ಒಟ್ಟು 3042 ಕಡೆಗಳಲ್ಲಿ , 124 ದಾಸರು , 2171 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷ್ಮೀ ಮನೋಜ್ಞ ವಿಠಲ | ಕಾಪಾಡೊ ಇವಳಾ ಪ ಪಕ್ಷೀಂದ್ರವಹ ಹರಿಯೆ | ಇಕ್ಷುಶರ ಪಿತನೇ ಅ.ಪ. ಸುಕೃತ | ದಿಂದ ಫಲ ತೊರೆತಿಹುದುಮಂದಾಕೀನಿ ಜನಕ | ಇಂದಿವಳ ಪೊರೆಯೆ 1 ಹರಿಯೆ ಪರತರನೆಂಬ | ಸುರರ ಮನೊ ಭಾವದಲಿಹರಿ ಗುರು ಹಿರಿಯರಲಿ | ವರಭಕ್ತಿಯುತಳೂತರತಮದ ಸುಜ್ಞಾನ | ವರಭೇದ ಪಂಚಕದಅರಿವಿತ್ತು ಪೊರೆ ಇವಳ | ಮರುತಾಂತರಾತ್ಮ 2 ಕಂಸಾರಿ ಪೂಜೆ ಎಬಂಶವನು ತಿಳಿಸುತ್ತ | ಕಾಪಾಡೊ ಹರಿಯೇಸಂಶಯವುರಹಿತ ತ | ತ್ವಾಂಶ ದರಿವಿತ್ತು ವಿಪಾಂಸಗನು ಹರಿಯಪದ | ಪಾಂಸುವನೆ ತೊಡಿಸೋ 3 ಅಕ್ಷಯ ಫಲದಾತಈಕ್ಷಿಸೋ ಇವಳ ಕರು | ಣೇಕ್ಷಣದಿ ಹರಿಯೇ 4 ಗೋವತ್ಸ ದನಿಕೇಳಿ | ಧಾವಿಸುವ ಪರಿಯಂತೆಶ್ರೀವರನೆ ನೀನಾಗಿ | ಓವಿ ಪೊರೆ ಎಂಬಾಆವ ಈ ಬಿನ್ನಪವ | ನೀವೊಲಿದು ಸಲಿಸುವುದುಗೋವಿದಾಂಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀದೇವಿ ಅಂಜಿಸುವುದ್ಯಾಕಮ್ಮ ಕಂಜೋದ್ಭವ ನಮ್ಮ ನೀ ಅಂಜಿಸಿದರೆ ಲೋಕ ಅಂಜದಿರುವುದೆ ಪ ಕುಂಜರಗಮನೆ ನಾವಂಜನದೇವಿ ಸಂಜಾತನಾದ ಪ್ರಭಂಜನನಣುಗರು ಪಾದ ಕಂಜಕ್ಕೆ ವಿಮುಖ ಸಂಜಿಲಿ ಚಲಿಸುವ ಪುಂಜರು ಕಡಿಮೆ 1 ನಿನ್ನನೆ ನಂಬಿ ನಾವಿನ್ನು ಸಂಸೃತಿಯ ಬನ್ನವೆ ಕಳಕೊಂಡು ಚನ್ನಾಗಿ ಜಗದಿ ಧನ್ಯರಾದೇವೆಂದು ಮನ್ನಾದಿ ಬಯಸೆ ಅನ್ಯಾರಂದದಲಿ ನೀ ನಮ್ಮನ್ನ ನೋಡುವರೆ2 ಸಿರಿ ನಾರಸಿಂಹನ್ನ ವರ ಭಕ್ತಿಯಲಿ ನೀನು ಕರವಶ ಮಾಡಿಪ್ಪೆ ಪರವೇನೆ ನಿನಗೆ ಪರಮೇಷ್ಠಿ ಮೊದಲಾದಮರರ ನೀ ಪೊರೆವೆ ಸಿರಿ ವಾಸುದೇವವಿಠಲನ್ನ ತೋರಮ್ಮ 3
--------------
ವ್ಯಾಸತತ್ವಜ್ಞದಾಸರು
ಲಕ್ಷ್ಮೀದೇವಿಯ ಪ್ರಾರ್ಥನೆ ಶ್ರೀನಿವಾಸನ ಕರುಣಾನು ಸಂಸರಣಿ ಜ್ಞಾನ ಭಕ್ತಿಗಳನ್ನು ಪಾಲಿಸಂಭರಣಿ ಪ. ಅಜಭವಾದಿಗಳಿಗೆ ನಿಜಪದದಾಯಿನಿ ವೃಜಿನ ಸಮೂಹ ನಿವಾರಿಣಿ ಕುಜನ ಕುಠಾರಿಣಿ ಕುಂಜರ ಗಮನೆ ಪಾಲು ದಧಿವಾಸನ ಕೂಡಿ ಸದನದಿ ನೆಲೆಗೊಳ್ಳೆ 1 ಆರಿಗೆ ನಿನ್ನ ಕರುಣಾರಸ ದೊರೆವದೊ ನೀರಜಾಲಯೆ ನಿನ್ನ ಸೇರಿಕೊಂಡಿಹ ಎನ್ನ ವೈರಿ ಜನರು ಬೇಗ ಗಾರಾಗದುಳಿವರೆ 2 ನೀನೊಲಿಯಲೂ ಸರ್ವ ಮಾನವರೊಳಗತಿ ಮಾನ ಮಹತ್ವಾದಿ ಸದ್ಗುಣವೂ ತಾನಾಗಿ ಬರುವವಿಂನೇನೆಂದು ನಿನ್ನ ಮಹಿ- ಮಾನು ವರ್ಣನೆ ಮಾಳ್ಪೆ ದೀನ ದಯಾಕಲೆ 3 ಮಂದಿರದೊಳಗೆ ನೀ ನಿಂದು ನಗುತ ನಲಿ ವಂದ ನೋಡುತ ಮಿತ್ರ ಬಂಧುಗಳು ಮಂದರಧರ ತಾನೆ ನಿಂದು ರಕ್ಷಿಸನೆಂದಾ ನಂದ ಪೂರಿತ ಮನದಿಂದ ಸೇರಿರುವರು 4 ಸರಸಿಜನಾಭ ಶ್ರೀಹರಿಯು ನಿನ್ನನ್ನೆ ಮುಂ ದಿರಿಸಿ ಚತುರ್ವಿಧ ಪುರುಷಾರ್ಥವಾ ಕರುಣಿಪೆನೆಂದು ಕಂಠಸರದ ಮಧ್ಯೂರದಲಿ ಧರಿಸಿ ಶೋಭಿಪ ಶೇಷಗಿರಿವರ ಶಿಖರದಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮೀನಾರಾಯಣ ಕಾಯೋ ನಿನ್ನ ನಂಬಿದವರÀುಕ್ಷಿಯೊಳು ಜಗಂಗಳನಿತ್ತು ರಕ್ಷಿಸಿದ ಶ್ರೀಶ ಪ. ಕಂದ ಪ್ರಹ್ಲಾದನ್ನ ಕಾಯ್ದೆ ಚಂದದಿ ಕಾಯೊಯೆಂದು ಬಂದಮುಂದೆ ನಿಂದ ಮಂದಿಯೊಳು ನಿಂದು ನೀ ಸಲಹಯ್ಯ 1 ಕರಿರಾಜ ಕರೆಯಲು ಭರದಿ ಬಂದು ಪೊರೆದೆ ನೀಶರಣು ರಕ್ಷಾಮಣಿಯೆ ಸಿರಿಯಮ್ಮಗೊಲಿದೆ ನೀ 2 ಶರಣು ಮುಖ್ಯ ಸುರರ ವರದೈವವಾದೆ ನೀನುಶರಣು ರಕ್ಷಾಮಣಿಯೆ ಸಿರಿಯಮ್ಮಗೊಲಿದೆ ನೀ 3 ಮೀನಾಂಕ ತಲೆದೊರಿದೆ ನೀ 4 ಹಯವದನನಾಗಿ ನೀ ತ್ರಯೀಚೋರರನ್ನು ಕೊಂದುಸ್ತ್ರೀಯರಿಗೆ ನ್ಯಾಯದಿಂದ ದಯ ಬೀರಿದೆಯಲ್ಲ 5
--------------
ವಾದಿರಾಜ
ಲಕ್ಷ್ಮೀರಮಣ ಮರೆಯ ಹೊಕ್ಕೆ ರಕ್ಷಿಸೈ ಪಾಂಡುಪಕ್ಷನೆ ಪ ಪಕ್ಷಿವಾಹನ ದುಷ್ಟಶಿಕ್ಷ ಮೋಕ್ಷದಾಯಕ ಶಿಷ್ಟರಕ್ಷ ಅ.ಪ ತರಳ ಧ್ರುವನ ಪೊರೆದೆಯೆಲೊ ಕರಿಮೊರೆಯ ಕಾಯ್ದಯ್ಯ ಕರುಣದಿ ಕುರುಪ ಸಭೆಯಲಿ ದ್ರೌಪದಿ ಮೊರೆಯನಿಡಲಾಕೆಮಾನವ ಕಾಯ್ದಿ 1 ನರಗೆ ಸಹಯನಾಗಿ ಸಾರ ಧರೆಯ ಗೆಲಿಸಿದಿ ನಿರುತದಿ ಕರವ ಪಿಡಿದಿ ಪರಮ ಪ್ರೇಮದಿ ಒರೆದೆಲೊ 2 ಇಂದು ಎನಗೆ ಸಂಧಿಸಿದ ಮಹ ಬಂಧನವ ನಿವಾರಿಸೈ ಪಾದ ನಂಬಿದೆ ಕಂದನನು ಪೊರೆ ಶ್ರೀರಾಮ3
--------------
ರಾಮದಾಸರು
ಲಕ್ಷ್ಮೀವಲ್ಲಭ ಜಯ ಪಕ್ಷಿವಾಹನ ಜಯಮೋಕ್ಷದಾಯಕನೆ ಜಯ ಜಯ ಪ ಮೋಕ್ಷದಾಯಕನೆ ಮಧುಸೂದನ ಪ-ದ್ಮಾಕ್ಷಗಾರುತಿಯ ಬೆಳಗಿರೇ ಅ.ಪ. ಜಲದೊಳು ಸಂಚರಿಸಿ ಬಲು ಗಿರಿಯ ಧರಿಸಿದಇಳೆಯ ದಾಡೆಯಿಂದ ನೆಗಹಿದಾ ||ಇಳೆಯ ದಾಡೆಯಿಂದ ನೆಗಹಿದ ನರಹರಿ ಚೆಲುವಗಾರುತಿಯ ಬೆಳಗಿರೆ ಶೋಭಾನೆ 1 ಚಿಕ್ಕ ಬ್ರಾಹ್ಮಣನಾಗಿ ಬಲಿಯ ದಾನವ ಬೇಡಿಆಕ್ರಮಿಸಿದನೆ ತ್ರಿಲೋಕ ||ಆಕ್ರಮಿಸಿ ತ್ರಿಲೋಕನಾಳ್ದ ಶ್ರೀರಾಮಶ್ರೀ ಕೃಷ್ಣಗಾರುತಿಯ ಬೆಳಗಿರೇ 2 ನಗ್ನನಾಗಿ ವ್ರತವಾ ವಿಘ್ನವ ಚರಿಸಿದಅಜ್ಞಾನಿ ಕಲಿಯ ಸದೆದ ||ಅಜ್ಞಾನಿ ಕಲಿಯ ಸದೆದ ಮೋಹನ್ನ ವಿಠ್ಠಲ ಸ-ರ್ವಜ್ಞಗಾರುತಿಯ ಬೆಳಗಿರೇ3
--------------
ಮೋಹನದಾಸರು
ಲಕ್ಷ್ಮೀಶ ಗೋವಿಂದ ವಿಠಲ ಪೊರೆ ಇವಳಾ ಪ ಪಕ್ಷ್ಮಗಳು ಅಕ್ಷಿಗಳ ಅಗಲದಿಪ್ಪಂತೇ ಅ.ಪ. ಕುಕ್ಷಿಯಲಿ ಜಗಧರಿಪ ಪಕ್ಷಿವಾಹನ ದೇವಅಕ್ಷರೇಡ್ಯನೆ ಕರುಣದೀಕ್ಷಿಸುತ ಇವಳ |ರಕ್ಷಿಪುದು ಸುಜ್ಞಾನ ಭಕ್ತಿದಾಯಕನಾಗಿಕಕ್ಷೆತರತಮ ಜ್ಞಾನ ಭೇದಪಂಚಕನರುಹಿ 1 ಪತಿಯೆ ಪರದೈವವೆಂಬುನ್ನತದ ಮತಿಯಿತ್ತುಪಥತೋರೊ ಸದ್ಗತಿಗೆ ಸರ್ವವ್ಯಾಪಕನೇ |ಹಿತದಿಂದ ಬಯಸುವಳು ತವಪಾದ ದಾಸ್ಯವನುಕೃತಿ ಪತಿಯೆ ನೀನಿತ್ತು ಸಲಹ ಬೇಕಿವಳಾ 2 ವಾಗ್ದೇವಿ ಪತಿ ಪ್ರೀಯಕೃಪೆಗೈದು | ತವಪಾದ ಹೃದುಹದಿ ನೋಳ್ಪ |ಸುಪಥವೆನೆ ಹರಿಗುರೂ ಸದ್ಭಕ್ತಿ ಕರುಣಿಪುದುವಿಪಗಮನ ಹಯವದನ ಶ್ರೀ ಲಕ್ಷ್ಮೀ ಸದನಾ 3 ಅಂಕಿತಿಲ್ಲದ ದೇಹ ಸಾಧನಕೆ ಸಲ್ಲದೆನೆಅಂಕಿತವ ವಿತ್ತಿಹೆನು ಗುರುಕರುಣದೀ | ನಿಂತು ನೀನಿವಳಲ್ಲಿ ತೋರು ತವ ಮಹಿಮೆಗಳಸಂತತದಿ ನಿನ್ನಂಘ್ರಿ ಸ್ಮರಣೆ ಕರುಣಿಸುತ 4 ಸರ್ವ ಶ್ರುತಿ ಸಮ್ಮತದ ಪವನಮತ ದೀಕ್ಷೆಯನುಸರ್ವ ಕಾರ್ಯದಿ ನಿನ್ನ ಸೇವೆ ಮತಿಯ |ಸರ್ವದಾ ಕರುಣಿಸುತ ಪೊರೆ ಎಂದು ಭಿನ್ನೈಪೆಪವನಾಂತರಾತ್ಮ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀಶ ಹರಿ ವಿಠಲ | ಸಲಹ ಬೇಕಿವಳಾ ಪ ಪಕ್ಷೀಂದ್ರವಹ ಹರಿಯೆ | ತ್ರ್ಯಕ್ಷಪಿತಸೇವ್ಯಾ ಅ.ಪ. ಕನ್ಯೆ ಬಹು ವಿನಯವತಿ | ಅನ್ಯಸಹವಾಸವನುಮನ್ನಿಸಳು ಎಂಬುವದೆ | ಸ್ವಪ್ನದಲಿ ಸೂಚ್ಯಪನ್ನಂಗ ಶಯನ ಹರಿ | ನನ್ನೆಯಂ ಕೈ ಪಿಡಿದುಮನ್ನಿಸೋ ತರಳೆಯನು | ಮಧ್ವಂತರಾತ್ಮ 1 ಉಚ್ಛ ನೀಚದ ಭಾವ | ಜಗವೆಲ್ಲ ತುಂಬಿಹದುಅಚ್ಯುತನೆ ಸರ್ವರೊಳು | ಉತ್ತಮನೆಂಬಾಸ್ವಚ್ಛ ಪಂಚಕ ಭೇದ | ನಿಚ್ಛ ಮನದಲಿ ಪೊಳೆದುಉಚ್ಛ ಪದವಿಗೆ ದಾರಿ | ನೀನಾಗಿ ತೋರೋ 2 ಹರಿಗುರು ಸದ್ಭಕ್ತಿ | ನಿರುತ ಹಿರಿಯರ ಸೇವೆಮರುತ ಮತ ತತ್ವದಲಿ | ಪರಮ ಅಭಿಲಾಷೇವರಸುನಾಮಮೃತವೆ | ಸರ್ವದಾ ಸವಿವಂತೆಕರುಣಿಸುತ | ಪೊರ ಗುರು | ಗೋವಿಂದ ವಿಠಲಾ3
--------------
ಗುರುಗೋವಿಂದವಿಠಲರು
ಲವಕುಶರ ಹಾಡು ಹರಿಹರ ಬ್ರಹ್ಮ ತ್ರಿಮೂರ್ತಿಗಳ ಬಲಗೊಂಡು *ಗುರುಹಿರಿಯರ ಪಾದಕ್ಕೆರಗೀ | ಅಜನ ಪಟ್ಟದ ಶ್ರೀ ಸರಸ್ವತಿಯನೆ ಬಲಗೊಂಡು ತೊಡಗುವೆ ರಾಮರ ಕಥೆಯಾ 1 ಬಣ್ಣದ ಅಕ್ಷತೆ ಕಣ್ಣು ತುಂಬೆ ಪುಷ್ಪ ಸು ವರ್ಣ ದಕ್ಷಿಣೆ ತಾಂಬೂಲಾ | ಉಮ್ಮಿಯ ಪುತ್ರ ಗಣೇಶಗೆ ಅರ್ಪಿಸಿ ವರ್ಣಿಪೆ ಲವಕುಶರ ಕಥೆಯಾ 2 ಕುಲದ ಸ್ವಾಮಿ ಕದ್ರಿ ನರಸಿಂಹನ ಬಲಗೊಂಡು | ಗುರು ಮಧ್ವರಾಯರ ನೆನೆದು | ಮನದಲ್ಲಿ ವಿಷ್ಣು ದೇವತೆಗಳ ಬಲಗೊಂಡು ತೊಡಗುವೆ ರಾಮರ ಕಥೆಯಾ 3 ವೇದಪಾರಾಯಣ ಅಂತ್ಯದ ಪೀಠಕ ಮಾಧವ ಹರಿ ಸುಗೋತ್ರ | ವೇದ ಮೂರುತಿ ಕೊಂಡಪ್ಪನ ಪುತ್ರಿಕೆಗೆ (?) ಹೇಳಿದಳುಹರಿನಾಮ ಕಥೆಯಾ 4 ಯಗ್ನ ಸಂತತಿಯೂ ಪೀಠಕವೂ | ಅಜ್ಞಾನಿ ಮೂಢಜೀವರಿಗೆ 5 ಹರುವುಳ್ಳ ನಿರಯಾಗಿಗಳೂ | ಹರವುಳ್ಳ ಕೈ(?)ಮುನಿವಳ್ಳೇರು ಜಾಣರು ತಿಳಿವೂದು ಅರ್ಥಸಂದೇಶ 6 ನಾಡನ ಕಥೆಯಲ್ಲ ಬೇಡುಂಬ ಪದನಲ್ಲ ನಾಡೊಳಗೆ ಹರಿನಾಮ ಕೇಳಿದ ಜನರಿಗೆ | ವಿಲ್ಲವಾಗುವುದು 7 ಪ್ರಚಂಡರು ರಾಮಲಕ್ಷ್ಮಣರು | ಇತ್ತಬೇಟೆಯನಾಡುವ ಕ್ರಮಗಳ ಚಂದವಿನ್ನೆಂತು ವರ್ಣಿಸಲೆ 8 ತಾಂಬೂಲ ಶ್ರೀಮೊಗದಿಂದೆ | ಇಂದುವದನೆಯ ಬಿಗಿದಪ್ಪಿ ಮುದ್ದಾಡಿದ ಇಂದುವದನೆ ಗರ್ಭವೆಂದ 9 ನಳಿನನಾಭನು ತನ್ನ ಲಲನೇಯ ಮುಖನೋಡಿ ಲಲನೆ ನಿನ್ನ ಪ್ರೇಮವೇನೆ | ಮುನಿಯು ಆಮುನಿಗಳು ಕೂಡಿದ ನಂತ್ರ ವನಭೋಜನ ತನಗೆಂದ್ಲೂ 10 ಹಲವು ಕಾಲವು ಸೀತೆ ಅಸುರರ ವಡನಾಡಿ ನೆನದಳು ಋಷಿಗಳಾಶ್ರಮವಾ | ಹಸನವಲ್ಲವು ಸೀತೆ ಇನ್ನು ನೀನುಳಿವದು ಋಷಿಗಳಾಶ್ರಮಕೆ ಹೋಗೆಂದಾ 11 ಅಯೋಧ್ಯಾಪುರದ ವಾನರರೆಲ್ಲಾ ಬಿಟ್ಟು ಕೈಹಿಡಿದ ಪುರುಷನ ಬಿಟ್ಟು | ನೆನದಾಳು ಋಷಿಗಳಾಶ್ರಮವ 12 ಅಂದು ಶ್ರೀರಾಮರು ಬೇಟೆಗ್ಹೋದೇವೆಂದು ಇಂದು ಡಂಗುರವ ಸಾರಿದರೂ | ಒಂದು ಗಳಿಗೆ ಮುಹೂರ್ತತಡೆಯಲಾಗದು ಎಂದು ಮಂದಿ ಮಕ್ಕಳ ಕರಸಿದರೂ 13 ಬಂದರು ಮಂತ್ರಿ ಮಾನ್ಯರು ಪ್ರಹಸ್ತರು ಬಂದರು ಪ್ರಧಾನೇರು | ಬಂದರು ರವಿಗುರಿನವಿಗುರಿಕಾರರು (?) ಬಂದರು ವಾಲಗದೋರೊಪ್ಪಿದರು 14 ಆಟಪಾಟದೋರು ನೋಟಕ್ಕೆ ದಾರಾರು ಸೂತ್ರದವರು ಸುವ್ವಿಯವರು | ಪಾಟಕ್ಕೆ ದಾರಾರು ಪೊಗಳುವ ಭಂಟರು ರಘು ನಾಥನೋಲಗದಲೊಪ್ಪಿದರೂ 15 ಹೊನ್ನು ಹಲಗೆಯವರು ಬೆನ್ನಬತ್ತಲೆಯವರು ಚಿನ್ನಬಿನ್ನಾಣನಾಯಕರೂ | ಚೆನ್ನಿಗರಾಮರ ಪೊಗಳುವ ಭಂಟರು ಬಿನ್ನಾಣದಿಂದೊಪ್ಪುತಿಹರೂ 16 ಪಟ್ಟಾವಳಿ ಹೊಸಧೋತರವು ಇಟ್ಟರು ಆಭರಣವನ್ನೂ | ಮಕರಕುಂಡಲ ಕಿರೀಟವೂ ಇಟ್ಟರು ನೊಸಲ ಕಸ್ತುರಿಯಾ 17 ಹಾರಮಾಣಿಕನಿಟ್ಟು ಕಾಲುಪೆಂಡೆಯನಿಟ್ಟು ನ್ಯಾವಳದ ಉಡುದಾರನಿಟ್ಟು ಸೂರ್ಯನ ಕುಲದ ಕುಮಾರರು ನಾಲ್ವರು ಏರಿದರು ಹೊನ್ನ ರಥವಾ 18 ವಾಯುವೇಗ ಮನೋವೇಗವೆಂಬೋ ರಥ ಏರಿದರೆ ರಾಮಲಕ್ಷ್ಮಣರೂ | ಸೂರ್ಯ ತಾನೆ ರಥವ ನಡೆಸೆ ಕೂಡ ಬೇಟೆಗೆ ತೆರಳಿದರು 19 ಅತ್ತಿ ಆಲದ ಮರ ಸುತ್ತ ಹೆದ್ದುಮ್ಮರಿ ಉತ್ತತ್ತಿ ಬೆಳಲು ದಾಳಿಂಬ ಉತ್ತಮ ಅಶ್ವತ್ಥ ಇಪ್ಪಿಯ ವನಗಳು ವಿಸ್ತರವನವೊಪ್ಪುತಿಹವೂ 20 ನಾರಂಗ ಬೆರಸಿದ ಕಿತ್ತಳಿ ಹರಿಸಿಣದ ತೋಪು ಎಲಿತ್ವಾಟ ಅರಸುಮಕ್ಕಳು ರಾಮಲಕ್ಷ್ಮಣರೆಲ್ಲರು ಬೆರಸಿ ಬೇಟೆಯ ನಾಡುತಿಹರೂ 21 ಯಾರಾಡಿಗಿಡಗಳು ಕ್ಯಾದೀಗಿವನಗಳು ನಾಗಸಂಪಿಗೆಯ ತೋಪುಗಳು | ಜೋಡೀಲಿ ಭರತ ಶತ್ರುಘ್ನರೆಲ್ಲರು ಕಾಲಾಳು ಬೇಟೆನಾಡಿದರೂ 22 ಉದ್ದಂಡ ಕೇಕಾಪಕ್ಷಿ ಚಂದಾದ ಬಕನ ಪಕ್ಷಿಗಳೂ | ಅಂದಾದ ಆಲಿವಾಣ ಆಲಹಕ್ಕಿಯು ರಾಮ ಚಂದ್ರನು ಬೇಟೆಯಾಡಿದನು 23 ಬೇಟೆನಾಡಿ ಬಂದು ನಿಂತಾರು ನೆರಳಲ್ಲಿ ಒಂದುಗಳಿಗೆ ಶ್ರಮವ ಕಳೆದು ನಂದನವನದಲ್ಲಿ ತನಿಹಣ್ಣು ಮೆಲುವೋರು ಗಂಗೆಯ ಉದಕ ಕುಡಿಯುವೋರು 24 ನಳಿನನಾಭನು ತಾನು ಬಳಲಿ ಬೇಟೆಯನಾಡಿ ನೆರಳಲ್ಲಿ ತುರಗ ಮೇಯಿಸಿದ ಕಿರಿಯಲಕ್ಷ್ಮಣ ದೇವ ತೊಡೆಯನ್ನೆ ಕೊಡು ಎಂದು ಮಲಗೀದ ಒಂದು ನಿಮಿಷವನೂ 25 ಮುಂದಿನ ಆಗೆಂತ್ರವ(?) ಕಂಡನು ಕನಸಿನಲಿ ರಾಮ ಕಂಗೆಟ್ಟು ಮೈಮುರಿದೆದ್ದಾ | ಕಂದ ಲಕ್ಷ್ಮಣ ಕೇಳೊ ಇಂದೆನ್ನ ಸೊಪ್ನದಲಿ ಬಂದಿಹಳೊಬ್ಬ ತಾಟಕಿಯೂ 26 ಇಂದುವದನೆಮುಡಿ ಪಿಡಿದಳೆವೊ ದುಕಂಡೆ ತುಂಡರಾವಣ ಕುಯೋದು ಕಂಡೆ | ಇಂದು ನೀ ಸೀತೆಯ ಕರೆದೊಯಿದು ಕಾನನದಿ ದಿಂಜಾರಿಳಿಸೋದು ಕಂಡೆ 27 ಮುನ್ನ ಅರಿಯದೆ ನಾವು ಬಂದೆವೋ ಲಕ್ಷ್ಮಣ ಇನ್ನು ಸೀತೆಗೆ ಜಯವಿಲ್ಲಾ | ಅಂದು ಶ್ರೀರಾಮರಾ ಬೇಟೆ ಮೂಲಕದಿಂದೆ ಬಂದಾಳು ಮಾಯದ ಗರತಿ | 28 ಬಂದು ಅಯೋಧ್ಯಾಪುರದ ಬೀದಿಯವಳಗೆ ಚಂದದಿ ಕುಣಿದಾಡುತಿಹಳು | ಅಂದು ಶ್ರೀ ರಾಮರ ಅರಮನೆ ಬಾಗಿಲಿಗೆ ಚಂದುಳ್ಳ ದ್ವಾರಪಾಲಕರೂ 29 ಬಂದು ಅಸುರೆ ನಿನ್ನ ಬಿಡವಲ್ಲೆನೆಂದರೆ ಬಂದಡರಿದಳರಮನೆಗೆ ಕಂಡು ಜಾನಕಿ ತಾನು ಕರಸಿದಳಾಗಲೆ ಬಂದಳು ಮಾಯದ ಗರತಿ 30 ಬಂದು ಪಾದಕ್ಕೆರಗಿ ಕೈಮುಗಿದು ನಿಂತಳು ತಂದಳು ನಾಗ ಸಂಪಿಗೆಯಾ | ಅಂಗನೆ ಜಾನಕಿ ನೀಮುಡಿಯೆಂದು ಕೊಟ್ಟರೆ ಸಂದೇಹ ಬಟ್ಟಳಾ ಸೀತೆ 31 ಈನಾಡ ಗರತಿ ನೀನಲ್ಲ | ದಾರು ಬಂಧುಗಳುಂಟು ದಾರ ಬಳಿಗೆ ನೀ ಬಂದೀ 32 ಈರೇಳು ಲೋಕವ ಸುತ್ತಿ ತಿರುಗಿ ಬಂದೆ ನಾಗಲೋಕಕ್ಕೆ ಬಾಹೆನೆಂದು ನಾಗಲೋಕದಿಂದ ದೇವಲೋಕಕ್ಕೆ ಬಂದೆ ದೇವಿಗೆ ಕಾಣಿಕೆ ತಂದೇ 33 ಹೊನ್ನು ಹಣವನೀವೆ ಅನ್ನವಸ್ತ್ರವನೀವೆ ಇನ್ನು ನೀವಲಿದದ್ದು ಈವೆ | ಇನ್ನು ನೀವಲಿದದ್ದು ಚೆನ್ನಾಗಿ ಕೊಡುವೆನು ಬಿನ್ನವಿಸೆ ಗರತಿ ನೀ ಅಂದ್ಲೂ 34 ಹೊನ್ನು ಹಣವನೊಲ್ಲೆ ಅನ್ನವಸ್ತ್ರವನೊಲ್ಲೆ ನಿನ್ನ ಭಾಗ್ಯವು ನಾನೊಲ್ಲೆ | ಮುನ್ನಿನ ಅಸುರರೂಪ ಇನ್ನು ನೀಬರೆದರೆ ಹರಣ ಹೊರುವೆನು 35 ಮುನ್ನವನು ಕಂಡು ಕೇಳರಿಯ | ಪನ್ನಂಗಧರ ರಾಮ ಬಂದರೆ ಬೈದಾರು ಗಮನ ಮಾಡಂದ್ಲೂ36 ಅಂದರೆ ಸೀತೆ ತನ್ನಂಗಕ್ಕೆ ಬರಲೆಂದು ತಂದು ತೊಡೆದಳು ಭಸುಮವನು | ಅಂದೆನ್ನ ವನಕೆ ಪ್ರದಕ್ಷಿಣೆ ಬರುವಾಗ ಉಂಗುಷ್ಟವನು ಕಂಡುಬಲ್ಲೆ 37 ಉಂಗುಷ್ಟದಂದಕ್ಕೆ ಮುಂದೆ ಪಾದವ ಬರಿ ಹಿಂದೆ ಹಿಂಬುಡ ಮೊಣಕಾಲು | ಹೊಂದಿಸಿ ಬರೆ ಎಂದಳವಳು 38 ಚಂದಾದ ಕಾಗದ ಲೆಕ್ಕಣಿಕೆ ಪಿಡಿದು ತಂದು ಕೊಟ್ಟಳು ಸೀತೆ ಕೈಗೆ | ಒಂದು ಕಾಯಕೆ ಹತ್ತು ಸಿರಗಳ ಬರೆದಳು ಮುಂದೆರಡು ಪಾದವ ಬರೆದಳು 39 ಒಂದರ ಹಿಂದೊಂದು ವರ್ಣಿಸಿ ಬರೆದಳು ತಂದು ನಿಲಿಸಿದಳು ರಾವಣನಾ | ಚಂದವಾಯಿತು ದೇವಿ ವರವಕೊಡೆನುತಲಿ ಎಂದೆಂದಿಗೂ ಅಳಿಯದ್ಹಾಗೇ 40 ಅಳಿದು ಉಳಿಯದಿರು ಉಳಿದು ನೀ ಕೆಡದಿರು ಧರಿಯವಳಗೆ ಅಡಗದಿರು | ಕಿರಿಯ ಲಕ್ಷ್ಮಣದೇವ ಹೊಡೆದರೆ ಮಡಿ ಎಂದು ವರವ ಕೊಟ್ಟಳು ಸೀತೆ ಪಠಕೆ 41 ಮರೆ
--------------
ಹೆಳವನಕಟ್ಟೆ ಗಿರಿಯಮ್ಮ
ಲಾಲಿ ಆಡಿದ ರಂಗ ಲಾಲಿ ಆಡಿದ ಪ. ಬಾಲೆ ರುಕ್ಮಿಣಿ ದೇವೇರೊಡನೆ ಮೂರು ಲೋಕನಾಳ್ವ ದೊರೆಯುಅ.ಪ. ಸಾಧು ಮಚ್ಚಕಚ್ಚಪರೂಪನಾಗಿ ಭೇದಿಸಿ ತಮನ ಕೊಂದುವೇದವನ್ನು ಮಗನಿಗಿತ್ತು ಭೂದೇವಿಯರೊಡನೆ ಕೃಷ್ಣ 1 ಅಮೃತ ಬಡಿಸಿ ಸತ್ಯಭಾಮೆಯರೊಡನೆ ಕೃಷ್ಣ2 ವರಾಹ ರೂಪನಾಗಿ ಆದಿ ಹಿರಣ್ಯಕನ ಕೊಂದುಮೇದಿನಿಯ ಮೇಲಕೆ ತಂದು ರಾಧೆಯೊಡನೆ ನಗುತ ಕೃಷ್ಣ 3 ಪುಟ್ಟಬಾಲನ ನುಡಿಯ ಕೇಳಿ ಕೆಟ್ಟ ಕಶ್ಯಪನುದರ ಸೀಳಿಅಷ್ಟಮಂಗಳವಾದ್ಯವಾಗಲು ಅಷ್ಟ ಸ್ತ್ರೀಯರೊಡನೆ ಕೃಷ್ಣ 4 ಸುರರು ಲಕುಮಿಯೊಡನೆ ನಗುತ ಕೃಷ್ಣ 5 ಯುದ್ಧದಲಿ ಕೊಡಲಿ ಪಿಡಿದು ಗುದ್ದಿ ಕ್ಷತ್ರೇರ ಶಿರವ ತರಿದುಗೆದ್ದ ಸಿಂಹನೆನಿಸಿಕೊಂಡು ಪದ್ಮಾವತಿಯ ಕೂಡೆ ಕೃಷ್ಣ 6 ಸೇತುಬಂಧನವನ್ನೆ ಮಾಡಿ ಧೂರ್ತರಾವಣನ್ನ ಕೊಂದುಖ್ಯಾತಿಪಡೆದು ಪುರಕೆ ಬಂದು ಸೀತೆಯೊಡನೆ ರಾಮಚಂದ್ರ 7 ಒಂದು ಏಳು ಎಂಟುಸಾವಿರ ಇಂದುಮುಖಿಯರನ್ನು ಕೂಡಿಮಂದಮಾರುತ ಚಂದ್ರ ಬರಲು ನಂದಗೋಕುಲದ ದೊರೆಯು 8 ಅಂಬರವ ತೊರೆದು ದಿಗಂಬರÀ ವೇಷವನ್ನೆ ಧರಿಸಿಮಂಗಳಾಂಗ ಮಾರಜನಕ ರಂಗನಾಯಕಿಯೊಡನೆ ಕೃಷ್ಣ9 ಅಚ್ಚಮುತ್ತಿನಾಭರಣವಿಟ್ಟು ಲಕ್ಷವಿಲ್ಲದೆ ಹಯವನೇರಿಭಕುತರಿಗೆ ಅಭಯಕೊಡುತ ಭಕ್ತವತ್ಸಲ ಹಯವದನ 10
--------------
ವಾದಿರಾಜ
ಲಾಲಿ ನಿತ್ಯಾನಂದ ಲಾವಣ್ಯ ಕಂದ ಲಾಲಿ ಭೃತ್ಯಾರ್ತಿ ವಾರಣನೆ ಗೋವಿಂದ ಲಾಲಿ ಜೀಯಾ ಪ್ರತ್ಯಗಾತ್ಮ ಮುಕುಂದ ಲಾಲಿ ರಮಾಧೃತ ಚರಣಾರವಿಂದ ಲಾಲಿ ಪ. ಆದಿ ಮಧ್ಯಾಂತ ವಿದೂರನಾಗಿಹನ ವೇದಾಂತ ವೇದ್ಯ ವೈಭವ ಪಕ್ಷಿಗಮನ ತಾಪ ಕಳಿವವನ ಮೋದದಿ ಪಾಡಿ ತೂಗುವೆನು ಮಾಧವನ 1 ಈರಾರು ದಿಗ್ಗಜವೆಂಟು ಕಾಲುಗಳು ಪಾರಾವಾರಗಳೆಂಬ ಪೊಳೆವ ಪೊಟ್ಟಿಗಳು ಧಾರಾರೂಪ ಭಾಗೀರಥಿ ಸರಪಣಿ ಸೇರಿಸಿ ಡೋಲ ಶೃಂಗಾರ ಗೈಯುವೆನು 2 ನಿರ್ಮಲವಾದೇಳು ಹಲಿಗೆಗಳಿರುವ ಭರ್ಮಗಿರಿಯೆ ಸಿಂಹಾಸನವನಿಟ್ಟಿರುವ ಧರ್ಮಾರ್ಥ ಕಾಮ ಮೋಕ್ಷಗಳೆಂಬ ಫಲವ ಮರ್ಮವನರಿತು ಕಟ್ಟುವೆ ಒಳ್ಳೆಯ ರಥವ 3 ಸೂರ್ಯ ಚಂದ್ರಮರೆಂಬ ಧಾರಾದೀಪಗಳು ತಾರಕಿಗಳು ಸುತ್ತಲಿರುವ ಚಿನ್ಹೆಗಳು ಭವ ಜಯ ಜಯವೆಂಬ ಭರವು ನೀರಜಾಲಯೆ ಕೂಡಿ ಪಾಡುವ ಸ್ವರವು 4 ಕೋಟಿ ಭಾಸ್ಕರ ರಾಭ ಕೋಟೀರ ಕುಂಡಲ ಪಾಟಲಾಧರ ಮುಕುರರಾಭ ಕಪೋಲ ನಳಿನ ಪತ್ರ ನೇತ್ರ ಜ- ಚಾಪ ಧಾಟಿ ಭ್ರೂಯುಗಳ 5 ಪೂರ್ಣ ಮಾಲಾನಂತ ಪೌರ್ಣಮಿಯ ವಿಧು ವರ್ಣ ಮುಖಾಬ್ಜಸುಪರ್ಣವರೋಹ ಕರ್ಣ ಹೀನ ಕಶಿಪೂ ಪರಿಶಯನ ದು- ಗ್ಧಾರ್ಣವ ಮಂದಿರ ಸ್ವರ್ಣ ನಿಭಾಂಗ 6 ಕಂಬು ಸುಗ್ರೀವ ವಿಲಂಬಿತ ವನಮಾಲ ಅಂಬುಜ ಚಕ್ರ ಗದಾಕರ ಹಸ್ತ ಕೌಸ್ತುಭ ಜಗ- ನಾಭ 7 ವಿತತ ರೇಖಾತ್ರಯಯುತಮೃದುದರ ಮಧ್ಯ ಗತ ಕಿಂಕಿಣೀ ಜಾಲ ಕಾಂಚಿ ಕಲಾಪ ಪೀವರೋರು ಸಂ- ಮೂರ್ತಿ 8 ಸಿಂಜನ ಜೀರ ರಂಜಿತ ಚರಣ ಕಂಜಾಂಕುಶಕೇತು ರೇಖಾಲಂಕರಣ ಮಂಜುಳ ಮೃದು ಪಾದತಳ ಮುಕ್ತಾಭರಣ ಸಂಜೀವನ ರಾಜ ಸಂಪ್ರೀತಿ ಕರಣ 9 ಔತ್ತಾನಪಾದಿಯನಾಧಾರಗೊಂಡು ನಿತ್ಯ ತೂಗಾಡುವ ತೊಟ್ಟಿಲ ಕಂಡು ಹಿಂಡು ಬಹು ತೋಷಗೊಂಡು ಸತ್ಯಭಾಮೆಯ ಕಾಂತನಾಡುವ ಚೆಂಡು 10 ಪತಿತ ಪಾವನ ಪರಮಾನಂದ ರೂಪ ಸತತ ತಾನೆ ಪರಿಹರಿಸುವ ತಾಪ ವಿತತ ಮಹಿಮ ವೆಂಕಟಾಚಲ ಭೂ ಗತಿಯಾಗಿ ತೋರುವ ತನ್ನ ಪ್ರತಾಪ 11
--------------
ತುಪಾಕಿ ವೆಂಕಟರಮಣಾಚಾರ್ಯ
ಲಾಲಿ ಪಾಡಿರೆ ಮುದ್ದು ಬಾಲಕಂದನಿಗೆ ಬಾಲಬ್ರಹ್ಮಚಾರಿಯಾದ ಕಪಿವರಗೆ ಪ. ಅಂಜನೆಯ ಸುತನಾಗಿ ಅಂಬರಕೆ ಹಾರಿ ಕಂಜಸಖನಿಗೆ ತುಡುಕಿ ವಜ್ರತನುವಾಗಿ ಸಂಜೀವ ತಂದು ಕಪಿಪುಂಜಗಳ ಸಲಹಿ ಮಂಜುಭಾಷಣ ರಾಮಪಾದ ದಾಸನಿಗೆ 1 ಪುಟ್ಟಿ ಕುಂತಿಯ ಉದರದಲಿ ಗಿರಿ ಒಡೆದು ದುಷ್ಟ ಕೀಚಕ ಬಕಾದಿಗಳ ಸಂಹರಿಸಿ ಕುಟ್ಟಿ ಕೌರವರ ಕುಲ ದ್ರೌಪದಿಯ ಕೂಡಿ ಪಟ್ಟವಾಳಿದ ಕೃಷ್ಣ ಪಾದಸೇವಕಗೆ 2 ಶ್ರೀಪತಿಯ ಆಜ್ಞೆಯಲಿ ವಿಪ್ರಸುತನಾಗಿ ಪಾಪಿ ದುರ್ಮತಗಳನು ತರಿದು ಮುರಿದೊಟ್ಟಿ ಸ್ಥಾಪಿಸುತ ಸಚ್ಛಾಸ್ತ್ರ ಯತಿಯಾಗಿ ಚರಿಸಿ ಗೋಪಾಲಕೃಷ್ಣವಿಠ್ಠಲನ ಮೆರೆಸಿದಗೆ 3
--------------
ಅಂಬಾಬಾಯಿ
ಲಾಲಿ ರಘುಕುಲತಿಲಕ ಲಾವಣ್ಯ ಗುಣಧಾಮ ಪ. ವಿನುತ ಲಾಲಿ ಸುಜನರ ಪಾಲ ಅ.ಪ. ಅಸುರ ಕುಲ ಬಾಧಿಸಲು ವಸುದೇವ ಸುತ ರಕ್ಷ ಹಸನಾಗಿ ಪ್ರಾರ್ಥಿಸಲು ನಿನ್ನ ದೇವತೆಗಳಾಗ ವಸುಧೆ ಭಾರವ ಇಳುಹೆ ಶಿಶುವಾಗಿ ದಶರಥಗೆ ದಶ ದಿಗ್ವಲಯ ಬೆಳಗೆ ದಶಮ ಬಲರಾಮ 1 ಶಿವನ ಧನುವನು ಮುರಿಯೆ ಅವನಿಜೆಯು ಹಾರವನು ಜವದಿ ಹಾಕಲು ಪರಶುರಾಮನ ಗರ್ವ ತವಕದಲಿ ಮುರಿದಯೋಧ್ಯೆಯ ಪಾವನ ಮಾಡೆಂ ದವನಿ ಜಾಲವು ಕೂಗೆ ಸವಿಗಾನದಿಂದ 2 ಮಾತೆ ವಾಕ್ಯವ ಕೇಳಿ ಸೀತೆ ಸಹಿತಲೆ ವನಕೆ ಆತ ಲಕ್ಷ್ಮಣನೊಡನೆನೀತನೀ ತೆರಳೆ ದೂತ ರಾವಣನ ಹತವಾತಸುತ ದೂತ ಸಹ ಖ್ಯಾತಿಲಯೋಧ್ಯೆಗೆ ಬಂದ ಶ್ರೀನಾಥ ಶ್ರೀ ಶ್ರೀನಿವಾಸಾ ಲಾಲಿ 3
--------------
ಸರಸ್ವತಿ ಬಾಯಿ
ಲಾಲಿ ಲಾಲಿ ನಮ್ಮ ಹರಿಯೆ ಲಾಲಿ ಪ ಶ್ರೀಲತಾಂಗಿಯೊಡನೆ ಮೆರೆವದೊರೆಯೆ ಲಾಲಿ ಅ.ಪ ನಂದಲಾಲಿ ಗೋವಿಂದ ಲಾಲಿ ಕಂದನಾಗಿ ಲೋಕ ತಂದೆ ಲಾಲಿ 1 ಬಾಲಲಾಲಿ ತುಲಸಿಮಾಲ ಲಾಲಿ ಕಾಲಕಾಲವಂದ್ಯ ಗೋಪೀಲೀಲ ಲಾಲಿ 2 ವಾಸುದೇವ ಲಾಲಿ ದೇವಕೀತನಯ ಸದ್ಭಾವಲಾಲಿ 3 ರಂಗಲಾಲಿ ಮಂಗಳಾಂಗಲಾಲಿ ಗಂಗಾತಾತ ಲೋಕೋತ್ತುಂಗ ಲಾಲಿ4 ರಾಮಲಾಲೀ ಭಕ್ತಪ್ರೇಮ ಲಾಲಿ ಶ್ಯಾಮಸುಂದರಾಂಗ ನಮ್ಮ ಸ್ವಾಮಿ ಲಾಲಿ 5 ಸತ್ಯ ಲಾಲಿ ಮೌನಿಸ್ತುತ್ಯ ಲಾಲಿ ನಿತ್ಯ ನಿಗಮವೇದ್ಯ ಅನ್ಯುಕ್ತಲಾಲಿ6 ರಾಜಲಾಲಿ ರತ್ನತೇಜ ಲಾಲಿ ರಾಜರಾಜಪೂಜ್ಯ ಜಾಜಿಶ್ರೀಶ ಲಾಲಿ 7
--------------
ಶಾಮಶರ್ಮರು
ಲಾಲಿ ಲಾಲಿ ಹನುಮ ಲಾಲಿ ಬಲಭೀಮ ಲಾಲಿ ಲಾಲಿ ಲಾಲಿ ಗುರು ಮಧ್ವನಾಮ ಪ ತ್ರೇತೆಯಲಿ ಸಾಗರವ ದಾಟಿ ನಿಮಿಷದಲಿ ಸೀತೆಗುಂಗರ ಕೊಟ್ಟು ಕುಶಲ ತಿಳಿಸುತಲಿ ದೂತರಾವಣಗೆ ಶೌರ್ಯಗಳ ತೋರುತಲಿ ಸೀತೆಯ ಕ್ಷೇಮ ರಘುನಾಥಗರುಹುತಲಿ 1 ದ್ವಾಪರದಿ ಕೃಷ್ಣನಿಗೆ ಪರಮಾಪ್ತನಾಗಿ ದ್ರೌಪದಿಯ ವಚನವನು ಸಲಿಸಬೇಕಾಗಿ ಕೋಪದಲಿ ಖಳನ ಸೀಳುತ ತೃಪ್ತನಾಗಿ ಈ ಪರಿಯಲಿ ಹರಿಗೆ ಅರ್ಪಿಸುತ ಚನ್ನಾಗಿ2 ಮಧ್ವಮತವನುದ್ಧರಿಸಬೇಕೆನುತ ಶ್ರದ್ಧೆಯಲಿ ಕೃಷ್ಣನ್ನ ಸೇವಿಸುತ ಸತತ ಮುದ್ದು ಕಮಲನಾಭ ವಿಠ್ಠಲನ ಸ್ಮರಿಸುತ್ತಸದ್ಗ್ರಂಥ ರಚಿಸಿ ಬದರಿಯಲಿ ವಾಸಿಸುತ 3
--------------
ನಿಡಗುರುಕಿ ಜೀವೂಬಾಯಿ