ಒಟ್ಟು 6126 ಕಡೆಗಳಲ್ಲಿ , 131 ದಾಸರು , 3704 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮೋ ನಮೋ ಶ್ರೀ ಮಧ್ವಾಚಾರ್ಯ ಆರ್ಯಾ ಪ ಭೃಗು ಕುಲೋತ್ತಮ ರಾಮ ಭೂಸುರರಿಗೆ ಸರ್ವ ಜಗವೆಲ್ಲ ಧಾರಿಯನು ಯೆರದು ಸಂಹ್ಯಾ ನಗದಲ್ಲಿ ನಿಂದು ಸಮುದ್ರನ್ನ ಹಿಂದಕ್ಕೆ ತೆಗಿಸಿ ಈ ಭೂಮಿಯನು ಸಾಧಿಸಿದನು1 ಮೂರ್ತಿ ಅಲ್ಲಿಗಲ್ಲಿಗೆ ಕ್ಷೇತ್ರ ಗತಿ ತಪ್ಪಿದಂತೆ ನಿರ್ಮಾಣ ಮಾಡಿ ಸತಿಪತಿಯ ಉದ್ಧರಿಸಿ ಬರುತ ಕಂಡನು ಉ ನ್ನತವಾದ ಪರ್ವತವು ಯೋಜನವಿರೆ 2 ಬೆರಗಾಗಿ ಪರಶುರಾಮನು ಬಂದು ಈ ಗಿರಿಯಲ್ಲಿ ನಿಂದು ಅಗ್ರಭಾಗವೈದೆ ತರಹರಿಸಲಾರದೇ ಭೂಮಿಗಿಳಿಯಿತು ಅದ್ರಿ ನಿರೀಕ್ಷಿಸಿ ಸುಜನರು ಇದ್ದನಿತು3 ಸಿರಿರೂಪ ದುರ್ಗಾನಾಮಕಳಾದ ದೇವಿಯನು ಕರದು ಈ ಸ್ಥಾನದಲಿ ಇರ ಹೇಳಿದಾ ಅರವು ಮಾಡದೆ ಮುಂದೆ ಕಲಿಯುಗದಲಿ ನೆರದು ದುರುಳರಾತಿಯರ ಸಂಹರಿಸುಯೆಂದು 4 ಅನಿತರೊಳಾಕಾಶದಲಿ ಜಯ ಜಯವೆಂದು ಅನಿಮಿಷರು ಕೊಂಡಾಡಿ ನಗುತ ದಿವ್ಯ ಮಣಿಮಯ ವಿಮಾನದಿಂದಾ ಗಿರಿಗೆ ವೇಗದಿ ಸು ಮ್ಮನರಾಗಿ ಬಂದು ತುತಿಸಿದರು ಹರಿಯಾ 5 ಅಂದಿನಾರಭ್ಯವಾಗಿ ಇದೇ ವಿಮಾನಗಿರಿ ಯೆಂದು ಕರೆಸಿತು ಶ್ರುತಿ ಯುಕ್ತಿಯಲ್ಲಿ ಎಂದೆಂದಿಗೆ ಇದನೆ ನೋಡಿದವರಿಗೆ ದೋಷ ಗಂಧವಾದರು ಇಲ್ಲಾ ಇಲ್ಲ ಇಲ್ಲಾ6 ಈ ಮಹಿಮೆಯನು ಕೇಳಿ ಧರ್ಮ ತಪವನು ಮಾಡಿ ಸೋಮಾರ್ಕ ಪ್ರಭಯಂತೆ ಕೀರ್ತಿಯನು ಪಸರಿಸಿ ಪಾಮರರ ಉದ್ಧರಿಸಬೇಕು ಯೆಂದು7 ಪರಿ ಶ್ರೀಹರಿಯ ಧ್ಯಾನವನು ಮಾಡಲು ಶ್ರೀಪತಿ ವರವಿತ್ತ ಮುಂದೆ ಮಹ ಪಾಪಿ ಪುಟ್ಟುವನು ಅವನಗೋಸುಗ ವಾಯು ತಾ ಪರಮ ಪ್ರೀತಿಯಲಿ ಜನಿಸುವನು 8 ಅಂದ ಮಾತಿಗೆ ಯಮನು ಬಹುಕಾಲದಲಿದ್ದ ಛಂದದಿಂದದಿ ಪೋದ ತನ್ನ ಪುರಕೆ ಇಂದಿರಾಪತಿ ನೇಮಿಸಿದ ಪರಿಯಂತೆ ಆ ನಂದತೀರ್ಥರಾಗಿ ಜನಿಸಿದರು 9 ಏನು ಪೇಳಲಿ ಪುಣ್ಯ ಚರಿತಯನು ಚನ್ನಾಗಿ ಜ್ಞಾನದಲಿ ಅಧಿಕಾರಾಗಿ ಇಷ್ಟಾನಿಷ್ಟ ಪುಣ್ಯ ಮಾನದಲಿ ಕೊಂಡಾಡಿ ಸುಖಿಪರಲ್ಲಿ10 ಹುರಳಿ ಗುಗ್ಗರಿ ಮೆದ್ದ ಅದ್ಧುತವ ಕೇಳಿದರೆ ಉರಳಿ ಹೋಗುವದು ಜನ್ಮಾಂತರದ ದುಷ್ಕರ್ಮ ಮರಳಿ ಬಲಿ ಬಾಲವನು ಪಿಡಿದದು ನೆನಸಿದರೆ ಸುರರು ಮುಕ್ತಿಯಿನಿತ್ತು 11 ಧರಣಿಧರದಿಂದ ಧುಮುಕಿದ ಪಾದಯುಗ ನೋಡೆ ಎರಡೊಂದು ಏಳು ಕುಲತೃಪ್ತರಹರೊ ಅರೆ ಮ್ಯಾಲೆ ಸಾಲವನು ತಿದ್ದಿದಾ ವಾರ್ತಿ ಕೇಳಿ ಎರಡೊಂದು ಋಣದಿಂದ ಕಡೆಗಾಗುವ 12 ತಲೆಕೆಳಕಾಗಿ ಬೆಳೆದಾ ವೃಕ್ಷವನು ನೋಡಿ ಬಲಿವನು ಸುರದ್ರುಮದಂತೆ ರಂಗ ಛಲದಿಂದ ಸರ್ಪನ ವರಸಿದ ಸ್ಥಳ ಕಾಣೆ ಬಲು ವಿಷಗಳು ಪೋಗಿ ನಿರ್ಮಲಹರೋ 13 ಧೂಳಿ ಅಕ್ಷರ ಬರೆದ ಪ್ರದೇಶ ನೋಡಲು ವಾಲಯಾ ಶುಭವಿದ್ಯ ಫಲಿಸುವದು ಲೀಲೆಯಿಂದ ಗ್ರಂಥ ಅಭ್ಯಾಸಕೆ ಪೋಗಿ ಬರುವ ಶೀಲತೆಯು ಕೇಳೆ ಮನೋ ವಾಯುವೇಗ 14 ಬುತ್ತಿಯ ಉಂಡ ಸ್ಥಳವನ್ನು ಕೊಂಡಾಡಲು ತೃಪ್ತನಾಗುವ ಮನುಜ ಮೃಷ್ಟಾನ್ನದಿ ನಿತ್ಯ ಬಾಲಕ್ರೀಡೆ ಆಡಿದ್ದು ಪಾಡಲು ಪುತ್ರೋತ್ಸವಗಳಿಂದ ಬಾಳುತಿಪ್ಪ15 ಚಾಪ ಗದ ಪದುಮ ಎರಡೊಂದು ತೀರ್ಥಗಳು ಇರುತಿಪ್ಪ ವಾಸುದೇವನೆಂಬೊ ನಾಮಾ ಸರೋವರದಲಿ ಮಿಂದು ಸ್ತೋತ್ರ ಮಾಡಿದ ನರಗೆ ವಿರಜೆಯಲಿ ಸ್ನಾನ ಸಂದೇಹವಿಲ್ಲ 16 ಜನಿಸಿ ಮೊದಲು ಮಹಾ ಬದರಿಗೆ ಪೋದಾರಭ್ಯ ಎಣಿಕೆ ಇಲ್ಲದೆ ಚರಿತೆ ಅನುದಿನದಲಿ ಗುಣಿಸಿ ಗುಣದಲಿ ತಿಳಿದು ಕೀರ್ತನೆಯನೆಸಗಿದಾ ಮನುಜರಿಗೆ ಸತ್ಕೀರ್ತಿ ಬರುವುದಯ್ಯಾ 17 ಮಧ್ವ ಮಧ್ವ ಎಂಬೋ ನಾಮವನು ನುಡಿದರೆ ಬದ್ಧವಾಗಿದ್ದ ಭವಾಬ್ಧಿಯಿಂದ ಎದ್ದು ಕಡಿಗೆ ಬಿದ್ದು ಸಂಚಿತಾಗಾಮಿಯಿಂದ ಗೆದ್ದು ಚರ್ಮ ದೇಹದಿಂದ ನಲಿವ 18 ಶ್ರೀ ಪೂರ್ಣಬೋಧ ಗುರುಶೇಖರ ಸುಗುಣಧಾಮ ಆಪನ್ನ ಪರಿಪಾಲ ಅಮೃತಫಲದ ವ್ಯಾಪುತ ನಾನಾ ಸ್ಥಾನ ಹನುಮ ಭೀಮ ಸರ್ವ ರೂಪಾತ್ಮಕ ಪ್ರಾಣ ಭಾರತೀಶ19 ಕೇಳಿ ಹರುಷಿತನಾಗಿ ಬಂದ ವೈಭವದಂತೆ ಕಾಲ ಹಿಂಗಳಿಯದೇ ನಿತ್ಯದಲ್ಲಿ ಲೀಲೆಯಲಿ ವಾಸವಾಗಿರಲೆಂದು ಅಂದು ಪೇಳಲಾ ಮೌಳಿಯನು ತೂಗಿ ಸರ್ವರು ನಿಂತರು20 ಪುಂಜಕಾಸ್ಥಳ ಬಂದು ತಪವು ಮಾಡಲು ಕ್ಷೇತ್ರ ರಂಜನವಾಯಿತು ಇದೇ ನಾಮದಲ್ಲಿ ಕುಂಜರ ವರದ ನಮ್ಮ ವಿಜಯವಿಠ್ಠಲನಂಘ್ರಿ ಕಂಜವನು ಭಜಿತ ಗುರುರಾಜ ಜಯತು 21
--------------
ವಿಜಯದಾಸ
ನಮೋ ನಮೋ ಹನುಮ | ನಮೋ ನಮೋ ಭೀಮ| ನಮೋ ನಮೋ ಮಧ್ವರಾಯ ಸುಪ್ರಿಯ || ಅಂಬುಧಿಯ ಪೋರ್ದು | ನಿಜ ಡಿಂಭದೊಳ್ ಬೆರೆದು | ಚೆರ್ಬಿಂಬಳಂ ತರಿದು | ದಶಬಿಂಬನಾಪುರ ಪೊಕ್ಕು | ಗಂಟುಗಳ ದಾಟಿ | ಮೂರ್ಜಂಬಳಂತೋರಿ ಎಲ್ಲಂಬಳಂ ನಳಿದು ಅಂಬುಜಾಕ್ಷೆಗೆ ಮುದ್ರೆಯಿತ್ತ ಹನುಮಂತ 1 ಸತಿಯೆ ಹಂಬತ್ತಿದ ನತಿಗಳೇದು ಕೃತಕೋಪ ವೃತನಾಗಿ ಮಶತಂತುರದೆ ಹತಿಯೆ ಮೋಹತಿಯೆ | ಸಂಪತಿಯ ತೊಲಗಿ ಅಗತರಾಗಿಗತಿಯಲಿರುತಿಹ | ಮತಿಹೀನ ಬಕನಕೊಂದ ಭೀಮನಿಸ್ಸೀಮ 2 ಮಧ್ಯಗೇಹನುದರದಿಂದುದ್ಭವಿಸಿ ಜಗದ್ಭಲ ಭರಿತರಾಗಿ ಶಾಸ್ತ್ರ ಶುದ್ಧವನೆ ಕೈ ಕೊಂಡು ಮಧ್ವ ಮತದಲ್ಲಿ ಬಲು ಶುದ್ಧನಾಗಿ ಅದ್ವೈತಗಳ ನಳಿದು ಸದ್ವೈತ ಮಾರ್ಗದೊಳ್ | ಪೂರ್ಣಗುಣತೇಜ3
--------------
ಹೆನ್ನೆರಂಗದಾಸರು
ನಮ್ಮ ಗುರುರಾಯಾ | ಪೊಡವಿಗೆ ನಡೆ ತಂದನು ಪ ಪೊಡವಿಗೆ ನಡೆ ತಂದನು| ಎಡ ಬಲದಲಿ ಭಾಗವತರ ಮೇಳದಿಂದಲಿ | ಪರಿ ಪರಿಯಾಟವ | ಆಡುತ ಪಾಡುತ ನಲಿದಾಡುತಲಿ 1 ಭವ ರೋಗಿಗಳೆಲ್ಲರು | ತ್ವರಿತದಿ ಬನ್ನಿರೋ ಯನುತಲಿ ಹರಿನಾಮಾ | ಭೇರಿಯ ಹೊಯ್ಸುತ ತತ್ವೋಪದೇಶದ | ಕರದಲಿ ಔಷಧವನೆ ಹಿಡಕೊಂಡು2 ಬಂದವರಿಗೆಲ್ಲ ಬೇಡಿದ್ದು ಕೊಡುತಲಿ | ಮಂದ ಮತಿಗಳವಗುಣವನೆ ಬಿಡಿಸುತ | ಸಾರಥಿ | ಎಂದೆಂದು ಶರಣರಿಗಾಧಾರಿಯಾಗಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮ್ಮ ರಂಗ ಮಧುರೆಗೆ ನಡೆತರಲು ಪ ಮಥುರೆಗೆ ನಡೆತರಲು ಅತಿ|ಹರುಷದಲಿ ಅಕ್ರೂರನೊಡನೆ| ರಥದಲಿ ಕುಳಿತು ಫಡ ಫಡಫಡಲೆಂದು| ಪಥದಲಿ ನಡಸ್ಯಾಡುತಲಿ 1 ಬಿಲ್ಲಹಬ್ಬದ ನೆವದಲ್ಲಿ|ಫುಲ್ಲಲೋಚನ ಮೋಹನ ಕೃಷ್ಣ| ಇಲ್ಲಿಗೆ ಬಂದನು ಎನುತಲಿ ಕೇಳಲು| ಎಲ್ಲರು ನಡೆದರು ನೋಡಲಾಗಿ 2 ಆಲಯದೊಳಗೆ ನಿಲ್ಲದೇ|ಬಾಲಕಿಯರು ತಮತಮ್ಮ| ಚಾಲವರುತಿಹಾ ತೊಟ್ಟಿಲೊಳಗಿನಾ|ಬಾಲಕರಿಗೆ ಮೊಲೆಗುಡದೆ 3 ಒಬ್ಬಳು ಅರೆಯಣ್ಣೆತಲೆಯಲಿ|ಒಬ್ಬಳು ತಿಗರವ ಹಚ್ಚಿದ ಮೈಯಲಿ ನಡೆದರು ಸಂಭ್ರಮದಿಂದ4 ಅಚ್ಚಮೈಯಲಿ ಕುಳಿತಿರೆ ಒಬ್ಬಳು|ಬಚ್ಚಲೊಳಗೆ ಮಜ್ಜಕನಾಗಿ ಅಚ್ಯುತನಾತುರದಿಂದಲಿ ಒಬ್ಬಳು ಎಚ್ಚರ ದೇಹದ ಬಿಟ್ಟು ನಡೆದಳು 5 ಎಲೆಳುಶಿಶುವೆಂದು ಬಗಲಿಲಿ|ಅಳತೆಯ ಮಾನವನಿರಿಸಿಕೊಂಡು| ನೆಲೆನೊಡದೇ ನಡೆದಳೊಬ್ಬಳು|ಚೆಲುವ ಕೃಷ್ಣನ ನೋಡಲಾಗಿ6 ಕದವನು ಒತ್ತಿಮುಂದಕ|ಒದಗದಿ ಕೆಲವರು ಮಾಳಿಗೆ ಏರಿ| ಸದಮಲಾನಂದಗ ತಲೆಯನು|ಬಾಗಿ ಪದುಮಕರವ ಮುಗಿದು7 ದಣ್ಣನೆ ನೋಡೀ ನೋಡುತಾ|ಕಣ್ಣುಪಾರಣೆ ಮಾಡಿಕೊಂಡು| ಮುನ್ನಿನ ದೋಷವ ಕರಗುವ ಪರಿಯಲಿ| ಪುಣ್ಯ ಸಾಮಗ್ರಿಯ ಮಾಡಿದರಂದು 8 ಕಂಡಾ ಪರಿಯ ರೂಪವಾ| ಧರಿಸಿಕೊಂಡು ಅಂತರಂಗದಲಿ|ತ್ವರಿತದಿಂದಲಿ ಧ್ಯಾಯಿಸುತಾ9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮ್ಮಮ್ಮನ ಕಂಡೆ ಬೊಮ್ಮನ ಪಡೆದಿಹಳ ಧ್ರುವ ಅಮ್ಮನ ಕಂಡೆನಗೆ ಸುಅಮೃತ ಪಾನವಾಯಿತು ಸಂಭ್ರಮದಿಂದಲೆನಗೆ ಬ್ರಹ್ಮಾಂಡದೊಳು 1 ಅಹ್ಲಾದವಾಯಿತಿಂದು ಫುಲ್ಲಲೋಚನೆಯ ಕಂಡು ಉಲ್ಲಾಸ ತುಂಬಿತೆನಗೆ ಮೂಲೋಕದೊಳು 2 ಮಾತೃ ಪಿತೃವೆಂಬುದು ಸೂತ್ರಧಾರಿ ತಾನೊಬ್ಬಳೆ ಅಂತ್ರ ಬಾಹ್ಯದಲೆನಗೆ ಪುತ್ರ ಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮ್ಮಯ್ಯ ಗುರು ನಾ ನಿಮ್ಮ ಮನಿಯ ಶ್ವಾನ ಹೆಮ್ಮೆಯೆಂಬ ಹಲ್ಲು ಮುರಿದೆ ಪೂರ್ಣ ಸುಮ್ಮನಿರುವೆ ಕಂಡು ಸಂತತ ಚರಣ ಒಮ್ಮನದಿಂದೆ ತೃಪ್ತ್ಯಾಯಿತು ಜೀವನ 1 ಸದ್ಭೋಧದನ್ನ ನೀಡಲು ಓಡಿಬಂದೆ ಸದ್ಗುರುವೆ ಒಡೆಯ ನೀನಹುದೆಂದೆ ಬಿದ್ದುಕೊಂಡಿಹೆ ನಾ ನಿಮ್ಮ ಮನೆಯ ಮುಂದೆ ಬುದ್ಧಿವಂತರು ಬೆನ್ನಟ್ಟಿ ಹೋಗೆ ಹಿಂದೆ 2 ಹಳಿಯೆಂದರೆ ನಾ ಹೋಗೆ ಎಂದೆಂದಿಗೂ ಬಿಟ್ಟು ಗುಹ್ಯ ವಾಕ್ಯದ ಹೆಜ್ಜೆ ಮೆಟ್ಟು ಸುಳವುದೋರಲು ನಿಮ್ಮ ಸದ್ಗತಿ ಮುಕ್ತಿಯುಂಟು ತಿಳದ್ಹಾಕಿಹನಾ ನಿಮ್ಮ ಪಾದರಕ್ಷಕೆ ಗಂಟು 3 ಬಾಗಿಲಕಾಯಿಕೊಂಡು ಬಿದ್ದಿಹ್ಯ ನಿಮ್ಮ ಶ್ವಾನ ಹಗಲಿರುಳು ನಾ ನಿಮ್ಮ ಬೊಗುಳವೆ ನಿಜಗುಣ ಜಾಗಿಸುವದೆನ್ನೊಳು ನಮ್ಮಯ್ಯ ನಿಮ್ಮ ಖೂನ ಸುಗುಮದಿಂದ ದೊರೆಯಿತು ನಿಜ ಸ್ಥಾನ 4 ಹಿಡಿದು ಕಚ್ಚಿಹೆ ನಿಮ್ಮ ಪಾದರಕ್ಷ ಸಂಪೂರ್ಣ ಬಿಡೆ ಎಂದೆಂದು ನಾ ಹೋದರೆ ಜೀವ ಪ್ರಾಣ ಪಿಡಿದು ಮಾಡುವೆ ನಾ ಜತನ ಮೂಢ ಮಹಿಪತಿಗಿದೆ ಸುಖಸಾಧನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನರ ಹರಿನಾಮವ ನೀ ನೆನೆದರೆ| ಧರಿಯೊಳು ಸಾಲದೇ ಇಹಪರ ದೋರದೆ| ಬರದೇ ಸಾಯಾಸ ಬಡುವರೇ ಪ ಆದಿ ಯುಗಂಗಳಲಿ ತಾಪಸರು| ಸಾದರ ಬಹುದಿನದಿಂದಾ| ಸಾಧಿಸುವಗತಿ ಕೊಡುವ ನೊಂದೆ ಕ್ಷಣದಿ| ಶ್ರೀಧರ ತಾ ದಯದಿಂದಾ1 ಸಂತರ ಸಂಗದಿ ಶ್ರವಣವ ಮಾಡಿ| ಆಂತರ್ಭಾವನೆ ಬಲಿಸೀ| ಭ್ರಾಂತ ನೀನಾಗದೆ ಅನ್ಯ ಸಾಧನದಲಿ| ಸಂತತ ಕೀರ್ತನೆ ಬೆರೆಸೀ2 ಸಾವಿರಕೊಂದೆ ಈ ನುಡಿ ನಿಜವೆಂದು| ಸಾವಧವನಾದವ ಮನುಜಾ| ಭಾವಿಸು ಗುರುಮಹಿಪತಿ ಪ್ರಭು|ನುಡಿಸಿದ| ಆವನಂಬವನೇ ದನುಜಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನರರಿಗೆಲ್ಲಿಯ ಭವಬಂಧ ಜ್ಞಾನಿಗಳಾದನರರಿಗೆಲ್ಲಿಯ ಭವಬಂಧತರಣಿಬಿಂಬವ ತಮಮುಸುಕಲು ಬಲ್ಲುದೆಹರಹರ ಪಾಹಿ ಶಂಕರ ರಾಮೇಶ್ವರನೆಂಬ ಪ ಸರಸಿಜಾಪ್ತನ ಕರಗಳೊಳು ಬಲುಪರಮಾಣುಗಳು ವರ್ತಿಸುವೊಲುಪರಿಪೂರ್ಣಬ್ರಹ್ಮವೊಂದರೊಳು ಬ್ರಹ್ಮಾಂಡಗಳಿರುವವನಂತ ಕೋಟಿಗಳೆಂದು ತಿಳಿದಂಥಾ1 ಬಿಂದಿಗೆ ಬಿಲುಬಿಲೆ(?) ಗಳನಂದುನಬಂದಂತೆ ಸೃಜಿಸಿ ಮತ್ತದನುಪೊಂದಿಸುವಂತೆ ವಿಶ್ವವನು ಪುಟ್ಟಿಸಿ ಲೀಲಾಸ್ಪಂದದಿಂದಡಗಿಪನೀಶನೆಂದರಿದಂಥಾ2 ವಿರುಪ ಕಾಂಚನಮೋರಂತೆ ನಾನಾಪರಿಯ ಆಭರಣವಾದಂತೆಪರಮಾತ್ಮನೋರ್ವನನೇಕನಾಮಂಗಳಧರಿಸಿಹ ಸರ್ವವು ಬ್ರಹ್ಮವೆಂದರಿದಂಥಾ3 ಇರುವುದೀಲೋಕದೊಳೆರಡು ತಮ್ಮ ಸಂಗಡಬರುವುದು ಪರಲೋಕಕೆರಡುಇರುವುದನೇ ಇಟ್ಟು ಬರುವುದು ಬಯಸುತಪರಹಿತಚರಿತದಿ ನಿರುತ ವರ್ತಿಸುವಂಥ4 ಸಾಸಿರದಳ ಕಮಲದೊಳ್ ಇಹಭಾಸುರ ಪ್ರಣವ ಪೀಠದೊಳುಈ ಸಕಲಕೆ ಸಾಕ್ಷಿಕನಾದ ಕೆಳದಿ ಪು-ರೇಶ ರಾಮೇಶನ ನಿರತ ಧ್ಯಾನಿಸುವಂಥಾ5
--------------
ಕೆಳದಿ ವೆಂಕಣ್ಣ ಕವಿ
ನರಸಿಂಹ ನರಸಿಂಹ ನಮಿಸುವೆನೊ ಘೋರ ದುರಿತ ಬೆನ್ನ ಬಿದ್ದಿದೆ ಪರಿಹರಿಸೋ ಶ್ರೀ ನರಸಿಂಹ ಪ ಪರಮೇಷ್ಠಿ ಹರ ಸುರಪತಿ ಮುಖರಾ ಸುರನಿಕರ ಪೊರೆವ ಪ್ರಭೊ ಪ್ರವರ ದುರಿತವು ಅವರನ್ನ ಬಾಧಿಸದಂತೆ ಪೊರೆದ ಪರಿಯಿಂದ ಎನ್ನ ಪೊರೆಯೊ 1 ಕಾಯ್ದು ತನ್ನಯ ತನ್ನ ತಂದೆಯ ಬಾಧೆ ಭಯದಿಂದ ಮನದಲ್ಲಿ ನಿನ್ನ ನೆನಿಯೆ ದಯದಿಂದ ನೀ ಕಂಭದಲಿ ಬಂದು ಪೊರೆದಂತೆ ಎನ್ನ ಭಯ ಪರಿಯೆ ಪೊರೆ ಶ್ರೀ ನರಸಿಂಹ 2 ನಿನ್ನ ಪೆಸರೆಂದರೆ ದುರಿತಂಗಳು ತನ್ನಿಂದ ತಾನೆ ಜರಿಯುವವು ಚನ್ನಾಗಿ ಶರಣರ ಪೊರೆದದಕೆ ನಿನ್ನವರೆಂದು ಕೇಳಿ ಬಲ್ಲೆ ಶ್ರೀ ನರಸಿಂಹ 3 ನಖ ಮುಖ ಶಿಖಿ ತನ್ನ ನೆನೆಯೆ ಸುಖಿತರವಾಹೋದು ಶರಣರಿಗೆ ಮಖಭುಜ ರವಿ ಸಾಕ್ಷಿ ಇದಕಾಗಿರೆ ವಿಖನಸಾರ್ಚಿತ ಪಾದ ಸುಖಮಯನೆ ಶ್ರೀ ನರಸಿಂಹ ಕಾಯೊ 4 ಅರಿದರೀಧರ ವರ ಕರಯುಗನೆ ಕರಯುಗ ಜಾನು ಶಿರದಲ್ಲಿಪ್ಪನೆ ಶಿರದಿಂದೊಪ್ಪುವ ಕರತಳನೆ ವರ ವಾಸುದೇವವಿಠಲ ಪೊರೆಯೊ ಶ್ರೀ ನರಸಿಂಹ ಕಾಯೊ 5
--------------
ವ್ಯಾಸತತ್ವಜ್ಞದಾಸರು
ನರಸಿಂಹ ಪಾಹಿ ಲಕ್ಷ್ಮೀ ನರಸಿಂಹ ಪ ನರಸಿಂಹ ನಮಿಪೆ ನಾ ನಿನ್ನ ಚಾರುಚರಣಕಮಲಕೆ ನೀ ಎನ್ನ ಕರವ ಪಿಡಿದು ನಿಜ ಶರಣನೆಂದೆನಿಸೊ ಭಾ ಸುರ ಕರಣಾಂಬುಧೆ ಗರುಡವಾಹನ ಲಕ್ಷ್ಮೀ ಅ ತರಳ ಪ್ರಹ್ಲಾದನ್ನ ನುಡಿಯಾ ಕೇಳಿ ತ್ವರಿತದಿ ಬಂದ್ಯೊ ಎನ್ನೊಡೆಯ ನಾನು ಕರುಣಾಳೊ ಭಕ್ತರ ಭಿಡೆಯ ಮೀರ ಲರಿಯೆ ಎಂದೆಂದು ಕೆಂಗಿಡಿಯ ಅಹ ಭರದಿಂದುಗುಳುತ ಬೊಬ್ಬಿರಿದು ಬೆಂಬತ್ತಿಕ ರ್ಬುರ ಕಶ್ಯಪುವಿನ ಹಿಂಗುರುಳ ಪಿಡಿದೆ ಲಕ್ಷ್ಮೀ 1 ಪ್ರಳಯಾಂಬುನಿಧಿ ಘನಘೋಷದಂತೆ ಘುಳಿ ಘುಳಿಸುತಲಿ ಪ್ರದೋಷ ಕಾಲ ತಿಳಿದು ದೈತ್ಯನ ಅತಿರೋಷದಿಂದ ಪ್ಪಳಿಸಿ ಮೇದಿನಿಗೆ ನಿದೋಷ ಅಹ ಸೆಳೆಸೆಳೆಯುತ ಚರ್ಮಸುಲಿದು ಕೆನ್ನೆತ್ತರೋ ಕುಳಿಯನಾಡಿದೆ ದಿಶಾವಳಿಗಳೊಳಗೆ ಲಕ್ಷ್ಮೀ 2 ಕ್ರೂರ ದೈತ್ಯನ ತೋರಗರುಳಾ ತೆಗೆ ದ್ಹಾರ ಮಾಡಿದೆ ನಿಜಕೊರಳ ಕಂಡು ವಾರಿಜಾಸನ ಮುಖದಯರ್ಕಳ ಪುಷ್ಪ ಧಾರಿಗೆರೆದು ವೇಗ ತರಳಾ ಆಹ ಸೂರಿ ಪ್ರಹ್ಲಾದಗೆ ತೋರಿ ತವಾಂಘ್ರಿ ಸ ರೋರುಹಾವನು ಕಾಯ್ದೆ ಕಾರಣ್ಯನಿಧಿ 3 ಜಯಜಯ ದೇವವರೇಣ್ಯ ಮಹ ದ್ಭಯ ನಿವಾರಣನೆ ಅಗಣ್ಯ ಗುಣಾ ಶ್ರಯ ಘೋರ ದುರಿತಾರಣ್ಯ ಧನಂ ಜಯ ಜಗದೇಕ ಶರಣ್ಯ ಅಹ ಲಯವಿವರ್ಜಿತ ಲೋಕ ತ್ರಯ ವ್ಯಾಪ್ತ ನಿಜಭಕ್ತ ಪ್ರಿಯ ಘೋರಮಯ ಹರ ದಯ ಮಾಡೆನ್ನೊಳು ಲಕ್ಷ್ಮೀ 4 ಕುಟಲ ದ್ವೇಷದವನು ನೀನಲ್ಲ ನಿನ್ನಾ ರ್ಭಟಕಂಜಿದರು ಸುರರೆಲ್ಲ ನರ ನಟನೆ ತೋರಿದ್ಯೋ ಲಕ್ಷ್ಮೀನಲ್ಲ ನಾ ಪಾ ಸಟಿ ಕಾಣೆನಪ್ರತಿಮಲ್ಲ ಅಹ ವಟಪತ್ರಶಯನ ಧೂ ರ್ಜಟಿವಂದ್ಯ ಜಗನ್ನಾಥ ವಿಠಲ ಕೃತಾಂಜಲಿಪುಟದಿ ಬೇಡುವೆ ಲಕ್ಷ್ಮೀ5
--------------
ಜಗನ್ನಾಥದಾಸರು
ನರಸಿಂಹಾವತಾರ ಕಮಲ ಸ ಮಾಧಿರೂಢ ಪದಾಬ್ಜ ಪೂರ್ಣ ಸು ಭಂಜನ ಮಾಧವ ಮುರಾರೆ ವ್ಯಾಧಿ ಪೀಡೆಯ ಪರಿಹರಿಸು ಮಹ ದಾದಿ ತತ್ವಯಂತ್ರೆ ನುತ ಪ್ರ ಲ್ಹಾದ ರಕ್ಷಕ ನರಹರಿಯೆ ದಹಿಸಖಿಳ ಶತ್ರುಗಳ 1 ಪ್ರಳಯಕಾಲದ ರವಿ ಸಮೂಹದ ಕಳೆಗು ಮಿಗಿಲಾಗಿರುವ ಮುಖದೊಳ್ ಥಳತಳಿಪ ದಂಷ್ಟ್ರಗಳ ತೋರುತ ಕಳೆದು ವದನವನು ಛಲದಿ ಚೀರುತ ದಾನವನ ಕಂ- ಗಳನು ಮುಚ್ಚಿಸಿ ಪಿಡಿದು ತಿಕ್ಕಿದ ಬಲ ಪಯೋನಿಧಿ ನರಹರಿಯೆ ದಹಿಸಖಿಳ ಶತ್ರುಗಳ 2 ಕಂಭದೊಳಗಂದಾದ ರವ ಕೇ- ದಿವಿಜ ಕ- ದಂಬ ಭಯಗೊಂಡಂಬರದ ಮೇಲಿಂಬುಗೊಂಡಿರಲು ಜಂಭ ವೈರಿಯ ಜರಿದು ಕೆಡಹಿದ ಕುಂಭಿ ಕುಂಭ ಭುಜದ್ವಯನ ಮುರಿ ದಂಬುಜಾಲಯರಮಣ ನರಹರಿ ದಹಿಸಖಿಳ ಶತ್ರುಗಳ 3 ಅಡಿಯಿಡುವ ರಭಸಕೆ ದಿಗಿಭಗಳು ನಡು ನಡುಗಲು ನಿಶಾಮುಖದಿ ಕೆಂ ಗಿಡಿಯನುಗುಳುತಲಾದಿ ದೈತ್ಯನ ಪಿಡಿದು ಖತಿಯಿಂಗ ತೊಡೆಯೊಳಿಕ್ಕೀರೈದು ಖರತರ ಕೊಡಲಿಯಂತಿಹ ನಖಗಳಿಂದ ನೊಡಲ ಬಗೆದಿಹ ನರಹರಿಯೆ ದಹಿಸಖಿಳ ಶತ್ರುಗಳ 4 ವರರಥಾಂಗಾದಿಗಳ ದ್ವಾದಶ ಕರದಿ ಧರಿಸುತಲೆರಡು ಕರದೊ ಳ್ಕರುಳಮಾಲೆಯ ಪಿಡಿದು ಮಿಕ್ಕಾದೆರಡು ಹಸ್ತಗಳ ಬೆರಳ ಕೊನೆಗಳ ತಿರುಹಿ ದಾನವ ಸುರವರನಖ ಮುಖದಿಂದ ಬಿಚ್ಚಿದ ನಿರವಧಿಕ ಬಲಪೂರ್ವ ನರಹರಿ ದಹಿಸಖಿಳ ಶತ್ರುಗಳ 5 ದತ್ತ ಸ್ವಾತಂತ್ರ್ಯವನು ಮೀರ್ದಾ ಪತ್ತು ಘಟಿಸುವ ಕಾಲದಲಿ ಪುರು- ಷೋತ್ತಮನ ನೆನೆದವರ ಕೈಪಿಡಿದೆತ್ತುತಿಹನೆಂದು ನಿತ್ಯ ಶಾಸ್ತ್ರಾದಿಗಳ ಶೋಧಿಸು ತುತ್ತುಮರು ಮೊದಲೆಂದ ಪೌರಾ- ಣೋಕ್ತಿಗಳ ನಿಜದೋರು ನರಹರಿ ದಹಿಸಖಿಳ ಶತ್ರುಗಳ 6 ಶೇಷಶಿಖರನಿವಾಸ ತತ್ಪದ ದಾಸರನು ಕಾಪಾಡಿ ಸಲಹುವ ಭಾಷೆಯನು ನೀ ಮರೆಪರೆ ಮದುಪಾಸ್ಯ ಸರ್ವೇಶ ಈಷದಂಜದ ದ್ವೇಷಿ ದುರ್ಜನ ನಾಶಗೈಸುವುದುಚಿತವೈ ಸವ ಕಾಶವ್ಯಾತಕೆ ನರಹರಿಯೆ ದಹಿಸಖಿಳ ಶತ್ರುಗಳ 7
--------------
ತುಪಾಕಿ ವೆಂಕಟರಮಣಾಚಾರ್ಯ
ನರಹರಿ ತೀರ್ಥಯತಿವರ್ಯ ಇಷ್ಟೆಂದೊ ಚರಿಯ ಪ ಸುರವಿನುತ ಪದಹರುಷತೀರ್ಥರ ಕರಕಮಲ ಸಂಜಾತರೆನಿಸುತ ಧರೆಯೊಳಗೆ ಸಿರಿಸಹಿತರಾ ಮನ ಕರೆದು ಧರೆಸುರ ಜನಕೆ ತೋರಿದ ಅ.ಪ ಚರಿಸುತ ಬರಲು ಗಜಪುರದಿ ಪುರ- ದರಸನಿಲ್ಲದಿರೆ ಯೋಚಿಸುತ ಕರಿಕರದಿ ವರಮಾಲಿಕೆಯ ಕೊಡಲಾಕ್ಷಣದೀ ಯತಿ ವರರ ಕಂಠದಲಿ ಹಾಕಲು ಜನ ಸಭದಿ ಪುರಜನದ ಪ್ರಾರ್ಥನದಿ ದ್ವಾದಶ ವರುಷ ಪ್ರಜರನು ಪೊರೆದು ಕೋಶದೊಳಿ- ರುವ ಧರಿಜಾಸಹಿತ ರಾಮನ ತರಿಸಿ ಪೊರಟರು ಕುದುರೆಯೇರುತ1 ಆ ಮಹಾಮುನಿಪರು ತ್ವರದಿ ಬಂದು ಶ್ರೀ ಮದಾನಂದ ತೀರ್ಥರ ಪದಯುಗದಿ ಪ್ರೇಮವಂದನ ಪೂರ್ವಕದಿ ಸೀತಾ ರಾಮಮೂರ್ತಿಯ ನೊಪ್ಪಿಸಿದರು ಕರದೀ ಶ್ರೀ ಮನೋಹರ ನಂಘ್ರಿಯುಗಲವ ಪ್ರೇಮದಿಂದಲಿ ಪೂಜಿಸುತಲಿರೆ ಈ ಮಹಾತ್ಮರ ಕರೆದು ಕೊಟ್ಟರು ನೇಮದಿಂದರ್ಚಿಸಿರಿ ಎನುತಲಿ 2 ಭಾಸುರ ಹೇಮಮಂಟಪದಿ ನಿತ್ಯಾ ಶ್ರೀಸೀತಾರಾಮನರ್ಚಿಪರು ವೈಭವದೀ ಭೂಸುರ ಕೃತ ವೇದಘೋಷದಿ ಮತ್ತೆ ವ್ಯಾಸಸೂತ್ರಗಳ ನಾಮಾವಳಿ ಪಠಣ ದಿ ದೇಶ ದೇಶಗಳಲ್ಲಿ ಚರಿಸುತ ತೋಷತೀರ್ಥರ ಮತವ ಬೋಧಿಸಿ ಸಿರಿ ನರ ಕೇಸರಿಗೆ ಪ್ರಿಯದಾಸರೆನಿಸಿದ 3
--------------
ಕಾರ್ಪರ ನರಹರಿದಾಸರು
ನರಹರಿ ದೀನದಯಾಳೊ ನರಹರಿ ಪ ನರಹರಿ ಕಾಯೊ ನೀಯೆನ್ನ | ಮಹಾ ದುರಿತಂಗಳ ಮರಿಯೊ ಮುನ್ನ | ಆಹ ಪರಮ ಭಕುತಿಲಿ ನಿನ್ನ ಚರಣಾರಾಧನೆ ಮಾಳ್ಪೆ ವರಭಯ ಹಸ್ತವೆನ್ನ ಸಿರದಲಿಡುತಲಿ ಅ.ಪ. ಹಿಂದೆ ಪ್ರಹ್ಲಾದದೇವನಂದು | ಪಿತನ ಬಂಧನದೊಳು ಸಿಲ್ಕಿ ಬಹುನೊಂದು | ತಾನು ಸಂಧ್ಯಾಕಾಲದೊಳಾಗ ನಿಂದು ನಿನ್ನ ಒಂದೇ ಮನದಿ ಸ್ತುತಿಸೆ ದಯಸಿಂಧು | ಆಹ ಮಂದಮತಿಯ ಹಿರಣ್ಯಕನುದರವ ಬಗೆದು ಛಂದದಿ ಕರುಳ ಮಾಲೆಯ ಧರಿಸಿದ ಧೀರ 1 ಕಂದು ಕೊರಳನಂತರ್ಗತದೇವ | ಸಕಲ ವೃಂದಾರಕ ವೃಂದವ ಕಾವ | ಭಕುತ ಸಂದಣಿಗೆ ಬೇಡಿದನೀವ | ಭವ ಬಂಧನವೆಂಬ ವಿಪಿನಕೆ ದಾವ | ಆಹ ಎಂದಿಗೆ ನಿನ್ನಯ ಸಂದರುಶನವೀವೆ ಮಂದಮತಿಯಾದೆನ್ನ ಮುಂದಕೆ ಕರೆಯೊ 2 ನೊಂದೆ ಸಂಸಾರದೊಳು ಮಾಲೋಲ | ಕರುಣ ದಿಂದ ನೋಡೆನ್ನ ದೀನಜನಪಾಲ | ದಿವ್ಯ ಸುಂದರ ಮೂರುತಿಯೆ ಗೋಪಾಲ | ಪವನ ವಂದಿತ ಶ್ರೀ ರಂಗೇಶವಿಠಲ | ಆಹ ಬಂದೆನ್ನ ಹೃದಯಮಂದಿರದಿ ನೆಲೆಯಾಗಿ ನೀ ನಿಂದು ಸಲಹೋ ಎನ್ನ ಕುಂದುಗಳೆಣಿಸದೆ 3
--------------
ರಂಗೇಶವಿಠಲದಾಸರು
ನರಹರಿಯ ಗುಣ ಕೊಂಡಾಡುವುದೇ ಲೇಸು ಮುರಲೀಧರನೊಲಿಸಿ ಪರಗತಿ ಸುಖವ ಬಯಸು ಪ ಸುಳ್ಳುಮಾತಾಡಿ ಧನಗಳಿಸುವುದಕಿಂತಲಿ ಒಳ್ಳೆಯವನೆನಿಸುವ ಬಡತನವೇ ಲೇಸು ಕಳ್ಳತನದಿಂದಲಿ ಕದ್ದು ತಿಂಬುವುದಕಿಂತ ಕೇಳಿ ಸಿಕ್ಕಷ್ಟುಂಡು ಇರುವುದೇ ಲೇಸು 1 ಸಾಲದಿಂದರಮನೆಯ ಕಲ್ಪಿಸಿರುವುದಕಿಂತಾ ಸಾಲಿಲ್ಲದ ಮನೆಯಲ್ಲಿಹುದೇ ಲೇಸು ಕಾಲನ ದೂತರಿಂದೆಳೆಸಿಕೊಳ್ಳದೇ ಲಕ್ಷ್ಮೀ ಲೋಲನಾ ಪಾದದಲ್ಲಿರುವುದೇ ಲೇಸು 2 ಅನ್ಯ ಸ್ತ್ರೀಯರ ಸುಖವ ಬಯಸಿ ಕೆಡುವುದಕಿಂತ ತನ್ನವಳ ಕೂಡ ಬಡಿದಾಡುವುದೇ ಲೇಸು ಹೊನ್ನು ಹೆಣ್ಣು ಮಣ್ಣಿಗಾಸೆ ಮಾಡದೇ ಮನಸನ್ನ ಸಿರಿಪತಿಗೆ ಒಪ್ಪಿಸುವುದೇ ಲೇಸು 3 ತಾನು ಮಾಡಿದೆನೆಂಬುದಕಿಂತ ಹರಿಯ ಆಧೀನವೆಂದರಿಯುವುದು ಪರಮ ಲೇಸು ಶ್ವಾನಗೆ ಮಾಂಸವನು ತಿನಿಸಿ ಸಲಹುವುದಕಿಂತ ಜ್ಞಾನಿಯಾದವನ ಸಲಹುವುದೇ ಲೇಸು 4 ದುಷ್ಟ ಮನುಜನು ಮಾಡುವ ಕೃಪೆಗಿಂತಲೂ ಶ್ರೇಷ್ಠ ನರರಿಂದ ಬೈಸಿಕೊಳ್ಳವುದೇ ಲೇಸು ಕೆಟ್ಟ ಸಂಸಾರ ಸುಖ ಬೇಡುವುದಕಿಂತ ಹನುಮೇಶ ವಿಠಲನ ಧ್ಯಾನದ ಸುಖವೇ ಲೇಸು 5
--------------
ಹನುಮೇಶವಿಠಲ
ನರಹರಿಯೆನಬಾರದೇ ನಾಲಿಗೆಯೊಳೂ ಪ ಕರ ಶಂಕು ಚಕ್ರ ಶ್ರೀಧರ ನಾರಾಯಣನೊಳ ಗಿರಲಿಕ್ಕೇನು ದೊರಕಾದೆ ನಾಲಿಗೆಯೊಳು1 ದಶರಥ ಸುತನಾಗಿ ವಸುಧೆ ಪಾಲಕನಾದಾ ಅಸಮೆನಂದೆನ ಭಾರದೆ ನಾಲಿಗೆಯೊಳೂ 2 ಕಾಮಜನಕ ರಂಗಾ ಪ್ರೇಮದಿಂದಲಿ ಕಾಯ್ವೊ ಸ್ವಾಮಿಯೆಂದೆನೆಬಾರದೆ ನಾಲಿಗೆಯೊಳು3 ಭರತ ಪುರೀಶ ಮತ್ಪರ ಮಾರ್ಯನೊಳು ಬಂದೂ ಬೆರೆಯಲೆನ್ನುತ ಸಾರಿದೆ ನಾಲಿಗೆಯೊಳು 4
--------------
ಚನ್ನಪಟ್ಟಣದ ಅಹೋಬಲದಾಸರು