ಒಟ್ಟು 12958 ಕಡೆಗಳಲ್ಲಿ , 134 ದಾಸರು , 6175 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣಚಿತ್ತ ಕೃಷ್ಣಚಿತ್ತ ಕೃಷ್ಣಚಿತ್ತ ಎನ್ನಿರೊ ಪ. ಕೃಷ್ಣಧ್ಯಾನದಿಂದ ಪರಮ ತುಷ್ಟರಾಗಿ ಸುಖದುಃಖ ಕಷ್ಟ ಕರ್ಮಂಗಳು ಎಲ್ಲ ಅಷ್ಟು ಹರಿಯಾಧೀನವೆಂದು ಅ.ಪ. ಜನನವಾದ ಕಾಲದಿಂದ ಇನಿತು ಪರ್ಯಂಕಾರದಲ್ಲಿ ಅನುಭವಿಸಿದಂಥ ಕರ್ಮ ಗುಣನಿಧಿಯಾಧೀನವೆಂದು1 ಕಷ್ಟದಲ್ಲಿ ಕಳೆದ ಕಾಲ ಅಷ್ಟರಲ್ಲೆ ಪಟ್ಟ ಸುಖ ಕೊಟ್ಟ ಹರಿಯು ಎನಗೆ ಎನುತ ಕೆಟ್ಟ ವಿಷಯ ಮನಕೆ ತರದೆ 2 ಕಾಮ ಕ್ರೊಧ ಲೋಭ ಮೋಹ ಆ ಮಹಾ ಮದ ಮತ್ಸರಗಳು ಕಾಮಿಸಿ ಮನ ಕೆಡಿಸುತಿರಲು ಶ್ರೀ ಮನೋಹರನಾಟವೆಂದು 3 ಪೊಂದಿದಂಥ ಮನುಜರಿಂದ ಕುಂದು ನಿಂದೆ ಒದಗುತಿರಲು ಇಂದಿರೇಶನ ಕರುಣವೆಂದು ಒಂದು ಮನಕೆ ತಾರದಂತೆ 4 ಮಾನ ಅಪಮಾನಗಳು ದೀನನಾಥನಧೀನವೆಂದು ಜ್ಞಾನಿಗಳ ವಾಕ್ಯ ನೆನೆದು ಮಾನಸದ ದುಃಖ ಕಳೆದು 5 ಹೊಟ್ಟೆ ಬಟ್ಟೆಗೊದಗುವಂಥ ಅಷ್ಟು ಕಷ್ಟ ಸುಖಗಳೆಲ್ಲ ವಿಷ್ಣುಮೂರ್ತಿ ಕೊಟ್ಟನೆಂದು ಮುಟ್ಟಿ ಮನದಿ ಹರಿಯ ಪದವ 6 ಹರಿಯ ಧ್ಯಾನ ಮಾಡುವುದು ಹರಿಯ ಧ್ಯಾನ ಅರಿಯುವುದು ಮೂರ್ತಿ ಕಾಣುವುದು ಹರಿಯಧೀನವೆಂದು ತಿಳಿದು 7 ಗುರುಕೃಪೆಯಿಂ ದತ್ತವಾದ ವರ ಸುಜ್ಞಾನವರೆಯ ತಿಳಿದು ಹರುಷ ಕ್ಲೇಶಾ ಮನಕೆ ತರದೆ ಮೂರ್ತಿ ಮನಕೆ ತಂದು 8 ನಿಷ್ಟೆಯಿಂ ಗೋಪಾಲ ಕೃಷ್ಣವಿಠ್ಠಲಾಧೀನ ಜಗವು ಇಟ್ಟ ಹಾಗೆ ಇರುವೆನೆಂದು ಗಟ್ಟಿಮನದಿ ಹರಿಯ ಪೊಂದಿ 9
--------------
ಅಂಬಾಬಾಯಿ
ಕೃಷ್ಣತಾತ ಮ'ಪತಿರಾಯರ ಭಜಿಸೊಅಭಿಮಾನವ ತ್ಯಜಿಸೊ ಅನುಮಾನವ ತ್ಯಜಿಸೊ ಪರಾಜವೈಭವದ ಭೋಗಗಳನುಭ'ಸಿ ಶ್ರೀ ಹರಿಯ ಸ್ಮರಿಸಿಭೋಗದೊಳಗೆ ತ್ಯಾಗದ ಪಾಠವ ಕಲಿಸಿ ಕೊಡುಗೈದೊರೆಯೆನಿಸಿಯೋಗಬಂದತಕ್ಷಣ ವೈಭವ ತ್ಯಜಿಸಿ ಯೋಗಿಯನಾಶ್ರೈಸಿಯೋಗಾಭ್ಯಾಸದಿ ಬೇಗ ಹರಿಯ ಒಲಿಸಿ ಅವನೊಳು ಮನಬೆರೆಸಿ 1ಹರಿಯಧ್ಯಾನಕನುಕೂಲವಾದ ಮೆಟ್ಟಾ ಹುಡಕುತುತಾಹೊರಟಾವರಕಾಖಂಡಿಕಿ ಕ್ಷೇತ್ರದಿ ಕಾಲಿಟ್ಟಾ 'ಶ್ರಾಂತಿಗೆ ಕುಳಿತಾಅರೆನಿ'ುಷದಿ ಹರಿಧ್ಯಾನದಿ ಮೈಮರೆತಾ ಸಮಾಧಿ ಇಳಿಯುತಾವರೃಮುನಿಗಳು ತಪವಗೈದಮೆಟ್ಟಾ ಎನುತಲಿಯೆ ನಿಂತಾ 2ಹಗಲು ಇರಳು ಹರಿಧ್ಯಾನದಿ ತಾ ಮುಳುಗಿ ಅಲ್ಲಿರುತಿರಲಾಗಿ ನಗೆ ಮುಖದಲಿ ಝಗಝಗ ಕಾಂತಿಯು ಬೆಳಗಿ ಸುತ್ತಲು ಬೆಳಕಾಗಿಜಗದಜನಕೆ ಅದು ಅತಿ ಅಚ್ಚರಿಯಾಗಿ ಯೋಗಿಗೆ ಶಿರಬಾಗಿಬಗೆ ಬಗೆ ಭಕುತರು ಬಂದರು ತಾವಾಗಿ ಮ'ಪತಿಮಹಾಯೋಗಿ 3ಅಷ್ಟಸಿದ್ಧಿಗಳು ನೆಲೆಸಿದವಾಗಲ್ಲಿ ಆಶ್ರಮ ಬಾಗಿಲಲಿಎಷ್ಟು ಭಕುತಿಜನ ಬಂದರು ಸ'ತಲ್ಲಿ ಇಷ್ಟಾರ್ಥ ಕರದಲಿಮೃಷ್ಟಾನ್ನ ಭೋಜನ ಪ್ರತಿದಿನದಲ್ಲಿ ನಡೆುತು ಸಮತೆಯಲಿಇಷ್ಟವಾದ ಆಧ್ಯಾತ್ಮಿಕ ಮಾರ್ಗದಲಿ ಉಪದೇಶ ಪಡೆಯುತಲಿ 4
--------------
ಭೂಪತಿ ವಿಠಲರು
ಕೃಷ್ಣನ ನೋಡಿರೈ ಭಕ್ತಿ ತುಷ್ಟನ ಪಾಡಿರೈ ಕೃಷ್ಣೆಗೆ ಬಲಿದತಿ ದುಷ್ಟ ರಾಯರನು ತರಿದಾ ಜಗದೊಳು ಮೆರೆದಾ ಪ ನಂದ ವ್ರಜದಲಿ ಕಂದನಾಗಿ ತಾ ಬೆಳೆದಾ ದೈತ್ಯನರಳಿದಾ ಕೂಡಿ ಪರಿಪರಿಯಾಡಿ ತೋರಿಸಿದಾ ಮೋಹ ಚರಿಸಿದ ಕಾವಾ ವರಗಳನೀವಾ 1 ಕದ್ದಾ ತೀವ್ರದಿ ಮೆದ್ದಾ ಗೋವಾ ಕಾಯ್ದನು ದೇವಾ ಪೊರೆದ ಗರ್ವವ ಮೆರೆದಾ ಸುರದಿಂದ ಮೆರೆದಾ 2 ಮಧುರ ಪಟ್ಟಣದಲಿ ಕದನ ಕರ್ಕಶರ ಕೊಂದಾ ಸಚ್ಚಿದಾನಂದಾ ಸದುಗುಣ ನಿಧಿಯ ಪಡೆದವಳ ಜನಕಗೆ ಪಟ್ಟಾ ಗಟ್ಟದ ದಿಟ್ಟಾ ಪುರದಿಂದಾ ಸುರಪಮ ತಂದ ಪದುಮಜಾಂಡಧರ ಜಗನ್ನಾಥ ವಿಠಲ ಗೀತಾ ತ್ರಿಗುಣಾತೀತಾ3
--------------
ಜಗನ್ನಾಥದಾಸರು
ಕೃಷ್ಣನ್ನ ಶ್ರೀ ಕೃಷ್ಣನ್ನ ಕೊಳಲಿನ ಧ್ವನಿಯ ಕೇಳಿ ನಾ ಸತಿ ಪ. ಮಧುರ ಮಧುರ ಸ್ವರ ಸುದತಿಯೆ ಕೇಳೆ ಚದುರನು ಊದುತÀಲಿಹನೆ ಸದನದಿ ನಿಲ್ಲಲು ಹೃದಯವು ಒಲ್ಲದು ಚದುರೆಯೆ ಕರೆದೊಯ್ ಎನ್ನಾ ಮನಮೋಹನ ಮದಸೂದನ ಕೃಷ್ಣನ್ನೆಡೆಗೆ ಪೋಗದೆ ನಿಲ್ಲಲು ತಾಳಲಾರೆನೆ ಕೇಳ್ ಸಖಿ ಪೋಗುವ ಬಾರೆ ಚಂದ್ರಮುಖಿ 1 ಕಂದ ಕರುಗಳ ಆನಂದದಿ ಕಾಯ್ವ ಆನಂದವ ನೋಡುವ ಬಾರೆ ಸುಂದರ ಕೊಳಲಿಗೆ ಚೆÉಂದದಿ ಸರ್ಪಾ ನಂದದಿ ತÀಲೆತೂಗುವುದೆ ಮೃಗ ಜಡತೆಯಿಂ ನಿಂತು ಕೇಳುವ ಗಾನ ನೋಡುವ ಬಾರೆ ಎನ ಮನಸೆಲ್ಲಿಹುದೆ ಕೇಳ್ ಸಖಿ ಶ್ರೀ ಶ್ರೀನಿವಾಸನೊಳ್ ಚಂದ್ರಮುಖಿ 2
--------------
ಸರಸ್ವತಿ ಬಾಯಿ
ಕೃಷ್ಣರಾಯನೆ ನಿನ್ನ ಕೃತ್ಯಗಳೆಲ್ಲ ಸೃಷ್ಟಿಯೊಳಗೆ ನಾ ಬೀರಲ್ಯಾ ಪ ಕಷ್ಟ ಬಿಡಿಸದೆ ಸುಮ್ಮನಿದ್ದೆಯಾ ಸ್ವಾಮಿ ಅ.ಪ. ಜನನ ಮರಣ ಶೂನ್ಯನೆನಿಸಿಕೊಂಡು ಗೋಪಿ ತನಯನಗಿದ್ದುದ ಹೇಳಲ್ಯಾ ಸನಕಾದಿಸೇವ್ಯ ಪೂಜ್ಯನೆ ತುರುಗಳ ಹಿಂಡು ವನದಲ್ಲಿ ಕಾಯ್ದದ್ದು ಹೇಳಲ್ಯಾ ನಾನು 1 ದನುಜ ಭಂಜನನಾದ ‌ಘನ ಮಹಿಮನೆ ಮಾಗ ಧನಿಗಂಜಿ ಓಡಿದ್ದು ಹೇಳಲ್ಯಾ ಎಣೆಯಿಲ್ಲದಾ ಶೂರ ರಣದೊಳು ಪಾರ್ಥಗೆ ಅನುಗನಾಗಿದ್ದದ್ದು ಹೇಳಲ್ಯಾ ನಾನು 2 ಸತತ ತೃಪ್ತನಾಗಿ ಕ್ಷಿತಿಯೊಳು ಬೆಣ್ಣೆಯ ಮಿತವಾಗಿ ಕದ್ದದ್ದು ಹೇಳಲ್ಯಾ ಕೃತಿದೇವಿರಮಣನೆ ಅತಿ ಪ್ರೀತಿಯಲಿ ಗೋಪ ಸತಿಯರ ಕೂಡಿದ್ದು ಹೇಳಲ್ಯಾ ನಾನು 3 ಶ್ರುತಿತತಿಗಳಿಗಭೇದ್ಯ ಪ್ರತಿಯಿಲ್ಲದೆ ದೇವ ಸತಿಗೊಶನಾದದ್ದು ಹೇಳಲ್ಯಾ ಶತಕೃತು ವಿಧಿವಂದ್ಯ ಸುತರಾಪೇಕ್ಷಿಸಿ ಭೂತ ಪತಿಯನ್ನು ಬೇಡಿದ್ದು ಹೇಳಲ್ಯಾ ನಾನು 4 ಭೂತಳದೊಳು ದೇವತೆಗಳೊಡÀನೆ ಇಂಥ ರೀತಿಲಿ ಚರಿಸಿದ್ದು ಹೇಳಲ್ಯಾ ಭೀತಿರಹಿತ ಜಗನ್ನಾಥವಿಠ್ಠಲನೆ ಅ ದ್ಭುತ ಮಹಿಮನೆಂದು ಹೇಳಲ್ಯಾ ನಾನು 5
--------------
ಜಗನ್ನಾಥದಾಸರು
ಕೃಷ್ಣಲೀಲೆ ಆನೆ ಬರುತಾದೆ ನೋಡಮ್ಮ ಮದ್ದಾನೆ ಬರುತಾದೆ ಪ ಆನೆ ಬರುತಾದೆ ಎಲ್ಲರು ನೋಡಿರಿ ಒಂ-ದಾನೆಯ ಕೊಂದ ಮದ್ದಾನೆಏನೆಂದು ಪೇಳಲಿ ಎಲ್ಲ ದಿಕ್ಕುಗಳಲಿತಾನೇ ತಾನಾಗಿ ಮದ ಸೊಕ್ಕಿದಾನೆಅ ನೀರ ಮುಳುಗಿ ಖಳನ ಕೊಂದು ವೇದ ತಂದುಬರಮದೇವಗಿತ್ತ ಮದ್ದಾನೆಕ್ರೂರ ಚಿತ್ರಗುಪ್ತನೊಡನೆ ಕಾರುಬಾರಿಗಿಳಿದಜಾರ ಕೃಷ್ಣನೆಂಬ ಸೊಕ್ಕಿದಾನೆ 1 ದಶದಿಕ್ಕಿನೊಳು ಘಂಟೆ ಘಣಿರೆಂದು ಬರುತ್ತಿದೆಕುಸುಮಶರನ ಪೆತ್ತ ಮದ್ದಾನೆದಶಕಂಠನ ಕೊಂದು ಅನುಜಗೆ ಪಟ್ಟಗಟ್ಟಿದದಶರಥಸುತನೆಂಬ ಮದ ಸೊಕ್ಕಿದಾನೆ 2 ಗಂಧ ಕಸ್ತೂರಿ ಬೊಟ್ಟು ಗಮಕದಿಂದಲಿ ಇಟ್ಟುಗೊಂದಲಗಡಿಬಿಡಿ ಸುರಲೋಕ ಅಮ್ಮಮ್ಮಬೆಂಬಿಡದೆ ದೈತ್ಯರನು ಕೊಂದ ಗುಣ ಸಂಪನ್ನಸುಂದರ ಕೃಷ್ಣನೆಂಬ ಮದ ಸೊಕ್ಕಿದಾನೆ 3 ಸಾವಿರ ತೋಳವನ ಸರಸದಿಂದಲಿ ಕಡಿದಭುವನ ರಕ್ಷಕನಾದ ಮದ್ದಾನೆಯೌವನದ ಗೋಪಿಯರ ಕಣ್ಮಣಿ ಎನಿಪ ವಸುದೇವಸುತನೆಂಬ ಮದ ಸೊಕ್ಕಿದಾನೆ 4 ಗರುಡವಾಹನವೇರಿ ಧಿಮಕೆಂದು ಬರುತಾನೆಸರುವ ಲೋಕರಕ್ಷಕನೆಂಬ ಮದ್ದಾನೆಉರೆ ಪೂತನಿಯ ಹೀರಿ ಮಾವ ಕಂಸನ ಕೊಂದಸಿರಿಯಾದಿಕೇಶವನೆಂಬ ಮದ ಸೊಕ್ಕಿದಾನೆ 5
--------------
ಕನಕದಾಸ
ಕೃಷ್ಣವೇಣಿ ಕಲ್ಯಾಣಿ ನಿತ್ಯ ಸಾಗರನ ರಾಣಿ ಪ ಅಜನ ನಿರೂಪದಲಿ ಜಾಬಾಲಿಮುನಿ ಬಂದು ಭಜಿಸಿದನು ನಿನ್ನ ಬಲುದಿವಸಂಗಳು ನಿಜವಾಗಿ ಹರನ ಜಡೆಯಲ್ಲಿ ಉದ್ಭವಿಸಿದೆ ತ್ರಿಜಗದೊಳಗೆ ಮೆರೆದೆ ತ್ರಿದಶಾಮರವಂದಿತೆ 1 ಕನ್ಯಾರಾಶಿಗೆ ಜೀವ ಬಂದು ಪ್ರಾಪುತನಾಗೆ ಹನ್ನೆರಡು ವರುಷಕೆ ಒಮ್ಮೆ ಬಿಡದೇ ಮನ್ನಿಸಿ ಭಕುತಿಯಿಂದ ಒಂದು ಮಜ್ಜನಮಾಡೆ ಧನ್ಯನ ಮಾಳ್ಪೆ ಬಲು ಘನ್ನ ತರಂಗಿಣಿ 2 ಎತ್ತ ನೋಡಿದರತ್ತ ನಾಲ್ಕುವರೆ ಯೋಜನವು ಕ್ಷೇತ್ರ ಪುಣ್ಯದೇವಿಯೆನಿಸಿಕೊಂಬೆ ಸ್ತುತಿಸಲಳವೇ ನಿನ್ನ ಮಹಿಮೆಯ ಅನುಗಾಲ ಮತ್ತಗಜಗಮನೆ ಮಲದೂರೆ ಮುಕ್ತಿಧಾರೆ 3 ಪೋಗದ ಪಾಪಗಳಿರಲು ನಿನ್ನ ದರುಶನವು ಬಾಗಿಲ ಕಾಯ್ವ ಭಾಗ್ಯವ ಕೊಡು ಕರುಣದಲಿ 4 ಕಲಿಯುಗಕೆ ನೀನೇ ವೆಗ್ಗಳವೆಂದು ಬುಧಜನರು ಒಲಿದು ಕೊಂಡಾಡುವರು ಸತತದಲ್ಲಿ ಜಲನಿಧಿಯ ಎರಡು ಮೊಗದಲಿ ಮೆರೆದೆ ಮಹತಟಿನಿನೆಲೆಗೊಳಿಸು ವಿಜಯವಿಠ್ಠಲ ಚರಣದಲ್ಲಿ 5
--------------
ವಿಜಯದಾಸ
ಕೃಷ್ಣಾ ಎಣಿಕ್ಯಾಕೈಯ್ಯ ನಮ್ಮ ಕೂಡ ತುಟ್ಟಿ ಮಿಸುಕಬಾರದು ನೋಡಬ್ಯಾಡ ಇಷ್ಟರಮೇಲೆ ತಿಳಿಯದ ನಾ ಮೂಢ 1 ಅಂದು ಏನಾಗಿತ್ತೈಯ್ಯ ನಿಮ್ಮ ಬುಧ್ದಿ ಬಂದು ಗೊಲ್ಲರೊಡನೆ ಕೂಡ್ಯಾಕಿದ್ದಿ ಸಂಧಿಸ್ಯವರುಚ್ಚಿಷ್ಟವೆಂದು ನೀ ಮೆದ್ದಿ ಇಂದು ಬ್ಯಾರೆ ನೋಡಲಿಕ್ಕೆ ಮರದ ಸುದ್ದಿ 2 ಕುಬ್ಜೆ ಕೂಡಿಕೊಂಬಾಗ ನೋಡಲಿಲ್ಲಿ ನಿಜಪದಕ ಯೋಗ್ಯಳ ಮಾಡಲಿಲ್ಲಿ ಅಜಮಿಳನೆಷ್ಟೆಂದು ಅರಿಯಲಿಲ್ಲಿ ಸೋಜಿಗೆಲ್ಲಾನು ನಿಮ್ಮದು ನಾ ಬಲ್ಲೆ 3 ಸುಮ್ಮನಿರಬೇಕೆನ್ನ ನೀ ಕೂಡಿಕೊಂಡು ನಿಮ್ಮ ಮಾತು ಒಡಿಯದು ಉದ್ದಂಡು ಇಮ್ಮನಾಗದಲ್ಲಿಂದ ಮನಗಂಡು ಬ್ರಹ್ಮಾನಂದ ಕೊಂಡಾಡುವೆ ಘನನುಂಡು 4 ಹಿಂದೆ ಭಕ್ತರೇನು ತಾಂ ಕೊಟ್ಟರಯ್ಯ ಇಂದು ನಾ ಕೊಡುವದೇನು ಹೇಳಯ್ಯ ಕಂದ ಮಹಿಪತಿ ನಾ ನಿಮ್ಮ ನಿಶ್ಚಯ ಎಂದು ಬಿಡದೆ ಸಲಹೊ ನೀ ನಮ್ಮಯ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಷ್ಣಾ ನಿನ್ನ ಕನಿಷ್ಟ ಪೊಳವ ವುಂ ಗುಷ್ಟ ಭಜಿಸುವ ನಿಷ್ಠ ಜನರ ಉಚ್ಚಿಷ್ಟ ಎನಗದು ಮೃಷ್ಠಾನ್ನವಾಗಲಿಷ್ಟೇ ಬೇಡಿದೆನೊ ಪ ನರಲೋಕದ ಸುಖ ಪರಿಪರಿಯಲ್ಲಿ ಅರಿದೆನದರೊಳು ಪರಮ ಸೌಖ್ಯ ಎಳ್ಳರೆ ಅನಿತಿಲ್ಲ ಬರಿದೆ ಜನನ ಮರಣ ಪರಿಯಂತಾ ದುರಿತ ಧರೆಯೊಳಗೆ ನಿಂದಿಸಲಾರೆ ಸಾಕು ಶರಣು ಹೊಕ್ಕೆನು ಕರುಣಪಾಂಗನೆ ಕರವಿಡಿದು ಸಲಹೋ 1 ಆವುದುಂಟದು ದೇವ ಮಾಣಿಸು ಈ ವರವ ಕೊಂಡು ನಾ ಒಂದನು ವಲ್ಲೆ ಭಾವಶುದ್ಧ ವಾಕ್ಯವೆ ನಿಶ್ಚಯವೊ ಮಾನವ ಕಾವ ನೈಯನೆ ಕಾವ ಜೀವ ನಿನ್ನಂಘ್ರಿ ಸೇವೆ ಸಂಪದವೊ ಜಗತ್ರಯವ 2 ಹಡಗದೊಳಗಿಂದ ತಡಿಯದೆ ಬಂದಾ ಕಡಗೋಲ ನೇಣ ಪಿಡಿದ ಪಡುವಲಾ ಗಡಲ ತೀರದ ಉಡುಪಿನಲಿ ನಿಂದ ಅಡಿಗಡಿಗೆ ಪೂಜೆ ಬಿಡದೆ ಯತಿಗಳಿಂ ಉಘಡ ವಿಜಯ ವಿಜಯವಿಠ್ಠ ಲೊಡಿಯ ಭಕ್ತರ ಬಿರುದಿನ ಕಡು ಸಾಹಸಮಲ್ಲ3
--------------
ವಿಜಯದಾಸ
ಕೃಷ್ಣಾ ನೀ ಬೇಗನೆ ಬಾರೊಮುಖವನೆ ತೋರೋ ಪ ಕಾಶೀ ಪೀತಾಂಬರ ಕೈಯಲಿ ಕೊಳಲುಪೂಸೀದ ಶ್ರೀಗಂಧ ಮೈಯೊಳಗಮ್ಮ 1 ಉಡಿಯಲ್ಲಿ ಉಡಿಗೆಜ್ಜೆ ಬೆರಳಲಿ ಉಂಗುರಕೊರಳಲಿ ಹಾಕಿದ ಹುಲಿಯುಗುರಮ್ಮ2 ತಾಯಿಗೆ ಬಾಯಲ್ಲಿ ಜಗವನ್ನೆ ತೋರಿದಜಗದೋದ್ಧಾರಕ ನಮ್ಮ ಉಡುಪಿಯ ಶ್ರೀಕೃಷ್ಣ3
--------------
ವ್ಯಾಸರಾಯರು
ಕೃಷ್ಣಾರ್ಪಿತವೆಂದು ಕೊಡುಲು ಎ-| ಳ್ಳಷ್ಟಾದರೂ ಮೇರು ಪರ್ವತ ಮೀರುವದು ಪ ಗಣ್ಯವಿಲ್ಲದೆ ಶಿಷ್ಯ ಸಹಿತ ಹರರೂಪ ಮುನಿ ಅ- ರಣ್ಯದಲಿ ಪಾಂಡವರು ಇರಲು ಬಂದು || ಪುಣ್ಯಬೇಕೆಂದೆನಲು ಬಂದು ದಳ ಶಾಖಾ ಕಾ- | ರುಣ್ಯದಲಿ ಹರಿ ಎನಲು ಅಪರಿಮಿತವಾದುದು 1 ಹಸ್ತಿನಾಪುರದಲ್ಲಿ ಸಕಲ ದೇವಾದಿಗಳ | ಮಣಿ ವಿದುರನ ಮನೆಯಲ್ಲಿ || ಹಸ್ತು ಬಂದುದಕೆ ಉಪಾಯವೇನೆಂದೆನಲು | ಹಸ್ತದೊಳು ಪಾಲ್ಗುಡತಿಯೆರಿಯೆ ಮಿಗಿಲಾದುದೊ2 ಅಣು ಮಹತ್ತಾಗಲಿ ಆವಾವ ಕರ್ಮಗಳು | ತೃಣನಾದರರಿತು ಅರಿಯದೆ ಮಾಡಲು || ಕ್ಷಣ ತನ್ನದೆನ್ನದೆ ಅರ್ಪಿತನೆ ನಿಕ್ಷೇಪ | ಗುಣನಿಧಿ ವಿಜಯವಿಠ್ಠಲನ ಪುರದಲ್ಲಿ 3
--------------
ವಿಜಯದಾಸ
ಕೃಷ್ಣಾರ್ಯರು ಮನವೇ ಲಾಲಿಸಿ ಕೇಳೊ ಬಿನ್ನೈಸುವೆನೊ ನಿನಗೆ ಚೆನ್ನಾಗಿ ವಡೆಯಾನಾ ಪಾದದಲ್ಲಿ ಭಕುತಿಯನ್ನೆ ಮಾಡಿ ಮಮತೆ ವಿಷಯಾದಿ ಅಹಂಕಾರ ಬುದ್ಧಿಯನ್ನೇ ಬೀಸಾಟಿ ದೃಢವಾಗಿ ಧೈರ್ಯದಿಂದ ಇದೇ ಸಾಧನವೆಂದುಗುಪಿತಾದಲ್ಲಿ ಸಂಚರಿಸೆ ಪಾಣಿಯಾ ಪಿಡಿದುತಾ ವಾಣಿ ಅರಸ ನಿರ್ಮಾಣವ ತೋರಿಸುವ ಪ್ರಾಣದೇವರು ಪ್ರಾಣವಪ್ಪಿಸಿ ಸಾಕುವಬಿಡದೆ ಪಂಚಪ್ರಾಣಾತ್ಮಕನಾದ ತಂದೆವರದಗೋಪಾಲವಿಠಲರೇಯಾನ ಭಜಿಸು ಬಿಡದೆ 1 ಇಂದು ಸಾಧನವೆಂದು ತಿಳಿದು ನಿನ್ನಿಂದ ನೀನೇ ಹಿಗ್ಗಿ ಕುಗ್ಗಾದೀರು ಮಗ್ಗುಲೊಳಗಿದ್ದ ಮಧ್ವದ್ವೇಷಿ ಬಂದು ಮದ್ದು ಹಾಕಿ ಮಣಿಸೂವ ಮಧ್ವರಾಯರ ಪಾದಪದ್ಮದಲ್ಲಿ ಬುದ್ಧಿಯನಿಟ್ಟರೆ ಬಾಧೆಯ ತಪ್ಪಿಸಿ ಉದ್ಧರಿಸುವ ಮುದ್ದು ಮುಖದ ತಂದೆವರದಗೋಪಾಲ- ವಿಠಲರೇಯಾನವಲಿಸು ಬಿಡದೆ 2 ಅನಾದಿ ಕಾಲದಿಂದ ನಿಜ ಗುರುರಾಯನು ನಿನ್ನೊಳಿದ್ದು ಜನಿಸಿ ಬಂದ ಸಾಧನ ಬಿಟ್ಟು ಸುಖದುಃಖ ಜಲಮಯ ಸಂಸಾರದೊಳಗೆ ಬಿದ್ದು ಬಾಯ್ಬಿಡುವಿ ಕಂಡ್ಯಾ ಆ ಗುರುರಾಯರ ಮೂರುತಿ ನಿನ್ನೊಳು ನೋಡುತ್ತ ಪಾಡುತ್ತ ಸುಖಿಯಾಗಿ ಸಕಲ ಕರ್ಮಗಳಾಚರಿಸಿ ತದ್ವಾರ ನವನಿಧಿ ರಾಜನ ಚರಣಕ್ಕೆ ಆರೋಪಿಸೆ ಕೈಗೊಂಡು ಹೊಸಹೂವ ಸುಂದರ ಮೂರುತಿ ತಂದೆವರದಗೋಪಾಲವಿಠ್ಠಲರೇಯಾನ ನಿಲ್ಲಿಸೊ ಬಿಡದೇ 3 ಅವರ ಬಳಿಯಲ್ಲಿ ಪೋಗಿ ನೀನೂ ನಿನ್ನದು ಎನ್ನದಿರು ಕಂಡ್ಯಾ ಮುನ್ನ ನಿನಗೆ ಘನ್ನವಾದ ವೈರಾಗ್ಯ ಪುಟ್ಟುವಾದೂ ಇನ್ನು ನೀನು ಮನದಾಶೆ ಎಂಬ ಪಿಶಾಚೀಗೆ ಒಳಗಾಗಿ ಏನಾಹೋದೋ ನಿನ್ನ ಘಾಸಿಯನರಿತು ಕ್ಲೇಶಾಪಾಶಾಗಳಿದ್ಯಾಡಿಪಶುಪತಿಪಿತನ ಪಡೆದ ತಂದೆವರದಗೋಪಾಲವಿಠಲರೇಯಾನ ವಲಿಸೋ ಬಿಡದೆ4 ಸದಾಕಾಲದಲ್ಲಿ ಇವರ ಸ್ಮರಣೆ ಮಾಡಿ ಧ್ಯಾನಕೆ ತಂದು ಯೋಗಾದಿ ನೋಡುವಾದೆ ಮಹಾ ನಿಜವಾದ ಭಕುತಿ ಇವರ ಪಾದಸ್ಮರಣೆ ಮಾಡಾದ ಮನುಜರಿಗೆ ಶ್ರೀಪದ್ಮ ರಮಣಾನು ಸೃಷ್ಟಿಸೂವ ಆ ಮನುಜಗೋಸುಗ ನರಕ ನರಕಾದೊಳಗಿಟ್ಟು ಕುಟ್ಟುವ ಕ್ಷಣ ಬಿಡದೆ ಎಷ್ಟು ಮಾಡಿದರೇನು ಉತ್ತುಮೋತ್ತಮರೆಲ್ಲ ಸೋತ್ತುಮರಾಯರ ದ್ರೋಹಮಾಡಿ ತುತ್ತುತುತ್ತೀಗೆ ಹಾಕಿಸಿಕೊಂಡು ಕುತ್ತೀಗೆ ಕಟ್ಟಿ ನಿತ್ಯಾದಲ್ಲಿ ಸ್ಮರಣೆಯ ಮಾಡಿದರೆ ನೃತ್ಯವಾಗೈಸುವ ಭಕ್ತಾವತ್ಸಲ ತಂದೆವರದಗೋಪಾಲವಿಠಲರೇಯಾನ ನಿಲ್ಲಿಸೋ ಬಿಡದೆ 5 ಜತೆ :ನವವಿಧಭಕುತಿಯನ್ನೇ ಅರಿತು ಗುರುಪೂಜೆ ಮಾಡಲು ತದ್ವಾರಾ ವಲಿದಾ ತಂದೆವರದಗೋಪಾಲವಿಠ್ಠಲಾ 6
--------------
ತಂದೆವರದಗೋಪಾಲವಿಠಲರು
ಕೆಟ್ಟು ಹೋಗಬೇಡ ಮನುಜ ಸಾರಿ ಹೇಳುವೆ ಮನವ ಮುಟ್ಟಿ ಭಜಿಸೋ ಹರಿಯ ಶ್ರೀ ಕೃಷ್ಣ ಕಾಯುತಾನೆ ಪ ಆನೆಯಂತೆ ಹರಿವುದೊಂದು ಹೀನ ಮನವ ಹರಿಯಬಿಟ್ಟು ನೀನು ವಿಷಯವನ್ನು ಬಯಸಿ ನಾನಾನರಕದಲ್ಲಿ ಬಿದ್ದು 1 ದಾನ ಧರ್ಮಗಳನು ಬಿಟ್ಟು ಬರಿಯ ತನುವದಂಡಿಸುತ್ತ ಪುಣ್ಯ ತೀರ್ಥಸ್ನಾನಬಿಟ್ಟು ವಿಷ್ಣು ಮೂರ್ತಿಧ್ಯಾನ ತೊರೆದು 2 ಗಂಟು ಗಡಿಗೆ ಇರಲುನಿನಗೆ ನೆಂಟರಿಷ್ಟರೆಂದು ಬಂದು ಪಂಟಿಯನ್ನು ತೆಗೆವರೆಲ್ಲ ಅಂಟಿ ಬೆನ್ನಬರುವರಿಲ್ಲ 3 ಪಂಡಧರನ ದಂಡು ಬಂದು ದಂಡೆಗೆ ದಂಡೆ ಬಿಗಿದು ಕಟ್ಟಿ ಮಕ್ಕಳು ಬರುವನೋ 4 ನಿನ್ನ ನೀನೆ ತಿಳಿದುಕೊಂಡು ಚೆನ್ನಿಗನ ಕೂಟದಲ್ಲಿ ಚಿನ್ಮಯಾತ್ಮಕ ಲಕ್ಷ್ಮೀಪತಿಯ ಮುನ್ನಭಜಿಸೋ ಜನ್ಮವಿಲ್ಲ 5
--------------
ಕವಿ ಪರಮದೇವದಾಸರು
ಕೆಟ್ಟು ಹೋಯಿತು ಪ್ರಜೆಗಳು ಎಲ್ಲಾ ಬಾಯ ಬಿಟ್ಟುಪಾಯವ ಹೇಳುವರಿಲ್ಲ ಪ ಹಲ್ಲ ಬಿಡುವರು ಎಲ್ಲ ತಾಮ್ರಗಳ ಮಾರಿದರೆಲ್ಲ 1 ಚೊಚ್ಚಲಾಕಳು ಎಮ್ಮೆಗಳಿಂದ ಕೋರಡೆಯಿಂದ 2 ಕೊಡುವೆನೆಂಬುವರಿಲ್ಲ ಚಿಕ್ಕ ದೊಡ್ಡವರೆಲ್ಲ 3 ಸರಕಿನ ಮಾರು ಮಾರ್ಗವು ಕೆಟ್ಟು ಮೆಣಸಿನ ಸೆರೆಯ ಮಾರಲಿಕಿಲ್ಲದೆ ಕೆಟ್ಟು ಮತ್ತರ ಮನೆಗದರ ಪ್ರಜೆ ಬಾಯಿಬಿಡುತಿದೆ ಬಾಯನು ಬಿಟ್ಟು 4 ನರಗುರಿಯಾಯ್ತ ಪ್ರಜೆಗಳು ಎಲ್ಲ ದೊರೆಗಳಿಗಳ್ಳೆಷ್ಟು ಕರುಣವಿಲ್ಲ ಹರಿಸೂನು ಕೋಣೆ ಲಕ್ಷ್ಮೀಶನೆ ಬಲ್ಲ 5
--------------
ಕವಿ ಪರಮದೇವದಾಸರು
ಕೆಟ್ಟೆ ಕೆಟ್ಟೆ ಕೆಟ್ಟೆ ಕೃಷ್ಣ ದೃಷ್ಟಿಕೊಟ್ಟು ಕೈಯ ಪಿಡಿಯೋ ಪ ಮೂರ್ತಿ ಬಿಟ್ಟರೆನ್ನ ಕಷ್ಟಬಿಡಿಸೆಯಾರ ಬೇಡಲೋ ಅ.ಪ ಕಟ್ಟಿತಾಳಿ ತೊರೆಯೆ ಗಂಡ ಕಷ್ಟವಲ್ಲೆ ಸತಿಗೆ ಪೇಳು ಶಿಷ್ಠ ದೊರೆಯೆ ದಾಸನೆಂಬಿ ಶ್ರೇಷ್ಠತಾಳಿ ಕಂಠದಲ್ಲಿದೆ ಬಿಟ್ಟಿ ಏನೋ ಬಿರದು ಎಲ್ಲ ಕಟ್ಟಿಕೊಂಡು ಮೆರೆಯುತಿಹುದು ಕೆಟ್ಟದೂರು ತಟ್ಟದಿರದು ಭ್ರಷ್ಠನೆನಿಸಬೇಡೊ ಎನ್ನ 1 ಎಡವಿ ಬೀಳೆ ಮಗುವು ತಾಯಿ ಕಡಿವಳೇನು ಪೊಡವಿಗೊಡೆಯ ಅಡಿಯ ಪಿಡಿದ ದಾಸನಾನು ಬಡವನಾದರೇನೂ ನುಡಿಯೋ ಭಾರ ನಿನಗೆ ತಡವು ಯಾಕೋ ಬರಿದೆ ಬಿಂಕ ಸಡಲಿ ಸುತ್ತ ಮಾಯಪಾಶ ದೃಢವ ಮಾಡು ಭಕ್ತಿ ವಿರಕ್ತಿ 2 ದೋಷಿಯಾದರೇನು ನಾನು ದೋಷದೂರನಲ್ಲೆ ನೀನು ನಾಶಮಾಡು ಬೀಸಿದೃಷ್ಠಿ ಮೀಸಲಲ್ಲೆ ನಿನಗೆ ಸ್ವಾಮಿ ಈಶ ಕರುಣಕುಂಟೆ ಮೇರೆ ಓಸು ಜಗದ ಭಾಸವೆಲ್ಲ ಶ್ರೀಶ ನೀನು ಕೊಟ್ಟರುಂಟು ದಾಸಪೋಷ ಶ್ವಾಸನಾಣೆ 3 ಗಂಟು ಕಳ್ಳ ನೀನೆ ಸತ್ಯ ಭಂಟನೆನ್ನ ಸ್ವತ್ತು ನೀನೆ ನೆಂಟ ಬೇರೆ ಇಲ್ಲದಿರಲು ಅಂಟಿಸಿರುವೆ ವಿಷಯ ಕಂಟಕ ತಂಟಿ ಬಿಟ್ಟು ಈಗಲೇನೆ ಅಂಟಿಕೊಳ್ಳೊ ಮನದಿ ಗಟ್ಟಿ ಕುಂಟು ಕಲೆಯ ಸುಟ್ಟುಬಿಟ್ಟು ಉಂಟು ಮಾಡು ಎಲ್ಲ ನನಗೆ 4 ಬೆಟ್ಟದೊಡೆಯ ಶ್ರೀನಿವಾಸ ಎಷ್ಟರವನೊ ನಾನು ಭೃತ್ಯ ಪಾದ ಪಿಡಿದಿಹೆ ಸುಟ್ಟು ಸುಟ್ಟು ಭವದಿ ಬೆಂದು ಇಷ್ಟು ನುಡಿದೆ ಜಯಮುನೀಂದ್ರ ಶ್ರೇಷ್ಟಹೃಸ್ಥಮಧ್ವ ಶ್ರೀ ಪ್ರೇಷ್ಟದೈವ ಕೃಷ್ಣವಿಠಲ5
--------------
ಕೃಷ್ಣವಿಠಲದಾಸರು