ಒಟ್ಟು 3078 ಕಡೆಗಳಲ್ಲಿ , 118 ದಾಸರು , 1747 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

161ಆರಿಗೆ ವಧುವಾದೆ - ಅಂಬುಜಾಕ್ಷಿ |ಕ್ಷೀರಾಬ್ಧಿ ಕನ್ನಿಕೆ - ಶ್ರೀ ಮಹಾಲಕುಮೀ ಪಶರಧಿಬಂಧನ ರಾಮಚಂದ್ರ ಮೂರುತಿಗೊ |ಪರಮಾತ್ಮ ಸಿರಿಯನಂತ ಪದ್ಮನಾಭನಿಗೋ ||ಸರಸಿಜಭವ ಜನಾರ್ದನ ಮೂರುತಿಗೋ |ಎರಡು ಹೊಳೆಯ ರಂಗಪಟ್ಟಣವಾಸಗೊ 1ಚೆಲುವ ಬೇಲೂರು ಚೆನ್ನಿಗರಾಯನಿಗೊ |ಕೆಳದಿ ಹೇಳುಡುಪಿಯ ಕೃಷ್ಣರಾಯನಿಗೊ ||ಇಳೆಯೊಳು ಪಂಢರಪುರ ವಿಠಲೇಶಗೊ ||ನಳಿನಾಕ್ಷಿ ಹೇಳು ಬದರೀನಾರಾಯಣನಿಗೊ 2ಮಲಯಜಗಂಧಿ, ಬಿಂದುಮಾಧವರಾಯಗೊ |ಸುಲಭದೇವ ಪುರುಷೋತ್ತಮಗೊ ||ಫಲದಾಯಕನಿತ್ಯಮಂಗಳನಾಯಕಗೊ |ಚೆಲುವೆ ನಾಚದೆ ಪೇಳು ಶ್ರೀವೆಂಕಟೇಶಗೋ 3ವಾಸವಾರ್ಚಿತ ಕಂಚೀವರದರಾಜ ಮೂರುತಿಗೊ |ಆ ಸುರವಂದ್ಯ ಶ್ರೀಮುಷ್ಣದಾದಿ ವರಹನಿಗೊ ||ಶೇಷಶಾಯಿಯಾದ ಶ್ರೀ ರಂಗನಾಯಕಗೊ |ಸಾಸಿರ ನಾಮದೊಡೆಯ ಅಳಗಿರಿಯೀಶಗೋ 4ಶರಣಾಗತರನು ಪೊರೆವ ಶಾರ್ಙಪಾಣಿಗೊ |ವರಗಳನೀವ ಶ್ರೀನಿವಾಸ ಮೂರುತಿಗೋ |ಕುರುಕುಲಾಂತಕ ರಾಜಗೋಪಾಲ ಮೂರುತಿಗೊ |ಸ್ಥಿರವಾದ ಪುರಂದರವಿಠಲರಾಯನಿಗೊ 5
--------------
ಪುರಂದರದಾಸರು
161ರಂಗ ಒಲಿದ ದಾಸರಾಯರ - ಪಾದಪದುಮಕಂಗಳಿಂದ ನೋಡಿದಾವರ - ಪಾಪಂಗಳೆಲ್ಲಹಿಂಗಿಪೋಪವಲ್ಲೊ ಸತ್ವರಾ - ಏನು ಪೇಳಲಿವರಾ ಪತುಂಗಮಹಿಮೆ ತೋರಿ ಜನಕೆಮಂಗಳಾವ ಕೊಡುವನಿಂಥಾ ಅ.ಪಪರಮಭಕುತರೆನಿಸಿ ಸತತ-ಹರಿಯ ಮಹಿಮೆತುತಿಸಿಪಾಡುತಾ- ತಮ್ಮ ಮನದಿಹರಿಯ ಮೂರ್ತಿಯನ್ನೇ ನೋಡುತಾ - ಸಾಧುಜನರದುರಿತರಾಶಿ ದೂರಮಾಡುತಾ- ನಿತ್ಯದಲ್ಲಿಹರುಷದಿಂದ ಸ್ತಂಭದೊಳಗೆ -ಇರುವೆವೆಂಬಭಾವಜನಕೆಅರುಹಿ ಜನರ ಈಪ್ಸಿತಾರ್ಥ ಕರೆದು ನೀಡಿ ಮೆರೆವೊರಿಂಥಾ 1ಪರಮತತ್ವ ಸಾರಪುಂಜ - ಹರಿಕಥಾಮೃತಸಾರಹರುಷದಿಂದ ರಚಿಸಿ ಹರಿಯ -ಚರಣಭಜಿಪ ಜನಕೆ ಉಣಿಸಿಪರಮ- ಗೋಪ್ಯ-ಭಾವತಿಳಿಸಿದಾ-ಅರಿಪು ಮಾಡಿರೆಂದು ಪೇಳಿದಾ - ಮೂಢ ಜನಕೆದೊರೆಯದೆಂದು ತಾನು ಪೇಳಿದಾ - ತನ್ನ ಜನಕೆಪರಮಸುಲಭ ತೋರಿ ಮುದದಿಪರಿಪರಿಯಲಿ ಪೊರೆವೊರಿಂಥಾ 2ಧಾತನಾಂಡ - ಮಧ್ಯದಲ್ಲಿ ಜಾತರಾದ ಸ್ವೀಯ ಜನರಮಾತೆ- ಜನಕರಂತೆಅವರಮಾತನಡಸಿಕೊಡುವ ಜಗ -ನ್ನಾಥವಿಠಲನೊಲಿದನೀತಗೆ - ಜಗದಿ ತಾನುನಾಥನಾಮ ಕಾಣೆನೆಂದಿಗೆ - ದಾಸಜನಕೆನಾಥರೆನಿಸಿ ಜಗದಿ ಮಹಾ - ದಾತರಾಗಿ ಸಕಲಭೀಷ್ಠ -ವ್ರಾತಸಲಿಸಿಗುರುಜಗ-ನ್ನಾಥದಾಸವಿಠ್ಠಲ ಪ್ರೀತಿಗೊಳಿಪರಿಂಥಾ 3
--------------
ಗುರುಜಗನ್ನಾಥದಾಸರು
208ಎಂಥ ಚೆಲುವೆಗೆ ಮಗಳನು ಕೊಟ್ಟನುಗಿರಿರಾಜನು ನೋಡಮ್ಮಮ್ಮ |ಕಂತುಹರಶಿವ ಚೆಲುವನೆನ್ನುತ ಮೆಚ್ಚಿದನೇ ನೋಡಮ್ಮಮ್ಮಪಮನೆಯೆಂಬುದು ಸ್ಮಶಾನವು ನೋಡೇಗಜಚರ್ಮಾಂಬರವಮ್ಮಮ್ಮ |ಹಣವೊಂದೆಂಬುದು ಕೈಯೊಳಗಿಲ್ಲವುಕಪ್ಪರವಿದೆ ನೋಡಮ್ಮಮ್ಮ 1ಮೋರೆಗಳೈದು-ಮೂರು ಕಣ್ಣಗಳುವಿಪರೀತವ ನೋಡಮ್ಮಮ್ಮಘೋರವಾದ ರುಂಡಮಾಲೆಉರಗಭೂಷಣವನು ನೋಡಮ್ಮಮ್ಮ 2ಭೂತ ಪ್ರೇತ-ಪಿಶಾಚಿಗಳೆಲ್ಲಾ ಪರಿವಾರವು ನೋಡಮ್ಮಮ್ಮ |ಈತನ ನಾಮವು ಒಂದೇ ಮಂಗಳಕರವುಹರನ ನೋಡಮ್ಮಮ್ಮ 3ತಲೆಯೆಂಬುದು ನೋಡಿದರೆ ಜಡೆಯುಹೊಳೆಯುತಿದೆ ನೋಡಮ್ಮಮ್ಮಹಲವು ಕಾಲದ ತಪಸಿ ರುದ್ರನಮೈಬೂದಿಯು ನೋಡಮ್ಮಮ್ಮ 4ನಂದಿವಾಹನನ ನೀಲಕಂಠನ ನಿರ್ಗುಣನನು ನೋಡಮ್ಮಮ್ಮ |ಇಂದಿರೆರಮಣನ ಪುರಂದರವಿಠಲನಹೊಂದಿದವನ ನೋಡಮ್ಮಮ್ಮ 5
--------------
ಪುರಂದರದಾಸರು
212ತುಂಗೆ ಮಂಗಳತರಂಗೆ-ಹರಿಸರ್ವಾಂಗೇ |ಜಯಜಯ ಜಯತು ತುಂಗೆ ಪಆದಿಯಲೊಬ್ಬ ದೈತ್ಯ ಮೇದಿನಿಯಕದ್ದೊಯ್ದ |ಸಾಧಿಸಿ ರಸಾತಳದಲ್ಲಿರಿಸೆ ||ಭೇದಿಸಿದವನ ನಾಸಿಕದಲ್ಲಿ ಪುಟ್ಟಿದೆ |ಆದಿವರಾಹನ ದಾಡೆಯಲಿ ಬಂದೆ ದೇವಿ 1ಜಲವೆಲ್ಲ ಹರಿಮಯ, ಶಿಲೆಯೆಲ್ಲ ಶಿವಮಯ |ಮಳಲುಮಿಟ್ಟೆಗಳೆಲ್ಲ ಮುನಿಮಯವು ||ಬೆಳೆದ ದರ್ಭೆಗಳು ಸಾಕ್ಷಾತು ಬ್ರಹ್ಮಮಯ |ನಳಿನನಾಳವು ಸರ್ವ ವಿಷ್ಣುಮಯ 2ಇದೆ ವೃಂಧಾವನ, ಇದೆಕ್ಷೀರಾಂಬುಧಿ|ಇದೆ ವೈಕುಂಠಕೆ ಸರಿಮಿಗಿಲೆನಿಸಿದೆ ||ಇದೆ ಬದರಿಕಾಶ್ರಮ, ಇದೆ ವಾರಣಾಸಿಗೆ,ಅಧಿಕವೆಂದೆನಿಸಿದೆ ದೇವಿ ತುಂಗೆ 3ಧರೆಗೆ ದಕ್ಷಿಣವಾರಣಾಸಿಯೆಂದೆನಿಸಿದೆ |ಪರಮಪವಿತ್ರ ಪಾವನ ಚರಿತ್ರೆಯು ನಿನ್ನ ||ಸ್ಮರಣೆಮಾತ್ರದಿ ಕೋಟಿ ಜನ್ಮದಘವನಳಿವ |ಪರಮಸಾಯುಜ್ಯದ ಫಲವೀವ ದೇವಿ4ಪರಮಭಕ್ತ ಪ್ರಹ್ಲಾದಗೊಲಿದು ಬಂದ |ಪರಮನರಸಿಂಹಕ್ಚೇತ್ರವೆಂದೆನಿಸಿ ಮೆರೆದೆ ||ಧರೆಯೊಳಧಿಕವಾದ ಕೂಡಲಿ ಪುರದಲಿ |ವರದಪುರಂದರವಿಠಲನಿರಲು ಬಂದೆ5
--------------
ಪುರಂದರದಾಸರು
215ಅಗಲಿ ಸೈರಿಸಲಾರದೀ ಮನ |ಅಗಲದಿಪ್ಪುದೆ ಜೀವನ ||ಪೊಗರೊಗೆವ ನಗೆಮೊಗದ ಸೊಬಗಿನ |ಸುಗುಣಸಿರಿ ಗೋಪಾಲನ ಪಮುನ್ನ ಸಂಸ್ಕøತಿಪಾಶದೊಳು ಬಿದ್ದನ್ಯಥಾರಕ್ಷಕರ ಕಾಣದೆ |ಬನ್ನಬಡುತಿಹ ಜನರನೀಕ್ಷಿಸಿ ಪೂರ್ಣ ಕರುಣಕಟಾಕ್ಷದಿ ||ತನ್ನ ನಾಮದ ಸುಧೆಯನುಣ್ಣಿಸಿ ತನ್ನ ಭಜನೆಯಸುಖವ ತೋರಿಸಿ |ತನ್ನ ದಾಸರ ಮಾಡಿ ಕೊಂಡಿಹ ಚೆನ್ನಸಿರಿಗೋಪಾಲನ 1ಶೀಲಗುಣ ಕಥನಗಳನರಸದೆ ಕೀಳು ಚಾರಿತ್ರ್ಯಗಳ ಬಗೆಯದೆ |ಲೋಲಚಿತ್ತದಿ ಮಾಡುತಿಹ ಅಘಜಾಲ ಕೋಟಿಗಳೆಣಿಸದೆ ||ಕಾಲದಿಂ ಬಹುನಂಬಿದವರನು ಲೀಲೆಯಿಂದಭಿಮಾನಿಸುತ-ಪರಿ-|ಪಾಲಿಸುತ್ತಿಹ ಮಂಗಳಾತ್ಮಕ ಶೀಲ ಕಂಠಮೂರ್ತಿಯ 2ಭಕ್ತಿ ಕರ್ಮಜಾÕನ ಯೋಗ ವಿರಕ್ತಿಯೆಂಬುದನೇನು ಕಾಣದೆ |ಮತ್ತೆ ಕೇವಲ ಮೂಢ ಭಾವದ ಚಿತ್ತದಲಿನೆರೆನಂಬಿದ ||ಆರ್ತರನು ಅಬಲರ ಅನಾಥರಜ ಮೃತುೈಮುಖದಿಂದವರತಾನೊಲಿ-|ದೆತ್ತಿ ಸಲಹುತಲಿಪ್ಪ ಸೊಬಗಿನ ಕೀರ್ತಿವಂತ ಮಹಾತ್ಮನ 3ಕರುಣದಿಂದೆಳಗಂದಿ ಕರುವಿನ ಮೊರೆಯ ಲಾಲಿಸಿ ಬಿಡದೆ ತೃಪ್ತಿಯ |ಕರೆದು ಮಾಡುವ ಪರಿಯೆ ತನ್ನಯ ಸ್ಮರಿಸುತಿಹ ಕಡುದೀನರ ||ಹೊರಗೆ ಶಿಕ್ಷಿಸಿ ಒಳಗೆ ರಕ್ಷಿಸಿ ಪಿರಿದು ತನ್ನಯ ನಿಜನವರಿಗೆ |ತೆರುವ ಕರುಣಾಳುಗಳ ದೇವನ ಶರಣಜನ ಮಂದಾರನ 4ನೇಮದಲಿ ನಂಬಿದರ್ಗೆ ಸೂಚಿಸಿ ಕಾಮವಾಸನೆಗಳನು ಖಂಡಿಸಿ |ಪಾಮರರ ಪಂಡಿತರ ಮಾಡಿ ಮಹಾಮಹಿಮೆಗಳ ತಿಳಿಸುತ ||ರಾಮರಮಣಿಯ ಸಹಿತ ಸಾಲಿಗ್ರಾಮದಲಿನೆರೆನೆಲಸಿ ಭಕುತರ |ಪ್ರೇಮದಿಂದಲಿ ಪೊರೆಯುತಿಹ ಸುಖಧಾಮ ಪುರಂದರವಿಠಲನ 5
--------------
ಪುರಂದರದಾಸರು
6 (ಅ)ಸಂಪ್ರದಾಯದ ಹಾಡುಗಳು424ಆದಿನಾಥಗೆ ಜಯಮಂಗಳಶ್ರೀಧರ ಮೂರ್ತಿಗೆ ಶುಭಮಂಗಳ ಪ.ಧರಿಸಿ ನಾವೆಯ ಸತ್ಯವ್ರತನ ಪಾವನ ಮಾಡಿಚರಿಸದೆ ಮಂದರಗಿರಿಯ ಹೊತ್ತುಧರೆಯ ನೆಗಹಿ ಬಂಗಾರಗಣ್ಣಿನವನಹರಿದು ದೈತ್ಯಜಗೊಲಿದು ಬಂದವಗೆ 1ಸುರಪನಂತಸ್ತಾಪ ತರಿದು ಧರಿತ್ರಿಯಸುರರಿಗೆ ಸಕಲ ಪದವಿಯನಿತ್ತುಶರಧಿಯ ದಾಟಿ ದಶಶಿರನ ತಲೆ ಚಿವುಟಿತುರುಗಾಯ್ದ ಗೋಪೇರ ಅರಸನಿಗೆ 2ಅಂತರಾಳ ಪಟ್ಟಣಕಪಾಯವನು ಮಾಡಿಅಂತ್ಯದಿ ಯವನರ ಸವರಿದಗೆಚಿಂತಿಪ ದಾಸರ ಚಿಂತಾಮಣಿಗೆಸಿರಿಕಾಂತ ಪ್ರಸನ್ವೆಂಕಟದಾಸನಿಗೆ 3
--------------
ಪ್ರಸನ್ನವೆಂಕಟದಾಸರು
ಅಂಗನಾಕುಲ ಶಿರೋಮಣಿ ಶ್ರೀಮಾ |ಶೃಂಗಾರವನಧಿಗರುಡಧ್ವಜೆಮಂಗಳಾದೇವಿ ಹಸೆಗೇಳು ಪಕ್ಷೀರಸಾಗರಕನ್ಯಾವಿಧಿ|ಮಾರಾಂತಕ ಶಕ್ರಕರಾರ್ಚಿತೆ ||ವಾರಿಜಸದನೆ ಸಿರಿದೇವಿ |ಸಿರಿದೇವಿ ತ್ರೈಲೋಕಕೆ ಜನನೀ ರಕ್ಕಸಾರಿ ಹಸೆಗೇಳು 1ಭಾರತಿಪಾರ್ವತಿ ಶಾಮಲ ಮುಖ |ನೂರು ಸುರರರಸಿಯರೆಲ್ಲರು ||ಮೀರಿಧರುಷದಲಿ ಪದಪಾಡಿ | ಹಸೆಯಬರೆದಿಹರೆಲೆ ನಾರಾಯಣನ ರಾಣೀ || ಹಸೆಗೇಳು 2ಋಷಿಗಳು ವೇದ ಪುರಾಣಗಳುಪ |ನಿಷದ್ವಾಕ್ಯಗಳಿಂದ ತುತಿಸುವರು ||ವಸುಧೆಗಾನಂದ ಪಡಿಸಲು |ಶುಭಕುಂದರದನೆಆಸಿತಕುಂತಲೆಯೇ ಹಸೆಗೇಳು 3ಕಡೆಗಣ್ಣಿನ ನೋಟದಿ ಲೋಕವ |ತಡೆಯದೆ ಪುಟ್ಟಿಸಿ ಪಾಲಿಸಿ ಪುನಃ ||ಕೆಡಿಸುವೆ ಸ್ವೇಚ್ಛೆಯಲಿ ವೈದರ್ಭೆ ಸತ್ರಾಜಿತೆಕೃತಿ|ಯೊಡತಿ ಜಯಮಾಯಾ ಹಸೆಗೇಳು 4ಪ್ರಾಣೇಶ ವಿಠಲನೊಳು ದ್ವೇಷಿಪ |ಹೀನರ ಸಂಹರಕೋಸುಗ ಶರ ||ಪಾಣಿಯಾಗಿಹಳೆಶ್ರುತಿವೇದ್ಯೆ | ಶ್ರುತಿವೇದ್ಯೆ ದೇವದೇವಿಕಅಹಿವೇಣಿಶುಕವಾಣಿ | ಹಸೆಗೇಳು 5
--------------
ಪ್ರಾಣೇಶದಾಸರು
ಅಂಜರು ಹರಿಭಟರು ದುರಿತಾರಿಗಂಜರು ಹರಿಭಟರುಮಂಜಿನ ದಂಡೋಡಿಪ ಮೂಡಣವರಕಂಜಸಖನ ಪೋಲ್ವವರು ಪ.ಅಗ್ಗಳಿಕೆಯೈಗಣೆಯನ ಬಲದಲಿಮುಗ್ಗದೆ ಕುಲಿಶೆದೆಯಲ್ಲಿ ವೈರಾಗ್ಯಾಸ್ತ್ರದಿ ಈರೈದಾಳಾಣ್ಮನಕುಗ್ಗಿಸಿ ಸೆರೆ ತರುವವರು 1ಮೂರರಾಯುಧ ಹತಿಭಯಜರಿದುವಾರಣನಾಕೆರಡಿರಿದು ಶೃಂಗಾರದ ರಾಹುತರೆಂಟರ ಸದೆವರುವೀರಹರಿಧ್ವನಿಯವರು2ಎರಡೊಂಬತ್ತು ನಾದಿಕಾಭೇರಿಎರಡು ಕಹಳೆಯ ಚೀರಿಸರಕುಮಾಡಿ ನವಕಲಿ ಸಂಜಿತರುಹರಿಮಂಡಿತ ನವರಥರು3ಒಂದೆ ನಿಷ್ಠೆಯ ರಣಧ್ವಜ ಮೇರೆಗೆಹಿಂದಾಗದೆ ಮುಂದಾಗಿಒಂದಿಪ್ಪತ್ತರಿ ವ್ಯೂಹ ಕೆಡಹುವರುಕುಂದದ ಧೃತಿ ಮತಿಯವರು 4ಹಂಗಿನ ಸ್ವರ್ಗವ ಸೂರ್ಯಾಡುವರುಡಂಗುರ ಹೊಯ್ಯುವ ಮಹಿಮರುರಂಗ ಪ್ರಸನ್ವೆಂಕಟಪತಿ ಭಟರುಮಂಗಳಪದ ಲಂಪಟರು 5
--------------
ಪ್ರಸನ್ನವೆಂಕಟದಾಸರು
ಅಂತಕನ ದೂತರಿಗೆ ಕೃಪೆಯಿಲ್ಲವದರಿಂದ |ಚಿಂತೆಯನು ಬಿಟ್ಟು ಶ್ರೀ ಹರಿಯೆ ನೆನೆ ಮನವೆ ಪ.ದಿವರಾತ್ರಿಯೆನ್ನದೇ ತಿರುಗಿ ಲಂಪಟನಾಗಿ |ಸವಿಗಂಡ ಊಟಗಳ ಉಣಲರಿಯದೆ |ಅವನ ಕೊಂದು ಇವನ ಕೊಂದು ಅರ್ಥವನು ಗಳಿಸಿಕೊಂಡು |ಜವನ ದೂತರು ಬಂದು ಎಳೆವ ಹೊತ್ತರಿಯೆ 1ಮೊನ್ನೆ ಮದುವೆಯಾದೆ ಕರೆವುವು ಒಂದೆರಡಮ್ಮೆ |ನಿನ್ನೆ ಕೊಂಡೆನು ಕ್ಷೇತ್ರ ಫಲಬಾಹೊದು ||ಹೊನ್ನು ಹಣವುಂಟೆನಗೆ ಸಾಯಲಾರೆನು ಎನಲಾ |ತನ್ನ ದೂತರು ಬಂದು ಎಳೆವ ಹೊತ್ತರಿಯೆ 2ಹೊಸ ಮನೆಯ ಕಟ್ಟಿದೆನು ಗೃಹಶಾಂತಿ ಮನೆಯೊಳಗೆ |ಬಸಿರೆ ಹೆಂಡತಿ ಮಗನ ಮದುವೆಯು ನಾಳೆ ||ಹಸನವಾಗಿದೆ ಬದುಕು ಸಾಯಲಾರೆನು ಎನಲು |ವಿಷಮ ದೂತರು ಬಂದು ಎಳೆವ ಹೊತ್ತರಿಯೆ 3ಪುತ್ರ ಹುಟ್ಟಿದ ದಿವಸ ಹಾಲು ಊಟದ ಹಬ್ಬಮತ್ತೊಬ್ಬ ಮಗನ ಉಪನಯನ ನಾಳೆ ||ಅರ್ಥಿಯಾಗದೆ ಬದುಕು ಸಾಯಲಾರೆನು ಎನಲು |ಮೃತ್ಯು ಹೆಡತಲೆಯಲಿ ನಗುತಿಹುದರಿಯೆ 4ಅಟ್ಟಡಿಗೆ ಉಣಲಿಲ್ಲ ಇಟ್ಟ ನೀರ್ಮೀಯಲಿಲ್ಲ |ಕೊಟ್ಟ ಸಾಲವ ಕೇಳ್ವ ಹೊತ್ತ ಕಾಣೆ ||ಕಟ್ಟಕಡೆಯ ದಿವಸ ತಂಬಿದ ಬಳಿಕಿರಲಿಲ್ಲ |ಇಷ್ಟರೊಳು ಪುರಂದರವಿಠಲನ ನೆನೆಮನೆವೆ 5
--------------
ಪುರಂದರದಾಸರು
ಅರ್ಥಿವಿನೋದವ ಮಾಡುತಸ್ವಸ್ಥದಲೆ ಕುಳಿತರು ಎಲ್ಲಚಿತ್ತ ಜನೈಯನ ಸಹಿತಾಗಿಸಹಿತಾಗಿ ಶಚಿವಾಣಿಮುತ್ತಿನಾರತಿಯ ಬೆಳಗಿರೆ 1ರಂಗ ರುಕ್ಮಿಣಿ ಭಾಮೆಯರಿಗೆಶೃಂಗಾರದ ಲೈವರಿಗೆಅಂಗನೆÉಸುಭದ್ರೆ ದ್ರೌಪತಿದ್ರೌಪತಿಗೆ ವಾಣಿಯರುಮಂಗಳಾರತಿಯ ಬೆಳಗಿರೆÉ 2ಉಲ್ಹಾಸದಲಿಅಮರರುಚಲ್ವ ರಮಿ ಅರಸಗೆಮಲ್ಲಿಗೆಸೂರ್ಯಾಡಿಐವರುಐವರು ಎನುತಲಿಎಲ್ಲರೂ ಹರುಷ ಬಡುವರು 3
--------------
ಗಲಗಲಿಅವ್ವನವರು
ಆಕಳ ಕಾಯ್ದ ಗೋಕುಲವಾಸನುಆಕಳ ಕಾಯ್ದ ಗೋಕುಲವಾಸನನೇಕ ಗುಣನಿಧಿನಾಕೇಶವಿನುತಪುರದಲ್ಲಿದ್ದಂಥ ಕೇರಿಯ ಮಕ್ಕಳ ನೆರಹಿ ಯಾದವ ಪರಿವಾರವೆಲ್ಲನಳಿನಕೇತಕಿ ಎಳೆಯ ಮಾವಿನ ತಳಿಲ ವನದ ಒಳಗೆ ರಂಗನುತೊಂಡರೊಡಗೂಡಿಪುಂಡರೀಕಾಕ್ಷಗೋವಿಂದ ಕಾಳಿಯ ದಂಡೆಯಲ್ಲಿರಿಸಿಕಡು ತೃಷದಿ ಆ ಮಡುವಿನುದಕ ಕುಡಿದು ಗೋವುಗಳೆಲ್ಲ ನಡುಗಿ ಬೀಳಲುಹೊಕ್ಕ ಭರದಿ ದೇವಕಿ ಸುತನ ಸಿಕ್ಕಿಸಿಕೊಂಡು ಬಾಲಕೆ ಬಿಗಿಯಲುಇಂದಿರಾಪತಿ ಆನಂದದಿಂದಾಡಲು ಬಂದುಬೊಮ್ಮವಾಯುಉರಗಾಂಗನೆಯರ ಮೊರೆಯ ಲಾಲಿಸಿ ಕರುಣಿ ಅವರಿಗೆ ಗರುಡನ ಭಯಗರಳಭಯದಿ ಧರೆಗೆ ಬಿದ್ದಂಥ ತುರುಗಳಿಗೆಲ್ಲ ಸ್ಮರಣೆ ಬಪ್ಪಂತೆಮಂಗಳ ಮೂರುತಿ ಪೊಂಗೊಳಲೂದುತ್ತ ತಿಂಗಳಿನಂದದಿ
--------------
ಗೋಪಾಲದಾಸರು
ಆಚರಸ ನೀ ಬಾಚರಸ ನೀ ಈಚಿಯೊಳುಕಟ್ಟಿರುವ ಪೆಸರಿದ ನೆರೆದು ಸುವಾಚ್ಯ ಸಂಪನ್ನಸತ್ಕೀರ್ತಿಕರನೆನಿಪ ಲಿಂಗರಸ ಪೂರ್ಣ ಪುರುಷ |ಶ್ರೀಚಂದ್ರಮೌಳಿಪದಾಂಬುಜಮಧುಪ........... ದೇ ನಾಮ ಗುಜಾಯಿ ಗರ್ಭಜ......... ಸಪ್ತ ಋಷಿಗಳವತಾರನೆಂಬ ತೇಜೆನಿಸಿದ ರಾಶಿಗೆ1xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'(ಹಿರಿಯ) ಮಗ ಮುದ್ದಣ ಖೊಬ್ಬರಸ ಕಮಲರಸ.............ಹಿ ರಮಣ ಮೋಬರಸ ಬಾಲರಸ ತಿಪ್ಪರಸಸಿರಿವಂತರಿವರು ಪೂರ್ವಜ ಲಿಂಗರಸನಸತಿಗುಜಾಯಿಕುವರರೆನಿಸಿ | ಮೆರೆವ ಸಿಂಧಾಪುರದಿ ಕರಣಿಕಿರ್ಪಪ್ರತಿಸೃಷ್ಟಿ ಕರ್ತಾ ವಿಶ್ವಾಮಿತ್ರ ಗೋತ್ರಜ ಸಂಗಮೇಶ್ವರನ ಕೃಪಾಪಡೆದಹರ್ನಿಶಿ ಭಕ್ತರೆನಿಸಿಹನರಲೋಕದಿ2
--------------
ಜಕ್ಕಪ್ಪಯ್ಯನವರು
ಆಚ್ಯುತಾನಂತ ಗೋವಿಂದ-ಹರಿ |ನಾರಾಯಣ ನಿನ್ನ ನಾಮ-ಎನ್ನ |ಮಾಧವಮಂಗಳಗಾತ್ರ-ಸ್ವಾಮಿ |ಗೋವಿಂದ ಗೋಪಾಲ ಬಾಲ-ಸೋಳ |ವಿಷ್ಣುಚಕ್ರವು ಬಂದು ಸುತ್ತಿ-ಮೂರು |ಮಧುಸೂದನ ಮಾರಜನಕ-ನೀನು |ತ್ರಿವಿಕ್ರಮ ತ್ರೈಲೋಕ್ಯನಾಥ-ದೇವ |ವಾಮನರೂಪದಿ ಬಂದು-ಬಲಿಯ |ಶ್ರೀಧರ ಶೃಂಗಾರಾಧಾರ-ದಿವ್ಯ |ಹೃಷೀಕೇಶ ವೃಂದಾವನದಲಿ-ನೀ |ಪದ್ಮನಾಭನೆ ಕೇಳೊ ಮುನ್ನ-ಎನ್ನ |ದಾಮೋದರ ದನುಜಹರಣ-ಹರಿ |ಸಂಕರ್ಷಣ ಸರುವಾಭರಣ-ಇಟ್ಟು |ವಾಸದೇವ ಕೇಳೊ ನಿನ್ನ-ದಿವ್ಯ |ಪ್ರದ್ಯುಮ್ನ ನೀನೆಂದು ಕರೆಯೆ-ದುರ್ |ಅನಿರುದ್ದ ಗೋಕುಲದಲ್ಲಿ-ನೀಪುರುಷೋತ್ತಮಗಾರು ಸಾಟಿ?-ಶ್ರೀ |ಅಧೋಕ್ಷಜಅಸುರಸಂಹಾರಿ-ದೇವ |ನರಸಿಂಹರೂಪವ ತಾಳಿ-ಬಂದೆ |ಅಚ್ಯತ ನೀನಲೆ ಮುದ್ದು-ಗೋಪಿ |ಜನಾರ್ಧನ ಕೇಳೊ ಬನ್ನಪವ-ನೀ |ತೊಲಗಿಸು ಬಂದೆನ್ನ ಮನದ ಕಲುಷವ ||ಉಪೇಂದ್ರನುರಗನ ತುಳಿಯೆ-ಆಗ |ಹರಹರಿ ಎಂದರೆ ಪಾಪ-ರಾಶಿ |ಕೃಷ್ಣ ಕೃಷ್ಣನೆಂಬ ಸೊಲ್ಲ-ಕೇಳಿ |
--------------
ಪುರಂದರದಾಸರು
ಆಟಪಾಟವ ನೋಡಿ ಧನ್ಯರು ರಂಗಯ್ಯನಾಡ್ವಆಟಪಾಟವ ನೋಡಿ ಧನ್ಯರು ಪ.ಹೊಕ್ಕಳಲ್ಲಿರೊ ಮಗನು ಕಂಡರೆನಕ್ಕಾನೆಂಬ ಹೇಯ ಬಿಟ್ಟುಚಿಕ್ಕರೊಡನೆ ನಂದವ್ರಜದಿಮಕ್ಕಳಂತಲಿಪ್ಪ ರಂಗನಾಟ 1ಅಂಗಳದಲ್ಲಿದ್ದ ಪಂಕದಲ್ಲಿಮುಂಗೈಯ ಮುರಾರಿ ಕೃಷ್ಣಸಂಗದೆಳೆಯ ಮಕ್ಕಳೊಡನೆಹಿಂಗದೆ ಬೈಯ್ಯಾಟವಾಡುವಾಟ 2ಚಿನ್ನ ಬಾ ನೀ ಹಸಿದೆಯೆಂದುಚೆನ್ನ ನೀ ಉಣಿಸಿದರೊಲ್ಲದೆಕನ್ನವಿಕ್ಕಿ ಗೊಲ್ಲರ ಮನೆಯಬೆಣ್ಣೆಮೊಸರಸೂರ್ಯಾಡಿಮೆಲ್ಲುವಾಟ3ರಂಬಿಸಿಗೋಪಿನೀಲವರ್ಣದಬೊಂಬೆ ಬಾಲ ತೋಟಿ ಬೇಡೆನೆಕೊಂಬು ಕೊಳಲು ಸೆಳೆದು ಹೆಟ್ಟಿಕುಟ್ಟುವಡೆÉೂಂಬಿಕಾರ ವೀರಧೀರನಾಡುವಾಟ 4ಅಡಗಿದರ್ಭಕರ ಬಲ್ಪಿನಿಂದಲೆಹಿಡಿದುತಂದು ಚಿಣ್ಣಿ ಚಂಡನಾಡುತಬಡಿದು ಸೋಲಿಸಿ ದೂರು ಬರುವ ಮುನ್ನೆಹುಡಿಯ ಹೊರಳೇಳುವ ತೊಂಡೆಕಾರ ದೇವನಾಟ 5ಮೃತ್ತಿಕೆಯನುಂಬ ಮಗನ ಕಂಡುಮತ್ತೆಶೋದೆ ಅಕ್ಕಟೆಂದುತುತ್ತಿಸಿದ ಮಣ್ಣ ತೆಗೆಯಲಾಗಳೆಮತ್ರ್ಯನಾಕವಿಸ್ತಾರ ತೋರಿದ6ಹಲವು ಹಗ್ಗದಿಂ ಕಟ್ಟಿದಗೋಪಿಲಲನೆಗಚ್ಚರಿಯಾಗಿ ಉಲೂಖಲನ ಎಳೆದು ಮತ್ತಿಯ ಮರಗಳಛಲದಿ ಮುರಿದ ವಿಚಿತ್ರ ಚರಿತ್ರನ 7ಕರುಣದೋರಿ ಗೋಪಾಂಗನೇರತೋರದ ಮೊಲೆಯುಂಡ ವರಶಿಶುಗಳಉರುಳಗೆಡಹ್ಯವರೊಳು ನಲಿವದುರುಳಮಾಯಕಾರಖಿಳರೊಡೆಯನ8ಆರ ಪುಣ್ಯವೆಂತಂತೆ ಲೀಲೆಯತೆÉೂೀರಿ ಮುದ್ದು ಮೋಹವ ಬೀರಿದಸಾರಿದ ಭಕ್ತವತ್ಸಲ ನಮ್ಮಜಾರಚೋರ ಪ್ರಸನ್ವೆಂಕಟೇಶನಾಡುವ ಆಟ 9
--------------
ಪ್ರಸನ್ನವೆಂಕಟದಾಸರು
ಆತ್ಮನಿವೇದನ ಭಕುತಿ ತನ್ನಾತ್ಮವನೀವ ಪರಮಾತ್ಮ ವಿಶ್ವಾತ್ಮಗೆ ಪ.ಸರ್ವಕರ್ಮಕರ್ತ ಸರ್ವಕಾಲವರ್ತಸರ್ವಕಾರ್ಯಕೆಹರಿಸ್ವತಂತ್ರನುಸರ್ವಾರ್ಥದಲಿ ಪೂರ್ಣಸರ್ವೇಂದ್ರಿಯ ನಿಯಂತ್ರಸರ್ವದೇಶ ಕಾಲವ್ಯಾಪ್ತ ಗೋಪ್ತನೆಂದು 1ಕಾಸು ಕೋಶಗೇಹದೇಹೇಂದ್ರಿಯ ಪ್ರಾಣಸ್ತ್ರೀ ಸುತ ಪ್ರಿಯ ದಾಸಿ ದಾಸರನುಈಶಗರ್ಪಣೆ ಮಾಡಿ ದಾಸದಾಸನಾಗಿಲೇಶವು ತನಗೆನ್ನದೆ ಸರ್ವಾರ್ಪಿಸುವುದು 2ಜನ್ಮ ಜನ್ಮಾಂತರ ಧರ್ಮ ಕರ್ಮಂಗಳುನಿರ್ಮಲ ಜ್ಞಾನ ವೈರಾಗ್ಯ ಭಕ್ತಿಸ್ವರ್ಮಂದಿರ ಭವಯಾತ್ರೆ ಗರ್ಭಯಾತ್ರೆರಮೆಯ ರಮಣಗರ್ಪಣವೆಂಬ ನಿಷ್ಠೆಯ 3ಅಹರ್ನಿಶಿಶ್ವಾಸೋಚ್ಚ್ವಾಸಾವಸ್ಥಾತ್ರಯಬಹು ಜಪತಪ ಅರ್ಚನೆಸಂಭ್ರಮಬಹುಭಿ:ಶ್ರವಣ ಬಹುಧಾಶ್ರವಣ ಮನನಶ್ರೀಹರಿ ಧ್ಯಾನ ಧ್ಯಾಸಾತ್ಮಾಥರ್Àದಿ 4ಅಲಂಬುದ್ಧಿಯನು ಬಿಟ್ಟು ಅಲಸಮತಿಯನು ಸುಟ್ಟುಅಲಸಲಕ್ಷಣ ವಿಸ್ಮøತಿಯನುನೀಗಿಅಲವಬೋಧಾಚಾರ್ಯ ಮತದವರನು ಪೊಂದಿಲಲಿತ ಪ್ರಸನ್ವೆÉಂಕಟ ಚತುರಾತ್ಮಗೆ 5
--------------
ಪ್ರಸನ್ನವೆಂಕಟದಾಸರು