ಒಟ್ಟು 5909 ಕಡೆಗಳಲ್ಲಿ , 130 ದಾಸರು , 3764 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನವವಿಧ ಭಕುತಿ ಶ್ರವಣದಿಂದಲಿ ಪಾಪಹರಣವಾಗುವುದೆಂದು ಕವಿಗಳೆಲ್ಲರು ಕೂಗಿ ಒದರುತಿಹರು ಕಿವಿಗಳಿಗಾನಂದದಾಭರಣದಂತಿಹುದು ಶ್ರೀ- ಹರಿಯ ದಿವ್ಯನಾಮಾಮೃತದರಸವು ಮಾಧವನ ಮೂರ್ತಿಯನು ನೋಡದಿಹ ಕಂಗಳು ನವಿಲು ಕಣ್ಣುಗಳೆಂದು ಪೇಳುತಿಹರು ಕಮಲನಾಭ ವಿಠ್ಠಲನ ಮಹಿಮೆ ಪೊಗಳೆ ಫಣಿರಾಜನಿಗೆ ವಶವಲ್ಲ ದೇವಾ 1 ಕೀರ್ತನವು ಮಾಡಲು ಪಾತಕವು ಪರಿಹರವು ಮಾತುಳಾಂತಕನ ಮಹಿಮೆ ಘನವು ಶ್ರೀಶನನು ಮನದಣಿಯ ಸ್ತೋತ್ರವನು ಮಾಡಲು ನಾಶಗೈವನು ದುರಿತರಾಶಿಗಳನು ಮಾಡಿದಪರಾಧಗಳ ಮಾಧವನು ಮನ್ನಿಸುವ ಶ್ರೀಧರನ ಸ್ತುತಿಸಿ ಕೊಂಡಾಡುತಿಹರ ಕರುಣಾಕರ ಕಮಲನಾಭವಿಠ್ಠಲ ದುರಿತದೂರನು ಕಾಯ್ವ ಶರಣಜನರ 2 ಸ್ಮರಣೆಯನು ಮಾಡುತಿಹ ಮನುಜರಿಗೆ ಇಹಪರದಿ ಪರಮ ಮಂಗಳನೀವ ಪರಮಾತ್ಮನು ದುರಿತ ದೂರನ ಪಾದಸ್ಮರಣೆ ಮಾಡುವರಿಗೆ ಪರಿಪರಿಯ ಸೌಖ್ಯಗಳ ಕೊಡುವ ದೇವ ಮಧುವೈರಿಯನು ಸ್ಮರಿಸೆ ಮುದದಿ ಸಂಪದವೀವ ಮೂರ್ತಿ ಶ್ರೀಮಾಧವ ಕನಕಗರ್ಭನ ಪಿತನು ಕರುಣಾನಿಧಿಯು ಕಮಲನಾಭ ವಿಠ್ಠಲ ಕಾಯ್ವ ಸುಜನರ3 ಶಿಲೆಯಾದ ಅಹಲ್ಯೆಯ ಪರಿಪಾಲಿಸಿದ ಪಾದ ಧರಣಿ ಈರಡಿಗೈದ ದಿವ್ಯಪಾದ ಫಣಿ ಹೆಡೆಯ ತುಳಿದ ಪಾದ ವರ ಋಷಿಗಳೆಲ್ಲ ವಂದಿಸುವ ಪಾದ ಇಂದಿರಾದೇವಿ ಬಹುಚಂದದಿಂದೊತ್ತುತ ಕಂದರ್ಪನಯ್ಯನಿಗೆ ಪಾದಸೇವ ಚಂದದಿಂದಲಿ ಮಾಡಿ ಮಾಧವನಿಗೆ ನಂದಗೋಪಿಯ ಕಂದ ಸಲಹುಎನಲು ಸುಂದರ ಶ್ರೀ ಕಮಲನಾಭ ವಿಠ್ಠಲನು ಒಲಿವ 4 ಅರ್ಚಿಸುತ ಮೆಚ್ಚಿಸುತ ಸಚ್ಚಿದಾನಂದನನು ಸ್ವಚ್ಛ ಭಕುತಿಲಿ ಸ್ತೋತ್ರ ಮಾಡುತಿಹರ ಅಷ್ಟ ಐಶ್ವರ್ಯಪ್ರದನು ನಿತ್ಯಮುಕ್ತಳ ಕೂಡಿ ಭಕ್ತರ ಹೃದಯದಲಿ ಪೊಳೆವ ದೇವ ಸತ್ಯ ಸಂಕಲ್ಪನಿಗೆ ಕಸ್ತೂರಿ ತಿಲಕವು ಮತ್ತೆ ಪಾವಡಿ ಥಳಥಳನೆ ಹೊಳೆಯೆ ಸುತ್ತ ಬ್ರಹ್ಮಾದಿಗಳ ಸ್ತುತಿಗೆ ದೇವ ಚಿತ್ತವಿಟ್ಟು ಕೇಳ್ವ ಮಾಧವನು ಮುದದಿ ಕರ್ತೃ ಕಮಲನಾಭ ವಿಠ್ಠಲನು ಕಾಯ್ವ 5 ವಂದನೆಯನು ಮಾಡೆ ಮುಕುಂದನು ಒಲಿವನು ಮುದದಿ ಕಂದರ್ಪನಯ್ಯ ಕಮಲಾಕ್ಷ ಹರಿಯೂ ಸುಂದರಾಂಗ ಶ್ರೀಹರಿಗೆ ಗಂಧ ಪೂಸಿದಳಾಗ ಇಂದೀವರಾಕ್ಷಿ ನಸುನಗುತ ಬೇಗ ಇಂದ್ರಾದಿ ಸುರರೆಲ್ಲ ಕೊಂಡಾಡೆ ಮಾಧವನ ವಂದಿಸುತ ಸಿರಬಾಗಿ ಚಂದದಿಂದ ಮಂದಾರ ಪಾರಿಜಾತಗಳ ತಂದು ತಂದೆ ಕಮಲನಾಭ ವಿಠ್ಠಲನ ಮುಡಿಗೆ ಸಂಭ್ರಮದಿ ಮಳೆಗರೆಯೆ ಚಂದದಿಂದ 6 ದಾಸ್ಯವನು ಕೈಕೊಂಬ ದಾಸ್ಯಜನರನು ಪೊರೆವ ಮೀಸಲಾಗಿಹನು ಹರಿದಾಸ ಜನಕೆ ಪೋಷಿಸೆಂದೆನುವವರ ದೋಷಗಳನೀಡಾಡಿ ದೋಷರಹಿತನು ಪೊರೆವ ಸರ್ವಜನರ ಪೂಸಿ ಪರಿಮಳ ದ್ರವ್ಯ ಶ್ರೀಸಹಿತ ಮೆರೆವ ವಾಸುಕೀಶಯನ ಸಜ್ಜನರ ಪೊರೆವ ಮುರಳೀಧರ ಮಾಧವನು ಕರುಣದಿಂದ ಶರಣ ಜನರನು ಪೊರೆವ ಮರೆಯದೀಗ ಕಮಲನಾಭವಿಠ್ಠಲನು ಕಾಯ್ವದೇವ 7 ಸಖ್ಯ ಸ್ನೇಹಗಳಿಂದ ಮುತ್ತಿನ್ಹಾರಗಳನು ಕೃಷ್ಣನ ಕೊರಳಿಗ್ಹಾಕುತಲಿಬೇಗ ಅರ್ಥಿಯಿಂದಲಿ ರತ್ನ ಮುತ್ತಿನ ಚಂಡುಗಳ ವಿಚಿತ್ರದಿಂದಾಡುತಿರೆ ನೋಡಿ ಸುರರು ಮುತ್ತಿನಕ್ಷತೆಗಳನು ಮಾಧವನ ಸಿರಿಮುಡಿಗೆ ಅರ್ಥಿಯಿಂದ ಸುರಿಸುತಿರೆ ಹರುಷದಿಂದ ಅಪ್ರಮೇಯನು ಶ್ರೀಶ ಶ್ರೀನಿವಾಸ ಸರ್ಪಶಯನನು ಕಮಲನಾಭ ವಿಠ್ಠಲ ನಿತ್ಯ ತೃಪ್ತನು ಪೊಳೆವ ಭಕ್ತರ ಹೃದಯದಲಿ 8 ನಿತ್ಯ ತೃಪ್ತಗೆ ಮಾಡಿ ಅರ್ಥಿಯಲಿ ಅಪ್ರಮೇಯನನು ಸ್ತುತಿಸಿ ಮುತ್ತು ಮಾಣಿಕ್ಯ ಬಿಗಿದ ತಟ್ಟೆಯಲಿ ತಾಂಬೂಲ ಅಚ್ಚುತಾನಂತನಿಗೆ ಅರ್ಪಿಸುತಲಿ ಭಕ್ತಿಯಲಿ ವಂದನೆಯ ಭಕ್ತವತ್ಸಲನಿಗೆ ನಿತ್ಯ ಮುಕ್ತಳು ಮಾಡಿ ಹರುಷದಿಂದ ಸತ್ಯ ಸಂಕಲ್ಪ ಶ್ರೀ ಮಾಧವನಿಗೆ ಮುತ್ತಿನಾರತಿ ಬೆಳಗಿ ಅರ್ಥಿಯಿಂದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ಕೊಂಡಾಡಿ9
--------------
ನಿಡಗುರುಕಿ ಜೀವೂಬಾಯಿ
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನಳಿನಿಯ ಬಳಿಯಲಿ ಕುಳಿತ ಮರಾಳಾ ಕೊಳಲಿನ ಬಾಲನು ಬಂದರೆ ಹೇಳಾ ಪ ಪುಳಿನದ ಕೊಳದಲಿ ಕುಳಿತು ಕಾಯುವಳಾ ಗೆಳತಿಯೆ ರಾಧೆಯು ಅವಳನು ಕೇಳಾ ಅ.ಪ ತರುಗಳ ಮರೆಯಲಿ ತುರುಗಳ ನೆರೆಯಲಿ ಕರುಗಳ ಜೊತೆಯಲಿ ನಲಿಯುತಲಿ ಅರಳಿದ ಹೂಗಳ ಪರಿಮಳ ಭಾರದಲಿ ಮೆರೆವಲತೆಯ ಬಳಿ ಇರುವನು ಒಲವಿನಲಿ 1 ಮುರಳಿಯ ನಾದವನೆಲ್ಲೆಡೆಗೆರೆವ ತರುಣಿಯರೀವಾ ಬೆಣ್ಣೆಯ ಮೆಲುವಾ ಮೆರೆವಪೀತಾಂಬರ ಉಡಿಗೆಯೊಳೆಸೆವ ಶರಣೆಂದೊಡೆ ನವಚೇತನವೀವ 2 ಪಾಡಿಪೊಗಳುವರ ಕೂಡ ನರ್ತಿಸುವಾ ನಾಡೆ ನರ್ತಿಸುವರ ನೋಡುತ ನಗುವ ಬೇಡಿದ ವರಗಳ ನೀಡುತ ನಗುವ ಮಾಡೆ ವಂದನೆಗಳ ಓಡಿಬಂದಪ್ಪುವ 3 ಜೊನ್ನದ ಬಣ್ಣವ ಹಳಿಯುತೆ ಬೆಳಗುವ ಚೆನ್ನ ಮರಾಳವೆ ನಿನ್ನೆಡೆ ಬರುವ ಅನ್ನೆಗಮೆನ್ನನೀ ಕರೆಯಲು ಮಾಡುವ ಸನ್ನೆಯ ಕಂಡೋಡಿ ಪಿಡಿಯುವೆ ಚರಣವ 4 ಬಾಲೆಯರೊಡನೆ ಕೋಲಾಟವನಾಡುವ ನೀಲಾಂಬರ ಘನ ಶ್ಯಾಮನವ ಮೇಲೆನಿಸುವ ವನಮಾಲೆಯಿಂದೆಸೆವ ಬಾಲನವನು ಮಾಂಗಿರಿಗೆ ಬಾರೆನುವ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾ ನೋಡಿ ಬಂದೆ ಕೇಳಮ್ಮ ಗೆಳತಿ ಪ ನಾನಿಲ್ಲ ನೀನಿಲ್ಲ ಏನಂದರೇನಿಲ್ಲ ಕಾಣುವ ಮಾತಲ್ಲ ಜಾಣೆ ಸುಳ್ಳಲ್ಲ ಅ.ಪ ಹಸುರಿಲ್ಲ ಕೆಂಪಿಲ್ಲ ಪಶುವಿಲ್ಲ ಪಕ್ಷಿಲ್ಲ ವಸುಧಿಲ್ಲ ಉದಧಿಲ್ಲ ವ್ಯಸನಿಲ್ಲ ಬಂಧವಿಲ್ಲ ಹಸಿವಿಲ್ಲ ತೃಷೆಯಿಲ್ಲ ದೆಸೆಯಿಲ್ಲ ದಿಕ್ಕಿಲ್ಲ ನಿಶೆಯಿಲ್ಲ ದಿವಯಿಲ್ಲ ಕುಸುಮಾಕ್ಷಿ ಸುಳ್ಳಲ್ಲ 1 ಜಲವಿಲ್ಲ ಗಗನಿಲ್ಲ ನೆಲವಿಲ್ಲ ಗಿರಿಯಿಲ್ಲ ಕುಲವಿಲ್ಲ ಚಲವಿಲ್ಲ ಮಲಿನಿಲ್ಲ ಶೀಲಿಲ್ಲ ಜಳಕಿಲ್ಲ ಊಟಿಲ್ಲ ಬೆಳಕಿಲ್ಲ ಕಾಳಿಲ್ಲ ತಳಿಯಿಲ್ಲ ತಮಯಿಲ್ಲ ಲಲನೆ ಸುಳ್ಳಲ್ಲ 2 ಕೃಪೆಯಿಲ್ಲ ಕಪಟಿಲ್ಲ ಜಪವಿಲ್ಲ ತಪವಿಲ್ಲ ಗುಪಿತಿಲ್ಲ ಬೈಲಿಲ್ಲ ನೆಪ್ಪಿಲ್ಲ ಮರೆವಿಲ್ಲ ವಿಪಿನಿಲ್ಲ ಸದನಿಲ್ಲ ರಿಪುವಿಲ್ಲ ಸ್ನೇಹವಿಲ್ಲ ಅಪ್ಪಯಿಲ್ಲ ಅವ್ವಯಿಲ್ಲ ನಿಪುಣೆ ಸುಳ್ಳಲ್ಲ 3 ರಾಗಿಲ್ಲ ರಚನಿಲ್ಲ ಯಾಗಿಲ್ಲ ಯಜ್ಞಿಲ್ಲ ತ್ಯಾಗಿಲ್ಲ ತ್ಯಜನಿಲ್ಲ ಭೋಗಿಲ್ಲ ಭಾಗ್ಗ್ಯಿಲ್ಲ ರೋಗಿಲ್ಲ ಶ್ರಮವಿಲ್ಲ ಬೈಗಿಲ್ಲ ಬೆಳಗಿಲ್ಲ ಯಾಗಿಲ್ಲ ಪಾಪವಿಲ್ಲ ಭಗಿನಿ ಸುಳ್ಳಲ್ಲ 4 ಹೋಮವಿಲ್ಲ ವಿಪ್ರಿಲ್ಲ ಧೂಮವಿಲ್ಲ ಧೂಳಿಲ್ಲ ಭೂಮಿಲ್ಲ ಜನನಿಲ್ಲ ಕಾಮಿಲ್ಲ ಮರಣಿಲ್ಲ ನೇಮಿಲ್ಲ ಕ್ರಿಯವಿಲ್ಲ ನಾಮಿಲ್ಲ ರೂಪಿಲ್ಲ ಸ್ವಾಮಿ ಶ್ರೀರಾಮ ಬಲ್ಲ ಭಾಮೆ ಸುಳ್ಳಲ್ಲ 5
--------------
ರಾಮದಾಸರು
ನಾಕಾಧಿಪ ಮುನಿಜನವರದಾಮೆಯಾ ಪ ಲೋಕೇಶನುತ ಕಂಜಲೋಚನಾಮೆಯಾ ಸಾಕಾರ ಭೋಗೀಶ್ವರ ಮಂಜುಳಚರಣಾ ಅ.ಪ ಉದಿತ ಭಾಸ್ಕರಹಿತನಾಥನಾಧಾರೇ 1 ವರವೇಲಾಪುರವಾಸ ವೈಕುಂಠ ಸರ್ವೇಶಾ2
--------------
ಬೇಲೂರು ವೈಕುಂಠದಾಸರು
ನಾಕೇಶ ವಿನುತೆ | ರ ತ್ನಾಕರನ ತಾಯೆ ಪ ಗೋಕುಲದೊಳಿದ್ದು | ಆಕಳ ಕಾಯ್ದಗೆ ಲೋಕಪಾವನೆ ಸಿರಿಯೆ ಅ.ಪ ನೀರೊಳಗೆ ಇದ್ದು ನಗಭಾರ ಬೆನ್ನಲಿಪೊತ್ತು ಬೇರು ಮೆಲ್ಲುವನಿಗೆ | ಚೀರಿ ಕಂಭದಿ ಬಂದು | ಘೋರ ರೂಪದಿ ಬಲಿ ದ್ವಾರ ಕಾಯ್ದವಗೆ | ವೀರ ನೆನಿಸಿ ಪೆತ್ತ | ನಾರಿಯ ಶಿರವ ಸಂ ಹಾರಮಾಡಿದವಗೆ | ಭೂರುಹಚರ ಪರಿವಾರ ದೊಳಗಿದ್ದು ದಧಿ ಚೋರನೆನಿಸಿದವಗೆ 1 ಸಂದೇಹವಿಲ್ಲದೆ ವಸನ ತ್ಯಜಿಸುತ ಬಂದು ನಿಂದವನಿಗೆ | ಇಂದಿರಾಧವ ನಿನ್ನ ಹಿಂದೆ ಬಂದವನ ಅಂದು ಕೊಂಡವನಿಗೆ | ಕುಂದರದನೆ ನಿನ್ನ ಪೊಂದದೆ ಛಂದದಿ ಕಂದರ ಪಡೆದವಗೆ 2 ಜಾತಿಯನರಿಯದೆ ಶಬರಿಯ ಎಂಜಲ ಪ್ರೀತಿಲಿ ಉಂಡವಗೆ ಶ್ವೇತವಾಹನಜಗೆ ತಾ ಸೂತನೆಂದೆನಿಸುತ ಖ್ಯಾತಿ ಪಡೆದವಗೆ ನೀತಿ ಇಲ್ಲದೆಯ ಮಾತೆಯ ಅನುಜನ ಘಾತಿಸಿದಾತನಿಗೆ || ವಾತಾಶನವರ ತಲ್ಪದೊಳು ಮಲಗಿದ ಶಾಮಸುಂದರ ಧೊರೆಗೆ 3
--------------
ಶಾಮಸುಂದರ ವಿಠಲ
ನಾಗವೇಣಿಯೆಂದರೆ ಹೀಗೇಕೆ ಮಾಳ್ಪಿರಿ ಬಾಗಿಲು ಕುಟ್ಟುವುದೇಕೆ ನೀವ್ ಪ ಬಾಗಿಲು ಬಿಡುವೊಡೆ ಹೇಗದು ಸಾಧ್ಯವೊ ಬೇಗ ಹೇಳು ನೀನಾರು ಇನ್ನು ಅ.ಪ. ಆಗಮ ಕದ್ದೊಯ್ದ ಅಸುರನ ಕೊಂದು ನಾ ನಾನಾಗಲೆ ನಾಲ್ಮೊಗಗಿತ್ತೆ ಕೇಳಿ ಆಗಲೆ ಆಗಮದಲಿ ನಿನಗರ್ತಿಯಷ್ಟಿದ್ದರೆ ಮೂಗನ್ಹಿಡಿದು ಕೂಡೋ ಬೇಗ 1 ಮೂಗನ್ಹಿಡಿವ ಒಣಯೋಗಿಯು ನಾನಲ್ಲ ಆ ಗಿರಿಯನು ನಾ ಪೊತ್ತೆ ಕೇಳಿ ಈಗ ನಾವರಿದೆವು ನೀ ಗಿರಿ ಹೊರವಡೆ ಇಂದು 2 ಕಳ್ಳನಲ್ಲ ಭೂಮಿ ಕಳ್ಳನ ಕೊಂದೆನೆ ಸೂಕರ ನಾನಾಗಿ ಕೇಳಿ ಘೊಳ್ಳನೆ ನಗುವರು ಕೇಳಿದವರು ಇದ ಮೆಲ್ಲು ಹೋಗಿ ನೀ ಮಣ್ಣ 3 ಮಣ್ಣು ಮಾತೇಕೆ ಹಿರಣ್ಯಕನನು ಕೊಂದೆ ಚಿಣ್ಣನ ಕಾಯ್ದೆನು ಕೇಳಿ ಚಿಣ್ಣರ ಸಾಕ್ಷಿಯ ಬಿಟ್ಟರೆ ನಿನಗಿಲ್ಲ ಚಿಣ್ಣನಾಗು ನೀ ಹೋಗÉೂ 4 ಸಣ್ಣವನಾದರೂ ಘನ್ನನು ನಾನಾದೆ ಪುಣ್ಯನದಿಯ ನಾ ಪೆತ್ತೆ ಕೇಳಿ ಬಿನ್ನಾಣ ಮಾತಿಗೆ ಸೋಲುವರಲ್ಲವೊ ಬೆನ್ನು ತಿರುಗಿಸಿ ನೀ ಪೋಗೊ5 ತಿರುಗಿಸಿದವನಲ್ಲ ಬೆನ್ನನೊಬ್ಬರಿಗೂ ನಾ ಪರಶುಧರನು ನಾ ಕೇಳಿ ಅರಸರಲ್ಲ ನಾವ್ ಸರಸಿಜನೇತ್ರೆಯರು ಕರುಣರಹಿತ ನೀ ಪೋಗೊ 6 ಚರಣರಜದಿ ನಾ ಶಿಲೆಯನುದ್ಧರಿಸಿದೆ ಕರುಣರಹಿತನೆ ಪೇಳಿ ನೀವು ಸರಸ ಮಾತುಗಳನು ಮನ್ನಿಸಿ ಎಮ್ಮನು ಕರಿಗಿರೀಶ ನೀ ಕಾಯೋ ಸ್ವಾಮಿ 7
--------------
ವರಾವಾಣಿರಾಮರಾಯದಾಸರು
ನಾಗಶಯನನು ನಿನಗಾಗಿಯೆ ಬಂದಿಹೆÉ ಬಾಗಿಲ ತೆಗೆಯೆ ಭಾಮೆ ನೀ ಬಾಗಿಲ ತೆಗೆಯೆ ಭಾಮೆ ಪ. ಕೂಗುವ ನೀನ್ಯಾರೊ ಈಗ ಹೊತ್ತಲ್ಲ ಕೂಗಬೇಡ ಪೋಗೋ ನೀ ಕೂಗಬೇಡ ಪೋಗೋಅ.ಪ. ನಿಗಮ ಚೋರನ ಗೆದ್ದ ನೀರಜಾಕ್ಷನೆ ಭಾಮೆ ನಾ ನೀರಜಾಕ್ಷನೆ ಭಾಮೆ ನಾರುವ ಮೈಯನ್ನು ಎನ್ನಲ್ಲಿ ತೋರದೆ ಸಾರು ಸಾರು ನೀ ದೂರ ರಂಗ ಸಾರು ಸಾರು ನೀ ದೂರ 1 ಮಂದರ ಗಿರಿಯನು ಬೆನ್ನಲಿ ಪೊತ್ತ ಇಂದಿರೆಯರಸನೆ ಭಾಮೆ ನಾ- ನಿಂದಿರೆಯರಸನೆ ಭಾಮೆ ಇಂದು ನಿನಗೆ ತಕ್ಕ ಭಾರಗಳಿಲ್ಲವು ಸಿಂಧುವಿನೊಳು ನೀ ಪೋಗೈ ಕೃಷ್ಣ ಸಿಂಧುವಿನೊಳು ನೀ ಪೋಗೈ 2 ಧರಣಿಗೆ ಸುಖವನು ತೋರಿದ ಸೂಕರ ಪರಮಪುರುಷನೆ ಭಾಮೆ ನಾ ಪರಮ ಪುರುಷನೆ ಭಾಮೆ ವರಾಹರೂಪದ ನಿನ್ನ ಗುರುಗುರು ಶಬ್ದವ ಅರಿವಳಲ್ಲವೊ ನೀ ಪೋಗೈ ರಂಗ ಅರಿವಳಲ್ಲವೊ ನೀ ಪೋಗೈ 3 ಬಾಲನ ತಾಪವ ಕೋಪದಿ ತರಿದ ನಾರಸಿಂಹನೆ ಭಾಮೆ ನಾ ನಾರÀಸಿಂಹನೆ ಭಾಮೆ ಜ್ವಾಲೆಯ ವದನ ಕ್ರೂರ ಕಾರ್ಯಂಗಳ ಕೇಳಿ ಅಂಜುವಳಲ್ಲ ಪೋಗೈ ರಂಗ ಕೇಳಿ ಅಂಜುವಳಲ್ಲ ಪೋಗೈ 4 ವಾಸವನನುಜನೆ ವಾಮನರೂಪನೆ ನಾಶರಹಿತನೆ ಭಾಮೆ ನಾ ನಾಶರಹಿತನೆ ಭಾಮೆ ಕೂಸಿನ ರೂಪದಿ ಮೋಸವ ಮಾಡಿದಗೆ ದಾಸಿ[ಯೊ]ಬ್ಬಳು ಬೇಕೇ ರಂಗ ದಾಸಿ[ಯೊ]ಬ್ಬಳು ಬೇಕೇ 5 ತಾತನ ಮಾತಿಗೆ ತಾಯಿಯನಳಿದ ಖ್ಯಾತ ಭಾರ್ಗವನೆ ಭಾಮೆ ನಾ ಖ್ಯಾತ ಭಾರ್ಗವನೆ ಭಾಮೆ ಮಾತೆಯನಳಿದ ಘಾತಕ ನಿನಗೆ ದೂತಿಯೊಬ್ಬಳು ಬೇಕೇ ರಂಗ ದೂತಿಯೊಬ್ಬಳು ಬೇಕೇ 6 ದಶರಥನಂದನ ದಶಮುಖಭಂಜನ ಪಶುಪತಿವಂದ್ಯನೆ ಭಾಮೆ ನಾ ಪಶುಪತಿ ವಂದ್ಯನೆ ಭಾಮೆ ಹಸನಾದ ಏಕಪತ್ನೀವ್ರತದವಗೆ ಸುದತಿಯೊಬ್ಬಳು ಬೇಕೇ ರಂಗ ಸುದತಿಯೊಬ್ಬಳು ಬೇಕೇ 7 ಹದಿನಾರು ಸಾಸಿರ ನೂರೆಂಟು ಸುದತೇರ ಬದಿಯಲಿಟ್ಟವನೆ ಭಾಮೆ ನಾ ಬದಿಯಲಿಟ್ಟವನೆ ಭಾಮೆ ಹದನಕ್ಕೆ ಬಾರದ ಮಾರ್ಗಂಗಳ್ಯಾತಕ್ಕೆ ವದನ ಮುಚ್ಚಿಕೊಂಡು ಪೋಗೈ 8 ಬೌದ್ಧರಕುಲದಲ್ಲಿ ಹುಟ್ಟಿ ಅವರಂತೆ ಮುಗ್ಧರ ಮಾಡಿದೆ ಭಾಮೆ ನಾ ಮುಗ್ಧರ ಮಾಡಿದೆ ಭಾಮೆ ಶುದ್ಧಗುಣಗಳೆಲ್ಲ ಇದ್ದಲ್ಲಿಗೆಪೇಳೆ ವೃದ್ಧಳು ನಾನಲ್ಲ ಪೋಗೈ ರಂಗ ವೃದ್ಧಳು ನಾನಲ್ಲ ಪೋಗೈ 9 ವರ ತುರಗವನೇರಿ ಧರೆಯೆಲ್ಲ ಚರಿಸಿದ ದೊರೆವರ ನಾನೆ ಭಾಮೆ ಚರಿಸಿದ ದೊರೆವರ ನಾನೆ ತÀುರಗದ ಚಾಕರಿಯೊ[ಳಗಿರುವವನಿಗೆ] ತರುಣಿಯ ಭೋಗವು ಬೇಕೇ ರಂಗ ತರುಣಿಯ ಭೋಗವು ಬೇಕೇ 10 ಸರುವ ಪ್ರಾಣಿಗಳ ಉದರದೊಳಿಂಬಿಟ್ಟು ಶರಧಿಯೊಳ್ಮಲಗಿದವ ಭಾಮೆ ನಾ ಶರಧಿಯೊಳ್ಮಲಗಿದವ ಭಾಮೆ ದೊರೆ ಹಯವದನ ಚರಣಕ್ಕೆರಗುತ ತೆರೆದಳು ಬಾಗಿಲ ಭಾಮೆ ಆಗ ತೆರೆದಳು ಬಾಗಿಲ ಭಾಮೆ 11
--------------
ವಾದಿರಾಜ
ನಾಟ್ಯವಾಡಿದನು ರಂಗ ಮಂಗಳಾಂಗ ಪ. ನಾಟ್ಯವಾಡಿ ಶಕಟಾಂತಕ ಕೃಷ್ಣ ನೋಟಕರಿಗೆ ತನ್ನಾಟ ತೋರಿ ಭಂಗ ಜಗದಂಗ ಧಿಕಿಟದಿಂ ತದಾಗಿಣ ತೋಂ ತರನಾನಂದದಿ ಸುಂದರನಾಟ್ಯ ಅ.ಪ. ಅಪ್ರಮೇಯ ಹರಿ ತನುಭವ ಬಲರಾಮರ ಜತೆ ಸೇರಿ ಅನುನಯದಲಿ ಗೋವನು ಕಾಯುತಲಿರೆ ಪೀತಾಂಬರಧರನಾಟವ ನೋಡುವೆನೆಂದು ಸಾಟಿಯಿಲ್ಲದ ವಿಷಮಡುವಿಲಿ ಕಾಳಿಂಗ ನೀಟಿಲಿ ಕುಳ್ಳಿರೆ ಓಟದಿ ಪಶುಗಳು ನೀರಾಟದಿ ಕುಡಿಯಲು ನಾಟಿ ಗಾರಾದ ನೆಲಕುರುಳಲು ರಂಗ ಕೋಟಿಪ್ರಕಾಶ ಕಾಳಿಂಗನಾಟ ತೋರುವೆನೆಂದೂ ಧಿಕಿಟ1 ದುಷ್ಟನ ವಿಷಮಯ ನೀರನು ಕುಡಿದು ಉತ್ಕøಷ್ಟ ಗೋವು ಮೂರ್ಛೆಯ ಪೊಂದೆ ಪುಟ್ಟ ಬಾಲಕರು ಕೃಷ್ಣಗೆ ಪೇಳಲಾ ತಟ್ಟನೆ ಕಡಹದ ಮರವೇರುತ ಧುಮುಕೆ ಪುಟ್ಟ ರಂಗನೆಂದು ಬಿಟ್ಟನೆ ದುಷ್ಟನು ಸುತ್ತಿ ಬಾಲ ಕುಟ್ಟುಪ್ಪಳಿಶಿದನು ಕಷ್ಟವೆ ರಂಗಗೆ ನಿಷ್ಟುರ ಭಕ್ತರು ಶಿಷ್ಟಾಚಾರದಿ ಮೆಟ್ಟಿ ಬಾಲ ಕೈಗಿಟ್ಟು ತವಕದಿ ದಿಟ್ಟ ಶ್ರೀ ಕೃಷ್ಣ ಥಕಥೈ ತದಿಗಿಣಝಂ ಆನಂದ ನಾಟ್ಯ 2 ಅಂಬುಜೋದ್ಭವನ ನಾಟ್ಯವ ನೋಡೆ ಕುಂಭಿಣಿ ತಳದಾಕಾಶದಿ ಸುರರು ತುಂಬುರು ನಾರದ ಸಂಭ್ರಮಗಾನ ರಂಭಾದ್ಯಪ್ಸರ ಸ್ತ್ರೀರಂಭರ ನಾಟ್ಯ ಅಂಬರದಿಂ ಪೂಮಳೆ ರಂಗಗೆರೆಯೆ ಜಗಂಗಳು ನೋಡೆ ಶ್ರಿಂಗರ ಶ್ರೀ ಶ್ರೀನಿವಾಸಗೆ ಗೋಪಿ ರಂಗ ಬಾರೆನುತಲೆ ಮಂಗಳಾರುತಿ ಮೂರ್ತಿ ಕಾಳಿಂಗಭಂಗ ನಾಟ್ಯ 3
--------------
ಸರಸ್ವತಿ ಬಾಯಿ
ನಾಥಾ ನಮಿಪೆ ನಿನಗೇ | ಶ್ರೀ ಬದರೀನಾಥಾ ನಮಿಪೆ ನಮಿಪೆ ನಿನಗೆ ಪ ನಾಥಾ ಜಗಕೆ ಸರ್ವಾ | ನಾಥ ಜನರ ಪಾಲಭೀತಿ ರಹಿತ ಬದರಿ | ನಾಥ ವಿಚಿತ್ರ ಶಕ್ತಾ ಅ.ಪ. ಸರ್ವ ಪ್ರಾಭವ ಶಕುತೀ | ರಕ್ಷಣ ಲಯಸರ್ವ ವಿಚಿತ್ರ ಶಕುತೀ ||ಪರ್ವ ಪರ್ವಗಳಲ್ಲಿ | ಸರ್ವಾಸ್ಥಿ ಮಜ್ಜದಲಿಸರ್ವ ದೇಹದಿ ನಿಂತು | ಸರ್ವ ಕಾರ್ಯವ ಮಾಳ್ಪೇ ||ದ್ರುತ :- ಪರ್ವತ ಸುತೆ ಪ್ರಿಯ | ಶರ್ವನೊಡೆಯಪವಮಾನನಾದಿ ಸುರ | ಸರ್ವವಂದ್ಯ ಹರಿಉರ್ವಿಲಧಿಕ ಮ | ತ್ತೋರ್ವರ ಕಾಣೆನೊದುರ್ವಿಭಾವ್ಯ ಸಮ | ಸರ್ವೋತ್ತಮನೆ 1 ಏಕಮೇವನೆ ತಪವ | ಆಚರಿಸುತ್ತಲೋಕರಕ್ಷಕ ಕಾರ್ಯಮ ||ಅನೇಕಾ | ವಿಚಿತ್ರರೂಪ | ಸಾಕಾರಿ ಪ್ರಭು ನಿ-ರ್ವಿಕಾರಿಯಾಗಿ ಆ | ನೇಕಾ ಬಗೇಲಿ ಮಾಳ್ಪೆದ್ರುತ :ನಾಕ ಜಪಿತಭುವ | ನೈಕಾರಾಧ್ಯನೆಏಕ ಗುಣದಲಿ | ಏಕದೇಶ ರಮೆಲೋಕೇಶಾದಿ ಪಿ | ನಾಕಿಗಳ್ಬಲ್ಲರೆಪ್ರಾಗ್ದೇವತೆ ಹರ | ಸಾಕುವುದೆಮ್ಮ 2 ಚಿತ್ಸುಖಮಯ ವಪುಷ | ಧೇನುಕ ಮತ್ತೆವತ್ಸಾರಿ ಗೋಪ ಹರುಷ ||ವತ್ಸರದವಗುಣ | ಕುತ್ಸಿತ ಜನ ಹರಮತ್ಸ್ಯಾದಿರೂಪ ಶಿರಿ | ವತ್ಸ ಲಾಂಛನನೇ ||ದ್ರುತ :ಮತ್ಸ್ಯ ಧ್ವಜಪ ಪುರು | ಕುತ್ಸ ಭೋಜಪ ಗೋವತ್ಸ ಧ್ವನಿಗೆ ಬಹ | ಉತ್ಸಹ ಉಳ್ಳನೆಚಿತ್ಸುಖ ಪ್ರದ ಶರ | ಣ್ವೋತ್ಸಲ ಗುರು ಗೋ-ವಿಂದ ವಿಠಲ | ಮಾಂ ಪಾಹಿ ಪಾಹೀ 3
--------------
ಗುರುಗೋವಿಂದವಿಠಲರು
ನಾನಪರಾಧಿ ಶ್ರೀನಿಧಿ ದೇವ ಪ ನಾನಪರಾಧಿ ನೀನದನೆಣಿಸದೆ ದೀನವತ್ಸಲ ಎನ್ನ ಮಾನದಿಂದಲಿ ಕಾಯೊ ಅ.ಪ ತನಯರಿಲ್ಲದೆ ಬಲು ಮನದೊಳು ಚಿಂತಿಸೆ ಮನದಿ ಸಂಕಲ್ಪಿಸೆ ವನಜನೇತ್ರನ ದಯದಿ ತನಯಳು ಜನಿಸಲು ಧನಮದದಲಿ ಮರೆತೆ 1 ಏನ ಪೇಳುವೆ ನಾನು ಧನದ ಮಹಿಮೆಯನ್ನು ಹೀನ ಬುದ್ಧಿಯನಿತ್ತು ಹರಿಯ ಮರೆಸುವುದು ದಾನವಾಂತಕ ಹರಿ ದೀನನಾಗಿಹೆನಯ್ಯ ಸಾನುರಾಗದಿ ಸಲಹೊ ಸತ್ಯನಾರಾಯಣ 2 ಮಂಗಳರೂಪ ಕೃಪಾಪಾಂಗದಿ ನೋಡೊ ರಂಗ ಶ್ರೀ ಕರಿಗಿರಿಯನಿಲಯ ಶುಭಾಂಗ ಗಂಗಾ ಜನಕನೆ ಗಜರಾಜವರನೆ ಭಂಗ ಬಿಡಿಸಿ ಕಾಯೊ ಭಕ್ತವತ್ಸಲ ದೇವ 3
--------------
ವರಾವಾಣಿರಾಮರಾಯದಾಸರು
ನಾನಾ ಚಿಂತನೆ ಎನಗಿಲ್ಲ ಹರಿ ನಿನ್ನ ಚಿಂತನೆ ಎನಗನುಗಾಲ ಪ ಮಾನಾಪಮಾನದ ಭಯವಿಲ್ಲೆನಗೆ ತವ ಧ್ಯಾನವೊಂದೆ ನೀಡು ಬಹು ಮಿಗಿಲ ಅ.ಪ ಉಪವಾಸಬಿದ್ದರೆ ಆಡ್ಡಿಯಿಲ್ಲ ಎನ ಗಪರೂಪ ಊಟಾದರ್ಹಿಗ್ಗಿಲ್ಲ ಕಪಟದಿ ಬೈದರೆ ಅಹಿತಿಲ್ಲ ಜನ ನಿಪುಣನೆಂದರೆ ಎನಗ್ಹಿತವಿಲ್ಲ ಸುಪಥದಿ ನಡೆಸೆನ್ನ ಸಫಲನೆನಿಸಿ ನಿಮ್ಮ ಗುಪಿತ ಮಂತ್ರ ಮಾಡನುಕೂಲ 1 ಪರಮ ಬಡತನವಿರೆ ಪರವಿಲ್ಲ ಬಲು ಸಿರಿ ಸಂಪದವಿರೆ ಹರುಷಿಲ್ಲ ಸಿರಿವರ ನಿಮ್ಮಯ ಚರಣ ಸ್ಮರಣೆವೊಂದೆ ಸ್ಥಿರಮಾಡು ಮರೀದಂತೆ ಗೋಪಾಲ 2 ಕಾಮಿನಿಯರ ಪ್ರೇಮ ನಿಜವಿಲ್ಲ ಮತ್ತು ಹೇಮ ಮುತ್ತು ರತ್ನ ಇರೋದಲ್ಲ ಭೂಮಿಸೀಮೆಯ ಸುಖವಿಲ್ಲ ಇದು ನೇಮವಲ್ಲೊಂದಿನ ಬಟ್ಟಬೈಲ ಕ್ಷೇಮಮಂದಿರ ಭಕ್ರಪ್ರೇಮದಿ ಕೊಡು ಶ್ರೀರಾಮ ನಿಮ್ಮಡಿ ಭಕ್ತಿ ನುತಪಾಲ 3
--------------
ರಾಮದಾಸರು
ನಾನಿನ್ನ ತೆಗಳಿದೆನೇ ರಂಗಯ್ಯ ನಾನಿನ್ನ ಮಹಿಮೆಯ ಹೊಗಳಿದೆನಲ್ಲವೆ ಪ ನೀನೇತಕೆನ್ನೊಳು ದಯತೋರದಿರುವೆ ನಾನಿನ್ನ ಚರಣವ ದೃಢದಿ ನಂಬಿರುವೆ ಅ.ಪ ಮೀನಾಗಿ ನಾಲ್ಕುಮಕ್ಕಳ ಹೊತ್ತು ತಂದೆ ನೀನೇ ಕಮಠನಾಗಿ ನಗವೆತ್ತಿ ನಿಂದೆ ದಾನವ ಸಂಹಾರಕಾಗಿ ಸೂಕರನಾದೆ ನೀನೇ ನರಹರಿಯೆಂದು ನುತಿಸಿದೆನಲ್ಲದೆ 1 ಭೂಮಿಯನಳೆದವನೆಂದೆ ನೀನೇ ಭೂಮಿಪರನು ಕೊಂದೆ ಎಂದೆ ಭೂಮಿಜೆಯರಸ ರಾವಣವೈರಿಯೆಂದೆ ಕಾಮಪಾಲನು ಹಲಧರನೆಂದೆನಲ್ಲದೆ 2 ತರುಣಿದ್ರೌಪದಿಗಾಗಿ ಕುರುಕುಲವಿರಿದೆ ತುರಗವನೇರಿ ದುಷ್ಟರನೆಲ್ಲ ತರಿದೆ ಶರಣ ಜನರಿಗಾಗಿ ಹರಿಹರ ನೀನಾದೆ ವರದ ಮಾಂಗಿರಿರಂಗ ನೀನೆಂದೆನಲ್ಲದೆ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾನೆಂತರಿವೆನೈ ನಿನ್ನಂತರಂಗವ ಸಾನಂದಗೋವಿಂದ ನೀನಿಂದು ದಯೆದೋರು ಪ ಆದಿ ಮೂರುತಿಯೆ ನಾನೀದೀನ ನರ ಭೇದರಹಿತನೇ ಅದರ ಹಾದಿಯರಿಯೆನೊ ವೇದ ವಂದ್ಯನು ನೀನು ಓದನರಿಯದ ನಾನು ಸಾಧುರಕ್ಷಕ ಸ್ವಾಮಿ ಬೇದಯ ತಿಳಿಸೊ 1 ಜ್ಞಾನಪ್ರಕಾಶ ನಾ ಮಾನಾಭಿಮಾನಿ ಮೌನಿರಕ್ಷಕನೇ ಆಂ ಹೀನನಡೆಯವ ದಾನಿಪರಮಾತ್ಮನು ದೀನ ತಾಪತ್ರಿಯೆನು ನೀನಮೃತದವನೈ ನಾನು ಮತ್ರ್ಯನು 2 ಸರುವಲೋಕೇಶಾ ನಾಪರದೇಶಿಯಹುದೋ ಸಿರಿದೇವಿಯರಸಾ ದಾಸ ತಿರಿದುಂಬೊತಿರುಕ ಶರಣಸುಧಾರಕ ಬಿರುದಿನಿಂ ಮೆರೆಯುವ ವರದ ಜಾಜೀಶ ಪೊರೆ ಶ್ರೀನಿವಾಸ 3
--------------
ಶಾಮಶರ್ಮರು
ನಾನೇನಂದನೆ ಭಾವಕಿ ಒಳ್ಳೆಆನಂದಮಯ ಹರಿಹರ ಮುನಿದಿತ್ತಬಾರ ಪ ರಮಣಿ ಕುಚ ಕುಂಕುಮಾಂಕಿತ ವಕ್ಷವಾರಿಧಿಶಯನ ಶ್ರೀವಾಸವಾರ್ಚಿತನಾರದನುತ ಪಂಕಜದೈತ್ಯ ಸಂ-ಹಾರ ಶ್ರೀ ಹರಿಹರನೆಂದೆನಲ್ಲದೆಮಾರಮರ್ಧನನೆಂದೆನೆ ಮೆರೆವ ಸರ್ಪಹಾರ ಕುಂಡಲನೆಂದೆನೆ ಶೋಭಿಸುವ ವೈಯ್ಯಾರ ವಿಭೂಷಣ ಶಂಕರನೆಂದೆನಲ್ಲದೆ 1 ಮಡದಿಯೋರ್ವಳ ನುಡಿ ಕಳ್ಳನೆಂದೆನಲ್ಲದೆ ಮಿಗೆಜಡೆದಲೆಯವನೆಂದನೆ ಪುಲಿದೊಗಲದೃಢದಿ ಹೊದ್ದಿಹನೆಂದೆನೆ ತ್ರೈಲೋಕ್ಯದೊಡೆಯ ಮುರಾರಿ ಮಹದೇವನೆಂದೆನಲ್ಲದೆಧರೆಯನಳೆದು ಕ್ಷತ್ರಿಯರ ಕೊಂದು ಶರಧಿಯನಿರದೆ ಕಟ್ಟಿದ ಕೃಷ್ಣ ಬಹುರೂಪವರಕವಿಗುರುವ ಕರದಿ ಪಿಡಿದು ರಕ್ಷಿಪಬಿರುದಿನ ರಾಯ ರಾವುತನೆಂದೆನಲ್ಲದೆ2 ಗಿರಿಜಾರಮಣನೆಂದೆನೆ ಗುಹಾರಣ್ಯವಾಸಎರಡು ರೂಪದಲಿರುವ ಮೂರುತಿಯೆಂದೆ ನಾ ನಂಬಿದ-ವರಪೊರೆವ ಶ್ರೀಹರಿಹರಲಿಂಗನೆಂದನಲ್ಲದೆ3
--------------
ಕೆಳದಿ ವೆಂಕಣ್ಣ ಕವಿ