ಒಟ್ಟು 2441 ಕಡೆಗಳಲ್ಲಿ , 113 ದಾಸರು , 1820 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೃಷ್ಟೀಶ ಕೃಪೆದೋರಿದ ಬಾಲನಮಾನನಷ್ಟವ ಜಾರಿಸಿದ ಪ ನ್ಯಾಯಕೆ ಪೋಪಕಾಲದಿ ಪುಟ್ಟಯಾಖ್ಯನ ಸ್ವಪ್ನದಲಿ ತಾಂ- ಬಿಟ್ಟು ಬನ್ನಿರಿಯೆನುತಪೇಳ್ದಾ ಅ.ಪ ಎಲ್ಲಾರ ನಿನ್ನೊಳಗೆ ಸೇರಿಸಿ ಮುಂದೆ- ಉಲ್ಲಾಸಕೊಡುವೆ ನಿನಗೆ ಕಲ್ಲಿನಂದದಿ ಮೌನಧರಿಸುತ- ಖುಲ್ಲಮನುಜರ ಸಂಗವರ್ಜಿಸಿ ನಿಲ್ಲಿಸು ಮನವನೆನುತಲಿ 1 ಗುರುತು ಕಾಣುವದೆಂದಿಗೆ ಪರಮ ತಿರುಮಂತ್ರಾರ್ಥ ಅಷ್ಟಾ- ಕ್ಷರಿಯ ಜಪತಪಧ್ಯಾನಮಾಡುವ ದೊರಯದೆಂದಿಗು ಕೀರ್ತಿ ಎನುತಲಿ 2 ಮತಧರ್ಮಜ್ಞಾನಿಗಳು ಪೇಳಿರುವಂತ ಮತಶಾಸ್ತ್ರವೀಕ್ಷಿಸದೆ ಸತತದೂಷಣೆಗೈದು ಸುಜನರ - ಕ್ಷಿತಿಯ ಭೋಗವನಂಬಿ ಗರ್ವದಿ ಹಿತವತಪ್ಪಿಸಿ ಕರವಪಿಡಿಯುತ 3 ಸ್ಥಿರವಲ್ಲಕಾಯವೆಂದು ಸಾತ್ವಿಕಶೃತಿಯೊ- ಳಿರುವ ಸತ್ಯ ನೋಡೆಂದು ನಿರುತಬೋಧಿಸಿ ಜನನಮರಣವ ತರಿದು ಎನ್ನನೆ ಯಜಿಸು ಯೆನುತಲಿ- ಹರಸಿ ಮೋಕ್ಷವನಿತ್ತ ಆರ್ಯನು 4 ಬಿಟ್ಟು ಸತಿಸುತರೆಲ್ಲರ ಎನ್ನೊಳುಮನವ ನಿಟ್ಟುನಂಬಿದಭಕ್ತರ ಬಿಟ್ಟುಕೊಡೆನಾನೆಂದು ಹೃದಯಾ- ಧಿಷ್ಟಿತನು ತಾನಾಗಿ ಅಭಯವ ಇಷ್ಟಶ್ರೀಗುರುರಂಗನೀಕ್ಷಿಸಿ 5
--------------
ರಂಗದಾಸರು
ಸೇವಕತನದ ರುಚಿಯನೇನರಿದೆಯೊದೇವ ಹನುಮರಾಯ ವೈರಾಗ್ಯ ಬೇಡಿ ಪ ಪಾಷಾಣ ಪೆಣ್ಣ ಮಾಡಿದಾತಗೆಇದೇನಸಾಧ್ಯವೊ ನೀ ಬಯಸಲೊಲ್ಲದೆ1 ಕ್ಷಣದಲ್ಲಿ ಸಂಜೀವನ ಪರ್ವತ ತಂದಾಗಹಣ ಹೊನ್ನುಗಳ ಬೇಡ ಬಾರದಿತ್ತೆವಿನಯದ ವಿಭೀಷಣಗೆ ರಾಜ್ಯವನಿತ್ತಂಥಧಣಿಗೆ ಏನಸಾಧ್ಯವೊ ಹನುಮ ನೀನೊಲ್ಲದೆ 2 ಸಾರ್ವಭೌಮನು ತಾನೆ ಮೆಚ್ಚಿ ಬಳಿಗೈದಾಗಉರ್ವಿಯನು ಬೇಡಿದಡೆ ಕೊಡದಿಹನೆಸರ್ವವನು ತೊರೆದು ಶ್ರೀ ನೆಲೆಯಾದಿ ಕೇಶವನನಿವ್ರ್ಯಾಜ ಭಕುತಿಯನು ಬೇಡಿಕೊಂಡೆಯೊ 3
--------------
ಕನಕದಾಸ
ಸೇವಾಂ ದೇಹಿ ಚಂದ್ರಶೇಖರ ಸೇವಾಂ ದೇಹಿ ಸೇವಾಂ ದೇಹಿ ಸದಾವನತಾಖಿಲ ಜೀವ ದುರಿತಹರ ಪ ಪಾವನಚರಿತ ಸುರಾವಳಿ ಮುನಿಗುಣ ಭಾವಿತಚರಣ ಸುಪಾವಕ ನಯನಾ ಅ.ಪ ತುಂಬುರು ಗಾನವಿಡಂಬನ ಸುರಸರಿ ದಂಬುಕ ಭಕ್ತ ಹೃದಂಬುಜ ಭಾನೋ 1 ಪುರಹರ ಮುರಹರಧರ ಕರುಣಾಕರ ನರ ವರದಾಯಕ ನಿರುಪಮ ಹಿಮವದ್ ಗಿರಿವರಚಾಪ ಕು ಧರಜ್ಯಾಕರುಷಣ ಪರಮಕೃಪಾಳೋ 2 ಶಿವ ಶಿವ ಶಂಕರ ಭುವಿಭೂಧರವರ ಶಿವಗಂಗಾಧಿಪ ಭವ ಗಂಗಾಧರ ಅವ ಮಾಂ ಲಕ್ಷ್ಮೀಧವ ವೆಂಕಟ ಸಖದಿವಿಭವ ವಂದ್ಯಾ 3
--------------
ತಿಮ್ಮಪ್ಪದಾಸರು
ಸೇವೇ ಶ್ರೀರಮಣಂ ಸದಾ ಸೇವಕಾರ್ತಿಹರಣಂ ಪ ಪಾವನ ವಾಘ್ರಾಚಲವಿಹರಣಂ ಅ.ಪ ಪುಂಡರೀಕಾಯತ ನೇತ್ರಂ ಮಂಡಿತ ಖಗಪತಿಪತ್ರಂ ಖಂಡಪರಶುಕೃತಸನ್ನುತಿಪಾತ್ರಂ ಚಂಡಕಿರಣಶತಸನ್ನಿಭಗಾತ್ರಂ7 1 ಕುಲಿಶಧರಾತ್ಮಜ ಮಿತ್ರಂ ಸುಲಲಿತ ಕರಧೃತ ಗೋತ್ರಂ ಕಲಿತರಥಾಂಗಧರಾಸಿತನುತ್ರಂ ಕಲಿಮಲಖಂಡನ ನಿಜಚಾರಿತ್ರಂ2 ಭಾವಿತಜನ ಮಂದಾರಂ ಭಾವಜಜನಕಮುದಾರಂ ಸೇವಕರಕ್ಷಣ ಧೃತಶರೀರಂ ದೇವಸಮೂಹಾಕಲಿತ ವಿಹಾರಂ3 ಶಂಕರಹೃದಯಧ್ಯೇಯಂ ಕಿಂಕರಜನ ಸಮುದಾಯಂ ನಿಜನಾಮಧೇಯ 4 ಪರಮಪುರುಷಮನವಂದ್ಯಂ ಸರಸಗುಣಾಕರಮಾದ್ಯಂ ವರದವಿಠಲಮಖಿಲಾಗಮಬೋಧ್ಯಂ 5
--------------
ವೆಂಕಟವರದಾರ್ಯರು
ಸೋತುಹೋಗಣ್ಣ ಮಾತುಬಂದಲ್ಲಿ ಜಾಣನಾಗಿ ಸೋತುಹೋಗಣ್ಣ ಮಾತುಬಂದಲ್ಲಿ ಪ ಸೋತುಹೋಗದೆ ಮಾತುಮಾತಿಗೆ ವಾದಿಸಲ್ಕೆ ಘಾತಕತನದ್ವಿಧಿಯು ಬಂದು ಆತುಕೊಂಡು ಕೂತುಕೊಳ್ವುದು ಅ.ಪ ಸೋತೆನೆನ್ನಲು ನಾಚಬೇಡಣ್ಣ ದೇವರು ಕೊಟ್ಟಿಹ್ಯ ಖ್ಯಾತಿಯೇನು ಹೋಗೋದಿಲ್ಲಣ್ಣ ಸುಳ್ಳಲ್ಲವಣ್ಣ ಸೋತೆನೆಂಬುದು ಜಯದ ಮಾತಣ್ಣ ಸತ್ಯ ತಿಳಿಯಣ್ಣ ನೀತಿಗಡಕರ ಮಾತಿನ ತಳ್ಳಿಗೋತ ಕುಣಿಯೊಳೆಳೆವ ಬಳ್ಳ್ಯೆಂದು ಮಾತನಾಡದೆ ಸುಮ್ಮನ್ಹೋಗಲು ನೀತಿವಂತರು ಮೆಚ್ಚುತಾರ 1 ದುಡುಕುಮಾತಿಗೆ ಮಿಡುಕಬೇಡಣ್ಣ ಸತ್ಯದ್ಹೇಳುವ ದೃಢತರ್ವಚನದ ಅಡಕು ತಿಳಿಯಣ್ಣ ಪಡಕೊ ಸುಖವಣ್ಣ ನೀ ತೊಡರಿಕೊಂಡರೆ ತಪ್ಪದು ಕಡೆಯತನಕ 2 ಸೋತೆನೆನದ್ಹತ್ತುವದನಂದೇನಾಯ್ತು ಸೋತು ಓಡಿದ ನೀತಿವಂತ ವಿಭೀಷಣಂದೇನಾಯ್ತು ಮತ್ತು ನಳರಾಜ ಸೋತ ರಾಜ್ಯ ಭಂಡಾರೆಲ್ಲ ಮುಳುಗಿತು ತಿಳಿ ನೀತಿ ಅರಿತು ಮಾತುಮಾತಿಗ್ವಾದಿಸಿ ಕುಲಘಾತಕ್ಕಾದನು ಕೌರವೇಂದ್ರನು ಸೋತಜನರಭಿಮಾನಿ ಶ್ರೀರಾಮ 3
--------------
ರಾಮದಾಸರು
ಸ್ಥಾಣುಂಕರ ವಿರಾಜಿತ ರಮಾಸದನ ಮೋಹನ ಪ ವಾಣೀಶ ಸಂಭಾವಿತ ಗೋಪೀಜನ ಸೇವಿತಾ ಅ.ಪ ಮಣಿಭೂಷಣ ರಂಜಿತ ಮುಕ್ತಜನಾನಂದಿತಾ 1 ಫಣಿಮಣಿಗಣ ಸಂಭೂಷಿತ ವನಿತಾಜನ ತೋಷಿತ 2 ಅಣುರೇಣು ತೃಣಪೂರಿತ ಗುಣಸಾಗರ ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸ್ಥಿರವೆಂದು ನಂಬಿ ಕೆಡಬೇಡ ಮನುಜಾ ಧರಣಿ [ಬಾಳು] ಕರುಣೆಯಿಹುದು ಮಾ[ಂಗಿರೀಶನ] [ನಂಬಿದರೆ] ಪ ಕ್ಷೀರಾಬ್ಧಿಗೈದು ಮುದದಿ ಪೊರೆವನು ಸ್ತನ್ಯದಿಂ ಹೀರಿ ತೇಲುತ ಬೆಳೆದು ತೋರಮುತ್ತುಗಳಾ ಹಾರ ಪದಕಗಳಿಂದ ಚಾರುಭೂಷಣದಿಂದ ಮಾರಸುಂದರನೆನಿಪ | ಮೂರು ದಿನದ ಬಾಲ 1 ಬಾಲತನ ಪೋಗಲು ಮೇಲೆ ಯೌವನವೊದಗಿ ಬಾಲೆಯೋರ್ವಳಕರವ ಘಳಿಲದೊಳು ಹಿಡಿದು ಮೇಲಾದ ಸೌಭಾಗ್ಯವಲ್ಪಕಾಲವಿರುವಾಗ ಕಾಲದೂತರು ಪಿಡಿಯಲೊಡನೆ ಬ[ರುವ]ವರಿಲ್ಲ 2 ಉಕ್ಕುವ ಯೌವನದ ಸೊಕ್ಕಿಲ್ಲ ಮರುದಿನ ಉಕ್ಕುಕ್ಕಿ ಬಸವಳಿದು ಶಕ್ತಿಗುಂದಿ ಸುಕ್ಕು ಸುಕ್ಕಿನ ದೇಹ[ಭಾ]ವವಿಲ್ಲದ ಬಾಳ ಭಕ್ತಿಗೆ ಮನಮರೆಯೆ ಭಕ್ತಗತಿಯದರಿಂದ 3 ಧನವ ದಾಯಾದಿಗಳು ಮನವ ಕಾಮಾದಿಗಳು ಸನುಮತ ಜ್ಞಾನವನ್ನು ದುರಿತಕಾರ್ಯ ತನುಜ ತನುಜೆಯರೆಲ್ಲರವರವರ ಸೌಖ್ಯವನು ಸನಿಹದಿಂ ಸೂರೆಗೈವರಿನ್ನೇತರಾಸೆ 4 ಕುಂಟು ಜೀವವಿರುವನಕ ನೆಂಟರಿಷ್ಟರು ಹಣವ ಗಂಟನುಂಗಲು ಬರುತಲೆಂಟೆಂಟುದಿನವಿಹರು ಗಂಟು ತೀರಿದ ಬಳಿಕ ಪಾಪಪುಣ್ಯಗಳ ಹೊರತು [ಏ ನುಂಟು ಈಭವದ ನಂಟಿನಲಿ ಯದರಿಂದ 5 ಜೀವ ತಾ ಜನಿಪಂದು ರವೆಯಷ್ಟು ತರಲಿಲ್ಲ ಅವನಿಯಾ ಬಿಡುವಂದು ಜವೆಯಷ್ಟ ಹೊರಲಿಲ್ಲ ಭಾವಶುದ್ಧಿ ಬೇಕನಿಶ ಮಾವಿನಾಕೆರೆರಂಗನ ಸೇವಿಸಿದೊಡಾ ರಂಗ ಭವವೆಲ್ಲ ಕಳೆವಾ 6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸ್ಮರಿಸಿ ಸುಖಿಸು ಮನವೆ ಗುರುರಾಜಾಚಾರ್ಯರ ಪ ಸ್ಮರಿಸು ಪರಿಮಳ ವಿರಚಿಸಿದ ಗುರು ವರರ ಕರುಣವ ಪಡೆದ ಶರಣರ ದುರಿತ ಉರಗಕೆ ಗರುಡನೆನಿಸಿದವರ ಸುಚರಿತೆಯ ಹರುಷದಿಂದಲಿ ಅ.ಪ ಇಳಿಯೋಳ್ ಶ್ರೀ ಸುರಪುರದಿ ಯಳಮೇಲಿ ಶ್ರೀ ವಿಠ್ಠಲಚಾರ್ಯ ರಿಹ ಜನ್ಮದಿ ಕುಸುಮೂರ್ತಿ ಗುರುಗಳ ಒಲಿಮೆ ಪಡೆದು ನಿತ್ಯದಿ ಗಳಿಸಿದ ಸುಪುಣ್ಯದಿ ಲಲನೆ ಜಾನಕಿ ವರ ಸುಗರ್ಭದಿ ಚಲುವ ಲಕ್ಷಣ ಗಳಲಿ ಜನಿಸಿ ಗೆಳೆಯರೊಡನಾಡುತಲೆ ಶಬ್ಧಾವಳಿ ಸುಶಾಸ್ರ್ತವ ಕಲಿತ ವರಪದ 1 ಮೆರೆವ ಘನ ವೈಭವದಿ ವೈರಾಗ್ಯಭಾಗ್ಯವೆ ಪಿರಿದೆಂಬೊ ಧೃಢಮನದಿ ವನಿತಾದಿ ವಿಷಯದಿ ತಿರುಗಿಸುತ ಮನವಿರದೆ ಸಿರಿವರ ತುರುಗವದನನ ಚರಣ ಪೂಜಿಯೊಳಿರಿಸಿ ಗುರುವರ ಮುಖದಿ ಶ್ರೀ ಮನ್ಮರುತ ಶಾಸ್ತ್ರದ ಶ್ರವಣಗೈದರ 2 ಚರಿಸಿ ಶಾಸ್ತ್ರವ ಬೋಧಿಸಿ ಪ್ರವಚನದಿ ಗುರುಗಳ ಕರುಣವ ಸಂಪಾದಿಸಿ ನೃಪಮಾನ್ಯರೆನಿಸಿ ಹರಿದಿನಾದಿ ವೃತ ಬಿಡದಾಚರಿಸಿ ಕಾರ್ಪರ ನಿಲಯ ಶಿರಿನರ ಹರಿಯ ಪುರವನು ತ್ವರದಿ ಶೇರಿದ ಪರಮ ಮಹಿಮರ ಚರಣ ಯುಗಲವ 3
--------------
ಕಾರ್ಪರ ನರಹರಿದಾಸರು
ಸ್ಮರಿಸಿವುದು ರಘುನಂದನನ ಪ ನಿರುತದಿ ಬೆಳಗಿನೊಳೆದ್ದು ಭಕುತಿಯಲಿ ಅ.ಪ. ಜನಪತಿ ದಶರಥನುದರದಿ ಜನಿಸಿದವನಿತೆ ಅಹಲ್ಯೆಯ ತಾನುದ್ಧರಿಸಿದಘನ ಶಂಕರ ಧನುವ ಭಂಗಿಸಿದಜನಕ ಸುತೆಯ ವರಿಸಿದ ಶ್ರೀರಾಮನ 1 ತಾಯಿ ಕೈಕೇಯಿಯ ಮಾತು ನಡೆಸಿದನೋಯದೆ ವನವನು ಸತಿಸಹ ಸೇರಿದಮಾಯಾಮೃಗದಾಶೆಗೆ ಸತಿಯನಗಲಿದರಾಯ ಲಕ್ಷ್ಮಣನಣ್ಣ ಶ್ರೀರಾಮನ 2 ದಂಡಕದೊಳು ಸತಿಯನು ಶೋಧಿಸಿದಚಂಡ ಹನುಮಗೆ ತಾ ದೊರೆಯಾದಪುಂಡ ಜಲಧಿಯ ದಾಟಿಸಿದಹೆಂಡತಿ ಇರವನು ತಿಳಿದ ಶ್ರೀರಾಮನ 3 ಜಲಧಿಗೆ ಸೇತುವೆ ನಿಂತು ಬಿಗಿಸಿದಖಲ ರಾವಣನ ರಣದೊಳು ಕೆಡಹಿದಒಲಿದು ವಿಭೀಷಣನನು ತಾ ಪೊರೆದನೆಲದೊಳು ಸುಖ ಬೀರಿದ ಶ್ರೀರಾಮನ 4 ಧರುಮವ ನೆಲಸಲು ದುಷ್ಟರ ತರಿದಾ ಧರೆಯೊಳು ಶಿಷ್ಟರ ಪೊರೆಯಲು ಬಯಸಿದಸಿರಿಪತಿ ಗದುಗಿನ ವೀರನಾರಾಯಣನರನಾಗವತರಿಸಿದ ಶ್ರೀ ರಾಮ 5
--------------
ವೀರನಾರಾಯಣ
ಸ್ಮರಿಸು ಸಂತತ ಹರಿಯನು ಮನವೇ ಪ ಸ್ಮರಿಸು ಸಂತತ ಹರಿಯ ಕರುಣಾಳುಗಳ ದೊರೆಯ ಸರಸಿಯೊಳಗಂದು ಕರಿಯ ನರನ ಸಂಗರದೊಳಗೆ ಕಾಯ್ದು ದೊರೆಯ ಜಗದೀಶ ಅ.ಪ. ಪರ ಸೌಖ್ಯ ದಾನಿಗಳರಸನೆಂದು ಸಾನುರಾಗದಿ ನಂಬಿದ ಜನಕೆ ಸುರ ಮೋದ ಸಲಿಸುವ ಶ್ರೀಮ ಪತಿ ಸಾಮ ಗಾನ ಲೋಲನ ಪ್ರಸಾದಾ ಪಾದಾ 1 ಎಲ್ಲೆಲ್ಲಿ ನೋಡೆ ಮತ್ತಲ್ಲಲ್ಲಿ ನೆಲೆಸಿಹನು ಬಲ್ಲಿದನು ಭಾಗ್ಯವಂತ ನಂಬಿದವರಿ ಗಲ್ಲದೆ ಒಲಿಯ ಭ್ರಾಂತಾ ದುಷ್ಟ ಜನ ರೊಲ್ಲ ನಿಶ್ಚಯ ಮಹಂತಾರೊಡೆಯ ಕೈ ವಲ್ಯದಾಯಕನ ಇಂಥಾ ಪಂಥಾ 2 ಅಣುವಿನೊಳಗಣುವಹನು ಘನಕೆ ಘನತರನಹನು ಅಣು ಮಹದ್ವಿಲಕ್ಷಣಾ ಕಲ್ಯಾಣ ಗುಣಜ್ಞಾನ ಘನಲಕ್ಷಣಾ ಸಂಪೂರ್ಣ ಮನ ಮುಟ್ಟಿ ಕರೆದಾಕ್ಷಣಾ ಬಂದೊದಗಿ ಕುಣಿವ ಲಕ್ಷ್ಮೀ ವಕ್ಷನಾ ಅನಪೇಕ್ಷನಾ 3 ಚೆಲುವರೊಳಗತಿ ಚೆಲುವ ಸುಲಭರೊಳಗತಿ ಸುಲಭ ಒಲಿವ ಸರಿ ಬಂದ ತೆರದಿ ಗುಣಕರ್ಮ ಕುಲಶೀಲಗಳನೆಣಿಸನರಿದೀ - ಭಕುತಿ ಫಲವ ಕೊಡೆ ತಾ ತವಕದಿ ಶಬರಿ ಎಂ ಶರಧಿ ಭರದೀ 4 ನೋಡಿ ನೋಡಿಸುತಿಹನು ಮಾಡಿ ಮಾಡಿಸುತಿಹನು ನೀಡಿ ನೀಡಿಸುವ ಪಿಡಿವಾ ಪಿಡಿಸುವನು ಬೇಡಿ ಬೇಡಿಸುವ ಬಡವರೊಡೆಯ ಕೊಂ ಡಾಡುವರ ಒಡನಾಡುವಾ ಈ ಮಹಿಮೆ ಗೀಡೆಂದು ಆವ ನುಡಿವಾ ಕೆಡುವಾ 5 ಕೋದರಾದ್ಯಮರ ವ್ರಾತಾ ಸಹಿತ ಮಹ ದಾದಿ ಪೃಥ್ವಂತ ಭೂತಾದೊಳು ನಿಲಿಸಿ ಕಾದುಕೊಂಡಿಹ ವಿಧಾತಾ ಅಂಡತ್ರಿದ ಶಾಧಿಪನ ಸೂತ ಸಚ್ಚರಿತಾ 6 ನಿಗಮ ಸಂಚಾರ ಶ್ರೀ ಜಗನ್ನಾಥವಿಠಲರೇಯಾ ತನ್ನ ಪಾ ದಗಳ ಧ್ಯಾನಿಪರ ನೋಯಾಗೊಡದಂತೆ ಮಾಯಾ ರಮಣ ನಮ್ಮ ನಗಲಿ ಸೈರಿಸನು ಪ್ರಿಯಾ ಧ್ಯೇಯಾ 7
--------------
ಜಗನ್ನಾಥದಾಸರು
ಸ್ಮರಿಸುವ ನರನೇ ಧನ್ಯ ಸನ್ಮಾನ್ಯ ಪ ಸ್ಮರಿಸುವರಿಗೆ ಸುರತರುಕಲ್ಪ ವಿಭರಾಮ ಪುರದಿ ಶ್ರೀಹರಿ ಧ್ಯಾನಪರ ಶ್ರೀ ಕೃಷ್ಣಾಚಾರ್ಯರ ಅ.ಪ ಭರತ ಭೂಮಿಯೊಳವತರಿಸಿ ದೇವಾಂಶದಿ ಪುರುಹೂತನಂತೆ ಗಜಾಂತ ವೈಭವದಿಂದ ಮೆರೆಯುತ ತಮ್ಮಯ ಚರಣಾರಾಧಕರನು- ದ್ದರಿಸಲೋಸುಗದಿ ಸಂಚರಿಸುತ ಮುದದಿ ಸಂದರುಶನದಿಂಧಾಘವ ಕಳೆದು ಬಲು ಕರುಣದಲಿಷ್ಟಾರ್ಥವ ಗರಿದು ಬಹು ಶರಣು ಜ- ನರ ಪೊರೆವ ಭೂಸುರರೊಳು ಮರುತ ಮತಾಬ್ಧಿ ಚಂದಿರನೆನಿಸಿದವರ 1 ವರ್ಣಿಸಲೊಶವಲ್ಲ ಚರಣಯುಗ್ಮಾರಭ್ಯ ಶಿರಪರಿಯಂತರ ಗುರುಗಳಾಕೃತಿಯನ್ನು ನಿರುತ ಧ್ಯಾನಿಪರಿಗೆ ಪರಮ ಮಂಗಳವೀವ ಪರಿಶೋಭಿಸುವ ರತ್ನಾಭರಣದಿಂದೋಪ್ಪುವ ಸ್ವರ್ಣತುಲಸಿ ಮುಕ್ತಹಾರ ಭೂಷಿತ ಕಂಧರ ಸುಂದರವಾದ ಮುಖದೊಳು ಮಂದಸ್ಮಿರ ಕಸ್ತೂರಿಯಂತೆ ಪರಿಮಳಾನ್ವಿತ ಶರೀರ ಮಂತ್ರಾಲಯ ಗುರುರಾಘವೇಂದ್ರರ ಕರುಣಾಸುಪಾತ್ರರ2 ಚಿರಕಾಲ ಶೇವಿಪ ಪರಮ ವಂಧ್ಯರಿಗೆಲ್ಲ ವರಪುತ್ರ ಸೌಖ್ಯವ ಕರುಣಿಸುವರು ಸತ್ಯ ಅಪರಿಮಿತ ಮಹಿಮರೆಂದರಿಯದೆ ಇವರನ್ನು ಜರಿಯಲಾಕ್ಷಣದಲಿ ಅರಿತು ಭೀಕರವಾದ ಉರಗರೂಪವ ತೋರುತ ತ್ಯಜಿಸಿ ಮತ್ತೆ ನಿಜರೂಪದಿಂದಿರುತ ನೋಳ್ಪರಿಗತ್ಯಾಶ್ಚರ್ಯ ಸದ್ಗುಣ ಭರಿತ ಕಾರ್ಪರ ನರಹರಿಯ ಪರೋಕ್ಷದಿ ನಿರುತ ಸುಖಿಪರಂಘ್ರಿ 3
--------------
ಕಾರ್ಪರ ನರಹರಿದಾಸರು
ಸ್ಮರಿಸುವೆ ಹರಿಯನು ದುರಿತವ ಕಳಿವನು ಪ ಮರಿಯಾನು ಭಕುತರ ಜರಿವನು ದುರುಳರ ಪೊರೆವನು ಸುಜನರ ಭರದಿಂದ ಶಿರಿವರ 1 ಕರಿರಾಜಾನೀತನ ಕರಿಯಲು ಆ ಕ್ಷಣ ತ್ವರಿತಾದಿ ಈ ಜಾಣ ಪೊರೆದನು ಬಲು ಘನಾ 2 ಕರುಣಾಳು ಈತನು ಸುರರೊಳು ಮರಿಯಾನು ನಮ್ಮನು ಶ್ರೀವತ್ಸಾಂಕಿತನು 3
--------------
ಸಿರಿವತ್ಸಾಂಕಿತರು
ಸ್ಮರಿಸುವೆನು ಸದ್ಭಕ್ತಿಯಲಿ ಶ್ರೀರಾಮನ ಗುಣಧಾಮನ ಸಿರಿವಿರಿಂಚಾದ್ಯಮರಗಣ ಸಂಸ್ತುತ್ಯನ ಸಂತೃಪ್ತನಾ ಪ ಆದಿಯಲಿ ಝಷನಾಗಿ ನಿಗಮವ ತಂದನ ಮುನಿವಂದ್ಯನ ಭೂಧರಾಧರ ದಿವಿಜರಿಗೆ ಸುಧೆಗರೆದನ ಸುರವರದನ ಕಾದು ಕಿಟರೂಪದಲಿ ಭೂಮಿಯ ತಂದನ ಗುಣವೃಂದನ ಬಾಧಿಸಿದ ರಕ್ಕಸನ ತರಿದು ಪ್ರಲ್ಹಾದನ ತಾ ಪೊರೆದನ 1 ತುಳಿದನ ಅವಗೊಲಿದನ ಕೊಡಲಿ ಪಿಡಿದಾ ಕ್ಷತ್ರಿಕುಲ ವಿರಾಮನ ಭೃಗು ರಾಮನ ಮೃಡನೊರದಿ ಯುನ್ಮತ್ತ ದೈತ್ಯರು ಬಾಧಿಸೆ ಧರಿ ಪ್ರಾರ್ಥಿಸೆ ಜಡಜ ಪೀಠಾದ್ಯಮರರಾ ಮೊರೆ ಕೇಳ್ದನ ಧರೆಗಿಳಿದನ 2 ದಶರಥನ ಸತಿಯುದರದಲಿಯವತರಿಸಿದ ಮುದಗರಿಸಿದ ಬಿಸರುಹಾಪ್ತನ ವಂಶವನು ಉದ್ಧರಿಸಿದ ಮೈಮರಸಿದ ದಶದಿಶೆದಿ ಸುರರೆಲ್ಲ ಪೂಮಳೆಗರೆದರು ಸುಖಸುರಿದರು ಅಸಮಲೀಲೆಯ ತೋರ್ದರಘುಕಲಚಂದ್ರನ ಸುಖಸಾಂದ್ರನ 3 ಗಾಧಿಸುತನಧ್ವರವ ಕಾಯ್ದ ಸಮರ್ಥನ ಜಗಕರ್ತನ ವೇದಧನು ಮೊದಲಾದ ಕಲೆಗಳ ತಿಳಿದನ ಮುನಿಗೊಲಿದನ ಹಾದಿಯಲಿ ಶಿಲೆಯಾದ ಅಹಲ್ಯಳ ಪೊರೆದನ ಸಿರಿವರದನ ಮೋದದಲಿ ಹರಧನು ಮುರಿದ ಗಂಭೀರನ ಬಹುಶೂರನ 4 ಜನಕಭೂಪತಿ ತನುಜಳೆನಿಸಿದಸೀತೆಯ ಭೂಜಾತೆಯಾ ಘನಹರುಷದಲಿ ವಲಿಸಿಕರವನು ಪಿಡಿದನ ಯಶಪಡೆದನ ದನುಜರುಪಟಳತೋರಲಾಕ್ಷಣ ಸೀಳ್ಪನ ಸುರರಾಳ್ದನ ತನಗೆ ತಾನೇ ಸೋಲಿಸಿದ ಜನಮೋಹನ ಖಗವಾಹನ 5 ಜನಕನಾಜ್ಞವ ಪಾಲಿಸಿದ ದಯವಂತನ ಅಘಶಾಂತನ ಅನುಜಸತಿಸಹ ಪುರದಿ ತಾಪೊರಮಟ್ಟನ ಅತಿಧಿಟ್ಟನ ವನದಿ ಬಹು ಮುನಿಗಳ ಕಾರಾರ್ಚಿತನಾದನ ಸುಪ್ರಸಾದನ ಅನುಜ ಭರತಗೆ ದಯದಿ ಪಾದುಕೆ ಕೊಟ್ಟನ ಸಂತುಷ್ಟನ 6 ಮನುಜರಂದದಿ ಸತಿವಿಯೋಗವತೋರ್ದನ ಕುಜನಾರ್ದನ ವನಿತೆಯಂಜಲ ಫಲಗಳನು ತಾಮೆದ್ದನ ಶ್ರುತಿಸಿದ್ಧನ ದನುಜರಿಪು ಹನುಮಂತನನು ಸಾರೆ ಗರೆದನ ಕರುಣಿಸಿದನ ವನಜ ಸಖಸುತನೊಡನೆ ಸಖ್ಯವ ಮಾಡ್ಡನ ವರನೀಡ್ಡನ 7 ಲೀಲೆಯಿಂದಲಿ ತಾಳ ಮರಗಳ ಸೀಳ್ದನ ನೆರೆಬಾಳ್ದನ ವಾಲಿಯನು ಸಂಹರಿಸಿದತಿಬಲವಂತನ ಶ್ರೀಕಾಂತನ ಮೇಲೆನಿಪ ರಕ್ಕಸರನೆಲ್ಲರ ತುಳಿದನ ಅಸುಸೆಳೆದನ ಶ್ರೀಲತಾಂಗಿಯ ಕ್ಷೇಮವಾರ್ತೆಯ ಕೇಳ್ದನ ಮುದತಾಳ್ದನ 8 ಗಿರಿಗಳಿಂದಲಿ ಶರಧಿಯನು ಬಂಧಿಸಿದನ ಸಂಧಿಸಿದನ ಹರಿಗಳೆಲ್ಲರ ಕೂಡಿಲಂಕೆಯ ಸಾರ್ಧನ ರಣದಿರ್ದನ ಉರುಪರಾಕ್ರಮಿ ರಾವಣನ ಶಿರಕಡಿದನ ಹುಡಿಗೆಡೆದನ ವರವಿಭೀಷಣ ಭಕ್ತಗಭಿಷೇಚಿಸಿದನ ಪೋಷಿಸಿದನ 9 ಸಿರಿಸಹಿತ ಪುಷ್ಪಕವನೇರಿದ ಚಲುವನ ಅತಿ ಪೊಳೆವನ ತ್ವರದಿಶೃಂಗರಿಸಿದ ಅಯೋಧ್ಯಕೆ ಬಂದನ ಅಲ್ಲಿ ನಿಂದನ ಭರತ ಪ್ರಾರ್ಥಿಸಲಾಕ್ಷಣದಿ ಮೊರೆ ಕೇಳ್ದನ ಧರಿಯಾಳ್ದನ ಸರಸಿಜಾಸನ ಪ್ರಮುಖರಾರ್ಚನೆ ಕೊಂಡನ ಕೋದಂಡನ 10 ಮರುತಸುತನಿಗೆ ಅಜನ ಪದವಿಯನಿತ್ತನ ಬಹುಶಕ್ತನ ಚರಣಸೇವಕ ಜನಕಭೀಷ್ಟದಾತನ ವಿಖ್ಯಾತನ ನಿರುತ ಸನ್ಮುನಿಹೃದಯ ಮಂದಿರ ವಾಸನ ಜಗದೀಶನ ಸ್ಮರಣೆ ಮಾತ್ರದಿ ದುರಿತರಾಶಿಯ ತರಿದನ ಸುಖಗರೆವನ 11 ದೇವಕೀ ವಸುದೇವ ಸುತನೆಂದೆನಿಪನ ಜಗಕಧಿಪನ ಮಾವನನು ಸಂಹರಿಸಿ ಶಕಟನ ಕೊಂದನ ಆನಂದನ ಗೋವು ಕಾಯುತ ಗಿರಿಯ ಬೆರಳಲಿ ಆಂತನ ಬಹುಶಾಂತನ ಗೋವ್ರಜದಿ ಗೋಪಿಯರ ವಸನವ ಕಳೆದನ ಅಹಿತುಳಿದನ 12 ಲೋಕನಾಥನು ಪಾರ್ಥಸಾರಥಿಯಾದನ ಸುಪ್ರಮೋದನ ನೇಕ ಪರಿಭಗವತ್ಸುಗೀತೆಯ ಪೇಳ್ದನ ತಮಸೀಳ್ದನ ಆ ಕುರು ಕುಲವ ತರಿದ ಪಾಂಡವ ಪ್ರಾಣನ ಸುಪ್ರವೀಣನ ಆಕುರುಪ ಭೀಷ್ಮನಿಗೆ ಮುಕ್ತಿಯ ಕೊಟ್ಟನ ಅತಿಶ್ರೇಷ್ಟನ 13 ಕಪಟನಾಟಕ ನಗ್ನರೂಪದಿ ನಿಂತನ ನಿಶ್ಚಿಂತನ ತ್ರಿಪುರದಲಿ ಜಲಜಾಕ್ಷಿಯರ ವ್ರತ ಭÀಂಗನ ನಿಸ್ಸಂಗನ ಕೃಪಣವತ್ಸಲ ತುರಗವೇರಿ ತಾನಡೆದನ ಅಸಿಪಿಡಿದನ ಅಪರಿಮಿತ ಬಹುಕ್ರೂರ ಯವನ ವಿಘಾತನ ಪ್ರಖ್ಯಾತನ 14 ಈ ವಿಧದಿ ಬಹುಲೀಲೆ ಗೈವ ಸುಚರಿತನ ಜಗಭರಿತನ ಭಾವಶುದ್ಧಿಲಿ ಭಜಿಸುವವರಘಕಡಿವನ ಗತಿಕೊಡುವನ ಪಾವಮಾನಿ ಮತಾನುಗರ ಕರಪಿಡಿವನ ಭವತಡೆವನ ದೇವತತಿ ಸದ್ವಿನುತ ವರದೇಶ ವಿಠಲನ ನಿಷ್ಕುಟಿಲನ 15
--------------
ವರದೇಶವಿಠಲ
ಸ್ಮರಿಸೈ ಸತತವು ಸಂಸ್ಮರಿಸೈ ಸತತವು ಪ ಯತಿಗುಣ ಭೂಷಣ ವ್ಯಾಸ ಯತೀಂದ್ರರ ಅ.ಪ ಗುರುಬ್ರಹ್ಮಣ್ಯರ ಕರಕಮಲದಿ ಪುಟ್ಟಿ ಪರಮ ಕೀರುತಿಯಿಂದ ಮೆರೆದ ಯತೀಂದ್ರರ 1 ಸುಖಬೋಧ ಸದಾಗಮಸಾರವ ನಿಜ ಮುಖದಿಂದ ಭೂಸುರರೊಳಗರುಹಿದವರ 2 ಚಂದ್ರಿಕಾ ನ್ಯಾಯಾಮೃತ ತರ್ಕತಾಂಡವ ಚಂದದಿ ರಚಿಸಿ ಆನಂದಗೊಂಡವರ 3 ವರಕರ್ಣಾಟಕ ಸಿಂಹಾಸನದಲಿ ಮರಕತಮಣಿಯಭೀಷೇಕ ಪಡೆದವರ 4 ಉನ್ನತ ಗುಣ ಸುಖ ಚಿನ್ಮಯ ರೂಪ ಪ್ರ ಸನ್ನ ಶ್ರೀರಾಮನ ಭಕುತವರೇಣ್ಯರ 5
--------------
ವಿದ್ಯಾಪ್ರಸನ್ನತೀರ್ಥರು
ಸ್ಮರಿಸೋ ಎಲೆ ಮನವೇ | ಜಗದಯ್ಯನಾ | ಸ್ಮರಿಸೋ ಶಿವಸುಖ ಬೆರಿಸೊ ಭವದಿಂದ | ತರಿಸೊ ಗಿರಿಜಾ ರಮಣನ ಪ ಫಣಿಯಾಗಣ್ಣಿ ನೋರಣಿಯಾ | ಸದಮಲ | ಫಣಿಯಾ ಭರಣ ಭೂಷಣಿಯಾ | ಮುಕುತಿಯಾ | ಹೋಣೆಯಾ ಕೊಡಲಿಕ್ಕೆ ದಣಿಯಾನೆಂದು ಬೇಡುವರಾ 1 ಒಡಿಯನೆನ್ನದೆ ನಡಿಯಾ | ಅಂಗಜನಾ | ಹುಡಿಯಾ ಮಾಡಿದ ನಡಿಯಾ ಶರಣೆಂದು | ಪಿಡಿಯಾಲವರಿಗೆ ಪಡಿಯಾ | ನಿತ್ತು ಹೊರೆವನಾ 2 ಯತಿಯಾ ಆನಂದ ಸ್ಥಿತಿಯಾ | ಪುಣ್ಯ | ಮೂರುತಿಯಾ ವಿಮಲ ಕೀರುತಿಯಾ | ಗುರುಮಹೀ | ಪತಿಯಾ ನಂದನ ಸಾರಥಿಯಾನಾದಿ ಮಹಿಮನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು