ಒಟ್ಟು 8509 ಕಡೆಗಳಲ್ಲಿ , 134 ದಾಸರು , 5107 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಜಯ ಪೂರ್ಣಾನಂದ ಜಯ ಜಯ ಗೋಪಿಯ ಕಂದ ಜಯ ಜಯ ವೆಂಕಟ ರಮಣ ರಕ್ಷಿಸು ಕೃಪೆಯಿಂದ ಪ. ಕೃಷ್ಣ ಕೈವಲ್ಯದ ಕರುಣಾ ದೃಷ್ಟಿಯಿಂದಲಿ ನೋಡು ಶರಣಾ ಅಷ್ಟಮದೈಶ್ವರ್ಯ ಕಾರಣ ಕೌಸ್ತುಭಾಭರಣ 1 ನಿತ್ಯ ಮಂಗಳರೂಪ ನಿರ್ಮಲ ಚಿತ್ತ ಚಿದಾನಂದ ಮೂರ್ತಿ ಭೃತ್ಯ ವರ್ಗದೊಳೆನ್ನ ಗ್ರಹಿಸೆ ನಿನಗೆ ಬಹು ಕೀರ್ತಿ 2 ಇನ್ನೊಂದು ದೈವವನರಿಯೆ ನಿನ್ನ ಚರಣ ಪದ್ಮ ಮರೆಯೆ ಪನ್ನಗಾಚಲವಾಸ ಪರಿಪಾಲಿಸು ಬೇಗ ದೊರೆಯೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜಯ ಜಯ ಭೀಮಸೇನ ಪ. ಜಯ ಭೀಮಸೇನ ದುರ್ಜಯ ಪರಾಕ್ರಮ ಧೀರಾದಯಾಪಯೋನಿಧಿಯೆ ನಿರ್ಭಯ ವೈಷ್ಣವಾಗ್ರಣಿಅ.ಪ. ಅಂಬ ಪಾವಕ ದೀನೋದ್ಧಾರಿ1 ವೃಕೋದರ ವಿಷ್ಣುಸೇವಕ ವಿಜ್ಞಾನಾಂಬುಧಿಬಕಮದಧ್ವಂಸಿ ಜಟಾಸುರಾಂತಕ ಹಿಡಿಂ-ಬಕಾಸುರಗರ್ವಪರ್ವತ ಪವಿಧರ ಹಿಡಿಂಬಕಿ ಚಿತ್ತಕುಮುದಕೋರಕ ಪೂರ್ಣೋಡುಪರಾಜಅಕಳಂಕ ಧನುರಾಗಮಾಚಾರ್ಯ ನಿಪುಣ ಕೀ-ಚಕ ಬಲ ನಿರ್ಮೂಲನ ದ್ರೋಣಾದಿ ಸೈ-ನ್ಯ ಕುಮನ ಅಸುಹರಣ ಧಾರ್ತರಾಷ್ಟ್ರನಿಕರವಾರಣ ವಿದಾರಣ ಪಂಚವದನಾ 2 ಮಣಿಮಯರಥವೇರಿ ಫಣಿಕೇತನನನುಜನುನೆಣನು ದುರ್ಗುಣನು ಮಾರ್ಗಣಗಣದಿಂದಲಿರಣಾಂಗಣದಿ ನಿನ್ನ ಸೆಣಸಲಾಕ್ಷಣ ನೋಡಿತೃಣಮಾಡಿ ಗದೆಯಿಂದ ಹಣಿದು ಹಣೆಯ ಮೆಟ್ಟಿಪಣದಿ ನುಡಿದವರ ರಣವ ತಿದ್ದಿ ಅತ್ಯು-ಲ್ಬಣದಿಂದವಗೆ ಲಂಘಿಸಿ ವಕ್ಷದಿ ರಕ್ತಕೊಣನ ಶಸ್ತ್ರದಿ ನಿರ್ಮಿಸಿ ಕದಡಿಗೂಡಿರಣದೊಳೊಪ್ಪಿದ್ಯೊ ನಿನಗೆಣೆಯಿಲ್ಲವೆನಿಸಿ 3 ಮದ್ದಾನೆ ರೂಪ ಧರಿಸಿ ಮಾಯದಲಿ ಬಂದಾರುದ್ರಾನ ಯುದ್ಧದಿ ಗೆದ್ದುವೋಡಿಸಲಾಗಕೃದ್ಧನಾಗಿ ವ್ಯಾಘ್ರಸಿಂಹರೂಪದಿ ಬರೆಗುದ್ದಿ ಕೆಡಹಿ ವೇಗಕೆ ದಾರಿ ಕಟ್ಟಿದೆಯಿದ್ಧರೆಯೊಳು ನಿಮಗೆಣೆಯಾರು ಮಹಾಬಲಿಮದ್ರಾಧಿಪತಿಯ ಅಂಬರಕಟ್ಟಿ ರಾಜಸೂ-ಯಾಧ್ವರದಲಿ ಮಾಗಧನ ಸಂಹರಿಸಿದತಿಶುದ್ಧ ಸ್ವಭಾವ ಶೂರ ಸತತ ಸಾಧ್ಯಸಿದ್ಧೇಶನಿಲ ಕುಮಾರ ನಮಿಪೆಯೆನ್ನಉದ್ಧರಿಸುವುದಯ್ಯ ಶುದ್ಧ ಮನೋಹರ 4 ಸೂತ್ರ ಅಮಿತ ರೂಪ ಸದ್ಗುಣಗಣಧಾಮ ವೀರಪ್ರತಾಪ ಭಕುತಿ ಜ್ಞಾನಕಾಮಿತಾರ್ಥಗಳಿತ್ತು ಪೊರೆಯಯ್ಯ ಅಸುವ 5
--------------
ಗೋಪಾಲದಾಸರು
ಜಯ ಜಯ ಮಂಗಳ ಗುರುಮೂರ್ತಿ | ಜಯಸುರವರ ಪಾವನಕೀರ್ತಿ ಪ ಮೊಲದಜ್ಞ ತಮನಸುವನೆ ಬಗೆದೆ | ವಿದಿತ ವಿವೇಕ ನಗವನೊಗೆದೆ | ಒದಗಿ ಸುಜ್ಞಾನ ಧರೆಯ ತಂದೆ | ಬುಧರ ಸದ್ಭಾವ ಸ್ತಂಬದಲೊಗೆದೆ 1 ಪ್ರೇಮಪ್ರೀತಿ ರತಿವೆಂಬುವದಾ | ಭೂಮಿಯ ಬೇಡಿದ ಮೂರ್ಪಾದಾ | ದಮೆಶಮೆ ಗುಣಕ್ಷತ್ರಿಯ ವೃಂದಾ | ಸುಮನರ ಬಿಡಸಿದೆ ಸೆರೆಯಿಂದ 2 ಅಪದಿ ಗೋಕುಲದಲಿ ನಲಿದೆ | ತಾಪತ್ರಯ ಮುಪ್ಪುರ ವಳಿದೆ | ವ್ಯಾಪಿಸಿ ಕಲಿಮಲ ಬೆಳಗಿಸಿದೆ | ಕೃಪೆಯಲಿ ಮಹೀಪತಿ ಸುತಗೊಲಿದೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯ ಜಯ ಮಂಗಳ ಮುನಿಜನ ಪಾಲ ಜಯ ಜಯ ಸ್ವಾಮಿ ಸದ್ಗುರು ಕೃಪಾಲ ಧ್ರುವ ತೇಜ:ಪುಂಜವು ನಿಮ್ಮ ಘನಸುಖಸಾಂಧ್ರ ರಾಜ ತೇಜೋನಿಧಿ ರಾಜ ರಾಜೇಂದ್ರ ಸುಜನರ ಹೃದಯ ಸುಜ್ಞಾನ ಸಮುದ್ರ ಅಜಸುರವಂದ್ಯ ಶ್ರೀ ದೇವದೇವೇಂದ್ರ 1 ಪತಿತ ಪಾವನ ಪೂರ್ಣ ಅತಿಶಯಾನಂದ ಯತಿ ಮುನಿಗಳಿಗೆ ನೀ ದೋರುವೆ ಚಂದ ಪಿತಾಮಹನ ಪಿತನಹುದೊ ಮುಕುಂದ ಸತತ ಸುಪಥದಾಯಕ ನೀ ಗೋವಿಂದ 2 ದೇಶಿಕರಿಗೆ ದೇವ ನಿಮ್ಮ ಸ್ವಭಾವ ಋಷಿ ಮುನಿಗಳಿಗೆ ನೀ ಜೀವಕೆ ಜೀವ ದಾಸ ಮಹಿಪತಿಗೇನಹುದೊ ಮನದೈವ ವಾಸುದೇವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯ ಮಂಗಳಜಯ ಮಂಗಳ ಶುದ್ಧಾದೈತನಿಗೆ ಪ ಅಗಣಿತ ಮಹಿಮಗೆ ಅಕ್ಷಯರೂಪಗೆಅಖಂಡ ಸಹಜಾನಂದನಿಗೆಝಗಿ ಝಗಿತಾತ್ಮಗೆ ಝಳುಕಿಸಿ ಕರ್ಣದಿಝಣನಾದವ ಕೇಳ್ವನಿಗೆಸೊಗಯಿಸಿ ಚಂದ್ರನ ಶತಕೋಟಿಯಪ್ರಭೆ ಸಾರವ ಸವಿಸವಿದುಣ್ಣುವಗೆಬಗೆ ಆನಂದದಿ ಸುಖಿಸುವ ದೇವಗೆಭಾಸ್ಕರ ತೇಜಃಪುಂಜನಿಗೆ1 ನಿತ್ಯಾನಂದಗೆ ನಿರ್ಮಲರೂಪಗೆನಿಶ್ಚಲ ಪರಬ್ರಹ್ಮಾತ್ಮನಿಗೆನಿತ್ಯಶುದ್ಧಗೆ ನಿಜನಿರ್ಮಾಯಗೆನಿಜಬೋಧ ಜ್ಞಾನೈಕ್ಯನಿಗೆಪ್ರತ್ಯಗಾತ್ಮಗೆ ಪೂರ್ಣಬ್ರಹ್ಮನಿಗೆಪರಮ ಪರತರ ಪಂಡಿತಗೆನಿತ್ಯತೃಪ್ತಗೆ ನಿಗಮಾಗಮನಿಗೆನಿಶ್ಚಿಂತಾತ್ಮ ನಿಸ್ಪøಹಗೆ 2 ಕೈಯಲಿ ಪಿಡಿದಿಹ ಜಪಮಾಲೆಯಸರ ಕರ್ಣಕುಂಡಲವಿಟ್ಟಿಹಗೆಮೈಯೊಳು ಪೊದ್ಹಿಹ ಕಾಷಾಯಂಬರಮಿರುಪಿನ ಕೌಪೀನವುಟ್ಟಿಹಗೆಮೈಯೊಲೆದಾಡುವ ಸ್ವಾತ್ಮಾನಂದದಿನಲಿವ ಸದ್ಗುಣ ಶಾಂತನಿಗೆಮೈಯನೆ ಸದ್ಗತಿ ಭಕ್ತರಿಗೀಯುವವ್ಯಾಪಿತ ಜೀವನ್ಮುಕ್ತನಿಗೆ3 ಆರವಸ್ಥೆಯ ಧರಿಸಿಯೆ ಜಗದಲಿಅನಂತರೂಪ ತಾನಾಗಿಹಗೆಮೀರಿಯೆ ಸದ್ಗುಣ ನಿರ್ಗುಣ ರೂಪವಮೆರೆದಿಹ ಮುಮುಕ್ಷಾಂಗನಿಗೆತೋರುವ ತ್ವಂಪದ ತತ್ತ್ವಮಸಿಪದತೋರಿ ವಿರಾಜಿಪ ತುಷ್ಟನಿಗೆಧೀರೋದ್ಧಾರಗೆ ದೀನರನಾಥಗೆದೃಶ್ಯಾದೃಶ್ಯ ವಿದೂರನಿಗೆ 4 ನಿರುಪಮ ನಿರಮಯ ನಿಜ ನಿರ್ಲಿಪ್ತಗೆನಿರ್ಭಯ ನಿರ್ವಿಕಲ್ಪನಿಗೆಪರಮಪುರುಷಗೆ ನಿಗಮೋದರನಿಗೆಪರಮಾರೂಢಾ ಮಾರ್ಗನಿಗೆಗುರುಚಿದಾನಂದ ಅವಧೂತಾತ್ಮಗೆಗುಣನಿಧಿ ತುರಿಯಾತೀತನಿಗೆಸ್ಥಿರಸಿದ್ಧ ಪರ್ವತದಾಸ ಶ್ರೀಪುರುಷಗೆಬಗಳಾ ಶ್ರೀಗುರು ರೂಪನಿಗೆ 5
--------------
ಚಿದಾನಂದ ಅವಧೂತರು
ಜಯ ಜಯ ಮಂಗಳಜಯ ಮಂಗಳ ಸುಂದರಿ ಶಾಂಭವಿಗೆ ಪ ಕಮಲ ಮುಖಿಯಳೆಹೊಳೆವ ಮುತ್ತಿನ ವಾಲೆಯಳೇನಳಿನ ಮುಖಿಯರ ನಡುವೆ ಕುಳಿತುಥಳ ಥಳ ಹೊಳೆಯುವಳೇಒಳಹೊರಗೆ ತನ್ನ ಪ್ರಭೆಯನು ತೋರಿನೋಡಿ ಓಲಾಡಿ ತಾ ನಗುವವಳೇ 1 ಪಂಚರತ್ನದಾ ಪದಕವನಿಟ್ಟು ಪದ್ಮಾಸನದಲ್ಲಿ ಕುಳಿತಿಹಳೇಮಿಂಚುವ ಮೂಗುತಿ ಮೂಗಲಿ ಹೊಳೆಯುತಮಿಗಿಲಾದಾಭರಣವ ಧರಿಸಿಹಳೇಅಂಚು ರಂಗಿನ ಸೀರೆಯನುಟ್ಟುಅನಂತ ರೂಪವ ತೋರಿಹಳೇಅಂಚೆ ನಡೆಯಲಿ ನಡೆಯುತ ನಲಿಯುತಸದಾ ಮತ್ತಳಾಗಿರುವವಳೇ2 ರತ್ನದ ಉಡಿದಾರ ಚಿನ್ನದ ಚಿಂತಾಕಹೊನ್ನಿನ ಡಾಬನು ತೊಟ್ಟಿಹಳೇಎಡೆ ಎಡೆಗೆ ತಾ ಧರಿಸಿಹಳೇಸಣ್ಣ ಬಣ್ಣದ ಕುಪ್ಪಸ ತೊಟ್ಟುಮುಗುಳ್ನಗೆ ಬೀರುತ ಕುಳಿತಿಹಳೇಧನುರ್ಬಾಣ ಪಾಶವ ಕೈಯಲಿ ಅಂಕುಶಆಯುಧ ಪಿಡಿದಿಹಳೇ 3 ದುಂಡು ಕೈಯವಳೇ ಸುಂದರ ಕಾಯಳೇಚಂಡ ಮುಂಡ ಸಂಹಾರಕಳೇಮಾಂಡಲಿಕಳೇ ಮಹದ್ಭೂತಳೇಮಹಾಯೋಗಿ ವಿಲಾಸಳೇದಂಡಿ ಕಿರೀಟಳೇ ದಂಡೆಯ ಮುಡಿದಿಹಗೊಂಡೆಯಂದೊಲಿದಾ ಜಡೆಯವಳೇಹಿಂಡು ಹಿಂಡಾದ ದೈತ್ಯರನೆಲ್ಲರ ಖಂಡಿಸಿದೇವಿ ತಾ ಕೊಂದಿಹಳೇ 4 ಆದಿರಹಿತಳೇ ಅಧ್ವಯ ರೂಪಳೇಅನಂತ ಕೋಟಿ ಪ್ರಭಾರೂಪಳೆಶುದ್ಧ ಬುದ್ಧಳೇ ನಿತ್ಯಮುಕ್ತಳೇಚಿದಾನಂದ ರೂಪಳೇಸದ್ಯೋಜಾತಳೇ ಸರ್ವಾತೀತಳೆಸಿದ್ಧ ಪರ್ವತ ಬಗಳೇಶುದ್ಧಾದ್ವೈತಳೆ ಸುಷುಮ್ನನಾಳಳೆಸೂಕ್ಷ್ಮವೆನಿಸುವಳೇ 5
--------------
ಚಿದಾನಂದ ಅವಧೂತರು
ಜಯ ಜಯ ಮಂಗಳವೆನ್ನಿರೇ ಶ್ರಯಕರ ದತ್ತಾತ್ರೇಯ ಮೂರ್ತಿಗೆ ಪ ನೋಡಿ ಭಾರವ ಕೊಂಡು ನಿಂದುವದಗಿ ಬಂದು ಬೇಡಿದ ಕೊಡಲಿಕ್ಕೆ ಬಲುಧೀರನು ಮಾಡಿ ವಿಷಂ ಮೃತಮತಿಗೋಚರವಾಚಿ ರೂಢಿಸಿ ಹೊರೆವ ಸುಧಯ ನಿಧಿಗೆ 1 ಶಳವಿಗೆ ಹಾರಿಸದೆ ಶರಣಾವಗ ವಿಡಿ ದಿಳೆಯ ಸುಖವನಿತ್ತುದುರಿತ್ಹರಿಸಿ ತಿಳಿಯಲಣುಗತಪ್ಪ ತಾಯಿ ನೋಡದ ಸ್ಥಿರ ಒಲುಮಿ ಮೋಹನ ಬುದ್ಧಿಮಲಹಾರಿಗೆ 2 ಪೊಳೆವೆದೆಯೊಳು ನೆನಪಿಗೆ ಮೈಯ್ಯಾಲಿದು ಹರಿಸಿಲುವಾ ಮನೋರಾಮನುತ ಭಕ್ತಿಗೆ ಫಲ ಶಾಖನರೆನುಂಡು ಶಿಶುವಾಗಿರುವನಮ್ಮ ಸಲಹುವ ಮಹಿಪತಿ ಸುತ ಪ್ರಿಯಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯ ಜಯ ಮೂಷಕಗಮನಾಜಯ ಜಯ ಗಜಾನನಾಜಯ ಜಯ ನಾಗಾಭರಣಾ ಜಯ ಏಕದಂತ ಜಯ ಜಯ ಪ ಮತಿಯ ಕೊಡು ಪಾರ್ವತಿಯ ನಿಜ ತನುಜನೆಬಿಡದೆ ನಿನ್ನನು ನಾನು ನುತಿಸುವೆ ಕ್ಷಿತಿಯೊಳಗೆಶ್ರೀ ಲಕುಮಿ ಪತಿಯ ಕೊಂಡಾಡಿ ಸದ್ಗತಿಯಪಡೆಯುವದಕ್ಕೆ ಸಾರಥಿಯಾಗು ದೇವಾ 1 ಆಕಾಶದಭಿಮಾನಿ ಅಂಗಜನ ಚಾಪನಿರಾಕರಿಸಿ ಬಿಸುಟ ಲಂಬೋದರನೆಏಕ ಪಿಂಗಾದಿಗಳ ಪ್ರಿಯ ಹಸ್ತಚತುಷ್ಟಲೋಕದೊಳು ಭಜಿಸುವರ ವಿದ್ಯಾದಾ ನಿಧಿಯೆ 2 ಸೀತಾರಮಣನಿಂದ ಪೂಜಿತನಾಗಿವನಧಿ ತೀರದಲ್ಲಿ ಮೆರೆವ ಗಣೇಶಾಸೇತುಮಾಧವ ವಿಜಯವಿಠ್ಠಲರೇಯನದೂತನು ನೀನೆ ಪಾಶಾಂಕುಶಧರನೆ 3
--------------
ವಿಜಯದಾಸ
ಜಯ ಜಯ ವೈಷ್ಣವ ಪಯನಿಧಿ ಚಂದ್ರಗೆ ಜಯ ಜಯ ವ್ಯಾಸಯತೀಂದ್ರರಿಗೆ ಪ ಜಯ ಜಯ ವರ ಕರ್ಣಾಟಕ ಪತಿಗೆ ಜಯ ಸಿಂಹಾಸನವೇರಿದಗೆ ಅ.ಪ ನಾಕು ಶಾಸ್ತ್ರಗಳ ಪಾರಂಗತರಿಗೆ ಕಾಕುಮತಗಳನು ತುಳಿದವಗೆ ಆ ಕಮಲಾಪತಿ ಭಕುತವರೇಣ್ಯಗೆ ಶ್ರೀಕರ ಚಂದ್ರಿಕಾಚಾರ್ಯರಿಗೆ 1 ಹನುಮನ ಭಾಷ್ಯವ ಅಣಿಮಾಡಿದಗೆ ಹನುಮಗೆ ಭವನಗಳನು ಕಟ್ಟಿದಗೆ ಹನುಮನ ಯಂತ್ರದಿ ಬಿಗಿದಪ್ಪಿದಗೆ ಮುನಿತ್ರಯದಲಿ ಸೇರಿದ ದೊರೆಗೆ 2 ಮಾಯಾವಾದಗಳನು ಗೆಲಿದವಗೆ ನ್ಯಾಯಾಮೃತಧಾರೆಯ ಅಭಿಷೇಕದಿ ಆ ಯದುಪತಿಯನು ಕುಣಿಸಿದಗೆ 3 ಚಕ್ರಧರನ ಸುಳುಗಳ ತಿಳಿದವಗೆ ಮಿಕ್ಕಮತಗಳನು ಅಳಿದವಗೆ ವಕ್ರಯುಕುತಿಗಳನು ತುಕ್ಕುಡಗೈಯ್ಯವ ತರ್ಕ ತಾಂಡವದಿ ನಲಿದವಗೆ 4 ಕೃಷ್ಣದೇವರಾಯನ ಕುಲಪತಿಗೆ ಕಷ್ಟದ ಕುಹಯೋಗವ ಕೊಂದವಗೆ ಶಿಷ್ಟಜನಗಳಿಗೆ ಇಷ್ಟಾರ್ಥಗಳನು ವೃಷ್ಟಿಯಗೈವ ಪ್ರಸನ್ನರಿಗೆ 5
--------------
ವಿದ್ಯಾಪ್ರಸನ್ನತೀರ್ಥರು
ಜಯ ಜಯ ಶ್ರೀ ಮಹಾಲಿಂಗ ಗೋಪತುರಂಗ ಜಯ ಜಯ ಶ್ರೀ ಮಹಾಲಿಂಗ ಪ. ಜಯರಹಿತಾಚ್ಯುತಪ್ರಿಯ ಬುಧಾರ್ಚಿತ ದಯಾಸಾಗರ ಭಸಿತಾಂಗ ನಯನತ್ರಯ ನಮಿತಾಮರಸಂಘಾ- ಮಯಹರ ಗಂಗೋತ್ತುಮಾಂಗ 1 ಭೂತೇಶ ಭೂರಿಭೂತಹೃದಿಸ್ಥಿತ ಭೂಷಣೀಕೃತಭುಜಂಗ ಪೂತಾತ್ಮ ಪರಮಜ್ಞಾನತರಂಗ ಪಾತಕತಿಮಿರಪತಂಗ2 ಲಂಬೋದರಗುಹಪ್ರಮುಖಪ್ರಮಥನಿಕು- ರುಂಬಾಶ್ರಿತ ಜಿತಸಂಗ ಗಂಭೀರಗುಮಕದಂಬೋತ್ತುಂಗ- ಸಂಭೃತ ಹಸ್ತಕುರಂಗ 3 ಸೋಮಶೇಖರ ಮಹಾಮಹಿಮ ವಿಜಿತ- ಕಾಮ ಕಲಿಕಲುಷಭಂಗ ರಾಮನಾಮ ಸ್ಮರಣಾಂತರಂಗ ವಾಮಾಂಕಾಸ್ಥಿತ ಪಿಂಗ 4 ದೇವ ಲಕ್ಷ್ಮೀನಾರಾಯಣ ಪದರಾ- ಜೀವನಿರತ ವನಭೃಂಗ ಪಾವಂಜಾಖ್ಯ ಗಿರೀಶ ಶುಭಾಂಗ ಕೇವಲ ಸದಯಾಪಾಂಗ5
--------------
ತುಪಾಕಿ ವೆಂಕಟರಮಣಾಚಾರ್ಯ
ಜಯ ಜಯ ಶ್ರೀ ಹಯವದನ ಜಯ ಜಯ ಶ್ರೀ ಖಳದಮನ ಜಯತು ಸಜ್ಜನಸದನ ಸಕಲ ಆಭರಣ ಪ. ರಾಘವಾನ್ವಯಸೋಮ ಖರನಿಶಾಚರ ಭೀಮ ಧಾಮ ಸೀತಾಭಿರಾಮ ಕಾಮಿನೀಜನಕಾಮ ಶರಣಪಾಲಕ ಧಾಮ ಸ್ವಬಲ ಪಾಲಿತ ರಾಮ ಪಟ್ಟಾಭಿರಾಮ 1 ಯಾದವಾನ್ವಯಜಾತ ವರಸತ್ಯಭಾಮೇತ ವ್ಯಾಸರಾಯಸನ್ನುತ ಸಕಲವಾಗ್ವಿದಿತ ಕಂಜಾಸನಾದಿಸುತ ಕಮಲಮಾರ್ಗಣಪಿತ ಸರಸರುಕ್ಷ್ಮಿಣೀಸಕಲೇಷ್ಟದಾತ2 ವಾಸಿಷ್ಠಕುಲವಾರ್ಧಿ ಸತ್ಕಳಾಧರರೂಪ ಮಧ್ವಾರ್ಯ ಸದ್ರೂಪ ದಳಿತÀಬಹುತಾಪ ಮಾಯಿಜನ [ಧೃ] ತಕೋಪ ಕೃತಸದ್ವೀಕ್ಷೋ[ದ್ದೀ]ಪ ಸೃತಾನಿ ಸತ್ಸುಖರೂಪ ಹಯವದನ ರೂಪ 3
--------------
ವಾದಿರಾಜ
ಜಯ ಜಯ ಶ್ರೀ ಹರಿ ಶೌರಿ ಜಯ ಜಯ ಮಂದರಧಾರಿ ಜಯ ಜಯ ಶ್ರೀ ಮುರವೈರಿ ಕಂಸಾರಿ ಪ ಮುತ್ತಿನ ಮಂಟಪದಿ ರತ್ನಪೀಠವನಿರಿಸಿ ಅರ್ಥಿಲಿ ಬಾ ಹಸೆಗೆನ್ನುತ ಕರೆವರು ಮುತ್ತೆ ೈದೆಯರುಗಳು 1 ಇಂದಿರೆ ರಮಣ ಬಾ ಕಂದರ್ಪ ಜನಕ ಬಾ ಸುಂದರಾಂಗನೆ ಬಾ ಹಸೆಗೆನ್ನುತ ಚಂದದಿ ಕರೆದರು 2 ಕಂಬು ಕಂದರೆಯೆ ಬಾ ಅಂಬುಜ ಮುಖಿಯೆ ಬಾ ಸಂಭ್ರಮದಲಿ ಬಾ ಹಸೆಗೆನ್ನುತ ಕರೆದರು ಅಂಬುಜ ಮುಖಿಯರು 3 ನಾರಿ ರುಕ್ಮಿಣಿ ದೇವಿ ನಾರದ ವಂದ್ಯನಿಗೆ ಚಾರು ಪರಿಮಳ ಅರಿಶಿನ ಕುಂಕುಮ ಹಾರವನರ್ಪಿಸುತ 4 ಪರಿ ಕುಸುಮಗಳ ಪದಕÀ ಪುಷ್ಪದ ಮಾಲೆ ಪರಮಾತ್ಮನ ಕೊರಳಿಗೆ ಹಾಕುತ ಅಲಂಕರಿಸಿದಳಾಗ5 ಜಯ ಜಯ ಶ್ರೀ ಕೇಶವನೆ ಜಯ ಜಯ ನಾರಾಯಣನೆ ಜಯ ಜಯ ಶ್ರೀ ಮಾಧವನೆ ಜಯ ಜಯ ಗೋವಿಂದ 6 ಜಯ ಜಯ ಶ್ರೀ ವಿಷ್ಣುಹರೆ ಜಯ ಜಯ ಶ್ರೀ ಮಧುಸೂದನನೆ ಜಯ ಜಯ ಶ್ರೀ ತ್ರಿವಿಕ್ರಮನೆ ಜಯ ಜಯ ವಾಮನನೇ 7 ಜಯ ಜಯ ಶ್ರೀ ಶ್ರೀಧರನೇ ಜಯ ಜಯ ಶ್ರೀ ಹೃಷಿಕೇಶ ಜಯ ಜಯ ಶ್ರೀ ಪದ್ಮನಾಭ ಜಯ ದಾಮೋದರನೆ 8 ಜಯ ಜಯ ಸಂಕರ್ಷಣನೆ ಜಯ ಜಯ ಶ್ರೀ ವಾಸುದೇವ ಜಯ ಜಯ ಶ್ರೀ ಪ್ರದ್ಯುಮ್ನ ಅನಿರುದ್ಧ 9 ಜಯ ಜಯ ಶ್ರೀ ಪುರುಷೋತ್ತಮನೆ ಜಯ ಜಯ ಶ್ರೀ ಅಧೋಕ್ಷಜನೆ ಜಯ ಜಯ ಶ್ರೀ ನಾರಸಿಂಹ ಜಯ ಜಯ ಅಚ್ಚುತನೆ 10 ಜಯ ಜಯ ಶ್ರೀ ಜನಾರ್ದನನೆ ಜಯ ಜಯ ಶ್ರೀ ಉಪೇಂದ್ರಹರೇ ಜಯ ಜಯ ಶ್ರೀ ಹರಿ ಶ್ರೀಶಾ ಜಯ ಜಯ ಶ್ರೀ ಕೃಷ್ಣಾ11 ಇಂತು ದೇವನ ಸ್ತುತಿಸಿ ಸಂತಸದಿ ವೀಳ್ಯವನು ಕಂತು ಪಿತನಿಗೆ ಅರ್ಪಿಸಿ ಮುದದಿ ವಂದಿಸಿ ಭಕ್ತಿಯಲಿ12 ಕಮಲಾಕ್ಷಿಯರು ಕೂಡಿ ಕನಕದಾರತಿ ಪಿಡಿದು ಕಮಲನಾಭ ವಿಠ್ಠಲ ಲಕ್ಷ್ಮೀಯರಿಗೆಬೆಳಗಿದರಾಗ 13
--------------
ನಿಡಗುರುಕಿ ಜೀವೂಬಾಯಿ
ಜಯ ಜಯ ಶ್ರೀಹರಿಪ್ರಿಯೆ ಮಹಾ- ಭಯಹರೆ ಜಗದಾಶ್ರಯೆ ಲಯವರ್ಜಿತ ನಿತ್ಯಾತ್ಮೆ ಚಿನ್ಮಯೆ ಜಯಶೀಲೆ ನಿರಾಮಯೆ 1 ನಿತ್ಯಮುಕ್ತಿ ನಿರ್ವಿಕಾರೆ ನಿಜ- ಭೃತ್ಯನಿಚಯ ಮಂದಾರೆ ಪ್ರತ್ಯಗಾತ್ಮ ಹರಿಭಕ್ತಿರಸಪೂರೆ ಸತ್ವಾದಿಗುಣವಿದೂರೆ 2 ಲಕ್ಷ್ಮೀನಾರಾಯಣಿ ಹರಿ- ವಕ್ಷಸ್ಥಲವಾಸಿನಿ ಅಕ್ಷರರೂಪಿಣಿ ಬ್ರಹ್ಮಾಂಡಜನನಿ ಸುಕ್ಷೇಮಪ್ರದಾಯಿನಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜಯ ಜಯವೆನ್ನಿರೊ ಶ್ರೀ ಗುರುವಿಗೆ ದಯಾಸಿಂಧು ಶ್ರೀಸ್ವಾಮಿ ಸದ್ಗುರುವಿಗೆ ಧ್ರುವ ಗುಹ್ಯಗುರುತ ದೋರುವ ಗುರುಮಣಿಗೆ ಮಾಯರಹಿತ ನಿರಾಳ ನಿರ್ವಾಣೆಗೆ ತ್ರೈಲೋಕ್ಯವಂದಿತ ವರಮುನಿಗೆ ದಯಯುಳ್ಳ ಶ್ರೀ ದೇವಶಿಖಾಮಣಿಗೆ 1 ತ್ರಿಗುಣಾತೀತ ತಾರಕ ನಿರಂಜನಗೆ ಝಗಿ ಝಗಿಸುವ ಜಗನ್ಮೋಹನಗೆ ಜಾಗಿಸುವ ಜಗತ್ರಯ ಜೀವನಿಗೆ ಯೋಗಿಜನ ಧ್ಯಾಯಿಸುವ ನಿರ್ವಾಣೆಗೆ 2 ಜಯ ಜಯವೆನ್ನಿರೊ ಗುರುಮೂರ್ತಿಗೆ ಇಹಪರ ಪೂರ್ಣ ಪರಂಜ್ಯೋತಿಗೆ ಬಾಹ್ಯಾಂತ್ರ ಭಾಸುವ ಶ್ರೀಪತಿಗೆ ಮಹಿಪತಿಯ ಶ್ರೀ ಸ್ವಾಮಿ ಜಗತ್ಪಿತಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ಗುರು ಮೈಲಾರಿ ಮನಮೈಲ ಮರ್ದಿಸಿದಯ್ಯ ನೀನೆ ಅಸುರಾರಿ ಧ್ರುವ ಖಡ್ಗವ ಕರದಲಿ ಪಿಡಿದು ಖಂಡಿಸಿದಙÁ್ಞನ ಖಂಡೇರಾಯೆನಿಸಿಕೊಂಡು ಪ್ರಕಟಿಸಿದನುದಿನ ಹಿಂಡದೈವಕೆ ಪ್ರಚಂಡನಹುದೊ ಪರಿಪೂರ್ಣ ಮಂಡಲದೊಳು ನಿಮ್ಮ ಕೊಂಡಾಡುದು ತಾ ಸುರಜನ 1 ಮಲಹರಣ ಮಾಡಲು ಧರಿಸಿ ಅವತಾರ ಮೂಲೋಕ ಪಾವನಮಾಡುವ ಸಹಕಾರ ಸಲಹುವೆ ಭಕ್ತಜನರಿಗೆ ನೀ ಘನ ಮಂದಾರ ಮಲೆತಿಹ ದೈತ್ಯರ ಸಂಹರಿಸುವೆ ನೀ ಅತಿಶೂರ 2 ಪತಿ ಅಹದು ಶ್ರೀಗುರು ಭೂಪತಿ ಬಾಹ್ಯಾಂತ್ರಿ ಬೆಳಗುವೆ ಶ್ರೀಪಾದಕೆ ಆರ್ತಿ ಇಹಪರಕೆ ದಾತನಹುದೊ ಶ್ರೀಪತಿ ಜಯಜಯವೆಂದು ಬೆಳಗುವೆ ದಾಸ ಮಹಿಪತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು