ಒಟ್ಟು 4759 ಕಡೆಗಳಲ್ಲಿ , 126 ದಾಸರು , 3131 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರದೇವತೆ ಪದ್ಮಾವತಿ ಶರಣಾಗತೋದ್ಧಾರಣೆ ಜನನಿ ಪ ನಿರತವೂ ನಿನ್ನ ಚರಣಕಮಲ ನೆರೆನಂಬಿದೆಕರುಣಾವಾರಿಧೆ ಅ.ಪ ಶಾಪವಿತ್ತ 1 ಭೂವರನಿಗೆ ಮಗಳೆನ್ನಿಸಿ ಮಾಡಿಸಿದಾ 2 ಲೋಕವರಿಯೆ ಪದ್ಮ ಸರಸಿಯೋಳ್ ನೆಲಸಿದೆ ಭೂಕಾಂತ ಗುರುರಾಮವಿಠಲ ಅರಸಿ 3
--------------
ಗುರುರಾಮವಿಠಲ
ಪರಬೊಮ್ಮನ ಧ್ಯಾನಿಸು ಕಂಡ್ಯಾ ಸೋಹಂ ಎನುತಿರಕಂಡ್ಯಾ ಪ ಒಂದು ನಿಮಿಷ ಸುಖವಿಲ್ಲ ವಿಧಿ ಏಳೇಳೆಂದು ಎಳೆವರಲ್ಲ ಗೋವಿಂದನೆ ತಾ ಬಲ್ಲ 1 ಯೋನಿಯೊಳಗೆ ಜನಿಸಿ ನಾನದನೆಲ್ಲವ ನುಳಿದು ಈಗಳು ನರಮಾನವನೆಂದೆನಿಸಿ ಏನೋ ಪುಣ್ಯದಿ ಪುಟ್ಟಿದೆ ನಿಲ್ಲಿ ನಿಧಾನದಿ ಸಂಚರಿಸಿ ಆನಂದ ಮಯನೆನಿಸಿ 2 ಎಲ್ಲಾ ಜನ್ಮದೊಳ್ಳಿತು ನೀನಿದರಲ್ಲಿ ಸಾಧಿಸುಗತಿಯಾ ಹೊಲ್ಲದ ತನುವಿದ ನಂಬಿ ನೀ ಕೆಡದಿರು ಪೊಳ್ಳೆ ನಿನಗೆ ತಿಳಿಯ ಬಲ್ಲಡೆ ಜಿಹ್ವೆಯೊಳಗೆ ನೀ ನಿರಂತರ ಸೊಲ್ಲಿಸು ಶ್ರೀಹರಿಯ ಲಕ್ಷ್ಮೀನಲ್ಲನ ಪೋಗು ಮರೆಯ 3
--------------
ಕವಿ ಪರಮದೇವದಾಸರು
ಪರಮ ಕರುಣಾಳುಗಳು ಈ ಗುರುಗಳು ಶ್ರೀ ವರತಂದೆ ಮುದ್ದುಮೋಹನವಿಠಲಾಖ್ಯರು ಪ. ಶಾಂತರು ದಾಂತರು ಸಂತೋಷ ಸುಖಿಗಳು ಅಂತರಂಗದಿ ಹರಿಯ ಧ್ಯಾನಿಸುವರು ಕಂತುಜನಕನ ಧ್ಯಾನ ಸತ್ಪಾಂಥರಿಗೆ ಬೀರುತಲಿ ಎಂತೆಂತೊ ಸುಜನರಿಂ ಸ್ತುತಿಸಿಕೊಳುತಿಹರು 1 ನಿರಪೇಕ್ಷೆಯಿಂದಲಿ ಪರರಿಗುಪಕಾರವನು ತೆರವಿಲ್ಲದೆಲೆ ಸತತ ಮಾಡುತಿಹರು ಅರಿಯೆನಿವರಾ ಮಹಿಮೆ ಪರದೇಶಿ ನಾನಿನ್ನು ಕರುಣೆಯಿಂದೆನಗೆ ಹರಿ ಅಂಕಿತವನಿತ್ತರು 2 ಸುಪ್ರೀತರಾಗಿನ್ನು ಈ ಶರೀರದ ಒಳಗೆ ಶ್ರೀಪತೀ ತೈಜಸನ ವ್ಯಾಪಾರದಿ ಶ್ರೀ ಪರಮ ಗುರುಗಳೆಂದ್ಹರಿಯ ನಿರ್ಮಾಲ್ಯವನು ಕೃಪಾತಿಶಯದಿ ಕೊಡಿಸಿ ಎನ್ನನುದ್ಧರಿಸಿದರು3 ಎಲ್ಲರೂ ದÉೀವಾಂಶರೆನ್ನುವುದು ಕೇಳುತಲಿ ನಿಲ್ಲದೇ ಮನಸು ಬಹು ತಲ್ಲಣಿಸುತಿರಲು ಪಲ್ಲವಿಸಿ ಎನ್ನ ಮನ ಮಂದಿರದಿ ಅನುಗಾಲ ಪುಲ್ಲಾಕ್ಷನನು ತೋರಿ ಉಲ್ಲಾಸಕೊಡುತಿಹರು 4 ಶ್ರೇಷ್ಠಗುರುಗಳು ಇವರು ಸೃಷ್ಟಿಯೊಳಗೆನಗಿನ್ನು ಎಷ್ಟು ಯೋಚಿಸೆ ಮನವು ಮಹಿಮೆಯರಿಯೆ ವೃಷ್ಟಿವಂಶಜ ರುಕ್ಮಿಣೀರಮಣ ಗೋಪಾಲ- ಕೃಷ್ಣವಿಠಲನ ಬಹು ದಿಟ್ಟಾಗಿ ತೋರುವರು 5
--------------
ಅಂಬಾಬಾಯಿ
ಪರಮ ಪಾಪಿಷ್ಠ ನಾನು ಪ ನರಹರಿಯೆ ನಿಮ್ಮ ನಾಮ ಸ್ಮರಣ ಮಾಡದಲೆ ನರಕಕ್ಕೆ ಗುರಿಯಾದೆನೋ ಹರಿಯೆ ಅ.ಪ. ಹೊಸಮನೆಯ ಕಂಡು ಬಲು ಹಸಿದು ಭೂಸುರರು ಬರೆ ಕೊಸರಿ ಹಾಕುತ ದಬ್ಬುತ ಶಶಿಮುಖಿಯೆ ಬಾರೆಂದು ಅಸಮಸದಿ ಬಣ್ಣಿಸಿ ವಶವಾಗಿ ಅವಳೊಲಿಸುತ ದಶಮಿ ಏಕಾದಶಿ ದ್ವಾದಶೀ ದಿನತ್ರಯದಿ ಅಶನವೆರಡ್ಹೊತ್ತುಣ್ಣುತ ಘಸಘಸನೆ ತಾಂಬೂಲ ಪಶುವಿನಂದದಿ ಮೆದ್ದು ಕುಸುಮ ಗಂಧಿಯ ರಮಿಸುತ ಸತತ 1 ಕೆರೆ ಭಾವಿ ದೇವಾಲಯವ ಕೆಡಿಸಿ ದಿವ್ಯ ಹಿರಿದಾಗಿ ಮನೆ ಕಟ್ಟದೆ ನೆರೆ ನಡೆವ ಮಾರ್ಗದೊಳು ಅರವಟ್ಟಗೆಗಳನ್ನು ಧರಧರದಿ ಬಿಚ್ಚಿ ತೆಗೆದೆ ಪರಮ ಸಂಭ್ರಮದಿಂದ ಅರಳಿಯಾ ಮರ ಕಡಿಸಿ ಕೊರೆಸಿ ಬಾಗಿಲು ಮಾಡಿದೆ ಏಕ ಮಂದಿರವ ಮುಗಿಸಿ ಹರುಷ ಚಿತ್ರವ ಬರೆಸಿ ಪರಿಪರಿಯ ಸುಖ ಸಾರಿದೇ ಮೆರೆದೆ 2 ಸಾಕಲ್ಯದಿಂದ ಸಾಲಿಗ್ರಾಮದ ಅಭಿಷೇಕ ಆಕಳ ಹಾಲಲಿ ಮಾಡದೆ ನಾಕೆಂಟು ನಾಯಿಗಳ ಸಾಕಿ ಮನೆಯೊಳು ಬದುಕ ಬೇಕೆಂದು ಹಾಲು ಹೊಯ್ದೆ ಕಾಕು ಬುದ್ಧಿಗಳಿಂದ ಗುಡಿ ಗುಡಿ ನಸಿ ಪುಡಿ ಹಾಕಿ ಭಂಗಿಯಾ ಸೇದಿದೆ ಲೋಕ ನಿಂದಕ ನಾಗಿ ಪಾಪಕ್ಕೆ ಕೈ ಹಚ್ಚಿ ಅ ನೇಕ ಜೂಜುಗಳಾಡಿದೇ ಬಿಡದೆ 3 ಸ್ನಾನ ಸಂಧ್ಯಾನ ಅತಿಮೌನ ಗಾಯಿತ್ರಿ ಜಪ ಭಾನುಗಘ್ರ್ಯವನು ಕೊಡದೆ ಹೀನತ್ವ ವಹಿಸಿ ದಾನ ಧರ್ಮವ ಮಾಡದೆ ಶ್ವಾನನಂದದಿ ಚರಿಸಿದೇ ಶ್ರೀನಿವಾಸನೆ ನಿನ್ನ ಅನುಪೂರ್ವಕ ಪೂಜೆ ನಾನೊಂದು ಕ್ಷಣಮಾಡದೇ ಬೇನೆ ಬಂದಂತಾಗೆ ಹೀನ ಸಕೇಶಿಯ ಕೈಲೆ ನಾನ ವಿಧಾನ್ನ ತಿಂದೇ ನೊಂದೇ 4 ಭಾಗವತ ಕೇಳಲಿಕೆ ಆದರವೆ ಪುಟ್ಟಲಿಲ್ಲಾ ವಾದಿಗಳ ಮತವಳಿದ ಮಧ್ವ ಸಿದ್ಧಾಂತದ ಹಾದಿಗೆ ಹೋಗಲಿಲ್ಲ ಶೋಧಿಸಿದ ಚಿನ್ನಕೆ ಸಮರಾದ ವೈಷ್ಣವರ ಪಾದಕ್ಕೆ ಬೀಳಲಿಲ್ಲ ವೇದ ಬಾಹಿರನಾಗಿ ಅಪಸವ್ಯ ಮನನಾಗಿ ಓದಿಕೊಂಡೆನೋ ಇದೆಲ್ಲ ಸುಳ್ಳ 5 ಉತ್ತಮ ಬ್ರಾಹ್ಮಣರ ವೃತ್ತಿಗಳನೆ ತೆಗಸಿ ಬ್ರ ಹ್ಮಹತ್ಯಗಾರನು ಎನಿಸಿದೆ ಮತ್ತೆ ಮದುವೆ ಮುಂಜಿ ಸಮಯಕ್ಕೆ ನಾ ಪೋಗಿ ಸತ್ತ ಸುದ್ದಿಯ ಪೇಳಿದೆ ವಿತ್ತವಿದ್ದವರ ಬೆನ್ಹತ್ತಿ ದೂತರ ಕಳುಹಿ ಕುತ್ತಿಗೆಯ ನಾ ಕೊಯ್ಸಿದೆ ನಿತ್ಯ ಕಲ್ಲೊಡೆಯುತಿರೆ ಮೃತ್ಯು ದೇವತೆಯೆನಿಸಿದೆ ಬಿಡದೇ 6 ಕ್ಷಿತಿಯೊಳಗೆ ಇನ್ನಾರು ಹಿತವ ಬಯಸುವವರೆನಗೆ ಗತಿಯೇನು ಪೇಳೊ ಕೊನೆಗೆ ಸತತ ತವ ಧ್ಯಾನದಲಿ ರತನಾಗಿ ಇರುವ ಸ ನ್ಮತಿಯ ಪಾಲಿಸಯ್ಯ ಎನಗೆ ಪತಿತಪಾವನನೆಂಬ ಬಿರಿದು ಅವನಿಯ ಮೇಲೆ ಶ್ರುತಿ ಸಾರುತಿದೆಯೋ ಹೀಗೆ ಶಿತಕಂಠನುತ ಜಗನ್ನಾಥವಿಠ್ಠಲ ನಿನಗೆ ನುತಿಸದೆ ಬೆಂಡಾದೆ ಕಾಯೋ ಹರಿಯೆ 7
--------------
ಜಗನ್ನಾಥದಾಸರು
ಪರಮ ಪಾವನಕಾಯ ಗುರುರಾಯ ಜೀಯ ವರ ಭಾಗವತರ ಪ್ರಿಯ ಸುರರ ಸಹಾಯ ಪ. ಶ್ರೀ ತಂದೆ ಮುದ್ದುಮೋಹನ ದಾಸರೆಂದೆನಿಸಿ ವಾತ ಜನಕನ ಒಲಿಸಿ ವೈರಾಗ್ಯ ಧರಿಸಿ ಖ್ಯಾತಿಯನು ಪಡೆದ ಅನಾಥ ರಕ್ಷಕ ಸ್ವಾಮಿ ನೀತ ಗುರು ನಿಮ್ಮ ಪದಕೆ ನಾ ತುತಿಸಿ ನಮಿಪೆ 1 ಘನ ಅಂಶದಲಿ ನೆಲಸಿ ಅನವರತ ಸಲಹುವೊ ಮನವ ಮಾಡಿರಬಲೆ ಅಂಜಿ ಬೆದರೆ ಘನ ಜ್ಯೋತಿ ಸ್ವೀಕರಿಸಿ ತನುವಿಗಭಯ ತೋರಿ ಮನದಿ ಪದವನೆ ನಂಬೆ ರಕ್ಷಿಸಿದ ಗುರುವೆ 2 ಅಪಮೃತ್ಯು ಬಂದು ಬಹು ಅಪರಿಮಿತ ಭಯಪಡಿಸಿ ಸುಪಥ ಕಾಣದೆ ನಿಮ್ಮ ಪದವ ನಂಬಿರಲು ಸ್ವಪ್ನದಲಿ ನಿಜರೂಪ ಗುಪ್ತದಿಂದಲಿ ತೋರಿ ಆಪತ್ತು ಪರಿಹರಿಪೆನೆಂದಭಯವಿತ್ತ 3 ಪರಿಪರಿ ಅಪಮೃತ್ಯು ಪರಿಹಾರವನೆಗೈದು ಪರಮ ಹರುಷದಿ ಕಾಯ್ದು ಆಯುವನೆ ಇತ್ತು ಕರಕರೆಯ ಬಿಡಿಸಿ ಕಾಯ್ದಂಥ ಘನ ಚರಿತೆಯನು ಅರಿತು ವರ್ಣಿಸಲರಿಯೆ ಪರಮ ಪ್ರಿಯ ದೊರೆಯೆ 4 ಆಪನ್ನ ರಕ್ಷಕರೆ ಶ್ರೀ ಪತಿಯ ತೋರುವ ಘನಶಕ್ತರೆ ಕಾಪಾಡುವೋ ಕರ್ತರೆಂದು ನಾ ನಂಬಿರುವೆ ಗೋಪಾಲಕೃಷ್ಣವಿಠ್ಠಲನ ನಿಜ ಪ್ರಿಯರೆ 5
--------------
ಅಂಬಾಬಾಯಿ
ಪರಮ ಪುರುಷ ಹರಿ ಗೋವಿಂದ - ಸಿರಿವರ ನಾರಾಯಣ ಗೋವಿಂದ ಪ ನಿಶೆವೆಸರಸುರನ ಉಸಿರ ತೊಲಗಿಸಿದೆಕುಸುಮ ಶರನ ಪಿತ ಗೋವಿಂದವಸು ಪೂರಿತ ಶ್ರುತಿ ಮಸುಳಿಸದೆ ತಂದೆಬಿಸಜ ಸಂಭವನಯ್ಯ ಗೋವಿಂದ 1 ಮಂದರ ಸಿರಿ ಗತವಾಗದ ಮುನ್ನಕ್ಷಿತಿ ಪೆತ್ತನಯ್ಯ ಗೋವಿಂದ 2 ಭೂತಳವೆರಸಿ ರಸಾತಳಕಿಳಿದಿಹಪಾತಕನ ಕಂಡೆ ಗೋವಿಂದಆತನೊಡನೆ ಕಾದಾತನ ಗೆಲಿದು ಮ-ಹೀತಳವನು ತಂದೆ ಗೋವಿಂದ 3 ದುರುಳಾಸುರನ ನಡುಗರುಳ ಮಾಲೆ ಮುಂ-ಗೊರಳೊಳು ಧರಿಸಿದೆ ಗೋವಿಂದಗರಳ ಕೊರಳನು ಬೆರಳೆತ್ತಿ ಪೊಗಳಲುತರಳಗೊಲಿದೆ ನೀ ಗೋವಿಂದ4 ವಾಮನನಾಗಿ ನಿಸ್ಸೀಮ ಬಲಿಯ ಕೈಯಭೂಮಿಯನಳೆಕೊಂಡೆ ಗೋವಿಂದತಾಮರಸ ಪದದಿ ಕನಕ ಗರ್ಭಯೋಗವ್ಯೋಮ ಗಂಗೆಯ ತಂದೆ ಗೋವಿಂದ 5 ಸುರ ಪಶುವಿಗೆ ಋಷಿಯನು ಕೊಂದನ ಬಹುಕರ ಬಲ ಮುರಿದೆಯೊ ಗೋವಿಂದತರ ಹರಿಸದೆ ವಸುಧೆಯ ಒಡೆತನ ಭೂಸುರರಿಗೆ ನೀಡಿದೆ ಗೋವಿಂದ 6 ತ್ರಿಣಯನ ತಾತ್ಪರ್ಯ ರಾವಣನ ಶಿರರಣದೊಳುರುಳಿಸಿದೆ ಗೋವಿಂದಕ್ಷಣಮೆಣಿಸದೆ ಸದ್ಗುಣವಂತ ವಿಭೀ-ಷಣಗಭಯವಿತ್ತೆ ಗೋವಿಂದ 7 ಕ್ರತು ಸಿರಿ ಭೂಭಾರೋತ್ತಾರಣ ಬಲಯುತ ಗೋವಿಂದ 8 ಕಥೆಯನು ನಿರ್ಮಿಸಿ ಪತಿವ್ರತೆಯರ ಘನವ್ರತಗಳ ಕೆಡಿಸಿದೆ ಗೋವಿಂದಜತೆಯಗಲದ ಪುರ ತ್ರಿತಯ ಗೆಲಿದು ದೇ-ವತೆಗಳ ಸಲಹಿದೆ ಗೋವಿಂದ 9 ಜಾಜಿಯ ಮರಕತ ತೇಜಿಯನೇರಿ ವಿ-ರಾಜಿಪ ರಾವುತ ಗೋವಿಂದಸೂಜಿಯ ಬೆನ್ನೊಳು ರಾಜಿಪ ತೆರದಿ ಸ-ಹಜರೊಳಡಗಿರ್ಪ ಗೋವಿಂದ 10 ಮೇದಿನಿಗೋಸುಗ ಕಾದಿ ಕಲಹದಿ ವಿ-ರೋಧಿಗಳ ಕೊಂದೆ ಗೋವಿಂದಸಾಧುಗಳಿಗೆ ಸುಖವೀಯುವ ಬಾಡದಶ್ರೀಧರ ಕೇಶವ ಗೋವಿಂದ 11
--------------
ಕನಕದಾಸ
ಪರಮ ಲಾಲಿಸು ಪುರಾಣವನು ನೀನುದ್ಧರಿಸಿ ಲೋಕಗಳಾಳ್ವ ಧರ್ಮಸಾರವನು ಪಸ್ಟೃಯ ಕ್ರಮವ ಸೂಚಿಸಲು ಮಾಯೆಯಷ್ಟಪ್ರಕೃತಿಯಾಗಲದು ಸರ್ಗ ಮೊದಲುಅಷ್ಟರಾಧಾರದ ಮೇಲೂ ಭೂತಪುಟ್ಟಿಸಿದ ಭೌತಿಕ ಪ್ರತಿಸರ್ಗವೆನಲು 1ವಿವರಿಸುತಿರೆ ವಂಶಗಳನು ಮತ್ತುವಿವಿಧ ಮನುಗಳಹ ವಿಸ್ತಾರವನ್ನುಅವರ ವಂಶಾವಳಿಗಳನು ಪೇಳಿಧ್ರುವವಾದ ಪುರುಷಾರ್ಥ ದಾರಿದೋರ್ಪುದನು 2ಇಹ ಪರಗಳ ಸುಖದಿರವ ಮೋಕ್ಷಬಹ ಯುಕ್ತಿ ಸಹ ಪೇಳ್ವ ಬಹು ಗ್ರಂಥದೊಲವಅಹುದೆಂದು ತಿರುಪತಿಯಾಳ್ವ ಬಹುಮಹಿಮ ವೆಂಕಟನಾಥ ಮನ್ನಿಸು ದೇವಾ 3 ಓಂ ಯೋಗಿನಾಂ ಪತಯೇ ನಮಃ
--------------
ತಿಮ್ಮಪ್ಪದಾಸರು
ಪರಮಪದವಿಯನೀವ ಗುರುಮುಖ್ಯ ಪ್ರಾಣನಧರೆಯೊಳಗುಳ್ಳ ಮಾನವರೆಲ್ಲ ಭಜಿಸಿರೊ ಪ ಅಂದು ತ್ರೇತಾಯುಗದಿ ಹನುಮನಾಗವತರಿಸಿಬಂದು ದಾಶರಥಿಯ ಪಾದಕೆರಗಿಸಿಂಧುವನು ದಾಂಟಿ ಮುದ್ರಿಕೆಯಿತ್ತು ದಾನವರವೃಂದಪುರ ದಹಿಸಿ ಚೂಡಾಮಣಿಯ ತಂದವನ1 ದ್ವಾಪರಯುಗದಲಿ ಭೀಮಸೇನನೆನಿಸಿಶ್ರೀಪತಿಯಪಾದ ಕಡು ಭಜಕನಾಗಿಕೋಪಾವೇಶದಲಿ ದುಶ್ಶಾಸನನನು ಸೀಳಿಭೂಪನ ಜಲದೊಳಗೆ ಕರೆಕರೆದು ಜರೆದವನ 2 ಕಲಿಯುಗದಲಿ ತುರೀಯಾಶ್ರಮವನೆ ಧರಿಸಿಕಲುಷದ ಮಾಯಿಗಳನೆ ಸೋಲಿಸಿಖಿಲವಾದ ಮಧ್ವಮತವನು ಬಲಿದೆನಿಸಿ ಕಾಗಿನೆಲೆಯಾದಿಕೇಶವನೆ ಪರದೈವನೆಂದವನ 3
--------------
ಕನಕದಾಸ
ಪರಮಪಾವನ ಸಂಸಾರದ ಘನ ಅ.ಪ ಕರಿಯಪಾಲನ ಕರುಣ ಕಡುಕಮಲನಯನ ಖರೆಯ ಸುಖಕೆ ತೊರಪಿಟ್ಟೆನ್ನ ಕೊರಗಿಪ್ಪ ಕಿರಿಕಿರಿಯ ತರಿದು1 ಜನಕಜಾವರ ಜನಕ ಜಗದ ಜಯ ಸುಖಕರ ಜನುಜನಮದಿ ಜನಿಸಿ ಬರುವ ಜಡರನಳಿದು ಜಯವ ನೀಡಿ 2 ಸುಜನ ಜೀವನ ಸುಖಶರಧಿ ಸುಮನರೊಂದನ ಶುಭಕೆ ಶುಭವೆನಿಸುವ ಸುಮುಕ್ತಿ ಸುದಯದಿತ್ತು ಸಲಹು ಶ್ರೀರಾಮ 3
--------------
ರಾಮದಾಸರು
ಪರಮಪುರುಷ ಪಾಲಿಪುದೈ ಸರಸಿಜಾಕ್ಷ ಸರ್ವರಕ್ಷ ಪ ಮಗುವಾದ ಧ್ರುವನು ಅಗಣಿತಗುಣ ನಿನ್ನನು ಹಗಲಿರುಳೂ ಮೃದುಪದವಂ ಬಿಗಿದಪ್ಪುತ ಧ್ಯಾನಿಸೆ 1 ಯೋಗಿಜನಾನಂದಕನೆ ಬೇಗದಿ ಮೈದೋರುತಲಿ ಭಾಗವತಪ್ರಿಯಪದವಂ ರಾಗದಿತ್ತೆ ಜಾಜೀಶ 2
--------------
ಶಾಮಶರ್ಮರು
ಪರಮಪುರುಷ ಶ್ರೀ ರಾಮನ ಪದಯುಗ ಸಿರಿರಮಣ ನಿಜದಾಸನೆಂದೆನಿಸಿದ ವರ ಕದರುಂಡಲಿ ಹನುಮಂತ ಪ. ಒಂದೇ ಮನದಲಿ ತಂದೆ ನಿನ್ನಡಿಗಳ ಪೊಂದಿದೆ ಸಲಹೈ ಹನುಮಂತ ಕುಂದುಗಳೆಣಿಸದೆ ಕಂದನ ತೆರದಲಿ ಎಂದೆಂದಿಗು ಪೊರೆ ಹನುಮಂತ 1 ವಾರಿಧಿ ದಾಟುತ ಸೇರುತ ಅರಿಪುರ ಧಾರುಣಿಜೆಯ ಕಂಡೆ ಹನುಮಂತ ನಾರಿಚೋರನಪುರ ಸೇರಿಸಿ ಅನಲಗೆ ಸೇರಿದೆ ರಾಮನ ಹನುಮಂತ 2 ಕೃಷ್ಣನ ಸೇವಿಸಿ ದುಷ್ಟರ ಕೊಲ್ಲುತ ಮೆಟ್ಟಿದೆ ಖಳರನು ಹನುಮಂತ ದಿಟ್ಟತನದಿ ಸಾಮ್ರಾಜ್ಯವಾಳಿ ಜಗ- ಜಟ್ಟಿ ಎಂದೆನಿಸಿದೆ ಹನುಮಂತ 3 ಮಿತಿಯಿಲ್ಲದ ಅತಿಖತಿ ಮತಗಳನು ಹತಗೈಸುತ ನೀ ಹನುಮಂತ ಪ್ರತಿ ಗ್ರಂಥಗಳನ್ನು ಸ್ಥಾಪಿಸಿ ಸುರರಿಗೆ ಅತಿ ಹಿತ ತೋರಿದೆ ಹನುಮಂತ 4 ಇಷ್ಟ ಫಲಪ್ರದ ತುಷ್ಟಿಬಡಿಸೊ ನೀ ಕೊಟ್ಟೀಗಭಯವ ಹನುಮಂತ ದಿಟ್ಟ ನಿನ್ನಡಿಗಳ ಭಜಿಸುವೆ ಗೋಪಾಲ ಕೃಷ್ಣವಿಠ್ಠಲ ಪ್ರಿಯ ಹನುಮಂತ5
--------------
ಅಂಬಾಬಾಯಿ
ಪರಮಪ್ರೀಯಾ ದಾಸರಾಯಾ | ಸತ್ಕವಿಜನಗೇಯಾ ಪ ಸುರತರು | ಕರಿಗಿರಿ ನಿಲಯನೆಉರುಗಾಯನ ಸಂದರುಶನ ಕೊಡಿಸಯ್ಯ ಅ.ಪ. ಆರ್ಮೂರೇಳು ನಾಲ್ಕೆಂಟು ಗ್ರಂಥ | ಅವುಗಳ ಸಾರಾರ್ಥಸಾರುತ್ತ ಭಕುತರಿಗೆ ಪುರುಷಾರ್ಥ | ಮಾರ್ಗವ ತೋರುತ್ತ ||ಚಾರು ಚರಿತ ಶ್ರೀರಮಾರಮಣನಗುಣವಾರಿಧಿಯೊಳು ಬಹು ಈಸಿದ ನಿಪುಣ 1 ಪಥ ಪುನರುದ್ಧರಿಸಿದ 2 ಪರತತ್ವ ಸಾರಾಂಬುಧಿ ಬೆಳಗುವನ ಪರಿಪರಿಕಲೆಯವನಶರಣರ ಹೃತ್ತಾಪವ ಹರಿಸುವನ | ನಿರತೈಕರೂಪನನಪರಮಾರ್ಥೇಂದು ವರೋದಯ ಕರುಣಿಸಿಧರಣಿಯ ಸುರರನು ಪೊರದೆಯೊ ಗುರುವೆ 3 ಅಂಕೀತವಿಲ್ಲದ ದೇಹಗಳೊಂದು | ನಿಷಿದ್ಧವೆಂದೂಪಂಕಜಾಕ್ಷನ ನಾಮಗಳೊಂದೊಂದು | ಬಳಸುತ ನೀನಂದೂ ಅಂಕನ ಗೈಧರಿ ಲೆಂಕತನವನಿತ್ತುಬಿಂಕದಿ ಜನ ಹೃತ್ಸಂಕಟ ಕಳೆದೀ 4 ಬಿಂಬೋಪದೇಶವೆ ತಾರಕವೆಂದೂ | ನಿಸ್ಸಂಶಯವೆಂದೂಹಂಬಾಲ ಹಚ್ಚುತ ಶರಣರಿಗೆಂದೆಂದೂ | ಕರುಣಾ ಸಿಂಧೂಬಿಂಬನು ಗುರುಗೋವಿಂದ ವಿಠಲ ಪಾದಾಂಬುಜದಲ್ಯನ ಹಂಬಲವಿರಿಸಿದೆ 5
--------------
ಗುರುಗೋವಿಂದವಿಠಲರು
ಪರಮಮಂಗಳ ಧಾಮಾ ಶ್ರೀರಾಮಾ ಪ ಕರುಣಾಮೃತ ಸಾಗರ ನಿಸ್ಸೀಮಾಚರಣಕೆರಗುವೆ ಸಾಸಿರನಾಮಾ 1 ಶರಣಾಗತರನು ಕರವಿಡಿವುದು ನೇಮಾಶರಣುಬಂದೆನಯ್ಯ ರಘುಕುಲ ಸೋಮಾ 2 ವಚನವ ಪಾಲಿಪ ಸುಚರಿತವೈ ನಿಮ್ಮಅಚಲ ಭಕ್ತಿಕೊಡು ಮೇಘಶ್ಯಾಮಾ 3 ಗದುಗಿನ ವೀರನಾರಾಯಣ ಪ್ರೇಮ ವೊದಗಿಸಿ ಕಾಯೋ ವೀರ ಲಲಾಮಾ 4
--------------
ವೀರನಾರಾಯಣ
ಪರಮಯೋಗಿಯ ನೋಡಿರೊ ನೀವೆಲ್ಲರು | ಪರಮಯೋಗಿಯ ನೋಡಿರೊ || ಪರಮಯೋಗಿಯ ನೋಡಿ ಪ್ರೀತಿವಂತರಾಗಿ | ನಿರಯವ ಕಳೆದು ಆನಂದ ಬೇಡುವರೆಲ್ಲ ಪ ವಾನರ ವೇಷವಾಗಿ ಪರ್ವತ ಸೇರಿದಾ | ಭಾನುನಂದನ ಮನೋಬಯಕಿಯ ಸಲ್ಲಿಸಿ || ಏನೆಂಬೆ ಬಲು ಒಂದು ರೂಪವಾಗಿ ತೋರಿ | ತಾನೆ ತನ್ನೊಳಗೆದ್ದು ದುರುಳರ ಮೋಹಿಸಿದಾ 1 ವಿಷವನುಂಡು ಮೂರು ಲೋಕದೊಳಗೆ ಮೆರೆದು | ಅಸುರ ಬಕನ ಸೀಳಿ ಧರಿಗೆ ಬಿಸುಟು | ಶಶಿಮುಖಿಯಳ ಪ್ರೀತಿಬಡಿಸಿ ಅರ್ಜುನಗೊಲಿದು | ಶಶಿಕುಲದಲಿ ಪುಟ್ಟಿ ದುರ್ಜನ ಸಂತಾಪಬಡಿಸಿ2 ಯತಿಯಾಗಿ ಜನಿಸಿ ಸುವಾಕ್ಯವ ಬಯಸಿ | ಮತಿಹೀನ ಜನರ ಶಾಸ್ತ್ರವ ಖಂಡಿಸಿ || ತುತಿಸಿದ ಭಕ್ತರ್ಗೆ ಗತಿಯ ಕೊಡುವ ಪ್ರಾಣ- ನಿತ್ಯ ಪರಮ 3
--------------
ವಿಜಯದಾಸ
ಪರಮಶಿವಶಂಕರಿಯೆ ಪ ಕರುಣಿಸು ಮಂಗಳೆಯೆ ಅ.ಪ. ಪಂಕಜನಾಭಿಯೆ ಪಂಕಜಪಾಣಿಯೆ ಪಂಕಜಲೋಚನೆಯೆ ಪಂಕಜಗಂಧಿಯೆ ಪಂಕಜವದನೆಯೆ ಶಂಕರಸುಂದರಿಯೆ 1 ಗೌರಿಯೆ ಗಿರಿಜೆಯೆ ಕಾತ್ಯಾಯನಿಯೆ ಹೈಮವತೀಶ್ವರಿಯೆ ಪಾರ್ವತಿ ಶಿವೆ ಪರಮೇಶ್ವರಿ ಶಂಕರಿ ಕಾಳಿಯೆ ಶಾಂಭವಿಯೆ 2 ಮಾಧವ ಸೋದರಿಯೆ ಭೂಧರವಾಸೆಯೆ ಶ್ರೀ ಲಲಿತಾಂಬೆಯೆ ರಾಜರಾಜೇಶ್ವರಿಯೆ 3 ನಿತ್ಯ ಕಲ್ಯಾಣಿಯೆ ಭಕ್ತವತ್ಸಲೆ ವಿಜಯೆ ನಿತ್ಯ ಸುಮಂಗಳೆಯೆ 4 ದಾನವ ಭಂಜಿನಿ ಮೌನಿಸುರಂಜಿನಿ ಭಾನುಮಂಡಲ ರುಚಿರೆ ಮಾನಿನಿ ಪಾಲಯಮಾಂ 5
--------------
ಬೇಟೆರಾಯ ದೀಕ್ಷಿತರು