ಒಟ್ಟು 2546 ಕಡೆಗಳಲ್ಲಿ , 116 ದಾಸರು , 2099 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರುದ್ರಾ ವೀರಭದ್ರ ಅದ್ರಿನಂದನೆ ರಮಣಾ ಪ ರೌದ್ರ ಮೂರುತಿ ದಯಾಸಮುದ್ರ ಎನ್ನನು ಕಾಣೊ ಅ. ಪ. ಮುಪ್ಪುರವ ಗೆದ್ದ ಮುಕ್ಕಣ್ಣ ಮನ್ಮಥ ವೈರಿ ಸರ್ಪಭೂಷಣ ಮೃತ್ಯು ನಿವಾರಣ ವಾಕು 1 ಸದ್ಯೋಜಾತ ಭೂತನಾಥ ಭಕುತರದಾತ ಖದ್ಯೋತ ಲಾವಣ್ಯ ಸುರಜ್ಯೇಷ್ಠನ ಮಧ್ಯವಾಸನ ಛೇದ ಶ್ರೀ ವಿಷ್ಣುವಿನ ಪಾದ ಹೃದ್ಯದೊಳಗಿಟ್ಟ ಜಟಾ ಜೂಟ ಬಲು ಧಿಟ್ಟ2 ಮನೋನಿಯಾಮಕ ಗುರುವೆ ದೈನ್ಯದಿಂದಲಿ ಕರೆವೆ ಜನಿಸಿ ಕಾಡುವ ರೋಗ ಕಳೆಯೊ ಬೇಗ ಅನುಪಮ ವಿಜಯವಿಠ್ಠಲನ ನಾಮಾಮೃತವ ಎನಗುಣಿಸುವುದೋ ಸಾಂಬು ಮರುತ ಪ್ರತಿಬಿಂಬ 3
--------------
ವಿಜಯದಾಸ
ರೋಗಹರನೇ ಕೃಪಾಸಾಗರ ಶ್ರೀ ಗುರು ರಾಘವೇಂದ್ರ ಪರಿಪಾಲಿಸೊ ಪ ಸಂತತ ದುರ್ವಾದಿ ಧ್ವಾಂತ ದಿವಾಕರ ಸಂತವಿನುತ ಮಾತ ಲಾಲಿಸೊ 1 ಪಾವನಗಾತ್ರ ಸುದೇವವರನೆ ತವ ಸೇವಕ ಜನರೊಳಗಾಡಿಸೊ 2 ಘನ್ನ ಮಹಿಮ ಜಗನ್ನಾಥವಿಠಲ ಪ್ರಿಯ ನಿನ್ನಾರಾಧನೆ ಮಾಡಿಸೊ 3
--------------
ಜಗನ್ನಾಥದಾಸರು
ಲಕುಮಿವಲ್ಲಭ ಹರಿಯ ಮಂದಿರದಿಂದ ಬಕುಳೆ ಬಂದ ಪರಿಯ ನಗುತ ಸದ್ಯುಕುತಿಯಿಂದಲಿ ಪೇಳ್ದಳು ಪ. ಯಾರು ಬಲ್ಲರಿವನ ಸಂಸ್ಥಿತಿಯನ್ನು ನೀರೆ ನೀ ಪೇಳ್ವದನ ದಾರಿಯ ಪೇಳೆ ಜಾಣೆ 1 ಕ್ಷೀರಾಂಬುಧಿವಾಸನ ಸಕಲಗುಣ ವಾರುಧಿ ವರದೇಶನ ಸಾರಿ ಸಾರಿಗೆ ಸರ್ವ ಸುರಮುನೀಶ್ವರರೆಲ್ಲ ಸೇರಿ ಬಾಳುವರೀತನ 2 ಮಾತಿಗೆ ದೊರೆಯನಂತೆ ಮನೋಗತಿ ನೀತಿಯು ನಡೆಯದಂತೆ ಜಾತಿ ಗೋತ್ರ ಬಂಧು ಜನರಿಲ್ಲದವನಿಗಿನ್ಯಾತಕೆ ಪರಿಣಯವು 3 ಭೂತೇಂದ್ರಿಯ ಮನವು ಬಲಿಷ್ಠ ಮಹಾತತ್ವ ಹಂಕೃತಿಯು ಶ್ರೀ ತರುಣಿಯ ಗುಣ ತ್ರಯಮುಖ ತತ್ವ ಸಂಘಾತವೀತನಿರಲು 4 ಮನೆಯ ಕಟ್ಟಿದನೆಂಬೊರು ನಿಜವಾಗಿ ಪೇಳು 5 ಸಕಲ ಜಗನ್ನಿವಾಸ ಸಾಂಗೋಪಾಂಗ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 6 ಮನೆವಾರ್ತೆಗಳ ಬಿಟ್ಟು ಸಂಚರಿಸುವ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 7 ದಾಸರ ಪಾಲಿಪುದು ಎಂದೆಂದಿಗು ಶ್ರೀಶನ ಮಹಬಿರುದು ದೋಷದೂರನಾದರಿಂದ ಮೌನಿ ಮನೋವಾಸನಾಗಿಹ ನೆರದು 8 ಕುಲಹೀನನಾಗಿ ಕಲ್ಪಾಂತದೊಳಿರುವಗೆ ಲಲನೆಯ ನಿಪ್ಪುದೆಂತೆ 9 ಸುಧೆಯನು ತಾನೆ ತಂದ ಮುದವ ತೋರಿದ ಮುಕುಂದ 10 ಹೊಡದಾಡಿ ಬರುವನಂತೆ ಕೊಡುವದೆಂತೆ 11 ಮಗುವಿನ ಮಾತ ಕೇಳಿ ತಕ್ಷಣ ನರಮೃಗನಾಗಿ ಕೋಪತಾಳಿ ಬಗೆದು ಬಲಿಷ್ಠ ದೈತ್ಯನು ಸುಲಭದಿ ಬೇಗ ತೆಗೆದನು ಕರುಳನಂತೆ 12 ಸಿರಿಯನಾಳುವನಾದರೆ ದೈತ್ಯರ ಮುಂದೆ ತರಿವುದು ಸರಿಯೆ ನೀರೆ ಮರುಳು ಮಾತುಗಳಾಡಲ್ಯಾತಕೆ ಸುಮ್ಮನೆ ಥರವಲ್ಲ ಹಿಂದೆ ಸಾರೆ 13 ಕೃತ್ರಿಮ ದ್ವಿಜನಿವನು ಭೂಭಾರಕ ಕ್ಷತ್ರ ಸಮೂಹವನು ಶಸ್ತ್ರ ಪಿಡಿದು ಬುಡ ಕತ್ತ್ರಿಸಿ ಮಡುಗಳ ನೆತ್ರದಿ ರಚಿಸಿದನು 14 ದಾನವರನು ಗೆಲಲು ಚಪಲ ಬುದ್ಧಿ ವಾನರರನು ಒಲಿಸಿ ಪೇಳ್ವ ಹೀನವಾರ್ತೆಗಳೇನಿದು 15 ಧರೆಯ ಭಾರವನಿಳುಹಿ ಸಕಲ ಸುರವರ ಮುನಿಗಳ ಸಲಹಿ ತೆರವ ತೋರಿದ ಕೃಷ್ಣನು 16 ಜೈನರ ಸಭೆಯೊಳಗೆ ಮೈಯೊಳು ವಸ್ತ್ರಹೀನನಾಗಿರುವ ಬಗೆ ನಾನರಿಯೆನೆ ಬಹು ಮಾನ ಬಿಟ್ಟವನಿಗೆ ಏನೆಂದು ಮಗಳೀವನೆ 17 ಕೊಲುವನು ಖಡ್ಗದಲಿ ನಿಖಿಳ ಕುಲವನುದ್ಧರಿಸುವನು 18 ಏನೆಂದರು ಮನದಿ ನಿರ್ಣಯ ತೋರದೇನು ಮಾಡಲಿ ಕೆಳದಿ ಮಾನಿನಿ ಶಿರೋಮಣಿಯೆ 19 ದೋಷ ಲೇಶಹೀನನು ಸಕಲಗುಣ ಭೂಷಿತ ಶ್ರೀವರನು ಶೇಷ ಗಿರೀಶನೆನಲು ತನ್ನ ಮಗಳೀವ ಭಾಷೆಕೊಟ್ಟಳು ಧರಣಿ 20
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮಿ ನರಹರಿ ವಿಠಲ | ರಕ್ಷಿಸೋ ಇವಳ ಪ ತ್ರ್ಯಕ್ಷ ಬಿಂಬನೆ ಸ್ವಾಮಿ | ಪಕ್ಷಿವಹ ಕರುಣಾಕಟಾಕ್ಷ ದಿಂದೇಕ್ಷಿಸುತ | ಕಾಪಾಡೊ ಹರಿಯೇ ಅ.ಪ. ಅಕ್ಷಿ ಮೂರುಳ್ಳ ನಿಟಿ | ಲಾಕ್ಷನೈ ರೂಪದಲಿಅಕ್ಷಿ ಗೋಚರನಾಗಿ | ಸ್ವಚ್ಛ ತೈಜನನೇದೀಕ್ಷೆ ದಾಸತ್ವದಲಿ | ಲಕ್ಷ್ಯವಿಟ್ಟಿಹಳ ಉ-ಪೇಕ್ಷಿಸದೆ ದಯತೋರ್ದೆ | ಲಕ್ಷ್ಮಿ ನರಸಿಂಹಾ 1 ಮನ್ಯು ಸೂಕ್ತದಿಂ ಬ | ಹ್ಪನ್ನ ಭೊಕ್ತøವಿನಿಂದಚೆನ್ನಾಗಿ ಸೇವಿತನೆ | ಅನ್ನಂತ ಮಹಿಮಾಬಿನ್ನವಿಪೆ ನಿನಗೆ ಕಾ | ರುಣ್ಯ ಮೂರುತಿ ಹರಿಯೆಕನ್ಯೆಗಭಯದನೆ ಆ | ಪನ್ನ ಪರಿಪಾಲಾ 2 ಲೌಕಿಕದಿ ಬಹುಪರಿಯ | ಸೌಖ್ಯಗಳ ನೀನಿತ್ತುಪ್ರಾಕ್ಕು ಕರ್ಮವ ಕಳೆದು | ಕಾಪಾಡೊ ಹರಿಯೇ |ಚೊಕ್ಕ ಭಕ್ತಿ ಜ್ಞಾನ | ಅಕ್ಕರದಿ ತವಪದದಿಉಕ್ಕುವ ಪರಿಮಾಡು | ರಕ್ಕಸಾಂತಕನೇ 3 ನೀಚೋಚ್ಚ ತರತಮವು | ಪಂಚ ಬೇದವನರುಹಿಸಂಚಿತವ ದಹಿಸೂವ | ಹಂಚಿಕೆಯನಿತ್ತೂಅಂಚೆವಹಪಿತನೆ ಹೃ | ತ್ಪಂಕಜದಿ ನಿನಕಾಂಬಸಂಚಿಂತನೆಯ ನೀಯೊ | ಪಂಚ ಪ್ರಾಣಾತ್ಮಾ 4 ಪಾವಮಾನಿಯ ಪ್ರೀಯ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ಭಾವದಲಿ ತೋರೋ |ನೀವೊಲಿಯುತಿವಳಿನ್ನ | ಕಾವುದೆನೆ ಬಿನ್ನೈಪೆಗೋವಿದಾಂಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ಮನೋಹರ ವಿಠಲ | ರಕ್ಷಿಸೋ ಹರಿಯೇ ಪ ಲಕ್ಷಿಸದಲೇ ಇವಳ | ಲಕ್ಷಾಪರಾಧಾ ಅ.ಪ. ತೈಜಸ ಮೂರ್ತಿದರುಶನವ ತಾನಿತ್ತು | ಹರುಷ ಪಡೆಸಿಹನೋಹರಿದಾಸ್ಯಕೇ ಮಾರ್ಗ | ವರಸೂಚಿ ಎಂಬಂತೆಪರಮ ಸಿದ್ಧತೆ ತೋರ್ದೆ | ವರಸತೀ ಮಣಿಗೇ 1 ಕಾರುಣಿಕ ನೆಂ | ದರಿತು ಬೇಡುವೆ ಹರಿಯೆಸರುವ ಕಾರ್ಯದಿ ನಿನ್ನ | ಸ್ಮರಣೆ ಸುಖವೀಯೋ 2 ಎರಡು ಮೂರ್ಭೇಧಗಳ | ಅರಿವನೀಕೆಗೆ ಇತ್ತುಎರಡು ನಾಲ್ಕರ ವರ್ಗ | ದೂರಗೈಸೋಮರುತಾಂತರಾತ್ಮ ನಿ | ನ್ಹೊರತು ಕಾಯುವರಾರೊಎರಡೇಳು ಭುವನಗಳ | ಅರಸಿಯೂ ಕಾಣೇ 3 ವಿಶ್ವ ಕರ್ಮ | ಸತ್ಶ್ರವಣ ಕೊಡುತಾ 4 ಭೂವಿ ಬುಧ ಹೆದ್ದೈವ | ಮಾವಿನೋದಿಯೆ ಹರಿಯೆನೀವೊಲಿಯ ದಿನ್ನಿಲ್ಲ | ಮಾವ ಕಂಸಾರೀದೇವ ದೇವೇಶ ಗುರು | ಗೋವಿಂದ ವಿಠ್ಠಲ್ಲಭಾವದೊಳು ಮೈದೋರಿ | ಕಾವುದೀಕೆಯನೂ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ಸ್ತುತಿಗಳು ಆರೋಗಿಸು ತಾಯೇ ಮೋದದಿ ಕ್ಷೀರಾಂಬುಧಿ ತನಯೆ ಪ. ಸಾರಸನಯನೆ ಮದವಾರಣಗಮನೆ ಸಾರಿ ಚೀಡುವೆ ಸರಾಗದೊಳೀಕ್ಷಿಸು ಅ.ಪ. ಉಪ್ಪು ಉಪ್ಪಿನಕಾಯಿಕೋಸುಂಬರಿ ಹಪ್ಪಳ ಸಂಡಿಗೆಯ ತಪ್ಪದೆ ತಂದೊಪ್ಪಿಸುತಿಹೆ ಎನ್ನಪ್ಪನೊಡನೊಪ್ಪದಿ ವ ುಂಡಿಸಿ 1 ಚಕ್ಕುಲಿ ಕರಜಿಕಾಯಿ ಅತಿರಸ ಸಕ್ಕರೆ ಹೋಳಿಗೆಯಂ ನಲಿಯುತ 2 ದಧಿ ನವನೀತ ಘೃತ ಮಧುಸಾರವೆನಿಪ ಪರಮಾನ್ನ ಕ್ಷೀರಶರಧಿಸುತೆ ನೀ ನೀರಸ ಸಹಿತಾಪಾರ ಕೃಪಾಪಾಯದೊಳೀಕ್ಷಿಸಿ3 ಸವಿನೋಡುತೆ ನಲಿದು4 ನಿಗಮಾಗಮ ವಿನುತೇ ನಮಿಸುವೆ ನಗಧರ ಸುಪ್ರೀತೆ ಗುಣಗಳ ಬಗೆಗೊಳಿಸುತ್ತಲಿ 5
--------------
ನಂಜನಗೂಡು ತಿರುಮಲಾಂಬಾ
ಲಕ್ಷ್ಮೀದೇವಿ 13 ಭಾಗ್ಯವ ಕೊಡು ತಾಯೆ ಪ ಭಾರ್ಗವಿ ನಿನ್ನಯ| ಪದಯುಗಕೆರಗುವೆ| ಭಾಗ್ಯದ ಲಕ್ಷ್ಮೀ ಸೌ| ಭಾಗ್ಯದ ನಿಧಿಯೇ ಅ. ಪ ಸಾಗರಸಂಜಾತೆ| ದೇವಿ| ನಾಗವರದಪ್ರೀತೆ || ಯೋಗಿಜನಾವಳಿ| ಮಾನಸಪೂಜಿತೆ | ಅಗಣಿತಗುಣಮಣಿ| ತ್ರಿಜಗದ್ವಂದಿತೆ 1 ಸುರುಚಿರಸುಮಗಾತ್ರೆ | ದೇವಿ| ಹಿಮಕರನಿಭವಕ್ತ್ರೆ || ಕಿನ್ನರ | ಸುರಮುನಿ ಪೂಜಿತೆ | ಕಾಮಿತವೀಯುವ || ಕರುಣಾಕರೆಯೆ 2 ಜನನಿಯೆ ನಿರತವು ನೀ | ಪ್ರೇಮವ | ನಿರಿಸುತಲೆನ್ನೊಳು ನೀ | ಕನಕದ ವೃಷ್ಟಿಯ | ಕರೆಯುತಲನುದಿನ | ಮನ್ಮನದಿಷ್ಟವು | ಸಿದ್ಧಿಸುವಂದದ 3 ಅಹಿಪತಿ ಶಯನನಿಗೆ | ಮೋಹದ | ಮಹಿಷಿಯು ನೀನಾಗೆ || ಮಹಿಮಾಕರೆ ನೀ | ಮಹಿಯೊಳಗನಿಶವು | ಇಹಪರ ಸುಖವನು | ಭವಿಸುವ ತೆರದಾ 4 ಅಜಭವಸುರವಿನುತೆ | ದೇವಿ | ಸುಜನಾವಳಿಪ್ರೀತೆ || ಗಜವಾಹಿನಿ ವರ | ಮದಗಜಗಮನೆಯೆ | ವಿಜಯವಿಠಲಪ್ರಿಯೆ ಶ್ರೀ ಗಜಲಕ್ಷ್ಮಿಯೆ 5 ಶುಭ | ಮಂಗಳೆ ಸುಪವಿತ್ರೆ || ಮಂಗಳಾಂಗಿ ನರ | ಸಿಂಗನ ರಮಣಿಯೆ | ಮಂಗಳಕಾರ್ಯಗ | ಳನುದಿನವೆಸಗುವ 6 ಪಂಕಜದಳನೇತ್ರೆ | ದೇವಿ | ಕಿಂಕರನುತಿಪಾತ್ರೆ || ಶಂಖಚಕ್ರಾಂಕಿತ | ಶ್ರೀ ವೈಕುಂಠನ |ಅಂಕದಿ ಮೆರೆವಖಿ | ಳಾಂಕ ಮಹಿಮಳೇ 7
--------------
ವೆಂಕಟ್‍ರಾವ್
ಲಕ್ಷ್ಮೀದೇವಿ ಅಂಜಿಸುವುದ್ಯಾಕಮ್ಮ ಕಂಜೋದ್ಭವ ನಮ್ಮ ನೀ ಅಂಜಿಸಿದರೆ ಲೋಕ ಅಂಜದಿರುವುದೆ ಪ ಕುಂಜರಗಮನೆ ನಾವಂಜನದೇವಿ ಸಂಜಾತನಾದ ಪ್ರಭಂಜನನಣುಗರು ಪಾದ ಕಂಜಕ್ಕೆ ವಿಮುಖ ಸಂಜಿಲಿ ಚಲಿಸುವ ಪುಂಜರು ಕಡಿಮೆ 1 ನಿನ್ನನೆ ನಂಬಿ ನಾವಿನ್ನು ಸಂಸೃತಿಯ ಬನ್ನವೆ ಕಳಕೊಂಡು ಚನ್ನಾಗಿ ಜಗದಿ ಧನ್ಯರಾದೇವೆಂದು ಮನ್ನಾದಿ ಬಯಸೆ ಅನ್ಯಾರಂದದಲಿ ನೀ ನಮ್ಮನ್ನ ನೋಡುವರೆ2 ಸಿರಿ ನಾರಸಿಂಹನ್ನ ವರ ಭಕ್ತಿಯಲಿ ನೀನು ಕರವಶ ಮಾಡಿಪ್ಪೆ ಪರವೇನೆ ನಿನಗೆ ಪರಮೇಷ್ಠಿ ಮೊದಲಾದಮರರ ನೀ ಪೊರೆವೆ ಸಿರಿ ವಾಸುದೇವವಿಠಲನ್ನ ತೋರಮ್ಮ 3
--------------
ವ್ಯಾಸತತ್ವಜ್ಞದಾಸರು
ಲಕ್ಷ್ಮೀದೇವಿ ಜನನಿ ಬ್ರಹ್ಮನ ರಾಣಿ | ಪುಸ್ತಕಪಾಣಿ ಪ. ಫಣಿರಾಜನಿಭವೇಣಿ | ವರವೀಣಾಪಾಣಿ || ಘನವಿದ್ಯಾದಾಯಿನಿ | ಪರಮಕಲ್ಯಾಣಿ1 ಶರದಿಂದುನಿಭವಕ್ತ್ರೆ | ಅರವಿಂದದಳನೇತ್ರೆ || ಪರಮಕೋಮಲಗಾತ್ರೆ | ಸುರಮುನಿನುತಿಪಾತ್ರೆ 2 ನೃತ್ಯವಿನೋದಿನಿ | ಸ್ತೋತ್ರ ಸುಪ್ರೀತೆ ನೀ ಭೃತ್ಯೌಘಪಾಲಿನಿ | ನಿತ್ಯಕಲ್ಯಾಣೀ 3
--------------
ವೆಂಕಟ್‍ರಾವ್
ಲಕ್ಷ್ಮೀದೇವಿ ಕಮಲಾಕ್ಷಿ ತಾಯೆ ಸೂಕ್ಷ್ಮಮತಿಯನಿತ್ತು ಪೊರೆದು ರಕ್ಷಿಪದೇವಿ ಪ ಹರಿಯರಾಣಿ ಭುಜಗವೇಣಿ ಪರಿಪರಿಯ ಕ್ಲೇಶಗಳಳಿವ ದುರಿತದೂರನ ಕರಪಿಡಿಯುತ ಬಾ ಪರಿ ವೈಭವದಿ 1 ವಂದಿಸುವೆ ನಿನ್ನ ಪದಕೆ ಅಂಬುಜಾಕ್ಷಿ ಕರುಣವ ಮಾಡಿ ಕಂಬು ಕಂಧರನೊಡಗೂಡುತ ಬಾ ಸಂಭ್ರಮ ಸೂಸುತಲಿ 2 ಗೆಜ್ಜೆ ಪೈಜನಿ ಪಾಡಗರುಳಿಯು ಸಜ್ಜಾಗಿಹ ಕಾಲುಂಗುರ ಧ್ವನಿಯ ಮೂರ್ಜಗದೊಡೆಯನ ಕರಪಿಡಿಯುತ ಬಾ ಸಜ್ಜನ ರಕ್ಷಕಳೆ 3 ನಡುವಿಗೆ ನವರತ್ನದ ಪಟ್ಟಿ ಬಿಡಿಮುತ್ತುಗಳುದುರುವ ಪೀತಾಂಬರ ಬಡನಡÀು ಬಳುಕುತ ಅಡಿ ಇಡು ಬಾ ನಿ- ನ್ನೊಡೆಯನ ಕೂಡುತಲಿ 4 ಕರದಲಿ ಕಂಕಣ ಹಾಸರ ಬಳೆಗಳು ಬೆರಳಲಿ ಉಂಗುರ ಥಳಥಳಿಸುತಲಿ ಗರುಡಗಮನ ನೊಡಗೂಡುತ ಬಾ ಬಾ ಗರುವವು ಮಾಡದಲೆ5 ವಂಕಿನಾಗಮುರುಗಿ ಕರದಲಿ ಬಿಂಕದಿ ಪಿಡಿದಿಹ ತಾವರೆ ಕುಸುಮವು ಪಂಕಜಾಕ್ಷನೊಡಗೂಡುತ ಮನ ಶಂಕೆಯು ಮಾಡದಲೆ6 ಕಠ್ಠಾಣಿಸರ ಪದಕಗಳ್ಹೊಳೆಯುತ ಕಟ್ಟಿದ ಉಂಗುರಡ್ಡಿಕಿ ಶೋಭಿಸುತ ಚಿತ್ತಜನಯ್ಯನನೊಡಗೂಡುತ ಬಾ ಮತ್ತೆ ಹರುಷದಲಿ 7 ಥಳಥಳಿಸುವ ಗಲ್ಲಕೆ ಅರಿಶಿನವು ನಲಿಯುವ ಮೂಗುತಿ ಮುಖುರ ಬುಲಾಕು ಹೊಳೆವ ಮೀನು ಬಾವಲಿ ಚಳತುಂಬುಗಳ್ಹೊಳೆಯುತ ಘಳಿಲನೆ ಬಾರಮ್ಮ 8 ಕುರುಡಿ ಬಾವಲಿ ಬುಗುಡಿ ಚಂದ್ರ ಮುರುವಿನ ಕಾಂತಿ ಮುಗುಳ್ನಗೆ ಮುಖವು ಉರುಗಾದ್ರೀಶನ ಕರಪಿಡಿಯುತ ಬಾ ಕರೆ ಕರೆ ಮಾಡದಲೆ 9 ಘಣೆಯಲಿ ಕುಂಕುಮ ಬೈತಲೆ ಬಟ್ಟು ಥಳಥಳಿಸುವ ಕಣ್ಣಿಗೆ ಕಪ್ಪಿಟ್ಟು ಎಳೆಬಾಳೆಯ ಸುಳಿಯಂದದಿ ಬಳುಕುತ ಘಳಿಲನೆ ಬಾರಮ್ಮ10 ಕೆಂಪಿನ ರಾಗುಟಿ ಜಡೆ ಬಂಗಾರವು ಸಂಪಿಗೆ ಮಲ್ಲಿಗೆ ಸರಗಳ ಮುಡಿದು ಸೊಂಪಿಲಿ ಶ್ರೀ ಹರಿಯೊಡನಾಡುತ ನಲಿಯುವ ಸಂತಸ ತೋರಮ್ಮ11 ಇಂದಿರೆ ಶ್ರೀರಮೆ ಭಾರ್ಗವಿಯೆ ನಂದತ್ರಯಾ ಸದಾಸುಶೀಲೆ ಸುಗಂಧಿ ಸುಂದರಿ ಮಂದಗ ಮನೆಯೆ ಚಂದದಿ ಬಾರಮ್ಮ 12 ಸುತ್ತೆಲ್ಲ ಸುರಸ್ತ್ರೀಯರು ಮುತ್ತಿನ ಛತ್ರ ಚಾಮರದರ್ಪಣ ಪಿಡಿದು ನೃತ್ಯಗಾಯನ ಮಾಡುತ ಕರೆವರು ಸತ್ವರ ಬಾರೆನುತ 13 ಶ್ರಮ ಪರಿಹರಿಸೆನುತಲಿ ಬೇಡುವೆನು ಮಮತೆಲಿ ಕರಗಳ ಮುಗಿಯುತ ಬೇಡಲು ಕಮಲನಾಭ ವಿಠ್ಠಲನೊಡನೆ ಶ್ರೀ- ಕಮಲೆಯು ಬರುತಿಹಳು14
--------------
ನಿಡಗುರುಕಿ ಜೀವೂಬಾಯಿ
ಲಕ್ಷ್ಮೀವಲ್ಲಭ ವಿಠಲ | ಪೊರೆಯ ಬೇಕಿವಳಾ ಪ ಅಕ್ಷಯ್ಯ ಫಲದ ಕೃ | ಪೇಕ್ಷಣದಿ ನೋಡಿಅ.ಪ. ಸಂಸಾರ ವಿರಸತರ | ಅಂಶವನೆ ತಿಳಿಸೊ ಹರಿಕಂಸಾರಿ ನಿನ್ನ ಪದ | ಪಾಂಸು ಭಜಿಸುತ್ತಾ ಸಂಶಯ ರಹಿತ ಹರಿ | ಹಂಸನಾಮಕ ಸೇವೆಶಂಸಾರ್ಯ ಸರ್ವಧಿಕ | ಸವೋತ್ತಮೆನುತಾ 1 ಹರಿನಾಮ ಕವಚವನು | ಸರ್ವದಾ ಧರಿಸುತ್ತಾದುರಿತನಾಳುಟ್ಟಳಿಯ | ಪರಿಹಾರ ಮಾರ್ಗಅರಿವಿನಿಂದಲಿ ಹರಿಯ | ವರನಾಮ ಸ್ಮರಿಸುತ್ತಕರಗತವು ಆಗಲಿಯೊ | ವರಮುಕ್ತಿಪಥವು 2 ಎರಡು ಮಾರ್ಭೇದಗಳು | ಅರಿವಾಗಲೀಕೆಗೇತರತಮಂಗಳು ಮನಕೆ | ಬರುತಿರಲಿ ಸರ್ವದಾಸಿರಿವಾಯು ಮತ ದೀಕ್ಷೆ | ಗೆರಗಲೀಕೆಯ ಮನಸುಹರಿಯ ಮಮ ಕುಲದೈವ | ಉದ್ದರಿಸೊ ಇವಳಾ 3 ಸಾಧನಕೆ ಸತ್ಸಂಗ | ನೀದಯದಿ ಕೊಟ್ಟಿವಳಮೋದ ಬಡಿಪದು ದೇವ | ಆದಿ ಮೂರುತಿಯೇ |ಮಾಧವನೆ ಬಿನೈಸೆ | ಆದರಿಸುತಿವಳೀಗೆಕಾದುಕೊ ಬಿಡದಲೆ | ಹೇ ದಯಾ ಪೂರ್ಣ 4 ದೇವದೇವೊತ್ತಮನೆ | ಕಾವದೇವನೆ ಹರಿಯಭಾವದಲಿ ಮೈದೋರಿ | ಪೊರೆಯೊ ಇವಳಾಕಾವ ಕರುಣೆಯ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಿಲ್ಲ | ಈ ವಾಣಿ ಬಲುಸತ್ಯ 5
--------------
ಗುರುಗೋವಿಂದವಿಠಲರು
ಲಕ್ಷ್ಮೀಶ ಹರಿ ವಿಠಲ | ಸಲಹ ಬೇಕಿವಳಾ ಪ ಪಕ್ಷೀಂದ್ರವಹ ಹರಿಯೆ | ತ್ರ್ಯಕ್ಷಪಿತಸೇವ್ಯಾ ಅ.ಪ. ಕನ್ಯೆ ಬಹು ವಿನಯವತಿ | ಅನ್ಯಸಹವಾಸವನುಮನ್ನಿಸಳು ಎಂಬುವದೆ | ಸ್ವಪ್ನದಲಿ ಸೂಚ್ಯಪನ್ನಂಗ ಶಯನ ಹರಿ | ನನ್ನೆಯಂ ಕೈ ಪಿಡಿದುಮನ್ನಿಸೋ ತರಳೆಯನು | ಮಧ್ವಂತರಾತ್ಮ 1 ಉಚ್ಛ ನೀಚದ ಭಾವ | ಜಗವೆಲ್ಲ ತುಂಬಿಹದುಅಚ್ಯುತನೆ ಸರ್ವರೊಳು | ಉತ್ತಮನೆಂಬಾಸ್ವಚ್ಛ ಪಂಚಕ ಭೇದ | ನಿಚ್ಛ ಮನದಲಿ ಪೊಳೆದುಉಚ್ಛ ಪದವಿಗೆ ದಾರಿ | ನೀನಾಗಿ ತೋರೋ 2 ಹರಿಗುರು ಸದ್ಭಕ್ತಿ | ನಿರುತ ಹಿರಿಯರ ಸೇವೆಮರುತ ಮತ ತತ್ವದಲಿ | ಪರಮ ಅಭಿಲಾಷೇವರಸುನಾಮಮೃತವೆ | ಸರ್ವದಾ ಸವಿವಂತೆಕರುಣಿಸುತ | ಪೊರ ಗುರು | ಗೋವಿಂದ ವಿಠಲಾ3
--------------
ಗುರುಗೋವಿಂದವಿಠಲರು
ಲಘುವಾವುದೆಂಬುದನು ನಿಜವಾಗಿ ನುಡಿಯುವೆನು ಸುಗುಣವಂತರು ಕೇಳಿ ವಿನಯದಲಿ ಬೇಡುವೆನು ಪ ಲಘುತೃಣವು ತಾನಲ್ಲದಿಟವೆ ಸರಿ ಈ ಮಾತು ಲಘುತೃಣವ ತಾವುಂಡು ಪಾಲ್ಕೊಡವೆ ಗೋವುಗಳು ಅ.ಪ. ನಾರಿಯನು ಸಾಕುವೆಡೆ ಕೈಲಾಗದ ಲಘುವು ಭಾರಿಸಿರಿಯನು ಪತಿಗೆ ತಾರದಾ ಸೊಸೆ ಲಘುವು ನಾರಿಯರ ಕೈಗೊಂಬೆಯಾಗಿರುವ ನರ ಲಘುವು ಸಿರಿವಂತ ನೆಂಟರಲಿ ಬಡವ ಸೇರಲು ಲಘುವು 1 ವಿತ್ತವಿಲ್ಲದ ಪಿತನು ಪುತ್ರನಿಲ್ಲಿರೆ ಲಘುವು ಪುತ್ರವತಿಯರ ನಡುವೆ ಸವತಿ ಬಂಜೆಯು ಲಘುವು ಅತ್ತಿಗೆಗೆ ಬಹು ಲಘುವು ರಿತ್ತ ಮೈದುನ ಮಂದಿ ಭತ್ರ್ಯತಾನತಿ ಲಘುವು ಶ್ರೀಮಂತ ಕನ್ನಿಕೆಗೆ 2 ಮೋದತೀರ್ಥರ ಮತಕೆ ಮಿಕ್ಕುದೆಲ್ಲವು ಲಘುವು ವೇದನುತ “ಶ್ರೀಕೃಷ್ಣವಿಠಲ”ನ ನೆನೆಯದವ ಶುದ್ಧಲಘು ತಮನೈಯ ವೃದ್ಧ ಸಮ್ಮತ ಹೌದು 3
--------------
ಕೃಷ್ಣವಿಠಲದಾಸರು
ಲಜ್ಜೆ ಲಜ್ಜೆ ನಿನ್ನ ನಂಬಿ ಕೆಟ್ಟೆನಾನು ಮಾಡೊದೇನು ಪ ಗೆಜ್ಜೆ ಕಟ್ಟಿದ್ದೊರೆ ಕೃಷ್ಣ ಭಜನೆಯಲ್ಲಿ ಮಾನದಲ್ಲಿ ಅ.ಪ. ಆರು ವಲಿದು ಮಾಡೊದೇನು ಆರುಮುನಿದು ಮಾಡೊದೇನು ಚಾರು ಚಾರು ಮೆಚ್ಚಲೇನು ಭಾರಿದೇವ ವಿಶ್ವಜನಕೆ ಹರಿಯದಾಸನೆಂದು ಇನ್ನು ಈರ ಮತವ ಸಾರಿಸಾರಿನಲಿದು ನಲಿದು ಸುಖಿಪುದಕ್ಕೆ 1 ದುಡ್ಡು ಕಾಸುಬೇಡ ನಮಗೆ ದೊಡ್ಡತನವು ಬೇಡ ಹಾಗೆ ಹೆಡ್ಡತನನ ಬಿಟ್ಟು ಪಿರಿಯಕೃಷ್ಣನನ್ನು ಭಜಿಸಲಿಕ್ಕೆ ಅಡ್ಡಿಏನು ಕುರುಡು ಮನವೆ ನೆನೆದುನೆನೆದು ನೋಡುನೀನೆ ದೊಡ್ಡತನವೆ ಸತ್ಯವೀದು ದಡ್ಡತನವೆ ದುರಭಿಮಾನ 2 ಹರಿಯದಾಸದೀಕ್ಷೆ ಪಡೆಯೆ ಸುಲಭವಲ್ಲ ಸುಲಭವಲ್ಲ ದುರಿತ ರಾಶಿಪೋಗಿ ಶುದ್ಧ ಚಿನ್ನದಂತೆ ಆಗದೇನೆ ಹಿರಿದು ಕಾಣೊ ಇಂಥಾ ಜನ್ಮ ಬರಿಯ ಮಾತಿಗೊಲಿಯದೇವ ಅರಿವಿನಂತೆ ನಡೆಯದಿರಲು ತೊರೆದು ಎಲ್ಲ ದುರಭಿಮಾನ 3 ಗೆಜ್ಜೆಕಟ್ಟಿ ಕುಣಿದು ಕುಣಿಯೆ ಲಜ್ಜೆನಾಶವಾಹುದೈಯ್ಯ ಲಜ್ಜೆನಾಶವಾಗಿ ಭಕ್ತಿಯುಕ್ತಿ ಉಕ್ಕಿಹರಿಯುತಿರಲು ಅಬ್ಜಪೀಠ ಪಿತನುತಾನೆ ಅಪ್ಪಿಕೊಂಡು ನಲಿದುನಲಿವ ಅಬ್ಜನಾಭ ನಲಿದು ವಲಿಯೆ ಹೆಚ್ಚುಉಂಟೆ ಅದರಕ್ಕಿಂತ 4 ಮೆರೆಯುತಿರಲು ದುಷ್ಟಕಲಿಯು ಅನ್ಯಮಾರ್ಗ ಸಾಧ್ಯವಿಲ್ಲ ಹರಿಯ ಭಜನೆ ಒಂದೇ ದಾರಿ ಹರಿಯ ವಲಿಸೆ ಸಿದ್ಧವೀದು ಜರಿದು ವಿಷಯ ಬೆರಸಿ ಭಕ್ತಿ ಸಿರಿಯ ರಮಣ “ಕೃಷ್ಣವಿಠಲ” ಚರಣ ಯುಗವ ಭಜಿಸಿ ನೀನು ಮಾನ್ಯನಾಗೋ ಧನ್ಯನಾಗೊ 5
--------------
ಕೃಷ್ಣವಿಠಲದಾಸರು
ಲಂಬೋದರನ ಸಹೋದರನೆ ಪ ಶಂಭುಜಕರುಣಾಸಾಗರನೆ ಅ.ಪ ಶೂರಪದ್ಮನ ಎದೆ ಸೀಳಿದನೆ ಮಾರನ ಪೋಲುವ ಸುಂದರನೆ ಧೀರ ಹಿರಣ್ಯಕನಾರಾಧನೆಗೆ ಮೆಚ್ಚಿ ಸೂರೆಯ ಮುಕ್ತಿಯನಿತ್ತವನೆ 1 ವರವಜ್ರ ಶಕ್ತ್ಯಾಯುಧ ಧರನೆ ಸುರಮುನಿ ನಮಿತ ಸರ್ವೇಶ್ವರನೆ ಸುರುಚಿರ ರತ್ನಾಭರಣ ವಿಭೂಷಣನೆ ಶರಣ ರಕ್ಷ ಕುಮಾರಕನೆ2 ದಾಸ ಜನರ ಮನತೋಷಕನೆ ವಾಸುದೇವನ ಸಖ ಷಟ್ಶಿರನೆ ದೋಷವಿನಾಶನೆ ನಾಶರಹಿತ ಪಾವಂಜೇಶನೆ ಕಾರ್ತಿಕೇಯನೆ ಸ್ಕಂದನೆ 3
--------------
ಬೆಳ್ಳೆ ದಾಸಪ್ಪಯ್ಯ