ಒಟ್ಟು 4388 ಕಡೆಗಳಲ್ಲಿ , 123 ದಾಸರು , 2736 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾವಜನಯ್ಯ ನಿನಗೊಲಿದ ನಾರಿಯರುಗಳ ಲಾಲಿಸೋ ಪ ಇಂದೀವರಾಯತಾಕ್ಷಿಯೊಳು ತಾ ಮುನಿದಿರಲು ಕಂದರ್ಪಣೆರಾಯ ಕೇಳಿ ತನ್ನ ಚಂದಿರನು ದಳಪತಿಗೆ ನೇಮವನು ಕೊಟ್ಟು ನಲ- ವಿಂದ ಗಿಳಿತೇರನೇರಿ ಬರಲೂ ಮುಂದೆ ಉಗ್ಘಡದ ಕೋಗಿಲೆ ಪಾಡಿ ರಭಸ- ದಿಂದ ವಾದ್ಯಗಳು ಮೊಳಗೇ ಸಂದಣಿಸಿ ಝೇಂಕಾರಗೈದ ಭ್ರಮರಾಳಿಗಳ ವೃಂದದವರನೆಂತು ಬಣ್ಣಿಸುವರೆನ್ನಳವಲ್ಲ 1 ಅಗ್ಗದ ವಸಂತ ಮಾರುತರು ಒಗ್ಗಿ ನಲಿದಾಡುತ್ತ ಬರಲು ವೆಗ್ಗಳ ಸುಗಂಧ ಪರಿಮಳದ ಪೂವಲರುಗಳ ಒಗ್ಗಿನಲಿ ಕೂಡೆ ಬರಲೂ ತನ್ನ ಕಗ್ಗೊಲೆಗೆ ದಾಳಿಯಿಟ್ಟುದು ಕಾಮ ಪುಸಿಯಲ್ಲ ದಗ್ಗಡೆಯ ಮಾಡುವುದುಚಿತವೆ ನಿನ್ನ ಸಖಿಯಳನೂ 2 ಈ ತೆರದೊಳಿಹ ಪ ಕೊಳುವಳ್ ಕಳ ರಳ್ತೆ ಸಂಜೆ ಭಟರೊಗ್ಗಿನಲಿ ಭಾರಿಯಾಗಿ ಲಲೂ ಮತ್ತೆ ಕೆಂದಳಿರ ಸಂಪಗೆಯ ಕಿಡಿಯಲರುಗಳು ಒತ್ತಿ ಸೂಸುತ್ತ ಬರಲೂ ತನ್ನ ಬತ್ತಳಿಕೆಯೊಳಗೊಂದು ಕೂರಲಗ ತೆಗೆ ವೃತ್ತ ಕುಚದಬಲೆಯಳ ಮನ್ನಿಸದೆ ಸುರಪುರದ ಸುತ ಲಕ್ಷ್ಮೀಶನಹುದೆ ಭಳಿರೇ 3
--------------
ಕವಿ ಲಕ್ಷ್ಮೀಶ
ಭಾವನೆ ಬಲಿದನಕಾ ಒಣಭಕ್ತಿಯ ಮಾಡಿದರೇನು | ದೇವದೇವೋತ್ತಮನಾಪಾದ ಸುಮ್ಮನೆ ಸಿಲ್ಕುವದೇನು ಪ ಸಂಜಿವನಿಲ್ಲದಲೇ ಸಾವಿರ ಗಿಡ ಮೂಲಿಕಿದ್ದೇನು | ರಂಜಕ ತಾನಿಡದೇ ಯಂತ್ರದಿಗುರಿವಡ್ಡಿರಲೇನು 1 ಸೂರಿಯನುದಯಿಸದೇ ಕನ್ನಡಿ ಕಣ್ಣುಗಳಿದ್ದೇನು | ಗುರುರಾಯನ ಕರುಣಾ ಪಡಿಯದೆ ಮಂತ್ರ ಕಲಿತೇನು 2 ಅನುಭವಿಸದೇ ಸುಖವಾ ಜ್ಞಾನದ ಮಾತಾಡಿದರೇನು | ಘನಗುರು ಮಹಿಪತಿ ಸ್ವಾಮಿಯ ನೆನಯದೆ ಜನುಮವೇನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭಿಕ್ಷೆ ನೀಡೋ ಹರಿಯೇ ಮುಕ್ತಿಗೊಡೆಯನೇ ಪ ಹಗಲು ಇರಳು ಎಡೆಬಿಡದಲೆ ಪೊಗಳುತ ತವ ನಾಮ ಮಹಿಮೆಯ ಜಗದೀಶನೆ ನಿನ್ನ ಚರಣ ಯುಗಳಲಿ ಬಹು ಭಕ್ತಿ ಮನ ಬಗಿ ಬಗಿಯಲಿ ನಲಿದಾಡುವ 1 ನಿತ್ಯನೆ ಸರ್ವೋತ್ತಮನೇ ಮುಕ್ತಿಪ್ರದನೇ ಪರಮಾತ್ಮನೇ ಉತ್ತಮ ವೃತ್ತಿಯಾನಿತ್ತು ನೇತ್ರದಿ ತವ ನೋಡುತ ವರ ಸ್ತೋತ್ರ ದಿನಾ ಪಾಡುತಿರುವೆ 2 ಎನ್ನಪರಾಧಗಳನ್ನು ಮನ್ನಿಸಿ ಸಲಹಯ್ಯಾ ಜೀಯಾ ಹನುಮೇಶವಿಠಲರಾಯಾ ನಿನ್ನ ಸ್ಮರಣೆಯಲ್ಲಿ ಕಾಲ ವನ್ನು ಕಳೆಯುತಿರುವ ದಿವ್ಯ 3
--------------
ಹನುಮೇಶವಿಠಲ
ಭೀಮ ಶಾಮ ಕಾಮಿನಿಯಾದನು ಪ ಭೀಮ ಶಾಮ ಕಾಮಿನಿಯಾಗಲು ಪತಿ ಪುಲೋಮ ಜಿತುವಿನ ಕಾಮಿನಿ ಸಕಲ ವಾಮ ಲೋಚನೆಯ- ರಾಮೌಳಿ ಕೂಗುತಲೊಮ್ಮನದಿ ಪಾಡೆಅ.ಪ ದಾಯವಾಡಿ ಸೋತು ರಾಯ ಪಾಂಡವರು ನ್ಯಾಯದಿಂದ ಸ್ವಾಮಿಯ ಸೇವೆಯೆಂದು ಕಾಯದೊಳಗೆ ಅಸೂಯೆಪಡದಲೆ ಮಾಯದಲ್ಲಿ ವನವಾಯಿತೆಂದು ರಾಯ ಮತ್ಸ್ಯನಾಲಯದೊಳು ತಮ್ಮ ಕಾಜು ವಡಗಿಸಿ ಅಯೋನಿಜೆ ದ್ರೌಪ- ದೀಯ ವಡಗೂಡಿ ಆಯಾಸವಿಲ್ಲದೆ ಅಯ್ವರು ಬಿಡದೆ ತಾವಿರಲು 1 ಬಾಚಿ ಹಿಕ್ಕುವ ಪರಿಚಾರತನದಲಾ ಪಾಂಚಾಲಿಗೆ ಮತ್ಸ್ಯನಾ ಚದುರೆಯಲ್ಲಿ ಆಚರಣೆಯಿಂದ ಯಾಚಕರಂದದಿ ವಾಚವಾಡಿ ಕಾಲೋಚಿತಕೆ ನೀಚರಲ್ಲಿಗೆ ಕೀಚಕನಲ್ಲಿಗೆ ಸೂಚಿಸಲು ಆಲೋಚನೆಯಿಂದಲಿ ನಾಚಿಕೆ ತೋರುತಲಾ ಚೆನ್ನೆ ಪೋಗಲು ಕರ ಚಾಚಿದನು 2 ಎಲೆಗೆ ಹೆಣ್ಣೆ ನಿನ್ನೊಲುಮೆಗೆ ಕಾಮನು ಕಳವಳಿಸಿದ ನಾ ಗೆಲಲಾರೆನಿಂದು ವಲಿಸಿಕೊ ಎನ್ನ ಲಲನೆಯ ಕರುಣಾ- ಜಲಧಿಯೆ ನಾರೀ ಕುಲಮಣಿಯೆ ಬಳಲಿಸದಲೆ ನೀ ಸಲಹಿದಡೇ ವೆ- ಗ್ಗಳೆಯಳ ಮಾಡಿಪೆನಿಳೆಯೊಳೆನ್ನೆ-ಆ- ಖಳನಾ ಮಾತಿಗೆ ತಲೆದೂಗುತಲಿ ಅ- ನಿಳಜನೆನ್ನ ನೀ ಸಲಹೆಂದ 3 ಮೌನಿ ದ್ರೌಪದಿ ಮೌನದಲ್ಲಿ ಹೀನನಾಡಿದಾ ಊನ ಪೂರ್ಣಗಳು ಮನೋಭಾವವ ಧೇನಿಸಿ ನೋಡುತ್ತ ಹೀನಕೆ ತಿಳಿದಳು ಮನದಲಿ ದೀನವತ್ಸಲ ಕರುಣವು ಮೀರಿತು ಕಾನನದೊಳ್ಕಣ್ಣು ಕಾಣದಂತಾಯಿತು ಏನು ಮಾಡಲೆಂದು ಜಾಣೆಯು ಚಿಂತಿಸಿ ಅನಿಲಗೆ ಬಂದು ಮ-ಣಿದಳು4 ಚೆಲ್ವೆ ಕಂಗಳೇ ನಿಲ್ಲೆ ನೀ ಘಳಿಗೆ ಸಲ್ಲದೆ ಆತನ ಹಲ್ಲನು ಮುರಿದು ಹಲ್ಲಣವ ಹಾಕಿ ಕೊಲ್ಲುವೆ ನಾನೀಗ ತಲ್ಲಣಿಸದಿರೇ ಗೆಲ್ಲುವೆನೆ ಪುಲ್ಲನಾಭ ಸಿರಿನಲ್ಲನ ದಯವಿ- ದ್ದಲ್ಲಿಗೆ ಬಂದಿತು ಎಲ್ಲ ಕಾರ್ಯಗಳ ಸಲ್ಲಿಸಿ ಕೊಡುವನು ಬಲ್ಲಿದ ನಮಗೆ ಮಲ್ಲಿಗೆ ಮುಡಿಯಾ ವಲ್ಲಭಳೆ 5 ಎಂದ ಮಾತಿಗಾನಂದ ಮಯಳಾಗಿ ಬಂದಳಾ ಖಳನ ಮಂದಿರದೊಳು ನೀ- ನೆಂದ ಮಾತಿಗೆ ನಾನೊಂದನು ಮೀರೆನು ಕಪಟ ಸೈರಂಧಿರಿಯೂ ಕುಂದಧಾಭರಣವ ತಂದು ಕೊಡಲು ಆ- ನಂದದಿಂ ಪತಿಯ ಮುಂದೆ ತಂದಿಟ್ಟಳು ಮಂದರೋದ್ಧರನ ಚಂದದಿ ಪೊಗಳುತ ಇಂದು ಸುದಿನವೆಂದ ಭೀಮ6 ಉಟ್ಟ ಪೀತಾಂಬರ ತೊಟ್ಟ ಕುಪ್ಪಸವು ಇಟ್ಟತಿ ಸಾದಿನ ಬಟ್ಟು ಫಣಿಯಲ್ಲಿ ಕಟ್ಟಿದ ಮುತ್ತಿನ ಪಟ್ಟಿಸ ಕಿವಿಯಲ್ಲಿ ಇಟ್ಟೋಲೆ ತೂಗಲು ಬಟ್ಟ ಕುಚ ಘಟ್ಟಿ ಕಂಕಣ ರ್ಯಾಗಟೆ ಚೌರಿ ಅ- ದಿಟ್ಟಂಥ ಈರೈದು ಬೆಟ್ಟುಗಳುಂಗರ ಮುಟ್ಟೆ ಮಾನೆರಿ ದಟ್ಟಡಿವೊಪ್ಪತಿ ಕಟ್ಟುಗ್ರದ ಜಗ ಜಟ್ಟಿಗನು 7 ತೋರ ಮೌಕ್ತಿಕದ ಹಾರ ಸರಿಗೆ ಕೇ ಯೂರ ಪದಕ ಭಂಗಾರ ಕಾಳಿಸರ ವೀರ ವಿದ್ರುಮದ ಭಾಪುರಿ ಉ- ತ್ತಾರಿಗೆ ವರ ಭುಜಕೀರುತಿಯು ಮೂರೇಖೆಯುಳ್ಳ ಉದಾರ ನಾಭಿವರ ನಾರಿ ನಡು ಉಡುಧಾರ ಕಿಂಕಿಣಿ ಕ- ಸ್ತೂರಿ ಬೆರಸಿದ ಗೀರುಗಂಧವು ಗಂ- ಬೂರ ಲೇಪ ಶೃಂಗಾರದಲಿ8 ವಂಕಿ ದೋರ್ಯವು ಕಂಕಣ ಒಮ್ಮೆಯೀ- ಚಾಪ ಭ್ರೂ ಅಲಂಕಾರ ಭಾವ ಪಂಕಜಮಾಲೆ ಕಳಂಕವಿಲ್ಲದಲೆ ಸಂಕಟ ಕಳೆವ ಪಂಕಜಾಂಘ್ರಿ ಝಂಕಾರಕೆ ಲೋಕ ಶಂಕಿಸೆ ನಾನಾ- ಅಂಕುರ ವೀರ- ಕಂಕಣ ಕಟ್ಟಿದ ಬಿಂಕದಿಂದಲಾ- ತಂಕವಿಲ್ಲದೆಲೆ ಕಂಕಾನುಜ 9 ಕಂಬು ಕೊರಳು ದಾಳಿಂಬ ಬೀಜ ದಂತ ದುಂಬಿಗುರುಳು ನೀಲಾಂಬುದ ಮಿಂಚೆಂ- ದೆಂಬ ತೆರದಲಾ ಅಂಬಕದ ನೋಟ ತುಂಬಿರೆ ಪವಳ ಬಿಂಬಾಧರ ಜಂಬೀರ ವರ್ಣದ ಬೊಂಬೆಯಂತೆಸೆವ ತಾಂಬೂಲ ಗಿಳಿಯೆಂಬ ಗಂಭೀರ ಪುರುಷನು ಹಂಬಲಿಸಿದ ತಾ ಸಂಭ್ರಮದಿ 10 ಸಂಧ್ಯಾದೇವಿಯೊ ಇಂದ್ರನ ರಾಣಿಯೊ ಚಂದ್ರನ ಸತಿಯೋ ಕಂದರ್ಪನಾಕರ- ದಿಂದ ಬಂದ ಅರವಿಂದದ ಮೊಗ್ಗೆಯೊ ಅಂದ ವರ್ಣಿಪರಾರಿಂದಿನಲಿ ಇಂದು ರಾತ್ರಿ ಇದೆ ಎಂದಮರಮುನಿ ಸಂದೋಹ ಕೊಂಡಾಡೆ ಇಂದುಮುಖಿಯೊಡ ನಂದು ತಾ ನಾಟ್ಯದ ಮಂದಿರಕೆ ನಗೆ- ಯಿಂದ ಬಂದ ಕುಂತಿನಂದನನು11 ಭಂಡ ಉಡಿಯಲಿ ಕೆಂಡವೊ ಪರರ ಹೆಂಡರ ಸಂಗ ಭೂಮಂಡಲದೊಳೆನ್ನ ಗಂಡರು ಬಲು ಉದ್ದಂಡರು ನಿನ್ನನು ಕಂಡರೆ ಬಿಡರೋ ಹಂಡಿಪರೋ ಲಂಡ ಬಾಯೆಂದು ಮುಕೊಂಡು ಕೈದುಡುಕಿ ಅಂಡಿಗೆಳೆದು ಅಖಂಡಲನ ಭಾಗ್ಯ ಮಂಡೆ ಮೊಗ ಗಲ್ಲ ಡುಂಡು ಕುಚ ಮುಟ್ಟಿ ಬೆಂಡಾದನು 12 ಸಾರಿಯಲ್ಲ ಮಕಮಾರಿಯಿದೆನುತ ಶ- ರೀರ ವತಿ ಕಠೋರವ ಕಂಡು ಜ- ಝಾರಿತನಾಗಿ ನೀನಾರು ಪೇಳೆಂದು ವಿ- ಕಾರದ್ಯಬ್ಬರಿಸಿ ಕೂರ್ರನಾಗಿ ತೋರು ಕೈಯೆಂದು ಸಮೀರನು ಎದ್ದು ವಿ ಚಾರಿಸಿಕೋ ಎನ್ನ ನಾರಿತನವೆಂದು ವೀರ ಮುಷ್ಟಿಯಿಂದ್ಹಾರಿ ಹೊಡೆಯಲು ಕ್ರೂರನು ರಕ್ತವ ಕಾರಿದನು 13 ಹಾರಿ ಹೊಯ್ಯತಲೆ ಮೋರೆಲಿದ್ದ ಕಳೆ- ಸೂರೆಯಾಯಿತು ಪರನಾರೇರ ಮೋಹಿಸಿ ಪಾರಗಂಡವರುಂಟೆ ಶರೀರದೊಳಿದ್ದ ಮಾರುತೇಶ ಹೊರಸಾರಿ ಬರೆ ಧೀರ ಭೀಮರಾಯ ಭೋರಿಡುತ ಹಾರಿ ಕೋರ ಮೀಸೆಯನೇರಿಸಿ ಹುರಿಮಾಡಿ ನಾರಿಮಣಿ ಯಿತ್ತ ಬಾರೆಂದು ಕರೆದು ಸಾರಿದನು ನಿಜಾಗಾರವನು 14 ಸರಸವು ನಿನಗೆ ವಿರಸವು ಆಯಿತು ಕರೆಸೆಲೊ ಈ ಪುರದರಸಾ ಕಳ್ಳನ ನರಸಿಂಹನ ನಿಜ ಅರಸಿಗೆ ಮನವನು ಮಂದರ ಅರಸನೆ ಅರಸಿ ನೋಡುತಿರೆ ವರೆಸಿದನಾ ಜೀವ ದೊರಸೆಯ ಖೂಳನ ಬೆರೆಸಿ ಸವಾಂಗ ಸಿರಿ ವಿಜಯವಿಠ್ಠಲ ಅರಸಿನ ಲೀಲೆಯ ಸ್ಮರಿಸುತಲಿ 15
--------------
ವಿಜಯದಾಸ
ಭೀಮನೆಂಬುವಂಗೆ ಯಾತರ ಭಯವಿಲ್ಲ ಭೀಮರಾಯ ಪ ಕಾಮಿತ ಫಲಗಳ ಕೊಟ್ಟು ನೀ ಸಲಹಯ್ಯ ಭೀಮರಾಯಅ ಅಗಣಿತ ಬಲವಂತ ಭೀಮರಾಯಕಂಜನಾಭನ ದೂತ ಕರುಣಿಸೊ ಬಲವಂತ ಭೀಮರಾಯ 1 ಕಟ್ಟಿದ ಪೂಮಾಲೆ ಕಸ್ತೂರಿ ನಾಮದ ಭೀಮರಾಯ - ಪೊಂಬಟ್ಟೆ ಪೀತಾಂಬರವನುಟ್ಟು ಮೆರೆವಂಥ ಭೀಮರಾಯ2 ವಾರಿಧಿಯನು ದಾಟಿ ಸೀತೆಗುಂಗುರವಿತ್ತ ಭೀಮರಾಯಸೂರಿವೆಗ್ಗಳತನ ಕಿತ್ತು ಈಡಾಡಿದ ಭೀಮರಾಯ3 ರಾಮರಾಯರಿಗೆ ನೀ ಪ್ರೇಮದ ಬಂಟನು ಭೀಮರಾಯಕಾಮಿತ ಫಲವಿತ್ತು ಕರುಣದಿ ಸಲಹಯ್ಯ ಭೀಮರಾಯ 4 ಛಪ್ಪನ್ನ ದೇಶಕ್ಕೆ ಒಪ್ಪುವ ಕಾಗಿನೆಲೆಯ ಭೀಮರಾಯತಪ್ಪದೆ ಕನಕಗೆ ವರಗಳ ಕೊಡುವಂಥ ಭೀಮರಾಯ 5
--------------
ಕನಕದಾಸ
ಭೀಮರಾಯನ ನಂಬಿ ಭೀಮಸೇನನಭೀಮಭವವಾರಿಧಿಯ ಬೇಗದಾಟುವರೆ ನಮ್ಮ ಪ. ಬಕ ಮೊದಲಾದ ಹಿಡಿಂಬಕ ದುರ್ಜನರ ಕೊಂದುಸುಖಪಡಿಸಿದನಂದು ದ್ವಿಜಕುಲಜರಾಗ ಕೂಡ 1 ಜರಾಸಂಧನ ಕೂಡೆ ವರ ಯುದ್ಧವನ್ನೆ ಮಾಡಿಸರಕು ಮಾಡದೆ ಕೊಂದ ಧಾರುಣಿಯೊಳಗೆ ನಿಂದ 2 ಸತಿ ಕೃಷ್ಣೆಯಬಾಧಿಸೆ ಘಾಸಿಮಾಡಲು ವಂದ್ಯರ ಹೇಸದೆ ಮೋಸದಿ ಕೊಂದ3 ಕಡುತೃಷೆಗೆ ದುಶ್ಶಾಸನನೊಡಲ ಬಗಿದು ರಕ್ತಕುಡಿದಂತೆ ತೋರ್ದ ನಮ್ಮೊಡೆಯ ದ್ರೌಪದಿಪ್ರಿಯ 4 ಭೀಮ ತನ್ನ ಮರೆಹೊಕ್ಕ ಸುಜನರ ಕಾವಸ್ವಾಮಿ ಶ್ರೀಹಯವದನ ರಾಮನಾಣೆ ಸತ್ಯವಿದು 5
--------------
ವಾದಿರಾಜ
ಭೀಮಸೇನ ಭಾಮಿನಿಯಾದನು ಪ. ಭೀಮಸೇನ ಭಾಮಿನಿಯಾಗಲುಪ್ರೇಮದ ಸತಿಯ ಕಾಮಿಸಿದವನಝಾಮರಾತ್ರಿಗೆ ಸೀಳುವೆನೆನ್ನುತಸಾಮಜವರದನ ಪಾಡುತಲಿ ಅ.ಪ. ರಾಜಾಧಿರಾಜನು ಗಜಪುರದಲ್ಲಿಜೂಜಾಡಿ ತಮ್ಮ ರಾಜ್ಯವನು ಸೋತುವಿಜಯಮುಖ್ಯ ಅನುಜರೊಡಗೂಡಿಭುಜಂಗಶಾಯಿಯ ಭಜಿಸುತ್ತಸೂಜಿಮೊನೆಯಷ್ಟು ಗೋಜಿಲ್ಲದೆ ಬೇರೆವ್ಯಾಜದಿಂದ ರೂಪಮಾಜಿಕೊಂಡು ಪೋಗೆರಾಜ ಮತ್ಸ್ಯನೊಳು ಭೋಜನ ಮಾಡುತ್ತಪೂಜಿಸಿಕೊಂಬೋ ಸೋಜಿಗವೇನಿದು1 ಮಾನಿನಿ ದ್ರೌಪದಿ ಶ್ರೇಣಿಯೊಳು ಬರುತ ತ್ರಾಣಿ ವಿರಾಟನ ರಾಣಿಯು ಕಾಣುತಧ್ಯಾನಿಸಿ ಯಾರೆಂದು ಮನ್ನಿಸಿ ಕೇಳಲುಮುನ್ನಿನ ಸಂಗತಿ ಪೇಳಿದಳುಆಣಿಮುತ್ತಿನಂಥಾ ವಾಣಿಯ ಕೇಳಲುಕ್ಷೋಣಿಲಿ ನಿನ್ನಂಥ ಜಾಣೆಯ ಕಾಣೆನುಪ್ರಾಣ ನೀನೆನಗೆ ವೇಣಿ ಹಾಕೆನುತಪಾಣಿ ಪಿಡಿದು ಕರೆತಂದಳಾಗ2 ಈಶ ಕೇಳೊ ಪರದೇಶದಿಂದೊಬ್ಬಳುಕೇಶಕಟ್ಟುವಂಥ ವೇಷದಿ ಬಂದಳುಸಾಸಿರಮುಖದ ಶೇಷನೀರೂಪವಲೇಶವು ತಾ ವರ್ಣಿಸಲರಿಯನುವಾಸಮಾಡುವೆನು ಮಾಸಯೀರಾರುಗ್ರಾಸವ ಕೊಟ್ಟೆನ್ನ ಪೋಷಿಸೆಂದಾ ನುಡಿದೋಸನು ಪೇಳಲು ಮೀಸೆಯ ತಿರುವುತಮೀಸಲೆನಗೆಂದು ತೋಷಿಸಿದ 3 ನಾರಿ ಅಕ್ಕನಲ್ಲಿ ಸೇರಿಕೊಂಡಿಹಳುಮೋರೆಯ ನೋಡಲು ಭಾರಿ ಗುಣವಂತೆತೋರುತಲಿದೆ ಎನ್ನ ಸೇರಿದ ಮೇಲನು-ಚಾರಿ ಎನಿಸುವೆ ಮೀರಿದ್ದಕ್ಕೆವಾರೆಗಣ್ಣಿಲೊಂದು ಸಾರಿ ನೋಡ್ಯಾಳೆಂದುಬಾರಿ ಬಾರಿಯಾಕೆ ಮೋರೆ ನೋಡುತಿರೆನೀರೆ ಆ ಕ್ರೂರನ್ನ ಘೋರರೂಪಕಂಜಿಮೋರೆ ತೋರದೆ ಗಂಭೀರದಿಂದಿರೆ 4 ಅಕ್ಕನಿಗೆ ಬಾಚಿ ಹಿಕ್ಕುವ ಸೇವೆಗೆಪುಕ್ಕಟೆ ಅನ್ನಕೆ ಸಿಕ್ಕುವರೆ ನೀನುಚಿಕ್ಕಪ್ರಾಯಕೆನ್ನ ಪಕ್ಕಕ್ಕೆ ಬಂದರೆಸಕ್ಕರೆದುಟಿಸವಿ ದಕ್ಕಿಸುವೆರಕ್ಕಸ ನಿನಗೆ ದಕ್ಕುವಳೆ ನಾನುಮುಕ್ಕಣ್ಣನಾದರು ಲೆಕ್ಕಿಸದಾ ಪತಿಗಕ್ಕನೆ ಬಂದರೆ ತಿಕ್ಕಿ ನಿನ್ನ ಕಾಯದಿಕ್ಕು ದಿಕ್ಕಿಗೆ ಬಲಿಯಿಕ್ಕುವರೊ 5 ಭಂಡಕೀಚಕನುದ್ದಂಡತನ ಕೇಳುಮಂಡೆ ಹಿಕ್ಕುವಳೆಂದು ಕಂಡಕಂಡ ಬಳಿಪುಂಡು ಮಾಡುವನು ಗಂಡಕಂಡರೆ ತಲೆಚಂಡನಾಡುವನು ಖಂಡಿತದಿಮಂಡಲಾಧಿಪನ ಹೆಂಡತಿ ನೀನಮ್ಮಉಂಡಮನೆಗೆ ಹಗೆಗೊಂಡಳೆನ್ನದಿರುಲಂಡನಿಗೆ ಬುದ್ಧಿ ದಂಡಿಸಿ ಪೇಳದೆಹಿಂಡಿಕೊಳ್ಳದಿರು ದುಂಡುಮುಖ 6 ತರಳ ನಿನ್ನಯ ದುರುಳತನದಬೆರಳ ಸನ್ನೆಯು ಗರಳವಾಯಿತೆಸರಳ ಗುರಿಗೆ ಕೊರಳ ಕೊಡದೆಪುರದೊಳಿರದೆ ತೆರಳೊ ನೀಅರಳಮೊಗ್ಗೆಯ ಹೆರಳಿಗ್ಹಾ ಕುತಕುರುಳು ತಿದ್ದುವ ತರಳೆಯ ಕಂಡುಇರಳು ಹಗಲು ಬಾರಳು ಎನ್ನುತಮರುಳುಗೊಂಡರೆ ಬರುವಳೆ 7 ನಿಷ್ಠೆ ಸೈರಂಧ್ರಿಯ ದೃಷ್ಟಿಸಿ ನೋಡಲುನಷ್ಟವಾಗುವುದು ಅಷ್ಟೈಶ್ವರ್ಯವುಭ್ರಷ್ಟ ನಿನಗೆ ನಾನೆಷ್ಟು ಪೇಳಲಿನ್ನುಕಟ್ಟಕಡೆಗೆ ನೀನು ಕೆಟ್ಟಿಕಂಡ್ಯಾಸೃಷ್ಟಿಲಿ ನನ್ನಂಥ ಗಟ್ಟಿಗನ್ಯಾರಕ್ಕದುಷ್ಟರ ಎದೆಯ ಮೆಟ್ಟಿ ಸೀಳುವೆನುಗುಟ್ಟಿಂದ ನಾರಿಯ ಕೊಟ್ಟುಕಳುಹಲುಪಟ್ಟದ ರಾಣಿಯೊಳಿಟ್ಟುಕೊಂಬೆ 8 ಕರವ ಬಾಚಿದನುಬಾಚಿ ಹಿಕ್ಕುವಂಥ ಪ್ರಾಚೀನವೇನಿದುವಾಚನಾಡು ಮೀನಲೋಚನೆ ಎನ್ನಲುಆಚರಿಸಿ ಮುಂದುತೋಚದೆ ಖಳನವಿಚಾರಿಸಿಕೊ ಶ್ರೀಚಕ್ರಪಾಣಿ 9 ಪೊಡವಿಪತಿಗಳ ಮಡದಿ ನಾನಾಗಿಬಡತನವು ಬಂದೊಡಲಿಗಿಲ್ಲದೆನಾಡದೊರೆಗಳ ಬೇಡುವುದಾಯಿತುಮಾಡುವುದೇನೆಂದು ನುಡಿದಳುಕೇಡಿಗ ಕೀಚಕ ಮಾಡಿದ ಚೇಷ್ಟೆಗೆಕಡಲಶಾಯಿ ಕಾಪಾಡಿದ ಎನ್ನನುಆಡಲಂಜಿಕೇನು ಷಡುರಸಾನ್ನದಅಡುಗೆ ರುಚಿಯ ನೋಡುವರೇ 10 ನಡುಗುವೊ ಧ್ವನಿ ಬಿಡುತ ಕಣ್ಣೀರಿಂ-ದಾಡುವ ಮಾತನು ಬಾಡಿದ ಮುಖವನೋಡಿದನಾಕ್ಷಣ ತೊಡೆದು ನೇತ್ರವಬಿಡುಬಿಡು ದುಃಖ ಮಾಡದಿರುಪುಡುಕಿ ನಿನ್ನನು ಹಿಡಿದವನನ್ನು ಬಡಿದು ಯಮಗೆ ಕೊಡುವೆ ನೋಡೀಗತಡವ ಮಾಡದೆ ಗಾಢದಿ ಪೋಗು ನೀಮಾಡಿದ ಚಿಂತೆ ಕೈಗೊಡಿತೆಂದು 11 ಶಶಿಮುಖಿ ಕೇಸರಿ ಗÀಂಧವದಾಸಿಯರಿಂದ ಪೂಸಿಕೊಂಡುಹಾಸುಮಂಚದಲ್ಲಿ ಬೀಸಿ ಕೊಳುತಲಿಗಾಸಿ ಪಡುತಿರೆ ಆ ಸಮಯದಲಿಲೇಸಾಗಿ ನಿನ್ನಭಿಲಾಷೆ ಸಲ್ಲಿಸುವೆಈಸು ಸಂಶಯ ಬೇಡ ಭಾಷೆ ಕೊಟ್ಟೆ 12 ನಳಿನಮುಖಿಯು ಪೇಳಿದ ಮಾತನುಕೇಳಿ ಹರುಷವ ತಾಳಿದನಾಕ್ಷಣಖಳನು ಹೊನ್ನಿನ ಜಾಳಿಗೆಯ[ತೊಟ್ಟಿನ್ನುಳಿಯದಲೆ] ರತಿಕೇಳಿಗಿನ್ನುಕಾಳಗದ ಮನೆಯೊಳಗೆ ಬಾರೆಂದುಪೇಳಿದ ಸುಳುವು ಪೇಳಲು ಭೀಮಗೆಖಳನ ಕಾಯವ ಸೀಳುವವೇಳೆ ಬಂತೆನ್ನುತ ತೋಳ ಹೊಯಿದ 13 ನಾರಿಯಿನ್ಯಾವಾಗ ಬರುವಳೋಯೆಂದುದಾರಿಯ ನೋಡುವ ಚೋರ ಕೀಚಕನುತೋರಿದ ಠಾವಿಲಿ ಸೇರುವ ಬೇಗನೆಊರೊಳಗಾರು ಅರಿಯದಂತೆಕ್ರೂರನು ಮೋಹಿಪತೆರದಿ ಎನಗೆನಾರಿಯ ರೂಪ ಶೃಂಗರಿಸು ನೀನೆಂದುವಾರಿಜಮುಖಿಯ ಮೋರೆಯ ನೋಡಲುನೀರೆ ದ್ರೌಪದಿ ತಾ ನಾಚಿದಳು14 ಬಟ್ಟ ಮುಖಕೆ ತಾನಿಟ್ಟಳು ಸಾದಿನಬಟ್ಟು ಫಣೆಯಲಿ ಇಟ್ಟು ಕಣ್ಣಕಪ್ಪಪಟ್ಟ್ಟೆಪೀತಾಂಬರ ಉಟ್ಟುಕೋ ನೀನೆಂದುಪುಟ್ಟಾಣಿ ಕುಪ್ಪಸ ಕೊಟ್ಟಳಾಗಕಟ್ಟಾಣಿ ಮುತ್ತು ತಾಕಟ್ಟಿ ಕೊರಳಿಗೆಗಟ್ಟ್ಯಾಗಿ ಚಿನ್ನದಪಟ್ಟಿಯುಡುದಾರದಿಟ್ಟನ ಬೆರಳಿಗಿಟ್ಟಳು ಉಂಗುರವಿಟಪುರುಷರ ದೃಷ್ಟಿತಾಕುವಂತೆ15 ಮುತ್ತಿನ ಮೂಗುತಿ ಕೆತ್ತಿದ ವಾಲೆಯುಇತ್ತೆರÀ ಬುಗುಡಿಯು ನೆತ್ತೀಗರಳೆಲೆಚಿತ್ರದ ರಾಕಟೆ ಉತ್ತಮಕ್ಯಾದಿಗೆಒತ್ತೀಲಿ ಶ್ಯಾಮಂತಿಗ್ಹ್ಹೂವು ಗೊಂಡ್ಯಾಹಸ್ತದ ಕಡಗವು ಮತ್ತೆ ಚೂಡ್ಯ ವಂಕಿಮುತ್ತಿನ ಹಾರವು ರತ್ನದ ಪದಕವುಅರ್ತಿಲಿ ನಾರಿಯು ಕುತ್ತಿಗ್ಗ್ಯೆಹಾಕಲುಹಸ್ತಿನಿಯೋ ಈಕೆ ಚಿತ್ತಿನಿಯೊ16 ಮುಡಿಗೆ ಮಲ್ಲಿಗೆ ಮುಡಿಸಿ ಸುಗಂಧತೊಡೆದು ತಾಂಬೂಲ ಮಡಿಸಿಕೊಡುತಪ್ರೌಢನ ಸ್ತ್ರೀರೂಪ ನೋಡಲು ಖಳನುಕೊಡದೆ ಪ್ರಾಣವ ಬಿಡನೆಂದಳುಮಾಡಿದ್ಯೋಚನೆ ಕೈಗೂಡಿತು ಇಂದಿಗೆನೋಡು ಆ ಕೃಷ್ಣನು ಹೂಡಿದ ಆಟವಮಡದಿ ನೀನೆನ್ನ ಒಡನೆ ಬಾರೆಂದುನಡೆದ ಖಳನ ಬಿಡಾರಕೆ 17 ಇಂದುಮುಖಿ ಅರವಿಂದನಯನದ ಮಂದಗಮನೆಯು ಬಂದಳು ಎನ್ನುತನಂದನತನಯನ ಕಂದನ ಬಾಧೆಗೆಕಂದಿ ಕುಂದಿ ಬಹು ನೊಂದೆನೆಂದಹಿಂದಿನ ಸುಕೃತದಿಂದಲಿ ನಿನ್ನೊಳಾ-ನಂದವಾಗಿಹುದು ಇಂದಿಗೆ ಕೂಡಿತುಕುಂದದಾಭರಣ ತಂದೆ ನಾ ನಿನಗೆಚಂದದಿಂದಿಟ್ಟು ನೀನಂದವಾಗೆ18 ಗುಲ್ಲುಮಾಡದಿರೊ ಮೆಲ್ಲಗೆ ಮಾತಾಡೊವಲಭರ್ತಾಕಂಡರೆ ಹಲ್ಲು ಮುರಿವರೊಬಲ್ಲವ ನಿನಗೆ ಸಲ್ಲದು ಈ ಕಾರ್ಯಗೆಲ್ಲಲರಿಯೆ ನೀ ಕೊಲ್ಲಿಸಿಕೊಂಬೆಚೆಲ್ವೆ ಕೇಳು ನಿನ್ನ ಹುಲ್ಲೆಗಣ್ಣ ನೋಟಕೊಲ್ವಬಗೆ ಗೆಲ್ಲಲಾರೆನೆಂದುಗಲ್ಲವ ಮುದ್ದಿಟ್ಟು ಮೈಯೆಲ್ಲ ಹುಡುಕಲುಕಲ್ಲೆದೆಯಲ್ಲ್ಲಿರೆ ಖೂಳ ನೊಂದ 19 ನಾರಿಯೊ ನೀನೇನು ಮಾರಿಯೊ ಇನ್ನೊಂದುಬಾರಿ ನೀ ಎನಗೆ ಮೋರೆ ತೋರಿಸೆಂದಧೀರನ ಸಮೀಪಬಾರದೆ ಓಡುವದಾರಿಯ ನೋಡುತಿರಲಾಗಬಾರದಂಥಾ ಪರದಾರರ ಮೋಹಿಪಕ್ರೂರಗೆ ಈ ರೂಪ ಘೋರವಾಗಿಹುದುಸಾರದ ಮಾತಿದು ಯಾರಾದರೇನೀಗಮಾರನ ತಾಪವ ಪರಿಹರಿಸುವೆ 20 ಸಮೀರಜ ಗುದ್ದಲು ಕೀಚಕಬಿದ್ದನು ಭೂಮಿಲಿ ಗೆದ್ದೆನೆನುತ ಅನಿ-ರುದ್ಧನ ಸ್ಮರಿಸುತಲೆದ್ದ ಭೀಮ 21 ಕೆಟ್ಟ ಕೀಚಕ ತಾ ತೊಟ್ಟ ಛಲದಿಂದಬೆಟ್ಟದಂಥ ದೇಹ ಬಿಟ್ಟಿನ್ನವನಪಟ್ಟಾಗಿ ತೋರುವೆ ದೃಷ್ಟಿಸು ಎನ್ನಲುಭ್ರಷ್ಟನ ನೋಡುವುದೇನೆಂದಳುಕೊಟ್ಟ ಭಾಷೆಯು ಈಗ ಮುಟ್ಟಿತು ನಿನಗೆಕೃಷ್ಣನ ದಯದಿ ಕಷ್ಟವು ಹಿಂಗಿತುಪಟ್ಟಣಕೀಸುದ್ದಿ ಮುಟ್ಟದ ಮುಂಚೆಗುಟ್ಟಲಿ ಪೋಗುವ ಥಟ್ಟನೆಂದ 22 ಅರಸಿ ನಿನ್ನೊಳು ಸರಸ ಬೇಕೆಂದಪುರುಷನ ಜೀವ ಒರೆಸಿ ಕೊಂದೆನುಹರುಷದೀ ಪುರದರಸು ನಮ್ಮನುಇರಿಸಿಕೊಂಡೊಂದೊರುಷವಾಯಿತುಬೆರೆಸಿದ ಸ್ನೇಹಕ್ಕೆ ವಿರಸ ಬಂತೆಂದುಸರಸಿಜಾಕ್ಷಿಯು ಕರೆಸಿ ನಿನ್ನೊಳಗಿರಿಸದಿದ್ದರೆ ಹಯವದನನಸ್ಮರಿಸಿ ಗದೆಯನು ಧರಿಸುವೆ23
--------------
ವಾದಿರಾಜ
ಭೀಷ್ಟದಾಯಕ ಕರುಣದಿ ಪಿಡಿ ಕೈಯಾ ಪ ರಾಮಕೃಷ್ಣ ಪವನಾತ್ಮಜನಂಘ್ರಿ ತಾಮರಸವ ಧೇನಿಸು ಪರಿವ್ರಾಜಾ ಭೀಮತೀರ ಪಿಪ್ಪಲ ಭೂಜ ಮೂಲ ಸೀಮೆಯೊಳಗೆ ರಾಜಿಸುವ ಯತಿರಾಜ 1 ಭೇದ ಮತಾಂಬುಧಿ ಚಂದಿರಾ ಗುರು ವೇದವ್ಯಾಸ ಮುನಿವರ ಸುಕುಮಾರಾ ಸಾಧು ಸದ್ಗುಣಗಣ ಗಂಭೀರನಾದ ಬಾದರಾಯಣನಾಮದಲಿಪ್ಪ ಧೀರಾ 2 ದೇವ ಜಗನ್ನಾಥ ವಿಠಲನ್ನ ಪಾದ ಸೇವಕ ಭೇಡುವೆ ಹರಿಮೂರ್ತಿ ಧ್ಯಾನ ಕೇವಲ ಭಕುತಿ ನಿರ್ಮಲ ಜ್ಞಾನ ವಿತ್ತು ಪಾವನ್ನ ಮಾಡಿ ಪಾಲಿಸೋ ಪ್ರತಿದಿನ 3
--------------
ಜಗನ್ನಾಥದಾಸರು
ಭುವನದೊಳಿವನೆ ಶೂರ ಪ ಭವಬಂಧಗಳ ನಿನ್ನ | ಕುವರನೆ ಬಿಡಿಸುವ ಅ.ಪ ಮಕ್ಕಳ ಕೂಡಿಕೊಂಡು | ನಮ್ಮನೆಗಿವ-| ನೊಕ್ಕಲಿಕ್ಕುವನು ಬಂದು || ಪಕ್ಕನೆ ಓಡುವ | ಸಿಕ್ಕನು ಯೆಮಗಿವ 1 ಒರಗಿದ ಮಕ್ಕಳ | ಕರೆದು ಡಬ್ಬಿಸುವನು 2 ಹಿಂಡಿದ ಪಾಲ್ಮೊಸರು || ಚೆಂಡಾಟದೊಳು ನೆಲ-| ನುಂಡುಂಡು ಕೆಸರಾಯ್ತು 3 ನಿಲುತ ಪಾತ್ರವ ಕೊಂಡು | ಮೆಲುವ ನಾಟಕಧಾರಿ 4 ಬೆಳಗನ್ನು ಮೇಳವಿಸೆ || ಕಳೆದು ತರಿಸುವ ನಾವಿ | ನ್ನುಳಿ (ವು)ಪಾಯವ ಕಾಣೆ 5 ದೊರೆಯದಿದ್ದರೆ ಬೈವನು | ಮನೆಗೆ ಕಿಚ್ಚ-| ನ್ನಿರಿಸುವೆನೆನ್ನುವನು || ವೊರಳೊಳು ವಿಷ್ಠಿಸಿ | ಮರೆಯೊಳಡಗುವ6 ನಿಲದೀಗ ತರಿಸಲ್ಲ(ದೆ) || ಸುಲಿಗೆÉಗಾರಗೆ ತಕ್ಕ | ಬಲುಮೆಯೊಳ್ ಬುದ್ಧ್ದಿಯ-| ನೊಲಿದು ಪೇಳುತಲೆಮ್ಮ | ಕುಲವನುದ್ಧರಿಸವ್ವ 7 ಎಂದು ನಾನಾ ತೆರದಿ | ನಾರಿಯರು ಗೋ-| ವಿಂದನನತಿ ಮುದದಿ || ಗೋಪಿ ಪರಿ ಚಾಡಿ8 ತಕ್ಕ ಪದ್ಧತಿ ಧಾತ್ರಿಗೆ || ಬೆಕ್ಕಸಗೊಳದಿರಿ ಅಕ್ಕು ಸದಾನಂದ 9
--------------
ಸದಾನಂದರು
ಭುವನೇಂದ್ರತೀರ್ಥರ ಸ್ತೋತ್ರ ಭುವನೇಂದ್ರ ಯತಿ ರನ್ನ ಭುವನ ಪಾವನ್ನತವಕದಿಂ ವ್ಯಾಸರಾಯರ ಭಜಿಪ ಘನ್ನ ಪ ಅದ್ವೈತ ಮತ ಕೋಲಾಹಲ ಸುಜ-ನಾಬ್ಧಿ ಸಮೃದ್ಧಿ ಎಂದೆನಿಪ ಮುನಿಪ ||ಸದ್ಧರ್ಮ ಸತ್ತಾಪಸ ಸಕಲ ವಿದ್ಯಾಲಾಪಅದ್ವೈತ ತ್ರಯ ವರ ಪ್ರವರ್ತಕನೇ1 ತಂತ್ರ ಸಾರಾಂತ ಆದ್ಯಂತಗಳ ಅರ್ಥವ ನಿ-ರಂತರದಲಿ ಪೇಳಿ ಹರುಷದಿಂ ||ಮಂತ್ರೋಪದೇಶವಂ ಮಾಡಿ ಮುದ್ರೆಯನಿತ್ತುಯಂತ್ರವಾಹಕನ ತೀರ್ಥವನೆರೆದ ಧೀರ 2 ಮುನಿ ಕುಲೋತ್ತಮ ಶ್ರೀ ವರದೇಂದ್ರ ತೀರ್ಥಕರಕಮಲ ಸಂಜಾತ ಭುವನ ವಿಖ್ಯಾತ ||ಅನಿಮಿತ್ತ ಬಂಧು ಗುರು ಮೋಹನ್ನ ವಿಠಲನ್ನಕ್ಷಣ ಬಿಡದೆ ಧೇನಿಸುವ ಗುರುವೇ ಸುರತರುವೇ 3
--------------
ಮೋಹನದಾಸರು
ಭೂತನಾಥ ಪಾಲಿಸೆನ್ನ ನಾರಾಯಣ ಭೂತನಾಥನೆ ಪಾಲಿಸೆನ್ನ ಪ ಸ್ವರ್ಣದಿ ಭಾಸುರಾಂಗ ಶ್ರೀರಾಜರ ಸ್ವರ್ಣದ ಪಾಲಕಿಯನ್ನು ಮುಂಭಾಗದಿ ಭಕುತಿಯಿಂದಲಿ ಪೊತ್ತ ಶ್ರೀ ಭೂತರಾಜ 1 ಬದರಿಕಾಶ್ರಮದಿಂದ ನದಿಯ ತಾತನ ದಿವ್ಯ ಸದನವ ಶ್ರೀಸೋದಾಕ್ಷೇತ್ರಕ್ಕೆ ತರಲು ಬೆದರದೆ ವಿಘ್ನವ ತಂದ ದೈತ್ಯನ ರಥ ಚಕ್ರದಿಂದಲಿ ಕೊಂದು ರಥವ ಬೇಗದಿ ತಂದೆ 2 ಧನಪನ ಕೋಶದೊಳಿಪ್ಪ ಮೌಳಿಯ ವೇಗ - ದಿಂದಲಿ ನೀ ತಂದು ವಾದಿರಾಜರಿಗಿತ್ತೆ ಅನುಮಾನವಿಲ್ಲದೆ ತಂದು ಶ್ರೀರಾಜೇಶ ಹಯಮುಖನನ ಚರಾಗ್ರಣಿಯಾಗಿ ಮೆರೆದೆ 3
--------------
ವಿಶ್ವೇಂದ್ರತೀರ್ಥ
ಭೂಮ ಇಡುಬಾರೆ ದ್ರುಪದರಾಯನರಸಿ ಭೀಮಧರ್ಮಾರ್ಜುನ ನಕುಲ ಸಾದೇವ ದ್ರೌಪದಿ ಕುಳಿತ ಎಲೆಗೆ ಪ ಮಂಡಿಗೆ ಗುಳ್ಳೋರಿಗೆಯು ಬುಂದ್ಯ ಚಕ್ಕುಲಿ ಕರ್ಜಿಕಾಯಿ ಚೆಂದದ ಶಾಲ್ಯಾನ್ನ ಶಾವಿಗೆಫೇಣಿಗಳು ಎಣ್ಣೋರಿಗೆಯು1 ಹಪ್ಪಳ ಸಂಡಿಗೆಯು ಶಾವಿಗೆ ಬಟ್ಟಿವಿ ಮಾಲತಿಯು ಗೌಲಿ ಬಟ್ಟಲೋಳ್ ತುಂಬಿಟ್ಟು ಪರಡಿ ಪಾಯಸಘೃತ ಸಕ್ಕರೆಯು 2 ಕುಸುಮ ಮಲ್ಲಿಗೆ ಮುಡಿದು ನಡೆದು ಬಂದು ಭೀಮೇಶಕೃಷ್ಣ ಸಖರ್ಹೊಂದಿ ಕುಳಿತರು ಕೃಷ್ಣೆಸಹಿತ3
--------------
ಹರಪನಹಳ್ಳಿಭೀಮವ್ವ
ಭೂಮಂಡಲಕೆ ಮಿಗಿಲೆನಿಸಿದ ತಾಯಿಕಂಡು ಬಂದೆನೆ ಪಾಂಡವರ ಭಾಗ್ಯವ ಪ. ಸಂಭ್ರಮದಿರಾಯನು ತುಂಬಿಸಿದ ಮನೆಯೊಳಗೆ ಉಂಬೊ ಪದಾರ್ಥ ಕೋಟಿ ಫಲಕದಳಿ ತಿಂಬೊ ಪದಾರ್ಥ ಕೋಟಿಷಡ್ರಸವೆಂಬೊ ಪದಾರ್ಥ ಕೋಟಿಈ ತೂಗಿಕೊಂಬ ಮಣಿಮಂಚ ಕೋಟಿ ತಾಯಿ1 ವಿತ್ತ ಕೋಟಿಯು ರಾಶಿ ರಾಯನಚಿತ್ತ ಸಂತೋಷ ರಾಶಿ 2 ಏಸುಮುನಿ ಬಳಗ ದಾಸರು ದಾಸಿಯರು ಬೀಸಿ ತೊಟ್ಟಿಲವ ತೂಗÀುವರುಮಕ್ಕಳನ ಸೋಸಿಲೆ ಕರೆದೊಯ್ಯುವರುಮಂಚದಲಿ ಹಾಸಿಗೆ ಹಾಸುವರು ರಾಯಗೆ ಈ ಬಗೆ ಸೇವಕರು ತಾಯೆ 3 ಎಲ್ಲ ಮನೆಯೊಳಗೆ ಮಲ್ಲಿಗೆ ಸಂಪಿಗೆ ಅಲ್ಲೆ ಕ್ಯಾದಿಗೆದವನವುಬುಕ್ಕಿಟ್ಟು ಅಲ್ಲಲ್ಲೆ ಶ್ರೀಗಂಧವುಎಲಿ ಅಡಕಿ ಅಲ್ಲಲ್ಲಿ ತಬಕಿಹೋದುರಾಯಗೆ ಈ ಬಗೆ ಸೇವಕರು ತಾಯೆ 4 ಆನೆಗಳು ಕಟ್ಯಾವ ಕುದರಿಯ ಸಾಲು ರಥಗಳು ಇಟ್ಟಾವ ಬಿಲ್ಲುಗಳು ಪಲ್ಲಕ್ಕಿ ಧಿಟ್ಟಾದ ವಯಿರಗಳು ರಮೆ ಅರಸಗಿಷ್ಟು ಉಪಚಾರಗಳು ತಾಯೆ 5
--------------
ಗಲಗಲಿಅವ್ವನವರು
ಭೂಮಿಯನೆ ಬಿಡಿಸೋ ಭೂದೇವಿ ರಮಣಾ ನಾ ಮಾಡುವೆ ನಿನಗೆ ಶರಣಾ ಪ. ಕರಿ ಕರಿಯಾ ಸಂಸಾರ ಥೆರಿಯಾ ಅ.ಪ. ಯನ್ನಿಂದ ದುಷ್ಟಕಾರ್ಯವನು ಮಾಡಿಸಿದಿಯೋ ನೀನು ಇಷ್ಟು ನಾನೀಗ ಉದಾಶೀನಳಾಗಿ ಇರುವೊದುಕಿಂತಾ ವೊಂದಷ್ಟು ಪ್ರಾಣವನು ಬಿಡಿಸೊ ಶ್ರೀಶಾ ಶ್ರೀನಿವಾಸಾ 1 ಸರ್ವಜ್ಞರ ಮತದೊಳಗೆನ್ನ ಪುಟ್ಟಿಸಿದೆಯೋ ಅಜ್ಞಾನ ಅಧಃಪತದಲಿ ಮಗ್ನಳಾಗಿರುವೆನು ಸುಜ್ಞಾನವನು ನಾನರಿಯೆನು ಭವಾಬ್ಧಿಯನು ದಾಟಿಸು ನೀನು 2 ದುರ್ಜನರ ಸಂಗವಾ ಕೊಡಬ್ಯಾಡ ಸಜ್ಜನರ ಸಂಗವ ಕೊಡು ಬ್ಯಾಗ ಮೂರ್ಜಗದೊಡೆಯನೇ ನೀಯನ್ನ ಪಾಲಿಸಯ್ಯ ಕಾಳಿಮರ್ಧನ ಕೃಷ್ಣರಾಯ 3
--------------
ಕಳಸದ ಸುಂದರಮ್ಮ
ಭೂಷಣಕೆ ಭೂಷಣ ಇದು ಭೂಷಣಶೇಷಗಿರಿವಾಸ ಶ್ರೀವರ ವೆಂಕಟೇಶ ಪ ನಾಲಿಗೆಗೆ ಭೂಷಣ ನಾರಾಯಣ ನಾಮಕಾಲಿಗೆ ಭೂಷಣ ಹರಿಯಾತ್ರೆಯುಆಲಯಕೆ ಭೂಷಣ ತುಲಸಿ ವೃಂದಾವನ ವಿಶಾಲ ಕರ್ಣಕೆ ಭೂಷಣ ವಿಷ್ಣು ಕಥೆಯು 1 ದಾನವೇ ಭೂಷಣ ಇರುವ ಹಸ್ತಂಗಳಿಗೆಮಾನವೇ ಭೂಷಣ ಮಾನವರಿಗೆಜ್ಞಾನವೇ ಭೂಷಣ ಮುನಿಯೋಗಿವರರಿಗೆಮಾನಿನಿಗೆ ಭೂಷಣ ಪತಿಭಕ್ತಿಯು 2 ಮಣಿ ಕೊರಳಿಗೆ ಭೂಷಣರಂಗವಿಠಲ ನಿಮ್ಮ ನಾಮ ಅತಿ ಭೂಷಣ 3
--------------
ಶ್ರೀಪಾದರಾಜರು