೇ ಶ್ರೀನರಹರಿಯೇ3
--------------
ನಂಜನಗೂಡು ತಿರುಮಲಾಂಬಾ
ಹರಿಯೆಂದು ಮನವೆ ನೀ ಸ್ಮರಿಸೋ ದೃಢದಿಂದ ಸ್ಮರಿಸಿದಾಕ್ಷಣ ಬಂದು ಒದಗುವ ಗೋವಿಂದ ಕರುಣದಿಂದಲಿ ನೋಡಿ ಹಿಂಗಿಸುವ ಭವಬಂಧ ಪರಮದಯಾನಿಧಿಯು ಶ್ರೀಹರಿ ಮುಕುಂದ 1 ಸ್ಮರಿಸಿದಾಕ್ಷಣ ಪುಣ್ಯಗತಿಗೈದಜಾಮಳ ಮರೆಯದೆ ಸ್ಮರಿಸಿದ ಧ್ರುವ ಯೈದಿದಢಳ ಹರಿಯೆಂದು ಪ್ರಹ್ಲಾದ ಪುಣ್ಯಗೈದ ಸಬಳ ಸ್ಮರಿಸಿದವರ ಕಾವ ಶ್ರೀಹರಿ ಗೋಪಾಲ 2 ಗಜ ಭಯ ಸ್ಮರಿಸಿದಾಕ್ಷಣ ಮೊರೆ ಇಟ್ಟು ದ್ರೌಪದಿಗಾಯಿದಭಿಮಾನ ಸ್ಮರಿಸಿದ ಪಾಂಡವರ ರಕ್ಷಿಸಿದ ಪ್ರಾಣ ಪರಮಭಕ್ತರ ಜೀವ ಶ್ರೀಹರಿ ನಾರಾಯಣ 3 ಹರಿನಾಮದಿಂದಾಯಿತು ಅಹಲ್ಯೋದ್ಧಾರಣ ಸ್ಮರಣೆ ಸಕಲವೆಲ್ಲ ತರಿಸಿತು ಪೂರ್ಣ ಸುರಮುನಿಜನರಿಗೆ ಇದೇ ನಿಜಭೂಷಣ ಪರಮ ವೈಷ್ಣವರಿಗೆ ಇದೇ ಜೀವ ಪ್ರಾಣ 4 ಹರಿಯೆಂದು ನೆನಿಯೋ ನೀ ಗುರು ಕೃಪೆಯಿಂದ ಸ್ಮರಿಸೊ ಮನವೆ ದೃಢಭಾವ ಭಕ್ತಿಯಿಂದ ನಿತ್ಯ ನಿಜಾನಂದ ತೋರುವ ಶ್ರೀಹರಿನಾಮ ಸುಖ ಸದಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಯೆನ್ನ ನರಜನ್ಮ ವ್ಯರ್ಥವಾಯ್ತು ಪರಮ ಭಕ್ತಿಯೊಳಿನ್ನು ಭಜಿಸುವೆನು ಕಾಯೋ ಪ ತೊಡೆಯ ಮೇಲಾಡುತಿಹ ಶಿಶುವಿನಾನುಡಿ ಕೇಳಿ ಕಡು ಮೂರ್ಖತನದಿಂದ ಭ್ರಮೆಗೊಂಡೆನೋ ಸಡಗರದಿ ಕಿವಿಗೊಟ್ಟು ಕಿಂಕಿಣಿಯ ದ್ವನಿಗಳನು ಎಡಬಿಡದೆ ಕೇಳುತಿಹ ಹರಿಣನಂತಾದೇ 1 ತೊಡೆಗÀುಹ್ಯ ಕುಚಗಳಿಗೆ ಅನುದಿನವು ನಲಿಯುತ್ತ ಮಡದಿಯರ ಅಂಗ ಸಂಗದ ನಂಬುತಾ ಒಡಲ ಶಾಂತಿಯಗೊಳಿಸೆ ಬಡಿಗೋಲು ಕೆಡಹಿಕೊಂ ದಡಗುತಿಹ ಮೂಷಕನ ತೆರದಲ್ಲಿ ಕಳೆದೇ 2 ನಿರುತದಿಂ ಪರಸತಿಯ ಲಾವಣ್ಯವನು ನೋಡಿ ಚರಿಸಿತೆನ್ನಯ ಮನವು ಅವಳ ಕೂಟಕ್ಕೇ ಉರಿವ ದೀಪವ ಕಂಡು ಕನಕ ಮಣಿಯೇಯೆಂದ ಎರಗುತಿಹ ಹುಳದಂತೆ ಹಾಳಾದೆ ಬರಿದೇ 3 ಜರಿದು ನಿಜವೃತ್ತಿಯನು ಪರದಾಸ್ಯದಲಿ ಮುಳುಗಿ ಪೊರದೆ ಹೊಟ್ಟೆಯನಾ ಪರಾನ್ನ ಭಕ್ಷದಲೀ ಹರುಷದಿಂ ಬಲೆಯತುದಿ ಮಾಂಸಕ್ಕೆ ಮೆಚ್ಚಿದಾ ಮರುಳಾ ಮೀನಿನ ಗತಿಯು ಯನಗಾಯ್ತು ನಿಜದೀ4 ನಾರಿಯರ ಜಾಲಕ್ಕೆ ಪ್ರತಿದಿನವು ಸಿಲುಕುತ್ತ ಮಾರಿಯರ ಸಾಕಿ ನಾ ಫಲವ ತಿಂದೆ ಭ್ರಮರ ಸಂಪಿಗೆಯಸಳ ಸಾರಿ ಕೊಡಲೆ ಮೃತ್ಯುವಶವಾಗುವಂತೇ 5 ಮೂರಾರು ಶತ್ರುಗಳು ತರಿದೆನ್ನ ಮನವನ್ನು ಗಾರು ಮಾಡುತಲಿಹವು ತಿಳಿಯದಾ ಹರಿಯೇ ನರಸಿಂಹನೇ ಐದು ಇಂದ್ರಿಯವ ಗೆಲಲಾರೆ ಭೂರಿ ಭಕ್ತಿಯೊಳೆರಗಿ ಮರೆಹೊಕ್ಕೆ ಕಾಯೋ 6 ಪನ್ನಗಶಯನ ಶ್ರೀ ವೇಣುಗೋಪಾಲನೆ ಚನ್ನಿಗಕೇಶವನೇ ದೂರ್ವೇಶನೇ ನಿಂನನಾ ಬಿಡಲಾರೆ ಮಾರಮಣ ಪೊರೆಯಂನ ಯೋನಿ ಜನ್ಮಕೆ ಮುಂದೆ ಬರದಂತೆ ಮಾಡೋ 7
--------------
ಕರ್ಕಿ ಕೇಶವದಾಸ
ಹರಿಯೆನ್ನೋ ಹರಿಯೆನ್ನೋ ಹರಿಯೆನ್ನೋ ಖೋಡಿ ಹರಿಯದಾಸರ ಸಿರಿಸಂಪದ ನೋಡಿ ಪ ಎರವಿನ ಸಿರಿಗೆ ನೀ ಮರುಳಾದಡಿ ಹರಿಯೆಂದು ನುಡಿಲಿಕ್ಕೆ ನೀನಗೇನು ಧಾಡಿ ಧರೆಯೊಳಾರಿಲ್ಲ್ಹರಿದಾಸರ ಜೋಡಿ ಮರುಳ ಯಮದೂತರಂಜಿ ಹೋಗುವರೋಡಿ 1 ಭವಚಕ್ರದೊಳುಬಿದ್ದು ಬೆಂಡಾದೆ ಕಾಗಿ ಅವನಿಸುಖ ನೀನಿನ್ನು ತಿಳಿವಲ್ಲಿ ಗೂಗಿ ಭವಹರನರ್ಚಿಸಿ ನೋಡೋ ದೃಢಮಾಗಿ ಭವತಾಪ ನಿನಗೆಂದಿಗಿರದೋ ನಿಜವಾಗಿ 2 ಮತಿಶೂನ್ಯನಾಗಧೋಗತಿ ಕಾಣಬೇಡೋ ಮತಿಯಿಂದ ನಿಜಸ್ಥಿತಿ ವಿಚಾರಮಾಡೋ ಕೃತಕೃತ್ಯರೆನಿಪ ಹರಿದಾಸರೊಳಾಡೋ ಪತಿತ ಶ್ರೀರಾಮನರಸಿ ಮುಕ್ತಿಯ ಕೂಡೋ 3
--------------
ರಾಮದಾಸರು
ಹರಿಯೇ ಕಾವುದು ಕಾವದು ನೀ ಪ ಕಾವುದು ಕಾವದು ಸಾದರದಿಂದಲಿ ದೇವನೆ ಯನ್ನ ಸದಾ | ಪಾದ ಯುಗ್ಮ ಪದಾ ಅ.ಪ ಸ್ವರ್ಗದ ಸಾಸಿರ ಮಡಿಸುಖ ಭಕ್ತಿಯ ಮಾರ್ಗವ ನರಿಯದೇ | ದುರ್ಗುಣದಲಿ ತನು ಧನ ಸಿರಿಮದದಿಂ ಆರ್ಗೆಯ ಮನ್ನಿಸದೇ ಮಾರ್ಗಣವೆಸನುದರವ ಪೊರೆವುತ ಷಡ್ವರ್ಗರ ಬಲಿವಿಡಿದೇ| ಅರ್ಗಳಿಗೆಯು ನೆನಿಯದೆ ಬಹ ಜನ್ಮದಿ ದುರ್ಗತಿ ಭೋಗಿಸಿದೇ 1 ನಾ ಪೂರ್ವದಿ ಮಾಡಿದ ಬಹು ದುಷ್ಕøತ ಆ ಫಲದಿಂದ ಲೀಗ | ಮಹಾಪಯ ನಿಧಿಯೊಳಗೆ | ಧಡಿಗೆ | ಶ್ರೀಪತಿನಾವಿಕನಾಗಿ ನೀ ದಾಟಿಸಲೀಪಸುಗಳೆಂದನಗೆ | 2 ಕಂದನ ಗುಣದೋಷಂಗಳ ಆರಿಸೆ ತಂದೆಗಿದು ಚಿತವೆ | ನೀ ಬಂದು ಜಗದ್ಧರುವೆ | ಪತಿತರ ವೃಂದ ಉದ್ದರಿಸುವೆ | ಮಂದರ ಗಿರಿಧರ ತಂದೆ ಮಹಿಪತಿ ನಂದನವರ ಪ್ರಭುವೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಯೇ ಗತಿ ಭರ್ತನು ಜಗಕೇ|ನರ ಹರಿಯೇ ನೆಂಟ ಭಕುತ ಜನಕೇ ಪ ಆರು ಸಲಹುವರ ನಾಥ ದೀನಜನ| ಘೋರಪಾತಕಿ ಬಧಿರಾಂಧರನು| ವಾರಿಜಾಸನ ಮುಖ್ಯ ದೇವತೆಗಳಲಿ|ವಿ ಚಾರಿಸೆ ಅನ್ಯದೊರೆಗಳುಂಟೆ 1 ಕಮಲ ಬಾಂ ಧವ ವರುಣರು ಮೃತ್ಯುಗಳೆಲ್ಲ| ಭಾವಿಸೆ ನೇಮದಲಿರುತಿಹರು 2 ಅವನ ರೋಮರೋಮದಿ ಬ್ರಹ್ಮಾಂಡವು | ಅವುದುಂಬರ ಫಲದಂತಿಹುದು | ಭುವನದಿ ಗುರುಮಹೀಪತಿ ಸ್ವಾಮಿಯು ಜಗ ಕಾವ ಕೊಲುವ ನಿರ್ಮಿಸುತಿಹನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಯೇ ನೀನೇ ಗತಿ ಕೇಶವನೇ ಹರಿಯೇ ನೀನೇ ಗತಿ ಪ ಸುರನರ ವಂದ್ಯನೆ ಪರಮ ಪಾವನನೇ ಗಿರಿಪುರವಾಸನೇ ವಸುಮತಿ ಪತಿಯೇ 1 ಅಂಬುಜಲೋಚನ ವಸುದೇವ ಸುತನೇ ತುಂಬೂರ ನಾರದ ಗಾನ ಸೇವಿತನೇ 2 ವಾಸುಕಿಶಯನನೇ ಚನ್ನ ಕೇಶವನೇ 3
--------------
ಕರ್ಕಿ ಕೇಶವದಾಸ
ಹರಿಯೇ ಶ್ರೀಗುರು ನಮ್ಮ ಹರಿಯೇ ಸದ್ಗುರು ನಮ್ಮ ಹರಿಯೇ ಮದ್ಗುರು ಪರಾತ್ಪರ ಪೂರ್ಣನು ಧ್ರುವ ಹರಿಯೇ ಗುರುವೆಂದೆನಿಸಿ ಗುರವೆ ಹರಿ ಎಂದೆನಿಸಿ ಕರಸಿಕೊಂಡವನೊಬ್ಬನೆ ಪರಬ್ರಹ್ಮನು ನರಮನುಜಾಗಾಗುವದು ದುರ್ಗತಿಯ 1 ಒಂದು ವಸ್ತುವೆ ತಾನನೇಕ ನಾಮವ ಧರಿಸಿ ಸಂದಿಸಿ ಹ್ಯಾ ನಂದ ರೂಪದೊಳಗೆ ಮಂದಮತಿಗಳ ವಿವರ ಮರ್ಮವನು ಅರಿಯದೆ ದ್ವಂದ್ವ ಭೇದದಿ ಗಾಢಸುತ್ತಿಹರು 2 ಹರಿಯೇ ಶ್ರೀಗುರುವಾಗಿ ಗುರುವೆ ಶ್ರೀಹರಿಯಾಗಿ ತೋರಿದನೇಕೋಮಯವಾಗಿ ಎನಗೆ ತರಳ ಮಹಿಪತಿ ಸಬಾಹ್ಯಾಂತ್ರ ಪರಿಪೂರ್ಣದಲಿ ಗುರುತವಾದನು ಹರಿಯೇ ಸಾಕ್ಷತನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿರೇವ ಪರೋ ಹರಿದೇವ ಗುರೋ ಹರಿಯೇ ಗುರುವೆಂದರವ್ಹಿರೋ ಧ್ರುವ ಗುರುಮಧ್ವಪರ್ಹೇಳಿದ ನಿಜಕೀಲು ಅರಿತುಕೊಂಬುವಾದಿದೆವೆ ಮೇಲು ಪರಮ ಭಗತರನುಭವದ ಬಾಗಿಲು ಪರಗತಿ ಸಾಧನಕಿದೆ ಮಿಗಿಲು 1 ಹರಿಗುರುವೆರಡಾಗಿ ತೋರಿತು ನಾಮವು ಅರಿಯಲರಿಯದವಾಗಿದೆ ಭ್ರಮವು ತೋರುವದೊಂದೇ ಸಜ್ಜನರಿಗಿದೇ ನೇಮವು ಅರಿಕ್ಯುಳ್ಳವರಿಗಿದೇ ಕ್ರಮವು 2 ಹರಿಗುರು ಒಂದಾಗಿ ತೋರಿತು ನಿಜಘನ ತರಳ ಮಹಿಪತಿಸ್ವಾಮಿಯ ಕರುಣ ಗುರುಭಾನುಕೋಟಿತೇಜನೆ ಪರಿಪೂರ್ಣ ತೋರುವದೊಂದಾಗಿದೆ ನಿಜಖೂನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಸರ್ವೋತ್ತಮನೆಂದರಸುವರು ಪ ಹರಿದಾಸರಿವರು ಧರೆಯೊಳಿವರಿಗೆ ಸರಿಗಾಣೆ ಕೇಳಮ್ಮ ಜಾಣೆ ಅ.ಪ ಸಾಧುಸಜ್ಜನರಿಗೆ ಬಾಗುವರು ವೇದಕೆ ನಮಿಸುವರು ವಾದವಾಂಛಲ್ಯವ ತೊಡದಿಹ್ಯರು ಭೇದಿಲ್ಲದಿವರು 1 ಕಾಮ ಕ್ರೋಧಾದಿಗಳು ಜೈಸಿಹ್ಯರು ತಾಮಸಬಿಟ್ಟಿಹರು ಭೂಮಿ ಮೋಹಾದಿಗಳನಳಿದಿಹ್ಯರು ಸ್ವಾಮಿನ ಭಜಿಸುವರು 2 ಕ್ಲೇಶಪಂಚಕದಿಂದುಳಿದಿಹ್ಯರು ಮೋಸಕೆ ಒಳಪಡರು ಅಶಪಾಶಗಳೆಲ್ಲ ತುಳಿದಿಹ್ಯರು ವಾಸನೆ ತೊಳೆದಿಹ್ಯರು 3 ಮೆಚ್ಚದೆ ಸಂಸಾರ ತುಚ್ಛೀಕರಿಸಿಹ್ಯರು ಎಚ್ಚರಗೊಂಡಿಹ್ಯರು ಅಚ್ಚುತಾನಂತನೆ ಗತಿಯೆಂಬುವರು ಬಚ್ಚಿಟ್ಟು ನೆನೆಯುವರು 4 ಹರಿಯೆ ಪರದೈವವೆಂದರಿತಿಹ್ಯರು ಹರಿಯ್ಹೊರತಿಲ್ಲೆಂಬುವರು ಸರುವ ಜಗಭರಿತನೆಂದವರು ಸಿರಿರಾಮನ್ನ ತಿಳಿದಿಹ್ಯರು 5
--------------
ರಾಮದಾಸರು
ಹರಿಸ್ಮರಣೆ ಪೂರಣ ಕರತನ್ನಿ ಧ್ರುವ ಕರತನ್ನಿರೊ ವರಗುರು ಕೃಪೆಯಿಂದ ಗುರುವರ ಮೂರುತಿ ಕರುಣಾನಂದ 1 ಕರುಣಿಸಿ ನೋಡಲು ಬಾಹುದು ಪುಣ್ಯ ಶರಣ ಜನರಿಗಿದು ತಾರ್ಕಣ್ಯ 2 ತಾರ್ಕಣ್ಯಂಬುದು ತರ್ಕರಹಿತ ಸರ್ಕನೆ ತಿಳಿವದು ತನ್ನೊಳು ಗುರುತ 3 ಗುರ್ತವಾಗಲು ನಿಜ ಹಿತಾರ್ಥ ಅರ್ತವಗಿದು ಸ್ವಸುಖ ಪರಮಾರ್ಥ 4 ಪರಮಾರ್ಥವು ಪರಗತಿ ಸಾಧನ ಪರಲೋಕಕೆ ಐದುವ ಸೊಪಾನ 5 ಸೋಪಾನವೆ ಸುಲ್ಲಭ ಸುಪಥ ಉಪಾಯದಲಿ ತಿಳಿಯಲು ಸ್ವಹಿತ 6 ಸ್ವಹಿತ ಮಾರಿಕೊಂಬುದೇ ಸುಖ ಸಾಹ್ಯ ಮಾಡುವ ಶ್ರೀ ಗುರುಕುಲತಿಲಕಾ 7 ಶ್ರೀಗುರು ಸೇವೆಯ ಮಾಡಿರೊ ಬ್ಯಾಗ ಜಗದೊಳಗಿದು ಮಹಾ ಪುಣ್ಯದ ಯೋಗ 8 ಯೋಗವೆ ಮಹಾ ನಿಜ ಭಕ್ತರ ಪ್ರಾಣ ಸುಗಮ ಸುಪಥ ಸದ್ಗತಿ ಸಾಧನ 9 ಸಾಧನ ಪಡೆವದು ಗುರುದಯ ಕರುಣ ಸದಮಲ ಸುಖ ಸುಜ್ಞಾನದ ಸ್ಪುರಣ10 ಸ್ಪುರಣ ಸುಫಲಿತ ಸುಜನರ ಹೃದಯ ಸುರ ಮುನಿ ಜನರಾನಂದದ ಉದಯ 11 ಉದಯವಾಯಿತು ಮಹಿಪತಿ ಮನದೊಳಗೆ ಸದೋದಿತವಾಯಿತು ಗುರುಕೃಪೆಲೆನಗೆ 12 ಎನ್ನೊಳು ದೋರಿತಾನಂದದಲಹರಿ ತನ್ನಿಂದಲಿ ತಾನೊಲಿದ ಶ್ರೀ ಹರಿ 13
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಹರಿ ಹರಿಯೆನ್ನಿ ಮಂದರಧರನೆ ಗತಿಯೆನ್ನಿ ದೀನ ದಯಾಕರನು ದಿವಿಭುವಿ ಪ. ಮಾನ ಭರಾಕರನು ನೀನೆಂದೊರವರನು ದುರಿತ- ಹೀನರ ಮಾಡುವನು 1 ತರಳನ ಮೊರೆ ಕೇಳಿ ವರ ನರ ಹರಿಯ ರೂಪವ ತಾಳಿ ದುರುಳ ಹಿರಣ್ಯಕನಾ ಕರುಳನು ಕೊರಳೊಳು ಧರಿಸಿದನಾ 2 ಗಜರಾಜನ ಕಾಯ್ದಾ ಬಾಣನ ಭುಂಜ ಪುಂಜವ ಕೊಯ್ದಾ ಗಜಪುರವರಗೊಲಿದಾ ಚರಣಾಂ- ಬುಜವೀವುತ ನಲಿದಾ 3 ನೆನೆದಲ್ಲಿಗೆ ಬರುವಾ ನಂಬಿದ ಜನರ ಸಂಗಡವಿರುವಾ ಅನುಗಾಲವು ಪೊರೆವಾ ಮನಸಿಜ ಜನನಿಯನಪ್ಪಿರುವಾ 4 ದಾಸರ ಸಲಹುವದು ಶೇಷ ಗಿ- ರೀಶನ ಮಹಾ ಬಿರುದು ದೋಷಗಳನು ತರಿದು ಈರೆರ- ಡಾಸೆ ಪೂರಿಪ ನೆರೆದೂ 5
--------------
ತುಪಾಕಿ ವೆಂಕಟರಮಣಾಚಾರ್ಯ
ಹರುಷದಿಂದಲಿ ಮನವೇ | ಪ ಭವ ಜಲದಿಂದಲಿ ದಾಟಿಸುವನು ಕಣ್ಣವರಿಸುತಲಿದ್ದು|ಅಚ್ಯುತಾನಂತ ಹರಿ| ಯನ್ನದೆವೆ ಕಂಡ ಚಿಂತೆಯನು ಮಾಡಿ| ಬನ್ನ ಬಡುತಲಿ ಉದರ|ಧಾವತಿಯವಳಗಾಗಿ| ದಣ್ಣನೇ ದಣಿದು ಬಂದು ಬಯಿಗೋರಗುವೇ 1 ಬಳ್ಳಿನೊರಳಗ ತೊಡರಿದ|ಕಾಲಿನಂತೆ ಭವಾ ತಳ್ಳಿಯೊಳುಸಿಲ್ಕಿ ಬಳಲುತಾ ಗುಂದುತಾ| ನಿಲ್ಲದೆವೆ ತಿರುಗುತಿಹೆ ಸಾಧು ಸಂಗಕಬರಲು ಯಳ್ಳಿಸಿತು ಅವಕಾಶ ಕಾಣೆ ನಾನು 2 ಕೆರೆಯ ನೀರನು ಕೆರೆಗೆ ಚೆಲ್ಲಿ|ವರವಪಡಿಯಲಿಕ್ಕೆ ಭರದಿಂದ ಬಂದ ಅಲತ್ಯ ನೋಡ್ಯಾ| ಹರಿನಾಮ ಹರಿಗರ್ಪಿಸಿ ಗತಿ ಪಡಿಯಲೊಲ್ಲಿ ಹರ ಹರಾ ನಿನಗೆಂತು ಮತಿ ವದಗಿತೋ 3 ಹಾಡಿ ಕೊಂಡಾಡಿದರ ಹರಿನಾಮ ನಾಲಿಗ್ಗೆ ಬಾಡಿಗೆಯು ಬೀಳುವದೋ ನಾನರಿಯೆ ನೋ ಮೂಢ ಪಾಮರನೆಮರ ಹುಟ್ಟಿ ಮರಬಿದ್ದಂತೆ ನೋಡು ನರ ದೇಹದಲಿ ಬಂದಾಯಿತು 4 ಹಿಂದಿನಪರಾಧಗಳಯೇನಾದರಾಗಲಿ ಮುಂದೆ ಇನ್ನಾರ ಸ್ವಹಿತ ವಿಚಾರಿಸೋ ತಂದೆ ಮಹಿಪತಿಸ್ವಾಮಿ ದ್ವಂದ್ವ ಚರಣಕ ಹೊಂದಿ ಇಂದಿರೇಶನ ವಲಮೆ ಪಡೆದು ಸುಖಿಸೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಸಿವಾಗುತಿದೆಯೆನೆಗೆ ಬಸವಳಿದೆನೆ ಹೀಗೆ ಪ. ಹಸಿವು ಹೆಚ್ಚಿತು ಅಕಟಾ ತೃಷೆಯಿಂದೆನಗತಿಕಾಟ ಪುಸಿಯಲ್ಲಿದು ಒಣಗಿದ ಕಾಷ್ಟಂ ಅ.ಪ. ಅಂಗಜ ಜನಕ ಶ್ರೀರಂಗನಾಯಕ ನಿಮ್ಮ ಸಂಗತಾಪದಿಂ ತಪಿಸುತಲಿ 1 ವಾಸುದೇವನೆ ನಿಮ್ಮ ಸಾಸಿರ ನಾಮಾಮೃತವ ಲೇಸಾಗಿ ಕುಡಿಯದೆ ಆಸೆಗೆ ಸಿಲುಕುತ ಮೋಸವೋದೆನೋ ಮರುಳನಂದದಿ 2 [ಬಂದ] ಅರಿಯದ ಈ ಪಸುಳೆಯನು ಪರಿಭಾವಿಸಿ ನೋಡಿನ್ನು ವರಶೇಷಗಿರಿದೊರೆ ವರದ ನಿನ್ನಡಿದಾವರೆಗಾರಡಿಯಂತಿರಿಸೆನ್ನಂ3
--------------
ನಂಜನಗೂಡು ತಿರುಮಲಾಂಬಾ
ಹಾದಿಯ ಕೊಡುಹರಿ ಪರಗತಿಯಾ ಸಾಧಿಸಿ ಬಂದೇ ಕೇಳಿ ಕೀರುತಿಯಾ ಪ ಕ್ಷಿತಿಯೊಳು ಭರತ-ಖಂಡದ ದೇಶದ ಪತಿತರ ತಾಂಡೆಯದ ನಾಯಕನು ಮತಿ ಹೀನ ಕಾಮಕ್ರೋಧರಾಗಿಹ ಪುಂಡರು ಪಥ ನಡೆಗುಡಿಸರು ಅತಿಬಲರು 1 ಆದಿಲಿ ಅಜಮಿಳಾ ತಾಂಡ್ಯ ಹೋದ ಬಳಿಕಾ ಹಾದಿ ಮುಗ್ಗಿತಿ ಕಡೆ ಬಹುದಿನದೀ | ಸಾದರಲೆನಗನಿ ಅಭಯವ ಕೊಟ್ಟರ | ಭೇದಿಸಿ ಜನರನು ನೆರಹುವೆನು 2 ಏನಾರೆ ಗೋಣಿಗೆ ಭಾವದ ಲಹರೆ ಕÉೂಂಡು ಮಾನು ಭಾವರ ಪ್ಯಾಟಿ ಹೋಗಿಸುವುದು ಘನಗುರು ಮಹಿಪತಿ ನಂದನ ಸಾರಥೀ ದೀನ ವತ್ಸಲನೆಂಬ ಬಿರುದಹುದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು