ಒಟ್ಟು 13912 ಕಡೆಗಳಲ್ಲಿ , 138 ದಾಸರು , 7210 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾರುಣ್ಯ ಮೂರುತಿ ಕರುಣಾಸಾಗರ ಪ ಘೋರದುರಿತ ಸಂಹಾರ ಜಗತ್ಕರ್ತ ಮಾರ ಜನಕ ಶ್ರೀ ಮನೋಹರನ ವಾರಿಜಾಂಬಕ ಕೃಷ್ಣ ವಾರಧಿ ಶಯನನ ಪಾರಿಮಾರ್ಥಿಕ ನರಿತು ಪರಮ ಹರುಷದಿಂದ 1 ಕುಂಭಿನೀ ಪತಿರಾಮ ಕೋದಂಡಧರ ಗುಣ ಗಂಭೀರ ಪುರುಷ ಶ್ರೀ ಘನ ಮಹಿಮನ ಶಂಬರಾರಿಯ ಕೊಂದ ಶಿವನ ರಕ್ಷಿಸಿದಂಥ ಕಂಬು ಕಂಧರ ಕನಕಾಂಬರ ಭೂಷಣನಾ 2 ಅಗಣಿತ ಚರಿತ ಅನಂತ ಅವತಾರನ ನಿಗಮಗೋಚರ ವಿಷ್ಣು ನಿಜ ನಾಮವು ಬಗೆ ಬಗೆಯಲಿ ಅತಿ ಭಕುತಿಯಿಂದಲಿ ಜಯ ಜಗದೊಡೆಯ ಹೆನ್ನ ವಿಠ್ಠಲನ ಜಿವ್ಹದಿ 3
--------------
ಹೆನ್ನೆರಂಗದಾಸರು
ಕಾರುಣ್ಯಸಾಗರನೇ ನಾ ಸೇರುವೆ ಮಾರನ ಪಡೆದವನೇ ಪ ಭಾವಾತೀತನೆ ಯೆನ್ನ ಅವಗುಣವೆನಿಸದೆ ಸೇವಕನಿಗೆ ನಿನ್ನ ಭಕ್ತಿಯ ನೀಡೋ 1 ದೇವಕಿ ಕಂದನೇ ಸನಕವಂದಿತನೇ ಸೇವೆಯ ಮಾಡುವೆ ಚರಣವ ನೀಡೋ 2 ಅಜನಿಗೆ ಪಿತನಾಗಿ ದ್ವಿಜರಿಗೊಡೆಯನಾಗಿ ಗಜನನ್ನು ಪೊರೆದ ಶ್ರೀ ಲಕ್ಷ್ಮೀ ಸೇವಿತನೇ 3 ಪಾದ ಯುಗ್ಮಗಳನ್ನು ಭಜಕನ ಸಲಹಯ್ಯ ಚನ್ನಕೇಶವನೇ 4
--------------
ಕರ್ಕಿ ಕೇಶವದಾಸ
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ 2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ 3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳು ಶ್ರೀನಿವಾಸನು ಪಾಲಿಸುವನು ನಿತ್ಯದೊಳು5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳುಶ್ರೀನಿವಾಸನು ಪಾಲಿಸುವನು ನಿತ್ಯದೊಳು 5
--------------
ತುಪಾಕಿ ವೆಂಕಟರಮಣಾಚಾರ್ಯ
ಕಾರ್ತಿಕೇಯನ ಮಾಡೋ ನೀ ಧ್ಯಾನ ಪ ನೀರಜ ನಯನನ ತಾರಕ ಮಂತ್ರನ ಮಾಡೋ ನೀ ಧ್ಯಾನ 1 ನಿಗಮಗಳಿಗೆಟಕದ | ಜಗದೇಕ ದೇವನ ಅಗಣಿತಮಹಿಮನ | ಮಾಡೋ ನೀ ಧ್ಯಾನ 2 ನಿತ್ಯಾನಂದನ | ಭೃತ್ಯರ ಪೊರೆವನ ಸತ್ಯ ಸ್ವರೂಪನ | ಮಾಡೋ ನೀ ಧ್ಯಾನ 3 ದುಷ್ಟ ಖಳರ ಎದೆ | ಮೆಟ್ಟಿ ಶಿಕ್ಷಿಸುವನ ಕುಷ್ಠ ವಿನಾಶನ | ಮಾಡೋ ನೀ ಧ್ಯಾನ 4 ದಾಸರ ಕಾವ ಪಾವಂ | ಜೇಶನ ಸ್ಕಂದನ ಭೂಸುರ ಪ್ರೀಯನ | ಮಾಡೋ ನೀ ಧ್ಯಾನ 5
--------------
ಬೆಳ್ಳೆ ದಾಸಪ್ಪಯ್ಯ
ಕಾಲ ತಪ್ಪಿದರು ಸಾವಕಾಲ ತಪ್ಪದೋ ಯಾವ ಜೀವ ಜಂತುಗಳಿಗೂ ಕಾಯವಿಡಿದು ಬಂದ ಬಳಿಕ ಪ ಜನಿಸಿ ತಂದೆತಾಯ ಕರ ದೊಳಿರಲಿ ಸ್ತನವನುಂಡು ಭರದಿನಿದ್ರೆ ಗೈಯುರ್ತಿಲಿ ನೆರೆದಬಾಲರೊಡನೆ ಆಡಿ ಚರಿಸುತಿರಲಿ ಬಾಲಕತ್ವ ತೆರಳಿ ಜವ್ವನವು ಬಂದು ರಮಣಿಯನ್ನೆ ವರಿಸಿ ಇರಲಿ 1 ಕರಿ ಹತ್ತಿ ಮೆರೆಯುತಿರಲಿ ದೊರೆಗಳೊಡನೆ ಚರಿಸುತಿರಲಿ ಮೇರು ಗಿರಿಯ ಶಿರದೊಳಿರಲಿ ಶರಧಿ ಮಧ್ಯ ಪುರದೊಳಂಲರಣ್ಯದೊಳಗೆ ತಿರುಗುತಿರಲಿ ಅತಳ ಸುತಳ ವಿತಳವನ್ನೆ ಪೊಕ್ಕುಇರಲಿ 2 ಕಾಯವಿದುವೆ ತನ್ನ ಪೆತ್ತ ತಾಯಿತಂದೆಗಳಿಗೋ ಜಾಯೆ ಸುತರ ಗೃಧ್ರ ಭಲ್ಲುಕಾದಿಗಳಿಗೋ ಪುಲಿಗೋ ವಾಯಸಾದಿ ಕ್ರಿಮಿಗೋ ಕೀಟಕಾದಿಗಳಿಗೋ ಲಕ್ಷ್ಮೀರಮಣನೊಬ್ಬ ಬಲ್ಲನಿದನು 3
--------------
ಕವಿ ಪರಮದೇವದಾಸರು
ಕಾಲ ಬಂತು ಪ್ರಜೆಗೆ ಎಷ್ಟು ಪೇಳ್ವರೇನು ಕೆಲಸ ದಿಟ್ಟ ಅರಿಗಳನು ಕುಟ್ಟಿ ತೆಗೆಯದಿದ್ದಮೇಲೆ ಪ ದಂಡು ಬಂತು ಎಂದು ಜನರು ಗಂಡು ಹೆಣ್ಣು ಮಕ್ಕಳೆಲ್ಲ ಕಂದುಗಳನು ಕಟ್ಟಿ ಗೋವಿನ ಹಿಂಡ ನೆಲ್ಲ ದಾರಿಗೊಳಿಸಿ ಕಂಡ ಕಡೆಗೆ ಹೋಗಿ ಸೇರಿಕೊಂಡುಯಿರಲು ಸೋವಿನಿಂದ ದಂಡಿನವರು ದಾರಿಗಟ್ಟಿಕೊಂಡು ಸುಲಿದು ಕಡಿದ ಮೇಲೆ 1 ಅಲ್ಲಿ ಬಂತು ಇಲ್ಲಿ ಬಂತು ಎಂದು ಬೆದರಿಕೊಂಡು ಕುಣಿಗಳಲ್ಲಿ ಭತ್ತಭಾಂಡವಿಕ್ಕಿ ನಿಲ್ಲದೆಲ್ಲ ಊರಬಿಟ್ಟು ಕಲ್ಲು ಮುಳ್ಳು ಗುಡ್ಡಕಾನಿನಲ್ಲಿ ಸೇರಿಕೊಂಡು ಬಚ್ಚಿಯಿಟ್ಟ ವಸ್ತು ವಡವೆ ಅಲ್ಲಿ ನಷ್ಟವಾದ ಮೇಲೆ 2 ಮತ್ತೆ ಕುದುರೆಯಿಲ್ಲ ಮಂದಿಹೊತ್ತು ಪ್ರಜೆಗಳನ್ನು ಮಾರ್ಗ ದೊತ್ತಿನಲ್ಲಿ ತರುಬಿ ನಿಂದು ಕತ್ತಿಯನ್ನು ಕಿತ್ತು ಗೋಣ ಬರಿಸಿ ಯಾವತ್ತು ವಡವೆ ವಸ್ತುಗಳನು ಮತ್ತು ಮತ್ತು ಸುಲಿದಮೇಲೆ 3 ಮುಟ್ಟು ಪಟ್ಲೆ ಸಹಿತವರಡಿಯೆತ್ತ ಕೊಟ್ಟು ಬೀಳ ಭೂಮಿ ನಷ್ಟ ತೆತ್ತು ಹಳೆಯ ಅರಿವೆ ಬಟ್ಟೆಗಟ್ಟಿ ಬೀದಿ ಬದಿಗೆ ಹಿಂಡು ಗುರಿಯ ಕೆಟ್ಟ ಗೌಡಿ ದ್ವಿಗುಣಿಸಂಕ ತೆತ್ತು ಕೊಟ್ಟು ಪ್ರಜೆಗೆ ಘಟ್ಟ ಬೆಟ್ಟ ವಾಸ ವಾದಮೇಲೆ 4 ಇಕ್ಕಿ ಕದವ ರಾಜ್ಯವನ್ನು ಹೊಕ್ಕು ಅರಿಗಳೆಲ್ಲ ಸುಲಿದು ಸೊಕ್ಕಿನಿಂದ ಪಾಳ್ಯವನ್ನು ಹೊಕ್ಕರಯ್ಯ ನಮ್ಮ ಕಡೆಗೆ ದಿಕ್ಕಕಾಣೆ ಪ್ರಜೆಗಳನ್ನು ರಕ್ಷಿಸುವರು ಬೇರೆಉಂಟು ನಂಬಿ ಜನರು 5
--------------
ಕವಿ ಪರಮದೇವದಾಸರು
ಕಾಲ ಬಂದಿತೋ ಬಂದ ಭವದೊಳು ಚಿಂತೆಯೊಳಗೆ ದಿನ ಸಂದಿತು ಪ ತುಪ್ಪ ಪಣಕೆ ಸೇರು ಉಪ್ಪೆಂಟು ಸಿದ್ದೆಯು ಮುಪ್ಪಾಗ ಕೊಂದೆ ಕೊಳಗಬತ್ತ ಸೊಪ್ಪ ಪಣಕೆ ಮಾರುವುದು ಅಚ್ಚೇರು 1 ವ್ಯಾಪಾರ ಸಾಪಾರ ತುಟ್ಟಿಸಿದರು ಕೊಳ್ಳ ಲಾಪರೆ ಫಣವೊಂದೆ ಕಟ್ಟಿಲ್ಲ ರೂಪಾಯಿ ಕೊಡೆ ಪುಲಿಚರಮ ಪಾಪವು ಸುಲತಾಗಿ ಪಣವ ಕೊಡೆಂಬರು 2 ದುಡ್ಡು ಕೊಡಲು ಬೇಡ ಬೈಯುತ ಆನೆ ಗೂಡಿನ (ಆನೆಗೊಂದಿ) ದುಡ್ಡತಾರೆಂಬರು ದೊಡ್ಡ ಮೊಳೆ ಪಣವಿದು ಸಣ್ಣ ಮೊಳೆಯಿಂಗಿ ? ಹೆಡ್ಡ ಹೋಗೆಂದದ್ದ ಬಿಸುಟರು ಫಣವ 3 ತಪ್ಪಿ ಹೇಳುವೆನೆ ನಮ್ಮಪ್ಪ ದುರ್ಭಿಕ್ಷವು ಎಪ್ಪತ್ತು ವರುಷ ಕೊದಗಿ ಬಂತು ಇಪ್ಪತ್ತು ವರುಷಕೀಕಾಲ ಬಂದಿದ್ದರೆ ಕನಿಷ್ಟಕ್ಕೆ ಗಣಿಸಿ ಸುಕ್ಷಾಮವ ಮರೆವೆನು 4 ಧಾರಣೆ ಪಾರಣೆ ಶಿವರಾತ್ರಿ ಹರಿದಿನ ಓರಂತೆ ಬಡವಗೆ ನೆಲೆಯಾಯಿತು ಕ್ಷೀರಾಬ್ದಿ ಶಯನ ಲಕ್ಷ್ಮೀನಾರಾಯಣನು ತನ್ನ ಸೇರಿದ ಜನರ ಕಣ್ಣಲಿ ನೋಡುತೊಲಿದ 5
--------------
ಕವಿ ಪರಮದೇವದಾಸರು
ಕಾಲ ಮೃತ್ಯು ಗೆಲಿಯಲಿಲ್ಲ ಕಾಲ ಪ ಪೃಥ್ವಿಯಮೇಲೆ ಕೃತಕೃತ್ಯನಾಗಲು ಬಂದ ವೃತ್ತಾಂತ ತಿಳಿಯಲಿಲ್ಲಅ.ಪ ನಂಬಿಕೊಂಡೆಯಲ್ಲ ಈ ಜಗ ಬೆಂಬಲ ಬರೋದಲ್ಲ ಜಂಬಬಡುವಿ ಸುಳ್ಳೆ ಮನದ ಡಂಬವ ಬಿಡಲಿಲ್ಲ ಕುಂಭಿನಿಸುಖದ ಹಂಬಲದಲಿ ದಿನ ಶುಂಭತನದಿಗಳೆದಿಂಬಿಲ್ಲದ್ಹೋಗುವಿ 1 ಕುಮತಿಯ ಬಿಡಲಿಲ್ಲ ಮಾಯಮಮತ ಕಡಿಯಲಿಲ್ಲ ನಮಿಸಿ ಬಿಡದೆ ಸದಾ ಸುಮನಸರೊಳಗಾಡಿ ಭ್ರಮೆಯನಳಯವಿಲ್ಲ ಬಂದ ಸಮಯ ತಿಳಿಯಲಿಲ್ಲ ವಿಮಲಸುಖದನಿಜ ಕ್ರಮವ ತಿಳಿಯಲಿಲ್ಲ 2 ಆಸೆ ನೀಗಲಿಲ್ಲ ವಿಷಯದ್ವಾಸನ್ಹಿಂಗಲಿಲ್ಲ ಕ್ಲೇಶ ತೊಡೆಯಲಿಲ್ಲ ಲಂಪಟ ಮೋಸದಿಂದುಳಿಲಿಲ್ಲ ಶೇಷಶಯನ ಮಮ ಶ್ರೀಶ ಶ್ರೀರಾಮನ ದಾಸನಾಗಿ ಭವಪಾಶ ಗೆಲಿಯಲಿಲ್ಲ 3
--------------
ರಾಮದಾಸರು
ಕಾಲ ವ್ಯರ್ಥ ಹರಿಯನೇಕ ಗುಣಗಳ ಪೊಗಳಿ ಪುರುಷಾರ್ಥ ಪ ಸತಿಸುತರ ನೆಚ್ಚಿ ಕೆಡಬ್ಯಾಡಾ ನಿನ್ನ ಸಂ- ಗತಿಲೇ ಬಾಹರು ಇದನು ತಿಳಿಯೋ ಕ್ಷಿತಿಪತಿಯ ನೆನೆಯದಿರಬ್ಯಾಡಾ ಲಕ್ಷ್ಮೀ ಪತಿಯೊಬ್ಬನೇ ಗತಿ ಎಂದು ತಿಳಿ ಗಾಢಾ 1 ಇಂದೆ ಇದ್ದವ ನಾಳೆಗಿಲ್ಲಾ ಅದ ರಿಂದ ಜಗದೀಶನನು ಹಿಂದೆ ಕಳೆದ ಆಯು ಬರೋದಿಲ್ಲಾ ಇನ್ನು ಮುಂದೆ ನರಜನ್ಮ ಬರುವುದು ಭರವಸಲ್ಲಾ 2 ಸತ್ತ ನಂತರ ಬಳಗ ನಿನ್ನ ತೀವ್ರ ಹೊತ್ತು ಹೊರಗ್ಹಾಕಿರೆನ್ನುವರೋ ತಿಳಿಯನ್ನಾ ಮಿಥ್ಯ ಸುಖಕೊಳಗಾಗದಿನ್ನಾ ಏಕ ಚಿತ್ತದಿಂ ಭಜಿಸೋ ಹನುಮೇಶ ವಿಠಲನಾ 3
--------------
ಹನುಮೇಶವಿಠಲ
ಕಾಲ ಕರ್ಮವ ಕಾಲಿಲೊದೆದವ | ಕತ್ತಲಿಗಂಜುವನೇ | ಆಲಿಯ ಮೇಲಕೆ ನಿಲಿಸಿದ ಪುರುಷನು | ಬಾಲೆರ ಬಯಸುವನೇ ಪ ಅಮೃತ ನದಿಯೊಳು ತೃಪ್ತ್ಯಾದ ಮಹಾತ್ಮನು | ಅಂಬಲಿ ಸುರಿಯುವನೇ | ಕುಂಭಕ ವಾಯುವ ನಿಲಿಸಿದ ಸಜ್ಜನ | ಕುಂಭಿನಿಗುದಿಸುವನೇ1 `ತತ್ತ್ವಮಸಿ’ ಮಹಾವಾಕ್ಯವ ತಿಳಿದವ | ಮಿಥ್ಯಕೆ ಮೆಚ್ಚುವನೇ | ನಿತ್ಯನಿತ್ಯದಿ ಇರುವವನೂ | ಅನಿತ್ಯಕೆ ಮೆಚ್ಚುವನೇ 2 ಭವ ಮೂರ್ತಿ ಭವತಾರಕ ಭಜಕನು | ಭೇದವ ಮಾಡುವನೇ 3
--------------
ಭಾವತರಕರು
ಕಾಲ ಕಳೆಯಬೇಡ ಮನವೇ ಮೂಳನಾಗಬೇಡ ಪ ಕಾಳು ಕತ್ತಲೆಂಬ ಹಾಳು ಸಂಸಾರ ಮಾಯಾ ಜಾಲ ಮೋಹಿಸಿ ಹೊತ್ತು ಹಾಳುಮಾಡಿಕೊಂಡು ಅ.ಪ ನಿನ್ನೊಳು ಹುಡುಕಾಡಿ ಹರಿಯ ಉನ್ನತಕೃಪೆ ಪಡಿ ಕಣ್ಣುಮುಚ್ಚಿ ಪರರ್ಹೆಣ್ಣಿನ ಹೊಲೆಮೈ ಬಣ್ಣಕೆ ಮನಸೋತು ಠೊಣ್ಯನೆನಿಸಿಕೊಂಡು 1 ನೋಡಿ ತಿಳಿದು ಭವಮೂಲ ಹುಡುಕಾಡಿ ಹಿಡಿಯೋ ನಿಜವ ರೂಢಿಸುಖಕೆ ಮನನೀಡಿ ಸನ್ಮಾರ್ಗದ ಜಾಡು ತಿಳಿಯದೆಮತಾಡಣೆಗೊಳಪಟ್ಟು 2 ಅರಿತು ಶ್ರೀರಾಮಚರಣ ನಿರುತದಿ ಗುರುತು ಹಿಡಿಯೋ ಜಾಣ ಪರಲೋಕ ಸಾಧನ ಸುರತು ಷರತು ಮಾಡಿಕೊಂಡು ಪರಕೆ ಪರಮ ಪರತರ ಮುಕ್ತಿ ಸುಖ ಸುರಿ 3
--------------
ರಾಮದಾಸರು
ಕಾಲ ಚಕ್ರವನೇರಿ ಭಾಸಿಪ ಬಾಲ ಸೂರ್ಯನ ವಂದಿಪೆ ಪ ಕಾಲ ರೂಪನೆ ಬಾಲ ಚಂದ್ರನೆ ಪೂಜಿಪೆ ಅ.ಪ. ಸೃಷ್ಟಿ ರೂಪನೆ ವೃಷ್ಟಿದಾಯಕ ಶ್ರೇಷ್ಠ ಭೂಮಿಯ ಪುತ್ರನೆ ಕಷ್ಟಹರ ಸುಜ್ಞಾನ ಮೂರುತಿ ಇಷ್ಟದಾಯಕ ಸೌಮ್ಯನೆ 1 ದೇವಗಣಗುರು ಕ್ಷೇಮದಾಯಕ ಜೀವವರ ಗುರು ಪಾಲಿಸೈ ದೇವಶುಕ್ರನೆ ಕಾವ್ಯರೂಪನೆ ಕಾವ್ಯ ಸೇವನೆ ಪೋಷಿಸೈ 2 ಪುಂಗವರ ಮಹಿಮಾಂಗ ಶನಿ ಸನ್ಮಂಗಳಾತ್ಮಕ ದೇವನೆ ಮಂಗಳವನೆಸಗೆಂದು ವಂದಿಪೆ ರಾಹುವೆ ವರಕೇತುವೆ 3 ಶ್ರೀನಿವಾಸನೆ ಪಾಲಿಸುವುದೆಂದೀ ನವಗ್ರಹ ಭಕ್ತಿಯಿಂಧೇನುನಗರ ಜನೇಶನೇವರ ವೇಂಕಟೇಶನೆ ಪೋಷಿಸೈ 4
--------------
ಬೇಟೆರಾಯ ದೀಕ್ಷಿತರು
ಕಾಲ ಮೃತ್ಯುವು ಸ್ತ್ರೀಯಲ್ಲದಲೆ ಕಾಯುವವಳು ತಾನಲ್ಲಣ್ಣ ಕಾಳಕವೀಶ್ವರ ಬಲ್ಲನು ತಾನೇನ ಕಾಳ ಕಿಚ್ಚಿನ ಕುಂಡವಣ್ಣ ಪ ಮಲ ಮೂತ್ರವು ಮಜ್ಜೆಯು ಮೇದಸ್ಸು ಮೇಲೆ ಚರ್ಮ ಹೊದ್ದಿಹೆವಣ್ಣಎಲುಬುಗಳಡಕಲಿ ನರಗಳ ಬಿಗಿವು ಎಡದೆರ ಅಪಿಲ್ಲದೆ ಇಹುದಣ್ಣ ಬಲು ಹೊಲಸಿನ ಮಡುವದು ಮತ್ತೆ ಬಗೆಬಗೆಯ ಕ್ರಿಮಿಗಳು ಮನೆಯೊಳಣ್ಣ ಹೊಲೆಮಯವಿರುವ ಸ್ತ್ರೀಯ ವರ್ಣಿಪೆನು ಹೇವ ಮಾರಿಯು ಕಾಣಣ್ಣ 1 ಕಳಸ ಕುಚವು ಎದೆಎಂಬನ ಬಾಯಲಿ ಕರಿಯ ಮಣ್ಣನೆ ಹಾಕಣ್ಣ ಹೊಳೆವ ಕಂಗಳು ಎಂಬನ ಮೋರೆಗೆ ಹುಡಿಯನೀಗಲೆ ಚೆಲ್ಲಣ್ಣಬಳಕು ನಡೆಯಂತೆಂದು ಬೊಗಳುವನ ನಿಲಿಸದೆ ಅಲ್ಲಿಂದಟ್ಟಣ್ಣಚೆಲುವಿನ ಸುಂದರ ಚೇಷ್ಟೆಗೆ ನಲಿವನ ಚಪ್ಪಲಿಯಿಂದಲಿ ಕುಟ್ಟಣ್ಣ 2 ಬ್ರಹ್ಮಧ್ಯಾನವ ಮಾಡುವುದಕ್ಕೆ ಬ್ರಹ್ಮರಾಕ್ಷಸವು ಇದು ಅಣ್ಣಹಮ್ಮಳಿದು ಯೋಗಾಭ್ಯಾಸದಲಿರೆ ಹೃದಯದಲಿ ಹರಿದಾಡುವುದಣ್ಣಬ್ರಹ್ಮೇತಿಯು ತಾನಿವನ ಸಂಗದಿ ಭವಭವತಿರುಗುವುದ ಬಿಡದಣ್ಣಸಮ್ಮತದಲಿ ಚಿದಾನಂದ ಹೊಂದಿಯೆ ಸೀಮಂತಿನಿಯ ಬಿಡಬೇಕಣ್ಣ 3
--------------
ಚಿದಾನಂದ ಅವಧೂತರು
ಕಾಲ ಸಜ್ಜನರಿಗನ್ನಕಿಲ್ಲದ ಸಾವಕಾಲ ಪ ಅರಮನೆಯ ಬಾಗಿಲನು ಕಾದು ಕೊಂಡಿರ್ದು ನೃಪ ವರನೊಡನೆ ಮಾತುಕಥೆಗಳ ನಡೆಸುತ ವರಮಂತ್ರಿಯಾಗಿ ರಾಜಾಧಿ ಕಾರಂಗಳನು ಕಾಲ 1 ಅಡಗಡಿಗೆ ಮಂತ್ರಿಗಳನಾಶ್ರಯಿಸಿ ಕೋವಿದರು ಗಡಿಗಳನು ಕೊಡಿಸೆನಗೆ ತನಗೆನ್ನುತ ಕಾಲ 2 ಮತ್ತಿವರನಾಶ್ರಯಿಸಿ ಕೆಲರು ಮಣಿಹಂಗಳನು ಪೊತ್ತು ಸೀಮೆಯ ಗ್ರಾಮಗಳ ನೋಡುತ ಇತ್ತ ಕುಳ ಸ್ಥಳ ವಂಚನೆಗಳೆಂದು ಬಂದ ಕಾ ಕಾಲ 3 ಬುಡಗಳನ್ನು ಗೈದೆ ಹಾಳ್ಮಾಡಿ ಕೊಂಡಿರ್ದರಿಗೆ ಕಡ ಮೊದಲುಗಳ ಕೊಟ್ಟು ಪೋಗೆಂಬರು ಅಡೆಯಂಚು ಮೂಲೆಗೆಳಗೈದು ಕುಳದೆರಿಗೆಯನು ಕಾಲ ಕಾಲ 4 ಚಾಡಿ ಕೋರರು ಹೆಚ್ಚಿ ಕೆಡಿಸಿವರ ರಾಜ್ಯವನ್ನು ರೂಢಿ ಪತಿಗಳಿಗೆಲ್ಲ ಕಿವಿಯೇ ಕಣ್ಣು ನೋಡಿದರೆ ಮರುತ ಸುತ ಕೋಣೆ ಲಕ್ಷ್ಮೀರಮಣ ನಾಡಿಸಿದ ವೋಲು ಜಗವಾಡುತಿಹುದು 5
--------------
ಕವಿ ಪರಮದೇವದಾಸರು