ಒಟ್ಟು 3955 ಕಡೆಗಳಲ್ಲಿ , 115 ದಾಸರು , 2389 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾವಿನಕೆರೆ 7 ಮಾನಗಿರಿಯು ಹಲವಾಭಿಮಾನ ಗಿರಿಯು ಪ ಮಾನಗರಿ ಭಕ್ತಾಭಿಮಾನ ಮಾಂಗಿರಿಯು ಅ.ಪ ಭಾರತದ ದಕ್ಷಿಣದಿ ನೂರೆಂಟು ತಿರುಪತಿಯೊ ಳೋರಂತೆ ಮಹಿಮೆಗಳ ತೋರಿಸಲೈ ಕಾರುಣ್ಯ ಪರಿಪೂರ್ಣ ಸಿರಿವೆಂಕಟಾದ್ರೀಶ ಏರಿನಿಂದನು ನಮ್ಮ ಮಾಂಗಿರಿಯಲಿ 1 ಕಡುಸುಂದರಾಕೃತಿಯ ಬೆಡಗಿಂಗೆ ಮರುಳಾಗಿ ನಡೆತಂದ ಮಾನವರು ಕುಡಿದೃಷ್ಟಿಬೀರಿ ಪಿಡಿದು ಕೊಂಡೊಯ್ವೆವೆಂದಡಿಯಿಡಲು ರಂಗಯ್ಯ ಅಡಗಿಸಿದ ದೇಹವನು ಒರಳಿನಲ್ಲಿ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾವಿನಕೆರೆ 8 ರಂಗಗಿರಿಯನೇರಿಬರುವಾ ತಂಗಿ ಬರುವೆಯಾ ಪ ಅಂಗನೆಯರು ಕುಣಿದು ಮಣಿವ ಸಂಗದೊಳಿರುವಾ ಅ.ಪ ಅವನ ಪಾದದ ನಡಗೆ ಚಂದ | ಧವಳಹಂಸ ಮನಕಾನಂದಾ ಅವನ ನಲಿವು ನವಿಲಿಗಂದ | ಅವನ ಉಲಿವು ಕೋಗಿಲೆಯಂದಾ 1 ಅವನ ಕರದ ವೇಣುಗಾನ ಭುವನಕೆಲ್ಲ ಅಮೃತಪಾನ ಅವನ ನಗೆಯ ತೋರ್ಪ ಭವವ ಕಳೆವ ಪುಣ್ಯಸದನ 2 ವಾರಿವಾಹ ವರ್ಣದವನು ಹಾರಪದಕ ಧರಿಸಿದವನು ಚಾರುಸುಂದರ ಪೀತಾಂಬರನು 3 ಹಿಂದೆ ನೀನು ನೋಡಲಿಲ್ಲ ಮುಂದೆ ನಾನು ಕರೆವುದಿಲ್ಲ ಇಂದು ಬಂದೆಬರುವನಲ್ಲ ಸಂದೇಹ ಎಳ್ಳಷ್ಟೂ ಇಲ್ಲ 4 ಬೊಮ್ಮನಪ್ಪನವನೆ ನೀರೆ ನಮ್ಮ ಮಾಂಗಿರಿಗೊಪ್ಪುವ ತಾರೆ ಹೊಮ್ಮಿದಾ ಸಂಪ್ರೀತಿಯ ಬೀರೆ ಸುಮ್ಮನೆ ನನ್ನೊಡನೆ ಬಾರೆ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾವಿನಕೆರೆ-2 ಏತಕೆ ಗಿರಿಯಲ್ಲಿ ನೆಲೆಸಿದೆಯೊ | ರಂಗ || ಪ ಭಂಗ ಅ.ಪ ದಾನಿ ನೀನೆನ್ನುತಲಿ ದಿನದಿನವು ಲಕ್ಷಾಳಿ ದೀನ ಮನುಜರು ಬಂದು ಬಾಧಿಸುವರೆಂದೂ ಕಾನನಾಂತರದಲ್ಲಿ ನೆಲೆಸಿದೆಯೊ ನಾಕಾಣೆ ನೀನೆಲ್ಲಿ ಪೋದೊಡಂ ಬಿಡೆನೈಯ ರಂಗ 1 ಜನನಿಬಿಡ ಪುರವೆಂದು ಮನಕೆ ಬೇಸರವಾಗಿ ವನದೊಳಗೆ ಚರಿಸಬೇಕೆನುತಲಿಹೆಯೋ ಮನುಜರ ಅನ್ಯಾಯ ದುಷ್ಕಾರ್ಯಗಳ ನೋಡಿ ಮನಕರಗಿ ಗಿರಿಯನ್ನು ಸೇರಿದೆಯೊ ರಂಗ 2 ದೇಹದಂಡನೆಯಿಂದ ಇಹಪರದ ಸುಖವೆಂಬ ರಹಸ್ಯ ತತ್ವಾರ್ಥವನು ತಿಳಿಸಲಿಹೆಯೋ ಶ್ರೀಹರಿಯೇ ನಿನ್ನ ವೈಚಿತ್ರ್ಯವಸದಳವಯ್ಯ ದೇಹಧಾರಿಗೆ ಅಳವೆ ವರ್ಣಿಸಲು ನಿನ್ನಾ 3 ಬೇವ ಮಾವನು ಗೈದೆ ಮಾವಬೇವನು ಗೈದೆ ಶಿವರೂಪದೆ ನಿಂದು ಕೇಶವನು ಎನಿಸಿದೆ ಭಾವುಕರು ಗೈಯದಾ ದೇವಾಲಯವ ಗೈದೆ ಮಾವಿನಕೆರೆರಂಗ ನಿನಗಾರು ಸಮರೋ 4 ವನಜನಾಭನು ಎಂಬ ಅನುಮತಿಯನೀಯಲ್ಕೆ ಹನುಮದೇವನ ಪೂಜಿಸಿ ಮನವೊಲಿಸಿದೇ ಸನುಮತದಿ ಕಾಯೆನ್ನ ರಾಮದಾಸಾರ್ಚಿತನೆ ಅನುವಿಂದ ನೀನೆನ್ನ ಮನದೊಳಿರು ಹರಿಯೇ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾಸ ನಿಯಾಮಕ ದೇವತೆಗಳ ವರ್ಣಿಸುವೆನು ಪ ಶ್ರೀಶನಾಜ್ಞೆಯಲಿ ಸಕಲ ಸುಜನರಿದ ಕೇಳಿ ಅ.ಪ. ಸಹವೆಂಬ ಮಾರ್ಗ ಶಿರದಿ ಪುತ್ರ ನಾಮಕ ಸವಿತೃ ಮಹಾ ವಿಶಾಲಾಕ್ಷಿರಮಣ ಕೇಶವ ನಿಯಾಮಕನು ಸಹಸ್ಯವೆನಿಪ ಪುಷ್ಯದೊಳು ವಿಷ್ಣುವೆನಿಪನು ಮಹಲಕುಮಿರಮಣ ನಾರಾಯಣನಿದಕೆ ಕರ್ತೃ 1 ತಪವೆನಿಪ ಮಾಘದೊಳು ಅರುಣನಾಮಕ ಸವಿತೃ ಚಪಲಾಕ್ಷಿ ರುಕ್ಮಿಣೀರಮಣ ಮಾಧವನು ದೊರೆಯು ತಪಸ್ಯವೆನಿಪ ಫಾಲ್ಗುಣದಿ ಸೂರ್ಯನೆನಿಪನು ಸುಪವಿತ್ರೆ ಧಾತ್ರೀಪತಿ ಗೋವಿಂದನಧಿದೇವತೆ2 ಮಧುಮಾಸವಾದ ಚೈತ್ರದೊಳು ವೇದಾಂಗನು ಪದುಮಾಕ್ಷ ಮಾ ರಮಾರಮಣ ವಿಷ್ಣು ನಿಯಾಮಕನು ಮಾಧವನೆನಿಪ ವೈಶಾಖದಿ ಭಾನುವೆಂದೆನಿಸುವನು ಮಧುಸೂದನ ನಾಮಕ ಮೋಹಿನೀ ಪತಿಯು 3 ಶುಕ್ರವೆನಿಪ ಜ್ಯೇಷ್ಠದೊಳು ಇಂದ್ರನೆನಿಪ ಸವಿತೃ ತ್ರಿ ವಿಕ್ರಮನಿದಕಧಿಪತಿಯು ಪದುಮಾಕ್ಷಿರಮಣ ಅಕ್ಕರದಿ ಶುಚಿಯೆನಿಪಾಷಾಡದಿ ರವಿಯೆನಿಪನು ಚಕ್ರಧರ ವಾಮನನಿದರಧಿಪತಿ ಕಮಲಾರಮಣ 4 ನಭವಾದ ಶ್ರಾವಣದಿ ಗಭಸ್ತಿಯೆನಿಸುವನು ತ್ರಿಭುವನದಧಿಪತಿ ಶ್ರೀಧರನು ಕಾಂತಿಮತಿರಮಣ ನಭಸ್ಯವೆನಿಪ ಭಾದ್ರಪದದಿ ಯಮನೆನಿಸುವನು ಇಭವರದ ಹೃಷಿಕೇಶ ಅಪರಾಜಿತಾ ರಮಣ 5 ಒದಗಿಹ ಇಷವೆನಿಪಾಶ್ವೀಜದೊಳು ಸ್ವರ್ಣರೇತಾ ಇದಕಭಿಮಾನಿ ಪದಮಾವತಿಪತಿ ಪದುಮನಾಭ ಉದಯಿಸುತಿಹ ಊರ್ಜಿಯೆನಿಪ ಕಾರ್ತಿಕದಿ ದಿವಾಕರ ರಾಧಾರಮಣ ದಾಮೋದರನಿದರಭಿಮಾನಿ 6 ಆಯಾಯ ಮಾಸದಲಿ ಮಾಳ್ಪ ಸಕಲ ಕರ್ಮಗಳನು ಆಯಾಯಭಿಮಾನಿ ದೇವರುಗಳಿಗರ್ಪಿಸಿ ಮಾಯಾರಮಣ ಶ್ರೀ ರಂಗೇಶವಿಠಲನ ನೆನೆಯುತ ಆಯಾಸವಿಲ್ಲದೆ ಪರಮಪದವನು ಪಡೆಯಿರೊ 7
--------------
ರಂಗೇಶವಿಠಲದಾಸರು
ಮುಕುತಿಯ ಮಾರ್ಗವ ಹಿಡಿಯಲಿಬೇಕು ಭಕುತಿಯು ಮನದಲಿ ಮಾಡಲಿಬೇಕು ಪ ಭಕುತರು ತುಳಿವ ಕಲ್ಲಾಗಿರಬೇಕು ಲಕುಮಿಯ ರಮಣನ ದಯೆ ಬರಬೇಕು ಅ.ಪ ನೊಂದವರನು ಸಂತೈಸಲಿಬೇಕು ತಂದೆ ತಾಯಿಯರ ವಂದಿಸಬೇಕು ಬಂದುದ ಮೋದದಿ ಪಡೆಯಲಿಬೇಕು ಇಂದಿರೆಯರಸನೇ ಗತಿಯೆನಬೇಕು 1 ಸಂಗವು ಶರಣರದಾಗಿರಬೇಕು ರಂಗನೊಳೇ ಮನ ತಂಗಿರಬೇಕು ಭಂಗಿಸಿ ಕಾಮವ ವರ್ಜಿಸಬೇಕು ಮಾಂಗಿರಿನಾಥನ ದಯೆ ಬರಬೇಕು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮುಕ್ಕೋಟ ದ್ವಾದಶಿಯ ದಿವಸ (ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ) ರಂಭೆ : ಮತಿವಂತೆ ಪೇಳೀತನ್ಯಾರೆ ದೇವ ವ್ರತತಿಯಧಿಪನಂತೆ ನೀರೆ ತೋರ್ಪ ಅತಿಶಯಾಗಮ ಬಗೆ ಬ್ಯಾರೆ ರತ್ನ ದ್ಯುತಿಯಾಭರಣವ ಶೃಂಗಾರ ಆಹಾ ಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ- ಗತಿ ಸ್ಮøತಿ ತತಿಗಳ ಮತಿಗಗೋಚರನಂತೆ 1 ಊರ್ವಶಿ : ಲಾಲಿಪುದೆಲೆಗೆ ಪೇಳುವೆನು ನೂತನವ ಲೋಲ ಲೋಚನನ ನಾಟಕ ಸತ್ಕಥನವ ಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿ ಬಾಲಾರ್ಕಸದೃಶನೀತನು ಇರ್ಪನಲ್ಲಿ ನೀಲನಿಭಾಂಗನು ನೆನೆವರ ಪಾಪವ ಘೋಲುಘಡಿಸಲೆಂದೆನುತಲಿ ಭಾರ್ಗವ ಕೋಲಿಂದೆಸಗಿದ ಧರಣಿಗೆ ಬಂದು ಸ- ಲೀಲೆಗಳೆಸಗುವ ಜಾಲವಿದೆಲ್ಲ 2 ಸರಸಿಜಗಂಧಿ ಕೇಳ್ ದಿಟದಿ ತನ್ನ ಅರಮನೆಯಿಂದ ಸದ್ವಿಧದಿ ಈರ್ವ- ರರಸಿಯರ್ ಸಹಿತ ಮಿನಿಯದಿ ಅತಿ ಭರದಿಂದ ಸೂರ್ಯನುದಯದಿ ಆಹಾ ಉರುತರ ಹೇಮಪಲ್ಲಂಕಿಯೊಳಡರಿ ತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ3 ಊರ್ವಶಿ : ಮದ್ದಾನೆಗಾತ್ರೆ ಲಾಲಿಸಿ ಕೇಳು ಮಾತ ಬದ್ಧ ನೀ ಪೇಳ್ದ ಮನದ ಶಂಕಾವ್ರಾತ ತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳು ಸೂರ್ಯ ಉದಯ ಕಾಲದೊಳು ಭದ್ರಭವನವನು ಪೊರಟು ವಿನೋದದಿ ಅದ್ರಿಧರನು ಸಜ್ಜನರೊಡಗೂಡಿ ಉ- ಪದ್ರಿತ ಪಾಪವ ಛಿದ್ರಿಪ ಸ್ನಾನಕೆ ರೌದ್ರಿತ ರಾಮಸಮುದ್ರದ ಬಳಿಗೆ 4 ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿ ಪರಮ ಮಹಿಮೆನೆಂದ ಮೇರೆಗೆ ಘನ- ತರ ಸ್ನಾನವೇನಿದು ಕಡೆಗೆ ವೃತ ದಿರವೋ ಉತ್ಸವವೋ ಪೇಳೆನಗೆ ಆಹಾ ತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈ ಪರಿಗಳ ಸಾಂಗದಿಂದರುಹಬೇಕೆನಗಿನ್ನು 5 ಊರ್ವಶಿ : ಅಕುಟಿಲೆ ಬಾಲೆ ಯೌವನವಂತೆ ಕೇಳೆ ಸಕಲಾಂತರ್ಯಾತ್ಮನೀತನು ಸತ್ಯಶೀಲೆ- ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿ ಭಕುತವತ್ಸಲನು ಉತ್ಸವಿಸುವನಲ್ಲಿ ವಿಕಳಹೃದಯ ನರನಿಕರಕಸಾಧ್ಯವೆಂ ದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿ ಅಖಿಳೋತ್ಸವ ಮಸ್ತಕಕಿದು ವೆಗ್ಗಳ ಮುಕುಟೋತ್ಸವವೆಂದೆನುತಲಿ ರಚಿಸುವ 6 ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನ ವೊಲವಿಂದ ಗೈದ ಮೇಲಿವನು ತನ್ನ ರಮಣಿಯರ್ಸಹಿತಂದಣವನು ಏರಿ ನಿಲುನಿಲುತ್ಯಾಕೆ ಬರುವನು ಆಹಾ ಪೊಳಲೊಳಗಿಹ ಜನನಿಳಯದ ದ್ವಾರದಿ ಕಳಕಳವೇನಿದ ತಿಳುಪೆನಗೀ ಹದ7 ಊರ್ವಶಿ : ಕುಂದರದನೆ ಬಾಲೆ ಚದುರೆ ಸೈ ನೀನು ಮಿಂದು ತೋಷದಿ ಅಂದಣವನ್ನೇರಿ ತಾನು ಇಂದೀ ಪುರದೊಳಿರ್ಪ ಜನರ ದೋಷಗಳ ಕುಂದಿಸಲೆಂದವರವರ ದ್ವಾರದೊಳು ನಿಂದಿರುತಲ್ಲಿಯದಲ್ಲಿ ಆರತಿಗಳ ಚಂದದಿ ಕೊಳುತೊಲವಿಂದ ಕಾಣಿಕೆ ಜನ- ವೃಂದದಿ ಕೊಡುತಾನಂದ ಸೌಭಾಗ್ಯವ ಒಂದಕನಂತವ ಹೊಂದಿಸಿ ಕೊಡುವ 8 ರಂಭೆ : ಸರಸಿಜಾನನೆ ಮತ್ತೇನಿದನು ತನ್ನ ಅರಮನೆಯಲ್ಲಿ ಭೂದ್ವಿಜನರನು ಸರ್ವ ಪುರಜನ ಸಹಿತೊಳಗಿವನು ನಾನಾ ತರದಿ ಮೆರೆವ ಭೋಜನವನು ಆಹಾ- ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ- ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9 ಊರ್ವಶಿ : ಮಂಗಲಾನನೆ ಲೇಸು ನುಡಿದೆ ಕೇಳ್ ನೀನು ಗಂಗಾಜನಕ ತನ್ನ ಗೃಹದಿ ವಿಪ್ರರನು ಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿ ಸಂಗಾತದಲಿ ಆರೋಗಣೆ ಗೈದು ಮೆರೆಸಿ ಅಂಗಣದಲಿ ರಾತ್ರೆಯಲಿ ವಿನೋದದಿ ಕಂಗೊಳಿಸುವ ಉರಿದರಳ ಸಮೂಹಕೆ ರಂಗಪೂಜೆಯನುತ್ತಂಗವಿಸುವ ನಿಗ- ಮಂಗಳೊಡೆಯನು ವಿಹಂಗಮಾರೂಢ 10 ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ- ಕುಮುದಾಪ್ತ ಠಾವಿನ ವೋಲು ಬಂದು ಆದರಿಸಲಿದರ ಮಧ್ಯದೊಳು ತನ್ನ ರಮಣಿಯರ್ ಸಹಿತ ತೋಷದೊಳು ಆಹಾ ವಿಮಲವನ್ನೇರಿನ್ನೆಲ್ಲಿಗೈದುವನೆಂಬಾ- ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11 ಊರ್ವಶಿ : ಥೋರ ಕನಕುಂಭಕುಚಭಾರೆ ಕೇಳೆ ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆ ಚಾರು ಈ ಹೂವಿನ ತೇರನೇರುತಲಿ ಕೇರಿ ಕೇರಿಯೊಳಾರತಿಗೊಳ್ಳುತಲಿ ಭೋರಿಡುತಿಹ ವಾದ್ಯಧ್ವನಿ ಘನತರ ಭೇರಿ ಮೃದಂಗಾದ್ಯಖಿಳ ವಿನೋದದಿ ಸ್ವಾರಿಗೆ ತೆರಳುವ ಕ್ರೂರ ನರರ ಆ- ಘೋರ ಪಾಪ ಜರ್ಝರಿಸಲೆಂದು 12 ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನ ಅರಮನೆಯಿದಿರು ರಥವನು ತಾನು ಭರದೊಳಗಿಳಿದಂದಣವನು ಏರಿ ಮೆರೆವಾಲಯದ ಸುತ್ತುಗಳನು ಆಹಾ ತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ- ಭರಿತ ಗಾಯನ ಭೇರಿ ಧ್ವನಿಗಳೇನಿದ ಪೇಳೆ13 ಊರ್ವಶಿ : ಕೃಷ್ಣಾಂಕ ವದನೆ ಕೇಳೆಲೆ ಪೇಳ್ವೆ ನಿನಗೇ ದುಷ್ಟಮರ್ದನ ರಥವಿಳಿವುತ್ತಲಾಗೇ ಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆ ಅಷ್ಟಾವಧಾನವ ರಚಿಸುತ್ತ ಕಡೆಗೆ ಶ್ರೇಷ್ಠನು ರತ್ನಾಸನದಿ ಗ್ರಹದಿ ಪರ ಮೇಷ್ಟಜನಕೆ ಸಂತೋಷಾನಂದದಿ ಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತ ಇಷ್ಟವನೀವ ಯಥೇಷ್ಟ ದಯಾಬ್ಧ 14 ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನು ಹರಿ ಏಕರೂಪನೆನ್ನುತಲಿ ಲಕ್ಷ್ಮೀ ಕರವೆನಿಸುವ ಕಾರ್ಕಳದಲಿ ಭಾಗ್ಯೋ- ದಯ ದೇವಾಲಯದ ಮಧ್ಯದಲಿ ಆಹಾ ತ್ವರಿತದಿ ನುತಿಸಿರೊ ಗುರು ನಾರಸಿಂಹ ಶ್ರೀ- ಕರ ವೆಂಕಟೇಶನ ಚರಣಕಮಲಗಳ 15
--------------
ತುಪಾಕಿ ವೆಂಕಟರಮಣಾಚಾರ್ಯ
ಮುಖ್ಯಪ್ರಾಣ ಕರವೆತ್ತಿ ನಿಂದ ಪ ಹರಿಯೆ ಪರನೆನ್ನದವನ ಹಲ್ಮುರಿವೆನೆಂದು ಅ.ಪ. ಸಿರಿ ರಾಮನಾಜ್ಞೆಯನು ಸಿರದೊಳಾನುತ ಬಂದು ವರಕಪಿಗಳೊಡಗೂಡಿ ಸಿರಿದೇವಿಯನರಸುತ ಶರಧಿತಟಕೆ ಬಂದು ಸಿರಿಪೋದ ಪಥವರಿಯದೆ ಪರಿತೋರದಿರ್ದ ಹರಿವರರಿಗಭಯವಿತ್ತು 1 ಇರುಳು ಇಂದ್ರಜಿತುವಿನ ಶರಹತಿಯಲಳಿದಂಥ ಸಿರಿ ರಾಮ ನೋಡುತ ಮರುಗುತಿರಲಂದು ವರ ಜಾಂಬವನ ಸುಮತಿಯಲಿ ತ್ವರಿತದಿ ಸಂಜೀವನ ಗಿರಿಯ ತಹೆನೆನ್ನುತ 2 ಭರದಿ ದಶಶಿರನು ತಾನರಿಯದೆ ಹನುಮನ ಬಲ ಭರವಸದಲಿ ಮಾಡಿ ಮೂರು ಗುದ್ದಿನ ಪಂಥ ಕರಹತಿಗೆ ಕಂಗೆಟ್ಟು ಧುರವ ಬಿಟ್ಟೋಡುತಿರೆ ಅರಸಿ ಅಸುರನ ಪಿಡಿದ ಹರಿಸು ಋಣವನೆಂದು 3 ದುರುಳ ಕೀಚಕನಂದು ಕರಿಗಮನೆಯನು ಕಂಡು ಸ್ಮರಶರಹತಿಯಿಂದ ಉರುತರದಲಿ ನೊಂದು ಹರಿಣಾಕ್ಷಿಯನು ಬರಿಸಿ ಸೆರಗ್ಹಿಡಿದೆಳೆದುದನು ತರಳೆ ಮುಖದಿ ಕೇಳವನ ಸಿರ ಮುರಿವೆನೆಂದು 4 ಕುರುಪತಿಯ ಸಭೆಯಲಿ ದುರುಪದಿ ಗೈದ ಶಪಥ ಮರೆಯದೆ ದುಶ್ಶಾಸನನ ಧುರದಿ ಕೆಡಹಿ ಕೊಂದು ಉರ ಬಗೆದು ಕರುಳ ನಿಜತರುಣಿಗೆ ಮುಡಿಸುವಾಗ ಬರಲಿ ಬಿಡಿಸುವರೆಂದು ಉರು ಗದೆಯನು ಪಿಡಿದು 5 ಹರಿಹರರು ಸರಿಯೆಂದು ಹರಟುತಿರ್ದವರನು ಗುರುತರ ವಾಕುಗಳೆಂಬ ಬಿರುಬಾಣದಿಂದ ಗರ ಹೊಡೆದವರ ಮಾಡಿ ಪರತತ್ವವನು ಪೇಳಿ ಭರದಿ ನಡೆದೆ 'ಪರಮೋನಹತಿ ಸದೃಶ' ವೆಂದು 6 ಸರುವರಂತರ್ಯಾಖ್ಯ ಹರಿಯಾಜ್ಞಾನುಸಾರ ಸರುವ ಜೀವರಿಗೆ ತಾನು ಗುರುವೆನಿಸಿಕೊಂಡು ಸಿರಿ ರಂಗೇಶವಿಠಲನ ದುರಿತ ಭಯವಿಲ್ಲೆಂದು 7
--------------
ರಂಗೇಶವಿಠಲದಾಸರು
ಮುಟ್ಟದಿರೊ ಎನ್ನನು - ರಂಗಯ್ಯಮುಟ್ಟದಿರೊ ಎನ್ನನು ಪ ಮುಟ್ಟದಿರೊ ಎನ್ನ ಮುಂಗೈಯ ಸೆಳವಿಗೆಮುತ್ತೆಲ್ಲ ಸಡಲ್ಯಾವೊ ಹೇ ಮುದ್ದುರಂಗ ಅ ಬಂಟ ಬಿಡು ಎನ್ನ ಗಂಟ 1 ಹಡೆದವರ ತಲೆಗೆ ಮರಳು ಚೆಲ್ಲಿದಂತೆಮಡದೇರ ಕೂಡ್ಯಾಡಿ - ಕಲಿತ್ಯೆಲ್ಲೊ ಮಿರುಗ ದಿಮ್ಮದಿರುಗ ಸೊಕ್ಕಿಮುರುಗ ಬಿಡು ಎನ್ನ ಸೆರಗ 2 ಅಂಗೈಯ ನೊರೆಹಾಲು ಮುಂಗೈಯ ಮೇಲುಗಡೆಸಿಂಗಾರವಾದುದ - ಕಂಡೆ ಕಲೆಯ ಕಾಗಿನೆಲೆಯ ಬಟ್ಟಮೊಲೆಯ ಕನಕಯ್ಯನಿಗೊಲೆಯ 3
--------------
ಕನಕದಾಸ
ಮುತ್ತಿನಾರತೀ ತಂದೆತ್ತಿಪಾಡುವೆ ಚಿತ್ತಜಾತ ಜನಕ ರಂಗನಾಥದೇವಗೆ ಪ. ಭೂಮಿಪಾಲಗೆ ಶ್ರೀ ಭಾಮೆಯರಸಗೆ ದಾತ ಮನೋ ಮೋಹನಾಂಗಗೆ 1 ಕಾಳೀಮಡುವನು ಕಲಕಿ ಬಂದಗೆ ಬಾಲನಾಗಿ ಗೋವುಗಳನು ಕಾಯ್ದ ಗೊಲ್ಲಗೆ 2 ಮುರವಿರೋಧಿಗೆ ಕರುಣವಾರ್ಧಿಗೆ ತರಳ ಧ್ರುವನಿಗೊಲಿದು ಬಂದ ವರದರಾಜಗೆ 3 ಶರಣರಕ್ಷಣೆ ಸರಸಿಜಾಕ್ಷಗೆ ಪರಮ ಪಾವನ ಶೇಷಶೈಲ ಶಿಖರ ಧಾಮಗೆ 4
--------------
ನಂಜನಗೂಡು ತಿರುಮಲಾಂಬಾ
ಮುದವ ಬೀರುವುದೊ | ಬದರಿಯ ನಿಲಯನೇ ಪ ಮುದವ ಬೀರುವುದು | ಬದರಿಯ ನಿಲಯ ಶ್ರೀವಿಧಿ ವಿಬುಧಾದ್ಯರ | ಮುದಕೆ ಕಾರಣನೇ ಅ.ಪ. ಪಾದ ಉರ | ಮಂದೀರದಲಿ ಧರಸುಂದರಾಂಗನೆ | ಗೋವಿಂದ 1 ಇಂದ್ರ ನಿನ್ನಯ ತಪ | ಕುಂದೀಸೆ ಅಪ್ಸರವೃಂದಾ ಕಳುಹೆ | ಗೋವಿಂದ ||ಚೆಂದಾದುಡಿಗೆ ಉಟ್ಟ | ಅಂದಾಭರಣ ತೊಟ್ಟಮಂದಾಗಮನೆರೆಲ್ಲ | ಗೋವಿಂದ || ಅಂದಿಗೆ ಕಾಲ್ಗೆಜ್ಜೆ ದಂಧಣಿರೆನ್ನ ಕುಣಿದುನೊಂದು ಶ್ರಮಗಳಿಂದ | ಗೋವಿಂದ ||ಕಂದರ್ಪ ಪಿತ ತನ್ನ | ಸುಂದರೂರುವಿನಿಂದಸುಂದರಿಯನ್ನೆ ಕೊಟ್ಟ | ಗೋವಿಂದ 2 ಮಂದಗಮನೆರೆಲ್ಲ | ಸುಂದರಿಯನ್ನೆ ಕೊಂಡುಇಂದ್ರಂಗೆ ಇತ್ತರು | ಗೋವಿಂದ ||ಎಂದೆಂದು ಕಾಣದ | ಸುಂದರಾಕೃತಿ ಕಂಡು ಕಂದೀತು ಇಂದ್ರ ಮುಖ | ಗೋವಿಂದ ||ವೃಂದಾರಕೇಂದ್ರನು | ಅಂದು ಪರಾಶರಜಗೊಂದಿಸಿ ಕ್ಷಮೆಯನು | ಬೇಡಿದ ||ಇಂದ್ರಾವರಜ ಗುರು | ಗೋವಿಂದ ವಿಠಲನದ್ವಂದ್ವ ಪಾದಂಗಳ್ಗೆ | ಶರಣೆಂದ 3
--------------
ಗುರುಗೋವಿಂದವಿಠಲರು
ಮುಂದೆನಗೆ ಗತಿಯೇನೋ ಇಂದಿರೇಶಾ ತಂದೆ ನೀನೆಂದೆನುತ ತಪ್ಪನೊಪ್ಪಿಸುವೇ ಪ ಶ್ರೀಕಾಂತನೇ ನಿನಗೆ ಅಭಿಷೇಕ ಮಾಡದೆಯೆ ನಾ ಕಂಠಪರಿಯಂತ ಕುಡಿದೆನೊ ಹಾಲ ಬೇಕೆಂದು ಹರಿವಾಸರಂಗಳಾಚರಿಸದೆಯೆ ಸಾಕೆಂಬವೊಲು ಸುಖವ ಸೂರೆಗೊಂಡೇ 1 ಅತಿಶಯದಿ ನಾನಿನ್ನ ಪೂಜೆಯನು ಮಾಡದೆಯೆ ಸತಿಸುತರೆ ಸರ್ವಸ್ವವೆಂದಿರ್ದೆನೋ ಹಿತಮಿತ್ರ ಬಾಂಧವರೊಳತಿ ವಂಚನೆಯಮಾಡಿ ಮತಿವಿಕಳನಾದೆನೋ ಪತಿತಪಾವನನೇ 2 ಕಲ್ಯಾಣ ಸಮಯದಲಿ ಕಲಹಗಳ ಹೂಡುತ್ತ ಉಲ್ಲಪದಿ ನಾಕುಳಿತು ನೋಡುತಿದ್ದೆ ಸಲ್ಲಲಿತ ವಾಕ್ಯಗಳನಾಡದೆಯೆ ಸರ್ವತ್ರ ಖುಲ್ಲುಮಾತುಗಳಾಡಿ ನೋಯಿಸಿದೆ ನರರ 3 ತಾರೆಂಬುದಕೆನಾನು ತೌರುಮನೆಯಾಗಿರುವೆ ಪಾರಮಾರ್ಥಕವಾಗಿ ಕೊಡುವುದರಿಯೆ ವೀರವೈಷ್ಣವರಲ್ಲಿ ವಂದಿಸದೆ ದೂಷಿಸುತ ಘೋರಪಾತಕಿಯಾಗಿ ಇರುವೆಯೀ ಜಗದಿ 4 ನರ್ಮದಾನದಿ ಸ್ನಾನ ನಿರ್ಮಲೋದಕಪಾನ ಧರ್ಮ ಮರ್ಮಗಳರಿತು ಮಾಡುವುದು ದಾನ ಪೆರ್ಮೆಯಂಶ್ರೀಹರಿಯ ಧ್ಯಾನ ನಿದಾನ ನೆಮ್ಮದಿಯ ಮಾರ್ಗದಿಂ ಪೊರೆ ನಾನು ದೀನ 5 ನಿತ್ಯ ಜೀವಿಸುವುದನ್ನು ಕಾಡದೆಯೆ ಕಡೆಯಲ್ಲಿ ಉಸಿರುಬಿಡುವುದನು ನೋಡುತ್ತ ಗುರುತರದ ಶ್ರೀಪತಿಯ ಪದಯುಗಕೆ ಗಾಢದಿಂ ಮುಡಿಯಿಕ್ಕಿ ಪಿಡಿವಂತೆ ಮಾಡು 6 ನೀನು ಒಲಿಯುವ ಪರಿಯದಾವುದನು ಮಾಡಿಲ್ಲ ಏನು ಮಾಡಲು ಎನಗೆ ಮನಸು ಬರದು ದೀನ ಪಾಲಕ ನಮ್ಮ ಹೆಜ್ಜಾಜಿ ಕೇಶವನೆ ಸಾನುರಾಗದಿ ನಿನ್ನ ಧ್ಯಾನಿಪುದ ನೀಡೈ7
--------------
ಶಾಮಶರ್ಮರು
ಮುದ್ದು ಕೃಷ್ಣಯ್ಯನ ನೋಡಾನ ಬನ್ನಿ ಪ ಕೃಷ್ಣಗೆ ಪೂಜೆಯ ಮಾಡಾನ ಬನ್ನಿ ಅ.ಪ ಚಿನ್ನದ ತೊಟ್ಟಿಲಲ್ಲಿ ಚೆನ್ನಾಗಿ ಕುಂತವ್ನೆ ಚೆನ್ನ ಚೆಲುವನಕ್ಕೋ ನಗುತವ್ನೇ ಕನ್ನೆ ರಾಧಮ್ಮಗೆ ಸನ್ನೆಯ ಮಾಡುತವ್ನೆ ಬನ್ನಿ ಬನ್ನಿ ಎಂದು ಕರಿತವ್ನೆ 1 ಹುಬ್ಬಹಾರಿಸ್ತವ್ನೆ ಮಬ್ಬ ತೋರಿಸ್ತವ್ನೆ ಅಬ್ಬಬ್ಬ ಇವನಾಟ ಬಲ್ ತಮಾಸೆ ಒಬ್ಬಿಟ್ಟು ಬೇಕಂತ ಕೈಲೇ ತೋರಿಸ್ತಾನೆ ಅಬ್ಬ ಇವ ಏಳೋದು ಒಂಥರ ಬಾಸೆ 2 ಎಂಥ ಮುದ್ದಿನ ಮೊಗ ಚೆಂದುಳ್ಳಿ ಚೆಲುವ ಇಂಥವ್ನ ನೀವೆಲ್ಲೂ ಕಂಡಿಲ್ಲ ಬನ್ರೋ ನಿಂತು ನೋಡಬೇಕಿವಗೆ ಆಲು ಮೊಸರು ಬೆಣ್ಣೆ ಹಣ್ ತುಂಬಿದ ಗಂಗಾಳ ತನ್ರೋ 3 ಕಿನ್ನರ ಗೆಜ್ಜೆ ಕೈಗೆ ಔಜುಬಂದಿ ತೊಟ್ಟವ್ನೆ ಕಣ್ಗೆ ಕಪ್ಪಾ ಹಚ್ಚಿ ನವಿಲ್ಗರಿ ತಲ್ಗಿಟ್ಟಿ ಹಣೆ ಉದ್ದಾದ ತಿಲಕ ಇಟ್ಟವ್ನೇ 4 ರಾಮ್ನೂ ನಾನೆಂತಾನೇ ಭೀಮ್ನೂ ನಾನೆಂತಾನೇ ಕಾಮ್ನಪ್ಪನೂ ನಾನೆ ನೋಡಂತಾನೆ ನಿಮ್ಮೂರ ದೇವ್ರಾಣೆ ನಾನೆ ಮಾಂಗಿರಿರಂಗ ನಿಮ್ನ ಕಾಯೋಕ್ಬಂದೆ ಅಂತಾನೆ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮುದ್ದು ತಾರೋ ರಂಗಾ ಮುದ್ದು ತಾರೋ ಕೃಷ್ಣಾ ಸಿದ್ಧ ವೇದಾ ಗಮಾ ಭೇದ್ಯ ಮೋಹನ್ನಾ ಪ ಕಾಣಲಿಕ್ಕೆ ಹಸಿವೆ ತೃಷೆಗಳೇ ಮರೆವದು ಏಣಾಂಕ ಬಿಂಬ ಮೊದಾ ಬಾಯಿಂದಾ 1 ಕರ್ಪುರವಾ ಕರಡಿಗಿಯಂತೆ ಹೊಳೆವುತಾ ವಪ್ಪುತಿಹ ಚಲ್ವ ಪುಟ್ಟ ಬಾಯಿಂದಾ2 ಅಮ್ಮ ತಾರಮ್ಮ ನಾನುಂಡೆನೆಂದು ಕೈಯ ಬೀಸಿ ಝಮ್ಮನೇ ತೊಡಲು ನುಡಿ ಬಾಯಿಂದಾ 3 ತಪ್ಪ ಹೆಜ್ಜೆಯನಿಟ್ಟು ಘಲಘಲನೆ ನಡೆವುತ ಧಪ್ಪನೆ ಬೀಳುತ್ತಾ ಬಿರಿವ ಬಾಯಿಂದಾ4 ಹಣೆಯ ಅರಳೆಲೆ ಮಾಗಾಯಿಗಳಲ್ಲಾ ಆಡಿಸುತಾ ಕುಣಿದು ಬೆಣ್ಣೆಯ ಬೇಡುವ ಬಾಯಿಂದಾ5 ಕೋರಳಿಗೆ ಅಂಟಹಾಕಿ ಕೈಗಳಿಂದಾ ಬಿಗಿದಪ್ಪಿ ಗುರು ಮಹಿಪತಿ ನಂದನ ಜೀವನ್ನಾ 6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮುಮುಕ್ಷುಗಳನು ಉಪಚರಿಸುವವ ನೀನೆ ಹರಿಯೆ ಪ ಅಪ್ಪಾ ಮಾಂಗಿರಿ ರಂಗ ಅಪರಾಜಿತ ನೀನೆಂಬುದ ತಿಳಿದೂ [ಉಪಾಧಿಗೊಳಗಾದೆ ನಿನ್ನ ಮರೆತು] ಅ.ಪ ಇನ್ನೆವರ ಒಮ್ಮನದಿ ಯೋಚಿಸಿದ ಫಲವಾಗಿ ನಿನ್ನ ಮಹಿಮೆಯನರಿತೆ ಸಂಪೂರ್ಣವಾಗಿ 1 ರನ್ನಹಾರಗಳನ್ನು ಕಟ್ಟಿರುವೆ ಸಾಲಾಗಿ ನಿನ್ನ ಮೈಬಣ್ಣವನ್ನು ಮುಚ್ಚುವುದಕಾಗಿ 2 ಸಕಲಾಂಗಗಳು ಹೊಳೆವ ಮುತ್ತು ಮಾಣಿಕ್ಯಗಳು ಉಡಿಗೆಯಾಗಿರಲೇನು ಕಾಂಬುವಂಗಗಳು 3 ಅದರಿಂದ ನಿನ್ನ ಮೈ ಮುಖವು ಕೈಕಾಲ್ಗಳು ಕಪ್ಪು ಕಾಣಿಸದಿರದು ಹೇಳುವೆನು ಕೇಳಾ 4 ನೂರಾರು ಯೋಜನದ ದೇಹ ನಿನ್ನದು ತಾಯೆ ನಿನ್ನ ಕೆಲಸಗಳೆಲ್ಲಾ ಅತಿ ವಿಚಿತ್ರದ ಮಾಯೆ 5 ಬೆಳಕ ಬಾಯೊಳಗಿಟ್ಟು ಮತ್ತು ಉಗುಳುವೆ ತಾಯೆ ನಿನ್ನ ವಿಸ್ತೀರ್ಣವನು ನಾನಳೆಯಲರಿಯೆ 6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮುರಳಿಯ ಧ್ವನಿಯು ಕರೆಯುತಲಿರುವುದು ಪೋಗುವ ಬಾರೆ ಸಖಿ ಪ ಪೋಗುವ ಬಾರೆ ಸಖಿ ಬೇಸರ ನೀಗುವ ಬಾರೆ ಸಖಿ ವಿಧ ವಿಧ ಭೋಗವ ಪಡುವ ಸಖೀ ಅ.ಪ ವರವಂಶದಿ ಜನಿಸಿದ ಭಾಗ್ಯವ ಈ ಮುರಳಿಯು ತಂದಿತು ಕೇಳೆ ಸಖಿ ಪರಮ ಪ್ರೇಯಸಿ ಇವಳಂತರಂಗವ ಮರೆ ಮಾಚುವ ರಸಿಕಾಗ್ರಣಿ ಕೃಷ್ಣನ 1 ಕ್ಷೀರಶರಧಿತನಯಳ ವೈಭವ ಈ ನೀರಸಳಿಗೆ ಇದು ಅಚ್ಚರಿಯು ಕೋರಿ ಚುಂಬಿಸುವ ಕೃಷ್ಣನಧರ ಸುಧೆ ಧಾರೆಯೊ ಸೂರೆಯೊ ಶೌರಿಯ 2 ಹುಲ್ಲೆ ಹುಲಿಯ ಭಯ ತೊರೆದು ಕೇಳುತಿದೆ ಕಲ್ಲು ಕರಗಿ ಮೃದುವಾಗಿರುವಂತೆ ನಲ್ಲೆ ಎನ್ನ ಹೃದಯವು ಕರಗಿತು ನಾ ನಿಲ್ಲಿ ಎನ್ನ ಮನವಲ್ಲಿ ಪ್ರಸನ್ನನ 3
--------------
ವಿದ್ಯಾಪ್ರಸನ್ನತೀರ್ಥರು