ಒಟ್ಟು 2552 ಕಡೆಗಳಲ್ಲಿ , 114 ದಾಸರು , 1940 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಧನದ ಚಿಂತೆ ಎನಗ್ಯಾಕೊ ಹರಿಯೇ ಪ. ಮಾಧವಾ ನೀಯನ್ನಾ ಮನಸಿಲಿದ್ದು ಮಾಡಿಸುವಿ ಧೊರಿಯೇ ಅ.ಪ. ಹಿಂದೇಸು ಜನ್ಮಗಳು ಬಂದು ಪೋದವು ಒಂದು ತೃಣವಾದರೂ ನಾ ಗಳಿಸಲಿಲ್ಲ ಮುಂದಿನ ಗತಿಯು ತಿಳಿಯದು ಬಿಂದು ಮಾಧವಾ ಯಾದವಾ 1 ನಿನ್ನ ಹೊರತು ಎನಗೆ ಮನ್ನಿಸುವರು ಯಾರೋ ಬೇರೆ ಗತಿ ಕಾಣೆ ಪುಸಿಯಲ್ಲಿ ಯನ್ನಾಣೆ ಪಾದಸ್ಮರಣೆ ಮಾಡಿಸುವ ಬಾರಾ ಉದಾರ ಭಕ್ತರಾಧಾರಾ 2 ಯೆಷ್ಟು ಪೊಗಳಿದರು ನಿನ್ನ ಕರುಣಕೆ ಇನ್ನು ಕೇಡು ಉಂಟೇ ಸ್ವಾಮಿ ದಯಾ ದೃಷ್ಟಿಯಿಂದಲಿ ನೋಡು ಪ್ರೇಮಿ ದುಷ್ಟ ಅಘರಾಶಿ ದೂರ ಮಾಡೋ ಕಣ್ತೆರೆದು ನೋಡೋ ಕಾಳಿಮರ್ಧನ ಕೃಷ್ಣನೆ ಮಧ್ವಮುನಿ ಪ್ರಿಯನೆ 3
--------------
ಕಳಸದ ಸುಂದರಮ್ಮ
ಸಾಧನವು ಮತ್ತೇನಾಗಬೇಕು ನಿನಗೇ ಪ ಮಾಧವನ ನಾಮವು ಮನದೊಳಿದ್ದರೆ ಸಾಲದೇ ಅ.ಪ. ಗೋಕೋಟಿ ದಾನವು ಗೋವಿಂದನ ಸ್ಮರಣೆಯ ತಾಕಲಾರದಿದಕೆ ಸಂದೇಹವೇ ಇಲ್ಲ ಸಾಕಲ್ಯದಿ ಮಾಳ್ಪ ಸಕಲ ದೇವತಾರ್ಚನೆಯು ಪಾದ ಭಜನೆಗೆಣೆಯು ಅಲ್ಲ 1 ಸ್ನಾನ ಸಂಧ್ಯಾವಂದನ ಜಪತಪಾದಿಗಳು ದಾನವೇ ಮೊದಲಾದ ನೇಮ ನಿಷ್ಟೆಗಳು ಆನುಪೂರ್ವಕ ಮಾಳ್ಪ ಸಕಲ ಕರ್ಮಗಳೆಲ್ಲ ಶ್ರೀನಿವಾಸನ ನಾಮಸ್ಮರಣೆಗೆ ಎಣೆಯು ಅಲ್ಲ 2 ರಾಸಿ ವಿದ್ಯ ವೇದಾಧ್ಯಯನ ಪಾಠಗಳು ಬೇಸರಿಲ್ಲದೆ ಪಠಿಪ ಮಂತ್ರ ತಂತ್ರಗಳೆಲ್ಲ ಈ ಸಮಸ್ತ ಭುವನಗಳೊಡೆಯನಾದ ಶ್ರೀ ರಂ ಗೇಶವಿಠಲನ ನಾಮದಲ್ಲಡಗಿರುವುದಲ್ಲ 3
--------------
ರಂಗೇಶವಿಠಲದಾಸರು
ಸಾಧು ನೀನಾಗೆಲೊ ಸ್ವಾಮಿ ತಾ ಕಾಣುವಾ ಪ ಮೇದಿನಿ ಅ.ಪ ಎಂದಿಗೆ ನಂದಿ ನಾನೊಂದುವೆನೆಂದು ನೀ ಸಂದೇಹ ಸಂವರಿಪನೊಲಿದು ತಾ 1 ತಾನಾದರೆ ತನ್ನದೇನು ಜಾಣ ತಾ ನೋಡುತಂ ಪ್ರಾಣನಾಥ ನೀನೆಂದಾಡುತಂ ಪಾಡುತ 2 ವಿಶ್ವದೊಳು ರಾಜಿಪ ಸಸ್ವರೂಪಾ ಗುರು ಅಸ್ಮದಾರ್ಯ ತುಲಸಿರಾಮದಾಸನಿತ್ತ 3
--------------
ಚನ್ನಪಟ್ಟಣದ ಅಹೋಬಲದಾಸರು
ಸಾಧು ಸಂಗತಿ ಮಾಡೋ ಎಲೆ ಮನಾ ಸಾಧು ಸಂಗತಿ ಮಾಡು ಪ ಘೋರತರದ ಸಂಸಾರ ಸಾಗರದಿ ಪಾರು ಮಾಡಿ ಮುರಾರಿಯ ಸ್ಮರಿಸುವ 1 ಕರ್ಮಫಲಾಪೇಕ್ಷಿಸದಲೇ ಮಾಡಿ ತಾ ನಿರ್ಮಲ ಚಿತ್ತದಿ ಹರಿಯನು ಪೊಗಳುವಾ 2 ತನ್ನ ಪಿತ ಹನುಮೇಶವಿಠಲಗೆ ಆತ್ಮಅರ್ಪಿಸಿ ಕೃತಾರ್ಥನಾದನು ಸಾಧು ಸಂಗತಿ ಮಾಡೋ 3
--------------
ಹನುಮೇಶವಿಠಲ
ಸಾಧುಸಂಗ ಶೀಘ್ರಕೂಡಿಸೊ ಪ ಎಷ್ಟು ದಿನ ಕಷ್ಟಪಡುವದೋಈ ಭವದೊಳು ಈಸಲಾರೆನಯ್ಯ ಹರಿಯೇ ಇಷ್ಟು ದಿನ ಇದ್ದಂತೆ ಇರಲಾರೆನೆಂದು ಕರವ ಮುಟ್ಟಿ ಮುಗಿದು ಬೇಡಿಕೊಂಬೆ ಮುರಾರಿ ಕೃಷ್ಣ ನೀನೇ ಕಾಯೋ 1 ಹರಿಹರರು ಸಮಾನರೆನ್ನದಾ ಈ ಸಜ್ಜನರಾ- ಸಂಗದಿಂದ ಹೀನಾ ನಾನಾದೆ ಇನ್ನುಮ್ಯಾಲೆ ಇಲ್ಲವಯ್ಯ ಸೃಷ್ಟಿಗಧಿಕ ಶ್ರೀನಿವಾಸಾ ಇನ್ನು ನಿನ್ನ ಸ್ಮರಣೆಯಿಂದ ಇರುವೆನಯ್ಯ ಮುಕುಂದ 2 ಪೃಥ್ವಿಯಲ್ಲಿ ಪುಟ್ಟಿದಾ ಮೊದಲು ನಿನ್ನಾ ವೃತ್ತಾಂತ ಒಂದು ದಿನ ಮಾಡಲಿಲ್ಲವೋ ಎಂದು ಎನ್ನ ಮ್ಯಾಲೆ ಕ್ರೂರದೃಷ್ಟಿಯಿಂದಾ ನೋಡಾದೀರು ವಾಸುದೇವ ವೈಕುಂಠವಾಸ ಲಕ್ಷುಮಿ ರಮಣ3 ನಿತ್ಯದಲ್ಲಿ ವಿಪ್ರರಾ ವೃಂದಾದೊಳಗೆ ನಾ ಆ- ಸಕ್ತನಾಗಿ ಇರುವೆ ಮುಕುಂದಾ ಎಂಥ ಪಾಪಿ ಎಂದು ಉದಾಸೀನಮಾಡಿ ನೋಡಬೇಡ ನಿನ್ನ ಕಂದಾನೆಂದು ತಿಳಿದು ಪಾಲಿಸಯ್ಯ ನಾರಾಯಣ 4 ಹನುಮ ಭೀಮ ಮಧ್ವೇಶಾರಿಂದಾ ಸೇವಿತ ಪ್ರಿಯಾ ಶಾಂತಮೂರ್ತಿ ಶಾಮವರ್ಣನೇ ಶ್ರೀದವಿಠಲೇಶಾ ನಿನ್ನಾ ದಾಸನೆಂದು ಪಾಲಿಸೆನ್ನ ಸಾರಿ ಬೇಡಿಕೊಂಬೆನಯ್ಯ ರಾಮಚಂದ್ರ ರಾವಣಾಚಾರಿ5
--------------
ಶ್ರೀದವಿಠಲರು
ಸಾನುರಾಗ ಯತಮಾನಸ ಮೇರೆ ಪ ಹೃದಯಪರಿಪದ ಮಿಳನಾರೆ 1 ಜಪಕಾಮುಕರೋರೆ2 ದೇಹಗೇಹಧನ ಮೋಹನ ಲೇರೆ ಶ್ರೀಹರಿ ಸ್ಮರಣ ಕಾಂಹಿ ಚಲೇರೆ3 ಪುತ್ರ ಮಿತ್ರ ಬಹು ಶತ್ರುಕುಮಾರವೃತ್ರ ವೈರೀಸುತ ಮಿತ್ರನಗಾರೆ4 ನರಸಿಂಹ ಭಜೊರೆ 5 ಕಮಲಾಕ್ಷಕುಲಾರೆ 6 ವಾಸುದೇವ ನಿಜ ದಾಸಕು ಹೊರೆ 7 ಚಿದ್ರೂಪಕ ಹೋರೆ 8 ಪರಮ ಪುರುಷ ನರಹರಿ ಕರುಣೀರೆ- ವರದವಿಠಲ ಕರಿವರ ಧಣೀರೆ 9
--------------
ಸರಗೂರು ವೆಂಕಟವರದಾರ್ಯರು
ಸಾಮಜ ವಸ್ತ್ರಾಂಗಂ ಸುಮನೋತ್ತುಗಂ ಪ ನಿಗಮ ಶಿರಲೋಲ ಸದಾನಂದಿತಂ ಮೇ ಮನಸಾ 1 ತಾಪ ಭೀಷಣಂ ಈಶ್ವರವಿಶ್ವೇಶನಾದ ಘೋಷಣಂಭಾಸುರ ಕೋಟಿ ಸೇವಿತ ಸಂಕಾಶ ಮಹೇಶ ಸದಾನಂದಿತಂ ಮೇ ಮನಸಾ2 ಪರಮ ಪರಾಪುರುಷಂ ಪಾರ್ವತಿ ಮನೋಹರ ಹರಿ ವಿಶ್ವಾರ್ಚಿತಂವರ ಚಿದಾನಂದ ಗುರುವೇ ಸಾಕ್ಷಾತಂಸ್ಮರಣ ಮನೋನಿಶ್ಚಿತಂ ಮೇ ಮನಸಾ3
--------------
ಚಿದಾನಂದ ಅವಧೂತರು
ಸಾಮಜಾದ್ರಿ ನಿವಾಸ | ಮಮ ಹೃದಯ | ಸದ್ದಾಮದಲಿ ಆವಾಸ |ಸೌಮನಸ್ಯವ ಕಾಮಿಸುವೆ ಮನಕೀಶ | ನಾ ನಿಮ್ಮ ದಾಸಾ ಪ ಶ್ರೀ ಮನೋಹರನಂಘ್ರಿ ಕಮಲವ | ಯಾಮ ಯಾಮಕೆ ಭಜಿಸಿ ಹಿಗ್ಗುವ ಆಮಹಾತ್ಮರ ಚರಣ ರಜವನು | ಕಾಮಿಸುವೆ ಕರುಣಾಳು ಗುರುವರ ಅ.ಪ. ಘಾಸಿ ಪಡುತಲಿ ಬಂದ | ಪಾಪಾತ್ಮಯೆನ್ನಯಕ್ಲೇಶ ಹರಿಸಲು ಛಂದ | ಅಂಕಿತವನುಪದೇಷಿಸಿದೆ ನೀ ನಲವಿಂದ | ಕರುಣಾಳು ನಿನ್ನಯದಾಸ ಜನಗಳ ವೃಂದ | ಸೇವೆ ಕೊಡು ಆನಂದ || ವಿಷಯ ದಾಸೆಯ ಹರಿಸೊ ಗುರುವರ | ಬಿಸುರುಹಾಂಬಕನಂಘ್ರಿ ಕಮಲವ ಒಸೆದು ಸ್ಮರಿಸುವ ಮತಿಯನಿತ್ತು | ಎಸೆವ ಹರಿಯಪರೋಕ್ಷ ಪಾಲಿಸೊ 1 ವತ್ಸರ ಸುವಿಕ್ರಮವರ ನವಮಿ ಮಧ್ಯದಿನಂದೂ | ನಿಶ್ಚಯಿಸಿ ಮನದಲಿನರನಟನೆ ಉಪರಮಿಪೆನೆಂದೂ | ತನುವ ತ್ಯಜಿಸಿದೆ ಅಂದೂ ||ಸಾರ ಭಕುತರು ಸೇವೆ ಗೈಯಲು | ಕರಿಗಿರೀಯಲಿ ಒಂದು ಅಂಶದಿವರವ ಪಾಲಿಪುದಕ್ಕೆ ನೆಲೆಸಿದೆ | ಧೀರ ಕರುಣಾಪಾರ ಗುರುವೇ 2 ಚಾರು ಚರಣವ ತೋರು ಗುರುವೇ 3
--------------
ಗುರುಗೋವಿಂದವಿಠಲರು
ಸಾರ ತಿಳಿಯದೆ ಭೇದಾಭೇದ ವಿದ್ಯಾತಕೆ ಸೂಸುವದ್ಯಾತಕೆ ಹರಿಭಕುತಿಗೆ ಧ್ರುವ ಬಲಮುಣುಗುವದಿದ್ಯಾಕೆ ಬಲುವ ಭಾವದ ಕೀಲ ತಿಳಿಯದೆ ಮಾಲಿಜಪಕೈಯಲ್ಯಾತಕೆ ತಲೆ ಮುಸಕ್ಯಾತಕೆ ಹಲವು ಜನ್ಮ ಹೊಲಿಯು ತೊಳಿಯದೆ ಶೀಲಸ್ವಯಂಪಾಕ್ಯಾತಕೆ 1 ಹರಿಯ ಚರಣಾಂಬುಜನವರಿಯದೆ ಬರಿಯ ಮಾತಿನ್ಯಾತಕೆ ಗುರುವಿನಂಘ್ರಿಯ ಗುರುತವಿಲ್ಲದೆ ಶರಣಸಾವಿರವ್ಯಾತಕೆ ತುರಿಯಾವಸ್ಥೆಯೊಳರಿತು ಕೂಡದೆ ತೋರಿಕೆಯ ಡಂಭವ್ಯಾತಕೆ ತರಣೋಪಾಯದ ಸ್ಮರಣಿ ಇಲ್ಲದೆ ತರ್ಕಭೇದಗಳ್ಯಾತಕೆ 2 ಅಂತರಾತ್ಮದ ತಂತುವಿಡಿಯದೆ ಗ್ರಂಥಪಠಣಗಳ್ಯಾತಕೆ ಕಂತುಪಿತನಾರ್ಚನೆಯನರಿಯದೆ ತಂತ್ರ ಮಂತ್ರಗಳ್ಯಾತಕೆ ಪಂಥವರಿಯದೆ ಪರಮಯೋಗದಾನಂತ ವ್ರತವಿದುವ್ಯಾತಕೆ 3 ಸೋಹ್ಯವರಿಯದೆ ಶ್ರೀಹರಿಯ ನಿಜಬಾಹ್ಯರಂಜನೆವ್ಯಾತಕೆ ಗುಹ್ಯಮಹಾಮಹಿಮೆಯು ತಿಳಿಯದೆ ದೇಹ ಅಭಿಮಾನ್ಯಾತಕೆ ಸಾಹ್ಯವಿಲ್ಲದೆ ಶ್ರೀಹರಿಯ ದೇಹದಂಡದ್ಯಾತಕೆ ಮಹಾವಾಕ್ಯದಿತ್ಯರ್ಥವರಿಯದೆ ಸಾಯಸಬರುವದ್ಯಾತಕೆ 4 ಭಾಗ್ಯಭಕುತಿ ವೈರಾಗ್ಯವಿದು ನಿಜಯೋಗಾನಂದದ ಭೂಷಣ ಶ್ಲಾಘ್ಯವಿದು ತಾ ಇಹಪರದೊಳು ಸುಗಮ ಸುಪಥಸಾಧನ ಸಾರ ಯೋಗಿ ಮಾನಸಜೀವನ ಬಗೆಬಗೆಯಲನುಭವಿಸಿ ಮಹಿಪತಿಯೋಗ್ಯನಾಗೋ ಸನಾತನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾರ ಪ ಪ್ರಶ್ನೆ:ಯಾತರಿಂದಲಿ ಕೇಳೆನ್ನಯಮನ ಬಹು ಪೂತವಾಗುವದು ಗುರುವರೇಣ್ಯ ಭೂತಳದಲಿ ಪರಮ ಪಾವನ ತೀರ್ಥ ಅನುದಿನ 1 ಉತ್ತರ:ಶ್ರಧ್ದ ಪೂರ್ವಕ ಶ್ರವಣಸಾಧನ ಮನ ಶುದ್ಧಿಗೆ ಇದೆ ಮುಖ್ಯ ಕಾರಣ ಉದ್ಭವಿಸುವದು ಭಕ್ತಿ ಜ್ಞಾನ ಅನಿ ಪ್ರಶ್ನೆ:ವಶವಲ್ಲಭವದಿ ಬಂದೊದಗುವ ನಾನಾ ವ್ಯಸನಗಳನು ಪರಿಹರಿಸುವ ಬೆಸಸುವದೆನ ಗೀ ಉಪಾಯವ ಚರಿಸಲೇನು ಗಿರಿಗುಹದಲಿ ತ¥ವÀ| ಉ.ವಸುದೇವಸುತನ ಸಂಕೀರ್ತನ ನಾನಾ ವ್ಯಸನ ಪರಿಹಾರಕ್ಕೆ ಕಾರಣ ಮುಸುಕಿರ್ದ ಮೇಘಕ್ಕೆ ಪವಮಾನ ಭವ ವ್ಯಸನಾಂಧಕಾರಕ್ಕೆ ರವಿಕಿರಣ 2 ಪ್ರ:ಏನು ಮಾಡಲಿ ಸದುಪಾಸನ ದೈವಾ ಧೀನದಿ ಬರುವ ವಿಘ್ನಗಳನ್ನು ಕಾಣೆನು ಪರಿಹಾರ ಕೃತಿಯನ್ನು ಇದ ಉ:ಬಿಡದಿರೊ ಕೃಷ್ಣನ್ನ ಸ್ಮರಣವ ಬರುವ ಯಡರುಗಳನು ಪರಿಹರಿಸುವ ದೃಢಮನದಲಿ ತಿಳಿವದು ಜವ ಪೋಪ ದ್ಯಡರು ಪ್ರಾಪಕವಾದ ಪಾತಕವ 3 ಪ್ರ:ಮೋಕ್ಷಫಲದ ಕಮಲಾಕ್ಷಣ ಅಪ- ರೋಕ್ಷ ವಾಗುವದಕ್ಕೆ ಸಾಧನ ಶಿಕ್ಷಿಸುವದು ಸದುಪಾಸನ ಆ ಉ:ಆದರದಿ ನೈರಂತರ್ಯದಿ ಯುಕ್ತ ಮಾಧವನಂಘ್ರಿಯ ಸ್ಮರಣದಿ ಸಾಧಿತ ಬಿಂಬಾಪರೋಕ್ಷದಿಸ ನ್ಮೊದ ಭರಿತನಾಗಿರು ಜಗದಿ 4 ಪ್ರ:ಏನು ಮಾಡಲು ಮುಕ್ತಿಸಾಧನವಾದ ಜ್ಞಾನ ವಿಜ್ಞಾನ ಸಂಪದವನ್ನ ಕಾಣುವದೆಂದಿಗೆ ತಿಳಿಸೆನ್ನ ಮುಂದೆ ಸಾನುರಾಗದಲಿ ಬೇಡುವೆ ನಿನ್ನ ಉ:ಭಕ್ತಿ ವೈರಾಗ್ಯದಿ ಕೂಡಿದ ಪುರು ಷೋತ್ತಮನಂಘ್ರಿ ಸಂಸ್ಮøತಿಯಿಂದ ಚಿತ್ತದಿ ಜ್ಞಾನ ವಿಜ್ಞಾನದ ಉತ್ಪ- ಮೋದ 5 ಪ್ರ:ಜಲಜನಾಭನ ಪದಯುಗದಲ್ಲಿ ನಿ- ಶ್ಚಲ ಭಕ್ತಿಯೆನಗೆ ಪುಟ್ಟುವದೆಲ್ಲಿ ಬಲುವಿಧ ಭಕುತಿಯ ಬಗೆ ಉ:ಜ್ಞಾನ ವೈರಾಗ್ಯದಿ ಕೂಡಿದ ನಂದ ಸೂನು ಪಾದಾಂಬುಜ ಸ್ಮøತಿಯಿಂದ ಪ್ರಾ- ಣೇಂದ್ರಿಯಾತ್ಮಾದಿಗಳಿಂದ ಅಧಿಕ ಕಾಣಿಸುವದು ಭಕ್ತಿ ಜವದಿಂದ 6 ಪ್ರ:ದೃಢತರವಾದ ವೈರಾಗ್ಯವ ಪೊಂದಿ ಪಡಿವೆನೆಂದಿಗೆ ಮಾಧವನ ದಯವಾ ಗಡನೆ ಪೇಳಿದಕೇನು ಪಾಯವ ನಿ- ಉ:ಜ್ಞಾನ ಭಕ್ತಿಗಳಿಂದ ಕೂಡಿದ ಶಿರಿ ವೇಣು ಗೋಪಾಲನ ಸ್ಮøತಿಯಿಂದ ಕಾಣುವಿ ಸಧೃಡ ವೈರಾಗ್ಯದ ಭಾಗ್ಯ ಶ್ರೀನಿಧಿ ಚರಣಾನು ಗ್ರಹದಿಂದ7 ಪ್ರಃಘನಲೌಕಿಕದಿ ಕೇಳೆನ್ನಯ ಮನ ನಿ- ಪುಣತರವೆನಿಸುವ ದನುದಿನ ಎನಗೆಂದಾಧ್ಯಾತ್ಮ ತತ್ವದಿ ಮನವೆರಗ ಲೆನಿಸುವದದೆ ಮುಕ್ತಿಸಾಧನ ಉ:ಅನುದಿನ ಶ್ರವಣಾದಿ ಸಾಧನ ದಿಂದ ಜನಿತ ಸದ್ಭಕುತಿಯೆ ಕಾರಣ ಮನದೊಳಾಧ್ಯಾತ್ಮ ತತ್ವಗಳನ್ನ ನೋಡಂ ಜನಯುಕ್ತ ನಯನ ದಂದದಿ ಮುನ್ನ 8 ಪ್ರಃಏನಿರುವುದು ಬಿಂಬಲಕ್ಷಣ ಮತ್ತೇ ನೇನು ಮಾಳ್ಪ ಕರ್ಮಗಳನ್ನು ಸಾನುರಾಗದಿ ಪೇಳುವದುಮುನ್ನ ಮನದಿ ಧ್ಯಾನವ ಮಾಡುವೆ ಪ್ರತಿದಿನ ಉ.ಇಂತಿರುವದು ಬಿಂಬ ಲಕ್ಷಣ ಬಹಿ ರಂತರದಲಿ ತಿಳಿವದು ಮುನ್ನ ಸಂತತ ಸೃಷ್ಟ್ಯಾದಿಗಳನ್ನ ದೇ ಹಾಂತಃ ಸ್ವಪ್ನದಿ ಸಂದರುಶನ 9 ಪ್ರ.ಎಲ್ಲಿರುವನು ಬಿಂಬ ದೇಹದಿ ಸಿರಿ ನಲ್ಲನು ವ್ಯಾಪ್ತವೆಂಬರು ಜಗದಿ ಎಲ್ಲದೇಶ ಗುಣಕಾಲದಿಯನ್ನ ಉ:ನಿಂತಿರುವನು ಸರ್ವಜೀವರ ಹೃದ ಯಾಂತರದಲಿ ವ್ಯಾಪ್ತನು ಪೂರಾ ಸಂತತ ಜೀವನ ವ್ಯಾಪಾರ ತಾನೆ ನಿಂತು ಮಾಡಿಸುವನು ನಿರ್ಧಾರ 10 ಪ್ರ:ಎಂತು ಮಾಡಲಿ ಬಿಂಬೋಪಾಸನ ಮುಕ್ತಿ ಪಂಥಕ್ಕೆ ಮುಟ್ಟಲು ಸೋಪಾನ ಅ- ನಂತ ಗುಣಾತ್ಮಕ ಬಿಂಬನ ಗುಣ ಚಿಂತಿಪರಿಗೆ ಬಂಧ ಮೋಚನ ಉ:ಇದೆ ತಿಳಿಬಿಂಬೋಪಾಸನÀ ಚತು ರ್ವಿಧ ದಿಂದಲಾತ್ಮ ಸಮರ್ಪಣ ಮೊದಲು ಆತ್ಮಾನಮೇವಾರ್ಪಣ ದ್ರವ್ಯ ಸದ್ಗುಣ ಕರ್ಮಸಮರ್ಪಣ 11 ಮಾಡಲಾವ ಧರ್ಮಗಳ ಮಾಡಲಿ ಮುನ್ನ ಜೀವರ ಬಂಧ ವಿಮೋಚನ ಮಾಳ್ಪ ಭಾಗವತ ಧರ್ಮಗಳನ್ನು ತಿಳಿದು ಶ್ರದ್ಧೆಯಿಂದಲ್ಲಿ ಮಾಡೋ ಮುನ್ನ ಹೃದ್ಗತ ಬಿಂಬೋಪಾಸಾನ ಮಾಡಿ ಸಿದ್ಧನಾಗಿ ಬಾಳೆಲೋ ಮುನ್ನಾ 12 ಪ್ರ:ಎಂತಿರುವದು ಗುರುಲಕ್ಷಣ ಮುಕ್ತಿ ಪಂಥವ ತೋರಿಸುವವರನ್ನ ಚಿಂತಿಸುವೆನು ಮನದೊಳುಮುನ್ನ ಭಗ ವಂತನ ಮಹಿಮೆ ಪೇಳುವರನ್ನ ಉ:ಜಲಜನಾಭನÀ ಪದಯುಗಲವ ಬಿಟ್ಟು ಚಲಿಸದಿರು ಲವ ನಿಮಿಷಾರ್ಧವ ಇಳಿಯೊಳಗಿಂಥಾ ಸದ್ವೈಷ್ಣವರನ್ನು ತಿಳಿದು ಸೇವಿಸುತಿರು ಮಾನವಾ 13 ಪ್ರ:ಏನು ಕೊಡಲಿ ಗುರುದಕ್ಷಿಣ ಈ ಕ್ಷೋಣಿಯಿತ್ತರು ಸರಿಗಾಣೆ ನಾ ಧ್ಯಾನವ ಮಾಡುವೆ ಪ್ರತಿದಿನಾ ಬಿಂಬ ಜ್ಞಾನವ ಕೊಟ್ಟು ರಕ್ಷಿಪರನ್ನ ಉ:ಆತ್ಮಾರ್ಪಣ ಮೇವದಕ್ಷಿಣ ಸಿರಿ ನಾಥ ನಿಂದನ್ಯ ವಸ್ತುಗಳನ್ನು ಪ್ರೀತಿಸರೆಂದಿಗೂ ಧನವನ್ನು ಈ ಮ- ಹಾತ್ಮರ ಸ್ಮರಿಸುತಲಿರು ಮುನ್ನ 14 ಕ್ಷೇತ್ರ ಕಾರ್ಪರದೊಳಗಿರುವಂಥ ಲಕ್ಷ್ಮಿ ಯುಕ್ತ ನರಸಿಂಹನೊಲಿಸುವಂಥ ಸ್ತೋತ್ರ ಮಾಲಿಕೆಯನ್ನು ಪಠಿಸುತ್ತ
--------------
ಕಾರ್ಪರ ನರಹರಿದಾಸರು
ಸಾರಿ ಸಾರಿ ಹೇಳು ತೀನಿ ಕಡ್ಡಿ ಮುರಿದು ನಾನು ಬಾರಿ ಬಾರಿಗೆ ಸತ್ತು ಹುಟ್ಟತಲಿಹೆ ನೀನು ಪ ಇರುಳು ವಿಷಯದೊಳಗೆ ಮನವ ನಿರಿಸಿ ಮಡದಿ ಮಕ್ಕಳೆಂಬಲೆಯಲಿ ಪರಿಯನರಿಯದಿದು ಇನ ಸುತನ ದೂತರೊಡನೆ ಕೊಲಿಸಿ ಕೊಳದಿರು 1 ನೀನು ಹುಟ್ಟಿ ಬರುವ ಮುನ್ನ ಇವರಿಗೆಲ್ಲ ವಾಸವೆಲ್ಲಿ ನೀನದೆಲ್ಲಿ ನಟ್ಟನಡುವೆ ಬಂದ ಸಿರಿಯಿದು ಕಾನ ಕಪಿಗಳಂತೆ ನೆರೆದು ಮಡದಿ ಮಕ್ಕಳೆಂದು ಈಗ ಪ್ರಾಣವನ್ನು ತಿನಲು ಬಂದ ನರಿಗಳಿವದಿರು 2 ದಾರಿ ಹೋಕರಿವರು ನಿನ್ನ ಋಣವು ತೀರಿ ಹೋದ ಬಳಿಕ ಯಾರಿಗಾರು ಇಲ್ಲ ನಿನಗೆ ನೀನದಲ್ಲದೆ ವೈರಿ ಕೋಣೆಲಕ್ಷ್ಮೀಪತಿಯ ಸೇರಿ ನಾಮ ಸ್ಮರಣೆಯಿಂದ ಮುಕ್ತಿ ಪಡೆದಿರು 3
--------------
ಕವಿ ಪರಮದೇವದಾಸರು
ಸಾವಧಾನವೆಂದು ಶ್ರುತಿಸಾರುತಿದೆಕೋ ಭಾವದಿಂದಲಿ ಮನವೆ ನೀ ಎಚ್ಚತ್ತುಕೋ ಧ್ರುವ ಭವದ ನಿದ್ರಿಗಳೆದು ಸಾವದಾನವಾಗೋ ನಿವಾಂತ ಕೂಡಲಿಕ್ಯದ ಬಲು ಬೆಳಗೋ ವಿವೇಕವೆಂಬ ಸ್ಮರಣೆ ಇದೆ ನಿನಗೋ ಭವಹರ ಗುರುವಿಗೆ ಶರಣಯುಗೋ 1 ಮುಚ್ಚಿದ ಮಾಯದ ಮುಸಕ್ಹಾರಿಸುವದೆ ಙÁ್ಞನ ಎಚ್ಚತ್ತಮ್ಯಾಲಿದೆ ಖೂನ ಸುವಸ್ತು ಧ್ಯಾನ ಅಚ್ಯುತಾನಂತನ ಕಾಂಬುದನುಸಂಧಾನ ಅಚಲವೆಲ್ಲಕ್ಕಿದೆ ಸುಪಥಸಾಧನ 2 ಬೆಳಗಿನ ಬೆಳಗಿದೆ ಬಲು ನಿಶ್ಚಲ ಒಳಗೆ ಹೊರಗೆ ತೋರುವ ಆನಂದ ಕಲ್ಲೋಳ ಹೊಳೆವ ಮಹಿಪತಿಸ್ವಾಮಿ ಪ್ರಭೆಯು ಬಹಳ ಬೆಳಗಾಯಿತು ಗುರುದಯ ಪ್ರಬಳ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾವಧಾನಾಗಿ ಮಾಡೆಲೋ ಗುರುಭಕ್ತಿ | ಕಾವಕರುಣಾಳುದೋರಿ ನಿಜ ಮುಕ್ತಿ ಪ ಗುರುನಾಮ ಸ್ಮರಣೆ ಅನುದಿನಾ | ಗುರುಮೂರ್ತಿಯ ಮಾಡಿ ನಿಜಧ್ಯಾನಾ | ಗುರುಚರಣವ ಪೂಜಿಸು ನಿಧಾನಾ | ಗುರು ನಮನದಿ ಹಾಕಿ ಲೋಟಾಂಗಣಾ 1 ಗುರುಭಕ್ತರ ಸಂಗವನು ಮಾಡಿ | ಗುರು ಕರುಣದ ಮಹಿಮೆಯ ಪಾಡಿ | ಗುರುವಾಕ್ಯ ಪ್ರಸಾದವನು ಬೇಡಿ | ಗುರು ಅಭಯವ ಕೊಂಡು ನಲಿದಾಡಿ 2 ಗುರುವಿನಲ್ಲಿ ಹಿಡಿಯದೆ ನರಭಾವಾ | ಗುರುವಿಗರ್ಪಿಸಿ ತನುಧನ ಮನ ಜೀವಾ | ಭವ ಬಂಧನವಾ | ಗುರುಮಹಿಪತಿ ಬಾಲನಾಗಿರುವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಾಸಿರನಾಮ ಪೂಜೆಸಾಸಿರ ನಾಮ ಪೂಜೆಯ ಸಮಯಾ ಶ್ರೀವಾಸುದೇವನೆ ರಕ್ಷಿಪ ಸಮಯಾ ಸ್ವಾಮಿ ಪಸಾಸಿರ ದಳ ಪದ್ಮ ಮಧ್ಯಕೆ ಶ್ರೀ ವೇದವ್ಯಾಸ ಗುರುವು ಬಂದಿಹ ಸಮಯಾ ಭಾಸುರ ಛಂದಸ್ಸು ಮುಖಮಂಡಲದಿ ಪ್ರಕಾಶಿಸಿ ಮಂತ್ರ ಸಿದ್ಧಿಪ ಸಮಯಾ ಸ್ವಾಮಿ 1ಶ್ರೀರಮೆ ಧರೆ ಸಹ ಹೃದಯಮಧ್ಯದಿ ಶ್ರೀಮನ್‍ನಾರಾಯಣ ನೀನಿಹ ಸಮಯಾತೋರುತಿದಿರೆ ಪೀಠದಿ ಪೂಜೆಗೊಳುತೆನ್ನಸ್ಮೇರಾಸ್ಯದಿಂ ನೋಡುವ ಸಮಯಾ ಸ್ವಾಮಿ 2ಬೀಜನಾಮವು ದಕ್ಷಿಣ ಸ್ತನ ದೇಶದಿಭ್ರಾಜಿಸಿ ಭಕ್ತಿಗೂಡುವ ಸಮಯಾರಾಜಿಪ ಶಕ್ತಿ ನಾಮವು ವಾಮದಿ ಫಲರಾಜಿಯ ಬೆಳಸುತಿರುವ ಸಮಯಾ ಸ್ವಾಮಿ 3ಹೃದಯದಿ ಕೀಲಕ ನಾಮವು ನಿನ್ನಯಪದಸನಿಯವ ಸೇರಿಪ ಸಮಯಾಪದರದೆ ವಿಘ್ನತತಿಗೆ ಭಜಿಸೆನ್ನುತಸದಯ ಸದ್ಗುರು ನಿಯಮಿಪ ಸಮಯಾ ಸ್ವಾಮಿ 4ಅಂಗುಲಿಗಳು ನಿನ್ನ ಮಂಗಳ ನಾಮಗಳಸಂಗದಿ ಶುದ್ಧಿವಡೆದಿಹ ಸಮಯಾಗಂಗೆಯ ಪಡೆದ ನಿನ್ನಡಿಗೆ ತುಲಸಿ ಕುಸುಮಂಗಳನರ್ಪಿಸುತಿಹ ಸಮಯಾ ಸ್ವಾಮಿ 5ಅಂಗಗಳಾರು ಶುಭಾಂಗಗಳಾಗಿ ನಿನ್ನಮಂಗಳ ತನುವ ಧ್ಯಾನಿಪ ಸಮಯಾತೊಂಗದೆ ವಿಷಯಗಳೊಳು ನಿನ್ನ ಪದದುಂಗುಟದುದಿಯ ಸೇರಿಹ ಸಮಯಾ ಸ್ವಾಮಿ 6ದಶನಾಮ ದಶಕ ದಶಕ ಸಮಯದಿ ದಿವ್ಯದಶವಿಧ ಭೋಜ್ಯ ಭೋಜಿಪ ಸಮಯಾದಶವಿಧದಾರತಿಗಳ ಬೆಳಕಿಗಿಂದ್ರಿಯದಶಕವು ವಶಕೆ ಬಂದಿಹ ಸಮಯಾ ಸ್ವಾಮಿ 7ಮೀನ ಕಮಠ ಬುದ್ಧ ಕಲ್ಕಿನೀನಾಗಿ ಭಕತರಿಷ್ಟವನಿತ್ತೆ ನನ್ನಯದೀನತೆಯಳಿವರಿದೇ ಸಮಯಾ ಸ್ವಾಮಿ 8ಅನುಗ್ರಹಶಕ್ತಿಯೊಳಿರುತಷ್ಟಶಕ್ತಿಗಳನು ನೋಡಿ ಸೇವೆಗೊಳುವ ಸಮಯಾಸನಕಾದಿಗಳು ಶ್ರುತಿ ಸ್ಮøತಿ ಪುರಾಣಂಗಳುವಿನಮಿತರಾಗಿ ನುತಿಪ ಸಮಯಾ ಸ್ವಾಮಿ 9ವರ ಸಿಂಹಾಸನದಗ್ನಿ ದಿಕ್ಕಿನೊಳ್ ಧರ್ಮನುಹರುಷದಿಂ ಸೇವೆಗೈಯುವ ಸಮಯಾನಿರುರುತಿ ದೇಶದಿ ಜ್ಞಾನನು ತಾಮಸಬರದಂತೆ ಕಾದು ನಿಂದಿಹ ಸಮಯಾ ಸ್ವಾಮಿ 10ವೈರಾಗ್ಯ ವಾಯವ್ಯದೊಳು ನಿಂದು ದುಃಖವಹಾರಿಸುತಲಿ ಸೇವಿಪ ಸಮಯಾಸಾರಿರುತೈಶ್ವರ್ಯನೀಶನೆಡೆಯೊಳ್ ನೀನುತೋರಿದೂಳಿಗ ಗೈಯುವ ಸಮಯಾ ಸ್ವಾಮಿ 11ಸುರಪತಿ ದೆಶೆಯೊಳಧರ್ಮನು ಬೆದರುತಕರವ ಮುಗಿದು ನಿಂದಿಹ ಸಮಯಾಇರುತ ದಕ್ಷಿಣದಲಜ್ಞಾನನು ಚೇಷ್ಟೆಯತೊರೆದು ಭಯದಿ ಭಜಿಸುವ ಸಮಯಾ ಸ್ವಾಮಿ 12ವರುಣದಿಕ್ಕಿನೊಳವೈರಾಗ್ಯನು ನಿನ್ನಡಿಗೆರಗುವವರ ನೋಡುವ ಸಮಯಾಇರುತಲುತ್ತರದಲನೈಶ್ವರ್ಯ ಮಂತ್ರದುಚ್ಚರಣೆಯ ತಪ್ಪನೆಣಿಪ ಸಮಯಾ ಸ್ವಾಮಿ 13ಕಾಮಾದಿಗಳು ಪೀಠಸೀಮೆಯೊಳಗೆ ನಿಂತು ಕೈಮುಗಿದಲುಗದಿರುವ ಸಮಯಾತಾಮಸ ರಾಜಸ ಸಾತ್ವಿಕಗಳು ನಿನ್ನನಾಮದ ಬಲುಹ ತಿಳಿವ ಸಮಯಾ ಸ್ವಾಮಿ 14ಎಂಟು ದಿಕ್ಕಿನ ದೊರೆಗಳು ಪರಿವಾರ ಸಹಬಂಟರಾಗಿಯೆ ಕಾದಿಹ ಸಮಯಾಎಂಟು ಬಗೆಯ ಸಿರಿದೇವಿಯರೊಂದಾಗಿನಂಟುತನವ ಬಳಸಿಹ ಸಮಯಾ ಸ್ವಾಮಿ 15ಮೊದಲ ನಾಮವು ವಿಶ್ವಮಯ ನಿನ್ನ ನಿರ್ಗುಣಪದವ ಸೂಚಿಸಿ ಸಲಹುವ ಸಮಯಾತುದಿಯ ನಾಮದಿ ಭಕತರಿಗಾಗಿ ತನುದಾಳಿಒದೆದು ದುರಿತವ ರಕ್ಷಿಪ ಸಮಯಾ ಸ್ವಾಮಿ 16ದೂರಕೆ ದುರಿತವು ಹಾರಿ ಹೋಗಿಯೆ ಭಕ್ತಿಸೇರಿ ನಿನ್ನೆಡೆಯೊಳಾನಿಹ ಸಮಯಾದಾರಿದ್ರ್ಯ ದುಃಖವು ತೋರದಾನಂದವ ಸಾರಿ ನಿನ್ನನು ನುತಿಸುವ ಸಮಯಾ ಸ್ವಾಮಿ 17ಸಾಸಿರ ತಾರಕ ಜಪ ಮೊದಲು ಲಭಿಸಿಸಾಸಿರ ನಾಮ ಜಪವು ಮಧ್ಯದಿಸಾಸಿರ ವಂದನೆ ಕುಸುಮ ತುಲಸಿಗಳಸಾಸಿರದಿಂದೊಪ್ಪುವ ಸಮಯಾ ಸ್ವಾಮಿ 18ಸಾಸಿರ ಸಾಸಿರ ಜನ್ಮ ಜನ್ಮಗಳೊಳುಸಾಸಿರ ಸಾಸಿರ ತಪ್ಪುಗಳಾಸಾಸಿರ ಬಾರಿ ಮಾಡಿದ್ದರು ನಾಮದಸಾಸಿರ ಪ್ರಭೆಯೊಳಳಿವ ಸಮಯಾ ಸ್ವಾಮಿ 19ಮುಂದೆನ್ನ ಕುಲವೃದ್ಧಿಯೊಂದಿ ನಿನ್ನಯ ಕೃಪೆುಂದ ಭಕತಮಯವಹ ಸಮಯಾುಂದೆನ್ನ ಭಾಗ್ಯಕೆಣೆಯ ಕಾಣದೆ ನಿನ್ನಮುಂದೆ ನಾ ನಲಿದು ಕುಣಿವ ಸಮಯಾ ಸ್ವಾಮಿ 20ಗುರುವÀರನುಪದೇಶಿಸಿದ ಮಂತ್ರಕೆ ಸಿದ್ಧಿಬರುವ ನಿನ್ನಯ ಕೃಪೆಗಿದು ಸಮಯಾಕರುಣದಿಂ ನೋಡಿ ಕೈವಿಡಿದಭಯವನಿತ್ತುಪೊರೆವದಕೆನ್ನನಿದೇ ಸಮಯಾ ಸ್ವಾಮಿ 21ಧನ್ಯನು ಧನ್ಯನು ಧನ್ಯನು ನಾನೀಗಧನ್ಯನು ಮತ್ತು ಧನ್ಯನು ವಿಭುವೆಧನ್ಯರು ಜನನೀ ಜನಕ ಬಾಂಧವರೆಲ್ಲಧನ್ಯರೆಮ್ಮನು ನೋಡುವ ಸಮಯಾ ಸ್ವಾಮಿ 22ಮೂಲ ಮಂತ್ರಾಕ್ಷರ ಮೂಲ ನೀನಾಗಿಯೆಮೂಲಾವಿದ್ಯೆಯ ತೊಲಗಿಪ ಸಮಯಾಮೂಲೋಕನಾಯಕ ಮುಕ್ತಿ ಮಾರ್ಗಕೆುದೆಮೂಲವಾಗಿಯೆ ಬದುಕುವ ಸಮಯಾ ಸ್ವಾಮಿ 23ಮುರಹರ ಮಾಧವ ತಿಮಿರ ಭಾಸ್ಕರ ಕೃಷ್ಣಶರಣುಹೊಕ್ಕೆನು ನಿನ್ನ ಚರಣ ಪಂಕಜಗಳಪೊರೆಯುವರೆನ್ನನಿದೆ ಸಮಯಾ ಸ್ವಾಮಿ 24ತಿರುಪತಿಯೊಡೆಯನೆ ಶ್ರೀ ವಾಸುದೇವಾರ್ಯಗುರುವಾಗಿ ಕಾವೇರಿ ತೀರದಲಿಕರುಣದಿಂ ಪಾದುಕೆಗಳನಿತ್ತ ಭಾಗ್ಯವುಸ್ಥಿರವಾಗಿ ಭಕತಿ ಹೆಚ್ಚುವ ಸಮಯಾ ಸ್ವಾಮಿ 25 ಓಂ ಶಕಟಾಸುರಭಂಜನಾಯ ನಮಃ
--------------
ತಿಮ್ಮಪ್ಪದಾಸರು
ಸಿದ್ಧ ನೋಡಿರೋ ಸಾಕ್ಷಾತ್ಕಾರವ ಧ್ರುವ ಸಾಧುಕಾ ದಸ್ತ ಪಂಜ ಲೇಣಾ ಸಾಧುಕೆ ಸಂಗ ಕರನಾ ಸಾಧ್ಯವಾಗದು ಸದ್ಗುರು ಕರುಣಾನಿ ಧರಿಯೊ ಜಾಣಾ 1 ಬಾಹ್ಯಾಂತ್ರಿ ಜೋ ಪಾಹೆ ಗೋವಿಂದಾ ಇಹಪರ ಅವಗಾನಂದಾ ದೇಹಭ್ರಾಂತಿಗೆ ಸಿಲಕದೆಂದಾ ವಹೀ ಖುದಾಕಾ ಬಂದಾ 2 ಪಾಕದಿಲ್ಲಾ ಸುಜೀರ ಕರಣಾ ಯಕೀನ ಸಾಬೀತ ರಾಹಾಣಾ ಟಾಕ ತ್ಯಾಭವ ಮೀ ತೂ ಪಣಾ ಐಕ್ಯವಿದು ಭೂಷಣಾ 3 ನಿಸದಿನ ಕರಿಮಕ ಹೊಯಾರಾ ವಾಸುದೇವ ಸಾಹಕಾರಾ ವಿಶ್ವವ್ಯಾಪಕಾ ಮ್ಹಣುನಿ ಸ್ಮರಾ ಲೇಸು ಅವನ ಸಂಸಾರಾ 4 ಮೂವಿಧ ಪರಿಯಲಿ ಹೇಳಿದ ಭಾಷಾ ಮಹಾಗುರುವಿನ ಉಪದೇಶಾ ಮಹಿಪತಿಗಾಯಿತು ಭವ ಭಯ ನಾಶಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು