ಒಟ್ಟು 4509 ಕಡೆಗಳಲ್ಲಿ , 123 ದಾಸರು , 3059 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಹಿಮಾಂ ಪರಮೇಶ ಪಾಹಿಪನ್ನಗಭೂಷ ಪಾಹಿಕೈಲಾಸವಾಸ ಪ ಸ್ವಾಮಿ ಗಿರಿಜಾನಾಥ ಸಮರ ವಿಜಯ ತ್ರಿಣೇತ್ರ ಸುಜನ ವಿನುತ ಕಾಮಿತಾರ್ಥ ಪ್ರದಾತ ಕ್ಷೇಮತರ ಸುಚರಿತ್ರ ಸಾಮಗಜ ವದನ ತಾತರಾಮೇಶ ಕೇಶಪುನೀತ ಪ್ರಖ್ಯಾತ 1 ಕಾಲ ಭಾಳಾಕ್ಷಭಯ ಸಂಹಾರ ಜನಸಾರ ಶೂಲಧರ ಕರುಣಾಕರ ಶೀಲವರಗುಣ ಸುಂದರ ಹರಪಾಶ ಭಯವಶಂಕರ ಓಂಕಾರ 2 ಬಲಸಾಕಾರತ ವಿಶಾಲ ಏಕಮಯ ತ್ರಿಗುಣದಿಂದ ಖಿಲಲೋಕ ವಿಸೂತ್ರ ಜಾಲ ಸಾಕೆನ್ನ ಭವದಳಲ ಶೋಕವನು ನೀಕೇಳದೇಕೆ ಈ ಚೇಷ್ಟೆಬಹಳ ಕಾಲ ಮೂಕಾಂಬಿಕಾಂಬಲೋಲ3 ನಾಗವಾಹನ ನಮಿತನೆ ಯೋಗಮಾಯಾತೀತನೆ ಸಾಗರಾಂಬರದೊಡೆಯನೆ ಭಾಗವತ ಭಾಗಚಂದಿರಧರನೆ ಹರನೆ 4 ಧರಣಿಯೊಳಗೆ ವಿಶೇಷತರ ಗೌಜದೊಳುವಾಸ ವರಋಷಿ ಸ್ಥಾಪನೇಶ ಸರಸಕೀರ್ತಿ ವಿಲಾಸ ಸ್ಮರಹರ ಸುರಾಧ್ಯಕ್ಷ ದುರಳ ದಾನವ ವಿನಾಶ ದುರಿತಹರ ನಿರ್ದೋಶ ಧರಣಿ ಸುರಜನರಕ್ಷ ಕರಿಚರ್ಮಧರಮಹೇಶ ಉರಗರಾಜ ವಿಭೂಷವರ ಗುರು ವಿರೂಪಾಕ್ಷ ಪುರಮಥನ ಗೌತಮೇಶ 5
--------------
ಕವಿ ಪರಮದೇವದಾಸರು
ಪಿಡಿ ಎನ್ನ ಕೈಯ್ಯ ರಂಗಯ್ಯ ಪ ಪಿಡಿ ಎನ್ನ ಕೈಯ ಪಾಲ್ಗಡಲ ಶಯನ ಮೋಹ ಮಡುವಿನೋಳ್ ಬಿದ್ದು ಬಾಯ್ಬಿಡುವೆ ಬೇಗದಿ ಅ ನೀರಜನಾಭಾ ನಂಬಿದೆ ನಿನ್ನ ನೀರಪ್ರದಾಭಾ ಕಾರುÀಣ್ಯ ನಿಧಿ ಲಕ್ಷ್ಮೀನಾರಸಿಂಹನ ಪರಿ ವಾರಸಹಿತ ಈ ಶರೀರದೊಳಡಗಿರ್ದು ಘೋರತರ ಸಂಸಾರ ಪಂಕದಿ ಚಾರು ವರಿವನ ದೂರ ನೋಡುವ ರೇ ರಮಾಪತೆ ಗಾರುಮಾಡದೆ ಚಾರುವಿಮಲ ಕರಾರವಿಂದದಿ 1 ಅನಿಮಿತ್ತ ಬಂಧೋ ನೀನೇ ಗತಿ ಗುಣ ಗಣಸಿಂಧೋ ವಿಧಿ ಭವಸಂಕ್ರಂ ದನ ಮುಖ್ಯ ವೇದ ಸನ್ಮುನಿ ಗಣಾರ್ಚಿತ ಪಾದಾ ಅನುಜ ತನುಜಾಪ್ತಾನುಗ ಜನನೀ ಸದನ ಸಂ ಹನÀನ ಮೊದಲಾದಿನಿತು ಸಾಕುವ ಘನತೆ ನಿನ್ನದು ಜನುಮ ಜನುಮದಿ 2 ಶ್ರೀ ಜಗನ್ನಾಥವಿಠ್ಠಲ ದ್ವಿಜರಾಜ ವರೂಥ ಓಜಕಾಮಿಕ ಕಲ್ಪ ಭೂಜ ಭಾಸ್ಕರ ಕೋಟಿ ತೇಜ ಮನ್ಮನದಿ ವಿರಾಜಿಸು ಪ್ರತಿದಿನ ಈ ಜಗತ್ರಯ ಭಂಜನನೆ ಬಹು ಸೋಜಿಗವಲಾ ನೈಜ ನಿಜನಿ ವ್ರ್ಯಾಜದಿಂದಲಿ ನೀ ಜಯಪ್ರದ ನೈಜ ಜನರಿಗೆ ಹೇ ಜಗತ್ಪತೇ 3
--------------
ಜಗನ್ನಾಥದಾಸರು
ಪಿಡಿದೆಲೆ ಬಿಡಬೇಡ್ಹುಡುಗಹುದು ಇದು ಕೆಡದ ವಸ್ತು ನಿಜ ಪಿಡಿ ಬಿಗಿದು ಪ ಎಡರುತೊಡರಿಗೆದೆಒಡೆಯದೆ ದೃಢವಿಡಿ ಜಡಭವ ತೊಡರನು ಕಡಿಯುವುದು ಅ.ಪ ಭಕ್ತಿಯಿಂದೆಂಬುವ ಗೂಟ ಜಡಿದು ಮಹ ಸತ್ಯವೆಂದೆಂಬ ಹಗ್ಗ ಸುತ್ತ ಬಿಗಿದು ಚಿತ್ತೆಂಬ ಗಂಟ್ಹಾಕು ಎತ್ತವದಲದಂತೆ ನಿತ್ಯ ಮುಕ್ತಿಸುಖ ಕೊಡುತಿಹ್ಯನು 1 ಸುಜನ ಸಂಗವೆಂಬ ಮಂದಿರದಿ ಮಹ ಭಜನವೆಂದೆಂಬುವ ಗೋದಿಲದಿ ನಿಜಧ್ಯಾನ ಮೇವು ಹಾಕಿ ಭುಜಶಾಯಿಪಾದ ನಿಜಧೇನುವನು ಕಟ್ಟಿ ಮಜದಲಿ ನಲಿಯೊ 2 ಆರಿಗೆ ಸಿಗದಂಥ ಒಡವೆಯಿದು ಸರ ದಾರನೆ ನಿನಗೆ ಸಿಕ್ಕಿಹ್ಯದು ಸಾರಸೌಖ್ಯಕ್ಕೆ ಮೂಲಧಾರನಾಗಿಹ್ಯ ಧೀರಶ್ರೀರಾಮಪಾದ ಶೂರನೆ ಬಿಡದಿರು 3
--------------
ರಾಮದಾಸರು
ಪಿಡಿಯೆನ್ನ ಕೈಯ ಬಿಡಬೇಡೆನ್ನಯ್ಯ ಮೃಡನ ಭಕ್ತರ ಒಡೆಯ ಪಂಢರಿರಾಯ ಪ ಘೋರ ಬಡುವೆ ಸಂಸಾರಶರಧಿಯೊಳು ಮೀರಿತು ಈ ಬಾಧೆ ಸೈರಿಸೆ ಮಹರಾಯ 1 ಹಲವು ವಿಧದಿ ಕಷ್ಟಕ್ಕೊಳಗಾಗಿ ಅತಿಶಯ ಬಳಲುವ ಬಾಲನ ಉಳಿಸಿಕೊ ಮಹರಾಯ 2 ಬರುವ ಸಂಕಟದೆನ್ನ ಪಾರುಮಾಡುವಂಥ ಭಾರನಿನ್ನದು ಸರ್ವಧೀರ ಶ್ರೀರಾಮಯ್ಯ 3
--------------
ರಾಮದಾಸರು
ಪಿಳ್ಳಂಕೇರಿಯ ವಾಸ ದಾಸ | ಕಾಯೊಮಲ್ಲಾರಿ ಮಹಿದಾಸ ದಾಸಾ ಪ ಎಲ್ಲ ಸಚರಾಚರದಿ ವ್ಯಾಪ್ತನು | ನಲ್ಲ ಕೃಷ್ಣನ ಸೇವೆ ಬಹಳದ ಸಲ್ಲಿಸಲು ಬಹುರೂಪ ತಾಳ್ದ ಪ್ರ | ಪುಲ್ಲ ವದನಾಂ ಭೋಜ ಹನುಮ ಅ.ಪ. ದಕ್ಷಿಣಾಕ್ಷಿಯ ವತ್ಸರೂಪಾ | ಸುರತ್ರ್ಯಕ್ಷಾದಿ ಸಂಸೇವ್ಯ ಭೂಪಾ |ಕ್ಷೋಭ್ಯತೀರ್ಥ ಶ್ರೀ ಯತಿಪಾ | ಗೊಲಿದುಅಕ್ಷಾರಿ ತೋರ್ದೆ ಈ ರೂಪಾ |ಕುಕ್ಷಿಯಲಿ ಪಾಪಾತ್ಮ ಪುರುಷನ | ಶಿಕ್ಷಿಸುತ ಶೋಭಿಸುತ ನಿತ್ಯಪಕ್ಷಿವಾಹನನಂಘ್ರಿ ಕಮಲವ | ಈಕ್ಷಿಸಲು ಸಹಕರಿಪ ಪ್ರಾಣಾ 1 ದುರುಳ ಅವನನ್ವಯದ | ಸಹಜಾತರನು ವಧಿಸಿ ಮೆರೆದ ಸ 2 ಸಾರ ಸಜ್ಜನರನ್ನು ಪೊರೆದ 3 ಹಂಸನಾಮಕ ಹರಿ ದ್ವಂದ್ವಾ | ಪಾದಪಾಂಸುವ ಧರಿಸಿ ಮೆರೆಯುವಾ |ಹಂಸಾಖ್ಯ ಜಪ ದಿನ ದಿನವಾ | ಪಟ್ಯತವಿಂಶತ್ಯೇಕ ಸಾಸಿರವಾ |ಹಂಸವಾಹನ ತಾತನೆನಿಸುವ | ಕಂಸಮರ್ದನ ಚರಣಕರ್ಪಿಸಿಸ್ವಾಂಶರೂಪವನಂತ ಧರಿಸುತ | ಶಂಸಿಸುವೆ ವೇದೋಕ್ತ ಅನುಕ್ತದಿ 4 ದೇವ ದೇವರ ದೇವ ದೇವಾ | ಗುರುಗೋವಿಂದ ವಿಠ್ಠಲ್ಲ ದೇವಾ |ಕಾವ ಕೊಲ್ಲುವ ಸ್ಥಿರ ಚರವಾ | ನಂಬುದಾವ ಬಲ್ಲನಿವನ ಮಹಿಮವಾ |ಭಾವಿ ಬೊಮ್ಮನೆ ರಮೆಯ ಮುಖದಿಂ | ಶ್ರೀವರನ ಮಹಿಮೆಗಳ ತಿಳಿದುಭಾವ ಶುದ್ಧಿಯ ಗೈದು ಸುಜನರ | ಸ್ವಾವಲಂಬಿಗಳೆನಿಸಿ ಪೊರೆವ 5
--------------
ಗುರುಗೋವಿಂದವಿಠಲರು
ಪುಟ್ಟಿಸಿದ್ದೇನು ಕಾರಣವೋ ಸೃಷ್ಟಿಗೋಡೆಯಾ ಪ. ಶ್ರೀಕೃಷ್ಣ ಮೂರುತಿವೊಂದಿಷ್ಟು ತಿಳಿಯದೋ ಮಾಯಾ ಜೀಯಾ ಅ.ಪ. ಆವಾವ ಸಾಧನವಾಗಲಿಲ್ಲಾ ಯನ್ನಿಂದ ಶ್ರೀದೇವಾ ಕರವ ಬಿಡುವುದುಚಿತವೇನು ಮಾಧವಾ ನಿನ್ನ ಮನದಣಿಯ ನೋಡಾದೆ ಹಾಗಾದೆ 1 ಹರಿಮೂರ್ತಿ ನೋಡಲೊಲ್ಲಾದು ಯನ್ನಮನವು ಪರಪುರುಷರ ನೋಡಿತು ಮನಸು ಹೊಲೆಗೆಡಿಸಿತು ಪುರುಷೋತ್ತಮನ ಮರಿತಿತು 2 ಹರಕಥಾ ಶ್ರವಣ ಕೇಳದು ಎನ್ನ ಕರ್ಣಂಗಳು ಪರವಾರ್ತೆಗೆ ಹೊತ್ತು ಸಾಲದು ಸರ್ವೋತ್ತಮನೆ ನಿನ್ನ ಮರೆತೆನು ಉನ್ಮತ್ತಳಾದೆ 3 ಹರಿನಿರ್ಮಾಲ್ಯವ ಕೊಳ್ಳದು ಯನ್ನ ಮೂಗು ಪರಪುರುಷರಾ ಮೈಗಂಧವಾ ಆಘ್ರಾಣಿಸುವುದು ನಿನ್ನ ನಾಮ ಸ್ಮರಣೆಯನು ಮರೆತೆನು 4 ಹರಿಯಾತ್ರೆಯಾ ಮಾಡಲಿಲ್ಲ ಯನ್ನ ಕಾಲು ಜಾರಸ್ತ್ರೀಯರ ಮನೆಮನೆ ತಿರುಗುವೆನು ಪರಿ ನೀಯನ್ನ ಮರೆಯುವುದುಚಿತವೆ 5 ಎನ್ನ ಇಂದ್ರಿಯಗಳು ಈ ಪರಿವ್ಯರ್ಥವಾಯಿತು ಸಾರ್ಥವಾಗಲಿಲ್ಲ ಪಾರ್ಥಸಾರಥಿ ನಿನ್ನ ನೋಡಿ ಪವಿತ್ರಳಾಗಲಿಲ್ಲ ಏಕಿನ್ನ ಈ ಪರಿಯ ಮರುಳು ಮಾಡುವಿದೇವಾ ಧರೆಯೊಳಗೆನ್ನ ತಂದುದಕೆ ಬಂದಕಾರ್ಯವಾಗಲಿಲ್ಲ 6 ಆವಬಾಧೆಯು ನಾನರಿಯೆ ಪರಜಾತಿಯ ಆ ಮನಸು ಪೋಗುವುದು ಕೋತಿಯಂದದಿ ಕುಣಿಸುವರು ಇದು ರೀತಿಯೆ 7 ಭವಸಾಗರದೊಳು ಇದ್ದು ಸೊರಗಲಾರೆನೊ ಘಾಸಿಗೊಳಿಸುವುದು ನಿನಗೆ ಧರ್ಮವೆ ವಾಸುದೇವನೆ ನಿಮ್ಮ ನಾಮವನು ನೆನೆಯದೇ 8 ಇರುಳು ಹಗಲು ಹೀಗೆ ದುರುಳತನದಲಿ ತಿರುಗಿದೆನು ಗುರು ಹಿರಿಯರಂಘ್ರಿಗೆ ಶಿರವ ಬಾಗದೆ 9 ಎಷ್ಟು ಮೊರೆ ಹೊಕ್ಕರೇನು ಒಂದಿಷ್ಟು ದಯಪುಟ್ಟದು ನಾನೀಗ ದ್ವೇಷಿಯೇನೋ ಶೇಷಶಯನನೆ ನಮ್ಮ ಕಾಳೀಮರ್ಧನಕೃಷ್ಣನೆ 10
--------------
ಕಳಸದ ಸುಂದರಮ್ಮ
ಪುಂಡರೀಕ ವರದ ಹರಿ | ವಿಠಲ ಪೊರೆ ಇವಳಾ ಪ ತೊಂಡ ವತ್ಸಲ ದೇವ | ಕಾರುಣ್ಯ ಸಿಂಧೋಅ.ಪ. ಮೂರ್ತಿ ಸಂದರ್ಶನವಪೊತ್ತುದಕೆ ನಾನೀಗ | ಇತ್ತೆ ಉಪದೇಶಾ 1 ತಾಪ | ಎತ್ತಿವಳ ಸಲಹೋ 2 ಪರತಮಾತ್ಮಕ ಜ್ಞಾನ | ಎರಡು ಮೂರ್ಭೇದಗಳಅರಿವಾಗುತಿವಳೀಗೆ | ಸಾಧನವ ಗೈಸೋಹಿರಿಯರಾಶೀರ್ವಾದ | ನೆರವಾಗಿ ಇವಳ ಭವಶರಧಿಯನೆ ಬತ್ತಿಸೈ | ಸುರಸಾರ್ವಭೌಮಾ 3 ಬೇಕಾದ ವರಗಳನು | ನೀ ಕರುಣಿಸಿವಳೀಗೆಸಾಕುವಾಭಾರ ನಿನ್ನದು | ಶ್ರೀ ಕರಾರ್ಚಿತನೇಶೋಕ ಸುಖ ವೆರಡಕ್ಕು | ನೀಕಾರಣೆಂಬಂಥವಾಕನನುಭವ ವಿರಲಿ | ಶ್ರೀ ಕಾಂತ ಹರಿಯೇ 4 ಪೂವಿಲ್ಲ ಪಿತ ನಿನ್ನ | ಭಾವದಲಿ ಮೈ ಮರೆದುಸಾವಧಾನದಿ ಹರಿ ಪೊಗಳಿ | ಹಿಗ್ಗುವಂತೆಸಗೋಪಾವನಾತ್ಮಕ ಗುರೂ | ಗೋವಿಂದ ವಿಠ್ಠಲನೆನೀವೊಲಿದು ಪ್ರಾರ್ಥನೆಯ | ಓದಿ ಸಲಿಸುವುದೋ 5
--------------
ಗುರುಗೋವಿಂದವಿಠಲರು
ಪುಂಡರೀಕನಯನ ಕೃಷ್ಣ ಪ ಕಂಡೆನಿಂದು ನಿನ್ನ ಬಹುದಿನ ಬಳಿಕ ಬ್ರ ಉದ್ದಂಡ ಮಹಿಮನೆ ಅ.ಪ ಪುಟ್ಟಿದಂದಿನಿಂದಾ ಕಷ್ಟವಪಟ್ಟೆನು ಗೋವಿಂದ ಸೃಷ್ಟಿಯೊಳಗೆ ನಾ ಪುಟ್ಟಿದನೇತಕೆ ಜಿಷ್ಣುಸಖನೇ ಎನ್ನ ಕೊನೆಗಾಣೆ 1 ಕರಿಗಿರೀಶ ನಿನ್ನ ಚರಣವ ನೆರೆ ನಂಬಿಹರನ್ನ ಪರಿ ಪೊರೆ ಕಂಸಾರಿಯೆ ಸ್ಥಿರ ಸಂಕಲ್ಪನೆ ಕರುಣಾಶರಧಿಯೆ 2
--------------
ವರಾವಾಣಿರಾಮರಾಯದಾಸರು
ಪುಣ್ಯ ದೊರಕುವುದು ಅನು ಗಣ್ಯವಾಗಿದ್ದ ಸತಿಯಿದ್ದ ಜನರಿಗೆ ಪ ಬಡತನವಿದ್ದರು ನೆರೆಹೊರೆ ಮನೆಯಲ್ಲಿ ನುಡಿ ಬಿಚ್ಚಿ ಪೇಳದೆ ಸೌಮ್ಯಳಾಗಿ ಬಿಡದೆ ಮಾಡುವ ಗೃಹಕೃತ್ಯಂಗಳು ಜಗ ಅನುದಿನ 1 ವಿಪರೀತ ಕಾಲಗಳಟ್ಟಿದ ಕಾಲಕ್ಕು ಸ್ವಪನಾದಿಯಪ ಕಳವಳಿಸದಲೇ ಪತಿ ಸೇವೆ ಅಫಲದಲ್ಲಿ ಮಾಡಿ ಒಲಿದೊಲಿದಾಡುವ2 ಲಾವಣ್ಯ ಪುರುಷರ ಕಂಡರು ಮನದಲ್ಲಿ ಭಾವಿಸಬೇಕು ಸಹೋದರರು ಎಂದು ವಿಭೂತಿ ರೂಪವ ನಿತ್ಯ 3 ಬಂದು ತಂದರೆ ಸಾವಿರ ಮಾಡಿ ಚಿಂತಿಸಿ ಇಂದಿರೇಶನೆ ಪತಿರೂಪವೆಂದು ಅಂದದದಲಿದ್ದ ವಿಭವಾನುಸಾರ ಆ ನಂದವಾಗಿ ಸಂಸಾರದೊಳಗಿರೆ 4 ಪತಿಯ ಜನಕ ಮಾತೃ ಮಿಗಿಲಾದ ಜನರಿಗೆ ಹಿತವಂತಳಾಗಿ ನುಡಿಸಿಕೊಳುತಾ ಗಾತ್ರ ಸರ್ವದಾ ಪ್ರತಿದಿನ ಸುವಿನುವಳಾ ನಾರಿ ಅಧಿಕಾರಿ 5 ಚಕೋರ ಚಂದ್ರಮನಲ್ಲಿ ಮನಸು ಇಟ್ಟು ಸುಖಬಡುವಂತೆ ನಾನಾ ಪ್ರಕಾರ ಕಕುಲಾತಿಯಿಂದ ಕಾಮುಕಳಾಗದೆ ಮಹಾ ಭಕುತಿಯಿಂದಲಿ ಗುರು ಹಿರಿಯರ ಸಮ್ಮತ 6 ಸಂತಜನರೆಂಬ ಕ್ಷೀರಾಂಬುಧಿ ಮಧ್ಯ ಸಂತತ ಮೀನಿನಂದದಿ ಬೀಳುತಾ ಪತಿ ಧರ್ಮವಹಿಸಿ ಶ್ರೀ ಕಾಂತನ ಗುಣಕಥೆ ಕೇಳಿ ಪೊಗಳಲಾಗಿ 7 ನಾಮ ಮೊದಲು ಮಾಡಿ ಪ್ರಕೃತಿಯ ಪರಿಯಂತ ಪ್ರೇಮದಿಂದಲಿ ಗುಣಗಳ ಗುಣಿಸೀ ಕಾಮಾದಿ ಚತುರ್ವಿಧÀ ಪುರುಷಾರ್ಥ ತನ್ನಯ ಸ್ವಾಮಿಯಲಿಂದಲಿ ಸಂಪಾದಿಸುತಿಪ್ಪಾ 8 ಆವಾವ ಪ್ರಯೋಜನ ಮಾಡಲು ಸರ್ವದ ದೇವದೇವೇಶನಾಧೀನವೆಂದೂ ಭಾವದಲಿ ತಿಳಿದನ್ಯ ಕರ್ಮವ ಬಿಟ್ಟು ಪಾವನ ವಿಜಯವಿಠ್ಠಲನ ಭಕುತಿಯಿಂದಾ 9
--------------
ವಿಜಯದಾಸ
ಪುಣ್ಯೋದವೇ ಈ ಪುಣ್ಯಭೂಮಿಯೊಳು ಪನ್ನಂಗಶಯನ ಸನ್ನುತಿಪ ದಾಸರಿಗೆ ಪ ಕಡುಸಿರಿವಂತರಾದೊಡೆ ಬಡವರ ಬಾಯ್ಬಡಿಯದೆ ಕೊಡುವಿಡುವ ಕೆಡದತಿ ಪುಣ್ಯ ಬಡತನವಿರ್ದಡೆ ಎಡೆಬಿಡದೆ ಒಡಲೊಳು ಜಡಜಾಕ್ಷನಡಿಧ್ಯಾನ ಹಿಡಿದ ಮಹಪುಣ್ಯ 1 ಮಡದಿಯರೊಂದಿಗೆ ಬಿಡದೆ ಸಂಸಾರಗೈಯೆ ದೃಢಯುತರು ಮನೆಯೊಳಗಡಿಯಿಡುವ ಪುಣ್ಯ ಸಡಗರದಿ ಮಕ್ಕಳನ್ಹಡೆದು ಮೋಹದಿ ಜಗ ದೊಡೆಯನ್ಹೆಸರಿಟ್ಟು ನುಡಿಯುವ ಪುಣ್ಯ 2 ತಿರುಕರಾಗಿರ್ದಡೆ ತಿರಿದು ತಂದನ್ನವನು ಹರಿಯಪ್ರಸಾದವೆಂದು ತಿರಿದುಣುವ ಪುಣ್ಯ ಪರಮಪುರುಷನ ಚರಣ ನಿರುತ ಸ್ಮರಿಪ ಪುಣ್ಯ 3 ಹಿಂದೆ ಮುಂದೆ ತಮಗೆ ನಿಂದೆಯಾಡಲು ಆ ನಂದದಿ ಹಿಗ್ಗದ ಕುಂದದ ಪುಣ್ಯ ಮಂದಿಮಕ್ಕಳು ಬಿಡದ್ಹೊಂದಿಸಲದು ಹರಿ ಗೆಂದು ಅರ್ಪಿಸಿ ಮನಸೊಂದೆಮಾಡಿದ ಪುಣ್ಯ 4 ನೀರಿನೊಳಿರಲೇನರಣ್ಯದೊಳರಿಲೇನು ಘೋರತಾಪದಿರಲೇನಪಾರಜ್ಞಾನಿಗಳು ಪಾರಮೋಕ್ಷಕ್ಕಧಿಪ ಧೀರ ಶ್ರೀರಾಮಪಾದ ವಾರಿಜದೊಳು ಮನ ಸೇರಿಸಿದ ಪುಣ್ಯರಿಗೆ5
--------------
ರಾಮದಾಸರು
ಪುರಂಜನೋಪಾಖ್ಯಾನ ಲಾವಣಿ ಗೆರಗಿ ಮಹೇಶ್ವರನಾ ಶಾರದೆಯ ಸರಸಿಜಸಂಭವನಾ | ಇಂದಿರೆ ಪರಮಭಕ್ತಿಯಲಿ ಪ್ರಾರ್ಥಿಸಿ ಸತ್ಕವಿ ಕರುಣಿಪುದು ಜ್ಞಾನ | ಚರಣಗಳಿಗೆ ಬಿನ್ನೈಸುವೆನಾ 1 ಯತಿಗಣಪ್ರಾಸೊಂದಾದರು ತಿಳಿಯದು ಮತಿಹೀನನು ನಾನು | ನಾನಾಚಮ- ತ್ಕøತಿಗಳರಿಯದವನು | ಆದರೀ ಕೃತಿಯಲಿ ತಪ್ಪೇನು | ಮತಿವಂತರಾಲಿಸುವುದು ನೀವಿದನು 2 ಒಂದರೊಳಗೆ ಎರಡಾಗಿ ಎರಡರೊಳು ಹೊಂದಿ ಮೂರ್ನಾಲ್ಕೈದಾಗಿ ಆರೇಳೆಂಟೊಂಬತ್ತುಗಳಾಗಿ | ಸಕಲದೊಳು ಹೊಂದಿರುವುದುತಾಗಿ ಕುಂದಿಲ್ಲದೆ ಇರುತಿರುವ ಮಹಾತ್ಮನ ರಂದವ ಚನ್ನಾಗಿ | ತಿಳಿದು ಸುಖ ತಂದವನೇಯೋಗಿ 3 ಮೊದಲು ಮಹತ್ ಸೃಷ್ಟಿಯಲಿ ಎಲ್ಲತ- ತ್ವದಲಿ ತೋರುತಿಹುದು ಬೇರೆಬೇರಾಗಿ ಕಾಣಿಸುವುದು ಅದುಭುತವಾಗಿಹ ಅನಾದಿ ಕರ್ಮತ್ರಿ- ವಿಧದಿ ಭಾದಿಸುವುದು | ಅದರೊಳು ಬಿ- ಡದೆ ತಾ ಮುತ್ತುವುದು ಎಂದಿಗು ನಿಜವತಿ ರಹಸ್ಯವಿದು 4 ಮೊಟ್ಟೆವೊಂದು ದಶಸಾವಿರವರುಷಗ ಳಿಟ್ಟು ಜಲದಿತಾನು | ಅದಕೆ ಕೈ- ಗೊಟ್ಟು ಎಬ್ಬಿಸಿದನು | ನಾನಾ ವಿಧ ವೆಷ್ಟಿ ಸಮಷ್ಟಿಗಳೆರಡೆಂದದರೊಳು ಗುಟ್ಟಂಗಡಿಸಿದನು | ಗುರಿಯಮಾ ಡಿಟ್ಟು ಚೇತನಗಳನು | ಅನೇಕವು ಪಟ್ಟಣ ರಚಿಸಿದನು 5 ಈ ಪಟ್ಟಣಕಾರ್ ಮಂದಿ ಇರುವರತಿ ಕಾಪಾಡುವರದರೊಳು ವ್ಯಾಪಾರಗಳನು | ಬಹುವಿಧಮಾಡುವ- ರಾಪುರ ಜನರುಗಳು | ಇವರುನಡೆ ಕೋಪಿಸೆ ಹಗಲಿರುಳು 6 ಎರಡು ಮಾರ್ಗದೊಳಿರುತಿಹರೆಲ್ಲರು ಹುರುಡಿಲ್ಲವುನೋಡೆ | ಗಜಿಬಿಜಿಯು ತರತರದಲಿಮಾಡೆ | ನಮಗಿದೆ ಸ್ಥಿರವೆನ್ನುತ ಕೂಡೆ | ಪರಿಪರಿ ಬಗೆಯಲಿ ಭೇದ ಪುಟ್ಟುವುದು ಕರೆಕರೆಯಂದುಡೆ | ವಳಗೆಕೆಲ ಬರುಹರುಷದಿ ನೋಡೆ | ಯುವಶೃಂ- ಗರುವು ಇದಕೆ ಈಡೆ 7 ಇದೆತನ್ನದೆನುತೋರ್ವಳು ಮಾನಿನಿ ಚದುರತನದಿ ಬಂದು | ಊರ ಮುಂದಿರುವ ವನದಿ ನಿಂದು | ಅವಳಿಗಿರು ವುದು ಜನ ಹನ್ನೊಂದು ಚದುರೆಯೈದುತಲೆ ಸರ್ಪವಾಡಿಸುತ ಜಾಣೆಯಿರುವಳಂದು | ತಾನೊಬ್ಬನ ಇಂದು | ಸುಖದೊಳಾ- ಳ್ಬೇಕುರಾಜ್ಯವೆಂದು 8 ಅರಸನೊಬ್ಬ ವಿಜ್ಞಾತನೆಂಬ ಭೂ- ಸುರನಸಹಿತನಾನಾ | ದೇಶಗಳ ತಿರುಗುತ ಉದ್ಯಾನ | ವನದಿಕಂ- ಡನು ಆತರುಣಿಯನ ಪರಮ ಮಿತ್ರನಹ ಬ್ರಾಹ್ಮಣನ ಮರೆತು ಹರುಷದಿ ಪೊಕ್ಕುವನ | ಸ್ಮರಶರಕೆ ತರಹರಿಸುತಲಿರೆ ಮನ | ಕೇಳಿದನು ನಗುತಲಿ ನಾರಿಯನ 9 ಯಾರೆ ಹುಡುಗಿ ನೀನ್ಯಾರೆ ನಿನ್ನ ಪೆಸ- ರೇನು ಪೇಳೆ ಹೆಣ್ಣೆ | ಮಾತನಾ- ಡೆಲೆ ತಾವರೆಗಣ್ಣೆ | ನಿನ್ನ ಮೈ- ಸುಲಿದ ಬಾಳೆಯ ಹಣ್ಣೆ ಯಾರದು ಈ ಜನ ಉರಗವೇನು ವನ- ವಾರದು ಶಶಿವದನೆ | ಈ ಪುರವ- ನಾಳುವನಾವವನೆ | ಒರ್ವಳಿ- ಲ್ಲಿರುವುದಕೇನ್ಹದನೆ 10 ಎನಲು ನಸುನಗುತವನಿತೆನುಡಿದಳೀ ಜನಗಳು ನನ್ನವರು | ಇಲ್ಲಿಕಾ- ಣುವ ಪುರ ನನ್ನೂರು | ಸರ್ಪನ- ನ್ನದು ಇದಕಿನ್ನಾರು | ಅರಸರಿಲ್ಲ ನಾನೊಬ್ಬಳಿರುವೆನೀ ವನದೊಳು ನೀನ್ಯಾರು | ನಿನ್ನಕಥೆ ವಿವರಿಸೆನಗೆ ತೋರು | ಯನ್ನ ಬಳಿ- ಗಿಷ್ಟವಿರಲುಸಾರು 11 ಎಲ್ಲಿ ನೋಡೆ ಸ್ಥಳವಿಲ್ಲವೆನಗೆ ನಿ- ನೆನ್ನ ಪುಷ್ಪಶರನು | ನೀನುಪೇ- ಪರಿ ವಲ್ಲಭನನು ಮಾಡಿಕೊ ಎನ್ನನು ಬಹು ಬಲ್ಲಿಯಳೆ ನೀನು | ನಿನ್ನಸರಿ ಚಲ್ವೆಯರಾರಿನ್ನು | ಇಬ್ಬ- ರಾಳ್ವೆಯೀವೂರನ್ನು 12 ಎನಲು ಹರುಷಗೊಂಡಾಕೆ ಸಮ್ಮತಿಸಿ ಜನವೆರಗಿತಂದು | ನುಡಿದಳಾಮೊಗದ- ಲಿನಗೆತಂದು | ನಿನ್ನಮೇಲ್ ಮನಸಾಯಿತುಯಿಂದು ನಿನ್ನನು ಮಾನವೇತಕಿಂದು | ಆಳು ಜನಸಹಿತ ಪುರವ ಮುಂದು ನೀನು ನಾನಿರುವೆವಾಗಿವಂದು 13 ಸರ್ವವನ್ನು ಭವದಿ ಆದರಿಸುತತತ್ಪುರ ಮಧ್ಯ | ದೊ ಳುಪ್ಪರಿಗೆಯೇರಿ ತ್ವರದಿ | ಸರ ಸಗಳನಾಡಿ | ಬಹುತರದಿ ಮುಳುಗಿ ಸಂಸಾರವೆಂಬಶರಧಿ 14 ಅನ್ನಪಾನಾಭರಣ ಕುಸುಮ ವಿನ್ನು ಗಂಧಧೂಪ | ತಾಂಬೂಲಗಳ ಮನ್ನಣೆಯಲಿ ಭೂಪ | ಪೊಂದಿದ ಸುಖ ವನು ನಾನಾರೂಪ | ನನ್ನದು ಎನ್ನುತಲಿ ಪ್ರತಾಪ | ಶಾಲಿತಾ- ರಾಜ್ಯವಾಳಿದನಾಗುತಭೂಪ 15 ದ್ವಾರಗಳೊಂಭತ್ತಾಪುರಕಿರುವುದು ಮೂರು ಪೂರ್ವದಲ್ಲಿ | ಮೇ- ಲೆರಡು ಕಿಟಕಿಗಳಿಹವಲ್ಲಿ | ಬಿಗಿಸಿ ಕಟ್ಟಿಹುದು ಕನ್ನಡಿಯಲಿ ತೋರುವುದುತ್ತರದಕ್ಷಿಣದೊಳೆರಡು ದ್ವಾರ ಪಶ್ಚಿಮದಲಿ ಕಾರಣವದರಲ್ಲಿ 16 ಮತ್ತದರೊಳಗಾರ್ಸುತ್ತು ಕೋಟೆ ಒಂ- ಬತ್ತು ಬಾಗಿಲ ಪುರದಿ | ಅನೇಕವು ಗೊತ್ತನಾವವಿಧವಿ | ಉತ್ತಮವಹಪುರದಿ | ಮುಖ್ಯವಾ- ಗಿರುವದೆರಡು ಬೀದಿ | ದೊರೆಯಮನೆ- ಯಿರುವುದು ವಿಸ್ತರದಿ17 ಇಂತರಮನೆಯಲಿ ದೊರೆ ಕಲಿಯಾಗುತ ಕಾಂತೆಯೊಡನೆ ಸೇರಿ | ಸದಾಸು- ಸ್ವಾಂತನಾಗಿಮೀರಿ | ಸೌಖ್ಯಹೊಂ- ದುತಲಾವೈಯ್ಯಾರಿ ನಿಂತರೆ ನಿಲುವನು ಕುಳಿತರೆ ಕೂಡುವ ಮಲಗಿದರೆ ನಾರಿ | ತಾನು ಮಲಗುವಯೇಕದಿ ಸೇರಿ | ಉಂಡ- ರುಣ್ಣುವನು ಅವಳನುಸಾರಿ 18 ಮನದಿಯೋಚಿಸದನೂ | ಈಗಲೆ ಮೃಗಯಾತ್ರೆಗೆತಾನೂ | ಸೊಗಸಿಂದ ಸೈನ್ಯವ ಕೂಡುತ ಪುಂ- ಚಪ್ರಸ್ಥವನವನು | ಪೊಕ್ಕು ಅ- ಲ್ಲಿರುವಮೃಗಗಳನ್ನು | ಹೊಡೆದು ಸಂ- ತೋಷದಿ ಸುಖಿಸುವೆನು 19 ಮೂರೆರಡು ಕುದುರೆಯೈದು ಮೇಲ್ ಮೂರು ಪತಾಕಿಗಳು | ಅ- ಚ್ಚೆರಡು ಎರಡು ಕೂಬರಗಳು | ಚಕ್ರ ವೆರಡುವರೂಥಗಳೇಳು ಆರಥಕೊಪ್ಪುವದೇ- ಕರಶ್ಮಿನಾಲ್ಕೊಂದು ವಿಕ್ರಮಗಳು | ಒಬ್ಬ ಸಾರಥಿ ಎರಡು ಗತಿಗಳು | ಬಿಗಿಸಿಹುದು ಕನಕಭೂಷಣಗಳು 20 ಪುರಂಜನ ಭೂ- ಕಾಂತಕರದಿ ಧನುವ | ಪಿಡಿದುಸು- ಸ್ವಾಮತದಿಂದಲನುವಾ | ಗಿಬಹ ಹನ್ನೊಂ- ದು ತನ್ನ ಜನನ | ಸಂತಸದಲಿ ಕೂ- ಡುತ ಹೊರಡುತ ತಾ ಪೊಕ್ಕನು ಕಾನನವಾ | ಶರಗಳಿಂ- ದ್ಹೊಡದು ಮೃಗನಿವಹವಾ | ಮೇರೆಯಿಲ್ಲ- ದೆ ತಟ್ಟುತ ಭುಜವಾ 21 ಇನಿತು ಬೇಟೆಯಾಡುವ ಕಾಲದಿ ತನ್ನ ಮನದಿ ನೆನೆದು ಸತಿಯಾ | ತಕ್ಷಣವೇ ಬಂದು ಸೇರಿ ಮನೆಯ | ಕಾಣದೆ ಹುಡುಕಿದನು ಯುವತಿಯ ಮಂಚದೊಳಿಹ ಸತಿಯ | ಕಂಡುಲಾ- ಲಿಸುತ ಚಮತ್ಕøತಿಯಾ | ನುಡಿಯಲುಪ- ಚರಿಸಿದನಾಕಾಂತೆಯ 22 ನೂರುವರುಷವೀರೀತಿಯವಳೊಡನೆ ನೂರುಹನ್ನೊಂದು ಮಕ್ಕಳನ್ನು | ಪಡೆದು ಸಂ- ಸಾರದಿ ಕಾಲವನು | ಯಾರೆ- ಮೀರಿ ಹೋದುದಿನ್ನು | ಮೊಮ್ಮಕ್ಕಳ ಪಡೆದನನೇಕರನು ದೇಶತುಂಬಿಸಿದ ತನ್ನ | ವರನು 23 ಉತ್ತರ ದಕ್ಷಿಣ ಪಾಂಚಾಲಗಳಾ ಳುತ್ತಲಿವನು ತನ್ನ | ಸುತರಬೆರೆ- ಯುತ್ತಸದಾ ಚಿನ್ನ | ಬೆಳ್ಳಿ ನವ- ರತ್ನರಾಶಿಗಳನಾ | ಮತ್ತೆ ಮತ್ತೆ ಕೂಡಿ- ಸುತೈಶ್ವರ್ಯದಿ ಮತ್ತನಾ | ಗುತಲನ್ಯಾ ಚಿಂತೆಯಿಲ್ಲದೆ ನಾ | ಬಲು ಪುಣ್ಯವಂತನೆ | ನ್ನುತ್ತತಿಳಿದಿರುವನಾ 24 ಚಂಡವೇಗವೆಂಬುವರಾ ತಮ್ಮತಮ್ಮ ಹೆಂಡಿರುಗಳು ತಾವು | ಸೇರಿಮು- ನ್ನೂರರವತ್ತು ಜನವು | ಗಂಧರ್ವರು ಬಂಡೆಬ್ಬಿಸಿ ಪುರವು | ದಂಡು ಮುಂದಾಗೆ ರಿಪುಬಲವು | ಕ್ಷೀಣಗತಿ ಹೊಂದುತಲಿರೆ ಪುರವು 25 ಸ್ತ್ರೀಜಿತನಾಗಿಹಕಾರಣದಲಿಯಾ ರಾಜಪುರಂಜನಗೆ | ಯತ್ನವಿ- ಲ್ಲದೆ ತನ್ನಯಪುರಿಗೆ | ಕೇಡುಬಂ- ದರು ತೋರದು ಕೊನೆಗೆ | ಶೋಕದಿ ಮನದೊಳಗೆ | ಮಿ ಡುಕುತಲಿರಲಾನೃಪತಿಮೇಗೆ | ಮತ್ತು ಶತ್ರುಗಳುನೆರೆಯೆ ಹೀಗೆ 26 ಯವನೇಶ್ವರನೊಬ್ಬನುಭಯಪ್ರಜ್ವಾ ರಾದಿ ಸೈನಿಕರನು | ಕಾಲಕನ್ಯಾಖ್ಯ ಯುವತಿಯನ್ನು | ಕರೆದುಕೊಂ- ಡೀಪುರವ ಸೇರಿದನು | ಬವರದಿ ಗೆದ್ದನು ಭವಿಸಿದನಾ ಕನ್ಯಾಮಣಿಪಟ್ಣವನು | ಭೋಗಿಸಿದ- ಳಾಪ್ರಜ್ವಾರನನು | ಸುಡಲುಪುರಿ ಕಂಡು ಪುರಂಜನನು 27 ಕಾಲಕನ್ಯೆ ತಾ ಲೀಲೆಯಿಂದಲಿ ನೃ- ಪಾಲನ ಹತ್ತಿಗೆಯಾ | ಪಿಡಿಯೆ ಹಾ- ಹಾಯೆನಲಾರಾಯಾ | ಅಬಲತೋ- ರದು ಮುಂದೆ ಉಪಾಯ | ಬಾಲಕರನು ಪತ್ನಿಯ | ನುಕೂಗಿಬಿಡು-
--------------
ಗುರುರಾಮವಿಠಲ
ಪುರಂದರ ದಾಸರಾಯರ ಪೋಷಿಸುವ ಸಂತೋಷದಿಂದಲಿ ಪ ಪುರಂದರಗಡಾದ ಒಳಗೆ ಹಿರಿಯ ಸಾವುಕಾರನೆನಸಿ ಪರಿಪರಿಯ ಸೌಖ್ಯಗಳ ಸುರಿಸುತ್ತ ಇರುತಿರಲು ನರಹರಿ ತ್ವರಿತದಿಂ ಬ್ರಾಹ್ಮಣನಾಗುತ್ತ ಪೋಗುತ್ತ ಯಜಮಾನ ಕಂಡು ಜರಿದು ಬ್ರಾಹ್ಮಣನ್ಹೊರಗೆ ಹಾಕಲು ಮರುದಿವಸ ಮತ್ಹೋಗಿ ನಿಂತ 1 ಭಾರಿಭಾರಿಗೆ ಸಾವುಕಾರನ ಮೋರೆಗ್ಹೊತ್ತಿ ಮೇರೆಯಿಲ್ಲದೆ ಆರು ತಿಂಗಳು ಬೆನ್ನು ಬೀಳುತ್ತ ನಾಯಕರು ಈತನ ಆರು ಅಟ್ಯಾರೆಂದು ಬೈಯುತ್ತ ಬೇಸತ್ತು ಎರಡು ಹೇರು ರೊಕ್ಕಾ ಮುಂದೆ ಸುರಿಯುತ್ತ ಅದರೊಳಗೊಂದು ಡ್ಡಾರಿಸಿಕೋ ಎಂದು ಹೇಳಲು ನಾರಾಯಣ ಬಿಟ್ಹೋದ ನಗುತ2 ಹಿತ್ತಲಾ ಬಾಗಿಲಿಗೆ ಹೋಗಿ ಮತ್ತೆ ಆತನ ಮಡದಿಗಾಗಿ ವಿತ್ತ ತಾ ಯೆನುತ ತನ ಮಗನ ಮುಂಜ್ಯೆಂ ದೆತ್ತಿ ಕರದಿಂ ಬಾಯಿ ತೆರೆಯುತ್ತ ಆ ಪ್ರಾಣಿ ನುಡಿದಳು ಎತ್ತಣ ದ್ರವ್ಯವು ತನಗೆನುತ ನಿನ್ನ ಮೂಗಿನ ಮುತ್ತಿನ ಮೂಗುತಿಯ ಕೊಡು ಎನೆ ಉತ್ತುಮಳು ತೆಗೆದಿತ್ತಳಾಕ್ಷಣ 3 ಆಕಿ ಗಂಡನ ಕಣ್ಣೆದುರಿಗೆ ಹಾಕಿದನು ತಾ ಪಾಕಿ ಕೊಡೆಯೆನುತ ಅದು ಕಂಡು ಇದು ನ ಮ್ಮಾಕಿದೆಂದು ಈತ ನುಡಿಯುತ್ತ ಅನ್ಯರದು ಯಿಂಥಾ ದ್ಯಾಕೆ ಯಿರಬಾರದೆನ್ನುತ್ತಾ ಬೆಲೆ ಹೇಳು ಎನಲು ಎಂದಾಕೆ ಹೋದನು ತಿರೂಗಿ ಬಾರದೆ 4 ತಿರುಗಿ ಬ್ರಾಹ್ಮಣ ಬಾರದಿರಲು ಕರೆದು ತನ್ನ ಹೆಂಡತಿಯ ಬರಿಯ ನಾಶಿಕವನ್ನೆ ಕಂಡುನು ಮೂಗುತಿಯ ಎಲ್ಲೆನೆ ಮುರಿದಿಹುದು ಯೆಂದಾಕೆ ಹೇಳಲು ಒಳಗ್ಹೋಗಿ ನೀ ತಾರದಿರೆ ಅರೆವೆ ನಿನ್ನಯ ಜೀವವೆಂದನು ವಿಷಕೊಂಬೆನೆಂದು ಕರದಿ ಬಟ್ಟಲು ಧರಿಸಲಾಕ್ಷಣ ತ್ವರಿತದಲಿ ಹರಿ ಅದರೊಳಾಕಿದ 5 ಪುರುಷನಾ ಕೈಕೊಳಗೆಯಿಡಲು ತರಿಸಿ ತನ್ನಲ್ಲಿದ್ದ ಪೆಟ್ಟಿಗೆಯಾ ಅದು ಕಾಣದಿರಲು ಬೆರಗಾಗಿ ನೋಡಿದನು ಮಡದಿಯ ನಿಜ ಪೇಳುಯೆನಲು ಅರಸಿ ಪೇಳ್ದಳು ಕೊಟ್ಟ ಸುದ್ದಿಯಾ ಅಭಿಮಾನಕಂಜಿ ಅರದು ವಿಷವನು ಕುಡಿವೆನಲು ಸಿರಿರಮಣಾ ಕೊಟ್ಟ ಖರಿಯಾ 6 ಬಂದಿದ್ದ ಪರಿಪಕ್ವವೆನಗೆ ನ್ನಾವ ಕಾಲಕೆ ಆಗಬೇಕೆಂದ ವೈರಾಗ್ಯಭಾವದಿ ಜೀವಿಸಿಕೊಂಡಿರುವುದೇ ಛಂದ ಹೀಗೆನುತ ಮನೆ ಧನ ಕೋವಿದರ ಕರೆದಿತ್ತ ಹರುಷದಿ ಕಾವನಯ್ಯನ ದಾಸನಾದ 7 ಲಕ್ಷ್ಮಿಪತಿಯ ಪಾದದಲ್ಲಿ ಲಕ್ಷ್ಯವಿಟ್ಟು ವ್ಯಾಸರಾಯರ ಶಿಕ್ಷೆಯಿಂದಲಿ ಅಂಕಿತವ ಕೊಳುತ ತಿರಿಪಾದ ಐದು ಲಕ್ಷಪದ ಸುಳಾದಿ ಪೇಳುತ್ತ ಪ್ರತಿದಿವಸದಲ್ಲು ಅಪರೋಕ್ಷ ಪುಟ್ಟಲು ಮೋಕ್ಷಸ್ಥಾನಕ್ಕೆ ಕರೆದೊಯ್ದು ಅ ಧೋಕ್ಷಜನು ಸಂರಕ್ಷಿಸಿದ 8 ಘೊರ ನರಕದೊಳಗೆ ಬಿದ್ದಾ ಪಾರ ಜನರು ಚೀರುತಿರಲು ದ್ಧಾರ ಮಾಡಿದ ನಾರದಾರಿವರು ಅವ ತಾರ ಮಾಡಿ ಧಾರುಣಿಯಲಿ ಮತ್ತೆ ಬಂದರು ಸರುವೋತ್ತಮ ಹರಿ ನಾರಾಯಣನೆ ಎಂದು ಸಾರಿದರು ಹೀಗೆಂದು ತಿಳಿಯಲು ಮಾರ ಜನಕ ವಿಜಯವಿಠ್ಠಲ ಆರಿಗಾದರು ಒಲಿವ ಕಾಣಿರೊ 9
--------------
ವಿಜಯದಾಸ
ಪುರಂದರ ದಾಸರೇ ನಿಮ್ಮ ಚರಣ ಸರಸಿಜ ನಂಬಿದೆ ಪ ಗುರುವ ರಹಿತರ ಮಾಡಿ ನಮ್ಮನು ಪೊರೆವ ಭಾರವು ನಿಮ್ಮದೆ ಅ ಒಂದು ಅರಿಯದ ಮಂದಮತಿ ನಾನಿಂದು ನಿಮ್ಮನು ವಂದಿಪೆ ಇಂದಿರೇಶನ ತಂದು ತೋರಿಸಿ ತಂದೆ ಮಾಡೆಲೊ ಸತ್ಕøಪೆ 1 ಪುರಂದರ ಗಡದೊಳಗೆ ನಿಂದು ನಿರುತ ದ್ರವ್ಯವÀ ಗಳಿಸಿದೆ ಕರವ ನೀಡಿ ಯಾಚಿಸೆ 2 ಪರಮ ನಿರ್ಗುಣ ಮನವರಿತು ಹರಿಗೆ ಸೂರೆಯ ನೀಡುತ ತರುಣಿ ಸಹಿತಾ ಹೊರಟನೆ 3 ಮಾರಜನಕನ ಸನ್ನಿಧಾನದಿ ಸಾರಗಾನವ ಮಾಡುವ ನಾರದರೆ ಈ ರೂಪದಿಂದಲಿ ಚಾರುದರುಶನ ತೋರಿದ 4 ಅಜಭವಾದಿಗಳರಸನಾದ ವಿಜಯವಿಠ್ಠಲನ ಧ್ಯಾನಿಪ ಭಜಿಪೆನೋ ಕೇಳ್ ಗುರುವರ 5
--------------
ವಿಜಯದಾಸ
ಪುರಂದರ ದಾಸರಾಯಾ | ನಮಿಸೆ ನಿಮ್ಮಚರಣ ಸರಸೀರುಹವಾ ಪ ಮೊರೆಹೊಕ್ಕ ಜನರ ನೀ | ಪೊರೆಯದೆ ಬಿಡುವರೆವರಪ್ರಹ್ಲಾದ್ ಗರುಹಿದಂ | ತರುಹು ಮಂತ್ರಾರ್ಥಿವ ಅ.ಪ. ದ್ವಾರಕ ಪುರದೊಳಗೆ | ನರ್ತನ ಗೈಯ್ಯೆವಾರ ಕಾಂತೆಯರೆಲ್ಲರೂ |ಭೋರಿಟ್ಟು ಮೊರೆಯುವ | ಸ್ವರಕೇಳಿ ಸುರರೆಲ್ಲಹರಿಯ ಓಲಗವಾರು | ಹೊಗುವರು ಎಂದರು1 ಓಲಗ ಸೇರ್ದ 2 ಷೋಡಶದ್ವಯ ಸ್ವರದಿ | ಮೈ ಮರೆಯುತ್ತಪಾಡಿ ಪೊಗಳಿ ಮುದದೀ |ಮೃಡವಂದ್ಯ ಹರಿಯವನ | ಕಡುಭಕುತಿಗೆ ಮೆಚ್ಚಿನೀಡುವೆ ವರವ ನೀ | ಬೇಡು ಬೇಡನೆ ಪೇಳ್ದ3 ಎಚ್ಚತ್ತು ಮುನಿ ನೋಡಿದ | ನಗುತಿರ್ಪಅಚ್ಚ್ಯುತನ್ನಾ ಬೇಡಿದ |ಸಚ್ಛಾರಿತ್ರನೆ ಕೇಳು | ನಿಚ್ಚಾಟೆನ್ನಯ ಕೂಡೆಪೆಚ್ಚ ಪೇರ್ಮಲಿ ಆಡು | ಲಕ್ಷಣಾಗ್ರಜನೇ 4 ಪುರಂದರ | ಗಡದಲ್ಲುದೀಸಿದ 5 ಚಿನಿವಾರ ವರದನಲ್ಲೀ | ಜನಿಸುತ್ತಧನ ನವಕೋಟಿಯ ಗಳಿಸೀ |ಘನ ಲೋಭಿ ದ್ವಿಜನ | ಜ್ಞಾನೋದಯ ಮಾಡುತಘನಗುಣ ಸಿರಿಪತಿ | ಅಣುಗನ್ನ ಪೊರೆದ 6 ಪುರಂದರ ದಾಸರ 7 ಹಿರಿಯ ವೈರಾಗ್ಯ ಪೊಂದಿ | ಸಕಲವನ್ನುಸಿರಿಕೃಷ್ಣಗರ್ಪಣೆಂದೀ |ಗುರು ವ್ಯಾಸರಲಿ ಪುರಂ | ದರನೆಂಬಂಕಿತ ಪೊಂದಿಪರಿಸರ ಮತ ಸರ್ವೋತ್ತಮವೆಂದು ಬರೆದಂಥ8 ಸಾರ ವಿಸ್ತಾರದಿವೇದ ಗಮ್ಯಾನಂದ | ಮಯನ ಬೋಧಿಸಿದ 9ನಾಲ್ಕಾರು ಜನ ಶಿಷ್ಯರ | ಜ್ಞಾನೀಗಳ ಲೋಕೋದ್ದಾರಕೆ ಈಯುತೆ ಕಾಕು ಮಾಯ್ಮತಗಳ | ಸಾಕಷ್ಟು ಖಂಡಿಸಿಮಾಕಳತ್ರನ ಮಹಿಮೆ | ಮನೆಮನೆ ಬೀರಿದ 10 ಮಾಸ ಪುಷ್ಯವದ್ಯದೀ | ಪರಮೋತ್ತಮಶಶಿ ರವಿಗಳ ಮೇಳದೀ |ರಸೆಯ ತ್ಯಜಿಸಿ ಗುರು ಗೋವಿಂದ ವಿಠಲನಎಸೆವ ಪಾದಗಳ್ಬಿಸಜ | ಸೇರುತ ಮೆರೆದಾ 11
--------------
ಗುರುಗೋವಿಂದವಿಠಲರು
ಪುರಂದರದಾಸರ ಸ್ತೋತ್ರ ಪಾದ ಪದ್ಮಕ್ಕೆ ಎರಗುವೆನು ಸಲಹೆಮ್ಮ ಪ ಸುರಮುನಿಯು ನಾರದರೆ ಹರಿಯಾಜ್ಞದಿಂದ ಶ್ರೀಪುರಂದರಾ ಗಡದಲ್ಲಿ ಅವತರಿಸಿದೆತರುಣಿ ಮಕ್ಕಳು ಕೂಡೆ ಪರಮ ಸೌಖ್ಯದಲಿರುತಹರುಷದಲಿ ಮನೆಧನವ ಭೂಸುರರಿಗರ್ಪಣೆ ಮಾಡ್ದೆ 1 ಆದಿಕಾರಣ ನೀವು ದಾಸಮಾರ್ಗಕೆ ಪ್ರ-ಹ್ಲಾದನವತಾರ ಶ್ರೀ ವ್ಯಾಸಮುನಿಯಾಪಾದಕೆ ನಮಿಸಲುಪದೇಶವನು ಕೈಕೊಂಡುಮೋದತೀರ್ಥರ ಚರಣ ನಾದದಿಂದಲಿ ತುತಿಪೆ 2 ಅದ್ವೈತ ಮತವ ಕಾಲಿಲೊದ್ದು ಶ್ರೀ ಗುರುಮಧ್ವ ಸಿದ್ಧಾಂತವನು ಮಾಡಿದಶುದ್ಧ ಭಕ್ತಿ ಜ್ಞಾನ ವೈರಾಗ್ಯ ಪರರಾಗಿಮಧ್ವ ವಲ್ಲಭನ ಪದ ಹೃದ್ಗುಹದಿ ಪೂಜಿಸುವ 3 ಪಂಚಭೇದ ಸತ್ಯವೆಂದು ಪೇಳಿಹರಿಪುರವ ಸಾರ್ದ ಶ್ರೀ ಪುರಂದರರಾಯ 4 ತತ್ತ್ವ ಶೋಧನ ಮಾಡಿ ತತ್ತ್ವೇಶರನು ತಿಳಿದುತತ್ತತ್ಕಾಲಕೆ ಮಾಳ್ಪ ಕರ್ಮಗಳನಾಉತ್ತಮ ಶ್ಲೋಕ ಪುರುಷೋತ್ತಮನಿಗರ್ಪಿಸಿಮುಕ್ತಿ ಮಾರ್ಗವ ಪಿಡಿದೆ ಅತ್ಯಂತ ಮಹಾಮಹಿಮ 5 ಸಿರಿ ಬ್ರಹ್ಮ ವಾಯುಗರುಡ ಭುಜಂಗ ಮಾರಹರ ಇಂದ್ರ ಸುರರೆಲ್ಲ ತರತಮದಿ ದಾಸರೆಂಬುವ ಜ್ಞಾನ ಕರುಣಿಸುವುದು 6 ದಾಸವರ್ಯರೆ ವಿಜಯದಾಸರಾಯರಿಗುಪದೇಶಿಸಿದ ಪುರಂದರದಾಸರಾಯಶೇಷಗಿರಿವಾಸ ವೆಂಕಟ ವಿಠ್ಠಲನ ನಿಜದಾಸರಾ ದಾಸನೆಂದೆನಿಸೆನ್ನ 7
--------------
ವೆಂಕಟೇಶವಿಟ್ಠಲ