ಒಟ್ಟು 4117 ಕಡೆಗಳಲ್ಲಿ , 123 ದಾಸರು , 2899 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದಾನು ಬಂದಾನು ಪ ಬಂದನಾಗ ಗೋವಿಂದ ಯದುಕುಲಾ ನಂದ ಮುಕುಂದನು ಮಂದಹಾಸದಲಿ ಅ.ಪ. ಬೀದಿ ಬೀದಿಯೊಳು ಬಲು ಶೃಂಗಾರ ಬಗೆ ಬಗೆ ತೋರಣದಿಂದಲಂಕಾರ ಕಾದುನಿಂತಿಹ ಜನ ಪರಿವಾರ ಮೋದದಿ ಮಾಡುವ ಜಯ ಜಯಕಾರ ಮೇದಿನಿ ಸುರರಾಮ ಮಂತ್ರದ ಉಚ್ಚಾರ ಸೌಧಗಳಲ್ಲಿಹ ಸ್ತ್ರೀಯರಪಾರ ಸಾಧರದಿಂದೀಕ್ಷಿಸೆ ಜನನಿ ಕರವು ಮೋದವೆ ಬೀರುತ ಯಾದವ ಕುಲಮಣಿ 1 ಸುಂದರಿಯರು ನಲವಿಂದ ನಿಂದಿಹರು ಗಂಧ ಪರಿಮಳದ ಜಲವೆರಚಿಹರು ಅಂದದರಳ ಪುಷÀ್ಪಗಳ ವರ್ಷಿಪರು ಕುಂದಣದಾರತಿಗಳ ಪಿಡಿದಿಹರು ವಂದಿಮಾಗಧರು ಪೊಗಳುತಿಹರು ಚಂದದಿ ಮಣಿಮಯ ಸ್ಯಂದನದಲಿ ಅರ ವಿಂದ ನಯನ ಬಲು ಸುಂದರಾಗನು 2 ಬಂಗಾರದ ರಥವೇರಿ ಬರುತಿಹನು ಕಂಗಳಿಗುತ್ಸವ ತಾ ತರುತಿಹನು ಮಂಗಳಕರ ತಿಲಕವನಿಟ್ಟಿಹನು ಬಂಗಾರದ ಮಕುಟ ಧರಿಸಿಹನು ಶೃಂಗಾರದ ಶಿಸ್ತಲಿ ಶೋಭಿಪನು ಅಂಗಜಕೋಟಿ ನಿಭಾಂಗನಾಗಿಹನು ಮಂಗಳಾಂಗ ಶ್ರೀರಂಗ ಕರಿಗಿರಿ ನೃಸಿಂಗನು ಕರುಣಾಪಾಂಗವ ಬೀರುತ 3
--------------
ವರಾವಾಣಿರಾಮರಾಯದಾಸರು
ಬಂದಾರೆ ಅತ್ತಿಗೆಯರು ಚಂದನೋಡಿರೆಚಂದ ನೋಡಿರೆ ಇಂದಿರೇಶನ ಮುದ್ದುತಂಗಿಯರು ಕರೆಯಲು ಬಂದಾರೆ ಪ. ಸಾಲು ದೀವಿಗೆಯಂತೆ ಬಾಲೆಯರು ನಿಂತಾರೆ ಮ್ಯಾಲೆ ಸುಭದ್ರೆ ದ್ರೌಪತಿಯೆ ಇಂದೀವರಾಕ್ಷಿಮ್ಯಾಲೆ ಸುಭದ್ರೆ ದ್ರೌಪತಿ ನುಡಿದಳು ಮೇಲೆಂದು ನಿಮ್ಮ ದೊರೆತನ ಇಂದೀವರಾಕ್ಷಿ 1 ಕೃಷ್ಣನ ಮಡದಿಯರು ಎಷ್ಟು ದಯವಂತರು ಅಷ್ಟೂರಲ್ಲಿದ್ದ ಗರುವನೆಅಷ್ಟ್ಟೂರಲ್ಲಿದ್ದ ಗರುವನೆ ತುರುಬಿಗೆ ಮಲ್ಲಿಗೆ ಮಾಡಿ ಮುಡಿದಾರೆ2 ಫುಲ್ಲನಯನರ ದೈವ ಎಲ್ಲಿವರ್ಣಿಸಬೇಕುಎಲ್ಲರಲ್ಲಿದ್ದ ಗರುವನೆ ಎಲ್ಲರಲ್ಲಿದ್ದ ಗರುವನೆ ತಮ್ಮಲ್ಲಿಟ್ಟುಕೊಂಡಾರೆವಿನಯದಿ ಸಖಿಯೆ ಇಂದೀವರಾಕ್ಷಿ 3 ಹಿರಿಯ ಅತ್ತಿಗೆ ತಾನು ಗರುವಿನ ಸೀರೆಯನುಟ್ಟುಬರಿಯ ಬಿಂಕದ ಕುಪ್ಪುಸವ ತೊಟ್ಟುಬರಿಯ ಬಿಂಕದ ಕುಪ್ಪುಸವ ತೊಟ್ಟುಕರೆಯಲಿ ನಮ್ಮ ಇದುರಿಗೆ ಇಂದೀವರಾಕ್ಷಿ4 ಮಡದಿ ಸತ್ಯಭಾಮೆ ಬಡಿವಾರದ ಸೀರೆಯನುಟ್ಟುಕಡುಕೋಪವೆಂಬೊ ಕುಪ್ಪುಸವಕಡುಕೋಪವೆಂಬೊ ಕುಪ್ಪುಸವ ತೊಟ್ಟುಒಡಗೂಡಿ ನಮ್ಮ ಕರೆಯಲು ಇಂದೀವರಾಕ್ಷಿ5 ಅಷ್ಟು ಮಡದಿಯರು ಅತಿ ಸಿಟ್ಟಿನ ಸೀರೆಯನುಟ್ಟುಅಷ್ಟ ಮದವೆಂಬೊ ಕುಪ್ಪುಸವಅಷ್ಟ ಮದವೆಂಬೊ ಕುಪ್ಪುಸವ ತೊಟ್ಟುಧಿಟ್ಟಯರು ನಮ್ಮ ಕರೆಯಲು ಇಂದೀವರಾಕ್ಷಿ6 ಭಾಪುರಿ ಅತ್ತಿಗೆಯರು ಕೋಪದೊಸ್ತಗಳಿಟ್ಟುಭೂಪರಾಮೇಶನ ಮಡದಿಯರುಭೂಪರಾಮೇಶನ ಮಡದಿಯರು ಬಂದರೆದ್ರೌಪತಿ ದೇವಿಯ ಕರೆಯಲು ಇಂದೀವರಾಕ್ಷಿ 7
--------------
ಗಲಗಲಿಅವ್ವನವರು
ಬಂದಿದೆ ದೂರು ಬರಿದೆ ಪಾಂಡವರಿಗೆ ಪ ಕೊಂದವರಿವರು ಕೌರವರನೆಂಬಪಕೀರ್ತಿ ಅ ಮುನ್ನಿನ ವೈರದಿ ಕಡು ಸ್ನೇಹವ ಮಾಡಿಉನ್ನತ ಲೆತ್ತ ಪಗಡೆಯಾಡಿಸಿತನ್ನ ಕುಹಕದಿಂದ ಕುರುಬಲವ ಕೊಂದವನುಘನ್ನಘಾತಕ ಶಕುನಿಯೊ ಪಾಂಡವರೊ 1 ಮರಣ ತನ್ನಿಚ್ಛೆಯೊಳುಳ್ಳ ಗಾಂಗೇಯನುಧುರದೊಳು ಷಂಡನ ನೆಪದಿಂದಲಿಸರಳ ಮಂಚದ ಮೇಲೆ ಮಲಗಿ ಮೊಮ್ಮಗನಕೊರಳ ಕೊಯ್ದವನು ಭೀಷ್ಮನೊ ಪಾಂಡವರೊ 2 ಮಗನ ನೆಪದಿ ಕಾಳಗವ ಬಿಸುಟು ಸುರನಗರಿಗೈದಲು ವೈರಾಗ್ಯದಲಿಜಗವರಿಯಲು ಕುರುವಂಶಕ್ಕೆ ಕೇಡನುಬಗೆದು ಕೊಂದವನು ದ್ರೋಣನೊ ಪಾಂಡವರೊ3 ತೊಟ್ಟ ಬಾಣವ ತೊಡಲೊಲ್ಲದೆ ಮಾತೆಗೆಕೊಟ್ಟ ಭಾಷೆಗೆ ಐವರ ಕೊಲ್ಲದೆನೆಟ್ಟನೆ ರಣಮುಖದಲಿ ತನ್ನ ಪ್ರಾಣವಬಿಟ್ಟು ಕೊಂದವನು ಕರ್ಣನೊ ಪಾಂಡವರೊ 4 ಮಥನಿಸಿ ಸೂತತನವ ಮಾಡಿ ರಣದೊಳುಅತಿಹೀನಗಳೆಯುತ ರವಿಸುತನರಥದಿಂದಿಳಿದು ಪೋಗಿ ಕೌರವಬಲವನುಹತ ಮಾಡಿದವನು ಶಲ್ಯನೊ ಪಾಂಡವರೊ 5 ಜಲದೊಳು ಮುಳುಗಿ ತಪವ ಮಾಡಿ ಬಲವನುಛಲದಿಂದೆಬ್ಬಿಸಿ ಕಾದುವೆನೆನುತಕಲಿ ಭೀಮಸೇನನ ನುಡಿಗೇಳಿ ಹೊರವಂಟುಕುಲವ ಕೊಂದವನು ಕೌರವನೊ ಪಾಂಡವರೊ6 ಕವುರವ ಪಾಂಡವರಿಗೆ ಭೇದ ಪುಟ್ಟಿಸಿಪವುಜೊಡ್ಡಿ ಕುರುಕ್ಷೇತ್ರದಿ ಕಾದಿಸಿಸವುಶಯವಿಲ್ಲದೆ ಕುರುಬಲವ ಕೊಂದವನುಹಿವುಸಕನಾದಿಕೇಶವನೊ ಪಾಂಡವರೊ 7
--------------
ಕನಕದಾಸ
ಬಂದಿದ್ದನೆ ರಂಗ ಬಂದಿದ್ದನೆ ಕೃಷ್ಣ ಬಂದಿದ್ದನೆ ಪ. ಬಂದಿದ್ದನೆ ನಮ್ಮ ಮಂದಿರದೊಳು ಬೆಳ ದಿಂಗಳ ತೆರದೊಳು ಬಂದಿದ್ದನೆ ಅ.ಪ. ಗೆಜ್ಜೆ ಕಾಲ್ಕಡಗ ಸಜ್ಜಿನಿಂದಿಟ್ಟು ಕರ ಕ್ಷಿತಿ ತಳ ವಂದಿತ ಸತಿ ಪದುಮಾವತಿ ಲಕುಮಿ ಸಹಿತ ಕೃಷ್ಣ 1 ರವಿಯ ಕಾಂತಿ ಕೋಟಿ ಪ್ರಭೆ ಕಿರೀಟವು ವರದ ಮಾಧವನು2 ಚತುರ ಹಸ್ತದಿ ಶಂಖ ಚಕ್ರಗದಾ ಪದ್ಮ ಸತಿ ತುಳಸಿಯ ಮಾಲಧರನೆ ಜತೆ ತನ್ನ ಭಕ್ತರ ಹಿತದ ಪೂಜೆಯಗೊಂಡು ವಿತತ ವೈಭವದಿಂದ 3 ವರಪ್ರದ ವೆಂಕಟ ವರಗಳ ನೀಡುತ ತನ್ನ ಚರಣ ತೋರುತ ಭಕ್ತರಿಗೆ ಕೇಸರಿ ತೀರ್ಥವ ಕರುಣದಿ ತೋರುತ ಕರಿವರದ ಕೃಷ್ಣ 4 ಪಂಚಾಮೃತದಭಿಷೇಕವ ಕಂಡೆನೆ ಎನ್ನ ಸಂಚಿತಾರ್ಥದ ಪುಣ್ಯದ ಫಲದಿ ಮಿಂಚಿದ ಪಾಪವ ಕಳೆದರತಿಹರುಷದಿ ಹಂಚಿ ವರದ ಹಸ್ತ ಕಂಚಿ ವರದ ತೋರೆ ಬಂದಿದ್ದನೆ 5 ಕಂಕಣ ಕೈಯೊಳು ಧರಿಸಿಹನೆ ದಿವ್ಯ ಹೇಮ ಶೋಭಿತನೆ ಕಿಂಕರ ವರದ ಮಾಂಗಲ್ಯ ಕಟ್ಟಿದ ಸತಿ ಶಂಕರಾದಿ ಸ್ತುತ ವೆಂಕಟರಮಣನು 6 ಸುರವರÀ ವಂದ್ಯಗೆ ಆರತಿ ಎತ್ತಲು ಕೇಸರಿ ತೀರ್ಥವ ನೀಡಿದನೆ ವರ ಪ್ರಸಾದದ ಮಹಿಮೆಯ ತೋರುತ ಶರಧಿ ಗಂಭೀರನು 7 ಉರುಟಣಿಯ ಮಾಡಿದ ವರಸತಿ ಜತೆಯಲಿ ವರ ಶೇಷಾಚಲನು ತಾನೆ ಹರುಷವ ಬೀರುತ ವರ ಶೇಷನ ಮೇಲೆ ಮೆರೆವ ಶಯನಗೊಂಡು ಹರುಷದಿ 8 ಗಂಧ ಪುಷ್ಪ ತಾಂಬೂಲವಗೊಂಡನೆ ತಂಡ ತಂಡ ಭಕ್ತರ ವಡೆಯ ಉದ್ದಂಡ ಭಕ್ತರಿಗೆ ಉದ್ದಂಡ ವೆಂಕಟ 9 ನಾಟಕಧಾರಿ ತಾ ವಧೂಟಿ ಭೂಪ ಲಕ್ಷ್ಮಿ ಸಹ ನೋಟಕರಿಗೆ ಆನಂದ ತೋರಿದನೆ ಧಾಟಿಧಾಟಿ ರಾಗದಿ ಭಕ್ತರು ಸ್ತುತಿಸೆ ಸಾಟಿಯಿಲ್ಲದ ವೈಭವವ ತೋರುತ ಕೃಷ್ಣ 10 ಕರವ ಮುಗಿದು ಸ್ತೋತ್ರವ ಮಾಡಿದೆನೆ ಎನ್ನ ಕರೆದಾದರಿಸು ಹರಿಗೆ ನಿರುತ ಎಮ್ಮನು ಹಯನೇರಿದನೆ ಭಯಕೃದ್ಭಯ ಹಾರಿ 11
--------------
ಸರಸ್ವತಿ ಬಾಯಿ
ಬಂದು ನಿಲ್ಲೋ | ಕಣ್ಣ ಮುಂದೆ ಪ ಬಂದು ನಿಲ್ಲೋ ನಿನ್ನ ಪಾದಕ್ಕೆ ವಂದಿಪೆ ಇಂದಿರೆಯರಸಾ ಗೋವಿಂದ ಮುಕುಂದಾ ನೀ ಅ.ಪ. ಅರಳಿದ ಕೆಂದಾ | ವರೆಯ ಧಿಕ್ಕರಿಸುವ ಚರಣಾರವಿಂದವ | ನಿರುತ ತೋರು ನೀನು 1 ಭ್ರಮರ ಕುಂಡಲ ಮಂಡಿತ || ಮೇಲಾದ ರಾಕೇಂದು | ಮುಖವ ತೋರಿಸುತಲೀ2 ಪದುಮನೇತ್ರನೆ ನಿನ್ನ | ಸದನವೆನುತಯೆನ್ನ || ಹೃದಯದೊಳಗೆ ನಿಂತು ನಾ | ಮುದದಿ ಭಜಿಸುವಂತೇ 3 ಕರಿಯ ಮೊರೆಯ ಕೇಳಿ | ಕರುಣದಿಂ ಬಂದಂತೆ || ಕರೆದಾಗ ನಿನ್ನ ದಿವ್ಯ | ಚರಣಾವ ತೋರಿಸುತಾ4 ಅಜಭವಾದಿಗಳಿಗೆ | ನಿಜಪದವನಿತ್ತಂತೆ || ಭಜಿಪ ಭಕ್ತರಿಗೊಲಿವ | ವಿಜಯವಿಠ್ಠಲರೇಯಾ5
--------------
ವಿಜಯದಾಸ
ಬಂದು ನಿಲ್ಲೋ ಶ್ರೀಹರೇ-ಬಂದುನಿಲ್ಲೊ ಪ ಇಂದು ಹಿಂದು ನೀನೆಂದಿಗು ತಂದೆ ಗೋ- ವಿಂದ ಅನಿಮಿತ್ತಬಂಧು ಕಣ್ಣಮುಂದೆ ಅ.ಪ ಸ್ವಾಂಶದಿಂದ ಅಭಿವ್ಯಕ್ತಿಯಾದೆ ಪಂ- ಚಾಂಶತೋರಿ ಸರಸ ಜನನ ಮಾಡಿದೆ ಸ್ವಾಂಶನಾಗಿ ಅವತರಿಸಿ ಮೆರೆವ ಸ- ರ್ವಾಂಶದಿಂದಿಹ ತ್ರಿಂಶ ರೂಪನೇ 1 ಸ್ವಗತಭೇದವಿವರ್ಜಿತನೆನಿಸಿ ತ್ರಿಗುಣಮಯದಿ ಬ್ರಹ್ಮಾಂಡ ನಿರ್ಮಿಸಿ ಅಗಣಿತಮಹಿಮಾಧಾರನಾಗಿ ನಿಂದು ಮಿಗೆ ಶೋಭಿಸುವ ವಿರಾಟಮೂರುತಿಯೆ2 ಕಾರಣನೆನಿಸಿದ ಕರ್ಮನಿವೃತ್ತಿಗೆ ಸಾರವಾದ ಜ್ಞಾನಯೋಗ ಮಾರ್ಗವ ನಾರದಾದಿ ಮಹಾಮುನಿಗಳಿಗರುಹಿದ ನರನಾರಾಯಣ ಬದರಿ ಆಶ್ರಯನೇ 3 ಹಂಸಕಪಿಲ ದತ್ತಾತ್ರೇಯ ರೂಪನೆ ಹಂಸರಹಸ್ಯಗಳೆಲ್ಲವ ಪೇಳಿ ಸಂಶಯ ಬಿಡಿಸಿದೆ-ಜೀವಪರಮಾತ್ಮರ ಅಂಶಗಳರುಹಿದ ಹಂಸಮೂರುತಿಯೆ4 ಅಜಪಿತ ನೀ ಗಜರಾಜನ ಸಲಹಿದೆ ಭಜಿಸಿದ ವಾಲಖಿಲ್ಯರ ಕಾಯ್ದೆ ಅಜಹತ್ಯವು ವೃತ್ರವಧೆಯಿಂದ ಕಾಯ್ವ ಬಿ- ಡೌಜನ ಸಲಹಿದ ಗಜರಾಜ ವರದಾ5 ಪುರುಹೂತನ ಅಹಂಕಾರ ಖಂಡಿಸಿ ಕಿರುಬೆರಳಲಿ ಗೋವರ್ಧನಗಿರಿ ಎತ್ತಿ ಪರಿಪಾಲಿಸಿ ಗೋಬೃಂದವನೆಲ್ಲವ ಸುರರಿಂದ ಪೊಗಳಿಸಿಕೊಂಡೆ ಗೋವಿಂದ6 ಬುಧರರಿಯುಲು ಆ ವೇದ ವಿಭಾಗಿಸೆ ಉದಯಿಸಿ ಮುದದಿಂದ ಬದರಿಯ ಸದನದಿ ಬೋಧಿಸುತ್ತಲಿಹ ಬಾದರಾಯಣನೇ7 ಅಖಿಳಾಂಡಕೋಟಿಬ್ರಹ್ಮಾಂಡನಾಯಕ ವಿಕುಂಠಳೆಂಬೊ ಉದರದಿ ಜನಿಸಿ ಲಕುಮಿರೂಪಿಯಾದ ಸುಂದರಿಯ ಕೂಡ ಭೂ- ವೈಕುಂಠ ನಿರ್ಮಿಸಿದ ವೈಕುಂಠಮೂರುತಿಯೆ 8 ಸತ್ಯವ್ರತನೆಂಬೊ ಮನುವಿನುದ್ಧರಿಸಿ ಉತ್ತಮ ಔಷಧಿಗಳೆಲ್ಲವ ಸಲಹಿದೆ ದೈತ್ಯನಾದ ಉನ್ಮತ್ತನ ಕೊಂದು ಶ್ರುತಿಯ ತಂದಿತ್ತ ಮತ್ಸ್ಯಮೂರುತಿಯೆ 9 ಸುರಭಿನೆವನದಿ ಶರಧಿಮಥಿಸೆ ತಾ ಭರದಿ ಬೆನ್ನೊಳು ಧರಿಸಿಹೆ ಮಂದರ ಗಿರಿಧರನೆನಿಸಿದೆ ಕಮಠರೂಪನೆ 10 ಪ್ರಳಯ ಜಲಧಿಯೊಳು ಇಳೆಯನು ಕದ್ದಾ ಖಳಹಿರಣ್ಯನಾ ಶಿರವ ಚೆಂಡಾಡಿ ಜಲಧಿಯ ಶೋಧಿಸಿ ಇಳೆಯನು ತಂದು ಜಲಜಸಂಭವಗಿತ್ತ ಕ್ರೋಢರೂಪನೆ 11 ದುರುಳತನದಿ ತನ್ನ ತರಳನ ಬಾಧಿಪ ಹಿರಣ್ಯಕಶಿಪುವಿನ ಉದರವ ಬಗೆದು ಶರಣನಿಗಭಯವ ಕರುಣಿಸಿ ತೋರಿದ ಸರ್ವವ್ಯಾಪ್ತನೆಂದರುಹಿದ ನರಹರಿಯೇ12 ಬಲಿಯಿಂದಪಹೃತವಾದ ಸಾಮ್ರಾಜ್ಯವ ಸುಲಭದಿಂದಲಿ ಪುರಂದರಗಿತ್ತು ಸಲಹಿದೆ ಒಲಿದು ಬಲಿಯ ಭಕ್ತಿಗೆ ನೀ ಬಾ- ಗಿಲ ಕಾಯ್ದ ವಟು ವಾಮನನೆ 13 ದುರುಳತನದಿ ಆ ಹೈಹಯರೆಂಬ ನರಪರದುರ್ಮದ ಮರ್ದಿಸಲೋಸುಗ ನೃಪರ ಶಿರವನೆಲ್ಲ ತರಿದು ನಿಗ್ರಹಿಸಿದ ಭಾರ್ಗವ ಮೂರ್ತೇ 14 ಶರಧಿ ಬಂಧಿಸಿ ಸೇತುಕಟ್ಟಿ ಕಪಿ- ವೀರರೊಡನೆ ಆ ರಾವಣನಡಗಿಸಿ ಭೂ ಭಾರವನಿಳುಹಿಸಿ ಭೂಮಿಜೆಯನು ತಂದ ಅ- ಸುರ ಮರ್ದನ ದಾಶರಥಿ ರಾಘವ 15 ವಸುಮತಿಭಾರವನಿಳುಹಲೋಸುಗ ವಸುದೇವಸುತ ಶ್ರೀಕೃಷ್ಣನೆನುತಲಿ ಶಿಶುಪಾಲಾದಿಗಳಾಂತಕನೆನಿಸಿದ ಶಶಿಮುಖಿರುಕ್ಮಿಣಿ ಸಹಿತ ಶ್ರೀಕೃಷ್ಣ 16 ವೇದ ಕರ್ಮಗಳಿಗನರ್ಹರೆಲ್ಲರು ಸಾದರದಿಂದಲಿ ಅಧಮರೆಸಗುತಿರೆ ವೇದವಿರುದ್ದವಾದಗಳಿಂದಲೇ ಮೋಹವ ತೋರಿದೆ ಬುದ್ಧಸ್ವರೂಪನೆ17 ದುರುಳತನದಿ ಇಳೆಯಾಣ್ಮರುಗಳು ಕ್ರೂರತನದಿ ಪರಪೀಡಕರಾಗಿರೆ ಪರಿಹರಿಸಲು ಭೂಭಾರಕ್ಕಾಗಿ ಅವ- ತರಿಸಿ ಮೆರೆಯುವ ಕಲ್ಕಿರೂಪನೆ 18 ಏಕರೂಪ ಅನೇಕರೂಪನೆ ಏಕಮೇವ ನೀ ಪ್ರಕಟ ಮಾಡುವೆ ಪಿನಾಕಿ ಪ್ರಮುಖರು ಏಕದೇಶದಿ ಸಾಕಲ್ಯವ ತಿಳಿಯರೊ 19 ದೋಷದೂರ ಶೇಷಾಚಲವಾಸ ಪೋಷಿಸೊ ನಿನ್ನಯ ದಾಸಜನರ ಸರ್ವ ದೋಷಕಳೆದು ಮನೋಕಾಶದಲಿ ನಿಲ್ಲೊ ಶೇಷಗಿರೀಶ ಶ್ರೀ ವೆಂಕಟೇಶನೆ 20
--------------
ಉರಗಾದ್ರಿವಾಸವಿಠಲದಾಸರು
ಬಂದು ನೊಂದೆನು ನಾನು | ಮುಂದೆ ರಕ್ಷಿಸು ನೀನು | ಎಂದೆಂದೂ ತಾರದಂತೆ | ತಂದೆ ಸದ್ಗುರು ನಿನ್ನ ಹೊಂದಿದೆನು | ಪರಮಾನಂದವನು ಪಾಲಿಸೀಗ ಬೇಗ ಪ ಎನ್ನವಗುಣದೋಷಗಳ | ಅರಸುವದ್ಯಾಕೆ | ನಿನ್ನ ಪಾದವ ನಂಬಿದೆ || ಚಿನ್ನಕ್ಹತ್ತಿದ ಟೆಂಕ ಭಿನ್ನವಾಗುವದುಂಟೆ | ಇನ್ನು ಬ್ಯಾರೆನ್ನಬಹುದೆ ಇಹುದೆ1 ಉರಿಯ ಮುಟ್ಟಿ ಕಾಷ್ಠವನು | ಮರಳಿ ತರಬಹುದೇ | ಪರಮ ತತ್ತ್ವವ ತಿಳಿಯದೆ || ಹರಿವ ಶರಧಿಗೆ ಜಲವು ಹಲವು ಕೂಡಿದರದರ | ವಿವರದಲಿ ನೋಡಲರಿದೇ ಜರಿದೆ 2 ಚಿತ್ತ ಕಮಲವ ನಿನ್ನ ಪಾದಕರ್ಪಿಸಿದೆನೋ | ಸತ್ಯದಲಿ ಮತ್ತೆ ಪಾತಕವು ಯಾರಿಗೆ | ಕರ್ತೃ ಭವತಾರಕನು ಕೊಟ್ಟ ಕುದುರೆಯ ಮೇಲೆ | ಎಷ್ಟೊಂದು ಹೇರಲಿಂದು ತಂದು 3
--------------
ಭಾವತರಕರು
ಬದುಕಿಸೀ ಪಶುಗಳನೂ ಭಗವಂತ ನೀನು ಪ ಕದಲಿಸೀರೋಗವ-ಕರುಣಿಗಳರಸನೆ ಅ.ಪ. ಗೋವುಗಳೆಲ್ಲಾ ಹೊಟ್ಟೆ-ನೊವಿನಿಂ ಕಂಗೆಟ್ಟು ಮೇವನುಬಿಟ್ಟ ವಿದಾವರೊಗವೋ ಕಾಣೆ 1 ಹೊಟ್ಟೆ ಕಳೆದು ಕಂಗೆಟ್ಟುಧಾತುಗಳೆಲ್ಲಾ ಕೆಟ್ಟು ಜೀವಂಗಳ ಬಿಟ್ಟುಬಿಡದಮುನ್ನ 2 ನಾಲಿಗೆ ನೀಡವು ಕಾಲು ಕೆಟ್ಟವು ಕಂ ಣಾಲಿ ಕೆಂಣಾಲಿ ಕೆಂಪಾದವು ಮೂಲವೆ ತಿಳಿಯದು3 ಗೋವುಗಳಿಗೆ ಭೂದೇವರುಗಳಿಗೆಲ್ಲ ದೇವ ನೀನಲ್ಲವೆ-ದೇವಕೀ ತನಯನೆ 4 ಸತ್ತವರಿಗೆ ಜೀವವಿತ್ತು ಬದುಕಿಸಿದೆ ಮೃತ್ಯುದೇವತೆ ನಿನ್ನ ತೊತ್ತಹಳಲ್ಲವೆ 5 ದಾಸನು ನಾನೆಂಬ ವಾಸಿಯುಳ್ಳರೆ ಬೇಗ ವಾಸಿಯ ಮಾಡಯ್ಯ ನೀ ಮೋಸವ ಮಾಡದೆ 6 ಇಷ್ಟದಿನೆನೆವರ ಕಷ್ಟವ ಕಳೆವ ಪುಲಿ ಬೆಟ್ಟದೊಳಿಹ ವರದ ವಿಠಲ ಕೃಷ್ಣನೀ 7
--------------
ಸರಗೂರು ವೆಂಕಟವರದಾರ್ಯರು
ಬದುಕಿಸೀ ಪಶುಗಳನ್ನು ಭಗವಂತ ನೀನು ಪ ಬದುಕಿಸೀ ಪಶುಗಳ ಭವರೋಗ ವೈದ್ಯನೆ ಕದಲಿಸೀ ರೋಗವ ಕರುಣಿಗಳರಸನೆ ಅ.ಪ ಗೋವುಗಳೆಲ್ಲಾ ಹೊಟ್ಟೆ ನೋವಿಂ ಕಂಗೆಟ್ಟು ಮೇವನು ಬಿಟ್ಟವಿದಾವ ರೋಗವೋ ಕಾಣೆ 1 ಹೊಟ್ಟೆ ಕಳೆದು ಕೆಂಗೆಟ್ಟಧಾತುಗಳೆಲ್ಲಾ ಕೆಟ್ಟು ಜೀವಂಗಳ ಬಿಟ್ಟ ಬಿಡದ ಮುನ್ನ 2 ನಾಲಿಗೆ ನೀಡವು ಕಾಲು ಕೆಟ್ಟವು ಕಂ ಣ್ಣಾಲಿ ಕೆಂಪಾದವು ಮೂಲವೆ ತಿಳಿಯದು 3 ಗೋವುಗಳಿಗೆ ಭೂದೇವರುಗಳಿಗೆಲ್ಲ ದೇವ ನೀನಲ್ಲವೆ ದೇವಕೀ ತನಯನೆ 4 ಸತ್ತವರಿಗೆ ಜೀವವಿತ್ತ ಬದುಕಿಸಿದೆ ಮೃತ್ಯು ದೇವತೆ ನಿನ್ನ ತೊತ್ತಹಳಲ್ಲವೆ 5 ದಾಸನು ನಾನೆಂಬ ವಾಸಿಯುಳ್ಳರೆ ಬೇಗ ವಾಸಿಯ ಮಾಡಯ್ಯ ನೀ ಮೋಸವ ಮಾಡದೆ 6 ಇಷ್ಟದಿ ನೆನೆವರ ಕಷ್ಟವ ಕಳೆವ ಪುಲಿ ಬೆಟ್ಟದೊಳಿಹ ವರದ ವಿಠಲ ಕೃಷ್ಣನೀ 7
--------------
ವೆಂಕಟವರದಾರ್ಯರು
ಬಂದೆನವ್ವ ಭಾವಕಿಯರನ್ನೆತಂದೆನವ್ವ ಕುಶಲವಸಿಂಧುಶಯನನ ಮುಂದೆನಿಂದು ಸುದ್ದಿ ಹೇಳಿದೆನವ್ವ ಪ. ಅಚ್ಯುತ ಕರವ ಮುಗಿದು ಹೇಳಿದೆನವ್ವ 1 ಮಂದಗಮನೆಯರ ಕೋಪ ಮಂದವಾದ ಮ್ಯಾಲವ್ವಸಿಂಧುಶಯನನ ಮುಂದೆ ನಿಂದು ಸುದ್ದಿ ಹೇಳಿದೆನವ್ವ 2 ಅಚ್ಯುತ ಶಾಂತನಾದ ಮ್ಯಾಲವ್ವಇಂತು ರಾಮೇಶನ ಮುಂದೆ ನಿಂದು ಸುದ್ದಿ ಹೇಳಿದೆನವ್ವ 3
--------------
ಗಲಗಲಿಅವ್ವನವರು
ಬಂದೆನಿಲ್ಲಿಗೆ ಸಂದರುಶನಕ್ಕೆ ಬಂದೆನಿಲ್ಲಿಗೆನ್ನ ಮನದಿ ಬಂದು ನಿಲ್ಲೆಂದು ನಿನ್ನ ವಂದಿಸ್ವರವ ಬೇಡುವೆ ನಾ ನಂದನ ಸುಂದರ ಕೃಷ್ಣ ಬಂದೆನಿಲ್ಲಿಗೆ ಪ ಪಾಲಶರಧಿ ಆಲದೆಲೆಯಲ್ಯೋಗನಿದ್ರೆ ಮಾಡಿ ನಿನ್ನ ನಾಭಿಕಮಲನಾಳದಿಂದ ಆಗ ಅಜನ ಪಡೆದ ಹರಿಯೆ 1 ಸಾಗರವ ಬಿಟ್ಟು ನಾಗಶಯನ ಶೂರಸುತನಲ್ಲುದಿಸಿ ಯೋಗಿಗಳ ಹೃದಯಕಮಲ ಆಲಯವ ಮಾಡಿದ್ದ ದೊರೆಯೆ2 ಕಂದನಾಗಿ ಬಂದು ಕಾಳಿಂದಿ ದಾಟಿ ನಂದಗೋಕುಲ ವೃಂದಾವನದಿ ಗೋವುಕಾಯ್ದ ಇಂದಿರೇಶ ಅಜನಪಿತನೆ 3 ಅಷ್ಟಮಠದ ಯತಿಗಳಿಂದ ಮುಟ್ಟಿಪೂಜೆಗೊಂಬುವಂಥ ಶ್ರೇಷ್ಠರೊಳಗೆ ಶ್ರೇಷ್ಠ ನಿನ್ನುತ್ಕøಷ್ಟಮಹಿಮೆ ನೋಡಲೀಗ4 ಧ್ವಜ ವಜ್ರಾಂಕುಶ ರೇಖವುಳ್ಳ ಪದುಮಪಾದ ನೋಡಲೀಗ5 ದೊಡ್ಡ ಮುತ್ತು ವಜ್ರದ್ಹರಳಿನಡ್ಡಿಕೆ ಉಡಿದಾರ ಹೊಳೆಯೆ ಒಡ್ಯಾಣವನೆಯಿಟ್ಟ ಜಂಘÉ ಜಾನುದ್ವಯವ ನೋಡಲೀಗ6 ಉದರದಲ್ಲೀರೇಳುಲೋಕ ಅಡಗಿಸಿದನಂತಶಯನ ಪದುಮ ಪೊಕ್ಕಳಿಂದ ಬ್ರಹ್ಮನ ಪಡೆದ ಪರಮಾತ್ಮನ್ನ ನೋಡ7 ವಂಕಿ ಬಾಹುಪುರಿಗಳಿಂದ ಕಂಕಣ ಭೂಷಣಗಳೊಪ್ಪೆ ಕರವ ನೋಡ8 ನೀಲವರಣ ನಿನ್ನ ಬೆರಳು ಸಾಲು ಮಾಣಿಕ್ಯ ಮುದ್ರಿಕಿಂದ್ಹೊಳೆಯೆ ಲೀಲೆಯಿಂದ ಗಿರಿಯೆತ್ತಿದ ಗೋಪಾಲಕೃಷ್ಣ ನಿನ್ನ ನೋಡ 9 ವೈಜಯಂತಿ ತೋರ ಮುತ್ತಿನೆಳೆÀಗಳ್ಹೊಳೆವೋ ಶ್ರೀದೇವೇರಿಗಾಶ್ರಯವಾಗಿದ್ದಿ ್ವಶಾಲ ವಕ್ಷಸ್ಥಳವ ನೋಡ10 ಪಚ್ಚೆಪದಕ ಪಾರಿಜಾತ ಅಚ್ಚ ಮಲ್ಲಿಗೆ ತುಳಸಿಮಾಲೆ ಶ್ರೀ- ಕೌಸ್ತುಭ ಶೃಂಗಾರ ಕೊರಳ ಸಿರಿಯರಸು ನಿನ್ನ ನೋಡ11 ಮಧ್ವರಾಯರು ಕೈಯ ಬೀಸೆ ಎದ್ದು ಬಂದು ಹಡಗದಿಂದಿ ಲ್ಲಿದ್ದಾನುಡುಪಿಕ್ಷೇತ್ರದಿಯೆಂದು ಮುದ್ದುಕೃಷ್ಣನ ಮುಖವ ನೋಡ12 ಕ್ರೂರಕಂಸನ(ಅ)ಪ್ಪಳಿಸಿ ದ್ವಾರಾವತಿಯಲ್ಲಿದ್ದ ಅಷ್ಟಭಾರ್ಯೇರಿಂದ್ವಿ- ಹಾರ ಮಾಡಿದ್ವಾರಿಜಾಕ್ಷನ್ವದನ ನೋಡ 13 ಚಂದ್ರನಂತೆ ಹೊಳೆವೊ ಮುಖದಿ ದುಂಡು ಮುತ್ತಿನ ಮೂಗುತಿನಿಟ್ಟು ಕುಂದಣದ್ವಜ್ರ ಬಿಗಿದ ಕರ್ಣಕುಂಡಲವನ್ನು ನೋಡಲೀಗ14 ಕೇಸರಿ ಗಂಧ ಕಸ್ತೂರಿಯ ನಾಮ ತಿಲಕ ಒಪ್ಪೋವಜ್ರದರಳೆಲೆ ದೇವಕೀಸುತನ (ನೋಡ) 15 ಬಾಲಭಾಸ್ಕರ ಕೋಟಿಲಾವಣ್ಯರೂಪಗೆಲುವ ಕಾಂತಿ ಸಾಲುದೀವಿಗೆ ಸೊಬಗು ಕಮಲದಳಾಯತಾಕ್ಷ ಹರಿಯ ನೋಡ16 ಕೆಂಪುಹರಳು ಝಗ ಝಗಿಸುವೊ ಪಂಚರತ್ನದ ಕಿರೀಟ ಚಂಚಲಾಕ್ಷ ಹರಿಯ ಶಿರದಿ ಮುಂಚೆ ನೋಡಿ ಮುಗಿವೆ ಕೈಯ17 ಅಸುರರ್ವಂಚಿಸಮೃತ ಬೀರಿ ಪಶುವಾಹನಗೆ ಮೋಹ ತೋರಿ ಮೋಸದಿಂದ ಭಸ್ಮಾಸುರನ ನಾಶಮಾಡಿದ ನಾರಿ ನೋಡ18 ಲವಣಶರಧಿತೀರ ಮಧ್ವ ಸರೋವರದಲಿ ಶುದ್ಧಸ್ನಾನ ಪರಮ ಮಂತ್ರ ಜಪಿಸೋ ನಿನ್ನ ಶರಣು ಸುಜನಜನರ ನೋಡ19 ಉತ್ತಮ ವೈಕುಂಠ ಬಿಟ್ಟೀ ಉಡುಪಿಯಲ್ಲಿ ವಾಸವಾಗಿ ಭಕ್ತಜನರಭೀಷ್ಟಕೊಡುವೋ ನಿತ್ಯಮುಕ್ತ ನಿನ್ನ ನೋಡ20 ಶ್ರೀಶನೊಲಿಸಿದ್ಹನುಮ ಭಾರತೀಶನಾದ ಮಧ್ವರಾಯರ ದಾಸರ ದಾಸತ್ವಕೊಡು ಭೀಮೇಶಕೃಷ್ಣಂದಯದಿ ನೋಡ 21
--------------
ಹರಪನಹಳ್ಳಿಭೀಮವ್ವ
ಬಂಧುಗಳದಾರಿಗಾರಿದ್ದರೇನು - ಇಷ್ಟಬಂಧು ತ್ರೈಜಗಕೆ ಶ್ರೀಹರಿಯಲ್ಲದೆ - ಮಿಕ್ಕಬಂದುಗಳದಾರಿಗಾರಿದ್ದರೇನು ಪ ಬ್ರಹ್ಮೇತಿ ಬಂದು ಕಾಡಲಾಗಿ ರುದ್ರಾದಿಗಳೇನ ಮಾಡುತಿರ್ದರಾ ಶೈಲದೊಳಗೆ 1 ಪತಿ ಏನ ಮಾಡುತಿರ್ದನುಮಿಂಡಿ ಪೆಣ್ಣನು ಸಭೆಯಲ್ಲಿ ಸೀರೆ ಸುಲಿಯಲುಗಂಡರೈವರು ನೋಡಿ ಏನ ಮಾಡುತಿರ್ದರಯ್ಯ 2 ಮೃಗಚಕ್ರವರ್ತಿ ಬಹುವರನಾಗಿ ಪೋಗುತ್ತಿರೆಮಿಗೆ ಸತಿಸುತರೇನ ಮಾಡುತಿರ್ದರುಮೃಗಮಾನವಾಕಾರ ಕಾಗಿನೆಲೆಯಾದಿಕೇಶವನಲ್ಲದೆಮಿಗು ಬಂಧುಗಳದಾರಿಗಾರಿದ್ದರೇನು 3
--------------
ಕನಕದಾಸ
ಬನ್ನಿರಿ ದಾಸರೇ ಪೋಗುವಾ ನಮ್ಮ ಚನ್ನಕೇಶವನೆಂಬ ಹರಿಮಂದಿರಕೇ ಪ ಬನ್ನಿರಿ ಪೋಗುವಾ ಗುಡಿಯೊಳು ತಿನ್ನುವಾ ಚನ್ನಗೆ ಅರ್ಪಿಸಿ ತಂದ ಪಕ್ವಗಳ ಅ.ಪ. ನಾ ತಂದಿರುವೆನು ಪರಮಾನ್ನವನ್ನು ತಾತನ ನಾಮಕ್ಕೆ ಬೆರಿಸಿ ಮಾಡಿದೆನು ನೀತಿಯೊಳಾಭಕ್ತಿ ಮಧುಕ್ಷೀರವನ್ನು ಸತ್ಯದಿ ಕೂಡಿಸಿ ಸೇವಿಸುವಾ 1 ಪರಹಿತವೆನ್ನುವ ಸಕ್ಕರೆ ತಂದು ನಾ ಬೆರಿಸುವೆ ಧರ್ಮಗಳೆಂಬ ಪಾಯಸಕೇ ಹರಿಯ ಕೀರ್ತನೆಗಳ ಅಮೃತವ ಸೇರಿಸಿ ಪರಮಾನ್ನವೀ ರೀತಿ ಮಾಡಿರುವೆನಯ್ಯ 2 ಹರಿಭಕ್ತಿಯೆಂಬುವ ತಂಡುಲವನೆ ತಂದು ಹರಿಯ ಸ್ಮರಣೆಯೆಂಬ ವುದಕದಿ ತೊಳೆದು ಹರಿಯ ಭಜನೆಯೆಂಬ ಬೆಂಕಿಯ ಮೇಲಿಟ್ಟು ಸರಸದಿ ನಾ ಪಾಕವ ಮಾಡಿರುವೆ 3 ಸನ್ನುತ ದೂರ್ವಾಪಟ್ಟಣದಿ ನಿತ್ತಿರುವಂಥ ಪನ್ನಗಶಯನ ಶ್ರೀ ಹರಿಯ ನೆನೆಯುತ್ತ ಉನ್ನತ ಸೇವೆಯಿಂದಾತನ ಮೆಚ್ಚಿಸಿ ತಿನ್ನುವಾ ಕೇಶವ ನೀಯುವ ವರವಾ 4
--------------
ಕರ್ಕಿ ಕೇಶವದಾಸ
ಬನ್ನಿರೈಯ್ಯ ಬನ್ನಿರೈಯ್ಯ ಬನ್ನಿರೈಯ್ಯ ಬನ್ನಿರಿ ಪ ಚಿನ್ನ ಕೃಷ್ಣನ ಚೆನ್ನಾಗಿ ನೆನೆದು ಪ್ರಸನ್ನ ಮಾಡಿರಿ ಅ.ಪ. ಸತಿಯು ಸುತರು ಗತಿಯು ಎಂದು ಕೆಡಲು ಬೇಡಿರಿ ಮಿತಿಯು ಇಲ್ಲ ಮೇರೆಯು ಇಲ್ಲ ಫಲವು ಇಲ್ಲ ಕೇಳಿರಿ ಮತಿಯ ಹರಿಯ ಅಡಿಯಲ್ಲಿಟ್ಟು ಪ್ರೀತಿಮಾಡಿರಿ ಗತಿಯನೀಡಿ ತ್ವರಿತದಿಂದ ಪೊರೆವ ನಿಮ್ಮ ನೊಡಿರಿ 1 ಇಂದು ಕಾಲ ಕಳೆಯ ಬೇಡಿರಿ ಶುಭ ಇಂದೆ ನೆನೆಯಿರಿ ಬಂದು ಯಮನ ಭಟರು ಕರೆದರೆ ಏನು ಮಾಡೋರಿ ಮುಂದೆ ಇಂಥ ಜನ್ಮಬಹುದೆ ಬಂಧ ನೂಕಿರಿ2 ಆಶಪಾಶ ಮೋಸ ಬಲುಕ್ಲೇಶ ತಿಳಿಯಿರಿ ಹೇಸಿಕೆ ಸಂಸಾರವನು ಘಾಸಿಕೆ ನೋಡಿರಿ ವಾಸವೇಶ ಜಯಮುನೀಂದ್ರ ವಾಯುಸ್ಥ ಕೃಷ್ಣ ವಿಠಲನ ದಾಸನಾಗಿ ಗೆಜ್ಜೆಕಟ್ಟಿ ನಿರಾಶೆಯಿಂದ ಭಜಿಸಿರಿ 3
--------------
ಕೃಷ್ಣವಿಠಲದಾಸರು
ಬಪ್ಪ ಶುಭಾಶುಭ ತಪ್ಪದಾದರೆ ನಿನ್ನಿಂ-ದಪ್ಪುದೇನಪ್ಪ ಹರಿ ಪ ಬಂದಾಪತ್ತ ನೀಗುತ್ತಾ | ನಂದ ಪ್ರಾಪ್ತಿಸಲು ಗೋ-ವಿಂದ ನಿನ್ನ ಸೇರ್ವುದು 1 ಮುದ್ದಿನ ವರಲಿಪಿ ತಿದ್ದಿ ಕಾಯ್ದುದರಿಂದ ಹೊದ್ದಿ ನಾನಿದ್ದೆ ನಿನ್ನ 2 ಕೈಯ ಮುಗಿವೆ ಜಗ | ದಯ್ಯ ದಮ್ಮಯ್ಯ ಪಾಲಿಸೈಯ ನೀ ಸೈಯೆನಿಸಿ 3 ಪ್ರಾರಬ್ಧ ಫಲ ಮೀರ | ಬಾರದೆಂಬರಿವಿಂ-ದೂರ ನೀ ತಪ್ಪಿಸುವೆ 4 ವಾಸುದೇವ ರಮೇಶ | ದೋಷ ಕ್ಷಮಿಸಿ ತವ ದಾಸನ ರಕ್ಷಿಸಯ್ಯ 5
--------------
ಅನ್ಯದಾಸರು