ಒಟ್ಟು 5098 ಕಡೆಗಳಲ್ಲಿ , 128 ದಾಸರು , 3277 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೇತ್ರ - ತ್ರಯನೇ | ಅಹಿಪದ ಪಾತ್ರಾ ||ಗೋತ್ರಾರಿ ಪಂಕೇರುಹ ಮಿತ್ರಾ | ಸ್ತೋತ್ರ ಪಾತ್ರ ಶತಪತ್ರ ಪ ಚಿತ್ರ ಚರಣ ಭುವನತ್ರಯ ದೊಳಹಂತತ್ವ ವ್ಯಾಪ್ತ ಗೌರವ ಗಾತ್ರಾ ಅ.ಪ. ಸ್ಥಾಣು ವೃಷಭೇಕ್ಷಣ ನೀರಕ್ಷ 1 ಪಾವಕ ಶ್ವೇತ ಗಿರೀಶ ಉಗ್ರೇಶ 2 ಸಿರಿ ಲೋಲನ ತೋರ್ವುದು3
--------------
ಗುರುಗೋವಿಂದವಿಠಲರು
ನೇತ್ರಾವತಿಯ ವಾಸಾ | ಪ್ರಮಥ ಪೋಷಾಸೂತ್ರತನಯನೆ ಕಾಯೊ | ಭಕ್ತ ಜನ ಪೋಷಾ ಪ ಲೌಕಿಕ ಕುಕರ್ಮಗಳ | ನಾಚರಿಸಿ ಬಲು ವಿಧಧಿಕಾಕು ಜನರಾ ಸಂಗ | ಬಳಸಿ ಭವದೀ |ಏಕಮೇವನ ಚರಣ | ತೋಕನೆಂದೆನಿಸದಲೆನೂಕಿ ಎನ್ನಾಯುಗಳ | ವ್ಯರ್ಥ ಕಳೆವೇ 1 ಕೃತ ತ್ರೇತ ದ್ವಾಪರದಿ | ವ್ಯಕ್ತನಾಗುತ ನೀನುಚತುರದೊಳಗೇ ಮಂಜು | ನಾಥನೆನಿಸೀ |ಕೃತಿಪತಿಯ ಸಚ್ಚರಣ | ಶತಪತ್ರ ಭಜಿಪರಿಗೆಗತಿ ತೋರಿ ಸನ್ಮುಕುತಿ | ಪಥಕೆ ಕೊಂಡೊಯ್ವೇ 2 ಯತಿವಾದರಾಜರಿಂ | ಹಿತದಿ ಕದರೀಯಿಂದಪೃಥುಕು ನೃಹರಿಯ ಶಿಲೆಯು | ಸ್ಥಿತ ಧರ್ಮಸ್ಥಳದೀಕೃತವು ವೈಷ್ಣವ ಪೂಜೆ | ಚತುರಯುಗ ಮೂರುತಿಯೆವಿತತ ಮಹಿಮನ ತೋರ್ವ | ಮತಿಮಾಡೊ ಶರ್ವಾ3 ವೈಕಾರಿಕಾದಿ | ಸಾಕಾರಿ ಮಹದೇವಕೈಕೊಳುತ ಮನ್ಮಾತ | ನೋಕರಿಸದೇ |ಪ್ರಾಕ್ಕು ಕರ್ಮವ ಕಳೆದು | ನೀ ಕೊಡುವುಧ್ಹರಿ ಭಕುತಿನಾಕಪತಿ ವಂದ್ಯ ಸ | ನ್ನಾಕನದಿ ಧರನೇ 4 ಗುಣ ಪೂರ್ಣನಾದ ಗುರು | ಗೋವಿಂದ ವಿಠಲ ಪದವನಜ ಬೇಡುವೆ ಮನದಿ | ಕರುಣಾನಿಧೇ |ಅನಲಾಕ್ಷ ನಿನ್ನೊಲಿಮೆ | ಇಲ್ಲನಕ ಗತಿಯಿಲ್ಲಬೆನಕ ಪಿತ ಮನಮಾನಿ | ಎನಗೊಲಿಯೊ ಶಿವನೇ5
--------------
ಗುರುಗೋವಿಂದವಿಠಲರು
ನೊಂದು ಬಂದೆನೊ ಕಾಂತೇಶ | ಕೈಯನೆ ಪಿಡಿಯೊ ಮಂದಭಾಗ್ಯಳ ಜೀವೇಶ ಪ. ಅಂದು ಶ್ರೀ ರಾಮರ ಸಂದೇಶವನ್ನೆ ಭೂ- ನಿಂದನೆಗೆ ಅರುಹುತಲಿ ಬಹು ಆನಂದಪಡಿಸಿದ ವಾನರೇಶ ಅ.ಪ. ಶೌರಿ | ಭಕ್ತರ ಕಾಯ್ವ ದುರಿತದೂರನೆ ಉದಾರಿ ಚರಣಕ್ಕೆ ನಮಿಸುವೆ ಹರಿಗೆ ಪರಮಾಪ್ತನೆ ದುರಿತ ತರಿಯುತ ಪೊರೆಯೊ ಗುರುವರ ರಾಮಕಿಂಕರ 1 ಗುರುಕರುಣದ ಬಲದಿ | ಅರಿತೆನೊ ನಿನ್ನ ಚರಣ ನಂಬಿದೆ ಮನದಿ ಪರಿ ಭವಕ್ಲೇಶ ಪರಿಯ ಬಣ್ಣಿಸಲಾರೆ ಹರಿವರನೆ ದಯಮಾಡು ಶ್ರೀ ಹರಿ ದರುಶನವನನವರವಿತ್ತು 2 ಕಾಂತನ ಅಗಲಿರಲು | ಚಿಂತೆಯಲಿ ಭೂ ಕಾಂತೆ ವನದೊಳಗಿರಲು ಸಂತೋಷದಿಂ ರಾಮನಂತರಂಗವನರುಹಿ ಸಂತಸವಪಡಿಸುತಲವನಿಸುತೆಯ ನಿಂತೆ ರಾಮರಿಗ್ಹರುಷ ತೋರಿ 3 ದ್ರುಪದ ಸುತೆಯಳ ಕೀಚಕ | ದುರ್ಮನದಲಿ ಅಪಮಾನಪಡಿಸೆ ದುಃಖ ತಪಿಸಿ ನಿನ್ನನು ಬೇಡೆ ಆ ಪತಿವ್ರತೆ ಸತಿ ಕುಪಿತದಿಂದಲಿ ಖಳನ ಕೊಂದೆ ಅಪರಿಮಿತ ಬಲಭೀಮ ಪ್ರೇಮ 4 ಮಿಥ್ಯಾವಾದದ ಭಾಷ್ಯಕೆ | ಸುಜ್ಞಾನಿಗಳ್ ಅತ್ಯಂತ ತಪಿಸುತಿರೆ ವಾತಜನಕನಾಜ್ಞೆ ಪ್ರೀತಿಯಿಂದಲಿ ತಾಳಿ ಘಾತುಕರ ಮತ ಮುರಿದ ಮಧ್ವನೆ ಖ್ಯಾತಿ ಪಡೆದೆÀ ಸಿದ್ಧಾಂತ ಸ್ಥಾಪಿಸಿ 5 ಪ್ರಾಣಪಾನವ್ಯಾನ | ಉದಾನ ಸ ಮಾನ ಭಾರತಿ ಕಾಂತನೆ ಜ್ಞಾನಿಗಳಿಗೆ ಪ್ರೀತ ಜ್ಞಾನ ಭಕ್ತಿಪ್ರದಾತ ದೀನಜನ ಮಂದಾರ ಕಾಯೊ ದೀನಳಾಗಿಹೆ ಕೈಯ ಮುಗಿವೆ 6 ನೋಯಲಾರೆನೊ ಭವದಿ | ಬೇಗನೆ ತೋರೊ ಧ್ಯೇಯ ವಸ್ತುವ ದಯದಿ ವಾಯುನಂದನ ನಿನ್ನ ಪ್ರಿಯದಿಂ ನಂಬಿದೆ ಕಮಲ ದ- ಳಾಯತಾಕ್ಷನ ಮನದಿ ತೋರಿ7 ಹರಣ ನಿನಗೊಪ್ಪಿಸಿದೆ | ಸುರವಂದಿತ ಕರೆದು ಮನ್ನಿಸಿ ಕಾಪಾಡೊ ಸಿರಿವರನನು ಹೃತ್ಸರಸಿಜದಲಿ ತೋರೊ ಧರೆಯ ವಸ್ತುಗಳ್ ಮಮತೆ ತೊರೆಸು ಹರಿಯ ನಾಮಾಮೃತವನುಣಿಸು 8 ಈ ಪರಿಬಂದೆ ಅನಿಲ | ನಿನ್ನೊಳು ವಾಸ ಗೋಪಾಲಕೃಷ್ಣವಿಠ್ಠಲ ಶ್ರೀಪತಿ ಕೃಪೆಯಿಂದ ನೀ ಪ್ರೀತನಾಗುತ ಕೈಪಿಡಿದು ಸಂತೈಸು ಕರುಣದಿ ಭಾಪುರೇ ಕದರುಂಡಲೀಶ 9
--------------
ಅಂಬಾಬಾಯಿ
ನೊಂದು ಸಂಸಾರದೊಳಗೊಂದಿಸುವೆನೋ ಇಂದು ಮಾಧವ ಯಾದವ ಪ ಕರುಣಬಾರದೆ ನಿನಗೆ ಅಕಟಕಟ ಅಕಟಕಟ ಶರಣ ನಾ ನಿನಗಲ್ಲವೇ ಸ್ವಾಮಿ ನಿನ್ನ ಮೊರೆಹೊಕ್ಕೆ ಸರ್ವಾಂತರ್ಯಾಮಿ-ಎನ್ನ ಎರವು ಮಾಡುವರೇನೋ ಪ್ರೇಮಿ-ಇನ್ನು ಪರಿಹರಿಸು ಸಂಚಿತಾಗಾಮಿ-ಇದೇ ಸರಿಯೇನೊ ಜಗದೊಳಗೆ ಭಕುತವತ್ಸಲನೆಂಬ ಬಿರುದು ಪೊಳ್ಳಾಗದೇನೊ ನಿರುತ ಖ್ಯಾತ1 ಸತತ ಸುಖವುಳ್ಳರೆ ಬಾಯ್ದೆರೆದು ಪಲ್ಗಿರಿದು ನುತಿಸಿ ಬೇಡಿಕೊಂಬೆನೇ ನಿನ್ನ- ಮುಂದೆ ಗತಿಯ ಕಾಣದಲೆ ಚಾಲ್ವರಿದೆ ಭೇದ- ಮತಿ ಕೊಡದೆ ನೋಡುವುದು ಬರಿದೆ-ಸರ್ವ ಕ್ಷಿತಿಯೊಳಗೆ ನೀನೆಂದು ಅರಿದೆ-ವರ- ತತುವ ನಿಯ್ಯಾಮಕರ ಬಳಿ ಪಿಡಿದು ನಿನ್ನಂಘ್ರಿ ಶತಪತ್ರ ತೋರಿಸೈಯ್ಯಾ ಜೀಯಾ 2 ಶೃತಿಶಾಸ್ತ್ರ ಪೌರಾಣ ಭಾರತ ರಾಮಾಯಣ ಇತಿಹಾಸ ಪಾಂಚರಾತ್ರ ನಿಗಮ-ನಿನ್ನ ತುತಿಪ ಭಕುತರಿಗೆ ತಲೆಬಾಗಿ-ಕೊಂಡು ಪ್ರತಿದಿವಸದಲಿ ಚೆನ್ನಾಗಿ-ವಲಿದು ಅತಿಶಯವ ಕೊಡುತ ಲೇಸಾಗಿ-ವಿಘ್ನ ತತಿಕಳೆದು ನೀ ಬಂದು ಸಾರೆ ಬೆರಗಾಗುತಿದೆ ಪತಿತಿ ಪಾವನ ಮೋಹನ-ಚೆನ್ನ3 ತಡವ್ಯಾಕೆ ಗುಣಕಾಲ ಕರ್ಮದೇಶಗಳೆಲ್ಲ ವಡೆಯ ಎನ್ನಾಧೀನವೇ ಪೇಳೊ-ದು:ಖ ಬಿಡಿಸುವುದು ನಿನಗುಚಿತವಲ್ಲ-ಪಾಟು ಸಿರಿ ಲಕುಮಿನಲ್ಲ-ಒಂದು ನುಡಿವೆ ನಾನಾಂತರ್ಯ ಸೊಲ್ಲ-ಇಂತು ಕಡೆಮಾಡಿ ನೋಡದಿರು ದಿವಸ ಹಿಂದಾಗುತಿದೆ ಬಡವರಾಧಾರಿ ಕರುಣೀ-ದಾನಿ4 ಧ್ರುವನು ನಭದೊಳು ಇಲ್ಲಿ ರಾವಣಾನುಜ ಅಧೋ ಭುವನದಲಿ ಬಲಿರಾಯನ ನೋಡಿ, ನಾನು ತವಪಾದ ಗತಿಯೆಂದು ಬಂದೆ-ಮಹಾ ಭವಣೆ ಬಟ್ಟೆನೊ ಕೇಳು ಹಿಂದೆ-ಜಗದಿ ತ್ರಿವಿಧ ತಾಪಗಳಿಂದ ನೊಂದೆ-ಈ ಅವಸರಕೆ ಬಂದೊದಗಿ ನಿನ್ನ ನಾಮಾಮೃತದ ಸವಿದೋರೊ ದ್ವಾರಾವತಿಯ-ಜೀಯ 5 ಅಂಧಕೂಪದಲಿ ಬಿದ್ದವನ ನೋಡಿ ನಿನಗೆ ಚ ಕ್ಕಂದವಾಗಿದೆಯೊ ಕಾಣೆ-ನಾನು ಸಂದೇಹ ದ್ವೇಷದವನಲ್ಲ-ಇದು ಎಂದೆಂದಿಗೂ ಪುಸಿಯು ಅಲ್ಲ-ಹೃದಯ- ಮಂದಿರದೊಳು ಬಲ್ಲೆಯೆಲ್ಲ-ಸ್ವಾಮಿ ನೊಂದು ಕೂಗಿದರೆ ಎಳೆಗಂದಿಯೆಂಬಾ ಮಾತು ಇಂದು ಎತ್ತಲಿ ಪೋಯಿತೋ ತಾತ-ನೀತ 6 ಗುಣವಂತ ಬಲವಂತ ಜಯವಂತ ಸಿರಿವಂತ ಘನವಂತ ಧೈರ್ಯವಂತ ಶ್ರೀಕಾಂತ-ಎನ್ನ ಮನದ ದುಮ್ಮಾನವನೆ ಬಿಡಿಸೊ-ನಿನ್ನ ಅನವರತ ನಾಮವನು ನುಡಿಸೊ-ಮಧ್ವ ಮುನಿ ಕರುಣ ಕವಚವನು ತೊಡಿಸೊ-ಇದೇ ಜನುಮ ಜನುಮಕೆ ಬೇಡಿಕೊಂಬೆ-ಶರಣೆಂಬೆ ಪ್ರಣತ ಹೃದಯಾಬ್ಜ ತುಂಬೆ-ಕಾಂಬೆ 7 ಮಾನಸ್ನಾನವನುಂಡು ಮತಿಗೆಟ್ಟ ಪೂರ್ಣ ವಿ ಜ್ಞಾನಮಯನೆ ನಿನ್ನ ಮರೆದೆ-ಕರ್ಮ ಪ್ರಾಣೇಂದ್ರಿಯಂಗಳು ನಿನ್ನ ವಶವೊ-ಇಂಥ ಜಾಣತನ ಬಹಳ ಸಂತಸವೊ-ಹೀಗೆ ಮಾಣದಲೆ ಇಪ್ಪ ಸಾಹಸವೋ ಚನ್ನ ಜ್ಞಾನ ಭಕುತಿ ವಿರಕುತಿ ಕೊಟ್ಟು ನಿನ್ನವರೊಳಾನಂದದಲಿ ನಿಲ್ಲಿಸೈಯ್ಯ ಜೀಯ 8 ಶಂಖ ಚಕ್ರ ವರಾಭಯ ಹಸ್ತದಲಿ ನಿಂದ ವೆಂಕಟಾಚಲ ನಿವಾಸ ಶ್ರೀಶ-ನಿನ್ನ ಕಿಂಕರನ ಕಿಂಕರನೊ ನಾನು-ಅಕ- ಳಂಕ ಮನುಜನ ಮಾಡೊ ನೀನು-ಭವ ಸಂಕಟವ ಕಳೆಯಾ ಸುರಧೇನು-ಬೊಮ್ಮ ವಿನುತ ವಿಜಯವಿಠ್ಠಲ ಹರಿ- ಣಾಂಕ ಸೌವರ್ಣ ಪೂರ್ಣ ಸಂಪೂರ್ಣ 9
--------------
ವಿಜಯದಾಸ
ನೋಡಮ್ಮಾ ಶ್ರೀ ವಾಸುದೇವನಾ ನಮ್ಮ ಬೇಡಿದಿಷ್ಟಾರ್ಧವ ನೀವನಾ ಪ ಪರ ಬ್ರಹ್ಮ ರೂಢಿಗೆ ನರಲೀಲೆಯಾಡುವ ಬಗೆಯಾಅ.ಪ ದೇವರ ಅನುಮತ ನೋಡಿದಾ ಅಂವ ದೇವಕಿ ಉದರದಿ ಮೂಡಿದಾ ಪಾವನ ಗೋಕುಲ ಮಾಡಿದಾ ಸುಖ ದೇವಿ ಯಶೋದೆಗೆ ನೀಡಿದಾ ಆವಾವ ಪರಿಯಲಿ ನೋವ ಬಗೆಯ ಬಂದು ಗಾಲಿಲ ಅಸುರರ ಜೀವನ ವಳಿದಾ 1 ಗೊಲ್ಲತೆಯರ ಮನಮೋಹಿಸಿ ಕದ್ದು ಅಲ್ಲಿಹ ಪಾಲ್ಬಣ್ಣೆ ಸೇವಿಸಿ ಬಿಲ್ಲ ಹಬ್ಬದ ನೆವತೋರಿಸಿ ಪೋಗಿ ಮಲ್ಲಚಾಣರರಾ ಭಂಗಿಸೀ ಬಲ್ಲಿದ ಕಂಸನ ಮಲ್ಲಯದ್ಧಗಳಿಂದ ಘಲ್ಲಿಸಿದನು ಜನಚಲ್ಲಿ ಬಡಿದನಾ 2 ನೀರೊಳು ಕಟ್ಟಿಸಿ ಮನೆಯನು ಬಂಗಾರದ ದ್ವಾರಕಾ ಪುರವನು ಸೇರಿಸಿ ಯದುಕುಲದವರನು ರುಕ್ಮಿ ಣೀ ರಮಣಲ್ಲಿಗೆ ಮರೆದನು ಸಾರಿದ ಶರಣರಾ ತಾರಿಸಿ ಹೋದನು ಮಹಿಪತಿ ನಂದನ ಪ್ರೀಯನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಯ್ಯ ನಿನ್ನ ದಾಸರ ಮೇಲೆ ಕೃಪೆಗಳನುಮಾಡಯ್ಯ ಮನ್ಮನಕೆ ಸಂತಸವನುತೀಡಯ್ಯ ಭವಭಯದ ಪಾತಕಂಗಳ ದಾನವಾಡ ಗುಡ್ಡದ ತಿರುಮಲೇಶ ಸರ್ವೇಶ ಪ ಆದಿಯಲಿ ವೇದಗಳ ಕದ್ದುಕೊಂಡೊಯ್ದವನಸಾಧನಂಗೆಯ್ವೆನೆಂದಾಕ್ಷಣದೊಳುಪೋದನೆಲ್ಲೆನುತ ಶರನಿಧಿಯೊಳಗೆ ಪೊಕ್ಕ ಮ-ತ್ತಾ ದಿತ್ಯನಂ ಕೊಂದು ತಿಕ್ಕಿಮುಕ್ಕೆನೀ ದಯಾ ಪಾತ್ರನೆಂಬುದ ಕೇಳಿ ನಾನರಿತೆಭೂ ಧರೆಯ ಸುರರ ನೀ ಸಲುಹಲಾಗಪೋದ ನಿಗಮಂಗಳನು ತಂದು ಸಲೆ ರಕ್ಷಿಸಿದೆಆದಿ ಮತ್ಸ್ಯವತಾರ ಶರಣೆಂಬೆನು 1 ಮೂರ್ತಿ ನೀನಂದು ಬೇರೆಸುಮತವನು ಬೆನ್ನಲ್ಲಿ ಸಲೆ ಆತು ರಕ್ಷಿಸಿದೆಕಮಠಮೂರುತಿ ನಿನಗೆ ಶರಣೆಂಬೆನು 2 ಚಿನ್ನಗಣ್ಣವನೆಂಬನೊರ್ವ ಖಳ ಭೂದೇವಿಕನ್ನಿಕೆಯನೊಯ್ಯುತಿರೆ ಕನಲಿ ಮನದಿಇನ್ನು ಅವನನು ಸೆಣಸಿ ಜಯಿಸುವವರನು ಕಾಣೆನೆನ್ನುತಲಿ ರೋಮಗಳನುಬ್ಬೆತ್ತುತತನ್ನ ಮುಂಗೋರೆಗಳ ಮಸೆದೊಡನೆ ರಕ್ಕಸನಬೆನ್ನಟ್ಟಿ ಬರಸೆಳೆದು ಸದೆದೊರಗಿಸಿಚೆನ್ನಾಗಿ ಧರಣಿಯನು ತಂದು ಸಲೆ ರಕ್ಷಿಸಿದೆಹನ್ನೆರಡು ಪೆಸರವನೆ ಶರಣೆಂಬೆನು3 ಹೇಮಕಶ್ಯಪನೆಂಬ ನಾಮಜನ ಸುತನೊರ್ವನಾ ಮಹಾಘನವೆಂದು ನೆನೆಯುತಿರಲುತಾಮಸದ ಖಳ ತನ್ನ ತನುಜನನು ಮಥಿಸುತಿರೆರಾಮನನು ತೋರೆಂದು ಬಾಧಿಸುತಿರೆಧೂಮಜ್ವಾಲೆಗಳೊಡನೆ ಭುಗುಭುಗಿಲು ಛಿಟಿಲೆನುತಆ ಮಹಾ ರಕ್ಕಸನ ಪೊಡೆಯ ಸೀಳಿಪ್ರೇಮದಲಿ ಪ್ರಹ್ಲಾದಗೊಲಿದು ಪಟ್ಟವನಿತ್ತೆಸಾಮಜಾರಿಯ ವದನ ಶರಣೆಂಬೆನು 4 ಬಲಿಯಧ್ವರದ ಸಾಲೆಗೊಂದು ವೇಷವನಾಂತುಸಲೆ ಬಂದು ಧರೆಯ ಮೂರಡಿಯ ಬೇಡೆಒಲಿದು ಇತ್ತಪೆನೆನಲು ಧಾರೆಯನೆರೆಯಲಸುರಕುಲಗುರುವು ಜುಳಿಗೆಯೊಳು ತಡೆದು ನಿಲಲುಸಲಿಲ ವರ್ಜಿತ ನಯನನನು ಮಾಡಿ ಆಕಾಶನೆಲವೆರಡು ಪಾದವನ್ನಳೆದ ಬಳಿಕತಲೆ ಮೇಲೆ ಇರಿಸೆನಲು ತಳಕಿಳಿಸಿ ಅವನ ಬಾ-ಗಿಲ ಕಾಯ್ದ ವಾಮನನೆ ಶರಣೆಂಬೆನು 5 ರೇಣುಕೆಯ ಬಸುರಿನಲಿ ಜನಿಸಿ ಪಿತನಾಜ್ಞೆಯನುಮಾಣಬಾರದು ಎಂಬ ಮತವ ಪಿಡಿದುಕ್ಷೂಣವಿಲ್ಲದೆ ತಾಯ ಶಿರವರಿದು ತಂದೆಯನುಪ್ರಾಣಹತ್ಯವ ಮಾಡಿದರ ಕುಲವನುಕ್ಷೋಣಿಗೆರಗಿಸಿ ಕಾರ್ತವೀರ್ಯಾರ್ಜುನನ ಮಡುಹಿಜಾಣತನದಲ್ಲಿ ಭೂದಾನಗಳ ಭೂಸುರರಕಾಣುತಲೆ ಕರೆಕರೆದು ಕೊಟ್ಟೆಯೈ ನೀನು ಪೂಬಾಣಜನಕನೆ ರಾಮ ಶರಣೆಂಬೆನು 6 ಸೀತೆಯನು ಕದ್ದು ಒಯ್ದವನ ಕೊಲ್ಲುವ ಭರದಿಭೂತಳದ ಕಪಿಗಳನು ಕೂಡಿಕೊಂಡುಸೇತುವೆಯ ಕಟ್ಟಿ ಶರನಿಧಿ ದಾಟಿ ಬರಲಾಗಭೂತಗಣ ಸಂತತಿಯು ನಡುನಡುಗುತಿರಲುಚೇತನದ ರಾವಣೇಶ್ವರ ಕುಂಭಕರ್ಣ ಸ-ತ್ತ್ವಾತಿಶಯ ರಕ್ಕಸರ ಇರಿದೊರಗಿಸಿಮಾತು ಲಾಲಿಸಿ ವಿಭೀಷಣಗೆ ಪಟ್ಟವನಿತ್ತದಾತ ರಘುನಾಥನೇ ಶರಣೆಂಬೆನು 7 ಶಕಟ ಕುಕ್ಕುಟ ಧೇನುಕಾಸುರರ ಪೂತನಿಯಬಕ ವತ್ಸಹಕ ವೃಷಾಸುರ ಮುಖ್ಯರಪ್ರಕಟದಿಂದರಿದು ಕರಿಯನು ಸೀಳಿ ತನಗೆ ಸಂ-ಮುಖರಾದ ಮಲ್ಲರನು ಇರಿದೊರಗಿಸಿಮುಕುರ ದಂತ್ಯದ ಹಮ್ರ್ಯದೊಳಗಿಂದ ಕಂಸನಪುಕಪುಕನೆ ತಿವಿದವನನಿರಿದೊರಗಿಸಿಸಕಲವೆಸೆದಿರ್ದ ಮಧುರಾಪುರವ ಉಗ್ರಸೇನಕಗಿತ್ತ ಕೃಷ್ಣನೇ ಶರಣೆಂಬೆನು 8 ಮೂರು ಪುರದಬಲೆಯರ ವ್ರತಗಳನೆ ಕೆಡಿಸಲಿಕೆಬೇರೊಂದು ಅಶ್ವತ್ಥ ವೃಕ್ಷವಾಗಿನಾರಿಯರ ವ್ರತಭಂಗಗೆಯ್ಯಲಾ ದೆಸೆಯಿಂದಊರುತ್ರಯವದು ತಿರುಗುವುದು ನಿಲ್ಲಲಾಗನೀರ ಮಸ್ತಕದಲ್ಲಿ ಧರಿಸಿದನ ಕರವಿಲ್ಲನಾರಿಯೊಳು ನಾರಾಯಣಾಸ್ತ್ರವಾಗಿಘೋರತನವೆತ್ತ ತ್ರಿಪುರದ ಕೀಲ ಪರಿದ ಮದನಾರಿ ಸಖ ಬುದ್ಧನೇ ಶರಣೆಂಬೆನು 9 ಮದವೆತ್ತ ರಕ್ಕಸರು ಮಹಿಯೊಳಗೆ ಹೆಚ್ಚಲುತ್ರಿದಶಾಂತ ನಡನಡನೆ ನಡುಗುತಿರಲುಬೆದರಬೇಡೆನುತ ಅಭಯವನಿತ್ತು ಮುದದಿಂದಸುಧೆಯೊಳಗೆ ಬಂದು ಜನಿಸಿಕುದುರೆವಾಹನನಾಗಿ ಕುಂಭಿನಿಯ ಮೇಲೆ ತನಗಿದಿರಾದ ರಾವುತರನಿರಿದೊರಗಿಸಿಮೊದಲ ಭಾಷೆಯನು ದಿವಜರಿಗಿತ್ತೆ ಬೇಗದಲಿಚದುರ ಕಲ್ಕ್ಯವತಾರ ಶರಣೆಂಬೆನು10 ಇಂತು ದಶ ಅವತಾರಗಳನೆತ್ತಿ ರಕ್ಕಸರಸಂತತಿಯನೊರಸಿ ಭೂಭಾರವಿಳುಹಿಕಂತುಪಿತ ತಿರುವೆಂಗಳೇಶ ತಿರುಮಲೆಯೊಳಗೆಚಿಂತಿಸುವ ಭಕ್ತರನು ಪಾಲಿಸುತಲಿದಂತಿರಾಜನ ಪೊರೆದು ದಾನವಾಡಿಗೆ ಬಂದುನಿಂತಾದಿಕೇಶವನೆ ಶರಣೆಂಬೆನು 11
--------------
ಕನಕದಾಸ
ನೋಡಯ್ಯಾ ನಿತ್ಯಾತ್ಮನನ್ನು ನಿಜವಾಗಿ ನಿನ್ನೊಳಗೆ ನೀನು ನೋಡಯ್ಯಾ ನಲಿನಲಿದಾಡಯ್ಯಾ ಎರಡುದಿನಸಂಸಾರಾ ಎರವಾಗಿ ತಂದ ಶರೀರಾ ಸ್ಥಿರವಲ್ಲ ಸ್ವಾಮಿ ಗುರುಬಲ್ಲಾ ನೋಡಯ್ಯಾ 1 ಶರೀರ ಅರ್ಥಪ್ರಾಣ ಮೂರು ಗುರುಮೂರ್ತಿಗರ್ಪಿಸಿ ತೋರು ದೃಢಭಾವಾ ಆತ್ಮಸುಖವೀವಾ ನೋಡಯ್ಯಾ 2 ನರದೇಹಕ್ಕೆ ಬಂದು ನೀನು ಇರುವಂಥಾ ಸಾರ್ಥಕವೇನು ದೃಢ ಭಕ್ತಿಮಾಡಿ ಪಡೆ ಮುಕ್ತಿ ನೋಡಯ್ಯಾ3 ದೊರಕುವುದು ಪರಿಕರ ಸರ್ವಾ ಗುರುಮೂರ್ತಿ ಸಿಕ್ಕುವುದಪೂರ್ವಾ ಬಿಡಬೇಡಾ ವ್ಯರ್ಥ ಕೆಡಬೇಡಾ ನೋಡಯ್ಯಾ 4 ಭಕ್ತಿಯಲಿ ಕೈವಿಡಿದು ಹೋಗು ಭಜಿಸಿ ಜೀವನ್ಮುಕ್ತನಾಗು ಸಾರಿದೆ ಮರ್ಮವ ತೋರಿದೆ ನೋಡಯ್ಯ5 ಯುಕ್ತಿಯಲಿ ಸಾಧಿಸಲು ಬೇಕು ಇಷ್ಟೊಂದು ಸಿಕ್ಕಿದರೆ ಸಾಕು ಚಂದದಿ ಗುರುವಿಮಲಾನಂದದಿ ನೋಡಯ್ಯಾ 6
--------------
ಭಟಕಳ ಅಪ್ಪಯ್ಯ
ನೋಡಿ ದಣಯೆನೊ ರಂಗ ನಾ ಹಾಡಿ ದಣಿಯೆನೊ ನಾ ಜೋಡು ಕುಂಡಲಧರ ನೀನಾಡಿದಾಟಗಳೆಲ್ಲ ಪ. ದೇವಕಿ ನಿನ್ನ ಬಾಲಲೀಲೆ ತೋರೆನಲಾದೇವ ಮೊಸರ ಭಾಂಡವನೊಡೆದ ಭಾವಜನ್ನಯ್ಯ ಕಡೆಗೋಲು ನೇಣಿನ ಸಹ ರುಕ್ಮಿಣೀದೇವಕಿಗ್ಹರುಷವನಿತ್ತು 1 ಅಂದು ಯಶೋದೆ ನಿನ್ನ ಅಂದದ ಮದುವೆಯ ತಂದು ತೋರೆನೆ ವೇಂಕಟನಾಗಿ ಕಂದನೆನಿಸಿ ಬಕುಳೆಗೆ ಮದುವೆಯ ಅಂದದಿ ತೋರಿದೆ ತಂದೆಯಾದವ ಕೃಷ್ಣ 2 ತೊಡೆಯಲೆತ್ತಿ ನಿನ್ನ ಸಡಗರದಿಂದಲಿ ಇಡುವಳೊ ಸಕಲಾಭರಣಗಳ ಮೃಢಸಖ ಶ್ರೀ ಶ್ರೀನಿವಾಸನೆ ಎನ್ನನು ಕಡೆಹಾಯಿಸೆಂದು ಬಿಡದೆ ಧ್ಯಾನಿಪಳೊ 3
--------------
ಸರಸ್ವತಿ ಬಾಯಿ
ನೋಡಿ ದಣಿಯದೊ ನಯನ ಪಾಡಿ ದಣಿಯದೊ ಜಿಹ್ವೆ ನಾಡಿಗೊಡೆಯನೆ ರಂಗ ದೇವ ದೇವ ಪ. ಬೇಡಲೇನನೊ ಸ್ವಾಮಿ ಕಾಡಲ್ಯಾತಕೊ ದೇವ ನೀಡೊ ನಿನ್ನ ಪದಕಮಲ ಶ್ರೀ ಶ್ರೀನಿವಾಸ ಅ.ಪ. ಶಿರದಲ್ಲಿ ಮಕುಟ ವರ ಫಣೆಯಲ್ಲಿ ತಿಲುಕವು ಉರದಲ್ಲಿ ಸಿರಿವತ್ಸ ಹಾರ ಪದಕಗಳು ಕರ ಶಂಖ ಚಕ್ರಯುತ ನೆರಿಗೆ ಪೀತಾಂಬರವು ಪಾದ ಕಮಲಗಳ 1 ಮಂದಹಾಸ ಮುಖಾರವಿಂದದಲಿ ಕಿರುನಗೆಯು ಬಂದ ಭಕ್ತರಿಗಭಯ ತೋರ್ಪಕರವೊ ನಿಂದು ಸ್ತುತಿಸುವರಿಗಾನಂದ ತೋರುವ ದಿವ್ಯ ಒಂದೊಂದು ಅವಯವದ ಸುಂದರಾಕೃತಿಯ 2 ವೇದವನೆ ತಂದು ಸುತಗಾದರದಿ ಇತ್ತೆ ಕ್ಷೀ- ರೋದಧಿಯ ಮಥಿಸಿ ಸುಧೆಯ ಸುರರಿಗುಣಿಸಿದೆಯೊ ಭೂದೇವಿಯನೆ ಪೊರೆದು ಉದ್ಭವಿಸಿ ಕಂಭದೊಳು ಪಾದದಲಿ ಭೂಮಿಯನು ಅಳೆದ ವಟುರೂಪಿ 3 ದುಷ್ಟ ಕ್ಷತ್ರಿಯರನೆ ಕುಟ್ಟಿ ಕೆಡಹಿದ ಶೌರಿ ದಿಟ್ಟತನದಲಿ ಅನ್ನ ಬಟ್ಟೆಯನೆ ತೊರೆದೆÀ ಕೊಟ್ಟು ಗೋಪಿಗೆ ಮುದವ ಮೆಟ್ಟಿ ಕಾಳಿಂಗನ ಬಿಟ್ಟು ವಸನವ ಕಲಿದುಷ್ಟರನೆ ಕೊಂದೆ 4 ಅಪದ್ರಕ್ಷಕ ನಿನ್ನ ವ್ಯಾಪಾರ ರೂಪಗಳು ತಾಪ ಪರಿಹರಗೈದು ಕಾಪಾಡೆಲೊ ಶ್ರೀಪತಿಯೆ ಅಂತರ್ಬಹಿವ್ರ್ಯಾಪ್ತ ನಿರ್ಲಿಪ್ತನೇ ತಾಪ ಪರಿಹಾರನೆ 5
--------------
ಅಂಬಾಬಾಯಿ
ನೋಡಿ ಧನ್ಯನಾದೆನಾ ಗಜಾನನಾ ಪುನೀತನಾ ಪಾಡಿ ಭಜನೆ ಮಾಡಿ ಇಡುವೆ ಅಡಿಗಳಲ್ಲಿ ಶಿರವಾ ಪ ಭಾರತಾರ್ಥ ಬರೆದ ದೇವ ಮಿತ್ರನಾ ಸುಪುತ್ರನಾ ಮಾರನಾಸ್ತ್ರ ಗೆಲಿದ ನಿಟಿಲನೇತ್ರನಾ ವಿರಕ್ತನ 1 ಸಕಲ ಶಾಸ್ತ್ರ ತಿಳಿಸೋ ಏಕದಂತನೇ ಬಲವಂತನ ಮುಕುತಿ ಮಾರ್ಗವ ತೋರೋ ವಕ್ರತುಂಡ ವಿಘ್ನದಂತನೇ 2 ಜ್ಞಾನವಿತ್ತು ನುಡಿದು ನುಡಿಸೋ ನೀನೆ ನಿಂದು ವದನದಿ ಮನವಾ ಹನುಮೇಶವಿಠಲನೊಳು ನಿಲಿಸೋ ಬೇಗದಿ 3
--------------
ಹನುಮೇಶವಿಠಲ
ನೋಡಿ ನಾ ಧನ್ಯನಾದೆನೊ ತೋತಾದ್ರೀಶನ ನೋಡಿ ಧನ್ಯನಾದೆ ನಾಡೊಳು ತನಗೆಲ್ಲಿ ಈಡಿಲ್ಲೆನಿಸುವನ ನೋಡಿ ಧನ್ಯನಾದೆನೊ ಪ ಆರೊ ಮಹಾರೂಪ ಬಂದು ಏಕಾಂತದಲ್ಲಿ ಆರಾಧಿಸಿದಾತನಂದು ಭಕುತಿ ಬಿಡದೆ ವಾರವಾರಕ್ಕೆ ಗತಿಯೆಂದು ಈ ರೀತಿಯಲ್ಲಿ ಇರೆ ತೋರಿದ ಕರುಣ ನಿನ್ನಾ 1 ಭಕುತನ್ನ ತಪಸಿಗೊಲಿದು ವೇಗದಿಂದಲಿ ಲಕುಮಿ ರಮಣ ಸುಳಿದು ಬೇಡಿದಂಥಾ ಧಿಕವಿತ್ತು ರೋಷವಳಿದು ಸುಖದ ಭಾರತ ಪೇಳೊ ದಕ್ಕೆ ಮುನಿ ಮಾಡಿದ ದಾನಾ 2 ಧರಿಗೆ ದಕ್ಷಿಣ ದಿಕ್ಕಿಲಿ ಮಾಹೇಂದ್ರಿ ಮಹಿ ಧರನ ಸಮೀಪದಲ್ಲಿ ಪ್ರತಿದಿನ ಮೆರೆವ ವೈಭೋಗದಿಂದಲಿ ಕರುಣಿ ವಿಜಯವಿಠ್ಠಲ ವರಧೇನು ಎನಿಸುವನಾ3
--------------
ವಿಜಯದಾಸ
ನೋಡಿ ನಿಜಸುಖ ಕೂಡಿ ಗುರುಮುಖ ಧ್ರುವ ವ್ಯರ್ಥವ್ಯಾಕೆ ಡಂಭ ಆರ್ತು ನಾಡಿಗುಂಭ ಗುರ್ತುಮಾಡಿಕೊಡುವ ಪೂರ್ಣ ಗುರು ನಿರಾಲಂಬ 1 ಙÁ್ಞನ ನಿಜಗೂಢ ಏನುಬಲ್ಲ ಮೂಢ ಸ್ವಾನುಭವಕಾಗಿ ನೀವು ಮಾಡಿ ಮನದೃಢ 2 ತೋರುತಿದೆ ಖೂನ ಪರಮ ಸೂಕ್ಷ್ಮ ಙÁ್ಞನತರಳ ಮಹಿಪತಿ ನಿಜಾನಂದ ಸುಖಧನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡಿ ನಿನ್ನನು ಧನ್ಯಳಾದೆನು ಮಾಡಿ ಕೃಪೆಯನು ಮನ್ನಿಸೂಬೇಡಿಕೊಂಬೆನು ಭವವ ಮುಂದಕೆ ನೀಡದಂಘ್ರಿಯೊಳೊಂದಿಸೂ ಪಕೃಷ್ಣ ನಿನ್ನನು ಮುದ್ದನಾಡುತ ಕಷ್ಟವನು ಕಡೆಗಾಂಬೆನೂಇಷ್ಟದೈವವು ನನ್ನ ಜಠರದಿ ಪುಟ್ಟೆ ನಿನ್ನನು ಕಂಡೆನೂದುಷ್ಟಕರ್ಮಗಳೆಲ್ಲವನು ನೆರೆ ನಷ್ಟಗೈಯುವ ದೇವನೂಪುಟ್ಟಮಗುವಾಗಿರಲು ಕೇಶವ ಮುಟ್ಟಿಲಾಲಿಪಳಾದೆನೂ 1ಬಟ್ಟಚೆಲು'ನ ರತ್ನದರಳೆಲೆ ಕಟ್ಟಿ ಬೊಪ್ಪದೊಳೊಲೆಯಲೂಪುಟ್ಟ ಮಾಗಾುಗಳು ಕಿ'ಗಳವಟ್ಟು ಕದಪುಗಳೊಪ್ಪಲೂನಟ್ಟನಡು ಪಣೆಯಲ್ಲಿ ಕತ್ತುರಿಬಟ್ಟು ಬೆಡಗನು ಬೀರಲೂಇಟ್ಟ ಕಪ್ಪಿನ ಕಣ್ಗಳೆಸೆಯಲು ಬಿಟ್ಟಬಾಯಲಿ ಸ'ಯಲು 2ಮುತ್ತು ರತ್ನಗಳನ್ನು ತೆತ್ತಿಸಿ ಸುತ್ತಕಾಂತಿಯ ಬೀರುವಉತ್ತಮದ ಮಕುಟವನು ನಿನ್ನಯ ನೆತ್ತಿಗಿಡುವೆನು ಕೇಶವಮತ್ತು ಕಂಕಣಗಳನು ಕರಗಳಿಗಿತ್ತು ಕಟ್ಟುವೆ ಪವಳವಾಸತ್ಯವಂತನೆ ನೀನು ಶಿಶುತನವೆತ್ತೆ ಪಡೆದೆನು ಭಾಗ್ಯವಾ 3ಸನ್ನುತನೆ ಪದಕಗಳ ಸರಗಳ ನಿನ್ನ ಕೊರಳಿಗೆ ಕಟ್ಟಿಚಿನ್ನ ಮುಕ್ತದಿ ಪೊಳೆವ ಕೌಸ್ತುಭವನ್ನು ಉರಕಳವಡಿಸುವಾರನ್ನ ಮಾಣಿಕದುಡಿಯ ಸೂತ್ರಗಳನ್ನು ಕಟಿಯಲಿ ರಚಿಸುವಾಇನ್ನು ಬಹು'ಧವಾಗಿ ಮನ್ನಿಪುದನ್ನು ವ'ಸಿದೆ ದಾಸ್ಯವಾ 4ಕಟ್ಟಿ ಘಂಟೆಯ ಸರವ ಕಟಿಯಲಿ ಪುಟ್ಟ ಶ್ರೀಮೃದುಪಾದವಾಮುಟ್ಟಿ ಕೈುಂದಂದುಗೆಗಳ ನಾನಿಟ್ಟು ಘಲಿಘಲಿಗುಟ್ಟುವಾಬಟ್ಟಗೆಜ್ಜೆಯ ಸಣ್ಣಸಾಲ್ಗಳ ದಟ್ಟಗೊಳಿಸೀಯೆಂದವಾನೆಟ್ಟದ್ಟೃಯಲೀಕ್ಷಿಸುತ ಹೊರಗಟ್ಟಿಬಿಟ್ಟೆನು ಕ್ಲೇಶವಾ 5ಒಂದು ಸ್ತನವನು ಸ'ಯುತಲೆ ಮತ್ತೊಂದು ಸ್ತನವನು ಕರದಲಿತಂದು ವದನದೊಳಿಟ್ಟು ದಣಿಯುತ ಮಂದಹಾಸದ ಮುಖದಲಿಇಂದಿರೇಶನೆ ನಿನ್ನ ನೋಡುತ ಇಂದು ಸಲ'ದೆ ಕೃಪೆಯಲಿವಂದಿಪರು ನಿನ್ನಡಿಗೆ ಸುರಮುನಿವೃಂದ ಭಾ'ಸಿ ಮನದಲಿ 6ಸಕಲ ಲೋಕಾಧಾರನಾಗಿಯೆ ಸಕಲ ಜೀವರ ಸಾಕ್ಷಿಯೆಪ್ರಕಟವಾಗೆನಗೀಗ ತೋರಿದೆ ಮುಕುತಿದಾಯಕ ಮೂರ್ತಿಯೆಭೃಕುಟಿಯಲಿ ನಿರ್'ುಸಿದ ಮಾಯೆಯ 'ಕರಿಸುವನುಸಾರಿಯೆಚಕಿತಳಿಗೆ ನನಗೊಲಿದೆ ತಿರುಪತಿ ವೆಂಕಟನಡಿಗೆ ಸ್ವಾ'ುಯೆ7
--------------
ತಿಮ್ಮಪ್ಪದಾಸರು
ನೋಡಿ ನಿಮ್ಮೊಳು ನಿಜಾನಂದಬೋಧ ಕೂಡಿ ಕರುಣಾಸಿಂಧು ಶ್ರೀಗುರುಪಾದ ಧ್ರುವ ಇಡಾ ಪಿಂಗಳ ಮಧ್ಯ ನೋಡಿ ಈಗ ನಾಡಿ ಸುಷಮ್ಮವಿಡಿದು ಕೂಡಿ ಬ್ಯಾಗ ನೋಡಬಲ್ಲಿದೆ ಬ್ರಹ್ಮಾನಂದ ಭೋಗ ಗೂಢವಿದ್ಯವಿದು ತಾ ರಾಜಯೋಗ ಒಡನೆ ತಿಳಿಯುವದಲ್ಲ ಷಡಚಕ್ರ ಭೇದವಲ್ಲ ಬಡವರಿಗಳವಲ್ಲ ಗೂಢಿನ ಸೊಲ್ಲ 1 ಪಿಡಿದು ಮನಮಾಡಿ ದೃಢನಿಶ್ಚಯ ಬಿಡದೆ ಭೇದಿಸಿನೋಡಿ ಸುಜ್ಞಾನೋದಯ ಇಡದು ತುಂಬ್ಯದೆ ವಸ್ತು ಜ್ಯೋತಿರ್ಮಯ ಪಡೆದುಕೊಳ್ಳಿರೊ ಗುರು ಕರುಣ ದಯ ಮನ ಉನ್ಮನ ಮಾಡಿ ಘನಸುಖದೊಳು ಕೂಡಿ ಅನುದಿನ ನಲಿದಾಡಿ 2 ಮೂರುಗುಣರಹಿತ ಮೂಲರೂಪ ತೋರುತಿಹ್ಯದು ನಿಜ ನಿರ್ವಿಕಲ್ಪ ತರಳ ಮಹಿಪತಿ ಪ್ರಾಣ ಪಾಲಿಪ ಹೊರೆದು ಸಲಹುವ ಗುರುಕಲದೀಪ ಭಾವಿಕರಿಗೆ ಜೀವ ಕಾವ ಕರುಣದೇವ ವಾಸುದೇವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡಿ ನೋಡಿ ನೋಡುದರೊಳಗೆ ನೋಡಿದ ನೋಟ ಸದ್ಭನವಾಗುವ್ಹಾಂಗ ಧ್ರುವ ಮನದಿಂದಲಿ ಮನನೋಡುವ ಯೋಗ ಘನಸುಖ ತೋರುವದಿದೆ ಬ್ರಹ್ಮಭೋಗ 1 ಕಣ್ಣಿನಿಂದಲಿ ಕಣ್ಣುದೆರುವ್ಹಾಂಗ ಮಾಡಿ ಚನ್ನಾಗಿ ಉದಯವಾಗುದು ಘನ ಮೂಡಿ 2 ಭಾವ ಬಲಿದು ನೋಡುವುದು ಬಲುಚೆಂದ ಆವಾಗ ಮಹಿಪತಿಗಿದೆ ಬ್ರಹ್ಮಾನಂದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು