ಒಟ್ಟು 2513 ಕಡೆಗಳಲ್ಲಿ , 118 ದಾಸರು , 2015 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಧರ ಮುರಹರ ಮಾರಮಣೀಕರ ಸೇವಿತ ಜಯ ಜಯ ಗೋಪಾಲಾ ಪ ಭೂಧರಾ ಪರಮೇಶ್ವರಾ ಕರಿವರ ಸುಖಕರ ಪರಮ ದಯಾಕರ ಗೋಪಾಲಾ ಅ.ಪ ಪಾಂಡವ ರಕ್ಷಕ ಕೌರವ ಶಿಕ್ಷಕ ಪಕ್ಷಿಗಮನ ಹರಿ ಗೋಪಾಲಾ ಚಂಡಕರಾಕ್ಷ ವಿಲಕ್ಷಣ ಲಕ್ಷಿತ ಲಕ್ಷ್ಮೀನಾಯಕ ಗೋಪಾಲಾ 1 ಗಂಗಾಜನಕ ವಿಹಂಗಗಮನ ಮಾತಂಗವರದ ಹರಿ ಗೋಪಾಲಾ ಸಂಗರಭೀಮ ಕೃಪಾಂಗ ಮನೋಹರ ಮಾಂಗಿರಿನಾಯಕ ಗೋಪಾಲಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀಧರಾಕರ ಕಂಜ ಸೇವಿತ ಪಾದ ಪದ್ಮಜ ಪದದ ಪುರು ಕರು- ಣೋದಧಿಯೆ ಲಾಲಿಪುದು ಪಾಮರನೆಂಬ ಬಿನ್ನಪವ ಸೋದರ ಸ್ಥಿತ ಸಕಲ ಬ್ರಹ್ಮಾಂ- ಪತಿ ನೀನರಿವಿಯಾದರು ಮಾಧವನೆ ಮನದಿರವ ಪೇಳ್ವೆನು ಮನುಜಭಾವದಲಿ 1 ಸುಕೃತ ಫಲವೋ ದೋಷದೂರನೆ ನಿನ್ನ ಪದವನು ಮೀಸಲಳಿಯದೆ ಸೇವೆ ಮಾಳ್ವದು ಲೇಸುಲೇಸೆಂದು ದಾಸಕೂಟದಿ ಸೇರಿ ಮನೆಯಲಿ ವಾಸವಾಗಿರಲಿದರ ಮಧ್ಯಮ ರಾಶೆ ಬಲೆಯಲಿ ಸಿಲುಕಿದೆನು ಕರುಣಾ ಸಮುದ್ರಹರಿ 2 ತನ್ನಿಕೃಷ್ಟ ಮನೋವಿಕಾರಗ- ಳಿನ್ನು ಬಿಡದಲೆ ಪೀಡಿಸುವ ಪರಿ ಯನ್ನು ಪರಮ ಕೃಪಾಳು ನೀನೆಂದೊರವೆನಖಿಳೇಶ ಮಾನ್ನವರ ಮಧ್ಯದಲಿ ಮಾನದಿ ಎನ್ನ ಕಾಪಾಡುವದು ಭಾರವೆ ತನ್ನ ಫಲಗಳ ತಾನೆ ಕೆಡಹುವದುಚಿತವೇ ತೆಗೆ 3 ಯುಕ್ತಿಯಲಿ ನಿನ್ನಂಥ ದೇವರ ರೆತ್ತಿ ವೈದಮೃತವನು ಸುಲಭದೊಳಿತ್ತೆ ದಿವಿಜರಿಗೆ ಔತ್ತರೇಯನ ಕಾಯ್ದ ದ್ರೌಣಿಯ ನೆತ್ತಿಯೊಳಗಿನ ರತ್ನ ಭೀಮನಿ ಗಿತ್ತ ಪರಿಯನು ಪಠಿಸಿ ತಿಳಿದೆನು ಪಾವನಾತ್ಮಕನೆ 4 ಬ್ರಹ್ಮತೇಜೋ ವೃದ್ಧಿ ಬಲಿಯೊಳು ಬ್ಯಾಡ ಸಂಗರ ನಮಗೆನುತ ನಿ- ಮ್ಮಮ್ಮನೊಳ್ ನುಡಿದಂದು ಕಶ್ಯಪನಿಂದಲವತರಿಸಿ ಬ್ರಹ್ಮಚಾರಿಯ ರೂಪದಿಂದೀ ಕ್ಷಮ್ಮೆಯನು ಸೆಳೆದಿಂದ್ರಗಿತ್ತಮ- ಹಾನ್ಮಹಿಮ ನಿನಗಾವದಘಟಿತ ನೀರಜಾರಮಣ5 ನಾರದರ ನುಡಿ ನಿಜವೆನುತ ಮೂ- ರಾರು ಭಕ್ತಿಯ ತಾಳ್ದ ಮನುವಿನೊ- ಳಾರುಭಟಿಸುತ ಕಾಶ್ಯಪನು ಮದವೇರಿ ನಿಂದಿರಲು ಯಾರು ತಿಳಿಯದ ತೆರದಿ ಕಂಭದಿ ಮೃಗ ರೂಪವನು ಹೆ- ಮ್ಮಾರಿ ದೈತ್ಯನ ತರಿದು ತ್ವತ್ಪದವಿತ್ತೆ ದಾಸನಿಗೆ 6 ಏನು ಶ್ರಮವಿಲ್ಲದಲೆ ಪಿಡಿದು ದ- ಶಾನನನ ತೊಟ್ಟಿಲಿಗೆ ಕಟ್ಟಿ ಪ್ರ- ವೀಣತೆಯ ತೋರಿಸಿದ ವಾಲಿಯ ಪಕ್ಷವನು ತ್ಯಜಿಸಿ ದೀನ ಬಾಂಧವನೆಂಬ ಬಿರುದನು ದಿಟವೆ ನಿಶಿತದ್ರಾಜ್ಯ ಪದವಿಯ ಭಾನುಜನಿಗೊಲಿದಿತ್ತ ಭಕ್ತಜನಾರ್ತಿ ಭಂಜನನೆ 7 ಶಬ್ದಗೋಚರವಾದ ಕಥೆಗಳು ಬದ್ಧವೆಂಬುದು ಪೂರ್ವದನುಭವ ಸಿದ್ಧವಾಗಿಹುದೆನಗೆ ಸಜ್ಜನಲಬ್ಧಪದ ಪದ್ಮ ಬುದ್ಧಿಹೀನತೆಯಿಂದ ನುಡಿದರು ಮಧ್ವವಲ್ಲಭ ನಿನ್ನ ದಾಸನ- ನುದ್ಧರಿಸು ನೀನಲ್ಲದೆನಗಿನ್ನಾರು ಗತಿ ಹರಿಯೆ8 ಒಡೆಯರೆಂಬರನೆಲ್ಯುಕಾಣದೆ ಉಡುವದುಂಬುದಕೇನು ದೊರೆಯದೆ ಗಿಡವ ನಿಲುಕದ ಬಳ್ಳಿಯಂದದಿ ಬಡುವ ಕಷ್ಟವನು ತಡೆಯಲಾರದೆ ತಳಮಳಿಸುತಿರೆ ಪಿಡಿದು ಕರವನು ಕಾಯ್ದೆಯೆನ್ನನು ನುಡಿವದೇನಖಿಳಾಂಡ ನಾಯಕ ನಿನ್ನ ಮಹಿಮೆಯನು 9 ಮಾರಿಯಂದದಿ ಮಧ್ಯದೊಳಗೊ- ಬ್ಯಾರುವೇನೆಂಬಧಮ ಹೂಣನು ತೀರಿಸುವೆನೆಂದೆನ್ನೊಳಿಲ್ಲದ ದೂರ ಸಂಗ್ರಹಿಸಿ ಗಾರಗೊಳಿಸುವದರಿತು ಕಕ್ಷವ ಹಾರಿಸುತ ಸುರವಂದ್ಯ ಮೂರ್ತಿಯ ತೋರಿ ತಂದಿಲ್ಲಿರಿಸಿ ಪೊರೆದವನ್ಯಾರು ಪೇಳ್ದೊರೆಯೆ 10 ಶ್ರೀಶ ನಿನ್ನ ಪದಾಬ್ಜ ಪೊಗಳುವ ದಾಸ ಕೂಟದಿ ಸೇರಿ ಸೇವೆಯ ಬ್ಯಾಸರದೆ ನಡೆಸುತಿರೆ ಮತ್ತೊಬ್ಬಾಸುರನ ತೆರದಿ ದ್ವೇಷದಿಂದಿರೆ ದೂರ ಓಡಿಸಿ ದುರಿತ ಭಯಗಳ ಪರಿಹರಿಸಿದ ಮ- ದೀಶ ನೀನೆಂದನವರತ ನಂಬಿರುವೆ ಶ್ರೀಪತಿಯ 11 ಇಷ್ಟು ಪರಿಯಿಂದೆನ್ನ ರಕ್ಷಿಸು- ತಿಷ್ಟ ಫಲಗಳನೀವ ವೆಂಕಟ ಬೆಟ್ಟದೊಡೆಯನೆ ಬೇಡಿಕೊಂಬುವೆ ಒಂದು ಕೃತ್ಯವನು ಮಾನವ ನುಡಿಯಕಾಡನು ಸುಟ್ಟು ಸೂರೆಯಗೈದು ನಾ ಮನ ಸಿಟ್ಟ ತೆರದಲಿ ತೋರು ಚಿತ್ತವ ಸೃಷ್ಟಿಕರ ಶ್ರೀಶ 12
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಾಥ ಶ್ರೀನಾಥ ಶ್ರೀನಾಥ ಮೋಹಿನೀ ರೂಪ ತಾ ತಾಳಿದಾನೆ ಸುಕಲಾಪ ತಾನೋಡಿಸುವುದು ಹೃತ್ತಾಪ ವನಂಬೆನೆ ಹರಿಯ ಪ್ರತಾಪ ಪ ಬಂಗಾರದ ಲತೆಯಂತೆ ಬಳುಕುವಳು ಬಾಜು ಬಂದಿಗೆ ಗೊಂಡೆಗಳ ಕಟ್ಟಿಹಳು ಮುಂಗಾಲಿಲೆ ನಿರಿಗಿಗಳ ಚಿಮ್ಮುವಳು ಮೋಹನ ಮಾಲೆಗಳ ಕಟ್ಟಿಹಳು ಕುಂಭ ಕುಚದ ಭಾರಕ್ಕೆ ತಡಿಯಳೂ ತುದಿಬೆರಳಲಿ ಗಲ್ಲವನೊತ್ತಿಹಳು ಕೇಸರಿ ಗಂಧ ಹಚ್ಚಿಹಳು ಹೊಂಗ್ಯಾದಿಗೆ ಪೋಲುವ ಮೈಬಣ್ಣ ಹೊಮ್ಮಸದಲಿ ಹೋಲುವ ಈ ಹೆಣ್ಣು ಹಿಂಗಡೆಯಲಿ ವರ ಹೆರಳು ಭಂಗಾರ ಹಿಮ್ಮಡಿ ಬಡಿಯೋದು ಸರ್ಪಾಕಾರ ಭಂಗಿಸುವಳು ಬಹು ದೈತ್ಯರ ಹೃದಯ ಬಹು ವಿಲಾಸದಿ ತೋರ್ಪಳು ಸಖಿಯ ಅಂಗಜದರು ಗಂಧಕೆ ಅಳಿವೃಂದ ಆಡುತಲಿಗೆ ಝೇಂಕಾರಗಳಿಂದಾ ಸಂಗಡನೆರದ ಸುರಾಸುರರಿಂದ ಸತಿ ಚಲುವಿಂದಾ ಮಂಗಳಮುಖಿ ನಮ್ಮಂಗಳ ಮೋಹಿಸಿ ಭಂಗನ ಪಡಿಸುವಳೈ ತ್ರಿಜಗವ ಜಗಂಗಳ ಪಾಲಿಸುವಳು | ಮನ ಸಂಗಡ ಅಪಹರಿಸುವಳು | ಜಡ ಜಂಗಮಲಿಗೆ ಬಹು ಪ್ರೀತ್ಯಾಸ್ಪದಳು ಸಾರಂಗಿ | ಸಾರಂಗಿ | ಸಾರಂಗೀ ಸಾಂಬಮದ ಭಂಗಿ | ಬಹಳ ಸುಖಸಂಗಿ ಸುಂದರಿ ಲಲಿತಾಂಗಿ | ಮೋಹನಾಪಾಂಗೀ ಬಡು ಹೆಂಗಲ್ಲ ಈಕೆ ಬಹುಭಂಗ ಬಡುವಿರಿ ಜ್ವಾಕೆ || ಶ್ರೀನಾಥ || 1 ಕನ್ನಡಿಯಂದದಿ ಪೋಲುವ ಕಪೋಲ ಕರ್ಪೂರ ರಂಜಿತ ವರ ತಾಂಬೂಲ ಕಣ್ಣಿಗ್ಹಚ್ಚಿಹಳು ಕನಕದ ಕೋಲಾ ಕಾಮಿನಿಯಂದಡಿ ತೋರ್ಪಳು ಜಾಲಾ ಬಿನ್ನುಡಿ ಹಾಕಿದ ಚಂದ್ರದ ಕುಪ್ಪುಸ ಚಪಲಾಕ್ಷಿಯ ನೋಟದ ಬಲು ರಭಸಾ ಕರ್ಣಾಯತ ನೇತ್ರಗಳ ವುಲ್ಲಸಾ ವುನ್ನಂಕಾ ನಾಶಿಕದ ಬುಲಾಕು ವಜ್ರಮಯದ ವರಮಖರೆದ ಬೆಳಕು ಕರ್ಣದಿ ರತ್ನಖಚಿತ ತಟಾಂಕಾ ಕುಸುರು ಹಚ್ಚಿದ ಬಾಹುಲಿಗಳ ಬಿಂಕ ಸಣ್ಣ ನಡುವಿನೊಯ್ಯಾರದ ನಲ್ಲೆ ಸರಸಿಜನಾಭನ ಸೃಷ್ಟಿ ಇದಲ್ಲೆ ಬಣ್ಣಿಸಲಳವಲ್ಲವು ಸೌಂದರ್ಯ ಬಿಡಿಸುವುದು ಕೇಳ ಮುನಿಗಳ ಧೈರ್ಯ ಬೆಣ್ಣೆಯಂತೆ ಮೃದುವಾದ ಶರೀರ ಭಾಗ್ಯಹೀನರಿಗೆ ಇದು ಬಲುದೂರಾ ಕನ್ನೆ ಶಿರೋಮಣಿ | ಕಾಮನ ಅರಗಿಣಿ ಕೌಸ್ತುಭಮಣಿಗಳ ಹಾರೇ ಸುವರ್ಣವರ್ಣ ಸುಕುಮಾರೇ ಮೋಹನ್ನರಸನೆ ಗಂಭೀರೇ ಮೋಹನ್ನೆ ಮಧುರ ಮಧುರಾಧರ ಮಂಜುಳ ವಕುಜಲರೆ ಬಹೋಚ್ಚಧರೆ ಛÅಪ್ಪನ್ನ ಛಪ್ಪನ್ನ ದೇಶಗಳು ಚಲುವರಿದ್ದರೂ ಚಪಲಾಕ್ಷಿಗೆ ಸಮರಾರೇ ಗತ ಪುಣ್ಯದಿಂದ ಕೈಸೇರುವಳಲ್ಲದೇ ಕಾಮಾಂಧsÀರಿಗತಿ ದೂರೇ ಈ ಹೆಣ್ಣು | ಈ ಹೆಣ್ಣು | ಈ ಹೆಣ್ಣು ಸುರಾಸುರರನ್ನೆ ಮೋಹಿಸಳು ಚನ್ನ ಮನಕೆ ತರಳಿನ್ನ ಬಿಡು ವಿಷದ್ಹಣ್ಣು ಅಪೇಕ್ಷಿಸೆ ಮಣ್ಣು ಕೂಡಿಸುವಳು ತನ್ನ ಜನರಿಗಮೃತಾನ್ನ ಕೊಡುವಳು ಮಾನ್ಯಳು ಪರಮಸೋನ್ಯಳು | ಸುಗುಣ ಅರಣ್ಯ ವಿನಾಶೇ ಬ್ರಹ್ಮಾಂಡಜಾದ್ಯಂಗೀತೇ || ಶ್ರೀನಾಥ || 2 ಹುಡುಗಿ ನೋಡು ಹೊಸ ಪರಿಯಾಗಿಹಳು ಹದ ಮೀರಿದ ಯವ್ವನದಿ ಮೆರೆವಳು ಅರಳು ತುಂಬಿಹಳು ಮಂದಸ್ಮಿತದಲಿ ಮೋಹಿಸುತಿಹಳು ಬೆಡಗಿನಿಂ ನುಡಿಯ ಸವಿಯ ತೋರುವಳೂ || ಬಹು ವಿಧದಾಭರಣಗಳನ್ನಿಟ್ಟಹಳು ನಡಿಗಿಗಳಿಂದ ನಾಚುತ ಹಂಸ ನವಮಣಿ ಚಂದ್ರರ ಕೆಡಿಸಿತು | ನಂಬೆ ಜಡಿತ ಮುತ್ತಿನ ತಾಯಿತ ಕಠಾಣೀ ಜಗವನು ಮೋಹಿಸುವಳು ಸುಶ್ರೋಣೀ ಬಿಂಕದ ನುಡಿ ಸೊಬಗಿನ ಚಂದಾ ಅಡಗಿದವೆ ಪಿತಭೃಂಗಗಳಿಂದಾ ಹಿಡಗಿ ಮರಗಿ ಮಧ್ಯಶಮನ ಮರಗೀ ಕೇಸರಿ ಬಹು ಸೊರಗೀ ಉಡುಪತಿ ಕೋಟಿ ಪ್ರಭ ಧಿಕ್ಕಾರಾ ಉಲ್ಲಾಸದಿ ಮನ ಮುಖ ಚಂದಿರಾ ನಡಿಗಗಳಿಂದೆನೆ ರಾಜಿಸುತಿ ಹೋದೆ ನವರತ್ನದಯದೆ ಮಯದ ಫಣಿಕಟ್ಟು ಮೇಲ್ಪೊಡವಿವೊಳಗೆ ಪಡಿಗುಣಕ ಕಡಿಯಿಲ್ಲಾ ಸುಳ್ಳುನುಡಿಯಿಲ್ಲಾ ಯೆನ್ನೊಡೆಯಾ ಶ್ರೀ ವಿಜಯ ವಿಠ್ಠಲನಲ್ಲದೆ ಎಲ್ಲಿಂದ ಬಂದಳೋ ಕೆಳದೀ || ಶ್ರೀನಾಥ || 3
--------------
ವಿಜಯದಾಸ
ಶ್ರೀನಿಕೇತನ ಲಕ್ಷ್ಮೀ ಕಾಂತನ ಪದಪದ್ಮ ಧ್ಯಾನ ಮಾಡುತ ಎನ್ನ ಸ್ಥಿತಿಯ ದೀನಭಾವನೆಯಿಂದಲೊರೆವೆನು ಗುರುಪವ ಮಾನ ಪಾಲಿಸಲಿ ಸನ್ಮತಿಯ ಪ. ತಾನು ತನ್ನದೆಂಬ ಹೀನ ಭಾವನೆಯಿಂದ ನಾನಾ ಯೋನಿಗಳಲ್ಲಿ ಚರಿಸಿ ಮಾನವ ಜನ್ಮವನೆತ್ತಲು ಮುಂದಾದ- ದೇನೆಂಬೆ ಗರ್ಭದೊಳುದಿಸಿ 1 ಮಾತಾಪಿತರುಗಳು ಮೋಹದಿ ರಮಿಸಲು ಕೇತ ತತಿಗೆ ಸರಿಯಾಗಿ ಆತು ಬಂದಿಹೆನು ಗರ್ಭದಿ ಮೆಲು ನರ ವ್ರಾತ ಬಂಧಕೆ ಗುರಿಯಾಗಿ 2 ಸೇರಿದ ಕ್ರಿಮಿ ಪರಿವಾರ ಕಚ್ಚುತಲಿರೆ ಚೀರಲಾದರು ಶಕ್ತಿಯಿರದೆ ಭಾರ ವಸ್ತುವು ಕಣ್ಣಸಾರವು ತಡೆಯದೆ ಗಾರುಗೊಂಡೆನು ಗರ್ಭದೊಳಗೆ 3 ಮೂರರಾ ಮೇಲೆ ಮತ್ತಾರುಮಾಸಗಳಿಂತು ಭಾರಿ ಭವಣೆಗೊಂಡು ಕಡೆಗೆ ಭೋರನೆ ಭೂಮಿಗೆ ದೂರಿ ಬಂದೆನು ಮಲ ಧಾರೆಯಾ ಕೂಡಿ ಮೈಯೊಳಗೆ 4 ಹೇಸಿಗೆ ಮಲಮೂತ್ರ ರಾಶಿಯ ಒಳಗೆ ದು- ರ್ವಾಸನೆ ಬರುವ ಗೆರಸಿಯ ಹಾಸಿಗೆ ಒಳಗೆ ಹಾಕಿರುತಿರೆ ದೇಹದ ಲೇಶ ಸ್ವಾತಂತ್ರ್ಯವೇನಿರದೆ 5 ಮೂಸಿ ಮುತ್ತುವ ನುಸಿಮುತ್ಕುಣ ಬಾಧೆಗೆ ಘಾಸಿಗೊಳುತ ಬಾಯ ತೆರದೆ ದೋಷ ಶಂಕಿಸಿ ಮೈಯೊಳಿಕ್ಕಿದ ಬರೆಗಳ ಬಾಸಲೆಯುನು ತಾಳ್ದೆ ಬರಿದೆ 6 ನಾಲ್ಕು ಕಾಲುಗಳಿಂದ ನಾಯಿಗೆ ಪರಿಯಾಗಿ ಸೋಕಿದೆ ಸರ್ವತ್ರ ತಿರುಗಿ ಸಾಕುವ ಜನರೆಡಬಲಗಾಲ ತುದಿಯಿಂದ ದೂಕಿದರಲ್ಲಿಯೆ ಸುಳಿದೆ 7 ವಾಕುಗಳೆಂಬ ಕೂರಂಬನು ಸಹಿಸಿ ಪ- ರಾಕೆಂದು ಪರರ ಸೇವಿಸಿದೆ ಮಾಕಳತ್ರನೆ ನಿನ್ನ ಕೃಪೆಯಾದ ಬಳಿಕ ಮೋ- ಹಾಕಾರ ಮಡುವಿನೊಳಿಳಿದೆ 8 ಈಗಲಾದರು ದೇಹ ಭೋಗವೆ ಬಯಸುತ ನೀಗಿದೆ ವ್ರತ ನೇಮಾದಿಗಳ ಸಾಗದ ಫಲ ತನಗಾಗಬೇಕೆಂಬ ಮ- ನೋಗತಿಯಿಂದ ಕರ್ಮಗಳ 9 ಮೂಗಭಾವನೆಯನ್ನು ನೀಗದೆನಿಸಿ ಮುಂ- ದಾಗಿಯಾಡುವೆ ಮಥನಗಳ ಕಾಗೆಯು ಕುಂಭದ ಜಲ ಕುಕ್ಕುವಂತೆ ಬೆಂ- ಡಾಗಿ ಕೊಂಡೆನು ಝಗಳಗಳ 10 ಕಂತುಜನಕ ಕಂಜನಾಭ ವೆಂಕಟರಾಜ ಚಿಂತಾಮಣಿ ಸುರತರುವೆ ಎಂತಾದರು ನಿನ್ನ ದಾಸ್ಯ ಸೇರಿದ ಮೇಲೆ ಇಂತುಪೇಕ್ಷಿಸುವುದು ಥರವೆ 11 ಭ್ರಾಂತಿ ಎಂಬುದ ಬಿಡಿಸಿನ್ನಾದರು ಲಕ್ಷ್ಮೀ ಕಾಂತ ಕಾರುಣ್ಯ ವಾರುಧಿಯೆ ಚಿಂತಿತದಾಯಿ ಎನ್ನಂತರಂಗದಿ ಬೇಗ ನಿತ್ಯ ವಿಧಿಯೆ 12
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಿವಾಸ ಗುರು ಗುಣಾಧೀಶ | ಪಾಲಿಸೊ ಭಕ್ತರ ತೋಷ ನಾ ನಿನ್ನ ದಾಸ ಪ ಏನಾದರು ಎನ್ನ ಹೀನತೆ ಎಣಿಸದೇಸಾನುರಾಗದಿ ನಿನ್ನ ಅಧೀನದೊಳಗಿರುವುದು ಅ.ಪ. ನಿತ್ಯ 1 ಅಗ್ನಿಹೋತ್ರವ ನಡೆಸುವ ತೆರದಿ | ಆಗ್ಯನ್ನನು ಮುದದಿಸುಜ್ಞಾನಿ ನೀನೇ ಕರಗಳ ಪಿಡಿದೀ | ಅಜ್ಞಾನವ ಬಿಡಿಸೀವಿಘ್ನವಗೊಳಿಸದೆ ಸರ್ವಜ್ಞ ಪಾದದೀಮಗ್ನನ ಮಾಡು ಪ್ರಾಜ್ಞ ಶಿರೋಮಣಿ2 ನಿನ್ನ ನಂಬಿದ ಪಾಮರ ನಾನು | ಪಾವನ್ನ ನೀನುಎನ್ನ ಗುಣ ದೋಷಗಳನ್ನು | ಮನ್ನಿಸುವಾದೇನು ಅನ್ನಂತ ಪಾಪಿ ನಾನು ನೀನಾದರೊ ದಯವನ್ನು ಮಾಡುನಿನ್ನ ಪೊಂದಿದೆ ಮಹಾನುಭಾವ 3 ಪಾತಕಿ ನಾನಾದರೂ ನಿನ್ನಚರಣಕ್ಕೆ ಸುತ್ತಿದ ಬಿರಿದು ಬಿಡುವುದುಂಟೇ4 ಅನ್ಯರಿಗಾನು ಎರಗುವನಲ್ಲ | ನೀ ಬಲ್ಲಿ ಎಲ್ಲಮನ್ನಿಸಿ ದಯದಿ ಎನ್ನಯ ಸೊಲ್ಲ ಶಿರಿ ಲ-ಕ್ಷ್ಮೀ ನಲ್ಲ ಎನ್ನ ಪಿಡಿಯೊ ಮೋ-ಹನ್ನ ವಿಠಲನ್ನ ತೋರಿ ಪಾವನನೆನಿಸುವುದು 5
--------------
ಮೋಹನದಾಸರು
ಶ್ರೀನಿವಾಸ ಶ್ರೀಮನೋಲ್ಲಾಸ ಶ್ರೀನಿವಾಸ ಪ ಶ್ರೀನಿವಾಸ ಶುಭಮಾಮವ ಗಾನಲೋಲಿತ ಸನ್ಮಾನಿತಲೀಲಾ ಅ.ಪ ಭೂದೇವನಿವಹ ಸಂಭಾವಿತ ಭಾವ 1 ರಾಮರಾಮ ರಘುವಂಶ ಲಲಾಮ ರಾಮ ರಾಮ ರಮ್ಯಗುಣಧಾಮ ಮುನಿಜನಪ್ರೇಮ ದನುಜಸಂಗ್ರಾಮಭೀಮ2 ಕಂಜನಾಭ ಕಾಲಾಂಬುಧಾಭಾ ಕಂಜನಾಭ ರಿಪು ವಕ್ತ್ರ 3 ಸುಂದರಾಂಗ ಸುಕೃತಾಂತರಂಗ ಸುರಸುಂದರೀನಿಚಯ ನಂದಗೋಕುಲಾನಂದ ಮುಕುಂದ 4 ಭವ್ಯರೂಪ ಭಕ್ತಾಲಯ ದೀಪ ಭವ್ಯರೂಪ ಧೃತ ದಿವ್ಯಚಾಪ ಸುರಭಾವ್ಯಮಹಿಮ ಮಾಂಡವ್ಯಸುಸೇವ್ಯ 5 ವ್ಯಾಘ್ರಶೈಲಾವಾಸ ಸುಶೀಲಾಶೈಲಶಿಖ- ರಾಗ್ರಲೋಲ ದೇವಾಗ್ರಗಣ್ಯ ಭಕ್ತಾಗ್ರ ಶರಣ್ಯ 6 ದುರಿತದೂರಾ ದುಃಖಾಭ್ರಸಮೀರಾ ದುರಿತದೂರ ಘಣಿಗಿರಿವಿಹಾರ ಶ್ರೀವರದವಿಠಲಾ 7
--------------
ವೆಂಕಟವರದಾರ್ಯರು
ಶ್ರೀನಿವಾಸ ಸುಜನೋದ್ಧಾರ ಏನು ತಾತ್ಸಾರ ನಾನು ನಿನ್ನ ದಾಸನೆಂದು ಮಾನವರು ನುಡಿದ ಮೇಲೆ ಪ. ಪುಟ್ಟಿದಾಕ್ಷಣಾದಿಯಾಗಿ ದುಷ್ಟಸಂಗಕೊಳಗಾಗಿ ನಷ್ಟಪ್ರಜ್ಞೆಯಿಂದ ಬಹು ಕಷ್ಟಿಯಾದೆನು ಕೃಷ್ಣ ಶಬ್ದ ವಾಚ್ಯಪರಮೇಷ್ಠಿ ಜನಕ ನಿನ್ನ ಮನ ಮುಟ್ಟಿ ಭಜಿಸದೆ ಬಯಲೆಷ್ಟವ ಬಯಸುವೆನಲ್ಲೊ 1 ದಾನಧರ್ಮ ಜಪತಪ ಮೌನ ಮೊದಲಾದ ಸ- ತ್ಸಾಧನ ಹೀನನಾದರು ನಿನ್ನಾನುರಾಗದಿ ಮನಮುಟ್ಟಿ ಕ್ಞಣವಾದರು ಧ್ಯಾನಿಸಲು ಸಕಲವಂದ್ಯ ಮುನಿಗಮ್ಯ ಪದವನೀವಾತನು ನೀನೆಂದೊಂದೆ ತಿಳಿದೆ 2 ಮನವಚನ ಕಾಯಕಾದನುದಿನ ಕೃತವಾದ ಘನ ಪಾಪಂಗಳಿಗೆ ನಾ ಕೊನೆಗಾಣೆನು ದನುಜಾರಿ ರಾಮ ಅನಿಮಿತ್ತಬಂಧು ಎಂಬ ಘನತೆ ತೋರಿಸಿ ನಿನ್ನ ತನಯನೆಂದೆಂನ ಸಲಹೊ 3 ವೀರವೇದೋದ್ಧಾರ ವರಮಂದರಧರ ನರ ಹರಿಕುಬ್ಜಾಕಾರ ಪೃಥ್ವೀಭಾರವಾರಕ ವಾರುಧಿ ಬಂಧಕಯದು ವೀರ ತ್ರಿಪುರ ಸ್ಮರ ಹರನಿಂದ ತರಿಸಿದ ತುರಗವೇರಿದ ಧೀರ 4 ಮಂದಮತಿಯಾದ ಎನ್ನ ಬಂಧುವಾಗಿ ಕೈಯ ಪಿಡಿದು ಮುಂದು ಗಾಣಿಸುವೆನೆಂದು ಹಿಂದೆ ರಕ್ಷಿಸಿ ಇಂದು ಎನ್ನ ಕುಂದನೆಣಿಸಿ ತಂದೆ ನೀನುಪೇಕ್ಷಿಸಲು ಮುಂದೆ ಕಾಯ್ವರಾರೊ ಕರುಣಾಸಿಂಧು ಅನಿಮಿತ್ತ ಬಂಧು 5 ಮಾನಗೇಡಿನಿಂದ ದ್ವೇಷಿ ಮಾನವಾಧಮರ ಮುಂದೆ ಶ್ವಾನಕಿಂತ ಕಡೆಯಾಗಿನ್ನೇನು ಮಾಡಲೊ ನೀನೆ ಗತಿಯೆಂಬ ಮನೋಧ್ಯಾನದಿಂದ ಬಂದೆ ನಿಂದು ಕಾನನದ ಶಿಶುವಿದೆಂದು ಮಾನಿಸಿ ರಕ್ಷಿಸೊ ತಂದೆ 6 ಘಾಸಿಗೊಳಿಸುತೀ ಆಶಾಪಾಶದಿಂದ ಎನ್ನ ಬಿಡಿಸಿ ದಾಸರ ದಾಸ್ಯವನಿತ್ತು ಪೋಷಿಸೆನ್ನುತ ಮೀಸಲಾಗಿಹೆನು ಶ್ರೀನಿವಾಸ ಬೇಗ ಸಲಹೊ ಬಂದು 7
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಿವಾಸ-ಶ್ರೀಮನೋಲ್ಲಾಸ-ಶ್ರೀನಿವಾಸ ಪ ಶ್ರೀನಿವಾಸ ಶುಭಮಾಮವ ಗಾನಲೋಲಿತ ಸನ್ಮಾನಿತಲೀಲಾ ಅ.ಪ. ದೀಪಿತ ಭವದಾವ-ದೇವದೇವ ನಿವಹಸಂಭಾವಿತಭಾವ 1 ರಾಮ ರಾಮರಘುವಂಶಲಲಾಮ ರಾಮ ರಾಮ ದನುಜ ಸಂಗ್ರಾಮ ಭೀಮ 2 ಕಂಜನಾಭಕಲಾಂಬುಧಾಭ ಕಂಜನಾಭ ರಿಪು ವಕ್ತ್ರ 3 ಸುಂದರಾಂಗ ಸುಕೃತಾಂತರಂಗ ಸುರಸುಂದರೀ ನಿಚಯ ನಂದಗೋಕುಲಾನಂದ ಮುಕುಂದ 4 ಭವ್ಯರೂಪ ಭಕ್ತಾಲಯ ದೀಪ ಮಾಂಡವ್ಯ ಸುಸೇವ್ಯ 5 ವ್ಯಾಘ್ರಶೈಲಾವಾಸ ಸುಶೀಲಾ ಶೈಲ ಶಿಖರಾಗ್ರಲೋಲ ದೇವಾಗ್ರಗಣ್ಯ ಭಕ್ತಾಗ್ರ್ಯಶರಣ್ಯ 6 ದುರಿತದೂರಾ-ದುಃಖಾಭ್ರಸಮೀರಾ ದುರಿತದೂರ ಘಣಿಗಿರಿವಿಹಾರ ಶ್ರೀವರದ ವಿಠಲಾ 7
--------------
ಸರಗೂರು ವೆಂಕಟವರದಾರ್ಯರು
ಶ್ರೀನಿವಾಸದೇವರು ಬಾರಯ್ಯ ವೇಂಕಟ ಮನ್ಮನಕೆ ತ್ವರಿತದಿ ನಿಜನಾರೀಸಹಿತದಿ ಈ ಸಮಯಕೆ ಶರಣೆಂಬೆನು ಪದಯುಗಕೆ ಪ ಸಾರಿದ ನಿಜಶÀರಣನ ಈ ಭವಭÀವ ಘೋರಭಯವ ಪರಿಹÀರಿಸುವುದಕ್ಕೆಅ.ಪ ವ್ಯಕ್ತಾವ್ಯಕ್ತ ತ್ರಿಜಗದ್ವ್ಯಾಪ್ತಾ ದೋಷ ನಿರ್ಲಿಪ್ತಾ ಮುಕ್ತಾ ಮುಕ್ತ ಜೀವರ ಗಣದಾಪ್ತಾ ನೀ ಸರ್ವತ್ರದಿ ವ್ಯಾಪ್ತ ಭಕ್ತನ ಹೃದಯದಿ ವ್ಯಕ್ತನಾಗಿ ನಿಜ ಮುಕ್ತಿಪಥವ ತೋರೊ ಭಕ್ತಿಯನಿತ್ತು 1 ಕವಿಜನಗೇಯಾ ಆನಂದದಾಯಕ ನಿರ್ಜಿತಮಾಯಾ ಕಾಯಯ್ಯಾ ಜೀಯಾ ಆನತಜನಸನ್ಮಾನದ ಮನ್ಮನ ವನಜದಿ ನೀ ಸನ್ನಿಹಿತಾಗುವುದಕೆ 2 ಸೋಮಾಸುರನಾಮಕ ದೈತ್ಯನ ಕೊಂದೂ ವೇದವ ತಂದೂ ಕೂರ್ಮ ಕಿಟ ನರಹರಿ ರೂಪದಿ ನಿಂದೂ ವಾಮನನೆಂದೂ ರಾಮ ಭಾರ್ಗವ ಯದುಕುಲಸಾಗರ - ಸೋಮ ಬೌದ್ಧ ಕಲ್ಕಿ ಪ್ರೇಮದಿ ಮನಕೆ 3 ನಿಗಮಗೋಚರ ನಿತ್ಯಾನಂದಾ ಬಗೆಬಗೆ ಜನ್ಮವನೈದಿದೆ ಮುಕುಂದಾ ಮುಗಿವೆನೊ ಕರದಿಂದಾ ಅಗಣಿತ ಗುಣನಿಧಿ ಸುಗಮದಿ ಭವದ ಬಗೆಯನು ತಿಳಿಸೊ ನಗೆ ಮೊಗದಿ ಬಾ 4 ವಿಧಿಶಂಭುವಂದಿತ ಪದಯುಗಕಮಲಾ ನಿತ್ಯ ನಿರ್ಮಲಾ ಆಧಿಭೂತಾಧ್ಯಾತ್ಮಿಕತಾಪದ ಶಮಲಾ ನೀ ಮಾಡೆನ್ನನು ವಿಮಲಾ ಸದಯ ಸುಧಾಕರ ಹೃದಯದಿ ತವಪದ ಪದುಮ ಭಜಿಪೆ ನೀ ಮುದದಲಿ ಮನಕೆ5 ಸಾಸಿರನಾಮ ನತಜನಪ್ರೇಮಾ ಪೊರೆಯೋ ಶ್ರೀ ರಾಮಾ ಆಶೀ ಪೂರ್ತಿಸಿ ಮಾಡೆನ್ನಲಿ ಪ್ರೇಮಾ ಸುರಸಾರ್ವಭೌಮಾ ವಾಸಮಾಡಿ ಅಭಿಲಾಷೆಯ ಪೂರ್ತಿಸೊ ವಾಸುದೇವ ವಾರಾಸಿಜರಮಣಾ 6 ಶರಣಾಗತಜನಪರಿಪಾಲಾ ಕರುಣಾಲವಾಲಾ ಕರುಣಿಸೆನ್ನನು ಹೇ ಶಿರಿಲೋಲಾ ನಮಿತಜನಸುgಸಾಲ ಅಜ ಭವ ಸುರ ನಿಕರಾರ್ಚಿತಪದ ಸರಸಿಜಯುತ ನೀ ಸುರವರದೇವಾ 7 ಪನ್ನಗಗಿರಿ ನಿಜಕೃತವಾಸಾ ಪೊರೆ ಎನ್ನನು ಶ್ರೀಶಾ ಬಿನ್ನಪ ಮಾಳ್ಪೆನು ಹೇ ಶ್ರೀನಿವಾಸಾ ಕೊಡು ಎನಗೆ ಲೇಸಾ ಎನ್ನ ಸಲಹೋದಕೆ ಅನ್ಯರ ಕಾಣೆನೊ ಮನ್ನಿಸು ನೀನಾಪನ್ನಜನಸುಖದಾ 8 ಲಕ್ಷ್ಮೀನಾಯಕ ವರಪಕ್ಷಿಗಮನಾ ಅಕ್ಷಯ ಫಲವನ್ನ ರಕ್ಷಿಸಿ ಕಾಯ್ವದೋ ನೀ ಎನ್ನಾ ಲಕ್ಷ್ಮಣನಣ್ಣಾ ಕ - ಟಾಕ್ಷದಿ ಎನ್ನ ವೀಕ್ಷಿಸು ಕ್ಷಣ ಕ್ಷಣ..... 9 ಧರ್ಮಾರ್ಥಕಾಮಮೋಕ್ಷವ ನಾನೊಲ್ಲೇ ಕರ್ಮದ ಸುಳಿಯಲ್ಲೇ ಮರ್ಮವ ತಿಳಿಯದೆ ಬೀಳುವೆ ನಾನಲ್ಲೇ ನಿರ್ಮಿಸದಿರು ಎನ್ನಲ್ಲೇ ಕರ್ಮಭವದ ಮಹÀ ಮರ್ಮವ ತಿಳಿಸೀ ದುರ್ಮನ ಬಿಡಿಸೆಲೊ ಬೊಮ್ಮನ ತಾತಾ 10 ದಿಟ್ಟ ಗುರು ಜಗನ್ನಾಥವಿಠಲ ನಾನನಾಥಾ ಥಟ್ಟಾನೆ ನೀ ಎನ್ನನು ಕಾಯೋ ಶ್ರೀನಾಥಾ ಇಷ್ಟೇ ಎನಮನದರ್ಥ ಸೃಷ್ಟಿಯೊಳಗೆ ಬಹು ಭ್ರಷ್ಟರಸ್ತುತಿಸಿ ನಿ - ಕೃಷ್ಟನಾದೇನೋ ಶ್ರೇಷ್ಠ ಮೂರುತೀ 11
--------------
ಗುರುಜಗನ್ನಾಥದಾಸರು
ಶ್ರೀನಿವಾಸನೆ ನಿನ್ನ | ವರ್ಣಿಸಲು ಅಳವೇ ಮಾನನಿಧಿ ಗುಣಪೂರ್ಣ | ನಿನ್ನಂಘ್ರಿ ಭಜಿಪರ ಬನ್ನ ಪ. ವೈನತೇಯನ ವರೂಥ ನಾನಾ ಹಾರ ಪದಕದಿ ಮೆರೆವ ಸುಂದರ ಕಾಮಪೂರ್ಣ ಮುಖಾರವಿಂದನ ನೀ ಮನದಿ ತೋರುತ್ತ ಪೊರೆಯೊ ಅ.ಪ. ಶೇಷಪರ್ವತವಾಸ | ಭಕ್ತರನು ಸಲಹೋ ಈ ಕ್ಷಿತಿತ್ರಯಕೀಶ ಪೋಷಿಸುವೋ ಭಕ್ತರವಾಸಿ ನಿನ್ನದೊ ಶ್ರೀಶ ಲಕ್ಷ್ಮೀನಿವಾಸ ದೋಷದೂರನೆ ಎನ್ನ ಅವಗುಣ ದೋಷಗಳನೆಣಿಸದಲೆ ಸಲಹೊ ಶೇಷವರ ಪರ್ಯಂಕಶಯನ ವಿ- ಭೀಷಣ ಪ್ರಿಯ ಭೀಷ್ಮವರದ1 ಮಾಘ ಸಪ್ತಮಿ ಕುಂಭ | ಸಂಕ್ರಮಣ ದಿವ್ಯ ಯೋಗ ಶುಕ್ಲದಿ ಎಂಬ | ಸ್ಥಿರವಾರದಲ್ಲಿ ಆಗ ರಥದಲ್ಲಿ ಬಿಂಬ | ಭಕುತರಿಗೆ ಕಾಂಬ ಜಾಗು ಮಾಡದೆ ಸೂರ್ಯಮಂಡಲ ಬೇಗ ಬಿಗಿದಿಹ ಸಪ್ತ ಹಯಗಳ ಬಾಗಿ ಭಜಿಸಲು ಭಕ್ತವರ್ಗವು ನೀ ಜಗದಿ ಮೆರೆಯುತ್ತ ಪೊರೆದೆ 2 ವಿೂನನಾಗಿ ಮತ್ತೆ ವೇದವನೆ | ತಂದು ಆ ನಳಿನಭವಗಿತ್ತೆ ಅಲ್ಲಿಂದ ಸುರರಿಗೆ ಪ್ರಾಣದಾನವನಿತ್ತೆ ಮೇದಿನಿಯ ಪೊತ್ತೆ ನಾನೆ ಜಗಕೆಂಬ ದಾನವನ ಕೊಂದು ದಾನ ಬೇಡಿ ಭೂಮಿ ಅಳೆದು ಮಾನಿನಿ ಶಿರ ತರಿದು ಸೀತಾ ಮಾನಿನಿಗೆ ಅಂಬುಧಿಯ ಬಿಗಿದೆ 3 ಮಾನಿನಿಯರಿಗೆ ಕಾಣದೆ | ಬೆಣ್ಣೆಯನು ಕದ್ದು ಮಾನವೆಲ್ಲವ ಕಳೆದೆ ಅಲ್ಲಿಂದ ಮುಂದೆ ಮಾನವ ಬಿಟ್ಟು ನಿಂದೆ ಏನ ಹೇಳಲಿ ಹಯವನೇರಿ ದಾನವರ ಸಂಹರಿಸಿ ಮೆರೆದೆ ನಾನಾ ರೂಪ ನಾಟಕಧರ ನೀನೀ ಪರ್ವತದಲಿ ನಿಂದಿಹೆ 4 ದೇಹವ್ಯಾಪ್ತಕ ನೀನೆ | ದೇಹಗಳ ಕೊಟ್ಟು ಮೋಹಗೊಳಿಸುವ ನೀನೆ ದೇಹಸ್ಥನಾಗಿ ತೋರುವ ಬಿಂಬ ನೀನೆ | ಜೀವಾಕಾರನೆ ಈ ಹದನ ಎನಗಿನ್ನು ತಿಳಿಯದೊ ಮೋಹ ಹರಿಸಿ ಸುಜ್ಞಾನ ನೀಡೊ ಸ್ನೇಹ ಗೋಪಾಲಕೃಷ್ಣವಿಠ್ಠಲ ಶ್ರೀ ಹರಿಯೆ ಹೃದಯದಲಿ ನಿಲಿಸೊ 5
--------------
ಅಂಬಾಬಾಯಿ
ಶ್ರೀನಿವಾಸಾರ್ಯರ ಶೃಂಗಾರ ಗುಣಂಗಳಆನೆಂತು ವರ್ಣಿಸುವೆನು ಪ ದಾನವಾಂತಕ ಹರಿಯ ಮಾನಸಾರ್ಚನೆ ಮಾಳ್ಪಮಾನಿಸಾ ವೇಷಧರರ ಇವರ ಅ.ಪ. ನಿರ್ಜರ ಪತಿಯ ಚಿತ್ತ ಸಂಪಾದಿಸುವರಮತ್ತು ಗಜವೆಂಬ ದುರ್ವಾದಿಗಳನೇ ಮುರಿದು ಹತ್ತು ದಿಕ್ಕಿಲಿ ಮೆರೆವರ ಇವರ 1 ಪಾದ ಅಂಗಾರ ಕರಮುಟ್ಟಿ ಪಾಲಿಸುತ್ತಿಹರ ||ವರ ಮಂತ್ರಾಕ್ಷತೆಯನ್ನಿತ್ತು ಮುದದಿಂದ ಪಾ-ಮರರನ್ನೆ ಪೊರೆವರ ಇವರ2 ಲಕ್ಷ್ಮೀಪತಿ ಶ್ರೀನಿವಾಸಾರ್ಯರೆಮ್ಮನು ಬಿಡದೆ ರಕ್ಷಿಸಲೆಂತೆಂಬೆನೊಅಕ್ಷರ ಪುರುಷ ಅಪ್ರಾಕೃತನ ತೋರಿ ಮದ ಮತ್ಸರವ ಬಿಡಿಸೆಂಬೆನೊ ||ಸೂಕ್ಷ್ಮಾಂಬರಧರ ಮೋಹನ ವಿಠಲನಈ ಕ್ಷಣದಿ ತೋರಿಸೆಂಬೆನೊ ನಾನು 3
--------------
ಮೋಹನದಾಸರು
ಶ್ರೀಪತಿ ಭಯಹಾರಿ ರಕ್ಷಿಸು ತಾಪತ್ರಯವಾರಿ ಕೋಪಲೇಶನ ಮನೋನುಪಹಾರಿ ಭೂಪತಿರೂಪವಿಹಾರಿ ಪ. ಅಖಿಳ ಜನನಿ ಭರ್ತಾ ಪಾಲನ ಮಹಾಧುರಧರ್ತಾ ಭಕುತಿಯ ಪಾಲಿಸು ಭಯ ಪರಿಹರ್ತಾ 1 ಕಾಮಿತ ಫಲದಾಯಿ ತುಲಸೀಧಾಮ ಶೇಷಶಾಯಿ ತಾಮರಸಾಸನ ದೇವನ ತಾಯಿ ಶ್ರೀ ಮಹೇಶನೀ ತ್ವರಿತದಿ ಕಾಯಿ2 ನಾಗಭೂಧರೇಶ ಕರುಣಿಸು ಬೇಗದಿ ಸರ್ವೇಶ ರಾಗ ರೋಗ ಗಣ ನೀಗು ನಿನ್ನಡಿಗೆ ಬಾಗುವೆ ಲಕ್ಷ್ಮೀಶ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀಪರಿಕಲ್ ನರಸಿಂಹ ಸ್ತೋತ್ರ ನರಸಿಂಹ ಪರಿಕಲ್ ನರಸಿಂಹ | ಗೌರೀಶಾದ್ಯಮರರಿಗೀಶ | ಆಹ | ಅಮಿತ ಪೌರುಷ ಸ್ವಜನತೇಷ್ಟಪ್ರದನೆ ನಮೋ ಅಮಲೂರು ಗುಣಗಣಾರ್ಣವ ಜಯ ಜಯತು ಪ ಸರ್ವೋರು ನಿಜ ಶಕ್ತಿಮಂತ | ಸದಾ ಸರ್ವತ್ರವ್ಯಾಪ್ತ ಅನಂತ | ಜಗತ್ ಸೃಷ್ಟ್ಯಾದಿಗಳಿಗೇ ನೀ ಕರ್ತ | ವಿಷ್ಣು ಸರ್ವತೋಮುಖ ಮೃತ್ಯುಹಂತ || ಆಹ || ಶ್ರೋತವ್ಯಮಂತವ್ಯ ಧ್ಯಾತವ್ಯವಿಭು ನೀನು ವ್ಯಕ್ತನಾದಿಯೋ ಸ್ತಂಭದಲಿ ಭೃತ್ಯಗೋಲಿದು 1 ಮೂಲಾಧಾರಾರಭ್ಯಲೂಧ್ರ್ವ | ವಾಗಿ ತಲೆಯ ಪರ್ಯಂತದಿ ನಿಲುವ | ಬಲು ಸುಲಲಿತಸ್ತಂಭದಂತಿರುವ | ನಾಡಿ ಯಲ್ಲಿ ಉರದೇಶದಿ ಪೊಳೆವ ||ಆಹ|| ಜ್ಯೋತಿರ್ಮಯನೆ ಪಾಪತಿಮಿರಾರ್ಕ ನೀ ಎನ್ನ ಪ್ರತಿಕ್ಷಣ ಪಾಲಿಸೋ ಶ್ರೀಲಕ್ಷ್ಮೀರಮಣ 2 ವಿಧಿ ಭವೇಂದ್ರಾದಿಗಳಿಂದ | ಪ್ರಹ ಲ್ಲಾದ ಶ್ರೀವ್ಯಾಸಮುನೀಂದ್ರ | ಮಂತ್ರಾ ಸದ್ಮಸ್ಥ ಶ್ರೀ ರಾಘವೇಂದ್ರ | ದಾಸ ವೃಂದ ಸುಜನರುಗಳಿಂದ ||ಆಹ || ಸೇವಿತ ಪೂಜಿತ ಸ್ತುತ್ಯ ಸಂಭಾವಿತ ||ಪಾಲಿಸೋ.......... 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಮತ್ಕಾಂಚನ ಕೋಟಿರನ್ನತನಯಾ | ಕ್ಷೀರಾಂಬುನಿಧಿ ಮಧ್ಯದಿ | ನೇಮದಿಂ ನಿಜಧಾಮದಲ್ಲಿ ರಮೆಯಾ | ಒಡಗೂಡಿ ಸುರಸಿದ್ಧದೀ | ಸಾಮಗಾಯನ ಪ್ರಿಯನಾಗಿನಿರುತಾ | ಪಾಲಿಪ ಲೋಕಂಗಳಂ | ಮಾಧವ ದಯಾನಿಧೇ ವಧುವರಾ | ಕುರ್ಯಾತ್ಸದಾ ಮಂಗಳಂ | 1 ಭಾನುಕೋಟಿಯ ತೇಜದಿಂ ಬೆಳಗುವಾ | ಮುಕಟವು ಮಸ್ತಕದಿ | ಶ್ರೀ ನೀಲಾಳಕ ಭಾಲಮಧ್ಯಮೆರೆವಾ | ಕೇಶರ ಪೌಂಡ್ರಕದಿ | ಸೂನಾಸಿಕದಿ ವಾರಜಾಕ್ಷಅಧರಿಂ | ದೊಪ್ಪುವ ಕರ್ಣಂಗಳಂ | ತಾನೀಕುಂಡಲ ಭೂಷಣಾ ವಧುವರಾ | ಕುರ್ಯಾತ್ಸದಾ ಮಂಗಳಂ 2 ಶ್ರೀ ಲಕ್ಷ್ಮೀ ನಿಜಶಾರದಾಗಿರಿಸುತೇ | ಭಾರತೀ - ಶಚಿ- ಭಾಮಿನೀ | ಕಾಲಿಂದೀವರ ನರ್ಮದಾ ಸರಸ್ವತೀ | ಗಂಗಾ ತ್ರಿಪಥಗಾಮಿನೀ | ಪಾಲಿಸುವ ಗೋದಾವರೀ ಭೀಮರಥೀ | ಶ್ರೀ ಕೃಷ್ಣ ವೇಣಿಂಗಳಂ | ಮೇಲೆ ಕಾವೇರಿತುಂಗೆ ತಾವಧುವರಾ | ಕುರ್ಯಾತ್ಸದಾ ಮಂಗಳಂ 3 ವಾರಿಜಾಸನ ವಾಯು ಶಂಕರಗುರು | ತ್ವಂಹೇಂದ್ರ ವಸಿಷ್ಠನು | ಭಾರದ್ವಾಜ ಪರಾಶರಾತ್ರಿ ಭೃಗು ಕ- ಶ್ಯಪ ಕೌಶಿಕ ಶ್ರೇಷ್ಠನು | ಕಾರುಣೀ ಜಮದಗ್ನಿ ರಾಮ ಮರಿಚೀ | ವ್ಯಾಸಾದಿ ಋಷಿ ಪುಂಗಳಂ | ನಾರದಾದಿ ಮುನೀಂದ್ರರೀ ವಧುವರಾ | ಕುರ್ಯಾತ್ಸದಾ ಮಂಗಳಂ 4 ಇಂದ್ರೋವಹ್ನಿ ಪಿತೃಪತಿ - ನಿಋಋತಿ | ಮಕರೇಶ ಪ್ರಭಂಜನಾ | ಸಾಂದ್ರೈಶ್ವರ್ಯ ಕುಬೇರ ಈಶದಿಕ್ಪಾ ಲಾದಿತ್ಯಶಶಿರಂಜನಾ | ಚಂದ್ರಾತ್ಮಜನುಭೌಮದೇವಗುರುತಾ | ಕವಿಮಂದ ಗ್ರಹಂಗಳಂ | ಸಾಂದ್ರಾಗೀಹ ಸಮಸ್ತಗಿರೀ ವಧುವರಾ | ಕುರ್ಯಾತ್ಸದಾ ಮಂಗಳಂ 5 ಶ್ರೀ ಮತ್ಸ್ಯಾಕೃತಿ ಕೂರ್ಮನಾಗಿ ವರಹಾ | ನರಸಿಂಹನೆಂದೆ ನಿಸಿದಾ | ವಾಮನಾಭೃಗುವರ್ಯರಾಮರಘುಪಾ | ಯದುವಂಶದಲಿ ಜನಿಸಿದಾ | ತಾ ಮತ್ತೇ ನಿಜ ಬೌದ್ಧಕಲ್ಕಿ ಎನಿಸೀ | ತಾಳ್ದಾವತಾರಂಗಳಂ | ಶ್ರೀ ಮನೋಹರ ದೇವಕೀ ವಧುವರಾ | ಕುರ್ಯಾತ್ಸದಾ ಮಂಗಳಂ 6 ಕಾಶೀ ಕಂಚಿ ಅವಂತಿಕಾ ವರಪುರೀ | ದ್ವಾರಾವತೀ ಮಥುರಾ | ದೋಷನಾಶಿಕ ಪುಣ್ಯಕ್ಷೇತ್ರ ಬದರೀ | ಶೇಷಾದ್ರಿವರ ಸೇತುಬಧ ತುಹಿನಾ | ರಜತಾದ್ರಿ ಸೈಲಂಗಳಂ | ಈ ಸಪ್ತಾಂಬುಧೀ ಸರ್ವದೀ ವಧುವರಾ | ಕುರ್ಯಾತ್ಸದಾ ಮಂಗಳಂ 7 ದಶರಥಾತ್ಮಜನಾದ ರಾಮಜಗದೀ | ಜನಕಾತ್ಮಜಾ ಸೀತೆಯಾ | ಕುಶಲದೀ ನರಲೀಲೆಯಿಂದ ಮೆರೆವಾ ವೈಭವ ಸಂಗsತಿಯಾ ಉಸರೀದಾ ಗುರುಮಹಿಪತಿಸುತ ಕ- ನ್ನಡ ಭಾಡೆ ಶ್ಲೋಕಂಗಳಂ | ವಸುಧೆಯಲಿ ಸ್ಮರಿಸುವವರಿಂಗೆ ಕೊಡುವಾ | ರಘುನಾಥ ಜಯಮಂಗಳಂ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀಮದನಂತಸ್ವಾಮಿ ರಕ್ಷಿಸು ಪುಣ್ಯ- ನಾಮ ಸರ್ವಾಂತರ್ಯಾಮಿ ಪ. ಸೋಮಾರ್ಕಕಾಮಸೂತ್ರಾಮ ಪ್ರಮುಖಸುರ- ಸ್ತೋಮವಂದಿತ ಭೀಮಬಲ ಗುಣ- ಧಾಮ ವರನಿಸ್ಸೀಮ ಮಹಿಮನೆ ಅ.ಪ. ಅಂತರ್ಬಹಿವ್ರ್ಯಾಪ್ತನೆ ಸತತ ರಮಾ- ಕಾಂತಗೆ ಪರಮಾಪ್ತನೆ ಚಿಂತಿಪ ಭಕ್ತರ ಚಿಂತಾಮಣಿ ನಿ- ಶ್ಚಿಂತನೊಂದೆ ಶಿರದಿ ಸಾಸವೆ- ಯಂತೆ ಲೋಕವನಾಂತುಕೊಂಡಿಹೆ 1 ರಾಮನ ಸೇವೆಗಾಗಿ ಲಕ್ಷ್ಮಣನೆಂಬ ನಾಮವ ತಾಳ್ದ ಯೋಗಿ ಯಾಮಿನೀಚರರ ನಿರ್ನಾಮಗೈದ ವೀರಲ- ಲಾಮ ನಿರ್ಜಿತಕಾಮ ಸಜ್ಜನ- ಪ್ರೇಮ ಭೌಮ ನಿರಾಮಯನೆ ಜಯ 2 ಸಂಕರ್ಷಣ ಸುಗುಣಾ-ಭರಣ ನಿ- ಶ್ಯಂಕ ವೈರಿಭೀಷಣ ಶಂಕರಾದಿಸುರಸಂಕುಲನುತಪಾದ- ಪಂಕಜನೆ ತಾಟಂಕಗೋಪಾ- ಲಂಕೃತಾಂಗ ಶುಭಂಕರನೆ ಜಯ 3 ಸಾರತತ್ತ್ವಬೋಧನೆ ಶರಣುಜನ ವಾರಿಧಿಚಂದ್ರಮನೆ ಘೋರಭವಾರ್ಣವತಾರಕನಮಲ ಪಾ- ದಾರವಿಂದದ ಸೌಂದರ್ಯ ನಿಜ ಭೂರಿ ನೇತ್ರಗಳಿಂದ ಕಾಣುವೆ 4 ಮಂಜುಳ ನಗರೇಶನೆ ಭಕ್ತಭಯ- ಭಂಜನ ಸುವಿಲಾಸನೆ ಕಂಜಾಕ್ಷಸಖ ಲಕ್ಷ್ಮೀನಾರಾಯಣನ ತೇಜಃ- ಪುಂಜ ಭಗವದ್ಭಕ್ತಜನಮನೋ-ರಂಜನಾತ್ಮ ನಿರಂಜನನೆ ಜಯ 5
--------------
ತುಪಾಕಿ ವೆಂಕಟರಮಣಾಚಾರ್ಯ