ಒಟ್ಟು 6410 ಕಡೆಗಳಲ್ಲಿ , 128 ದಾಸರು , 3576 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿತ್ಯ ಪರಿಪೂರ್ಣ ಕಾಮ ಪಟ್ಟಾಭಿರಾಮ ತನ್ನ ಸ್ಮರಿಸುವ ಜನಕೀವನು ಕ್ಷೇಮ ಪ ಭಾಸ್ಕರವಂಶ ಭೂಷಣ ತರಣಿಜಮಿತ್ರ ಭವ್ಯ ಚರಿತ್ರ | ದಾಶರಥಿ ಕರುಣಾಳು ಸರೋಜನೇತ್ರ ಅ.ಪ ಜಡಮತಿಯಾದರೂ ಇವನ | ಮರೆಯಾ ಇನ್ನು ಧೃಢಮತಿಗೆ ತನ್ನನೇ ಕೊಡುವೆನೈಯ್ಯಾ 1 ತಮ್ಮೋಳು ತಾವು ತಿಳಿದು | ಭಜಿಸುವರು ಇನ್ನು ಹೆಮ್ಮೆಯ ಮಾತುಗಳು ಬಿಡಿರಿ ಜನರು 2 ರಾಮನು ನರನೆಂಬ ಪಾಮರನ ಬಾಯಲಿ ಮಣ್ಣು ಸೋಮಶೇಖರ ತನ್ನ ಸತಿಗೆ | ಪೇಳಿದ ಇವನ ನಾಮದ ಮಹಿಮೆ ಕುಣಿಕುಣಿದು 3 ನಿರುತಾ ಪೊಗಳುವವಿವನ ವೇದ | ಇವನಾ ಚರಣೆ ಸಜ್ಜನರಿಗೆ ಬಲುಸ್ವಾದ 4 ಸೇತುವೆ ಕಟ್ಟುವುದುಂಟೆ ಕೋತಿದಂಡುಗಳೆಲ್ಲಾ ವ್ರಾತ ರಹಸ್ಯವೇತಕೆ ಚಿಂತೆ 5 ಹೊರಗಿನ ಕಣ್ಣಿಂದ ಅರಿಯಲು ಸಾಧ್ಯವಲ್ಲಾ ನೆರೆ ಒಳಗಣ್ಣಲಿ ನೋಡಬೇಕು | ಸ ದ್ಗುರು ಕಟಾಕ್ಷವಾದವಗೆ ಜೋಕು 6 ಪ್ರತ್ಯಕ್ಷವಾದಿಗಳಿಗೆ ಮೃತ್ಯುವಿನ ಬಾಯೊಳು ಸತ್ತು ಹುಟ್ಟುವುದು ತಪ್ಪುವುದಿಲ್ಲಾ | ಆ ಪತ್ತು ಇದೇ ದುರ್ಜನಿರಿಗೆಲ್ಲಾ 7 ಮಗನು ಬ್ರಹ್ಮನು ಮೊಮ್ಮಗನು ರುದ್ರನು ಮೂ ಜಗವನಾಳುವ ನಾರಾಯಣನಿವನು | ತಾನು ಮಗುವಾಗಿ ದಶರಥಗುದಿಸಿದನು 8 ಮುನಿ ಯಾಗವ ಪಾಲಿಸಿ ವನಿತೆಯ ಶಾಪ ಬಿಡಿಸಿ ತನ್ನೊಳಗಿಟ್ಟು ತಾ ಹುಡುಕಿದನು 9 ನರನಾಗಿ ದೈತ್ಯರ ಮುರಿದು ದೇವತೆಗಳಿಗೆ ಗರಸನಾಗಿ ಸಾಕೇತಪುರದಿ ಪೊಳೆದ 10 ನರನು ಪಾಮರನು ಹ್ಯಾಗೆ ತಿಳಿಯುವನು | ಸಂಸೃತಿ ಶರಧಿಯೊಳು ಬಿದ್ದು ಬಳಲುವನು11
--------------
ಗುರುರಾಮವಿಠಲ
ನಿತ್ಯ ಶುಭ ಮಂಗಲಂ ಮಂಗಲಂ ಮಾರುತಿಯ ಪೆಗಲೇರಿ ಬರುವನಿಗೆ ಪ. ಮಂಗಲಂ ಮಾರೀಚ ವೈರಿಹರಿಗೆ ಮಂಗಲಂ ಸೀರಜಾ ಮುಖಪದ್ಮ ಭೃಂಗನಿಗೆ ಮಂಗಲಂ ವೀರ ರಾಘವ ದೇವಗೆ ಅ.ಪ. ರಾವಣಾದಿಗಳಿಂದ ಲಾಹವದಿ ಬಹು ನೊಂದ ದೇವತೆಗಳನು ಬೇಗ ಕಾವೆನೆಂದು ತಾ ಒಲಿದು ಕೌಸಲ್ಯದೇವಿ ಗರ್ಭದಿ ಬಂದು ಸಾವಧಾನದಿ ಸಕಲ ಸಜ್ಜನರ ಸಲಹಿದಗೆ 1 ಮಂದಮತಿಗಳೊಳಧಿಕ ತುಂಡಿಲನು ಮಾತ್ಸರ್ಯ ದಿಂದ ಮಾಡಿರುವ ಪ್ರತಿ ಬಂಧಕವನು ಇಂದಿಲ್ಲಿ ಬರಲು ಸಮಂಧಗೈಸದೆ ದಾಸ ನೆಂದೆನ್ನ ಮೇಲೆ ದಯದಿಂದಲೊಲಿದವಗೆ 2 ಇಂಗಿತಾಭೀಷ್ಟದ ಕುರಂಗ ಮರ್ದನ ರಾಮ ಶೃಂಗರಿಸಿ ಸರ್ವಪರಿವಾರ ಸಹಿತಾ ಮಂಗಲಾರತಿ ಕೊಂಡು ಮಂಗಳವ ಬೆಳೆಸುವ ಭು ಜಂಗ ರಾಜೇಂದ್ರ ಗಿರಿಶೃಂಗನಾಥನಿಗೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಿತ್ಯ ಸಲಹೆ ಜನರನು ಅನ್ನಪೂರ್ಣೆ ಪ ಉಲ್ಲಾಸದಿಂದಲಿ ಪಲ್ಲಕ್ಕಿಯ ಮೇಲೆ ನೀ ಕುಳ್ಳಿರ್ದು ಛತ್ರ ಚಾಮರ ವ್ಯಜನಗಳಿಂದ ಅಲ್ಲಿ ಗಲ್ಲಿಗೆ ನೃತ್ಯಗೀತ ವಾದ್ಯುಪಚಾರ ದಲ್ಲಿ ಉತ್ಸವದಿ ಬರುವ ಸಂಭ್ರಮವಕಂಡೆ 1 ಹಾಡಿ ಪಾಡಿಸಿ ಕೊಳುತ ಚತುರ್ವಿಧ ಗೂಡಿದ ಮಂತ್ರ ಸ್ತುತಿಗಳಿಂದಲಿ ಕೂಡಿದ ಜನರ ಸಂದಣಿಯಲ್ಲಿ ಮನೆಯಲ್ಲಿ ಬೇಡಿದ ಜನರಿಂಗಿಷ್ಟಾರ್ಥವ ನೀವುದ ಕಂಡೆ 2 ಮೂರು ಮೂರುತಿ ನೀನೆ ನಿರ್ಮಿಸಿ ಮತ್ತೆ ಮೂರು ಗುಣಂಗಳ ಧರಿಸಿ ತಾರಣ ರೂಪೆ ಸೃಷ್ಟಿಸ್ಥಿತಿಗಳನು ಸಂಹಾರವ ಮಾಳ್ಪ ಚೈತನ್ಯ ರೂಪೆಯಕಂಡೆ 3 ಬಿಂಕವ ಮುರಿದೆ ಜನರ ಸಾಕಿನ್ನು ಭಯಂಕರವನು ಬೀರದಿರು ತಾಯೆ ಎನ್ನ ಮಾಡಲ ಮನೆಯೊಳು ನೆಲಸಿ ಭಕುತರನು ಶಂಕರಿ ಸಲಹೆ ದಯದೊಳನ್ನಪೂರ್ಣೆ 4 ಎಲ್ಲ ಜೀವರಿಗು ಜೀವಳು ನೀನು ಇಲ್ಲಿನ್ನು ನಿನಗಿಂತ ಬಲ್ಲಿದರು ಇಲ್ಲಮ್ಮ ವಿಜಯದಶಮಿಯೊಳು ನೀ ಬಂದು ಕೊಲ್ಲೂರ ಮೂಕಾಂಬೆಯೊಳಿರ್ದುದ ಕಂಡೆ 5
--------------
ಕವಿ ಪರಮದೇವದಾಸರು
ನಿತ್ಯ ಸುಖಕರ ನೀರಜಾಕ್ಷರ ಭೃತ್ಯರಾಗುವ ಬನ್ನಿರಿ ಎತ್ತುವನು ಸಂಶಯವಿಡದೆ ಕೃತಕೃತ್ಯರಾಗುವವೆನ್ನಿರಿ ಪ. ಮೋದಮಯನ ಪ್ರಸಾದವನು ಕೊಂಡಾದರದಿ ಸೇವಿಪುದು ಪಾದಪದ್ಮಾಮೋದಯುತಾ ತುಳಸೀದಳಗಳನು ಮುಡಿವುದು ತೇದ ಗಂಧವ ಮಾಧವನಿಗಿರಿಸಾದನಂತರ ಕೊಳುವುದು ಭಾಗವತ ಕೇಳುತ 1 ಭೀಕರಿಪ ಮಹ ದುರಿತಗಣ ನಿರಾಕರಿಸುವನು ನಿಮಿಷದಿ ಕುಯುಕ್ತಿ ಶಕ್ತಿಯ ದೂಕುವನು ದುಷ್ಕೂಪದಿ ವಾಕುಗಳ ತಪ್ಪುಗಳನೆಣಿಸದೆ ಸಾಕುವನು ಸಂತಸದಲಿ ಒಡಗೂಡಿ ನಲಿವನು 2 ಶ್ರೀಶನನು ಭಜಿಸುವದಕೇನಾಯಾಸವಿರುವುದು ಹೇಳಿರಿ ವಾಸವಾಗಿಹ ಸಕಲ ಹೃದಯಾಕಾಶ ಪದ್ಮದಿ ಕೇಳಿರಿ ವಾಸುದೇವನ ವರ್ಣನಾಂಶವ ಲೇಶವಾದರು ತಾಳಿರಿ ಶೇಷ ಗಿರೀಶನ ದಾಸಕೂಟ ಸಮಾಶ್ರಯಣ ಸಂಗ್ರಹಿಸಿ ಬಾಳಿರಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಿತ್ಯ ಸುಪ್ರೀತ ಸರ್ವೋತ್ತಮ ಹರಿಯೆ ಚಿತ್ತಜನಯ್ಯ ಚಿನ್ಮಯ ಎನ್ನ ದೊರೆಯೆ ಪ. ಅರಿಯೆ ನಾನಾ ವಾಹನಾದಿ ವಿಧಿಯನು ಮರಿಯೆನು ಮನದಲ್ಲಿ ಮಂದಭಾವವನು ವರದೇಶ ನಿನ್ನಯ ಚರಣಾರವಿಂದವ ನೆರೆನಂಬಿದವನೆಂಬ ಪರಿಯಿಂದ ದಯವಾಗು 1 ಇಂದಿರಾವರವಿಧಿವಂದ್ಯ ಸರ್ವೇಶಾ- ನಿತ್ಯ ಸುಂದರ ವೇಷಾ ಮಂದ ಬುದ್ಧಿಯೊಳೆಂತು ಒಲಿಸುವೆ ಶ್ರೀಶಾ ತಂದೆ ನೀ ಕರುಣದಿ ಸಲಿಸಭಿಲಾಷಾ 2 ಅಣುರೇಣು ತೃಣಕಾಷ್ಠ ಪರಿಪೂರ್ಣ ನಿನ್ನ ನೆನೆದು ವಂದಿಸುವೆ ಚಂದನ ಮೂರ್ತಿಯನ್ನ ಸನಕಾದಿ ವಂದ್ಯ ಶೇಷಾಚಲನಾಯಕ ಅನಿಮಿಷ ಪತಿಯೆನ್ನ ಮನೆಯಲ್ಲಿ ನೆಲೆಯಾಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ನಿತ್ಯದಿತಿಜರು ಕಲಿಗೆ ದೂರುತಿಹರೋ ಸತ್ಯಧ್ಯಾನರ ಕಾಟ ತಾಳಲಾರೆವೊಯೆಂದು ಪ ನೀ ಕಲಿಸಿದಾಟವನು ತಾ ಕಳೆದು ಜನರ ಅಘನೂಕಿ ಜಗಸತ್ಯ ಶ್ರೀ ಹರಿಯು ಪರನು ಶ್ರೀಕಮಲಭವರೆಲ್ಲ ದಾಸರೆಂದರುಪಲು ತಾ ಕಲ್ಪಿಸಿದ ಪಾಠಶಾಲೆ ಸಭೆಗಳನೆಂದು 1 ಭೂಸುರರಿಗನ್ನ ಧನ ಭೂಷಣಗಳಿತ್ತು ಅಭ್ಯಾಸಗೈಸಿದ ಸಕಲ ವೇದಶಾಸ್ತ್ರ ಏಸು ವಿಧ ಯತ್ನಗಳು ನಾ ಮಾಡಿದರು ಜಯ ಲೇಸು ಕಾಣದೆ ನಿನ್ನ ಬಳಿಗೆ ಬಂದೆವು ಎಂದು 2 ಇಂತು ತಾ ಮಾಡಿದನು ಪಿಂತಿನಾಶ್ರಮದಿ ಈ ಗಂತು ನಮ್ಮವರಾದ ವದು ಮತ್ಸರಾ ಕಂತು ಕೋಪಾದಿಗಳಿಗಂತಕನು ಯನಿಸಿ ಮುನಿ ಸಂತತಿಪನಾಗಿರುವದೆಂತು ನೋಳ್ಪೆವು ಎಂದು 3 ತಾಪಸೋತ್ತಮ ಸತ್ಯದ್ಯಾನದಿಂ ಭೂತಳದಿ ಪಾಪ ಸರಿದಿತು ಪುಣ್ಯವೆಗ್ಗಳಿಸಿತು ಲೇಪಿಸದು ಖತಿಜನಕ ಇವರ ದಯದಿಂದೆಮ್ಮ ವ್ಯಾಪಾರ ಧರೆಯೊಳಗೆ ಭೂಪ ಇನ್ಯಾಕೆಂದು 4 ನಿರುತ ಸಿರಿಗೋವಿಂದ ವಿಠಲನ್ನ ಸೇವಿಸುತಾ ಪರಹಿಂಸೆ ಧನಯುವತಿ ದ್ಯೂತತೊರದಾ ವರಯತಿಯ ಮೋಹಿಸುವ ಶಕ್ತಿ ತನಗಿಲ್ಲೆಂದು ಅರುಹಿದನು ಭೃತ್ಯರಿಗೆ ಕಲಿ ಮನನೊಂದು 5
--------------
ಅಸ್ಕಿಹಾಳ ಗೋವಿಂದ
ನಿಂದಕರು ಎಂದವರ ತುಚ್ಚಿಸಲಾಗದುಸಂದೇಹವಿಲ್ಲವು ಅವರು ಅತಿಹಿತರು ಪ ಸಂಚಿಸಿದ ಕರ್ಮದಿಂ ಸತ್ಪುರುಷರುದಿಸಿರಲುಹಂಚಿಕೊಂಬರು ತಾವು ಎಲ್ಲರದನುವಂಚಕರು ಎಂದವರ ನೀಚಸಲಿಕಾಗದು ಮುಂಚೆವಂದಿಸಬೇಕು ಅವರ ಪದಕೆ 1 ತಾಯಿ ಶಿಶುವಿನ ಮಲವ ತಾ ತೃಣದಿ ತೆಗೆಯುವಳುಮಾಯಹರ ಮಹಾಪುರುಷರ ಮಲವನುಆಯಾಸವಿಲ್ಲದಲೆ ತಮ್ಮ ನಾಲಿಗೆಯಲಿ ತೆಗೆಯುವರುಪ್ರಿಯರಿಂತವರಿಗಿಂತ ಹಿತವರುಂಟೆ 2 ಉದಯ ಮಧ್ಯಾಹ್ನ ಮುಹೂರ್ತಗಳ ನೋಡದಲೆವಿಧವಿಧದ ಪಾಪಗಳ ತಮ್ಮ ಮುಖದಿಮುದದಲುಚ್ಚರಿಸಿ ಚಿದಾನಂದ ಗುರುಭಕ್ತರನುಸುಧೆಯ ಸುಖಮುಕ್ತಿಯೊಳು ಹೊಂದಿಸುವವರು 3
--------------
ಚಿದಾನಂದ ಅವಧೂತರು
ನಿಂದಾಸ್ತುತಿಗಳು ಎನ್ನ ಕೈಬಿಡುವೆಯೇನೋ ಪ ನಿನ್ನ ನಂಬಿದೆನಯ್ಯ ಭಕ್ತವತ್ಸಲನೆಂದು ಭಾರ ನಿನಗಿರೆ ಅ.ಪ ತಾಪಸಿಯಂತೆ ನಿನ್ನ ವಕ್ಷವನೊದ್ದು ತಾಪವನು ತೋರ್ಪಿದೆನೇನೋ ಗೋಪಿಯಂದದೆ ನಿನ್ನ ಒರಳಿಗೆ ಬಿಗಿದೆನೇ ಭೂಪ ಶಿಶುಪಾಲನಂದದೆ ಬೈದೆನೇ [ಚಾಪವಿಟ್ಟು] ಭೀಷ್ಮನಂದದೆ ಕಾದಿಪೆನೇನೋ ಶ್ರೀಪತಿ ನೀನೆನ್ನ ದೂರ ಮಾಡುವೆಯಲ್ಲ 1 ಜಾರಚೋರನು ನೀನೆಂದು ಯಶೋದಗೆ ದೂರು ಹೇಳದೆನೇ ಕೌರವನಂತೆ ಕಂಬಕೆ ಕಟ್ಟಿರೆಂದೆನೆ ಸಾರಿದೆನೇನೋ ಸತ್ರಾಜಿತನಂತೆ ಚಾರುರತ್ನವ ಕದ್ದ ಅಪರಾಧಿ ನೀನೆಂದು ಆ ರುಕ್ಮನಂತೆ ನಾರಿಚೋರನೆಂದೆನೆ 2 ಪುರುಹೂತನಂತೆ ನಾನು ಮಳೆಯಕರೆದು ಗಿರಿಯನ್ನು ಹೊರಿಸಿದೆನೇ ಧರಣಿಯ ಬಲಿ[ಯಿಂದ ಬೇಡುತಲಿರುವಾಗ ವರಮುನಿಯಂತೆ ಕಿಂಡಿಯ ಮುಚ್ಚಿದೆನೆ] ನರನಂತೆ ರಥವ ನಡಸೆಂದು ಹೇಳಿದೆನೇನೋ ಉರಗನಂತೆ ಕಟ್ಟಿದೆನೇ ಮಾಂಗಿರಿರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿಂದು ದರ್ಶನ ನೀಡೊ ಅರವಿಂದ ಮಧ್ಯದಲಿ ಕಂದರ್ಪಜನಕ ದೇವ ಪ. ನಂದಕಂದನೆ ನಿನ್ನ ಮಂದಮತಿ ನಾನೆಂತು ವಂದಿಸಿ ಸ್ತುತಿಪೆನಯ್ಯ | ಜೀಯ ಅ.ಪ. ಸತ್ವಗುಣವಾರಿಧಿಯೆ ತತ್ವಗಳ ತಿಳಿಸೆನಗೆ ಉತ್ತಮ ಪಥವ ತೋರೋ ನಿತ್ಯ ಸಂಸಾರದಲ್ಲಿ ಸುತ್ತಿಸದೆ ನಿನ್ನಪದ ಭೃತ್ಯಸಂಗದಲಾಡಿಸೊ | ಸತತ 1 ವಿಶ್ವತೈಜಸಪ್ರಾಜ್ಞತುರಿಯ ರೂಪಗಳಿಂದ ವಿಶ್ವೇಶ ದೇಹದೊಳಗೆ ವಿಶ್ವವ್ಯಾಪಕ ಹರಿಯೆ ಸ್ವಪ್ನ ಜಾಗ್ರತೆ ಸುಷುಪ್ತಿ ವಿಶ್ವಮಯ ಜೀವಕೀವೆ | ಕಾವೆ 2 ತತ್ವಾಧಿಪತಿಗಳೊಳು ವ್ಯಾಪ್ತನಾಗಿರುತ ನೀ ಮತ್ತೆಲ್ಲ ಕಾರ್ಯ ಮಾಳ್ಪೆ ಚಿತ್ತಾಭಿಮಾನಿ ಶ್ರೀ ಮಾರುತಾಂತರ್ಯಾಮಿ ವ್ಯಾಪ್ತನಾಗಿರುವೆ ಜಗದಿ | ಮುದದಿ 3 ಮಧ್ಯನಾಡೀ ಹೃದಯ ಮಧ್ಯಪದ್ಮದ ಮಧ್ಯೆ ಇದ್ದೆನೆಗೆ ರೂಪ ತೋರೋ ಒದ್ದಾಡುವೆನೊ ಭವದಿ ಉದ್ಧರಿಸಬೇಕಿನ್ನು ಒದ್ದು ತಾಪತ್ರಯವನು | ನೀನು 4 ಶ್ರೀನಿವಾಸನೆ ನಿನ್ನ ಧ್ಯಾನ ಅನವರತದಲಿ ಮಾನಸದಲೆನಗೆ ನೀಡೋ ಶ್ರೀನಿಧೇ ಗೋಪಾಲಕೃಷ್ಣವಿಠ್ಠಲ ಎನ್ನ ಸಾನುರಾಗದಲಿ ಸಲಹೋ ಎಲವೋ 5
--------------
ಅಂಬಾಬಾಯಿ
ನಿಂದೆ ಮಾಡುವಿ ಯಾತಕೋ | ಮಂದಮಾನವ ಶ್ರೀಗೋವಿಂದ ದಾಸಾರ್ಯರನ್ನ ಎಂದೆಂದಿಗೀಮಾತು | ಇಂದಿರೇಶನ ಭಕುತ ವೃಂದ ಮೆಚ್ಚುವದಿಲ್ಲವೋ ಮೂಢ ಪ ಬಾಲತನದಾರಭ್ಯ ಶೀಲ ಸದ್ಭಕುತಿಯಲಿ ತಾಳ ತಂಬೂರಿ ಪಿಡೆದು | ಶ್ರೀಲೋಲ ಹರಿನಾಮ ಹೇಳುತಲಿ ಸತತ | ಗೋಪಾಳ ವೃತ್ತಿಯ ಮಾಡಿ ಕಾಲವನು ಕಳೆದವರು 1 ಕುಸುಮಶರನಟ್ಟುಳಿಗೆ ವಶವಾಗದಿರಿ ಎಂದು ಉಸುರುತಲಿ ಶಿಷ್ಯಗಣಕೆ | ಅಸುರಾರಿ ಮಹಿಮೆಯನು ರಸವತ್ ಕವಿತೆಯಲಿಂದ ನಿಶಿ ಹಗಲು ವರ್ಣಿಸಿದ ಅಸಿಫ್ಯಾಳು ನಿಲಯರನು 2 ಕ್ಲೇಶ ಸುಖ ಸಮ ತಿಳಿದು ಲೇಸಾಗಿ ಗುರುಸೇವೆಗೈದು ವಾಸಸ್ಥಾನಕೆ ತೆರಳಿದೀ ಸುಗುಣರನು ವ್ಯರ್ಥ ನಿಂದೆ ಮಾಡುವಿ ಯಾಕೋ 3
--------------
ಶಾಮಸುಂದರ ವಿಠಲ
ನಿದ್ರೆ ಬಾರದೆ ಕನಸು ಬಿದ್ದುದನು ಕೇಳಿ ಬದ್ಧದೊಳು ಇದರ ಫಲವಿದ್ದರೇನು ಪೇಳಿ ಪ ಊರ ಗೆಲುವೆನು ಎಂದು ದಾರಿಯನು ಸಂವರಿಸಿ ಈರೈದು ಸಾವಿರವ ಹೇರಿಕೊಂಡು ಚೋರತ್ವದೊಳು ಸೇರಿ ಭಾರಿಯಗಳನು ಹಾರಿ ಧೀರರೈವರು ವ್ಯರ್ಥ ಸೂರೆಗೊಟ್ಟುದನು 1 ಹಸಿದ ಮಾರಿಯ ಹೊಲನ ನುಸಿವ ಕುರಿಯಂದದಲಿ ಎಸೆವ ಮೋಹಕದಿಂದ ಭರವಸೆಯೊಳು ಬೆಸನವನು ಮಾಡಿ ನಿಪ್ಪಸರದೊಳು ಮೈಮರೆದು ಬಿಸಿಯಾದ ಮಂಚದೊಳು ಹಮ್ಮೈಸಿಕೊಂಡುದನು2 ಮತಿಯಿಲ್ಲದಾತನಿಗೆ ಜೊತೆಯಾದ ಸೇವಕರು ಹಿತವಾದ ದಾರಿಯನು ತೋರುತಿಹರು ಮಿತಿಗಾಣೆನಿದರೊಳಗೆ ರಥಕೆ ಸಾರಥಿಯಿಲ್ಲ ಅತಿಶಯದ ಚತುರ ಶಿತಿಲಕ್ಷ ಸುಳಿವುದನು 3 ತೋರದಿಹ ಸೂತ್ರದೊಳು ಮೂರು ಕರಗಳ ಬಿಗಿದು ಭಾರಿ ಶಿಲೆಯನು ಹೇರಿ ಚೋರನಂದದಲಿ ಊರೊಳಗೆ ಮೆರೆಸುವುದು ತೋರುತಿಹ ಸ್ವಪ್ನಗಳು ಚಾರ ಫಲವೇನಿದಕೆ ಹೇಳಿ ಬಲ್ಲವರು4 ಮಳೆಗಾಲ ತುದಿಯೊಳಗೆ ಇಳೆಯಾರಿ ಬೆಳೆ ಕೆಡಲು ಕೊಳಕಾಲ್ಪೆಸರ ಬತ್ತಿ ಬಳಲುತಿರಲು ಸ್ಥಳದ ತೆರಿಗೆಗೆ ದೂತರೆಳೆದು ಕೇಳುತ್ತಿರಲು ಹಳೆಯ ಸಂಬಳದವರು ಒಳಒಳಗೆ ಸೇರುವುದ 5 ಬುದ್ಧಿ ತಪ್ಪಿದ ತೆರಿಗೆ ತಿದ್ದಿಕೊಳಬೇಕೆನುತ ಎದ್ದು ಬಹುಕ್ಲೇಶದಲಿ ಒದ್ದು ಕೈ ಕಾಲುಗಳ ತಿದ್ದಿ ಹೋದನು ಪುರಕೆ ಸಿದ್ಧ ಮಾಡುವರೆ 6 ಅಚ್ಚರಿಯ ಸ್ವಪ್ನಗಳು ಎಚ್ಚರದಿ ತೋರುತಿದೆ ಹುಚ್ಚನೆಂದು ಜನರು ನಚ್ಚರಿದನು ಮುಚ್ಚುಮರೆಯಾಕೆ ವರಾಹತಿಮ್ಮಪ್ಪನನು ಬಚ್ಚಿಟ್ಟು ಮನದೊಳಗೆ ಸ್ವೇಚ್ಛನಾಗುವುದು 7
--------------
ವರಹತಿಮ್ಮಪ್ಪ
ನಿನಗಿದು ಘನವೆ-ನಿತ್ಯಾತ್ಮಕವನಜಭವಾದಿಗಳನು ಪಾಲಿಪದೇವಪ ಸದಯನೀನಾದರೆ-ಬದುಕಿಸಿ ಪಶುಗಳ ಮುದವನು ತೋರಿಸು ಮಧುಸೂಧನ ಈಗ 1 ಇದಿರಿಗೆ ನೋಡಲಾರದೆ ನಿನ್ನ ದೂರಿದೆ ಇದುವೊಂದು ತಪ್ಪುಯನ್ನದು ಎಂದು ಮುನ್ನಿಸು 2 ವಿಷದ ನೀರನು ಕುಡಿ-ದಸುವನ್ನು ಕಳಕೊಂಡ ಪಶು ಪಾಲಕರಿಗೆ ನೀನಸುವಿತ್ತು ಪೊರೆದೆ 3 ಹೊಟ್ಟೆಯೊಳಗೆ ಸತ್ತು ಹುಟ್ಟಿದ ಶಿಶುವನ್ನು ಮುಟ್ಟಿ ಜೀವನವಿತ್ತೆ ಕೃಷ್ಣಾಕೃಪಾಕರ 4 ಗುರುಸುತನನು ಯಮ ಪುರದಿಂದ ಕರೆತಂದ ಪರಮ ಶ್ರೀ ಪುಲಿಗಿರಿ ವರದ ವಿಠಲರಾಯ 5
--------------
ಸರಗೂರು ವೆಂಕಟವರದಾರ್ಯರು
ನಿನಗಿದು ಹಿತವೇ | ಇದು ಹಿತವೇ ಪ ಕಂಸಾರಿ ಚರಣವ ನಂಬದೇ ಕ್ಷಣಿಕದ | ಸಂಸಾರದಲಿ ಬೆರಿಯಬೇಡಾ 1 ಕನ್ನಡಿಯೊಳಗಿನಾ ಹೊನ್ನಿನಾ ಗಂಟ ನೋಡಿ | ಕಣ್ಣಗೆಟ್ಟಿರುವರೇ ಮೂಢಾ 2 ಬಿಸಿಲಿನ ನೀರಿನಿಂದೆ ತೃಷೆಯಾರಿಸುವದುಂಟೆ | ಹಸಗೆಡದಿರು ವಿಷಯ ಕೂಡಾ | 3 ಕನಸಿನ ಸಂಪದವನೆನೆಸಿ ತಾ ಹಿಗ್ಗುವರೆ | ಮನವೇ ನೀ ಮಥನಿಸಿ ನೋಡು 4 ದಾವನು ಗುರು ಮಹಿಪತಿ ಪ್ರಭು ಭಜಿಸನು | ಅವಗಿಲ್ಲ ಸುಖಸುರವಾಟಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನಗಿನಿತು ಮಮಕಾರವಿರಲೆನಗೆ ಭಯವೇನು ಚಿನುಮಯನೆ ಧನ್ಯ ನಾನು ಪಜನಕ ನೀನೆನಗಾದೆ ತನುಜ ನಾ ನಿನಗಾದೆ ಘನಮಹಿಮ ಕಾಮಧೇನು ನೀನು ಅ.ಪಜನ್ಮಕೋಟಿಗಳಲ್ಲಿ ಪುಣ್ಯಕರ್ಮಗಳನ್ನು ಮುನ್ನ ಮಾಡಿಸಿದೆ ನೀನುಮುನ್ನಿನಾ ದೇಹಗಳು ಭಿನ್ನವಾಗಲು ಕರ್ಮವಿನ್ನುಳಿವ ಬಗೆಯದೇನುಚಿನ್ಮಯನೆ ತನುಕರಣ ಭಿನ್ನವಾದರು ಸಾಕ್ಷಿ ನಿನ್ನೊಳಿಂಬಿಟ್ಟೆಯವನುಸನ್ನುತನೆ ಬಾಲಕನಿಗುಣ್ಣ ಕಲಿಸುವ ತೆರದಿ ನಿನ್ನನಿತ್ತುದೇನೆಂಬೆನು ನಾನು 1ದುಷ್ಟಸಂಗವ ಬಿಡಿಸಿ ದುರ್ಬುದ್ದಿಯನು ಕೆಡಿಸಿ ಶಿಷ್ಟರೊಳು ತಂದು ನಿಲಿಸಿಕಷ್ಟಸಾಧನಗಳನು ಮುಟ್ಟಲೀಸದೆ ಸುಲಭ ನಿಷ್ಠೆಯಲಿ ಚಿತ್ತವಿರಿಸಿಹುಟ್ಟುಹೊಂದುಗಳನ್ನು ಕೊಟ್ಟು ಮೋಹಿಸುತಿರುವ ಪುಟ್ಟ ಫಲಗಳ ತೇಲಿಸಿಮುಟ್ಟಿ ನಿನ್ನಯ ಪದವನಿಟ್ಟು ಹೃದಯಾಂಬುಜದಲಿಷ್ಟಮೋಕ್ಷವ ತೋರಿಸಿ ನಿಲಿಸಿ 2ವಿದ್ಯವಿಸ್ತರವಾದರದ್ದುವದು ಗರ್ವದಲಿ ಬುದ್ಧಿ ನಿಲ್ಲದು ನಿನ್ನಲಿಇದ್ದು ವೃದ್ಧರ ಪಥದಿ ಹೊದ್ದಿ ಶುದ್ಧತ್ವವನು ಶ್ರದ್ಧೆ ಸೇರದು ನಿನ್ನಲಿಉದ್ದುರುಟುತನದಿಂದ ಬಿದ್ದು ವಾದದ ಮಡುಹವದ್ದು ಸುಕೃತವ ಕಾಲಲಿಇದ್ದ ನಿಜಸ್ಥಿತಿುವಗೆ ಸಿದ್ಧವಾಗದುಯೆಂದು ನಿರ್ಧರಿಸಿ ನೀನೆ ದಯದಿ ಇಲ್ಲಿ 3ಅನಿಮಿತ್ತ ಬಂಧು ನೀನೆಂಬುದನು ಫಲುಗುಣನು ಮನದೊಳೆಣಿಸಿದುದಿಲ್ಲವೆಅಣುಮಾತ್ರದುಪಕಾರ ಜನರಿಂದ ನಿನಗುಂಟೆ ಮನಕೆ ದೂರ ನೀನಲ್ಲವೆವನಜಭವ ದಿಕ್ಪಾಲ ಮನುಗಳೈಶ್ವರ್ಯಗಳು ನಿನಗೆ ಗಣನೆಗೆ ಬರುವವೆಇನಿತು ಬ್ರಹ್ಮಾಂಡಗಳ ನೆನದು ನಿರ್ಮಿಸಿ ಬಳಿಕ ಕ್ಷಣದೊಳಳಿಸುವದಿಲ್ಲವೆ ನಿಜವೆ 4ನಿನ್ನ ಭಜಿಸುವ ಭಾವವಿನ್ನುಂಟೆ ಜಡಮತಿಗೆ ಅನ್ಯವಿಷಯದಿ ಮೋಹಿಸೆತನ್ನ ಮರೆದತಿದುಃಖದುನ್ನ ತದ ಸಂಸಾರ ವೆನ್ನದೆನ್ನುತ ದುಃಖಿಸೆನಿನ್ನ ನೆನಯದೆ ಬಹಳ ಜನ್ಮವೇಗದ ನದಿಯಲುನ್ನಿಸುವ ಕರ್ಮ ಹೊದಿಸೆಭಿನ್ನ ಬುದ್ಧಿಯಲೊಂದಿ ತನ್ನ ತಾನರಿಯದಿರೆ ನಿನ್ನಿಂದ ಮುಕ್ತನೆನಿಸೆ ನಿಲಿಸೆ 5ಚಲಿಸದಂದದಿ ಮನವ ನಿಲಿಸಿ ನಿನ್ನೊಳು ಬಾಹ್ಯವಳಿವ ಬಗೆುಲ್ಲವಲ್ಲನಳಿನನಾಭನೆ ನೀನು ಸುಲಭನೇ ಯೋಗಿಗಳು ಬಳಲುವರು ಕಾಣರಲ್ಲನಿಲುವೆ ಮನದಲಿ ನೀನೆ ಸಲಹೆಂದು ಭಜಿಸಿದರೆ ಗೆಲರೆ ಸಂಸೃತಿಯನೆಲ್ಲತಿಳುಹಿ ಸುಲಭದ ದಾರಿಯೊಳಗೆನ್ನ ನೀನಿರಲು ಬಳಲುವಿಕೆುಲ್ಲವಲ್ಲಾ ಲಲ್ಲಾ 6ಬಿನುಗು ಭೋಗವನುಂಡು ಜುಣುಗಿ ಮತ್ತದರಲ್ಲಿ ಮನವೆರಗಿ ಮುಳುಗುತಿಹುದುತನುವಿನಭಿಮಾನದಲಿ ನೆನಹು ತಗ್ಗದು ಮತ್ತೆ ಕನಲಿ ಮುರಿದೇಳುತಿಹುದುಅನುವರಿಯದಂಧತಮದಲಿ ತಾನು ನೆರೆಹೊಕ್ಕು ಘನದುಃಖಬಡುತಲಿಹುದುಇನಿತವಸ್ಥೆಯಲಿರುವ ಮನಕೆ ಸಿಕ್ಕಿರಲೆನ್ನ ದಿನಕರನೆ ಕೈವಿಡಿವುದು ಸೆಳೆದು 7ಧ್ಯಾನ ಧಾರಣೆುಂದ ನಿನ್ನ ಮೂರ್ತಿಯ ನಿತ್ಯ ಮಾನಸದಿ ನಿಲಿಸಬೇಕುಧ್ಯಾನಾಂಗ ನಿಯಮಗಳನಭ್ಯಾಸವಂ ಮಾಡಿ ತಾನು ತಾನಾಗಬೇಕುಏನೊಂದ ಕಂಡರೂ ನಾಮರೂಪವ ಬಿಟ್ಟು ನೀನೆಂದು ನಿಲ್ಲಬೇಕುಏನೆಂಬೆನಿವನೆಲ್ಲ ನೀನೆ ಸಾಧಿಸಿಕೊಟ್ಟು ದೀನನನು ಸಲಹಬೇಕು ಸಾಕು 8ಪರಮ ಕರುಣಾನಿಧಿಯೆ ಪರಿಪೂರ್ಣ ಪರಮೇಶ ಪರಮಸಂವಿದ್ರೂಪನೇಶರಣಜನಸುರಧೇನು ದುರಿತಭೂಧರಕುಲಿಶ ಕರಿವರನ ರಕ್ಷಿಸಿದನೇಮರೆಯೊಕ್ಕೆ ನಿನ್ನಡಿಯ ಮರವೆಯನು ಪರಿಹರಿಸು ಅರಿವಿನೊಳು ಪೊಗಿಸು ನೀನೆತಿರುಪತಿಯ ನೆಲೆವಾಸ ವರದ ವೆಂಕಟರಮಣ ಅರವಿಂದದಳನೇತ್ರನೆ ಅಜನೆ 9ಓಂ ಜಲಕ್ರೀಡಾಸಮಾಸಕ್ತಗೋಪೀವಸ್ತ್ರಾಪಹಾರ ಕಾಯ ನಮಃ
--------------
ತಿಮ್ಮಪ್ಪದಾಸರು
ನಿನಗೆ ಅಂಜುವನಲ್ಲ ನೀರಜಾಕ್ಷ ಪ ಮನವಚನ ಕಾಯದಿಂ ನಿನ್ನವರಿಗಂಜುವೆನುಅ ರಾಗದಿಂದಲಿ ಇಂದ್ರದ್ಯುಮ್ನ ಭೂಪಾಲಕನು ಯೋಗ ಮಾರ್ಗದಿ ನಿನ್ನ ಭಜಿಸುತಿರಲು ಯೋಗ ಕುಂಭೋದ್ಭವನು ಬಂದು ಶಾಪವೆ ಕೊಡಲು ಆಗ ಮೌನದಲವನನೊಪ್ಪಿಸಿದ ಬಗೆ ಬಲ್ಲೆ 1 ಗುಣವಂತರೀರ್ವರು ಜಯವಿಜಯರು ನಿನ್ನ ಅನುಗಾಲ ಬಾಗಿಲನು ಕಾಯುತಿರಲು ಸನಕಾದಿಗಳು ಬಂದು ಶಪಿಸಲಾಕ್ಷಣದಲ್ಲಿ ಸನುಮತದಲವರ ನೀನೊಪ್ಪಿಸಿದ ಬಗೆಬಲ್ಲೆ 2 ನೃಗರಾಯ ಪುಣ್ಯ ಬರಬೇಕೆನುತ ವಿಪ್ರರಿಗೆ ನಿಗಮೋಕ್ತಿಯಿಂದ ಗೋದಾನ ಕೊಡಲು ಜಗಳ ಪುಟ್ಟಿತು ನೋಡು ಅನ್ಯೋನ್ಯರೊಡಗೂಡಿ ಮಿಗೆ ಶಾಪ ಕೊಡಲವನನೊಪ್ಪಿಸಿದ ಬಗೆ ಬಲ್ಲೆ 3 ಉಣಲಿತ್ತರೆ ಉಂಡು ಪೋಗಲೊಲ್ಲದೆ ಒಂದು ತೃಣದಲ್ಲಿ ಗೋವನ್ನೆ ರಚಿಸಿ ನಿಲಿಸಿ ಮುನಿಪ ಗೌತಮನಿಗೆ ಗೋಹತ್ಯವನು ಹೊರಿಸಿ ಕ್ಷಣದೊಳಗೆ ಅವನ ನೀನೊಪ್ಪಿಸಿದ ಬಗೆ ಬಲ್ಲೆ 4 ಅನಪರಾಧಿಗಳಿಗೆ ಇನಿತಾಯಿತೋ ದೇವ ಎನಗೆ ತನಗೆಂಬುವರಿಗಾವ ಗತಿಯೊ ಮಣಿದು ಬೇಡಿಕೊಂಬೆ ವಿಜಯವಿಠ್ಠಲರೇಯ ನಿನಗಿಂತ ಭಕುತಿ ನಿನ್ನವರಲ್ಲಿ ಕೊಡು ಎನಗೆ 5
--------------
ವಿಜಯದಾಸ