ಒಟ್ಟು 5968 ಕಡೆಗಳಲ್ಲಿ , 126 ದಾಸರು , 3550 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾನೇನಂದನೆ ಭಾವಕಿ ಒಳ್ಳೆಆನಂದಮಯ ಹರಿಹರ ಮುನಿದಿತ್ತಬಾರ ಪ ರಮಣಿ ಕುಚ ಕುಂಕುಮಾಂಕಿತ ವಕ್ಷವಾರಿಧಿಶಯನ ಶ್ರೀವಾಸವಾರ್ಚಿತನಾರದನುತ ಪಂಕಜದೈತ್ಯ ಸಂ-ಹಾರ ಶ್ರೀ ಹರಿಹರನೆಂದೆನಲ್ಲದೆಮಾರಮರ್ಧನನೆಂದೆನೆ ಮೆರೆವ ಸರ್ಪಹಾರ ಕುಂಡಲನೆಂದೆನೆ ಶೋಭಿಸುವ ವೈಯ್ಯಾರ ವಿಭೂಷಣ ಶಂಕರನೆಂದೆನಲ್ಲದೆ 1 ಮಡದಿಯೋರ್ವಳ ನುಡಿ ಕಳ್ಳನೆಂದೆನಲ್ಲದೆ ಮಿಗೆಜಡೆದಲೆಯವನೆಂದನೆ ಪುಲಿದೊಗಲದೃಢದಿ ಹೊದ್ದಿಹನೆಂದೆನೆ ತ್ರೈಲೋಕ್ಯದೊಡೆಯ ಮುರಾರಿ ಮಹದೇವನೆಂದೆನಲ್ಲದೆಧರೆಯನಳೆದು ಕ್ಷತ್ರಿಯರ ಕೊಂದು ಶರಧಿಯನಿರದೆ ಕಟ್ಟಿದ ಕೃಷ್ಣ ಬಹುರೂಪವರಕವಿಗುರುವ ಕರದಿ ಪಿಡಿದು ರಕ್ಷಿಪಬಿರುದಿನ ರಾಯ ರಾವುತನೆಂದೆನಲ್ಲದೆ2 ಗಿರಿಜಾರಮಣನೆಂದೆನೆ ಗುಹಾರಣ್ಯವಾಸಎರಡು ರೂಪದಲಿರುವ ಮೂರುತಿಯೆಂದೆ ನಾ ನಂಬಿದ-ವರಪೊರೆವ ಶ್ರೀಹರಿಹರಲಿಂಗನೆಂದನಲ್ಲದೆ3
--------------
ಕೆಳದಿ ವೆಂಕಣ್ಣ ಕವಿ
ನಾನೇನಿನಗಂದೆನೋ ಬಿಡದೆ ಪವ ಮಾನ ಪಾಲಿಸೋ ಎನ್ನನು ಪ ದೀನರ ಪಾಲಿಪ ದಾನವಾಂತಕ ಎನ್ನ ಜ್ಞಾನಾನಂದದ ನಾಮ ಧ್ಯಾನವಗೈದೆನೊ ಅ.ಪ ಶರಧಿ ಲಂಘಿಸಿ ರಘು ವರನ ಕುಶಲವಾರ್ತೆಧರೆಜಾತೆಗೆ ಅರುಹಿ ದಶಾಶ್ಯನ ಪುರವ ದಹಿಸಿದಂಥ ಪರಮಸಮರ್ಥನೆಂದರಿತ ಕೊಂಡಾಡಿದೆನಲ್ಲದೆ || ತರು ಚರುವರನೆಂದಿನೆ | ಶಿರದಿ ಕಲ್ಲು ಧರಿಸಿ ತಂದವನೆಂದಿನೆ | ಬ್ರಹ್ಮಾಸ್ತ್ರಕೆ ಭರದಿ ಸಿಲ್ಕಿದಿ ಎಂದೆನೆ ಭಕ್ತೀಲಿ ಭಾವಿ ಸರಸಿಜಾಸ್ರನನೆಂದು ಸ್ಮರಿಸಿದೆನಲ್ಲದೆ 1 ಕೃತಯುಗದಲಿ ಕುಂತಿಸುತನಾಗಿ ಜನಿಸುತ ಪತಿ ಪಿತನಂಘ್ರಿ ಭಜಿಸುತಲಿ ಕ್ಷಿತಿ ಭಾರಕೆ ಖಳ ತತಿಯ ಸಂಹರಿಸಿದಾ ಪ್ರತಿಮಲ್ಲ ನೀನೆಂದು ಸ್ತುತಿಸಿದೆ ನಲ್ಲದೆ ಖತಿವಂತ ನೀನೆಂದಿನೆ ದುನುಜಾತೆಗೆ ಪತಿಯಾದವನೆಂದಿನೆ ಅವಳ ಕೂಡಿ ಸುತನ ಪೆತ್ತವನೆಂದನೆ ಯಾಮಿನಿಯಲಿ ಸತಿಯೆನಿನದವ ನೆಂದೆನೇ ನಿನ್ನನು ಬಿಟ್ಟು ಗತಿನಮಗಿಲ್ಲೆಂದು | ನುತಿಸಿದೆ ನಲ್ಲದೆ 2 ನಡುಮನಿಸುತನಾ ಪೊಡವಿಯೊಳಗೆ ಪುಟ್ಟ ಉಡುಪಿ ಕ್ಷೇತ್ರದಿ ಶಾಮಸಂದರನ ಧೃಡವಾಗಿ ಸ್ಥಾವಿಸಿ | ಜಡ ಕುಮಾಯ್ಗಳಗೆದ್ದ ಸಡಗರ ಮುನಿಸುತನಾಗಿ ಪೊಡೆವಿಯೊಳಗೆ ಪುಟ್ಟ ಉಡುಪಿ ಕ್ಷೇತ್ರದಿ ಶಾಮಸುಂದರನ ಧೃಡವಾಗಿ ಸ್ಥಾಪಿಸಿ | ಜಡ ಕುಮಾಯ್ಗಳಗೆದ್ದ ಸಡಗರ ಮುನಿ ಎಂದು ನುಡಿದೆನಲ್ಲದೆ ಹುರಳಿಮೆದ್ದ ಬಡದ್ವಿಜ ಶಿಶುವೇದಿನೆ | ಎತ್ತಿನ ಬಾಲ ಪಿಡಿದೋಡಿ ದವನೆಂದಿನೆ | ಬೆಸರದಿಂದ ಮಡದಿ ಬಿಟ್ಟವ ನೆಂದಿನೆ ಕಡಿಗೆ ಬೋರಿ ಗಿಡವ ಸೇರಿದಿ ತೋರೆಂದು ಅಡಿಗಳಿಗೆರಗಿದೆ ನಲ್ಲದೆ 3
--------------
ಶಾಮಸುಂದರ ವಿಠಲ
ನಾನೇನು ನಿನಗೆಂದೆನೊ ಶ್ರೀಹರಿಯೆನಾನಿನಗೇನೆಂದೆನೊ ಪ ನಾನೇನು ನಿನಗೆಂದೆ ನೀನಿಂತು ನನ್ನದುಧ್ಯಾನವ ಬಿಡಿಸಲು ಜ್ಞಾನಿಗಳರಸನೆ ಅ.ಪ. ಕರುಣಿ ನೀನೆಂತೆಂಬೋದು ನನಗೆ ಇನ್ನುಭರವಸೆ ಇಲ್ಲೆಂಬೆನೋಕರುಣಿ ನೀನಾದರೆ ಪರಿಪರಿ ಬೇಡಲುಕರುಣೆ ತೋರದೆ ಇರುವದು ಸರಿಯೇನೊ 1 ಭಕ್ತನು ನಾನಲ್ಲವೇನೊ ನಿನ್ನೊಳಗನುರಕ್ತಿ ಮಾಡುವದಿಲ್ಲೇನೋಮುಕ್ತಿ ಮಾಡಲು ಮತ್ತೆ ರಿಕ್ತ ಕರಣನೆಂಬ ಉಕ್ತಿ ಸುಳ್ಳೇನೋ2 ಸ್ಮರಿಸಲು ದುರಿತಗಳ ತರಿವನುಡಿಬರಿದೆನ್ನ ಬಗೆಗಾಯ್ತೆನೊಧರೆಯೊಳು ಗದುಗಿನ ವೀರನಾರಾಯಣಬಿರುಸು ನನ್ನ ನುಡಿ ಬರೆಯಲ್ಲವೇನೋ 3
--------------
ವೀರನಾರಾಯಣ
ನಾನೇನು ಬಲ್ಲೆ ನಿಮ್ಮ ನಾಮದ ಸ್ಮರಣೆಯನುಏನೆಂದು ಸ್ತುತಿ ಮಾಡಲರಿಯೆ ಪ ದುರುಳ ಕರ್ಮಿಯು ನಾನುಪರಂಜ್ಯೋತಿಯು ನೀನು ಪಾಮರನು ನಾನು 1 ಅಣುರೇಣು ತೃಣ ಕಾಷ್ಠ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕರ್ಮಿ ನಾನುವನಜಸಂಭವನಯ್ಯ ವೈಕುಂಠಪತಿ ನೀನುತನುವು ಸ್ಥಿರವಲ್ಲದ ನರಬೊಂಬೆ ನಾನು 2 ದುರಿತ ಮಾಯಾ ಶರೀರಿ ನಾನು 3 ಭೂರಿ ಕಾರುಣ್ಯಪತಿ ನೀನುಘೋರತರ ಕಾಮಕ್ರೋಧಿಯು ನಾನುಈರೇಳು ಲೋಕವನು ಪೊಡೆಯಲಿಟ್ಟವ ನೀನುಸಾರಿ ಭಜಿಸದ ದುಷ್ಟ ಕರ್ಮಿ ನಾನು 4 ತಿರುಪತಿಯೊಳು ನೆಲಸಿದ ವೆಂಕಟೇಶನು ನೀನುಚರಣಕೆರಗುವ ಕನಕದಾಸನು ನಾನುಬಿರಿದುಳ್ಳ ದೊರೆ ನೀನು ಮೊರೆ ಹೊಕ್ಕೆನಯ್ಯ ನಾನುಮರಣ ಕಾಲಕೆ ಬಂದು ಕಾಯೊ ಹರಿಯೆ5
--------------
ಕನಕದಾಸ
ನಾನ್ಯಾರೋ | ಶ್ರೀಹರಿ ಪೇಳೋ ನಾನ್ಯಾರೋ ಪ ನಾನ್ಯಾರೆಂಬುದ ಪೇಳಿ ನೀನ್ಯಾರೆಂಬುದ ತಿಳುಹಿ ಸಾನುರಾಗದಿ ಪೊರೆವ ಪ್ರಭು ನೀನೆ ಬೇರಿಲ್ಲಅ.ಪ. ಎಲ್ಲಿಂದ ಬಂದೆ ನಾನಿಲ್ಲಿಗೆ ಮುಂದೆಲ್ಲಿಗೆ ಪಯಣ ಕೊಂಡೊಯ್ಯುವುದೇನೆಂಬುದರಿಯೆ1 ಜನನಗೊಂಡು ಮಾನುಷ ದೇಹ ತಳೆದನಾ ನೆನಗೆ ಹಿತವಹ ಕಾರ್ಯವನೇನನೆಸಗಿದೆ 2 ದೇಹವೆ ಮನಸೆ ಬುದ್ಧಿಯೇ ನಾನೆಂಬುದನಾರೆಂದರಿಯೆ ನೇಹದಿಂದಿರುವಂತರಾತ್ಮ ತೊಲಗಲು ಮುಂದೀ ದೇಹವು ಕಸಕಿಂತ ಕಡೆಯೆನಿಪುದ ಬಲ್ಲೆ 3 ಕರ್ಮಿ ಜೀವನು ನೀ ಸಾಕ್ಷಿ ನಿರ್ಲಿಪ್ತನು 4 ಏನರಿಯದಲ್ಪನ ಕೈಬಿಡದಿರು ನೀನೆ ಗತಿ ರಘುರಾಮವಿಠಲ ತಂದೆ 5
--------------
ರಘುರಾಮವಿಠಲದಾಸರು
ನಾಮ ಧರಿಸಿಹೆಯಾ ಮೂರು ನಾಮ ಧರಿಸಿಹೆಯಾ ಶ್ರೀನಿವಾಸ ಪ. ನೀನೆ ಕರ್ತನೆಂದಾ ಮನುಜರಿಗೆಲ್ಲಾ ನಾನೆ ಸಲಹುವೆನೆಂಬ ಬಿರುದಿನ ಮೂರು ಅ.ಪ. ಅಂಬೆಯ ವಕ್ಷದಿ ಇಂಬಿನೊಳಿಟ್ಟು ಸಂಭ್ರಮದೊಳು ಕುಡಿ ನೋಟದಿಂದಾ ಅಂಬುಜಾಕ್ಷ ಬಡವರ ಧನ ಸೆಳೆಯುತ್ತವರ ಬೆಂಬಿಡದೆ ಕಾವೆನೆಂಬ ಬಿರುದ 1 ಸಿರಿ ಅರಸಾನೆಂಬೊ ಬಿರುದು ಥರವೇ ನಿನಗೆ ಹೊರವೊಳಗಿದ್ದು ಜನವ ನಂಬಿಸಿ ಥರಥರದಾಭರಣ ಸುಲಿಗೆಯಗೊಂಬ ತಿರುಪತಿ ತಿರುಮಲರಾಯ ದೊರೆ 2 ನಿನ್ನ ಧ್ಯಾನ ಮಾಳ್ಪ ಭಕ್ತರು ಬಲೆಗೆ ಸಿಕ್ಕುವರೇನೊ ನಿನ್ನ ಪಾದಧ್ಯಾನವನ್ನೆ ಬಯಸುತ್ತ ನಿನ್ನನೆ ಭಕ್ತಪಾಶದಿ ಕಟ್ಟಿ 3 ಚಾರು ಮುಖನೆ ವಂದ್ಯ ನಿನ್ನ ಹಾರೈಸುವ ಭಕ್ತರ ವೃಂದ ಹಾರ ಹಾಕಿ ಮನ ಸೂರೆ ಕೊಟ್ಟ 4 ಭಕ್ತರ ಕಟ್ಟಿಗೆ ಸಿಕ್ಕಬೇಕಲ್ಲದೆ ಭಕ್ತವತ್ಸಲನೆಂಬೊ ಬಿರುದಿಟ್ಟ ಕಾರಣವೇಕೊ ಯುಕ್ತಿಲಿ ನಿನ್ನ ನೆನೆದು ಸಿಕ್ಕಿಸೀ ಭವ ಕಷ್ಟಕಳೆವರೊ ಶ್ರೀ ಶ್ರೀನಿವಾಸ ನಿನ್ನ ಭಕ್ತರಿಷ್ಟಾ 5
--------------
ಸರಸ್ವತಿ ಬಾಯಿ
ನಾಮಕೆಣೆ ಕಾಣೆ ಮುಕುಂದನ ಪ ಶ್ರೀ ಮನೋರಮ ಸುರಸ್ತೋಮವಿನುತ ನಾಮ ಕಾಮಿತಪ್ರದ ನಾಮ ಮುಕುಂದನ 1 ಕೆಟ್ಟ ಕಿರಾತನು ಮುಟ್ಟಿ ಭಜಿಸಿ ತಾನು ಉ- ತ್ಕøಷ್ಟ ಮುನಿಯಾದನು ಮುಕುಂದನ 2 ಘೋರ ನಾರಕಿಗಳು ನಾರಾಯಣನೆಂದು ಸೂರೆಗೊಂಡರು ಸ್ವರ್ಗವ ಮುಕುಂದನ 3 ನಾರಣ ಬಾರೆಂದು ಚೀರಲು ಅಜಾಮಿಳ ಸೇರಿದನಾಪುವರ್ಗವ ಮುಕುಂದನ 4 ಲಕ್ಷ್ಮೀಕಾಂತನ ನಾಮೋಚ್ಚಾರದಿ ದ್ರೌಪದಿ ರಕ್ಷಿತೆಯಾದಳಿಂದು ಮುಕುಂದನ 5
--------------
ಲಕ್ಷ್ಮೀನಾರಯಣರಾಯರು
ನಾಮವೆ ಗತಿಯೆನಗೇ ಕೇಶವ ನಿನ್ನ ಪ್ರೇಮವೆ ಗತಿಯೆನಗೇ ಪ ರಾಮ ನಿನ್ನಯ ನಾಮವ ಸುಮತಿ ಸ್ಮರಿಸಲು ಭೂಮಿಗಭಯವಿತ್ತ ಸ್ವಾಮಿಯೇ ನಿನ್ನ ಅ.ಪ. ತರುಣ ಪ್ರಹ್ಲಾದ ನನೀಲ ದ್ರೌಪದಿ ಮತ್ತೆ ದುರುಳ ವಾಲ್ಮೀಕ ವಿಭೀಷಣರನ್ನು ಕಿನ್ನರ ಮರುತಾತ್ಮಜ ಋಷಿಗಳ ಪೊರೆದಂಥ ನರಹರಿ ಕೇಶವನೆಂಬ 1 ಇಂತೀ ಭಕ್ತರ ಸಲಹಿದ ಪರಿಯ ಸತತ ಭಜಕರ ಪೊರೆವ ಶ್ರೀಧರನ ಕಂತುಪಿತನ ನಾಮ ಸ್ಮರಿಸುವ ದಾಸರ ಅಂತಾರಾತ್ಮವ ಶುದ್ಧಿಗೊಳಿಸುವ ಹರಿಯ 2 ಅಂತ್ಯಕಾಲದಲಿ ಬಂದೊದಗುವ ಪರಿಯ ಕುಂತಿಯ ಸುತರನ್ನು ಸಲಹಿದ ಪರಿಯ ಸಂತತ ದೂರ್ವಾಪಟ್ಟಣದಲ್ಲಿ ಮೆರೆಯುವ ಅಂತ್ಯಾದಿರಹಿತ ಶ್ರೀ ಚನ್ನಕೇಶವನ 3
--------------
ಕರ್ಕಿ ಕೇಶವದಾಸ
ನಾಯಿ ಕಚ್ಚೀತೆಚ್ಚರಿಕೆ ಎಲೋ ಡಾವಿಟ್ಟು ಬರುತಾದೆಚ್ಚರಿಕೆ ಪ ನೋವು ತೀರದೀ ನಾಯಿ ಕಚ್ಚಲು ಕೇವಲ ವಿಷವುಳ್ಳ ಹೇಯನಾಯಿ ಅ.ಪ ಮೆಚ್ಚು ಮದ್ದಿಕ್ಕುವುದು ಅಚ್ಚರೋಗದ ನಾಯಿ ಮುಚ್ಚುಮನೆ ಮುರಿವುದು ಲುಚ್ಚನಾಯಿ ಸಾಚ್ಯನೆಂದು ನಂಬಿ ನೆಚ್ಚಿದವರ ಮೇಲೆ ಕಚ್ಚಿ ಬಿಚ್ಚುವುದೊಂದ್ಹುಚ್ಚು ನಾಯಿ 1 ಸೂಳೆನ್ನ ಹೋಗುವುದು ಮೂಳನಾಯಿ ಶೀಲ ತೊರೆವುದೊಂದು ಜೂಲುನಾಯಿ ಕೀಳರಿಂ ತಲೆಗೂಡಿ ಹಾಳ್ಹರಟ್ಹೊಡೆವುದು ಕೂಳ ಕಾಣದಂಥ ಹಾಳೂರನಾಯಿ 2 ಉಂಡುಂಡು ಮಲಗ್ವುದು ಸುಂಡಿನಾಯಿ ಕಂಡಂತೆ ತಿರಗುವ ದಂಡನಾಯಿ ಹೆಂಡ್ತಿನ್ನ ಬಿಟ್ಟು ಪರರ್ಹೆಂಡರಿಗೊಲಿವುದು ಉಂಡೊಗೆದೆಂಜಲ ನೆಕ್ಕುವ ನಾಯಿ 3 ಬಡವರ ಬಡಿವುದು ಬಡಕನಾಯಿ ಕಡುಗರ್ವದಿರುವುದು ತುಡುಗ ನಾಯಿ ದೃಢಯುತರನು ಕಂಡು ಬಿಡುನುಡಿಯಾಡ್ವುದು ಸುಡುಗಾಡೋಳ್ಬಿದ್ದಸ್ತಿ ಕಡಿಯುವ ನಾಯಿ 4 ವಿಚಾರನರಿಯದ್ದು ಬೇಬಿಟ್ಟಿನಾಯಿ ಅಚಾರಮನವಿಲ್ಲದ್ಹರಕುನಾಯಿ ಊಚಸ್ಥಾನದಿ ಕೂತು ನಾಚದೆ ಮೋರಿಚ್ಛೆ ವಾಚ ಪೇಳ್ವುದೊಂದು ನೀಚನಾಯಿ 5 ಆಸೆ ಪೇಳುವುದೊಂದು ಮೋಸದ ನಾಯಿ ಶಾಶ್ವತ ತಿಳಿಯದ್ದು ಪಾಶದ ನಾಯಿ ಈಶನ ದಾಸರ ದೂಷಿಪುದು ಹೊಲೆ ದಾಸರಮನೆಮುಂದಿನ್ಹೇಸಿನಾಯಿ6 ಕೋಪವ ತೊರೆಯದ್ದು ತಿರುಕನಾಯಿ ಪಾಪಕ್ಕೆ ಅಂಜದ್ದೀ ನರಕಿನಾಯಿ ಭೂಪ ಶ್ರೀರಾಮನ ಜ್ಞಾಪಕಕೆ ತರುವೆನು ಕೂಪದಿ ಉರುಳುವ ಪಾಪಿನಾಯಿ 7
--------------
ರಾಮದಾಸರು
ನಾರದ ಕೊರವಂಜಿ ಜಯ ಜಯ ದಯಾಕರನೆ ಹಯವದನ ಭಯಹರನೆ ಜಯ ಶೀಲಸಾಧ್ವರನೆ ಜಯ ದೀನೋದ್ಧರನೆ ಪ್ರಿಯಜನ ಮನೋಹರನೆÀ ಸುಯತಿ ಸಾಕಾರನೆ 1 ಹರಿಯೇ ಪತಿಯಾಗಬೇಕೆಂದು ರುಕುಮಿಣಿ ಪರದೇವತೆಯ ನೆನವುತಿರಲು ಕೊರವಂಜಿ ವೇಷದಿ ರುಕುಮಿಣಿದೇವಿಗೆ ಪರಮ ಹರುಷವೀವೆನೆಂದು ನಾರದ ಬಂದ 2 ಧರಣಿ ಮಂಡಲದಲ್ಲಿ ನಾರದ ಧರಿಸಿ ಕೊರವಂಜಿ ವೇಷವ ಸುರನರಾದಿಗಳೆಲ್ಲರಿಗೆ ತಾ ಪರಮ ಆಶ್ಚರ್ಯ ತೋರುತ್ತ 3 ಬಂದಳು ಕೊರವಂಜಿ ಚಂದದಿಂದಲಿ ಮಂದಹಾಸವು ತೋರುತ್ತ ಪಾದ ಧಿಂಧಿಮಿ ಧಿಮಿ- ಕೆಂದು ನಿಂದಭೀಷ್ಟವ ಪೇಳುತ 4 ಗಗನದಂತಿಹ ಮಧ್ಯವು ಸ್ತ- ನಘನ್ನ ಭಾರಕೆ ಬಗ್ಗುತ ಜಗವನೆಲ್ಲವ ಮೋಹಿಸಿ ಮೃಗ ಚಂಚಲಾಕ್ಷದಿ ನೋಡುತ 5 ಕನಕಕುಂಡಲ ಕಾಂತಿಯಿಂದಲಿ ಗಂಡಭಾಗವು ಹೊಳೆವುತ್ತ ಕನಕಕಂಕಣ ನಾದದಿಂದಲಿ ಕಯ್ಯ ತೋರಿ ಕರೆಯುತ್ತ 6 ಕುಂಕುಮಗಂಧದಿ ಮಿಂಚುವೈಯಾರಿ ಚುಂಗು ಜಾರಲು ಒಲವುತ್ತ ಕಿಂಕಿಣಿ ಸರಘಂಟೆ ಉಡಿಯೊಳು ಘಲ್ಲು ಘಲ್ಲೆಂದು ಬಂದಳು ಘಲ ಘಲ ಘಲ್ಲು ಘಲ್ಲೆಂದು ಬಂದಳು 7 ಕರೆದಾಳೆ ಸುಪಲ್ಲವ ಸುಪಾಣಿ ಕೀರವಾಣಿ ಪರಿಮಳಿಸುವ ಫಣಿವೇಣಿ 8 ಪರಿಪರಿ ಬೀದಿಯಲ್ಲಿ ನಿಂದು ಹಿಂದೂ ಮುಂದೂ ಸರಸವಾಡುತ್ತ ತಾನೆ ಬಂದು 9 ಕೊರವಂಜಿ ಯಾರೊಳಗೆ ನೋಡಿ ಕೂಡಿಯಾಡಿ ಸರಿಯಿಲ್ಲವೆಂದು ತನ್ನ ಪಾಡಿ 10 ಮನೆಮನೆಯಿಂದ ಬಂದಳು ಕೊರವಂಜಿ ತಾನು ಮನೆಮನೆಯಿಂದ ಬಂದಳು ರನ್ನವ ತೆತ್ತಿಸಿದ ಚಿನ್ನದ ದಿವ್ಯ ಬುಟ್ಟಿ ತನ್ನ ನೆತ್ತಿಯಲ್ಲಿಟ್ಟು ಬೆನ್ನಿಲಿ ಸಿಂಗಾನ ಕಟ್ಟಿ 11 ಗದ್ಯ : ಸುಗುಣಾಂಗಿಯರು ಪೇಳಲು ಮುದದಿಂದ ರುಕುಮಿಣಿದೇವಿ ತಾನೂ ಮುಗುಳು ನಗೆಯಂ ನಗುತ ಕೊರವಂಜಿಯನೆ ಅತಿಬೇಗ ಜಗವರಿಯೆ ಕರೆಯೆಂದಳು. ಶ್ರೀ ರುಗ್ಮಿಣಿ ತಾ ಬಂದಳು ಸ್ತ್ರೀಯರ ಕೂಡಿ ಚಾರುಹಾಸದಿಂದೊಪ್ಪುತ ಚೆಲ್ವ ದಿವ್ಯ ನೋಟಂಗಳಿಂದ ರಾಜಿಪ ಕಂಕಣದಿಂದ ರಮ್ಯ ನೂಪುರಗಳಿಂದ ರಾಜಚಿಹ್ನೆಗಳಿಂದ ರಾಜೀವನೇತ್ರೆ ಒಲವುತ್ತ12 ರಾಜಾಧಿರಾಜ[ರು]ಗಳಿಂದ ರಾಜಸಭೆಯಲ್ಲಿ ಪೂಜಿತಳಾದ ರಾಜಹಂಸಗ-ಮನೆಯು ಬರಲು ರಂಜಿತಳಾಗಿ ಒಲೆವುತ್ತ ಗದ್ಯ : ಆಗಲಾ ದೂತಿಕೆಯರು ಕೊರವಂಜಿಯನೆ ಅತಿ ಬೇಗ ಕರೆಯಲು ಬೇಕಾದ ವಜ್ರವೈಢೂರ್ಯ ರಾಗವಿಲಸಿತವಾದ ದ್ವಾರ ಭೂಭಾರದಿಂದೆಸೆವ ಭಾಗಧೇಯದಿಂ ರಾಜ ಸತ್ಕುಲವಾದ ದಿವ್ಯ ಮಂದಿರಕೆ ತ್ಯಾಗಿ ರುಕುಮಿದೇವಿ ನೋಡಲಾ ಶ್ರೀ- ರಾಗದಿಂ ಗಾನವಂ ಪಾಡುತ್ತ ಕೊರವಂಜಿಯು ಬಂದ ಚೆಂದ13 ಬಂದಾಳಂದದಲಿ ಬಾಗಿಲೊಳಗೆ ದಿಂಧಿಮಿಕೆನ್ನುತ 14 ಚೆಲುವ ತುರುಬಿನಿಂದಲಿ ಜಗುಳುವ ಚಲಿಸುವ ಪುಷ್ಪದಂದದಿ ನಲಿನಲಿ ನಲಿದಾಡುತ್ತ ಮಲ್ಲಿಗೆ ಝಲಝಲಝಲ ಝಲ್ಲೆಂದು ಉದುರುತ್ತ ಕಿಲಿಕಿಲಿ ಕಿಲಿ ಕಿಲಿ ಕಿಲಿಯೆಂದು ನಗುತ್ತ 15 ಗದ್ಯ :ಥಳಥಳನೆ ಹೊಳೆವುತ್ತ ನಿಗಿನಿಗೀ ಮಿಂಚುತ್ತ ರನ್ನದ ಬುಟ್ಟಿಯ ಕೊಂಕಳಲಿಟ್ಟು ಧಿಗಿಧಿಗಿಯೆಂದು ನೃತ್ಯವನ್ನಾಡುತ್ತ ಎತ್ತರದಲಿ ಪ್ರತಿಫಲಿಸುವ ಮುತ್ತಿನಹಾರ ಉರದೊಳಲ್ಲಾಡುತ ನಿಜಭಾಜ ಮಾರ್ತಾಂಡ ಮಂಡಲ ಮಂಡಿತಾ ಪ್ರಭು ಪ್ರತಿಮ ದಿಶದಿಶ ವಿಲಸಿತವಾದ ಭುಜಕೀರ್ತಿಯಿಂದೊಪ್ಪುವ ಆಕರ್ಣಾಂತ ಸುಂದರ ಇಂದೀವರದಳಾಯತ ನಯನ ನೋಟಗಳಿಂದ ಚಂಚಲಿಸುವÀ ಮಿಂಚಿನಂತೆ ಮಿಂಚುವ ಕಾಂತೀ ಸಂಚಯಾಂಚಿತ ಕಾಂಚನೋದ್ದಾಮ ಕಾಂಚೀ ಪೀತಾಂಬರಾವಲಂಬನಾಲಂಬಿತಾ ನಿತಂಬದಿಂದೊಪ್ಪುವ ಝೇಂಕರಿಸುವ ಭೃಂಗಾಂಗನಾಸ್ವಾದಿತ ಜಗುಳುವ ಜುಗುಳಿಸುವ ಪರಿಮಳಿಸುವ ಜಘನ ಪ್ರದೇಶಗಳಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತ ನಿತಾಂತಕಾಂತಿಕಾಂತಾ ಸುಧಾಕುಂತಳ ಸಂತತಭರದಿಂದೊಪ್ಪುವ ಪುಂಜೀಕೃತ ಮಂಜುಭಾಷಣ ಅಪರಂಜಿ ಬಳ್ಳಿಯಂತೆ ಮನೋರಂಜಿತಳಾದ ಕೊರವಂಜಿಯು ನಿಶ್ಶಂಕೆಯಿಂದ ಕಂಕಣಕ್ಷಣತೆಯಿಂದ ಕೊಂಕಳ ಬುಟ್ಟಿಯ ಪೊಂಕವಾಗಿ ತನ್ನಂಕದಲ್ಲಿಟ್ಟುಕೊಂಡು ಬೆನ್ನಸಿಂಗನ ಮುಂದಿಟ್ಟು ಚೆಂದವಾಗಿ ರುಕುಮಿಣಿ ದೇವಿಯ ಕೊಂಡಾಡಿದಳು. ಗದ್ಯ :ಅವ್ವವ್ವ ಏಯವ್ವ ಕೈಯ್ಯ ತಾರೆ ಕೈಯ್ಯ ತೋರೆ ನೀ ಉಂಡ ಊಟಗಳೆಲ್ಲ ಕಂಡ ಕನಸುಗಳೆಲ್ಲ ಭೂಮಂಡಲದೊಳಗೆ ಕಂಡ್ಹಾಗೆ ಪೇಳುವೆನವ್ವಾ. ಶಿಖಾಮಣಿ ಏನೇ ರುಕುಮಿಣಿ ನಿನ್ನ ಚೆಲುವಿಕೆಯನೇನೆಂತು ಬಣ್ಣಿಪೆ. ಮದನ ಶುಭ ಅಮಿತ ರಸಶೃಂಗಾರದಿಂದೊಪ್ಪುವ ನಿನ್ನ ಕೀರ್ತಿಯ ಕೇಳಿ ಬಂದೆನಮ್ಮಾ ಅಂಗ ವಂಗ ಕಳಿಂಗ ಕಾಶ್ಮೀರ ಕಾಂಭೋಜ ಸಿಂಧೂ ದೇಶವನೆಲ್ಲ ತಿರುಗಿ ಬಂದೆನಮ್ಮಾ 16 ಮಾಳವ ಸೌರಾಷ್ಟ್ರ ಮಗಧ ಬಾಹ್ಲೀಕಾದಿ ಚೋಳ ಮಂಡಲವನೆಲ್ಲ ಚರಿಸಿ ಬಂದೆನಮ್ಮಾ17 ಲಾಟ ಮರಾಟ ಕರ್ಣಾಟ ಸೌಮೀರಾದಿ ಅಶೇಷ ಭೂಮಿಯ ನಾನು ನೋಡಿ ಬಂದೆನಮ್ಮಾ 18 ಮಾಯಾ ಕಾಶೀ ಕಾಂಚಿ ಅವಂತಿಕಾಪುರೀ ದ್ವಾರಾವತೀ ಚೇದಿ|| ಮೆಚ್ಚಿ ಬಂದ ಕೊರವಿ ನಾನಮ್ಮ ಪುರಗಳಿಗೆ ಹೋಗಿ ನರಪತಿಗಳಿಗೆ ಸಾರಿ ಬರÀ ಹೇಳಿ ನಾ ಕಪ್ಪವ ತಂದೆ 19 ಸತ್ಯಮುಗಾ ಚೆಪ್ಪುತಾನಮ್ಮಾ ಸಂತೋಷಮುಗಾ ವಿನುವಮ್ಮ ಸತ್ಯ ಹರುಶ್ಚಂದ್ರನಿಕಿ ಚಾಲ ಚೆಪ್ಪಿತಿ 20 ಕನ್ನೆ ವಿನವೆ ನಾ ಮಾಟ ನಿನ್ನ ಕಾಲಂನೆ ನೇನಿಕ್ಕು(?) ಚಿನ್ನ ಸಿಂಗಾನೀ ತೋಡೂನೆ ಚೆಪ್ಪ್ಪೆಗಮ್ಮಾನೇ 21 ಗದ್ಯ :ಆಗ ರುಕುಮಿಣಿದೇವಿಯು ಚಿತ್ರವಿಚಿತ್ರ ಚಿತ್ತಾರ ಪ್ರತಿಮೋಲ್ಲಸಿತ ತಪ್ತ ರಜತರಂಜಿತಸ್ಫಟಿಕ ಮಣಿಗಣ ಪ್ರಚುರ ತಟಿಕ್ಕೋಟಿ ಜ್ವಾಲಾವಿಲಸಿತವಾದ ವಜ್ರಪೀಠದಲಿ ಕುಳಿತು ಚಿನ್ನದ ಮೊರಗಳಲ್ಲಿ ರನ್ನಗಳ ತಂದಿಟ್ಟುಕೊಂಡು ಕೊರವಂಜಿಯನೆ ಕುರಿತು ಒಂದು ಮಾತನಾಡಿದಳು. ವೊಲಿಸೀನ ಸೊಲ್ಮೂಲೆಲ್ಲ ವನಿತೆನೆ ನಿಂತೂ(?) 22 ಗದ್ಯ : ಆಗ ರುಕುಮಿಣಿದೇವಿಯಾಡಿದ ಮಾತ ಕೇಳಿ ಕೊರವಂಜಿಯುಯೇ-ನೆಂತೆಂದಳು. ನೆನೆಸಿಕೊ ನಿನ್ನಭೀಷ್ಟವ ಎಲೆ ದುಂಡೀ ನೆನೆಸಿಕೊ ವನಿತೆ ಶಿರೋಮಣಿಯೆ ಘನಮುದದಿಂದ ನೆನೆಸಿಕೊ 23 ರನ್ನೆ ಗುಣಸಂಪನ್ನೆ ಮೋಹನ್ನೆ ಚೆನ್ನಾಗಿ ಮುರುಹಿಯ ಮಾಡಿ ನೆನೆಸಿಕೊ 24 ಮಾಧವ ಸೇತುಮಾಧವ ವೀರರಾಘವ ಚಿದಂಬರೇಶ್ವರ ಅರುಣಾಚÀಲೇಶ್ವರ ಪಂಚನದೇಶ್ವರ ಶ್ರೀಮುಷ್ಣೇಶ್ವÀÀರ ಉಡುಪಿನ ಕೃಷ್ಣ ಮನ್ನಾರು ಕೃಷ್ಣ ಸೋದೆ ತ್ರಿವಿಕ್ರಮ ಬೇಲೂರು ಚೆನ್ನಪ್ರಸನ್ನ ವೆಂಕಟೇಶ್ವರ ಸೂರ್ಯನಾರಾಯಣ ಇವು ಮೊದಲಾದ ದೇವತೆಗಳೆಲ್ಲ ಎನ್ನ ವಾಕ್ಯದಲಿದ್ದು ಚೆನ್ನಾಗಿ ಸಹಕಾರಿಗಳಾಗಿ ಬಂದು ಪೇಳಿರಯ್ಯಾ ಮಂಗಳದ ಕೈಯ್ಯ ತೋರೇ ಎಲೆದುಂಡೀ ಕೈಯ ತೋರೆ ಕೈಯ ತೋರೆ 25 ಕೇಳೆ ರನ್ನಳೆ ಎನ್ನ ಮಾತ ಬೇಗ ಇಳೆಯರಸನಾದನು ಪ್ರಿಯ26 ಕಳಸಕುಚಯುಗಳೆ ಚಿಂತೆ ಬೇಡ ನಿನ್ನ ಕರೆದಿಂದು ಕೂಡ್ಯಾನು ರಂಗ 27 ನಾಡಿನೊಳಧಿಕನಾದ ನಾರಾಯಣನ ಪತಿ ನೀನು ಮಾಡಿ ಕೊಂಡೆನೆಂದು ಮನದಲ್ಲಿ ನೆನಸಿದೆ ಕಂಡ್ಯಾ ನಮ್ಮ ಕೃಷ್ಣ ಕುತೂಹಲದಿ 28 ಸುಂದರಶ್ಯಾಮ ಅಲ್ಲಿ ನÀಂದಾ ನಂದಾನಾಡುವಾನಂದಮುಗಾವಚ್ಚಿ ಕೂಡೇನಮ್ಮಾ 29 ಶಂಖಚಕ್ರಯುಗಲ ಪಂಕಜನಾಭುಂಡು ಪಂಕಜಮುಖೀ ನೀವು ಪ್ರಾಣಿಗ್ರಹಣಮು ಚೇಸಿ ಕೂಡೆನಮ್ಮಾ 30 ಚೆಲುವಾ ನಾ ಮಾಟಾ ನೀಕು ಪುಚ್ಚಾ ಚೆಲುವಾ ನಾ ಮಾಟ ಕಲ್ಲಗಾದು ನಾ ಕಣ್ಣೂಲಾನೂ ಪಿಲ್ಲ ವಿನುವಮ್ಮ ಪಲ್ಲವಪಾಣೀ ಚೆಲುವಾ ನಾ ಮಾಟ31 ದಮಯಂತೀಕೀನೇ ಚೆಪ್ಪಿತಿ ನಮ್ಮವೆ ಮಾಟ ಅಮರುಲಕೆಲ್ಲಾ ಅನುಮೈನವಾಡು ಚೆಪ್ಪೀ ಅಮಿತ ಬಹುಮಾನಾಮಂದೀತೀನಮ್ಮಾ ಚೆಲುವ ನಾ ಮಾಟ ಚೆಲುವ 32 ಬಂತೆ ಮನಸಿಗೆ ನಾ ಹೇಳಿದ್ದು ಚಿಂತೆ ಸಂತೋಷದಿ ನಾನಾಡಿದ ಶಾಂತ ಮಾತೆಲ್ಲ ಇದು ಪುಸಿಗಳಲ್ಲ ಬೇಗ ಬಂದಾನೋ ನಲ್ಲಾ ಆಹಾ ಆಹಾ ಬಂತೇ ಮನಸ್ಸಿಗೆ
--------------
ವಾದಿರಾಜ
ನಾರದ ಮುನಿವರರೆ | ಸದ್ಗುರುವರ ನಾರಾಯಣ ಪ್ರಿಯಶ್ರೀ ಪ ನಾರದ ಮುನಿವರರೆ ನಿಮ್ಮಯ ಚಾರುಚರಣಕೆ ನಮಿಪೆನು ಆ ದ್ವಾರಕಾಪುರನಿಲಯ ಕೃಷ್ಣನ- ಸಾರ ಪೇಳ್ದಿರಿ ಅ.ಪ. ಪರಮ ಸುಂದರ ರೂಪನು | ಆ ಕೃಷ್ಣನು ಪರತರ ಪರಮಾತ್ಮನು ಶರಣಜನ ಮಂದಾರನಾತನು ಕರುಣಶರಧಿಯು ಕಾಮಜನಕನು ಸರಸಿಜೋದ್ಭವ ಸುರರಿಗಧಿಕನು ಹರಿಯು ಇವನೆಂದರುಹಿದಿರಿ ಗುರು 1 ಲೋಕಮೋಹಕನಯ್ಯನು | ಶ್ರೀಕೃಷ್ಣನು ಲೋಕ ವಿಲಕ್ಷಣನು ಲೋಕ ಕಂಟಕರನ್ನು ಶಿಕ್ಷಿಸಿ ನಾಕ ನಿಲಯರ ಭರದಿ ರಕ್ಷಿಸಿ ಲೋಕ ಕಲ್ಯಾಣವನ್ನು ಗೈದ ತ್ರಿ ಲೋಕದೊಡೆಯನೆಂದರುಹಿದಿರಿ ಗುರು 2 ವಿಧಿ ಶುಭರೂಪನ | ಶ್ರೀಕೃಷ್ಣನ ದೇವಾದಿದೇವೇಶನ ಪಾವನಾಂಘ್ರಿಗಳನ್ನು ಪೂಜಿಸಿ ಸೇವಿಸುವ ಸೌಭಾಗ್ಯವೆಂದಿಗೆ ದೇವ ಕರಿಗಿರಿನಿಲಯ ನರಹರಿ ಯಿವನೆಂಬುದನೆನಗೆ ತಿಳುಹಿರಿ 3
--------------
ವರಾವಾಣಿರಾಮರಾಯದಾಸರು
ನಾರಸಿಂಹನೆ ಎನ್ನ | ದುರಿತೌಘಗಳನು ದೂರಕೈದಿಸಿ ಘನ್ನ | ಕರುಣಾವಲೋಕನ ಭವ ಭಯವನ್ನ | ಬಿಡಿಸಯ್ಯ ಮುನ್ನ ಪ ಧೀರ ಸುಜನೋದ್ಧಾರ ದೈತ್ಯ ವಿ ದೂರ ಘನಗಂಭೀರ ಶೌರ್ಯೋ ಧಾರ ತ್ರಿಜಗಾಧಾರ ಎನ್ನಯ ಭಾರ ನಿನ್ನದೊ ಹೇ ರಮಾವರ ಅ.ಪ. ಏನು ಬಲ್ಲೆನೊ ನಾನು | ಸುಜ್ಞಾನ ಮೂರುತಿ ಮಾನಸಾಬ್ಜದಿ ನೀನು | ನೆಲೆಯಾಗಿ ನಿಂತು ಏನು ನುಡಿಸಲು ನಾನು | ಅದರಂತೆ ನುಡಿವೆನು ಜ್ಞಾನದಾತನೆ ಇನ್ನು | ತಪ್ಪೆನ್ನೊಳೇನು ಸ್ನಾನ ಜಪತಪ ಮೌನ ಮಂತ್ರ ಧ್ಯಾನಧಾರಣ ದಾನ ಧರ್ಮಗ- ಳೇನು ಮಾಡುವುದೆಲ್ಲ ನಿನ್ನಾ- ಧೀನವಲ್ಲವೆ ಶ್ರೀನಿವಾಸನೆ ದಾನವಾಂತಕ ದೀನರಕ್ಷಕ ಧ್ಯಾನಿಪರ ಸುರಧೇನುವೆನ್ನುವ ಮಾನವುಳ್ಳವರೆಂದು ನಂಬಿದೆ ಸಾನುರಾಗದಿ ಕಾಯೊ ಬಿಡದೆ 1 ತಂದೆತಾಯಿಯು ನೀನೆ | ಗೋವಿಂದ ಎನ್ನಯ ಬಂಧು ಬಳಗವು ನೀನೆ | ಮು- ಕುಂದ ಗುರುಸಖ ವಂದ್ಯದೈವವು ನೀನೆ ನೀನೆ | ಆನಂದ ನೀನೆ ಹಿಂದೆ ಮುಂದೆಡಬಲದಿ ಒಳಹೊರ- ಗೊಂದು ಕ್ಷಣವಗಲದಲೆ ತ್ರಿದಶರ ವೃಂದ ಸಹಿತದಿ ಬಂದು ನೆಲಸಿ ಬಂದ ಬಂದಘಗಳನು ಹರಿಸಿ ನಂದವೀಯುತಲಿರಲು ಎನಗಿ- ನ್ನೆಂದಿಗೂ ಭಯವಿಲ್ಲ ತ್ರಿಕರಣ- ಕರ್ಮ ನಿನ್ನರು ಎಂದು ಅರ್ಪಿಸುವೆನು ನಿರಂತರ 2 ಪ್ರೀಯ ನೀನೆನಗೆಂದು | ಮರೆಹೊಕ್ಕು ಬೇಡುವೆ- ನಯ್ಯ ಗುಣಗಣಸಿಂಧು | ಮೈಮರೆಸಿ ವಿಷಯದ ಹುಯ್ಲಿಗಿಕ್ಕದಿರೆಂದು | ಶರಣನ್ನ ಬಿನ್ನಪ ಇಂದು | ಕೈಬಿಡದಿರೆಂದು ತಾಯನಗಲಿದ ತನಯನಂದದಿ ಬಾಯ ಬಿಡಿಸುವರೇನೊ ಚಿನ್ಮಯ ನ್ಯಾಯ ಪೇಳುವರ್ಯಾರೊ ನೀನೊ ಸಾಯಗೊಲುತಿರೆ ಮಾಯಗಾರನೆ ತೋಯಜಾಸನ ಮುಖ್ಯ ಸುಮನಸ ಧ್ಯೇಯ ಶ್ರುತಿ ಸ್ಮøತಿ ಗೇಯ ಕವಿಜನ ಗೇಯ ಚತುರೋಪಾಯ ಭಕ್ತ ನಿ- ಕಾಯ ಪ್ರಿಯ ಶ್ರೀಕಾಂತ ಜಯ ಜಯ
--------------
ಲಕ್ಷ್ಮೀನಾರಯಣರಾಯರು
ನಾರಸಿಂಹನೆ ಘೋರರೂಪನೆ ತೋರು ಮೊಗವನು ಕರುಣದಿ ಚಾರುಗಾತ್ರನೆ ಭೀರು ತ್ರಾತನೆ ಸೇರಿಹೆನು ತವ ಚರಣದಿ ಪ ಘೋರತರ ಸಂಸಾರ ಶರಧಿಯ ತೀರ ಗಾಣೆನು ಧೀರನೆ ಪಾರಗಾಣಿಪೊದ್ಯಾರ ಕಾಣೆನುಯಾ ಭವರುಜಹಾರನೆ 1 ದಾನವನ ತಪಜ್ವಾಲೆಯಿಂದಲಿ ಮಾನುಷರು ಕಳವಳನೆಯಾ ಸೂನುತಾರಣ ನೆವದಿ ದಿವಿಜರ ಮಾನವನು ನೆರೆ ಕಾಯ್ದೆಯಾ 2 ದುಷ್ಟಸಂಹರ ಶಿಷ್ಟಪಾಲಕನೆಂಬ ಬಿರುದೆತ್ತಿಹುದಲಾ ಸೃಷ್ಟಿಗೀಶನೆ ಕಷ್ಟ ತೊಲಗಿಸೋ ಶಿಷ್ಟ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು
ನಾರಸಿಂಹನೆ ಧೀರ | ನಂಬಿದೆನೊ ಪೊರೆಯೊ ಶ್ರೀ ರಮಾಪತಿ ವೀರ | ಕರಿಗಿರಿ ವಿಹಾರ ಪ. ಸಾರಿದೆನೊ ನಿನ್ನ ಪದವ ಅನುದಿನ ಸೇರಿಸೆನ್ನನು ಭಕ್ತಕೂಟದಿ ಗಾರು ಮಾಡುವುದುಚಿತವೇ ಹರಿ ಭವ ಸಮುದ್ರದಿ ಅ.ಪ. ತಾಪ | ನಾನಾರಿಗುಸುರಲೊ ಒಡಲ ದುಃಖವ ಭೂಪ | ನೀನಲ್ಲದಿಲ್ಲವೊ ಭವ ಶ್ರೀಪ | ತೋರದಿರು ಕೋಪ ಘುಡು ಘುಡುಸಿ ನೀ ಎನ್ನ ಬೆದರಿಸೆ ತಡೆವೆನೇ ನಿನ್ನ ಕೋಪದಗ್ನಿಗೆ ಬಿಂಕ ಎನ್ನೊಳು ತಡೆಯೊ ಎನ್ನ ದುರುಳತನಗಳ ಕಡುಕರುಣಿ ನೀನಲ್ಲವೆ ಹರಿ ಒಡಲೊಳಗೆ ಪ್ರೇರಕನು ನೀನೆ ನಡಸಿದಂದದಿ ನಡೆವೆನಲ್ಲದೆ ಒಡೆಯ ಎನ್ನ ಸ್ವತಂತ್ರವೇನೊ? 1 ದುರುಳತನದಲಿ ದೈತ್ಯ | ಭೂವಲಯವೆಲ್ಲವ ಉರವಣಿಸಿ ದುಷ್ಕುತ್ಯ | ಎಸಗುತಿರೆ ದುಃಖದಿ ಸುರರು ಮೊರೆಯಿಡೆ ಸತ್ಯ | ದೃಢಮನದಿ ಭೃತ್ಯ ಕರಕರೆ ಪಿತ ಬಡಿಸುತಿರಲು ದೊರೆಯೆ ನೀ ಪೊರೆ ಎಂದು ಮೊರೆಯಿಡೆ ಸರ್ವವ್ಯಾಪಕನೆಂದು ತೋರಲು ತ್ವರಿತದಲಿ ಕಂಭದಲಿ ಬಂದು ಸರಸಿಜವು ಕಂಗೆಡುವೊ ಕಾಲದಿ ಧರಿಸಿ ತೊಡೆಯ ಮೇಲಸುರ ಕಾಯವ ಕರುಳ ಬಗೆದು ಮಾಲೆ ಧರಿಸಿ ಪೊರೆದೆಯೊ ಸ್ತುತಿ ಕೇಳಿ ಬಾಲನ 2 ಅಜಭವಾದಿಗಳೆಲ್ಲ | ಸ್ತುತಿಸಿದರೆ ಮಣಿಯದ ಭುಜಗಶಾಯಿ ಶ್ರೀ ನಲ್ಲ | ನಾ ನಿನ್ನ ಸ್ತುತಿಸಿ ಭಜಿಸಲಾಪೆನೆ ಕ್ಷುಲ್ಲ | ಮಾನವನ ಸೊಲ್ಲ ನಿಜಮನವ ನೀ ತಿಳಿದು ಸಲಹೊ ಕಮಲ ತೋರಿ ಕುಜನನಲ್ಲವೊ ಹಿರಿಯರೆನಗೆ ಪಥ ತೋರುತಿಹರೊ ರಜ ತಮವ ದೂರಟ್ಟಿ ಶುದ್ಧದಿ ಭಜಿಸುವಂದದಿ ಕೃಪೆಯ ಮಾಡಿ ಸುಜನರೆನ್ನನು ಪಾಲಿಸುತ್ತಿರೆ ನಿಜದಿ ಗೋಪಾಲಕೃಷ್ಣವಿಠ್ಠಲ3
--------------
ಅಂಬಾಬಾಯಿ
ನಾರಾಯಣ ಉದಿಸುವನೆಂದು ಆ ಪೂರ್ವಾಂತರ್ಯಾಮಿ ಅವರ ಸಲಹಲು ಸರ್ವದಾ ಅಪೂರ್ವ ತೇಜೋವಂತನಾಗಿ ಅವರ ಹೃದಯದಿ ಸೂರ್ಯತೇಜದಿ ಮೆರೆಯುತಿರುವ ಸರ್ವದಾ ಎಂದು ಅಪೂರ್ವ ಜ್ಞಾನದಿ ನೆನಯುತಿರಿ ಹರಿಭಕ್ತರು 1 ಎದ್ದು ಮುಖ ತೊಳೆದು ನಿಮ್ಮಲ್ಲಿದ್ದ ಕಲ್ಮಷ ತೊಳೆದು ನಿಮ್ಮ ಶುದ್ಧ ಮನದಲಿ ನೆನೆದು ನಿಲಿಸಿ ಹರಿ ಧ್ಯಾನದಿ ಸ್ನಾನಾನ್ಹೀಕಬದ್ಧಕಂಕಣರಾಗಿ ಬ್ರಾಹ್ಮೀಮುಹೂರ್ತದಲಿ ಗೈಯೆ ನಿಮ್ಮಲ್ಲಿದ್ದ ಕಲ್ಮಶವೆಲ್ಲ ಕಳೆದತಿ ಹರ್ಷವೀವ ನಿಮ್ಮ ಶುದ್ಧಾಚರಣೆಗೆ ಮೆಚ್ಚಿ ನಿಮ್ಮ ಭಕ್ತಿಗೆ ನಿತ್ಯ ಬದ್ಧ ಕಂಕಣರಾಗಿ ಸ್ತುತಿಸೆ ನಿತ್ಯ ಹರಿ ಭಕ್ತರು 2 ಮಾಧ್ಯಾನ್ಹಿಕಾದಿಗಳಾಚರಿಸುತ ಹರಿಯ ಮಧ್ಯವರ್ತಿಯನೆನಿಸಿ ಆ ಸೂರ್ಯನಂತರ್ಯಾಮಿ ನಾರಾಯಣನಿ- - ಗಘ್ರ್ಯಪಾದ್ಯವನಿತ್ತು ಸುಭೋಜನವ ಮಾಡಿ ನಿಮ್ಮ ಪೂರ್ವಜರನುಗ್ರಹದಿ ಮಜ್ಜನ್ಮಸಾರ್ಥಕವೆಂದಾವನರಿವನೋ ಅವನ ಹೃದಯ ಮಧ್ಯವರ್ತಿಯಾಗಿದ್ದು ಕಾವ ಸದ್ಗುಣೋಪೇತ ಭಕ್ತರ ಕೈ ಬಿಡ ಮಧ್ವಾಂತರ್ಗತ ಶ್ರೀ ಶ್ರೀನಿವಾಸ ಅವನ ಮನದಿ ನೆನೆಯಿರಿ ಹರಿ ಭಕ್ತರು 3 ಜವÀನ ಬಾಧೆಯು ಇಲ್ಲ ಹರಿ ಭಕ್ತರಿಗೆ ಯವನ ರೂಪದ ಕಲ್ಕಿ ಹರಿಯ ನೆನೆವರಿಗೆ ಜವದಿ ಯಮನಾಳ್ಗಳು ಮುಟ್ಟಲಂಜುವರು ಹರಿಭಕ್ತರನು ಕವಿ ನಾರಾಯಣನ ಧ್ಯಾನಿಪರಿಗೆ ಅವನಿಯೊಳು ಭಯವಿಲ್ಲ ಅವರಿಗೆ ಸಮನಿಲ್ಲ ಅವರಲ್ಲಿ ಹರಿಯಿದ್ದ ಕಾರಣದಿ ಜವದಿ ಹರಿ ದಾಸರೆಲ್ಲ ಶ್ರೀ ಶ್ರೀನಿವಾಸನ ಭಕ್ತರ ಸಂಗದೊಳಿರಿ ಹರಿಭಕ್ತರು 4 ಯಾರ ಭಯವಿಲ್ಲ ಹರಿ ನಾಮಕೆ ದಾರಿ ಹೋಕರು ಬಾರರಿದಕೆ ಭಾರವಿಲ್ಲವು ಮನಕೆ ಸಂಸಾರಭಯವಿಲ್ಲವರಿಗೆ ಹರಿ ಎಂಬುದನೆ ಸಕಲ ಕಾರ್ಯವ ನಿರ್ವಹಿಸುವನೆಂದರಿತವರಿಗೆ ಯುಕುತಿ ಬುದ್ಧಿಯು ಯಾತಕೆ ಯಾರ ಭಯವೇಕೆ ಹರಿಸಖರಾಗಿರಲವರಿಗೆ ಅಂಜಿಕೆಯಾಕೆ ಯಾರನಾಶ್ರಯಿಸುವ ಶ್ರಮವಿಲ್ಲ ಇದನರಿತು ಹರಿಭಕ್ತರು ಶಕುನ ಅಪಶಕುನವೆನ್ನರು ಮನದಿ ಯುಕುತಿಯ ಮಾಡರು ಪರರ ಬೇಡೆ ಶ್ರೀ ಶ್ರೀನಿವಾಸ ಭಕ್ತರು ಅವರ ಮತ ಹಿಡಿದು ಬದುಕಿ ಹರಿಭಕ್ತರು 5 ಜತೆ ಕರುಣಾಕರ ಹರಿಭಕ್ತರಭಿಮಾನಿ ವರದಭಯ ಹಸ್ತವ ಕೊಡುವ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ