ಒಟ್ಟು 3520 ಕಡೆಗಳಲ್ಲಿ , 121 ದಾಸರು , 2542 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನ್ನಿಸು ಅಪರಾಧ ಮನ್ಮಥ ಜನಕನೆ ಪ ಸನ್ನುತ ಗುಣಸಂಪನ್ನ ಮಹಿಮ ತಾ ರುಣ್ಯ ಪಯೋನಿಧಿ ಬಿನ್ನಪ ಲಾಲಿಸಿ ಅ.ಪ ಅಮರ ಶಿರೋಮಣಿ | ಆಶ್ರಿತ ರಕ್ಷಾಮಣಿ ರಮಣಿ ರುಕ್ಮಿಣಿ ಮುಖಕಮಲ ಗಗನಮಣಿ ನಮಿಪೆ ಭಕ್ತರ ಚಿಂತಾಮಣಿ ತವ ಚರಣಕೆ ಮಣಿಯದೆ ಮೂಢ ಶಿಖಾಮಣಿಯಾದೆನು 1 ಕಾಮಜನಕ ಪರಿಪೂರ್ಣ ಕಾಮ | ಭಕ್ತ ಕಾಮಧೇನು ಕೋಟಿಕಾಮ ಲಾವಣ್ಯನೆ ಶ್ರೀ ಮನೋಹರ ಕೌಸ್ತುಭಮಣಿಹಾರ ನಿ ಮಣಿ ಅಧಿಕವೆ 2 ಶರಣ ಶರಣ್ಯನೆ ಶಾಶ್ವತ ಸುಖದನೆ ಪರಮ ಪುರುಷನೆ ಪಾವನಚರಿತ ಕರಿಗಿರೀಶನೆ ಕರುಣಾಭರಣನೆ ಕರಿವರದನೆ ಕರುಣವ ತೋರಿಸಿ 3
--------------
ವರಾವಾಣಿರಾಮರಾಯದಾಸರು
ಮನ್ನಿಸೈ ಹರಿ ಪನ್ನಗೇಂದ್ರಶಯನ ಪ ಘನ್ನವಾದ ಪಾಪವನ್ನು ಮಾಡಿ ಜಗದಿ ನಿನ್ನ ನಾಮ ಮರದೆ ಸನ್ನುತಾಂಗ ಸಲಹೊಅ.ಪ ಜ್ಞಾನ ಶೂನ್ಯವಾಗಿ ನಾನಾ ವಿಷಯಗಳಲಿ ನಾನು ನನ್ನದೆಂಬ ಹೀನ ಮಮತೆಯಿಂದ ದಾನವಾರಿ ನಿನ್ನ ಧ್ಯಾನಿಸದಲೆ ಕಾಲ ಸಾನುರಾಗದಿಂದ ಶ್ವಾನನಂತೆ ಕಳೆದೆ 1 ರೋಗಹರನೆ ಭವದ ರೋಗವೈದ್ಯನೆಂದು ಬಾಗಿ ನಿನ್ನನುತಿಪೆ ನಾಗಾರಿವಾಹನ ಯೋಗಿವಂದ್ಯನೆ ಚನ್ನಾಗಿ ನಿನ್ನ ಸ್ತುತಿಪ ಭಾಗವತರ ಸಂಗ ದೇವ ಪಾಲಿಸಯ್ಯ 2 ರಕ್ಷಿಸೆಮ್ಮ ಬಿಡದೆ ಲಕ್ಷ್ಮಿರಮಣದೇವ ಕುಕ್ಷಿಯೊಳಗೆ ಜಗವ ರಕ್ಷಿಸುತ್ತ ಪೊರೆವ ಸೂಕ್ಷ್ಮ ಸ್ಥೂಲದೊಳು ಪ್ರತ್ಯಕ್ಷನಾದ ಹರಿ ಉ- ಪೇಕ್ಷಿಸದಲೆ ಕಾಯೋ ಪಕ್ಷಿವಾಹನ ದೇವ 3 ಕಡಲೊಡೆಯನೆ ದೇವ ಮೃಡನ ಸಖವೆ ಕಾಯೊ ಅಡಿಗಡಿಗೆ ಸ್ತುತಿಸಿ ಬಿಡದೆ ಮುಗಿವೆ ಕಯ್ಯ ಎಡಬಲದಲಿ ಶ್ರೀ ಭೂಮಡದೇರಿಂದ ಮೆರೆವ ಉಡುಪ ಮುಖನೆ ಕಾಯೋ ಕಡಲೊಡೆಯನೆ ರಂಗ 4 ಕಮಲಪತ್ರದಳಾಕ್ಷ ಕಮಲಜೋದ್ಭವೆ ಪ್ರಿಯ ಕಮಲಸಂಭವ ಜನಕ ಕಮನೀಯ ಸ್ವರೂಪ ಕಮಲನೇತ್ರೆರ ರಸಕಮಲಪುಷ್ಪಮಾಲಾ ಹೃ- ತ್ಕಮಲದೋಳು ಶೋಭಿಪ ಕಮಲನಾಭ ವಿಠ್ಠಲ 5
--------------
ನಿಡಗುರುಕಿ ಜೀವೂಬಾಯಿ
ಮನ್ನಿಸೊ ಶ್ರೀ ವೆಂಕಟೇಶ ಮಂಜುಗುಣಿಪುರ ವಾಸ ಪ. ಸನ್ನುತ ಸದ್ಗುಣಪೂರ್ಣ ಸುಪ್ರಸನ್ನ ಹಯವದನ ಅ.ಪ. ದೇಶದೇಶದಿಂದ ಬಂದ ಜನರಿಗೆ ಮುದದಿಂದ ಲೇಸಿನ ವರನನೀವೆ ನಿರುತ ಕಾವೆ ಭಾಸುರ ಮೋಹನವೇಷ ಭಾನುಕೋಟಿಸುಪ್ರಕಾಶ ಶ್ರೀಸತಿಯ ಪ್ರಾಣೇಶ ಶ್ರೀ ಶ್ರೀನಿವಾಸ 1 ವಾರಿಧಿಯೊಳಗಾಡಿದೆ ಗಿರಿಯ ಬೆ[ನ್ನ] ಲೆತ್ತಿದೆ ಭಾರವಹ ಧರೆಯ ತಂದೆ ದೈತ್ಯನ ಕೊಂದೆ ದುರುಳ ಬಲಿಯನು ಮೆಟ್ಟಿ ದೈತ್ಯನೃಪರನೆ ಕುಟ್ಟಿ ತರುಣಿಗಭಯವನಿತ್ತೆ ತರುವ ಕಿತ್ತೆ 2 ಪುರದ ನಾರಿಯರನು ಪಂಥದಿ ಗೆಲಿದೆ ನೀನು ವರ ಕಲ್ಕಿಯಾಗಿ ತುರಗವನೇರಿ ಮೆರೆದೆ ವರದ ಪ್ರಸನ್ನ ಹಯವದನ ವೆಂಕಟರಾಯ ಪೊರೆಯೊ ಎಂದೆಂದೂ ಎನ್ನ ಪುರುಷರನ್ನ 3
--------------
ವಾದಿರಾಜ
ಮನ್ನೀಸಯ್ಯಾ - ಮನಸಿಜನಯ್ಯಾ |ಮೌನಿಜನರ ಪ್ರಿಯ ಪಂಡರೀರಾಯಾ ಪ ಪರಿ | ಅನಘ ನೀ ಕರುಣಿಸಿ ಅ.ಪ. ಪರಿ ಏನಿದು ಹರಿಮೊರೆ ಕೇಳೆನನ್ನದು | ಪೊರೆವುದು ಜೀಯಾ 1 ಪರಿ ಗೋಪಿ ಜನರ ಪ್ರಿಯದ್ರೌಪತಿ ಗೋಪ್ತಾ | ಬಲು ಆಪ್ತಾ |ಕೈಪಿಡಿಯುವುದೀ | ಪಾಪಿಯಾದೆನ್ನನುಶ್ರೀಪತಿ ಶ್ರೀಹರೇ | ಮುರಾರೇ ||ಲೇಪಿಸು ಕೀರ್ತಿಕ | ಲಾಪಗಳ್ನಿನ್ನ ಸು-ರಾಪಗಪಿತ ಶ್ರೀ ಪಾವನ ಮೂರ್ತೇ 2 ಭವ ಶರ ನಿಧಿಯಲಿ | ಭವಣೆಯ ಪಡಲಾರೆಭವ ಜನಕನ ಪಿತಾ | ಹೇ ದಾತಾ |ಹವಣೆಯು ದಾವುದು | ಭವವನುತ್ತರಿಸಲುತವಪದ ಸ್ಮರಿಸುತಾ | ಸ್ಮರಿಸುತ್ತಾ ||ಸವನ ಮೂರರೊಳು | ಅವಶದಿ ಕೀರ್ತಿಸಿಬೆವರೆಂಬ ವಿರಜೆಯ | ಅವಗಾಹಿಸುವನುಭವವ ಕೊಡಿಸು ಹರಿ | ಅವನಿಜೆ ವಲ್ಲಭಪವನ ವಂದಿತ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಮನ್ಮಥ ಚರಿತೆ340 ವರಸಿದ್ಧಿ ಗಣೀಶನ ಬಲಗೊಂಡೀ- ಶ್ವರನ ಪದಕೆ ನಮಿಸಿ | ಶಾರದೆಯ ಹರುಷದಿ ಸಂಸ್ಮರಿಸಿ | ಚ ತುರ್ಮುಖಗಳ ನೆರೆ ಭಜಿಸಿ ಹರುಷದಿ ನುತಿ ಮಾಡಿ | ಮಾಡಿ- ದ ಕೃತಿಯ ಸುಜನರು ನೋಡಿ 1 ಕಾಮಜನಕ ನಿಷ್ಕಾಮಜನಾಪ್ತ | ಸು- ಧಾಮನ ಸಖ ಹರಿಯು | ಮೂರು ಲೋಕಗಳಿಗೆ ತಾ ದೊರೆಯು | ಎನ್ನಹೃ- ತ್ಕಮಲದೊಳೀಪರಿಯು ಕಾಮನ ಸುಚರಿತೆಯು | ಸಜ್ಜನರು- ಇಹಪರ ಸದ್ಗತಿಯು | 2 ಪೃಥಿವಿಯೊಳಿಹ ಸುಜನರು ಕೇಳಿ | ಮ ನ್ಮಥ ಚರಿತ್ರೆಯನು | ಸಹ- ರ್ಷೋತ್ಕರದಿ ನೀವ್ಗಳಿದನು | ಭಜಿಸೆ ಸ- ದ್ಗತಿಗಳನು ಕೊಡುವನು | ಶತಮುಖವಂದಿತ ಸಿರಿದೇವಿಯರಸ- ನೊಲಿದು ಪಾಲಿಸುವನು | ಜನರ ಕೋ- ರಿದ ಕೋರಿಕೆಗಳನು | ತಾ ಕೊಟ್ಟವರನು ಪಾಲಿಪ ತಾನು 3 ತಾರಕಾಸುರನ ಭಯದಿಂದಲಿ ವೃಂ- ದಾರಕರೆಲ್ಲ ಕೂಡಿ | ಮನದಿ ಆಲೋಚನೆಗಳ ಮಾಡಿ | ವನಜ ಸಂ- ಭವನಡಿಗಳ ಬೇಡಿ | ಯಾರು ನಮಗೆ ದಿಕ್ಕೆಂದು ಕಳವಳಿಸಿ ನಾರಾಯಣನ ತ್ವರಿತದಲಿ | ಕಂಡು ವಂ- ದಿಸಿದರು ತವಕದಲಿ | 4 ವಾರಿಜಾಕ್ಷ ಪರುಷೋತ್ತಮ ವಿಶ್ವಾ- ಧಾರ ಪರಾತ್ಪರನೆ | ಅನಂತನವ- ತಾರ ಕೃಪಾಕರನೆ | ನಾವೆಲ್ಲ ಸೇರಿದೆವೈ ನಿನ್ನನೆ | ತಾರಕಾಸುರನ ಬಾಧೆ ಪರಿಹರಿಪ- ರ್ಯಾರನು ನಾವ್ ಕಾಣೆವೈಯ್ಯ | ಉ-- ದ್ಧಾರ ಮಾಳ್ಪನು ನೀನೆ | ಭಕ್ತಜನ- ವಾರಿಧಿ ಚಂದ್ರಮನೆ | 5 ಎನಲು ಸುರರೊಡನೆ ನುಡಿದನಾಗಲಾ- ವನಜನಾಭ ತಾನು | ಈ ಕಾರ್ಯ- ಕೆನಾ ಮಾಡುವುದೇನು | ಭ- ವಾನೀಧವನಾಗಿ ಶಿವನು | ಘನತಪವನಾಚರಿಸುತ್ತ ಮೇರುಗಿರಿ ಗುಹೆಯೊಳು ಕುಳಿತಿಹನೊ | ಫಾಲದಲಿ ಉರಿಗುಣ್ಣುಳ್ಳವನು | ಏನಾದರು ಸರಿ ತಾ ಲೆಕ್ಕಿಸನು | 6 ಕಾಮನಿಂದ ಶಂಕರನ ತಪಕಿಡಿಸಿ ಕರುಣಿಸಬೇಕೆಂದು ಬೇಡಿ | ಕೊಂ- ಡರವ ನಿಮ್ಮೊಳು ದಯಮಾಡಿ | ತ- ಕ್ಕಯೋಚನೆಗೈಯ್ಯುವ ನೋಡೀ | ತಾಮಸನ ಮುರಿದು ನಿಮಗೆ ಸಂತತವ ಕೊಡುವನು ಮುದಗೂಡಿ | ಎಂದು ಪೇಳಿದ ಶ್ರೀಹರಿಯನುಡಿ | ಕೇಳಿ ಇಂದ್ರನು ಗುರುವನು ನೋಡಿ 7 ಚಂದದಿಂದ ಸೇರಿ | ಸ್ಮರಗೆಯಿದ- ರಂದವೆಲ್ಲವುಸುರಿ | ಅವನಮನ ಶೌರಿ ಕಂದನೆಯಂತಾದರು ತಂದರೆ ಸುಖ- ವೆಂದನುಪಕಾರಿ | ಗುರು ವಂದಿಸೆ ಸುರರ ದೊರಿ | ಬೀಳ್ಕೊಂಡು ಬಂದನು ಕುಸುಮಪುರಿ8 ಕುಸುಮಾವತಿಯಲಿ ಮೀನಕೇತನನ ಶಶಿನಿಭವದನೆಯರು | ಸೇ- ವಿಸುತಿರೆ ಹಸನಾದ ಪನ್ನೀರು | ಪುನಗು ಅಗರು | ಕುಸುಮಶರನ ಉಪಚರಿಸುತ ಬಾಲೆಯ- ರೆಸೆಯಲು ಮೋದದೊಳು | ರತಿ- ಕ್ರೀಡೆಯಲಿ ಮನಕರಗಲು | ಬೃ ಹಸ್ಪತಿಯನಿತರೊಳೈತರಲು 9 ಊಳಿಗದವರಿಂದ್ಹೇಳಿ ಕಳುಹೆ ಗುರು ಕೇಳಿ ಸುದ್ದಿ ಮಾರಾ | ತವಕ ಪರಿಪರಿಯುಪಚಾರ | ಶ್ರೀಪತಿಯ ಕುಮಾರ | ಬಂದಹದ- ನೇನೆನುತ ಪದಾರ | ವಿಂದ- ಕೆರಗಿದನಾ ಕುಸುಮಶರ 10 ಭಯದೊಳಮರರೆಲ್ಲ | ಕ್ಷೀರಸಾಗರಕೆ ಪೋಗಿ ಎಲ್ಲ | ಬಿನ್ನೈ- ಸಲು ಕೇಳಿ ಸಿರಿಯನಲ್ಲಾ | ಅರಘಳಿಗಾಲೋಚಿಸಿ ಎನ್ನೊಳುನುಡಿ- ದನುಕೇಳಿಸಿರಿಯನಲ್ಲಾ | ಖಳಗೆಧರೆ- ಪರಿ ಎಲ್ಲವನು ಬಲ್ಲ 11 ಕಾಮನು ಪುಷ್ಪ ಶರಗಳಿಂದೆಸೆಯಲು ಗೌ- ರಿಮನೋಹರನೂ | ಬ- ಹಿರ್ಮುಖನಾಗುತ ಶಂಕರನೂ | ನಿ- ಕ್ಷೇಮವ ಪಾಲಿಪನು | ರಜತಗಿ ರಿವಾಸಿ ಮಹೇಶ್ವರನು | ಇದಕೆ ಗುರಿಯಾದ ಎನ್ನ ಮಗನು 12 ನಾವು ಪೇಳಿರುವೆವೆಂದು ನಮ್ಮ ಸು- ಕುಮಾರ ಮನ್ಮಥನಿಗೆ | ಇದೆಲ್ಲಾ ಪೇ- ಳಿವಿವರಮಾಗೆ | ಕರೆದುಕೊಂ- ಡ್ಹೋಗಿ ಶಿವನ ಬಳಿಗೆ | ಪಾವಕಾಕ್ಷ ಬಲು ಕರುಣಾನಿಧಿಯಿ- ನ್ನೇನು ಚಿಂತೆ ನಮಗೆ | ಬೇಗನಡೆ ಯೆಂದ ಹರಿಯು ಎನಗೆ | ಸಕಲವೂ ತಿಳಿಸಿದೆ ನಾನಿನಗೆ | 13 ಪರಿಯೋಚನೆ ಮಾಡು | ಸ- ತ್ಕೀರ್ತಿಯ ಸಂಪಾದನೆ ಮಾಡು | ಭರದಿ ಹೂ ಶರಗಳ ನೀ ಹೂಡು | ಹರನ ತಪವ ಭಂಗಿಸಿ ನಮ್ಮೆಲ್ಲರ ಕರುಣದಿ ಕಾಪಾಡು | ತಂದೆಯ- ಪ್ಪಣೆಯ ಮನದಿ ನೋಡು | ಮೂಜಗದಿ ಯಾರು ನಿನಗೆ ಜೋಡು | 14 ಈ ಪರಿಪೇಳಿದ ಗುರುವಿನ ನುಡಿಯನು ಶ್ರೀಪತಿಯ ಕುಮಾರ | ರತಿಯೊಡನೆ ಮಾರ | ನುಡಿದಳಾ ಶಿವನು ಮಹಾಕ್ರೂರ | ಆಪತ್ತೊದಗುವುದೀಗ ಬೇಡ ಎಂ- ಕಂದರ್ಪಮನದಿ ಸೋತು | ಬೃಹಸ್ಪತಿ- ಗೆಂದ ಕಾಮನಿನಿತು 15 ಸಮ್ಮತಿಯಿದು ಕೇಳಿ | ಪೂಶರನ ಬಿಡಲು ಚಂದ್ರಮೌಳಿ | ಕೋಪಿಸಲಾ ಹಣೆಗಣ್ಣೆನಗಾಳೀ | ಬ್ರಹ್ಮಾಂಡಗಳಾದರು ದಹಿಸುವುದು ಎನ್ನಳವೇ ಎಂದಾ | ಈ ಕಾರ್ಯಕೆ ನಾನು ಬಾರೆನೆಂದ | ನುಡಿಗೆ ಸುರ- ಗುರುಮತ್ತಿಂತೆಂದ | 16 ಮರೆಹೊಕ್ಕಿರುವಮರರ ಪಾಲಿಸುನೀ ಕಂದರ್ಪ | ಜಗ- ತ್ಕಾರಣನೈನಿಮ್ಮಪ್ಪ | ಪೇಳ್ದನುಡಿ ನಡಿಸಲು ಬೇಕಪ್ಪಾ | ಪರಿಪರಿಯಲಿ ನೋಡಿದರು ಜಗದೊಳಗೆ ನಿನ್ನ ಸರಿಯಾರಪ್ಪಾ | ನಮ್ಮ ನುಡಿ ಮೀರಬಾರದಪ್ಪಾ | ಅಷ್ಟು ಪೇಳಿ- ದರು ಕಾಮವೊಪ್ಪಾ | 17 ಕಾಮನವೊಪ್ಪಿಸಿ ಕರದೊಯಿದಮರರು ಕೈಲಾಸವ ಸೇರಿ | ಅರುಹಿದರು ಗಿರಿರಾಜ ಕುಮಾರಿ | ಕೇಳಿನಡೆತಂದಳಾಗಗೌರಿ | ವ್ಯೋಮಕೇಶನಿಹ ಗವಿಯ ದ್ವಾರಕೇ ಬರಲು ನೋಡಿ ನಂದಿ | ತಾಯಿನೀ- ನಿಲ್ಲಿಗೇಕೆ ಬಂದಿ | ಏನು ಅ- ಪ್ಪಣೆಯೆಂದನು ನಂದಿ 18 ವಂದನೆ ಒಳಗೆ ಹೋಗುವನು ಇವನನೀ ತಡೆಯಬೇಡವಯ್ಯ | ಎನ್ನ ಕಂದನು ಇವ ಕೇಳಯ್ಯ | ಎಂದು ಪೇ- ಳಿದ ಗೌರಿಯ ನುಡಿಯಾ | ಮುದದಿ ಶಿರದೊಳಾಂತನು ನಂದೀಶ್ವರ ಮುಂದೆ ಕೇಳಿ ಕಥೆಯ | ಅನಿತರೊಳ್ ಬಂದ ಕಾಮರಾಯ | ಪೋಗ ಬಹು- ದೆಂದ ಪ್ರಥಮಗೇಯ | 19 ಕಾಮಪೊಕ್ಕನಂದು | ಕರದಿ ಜ- ಪಮಾಲೆ ಪಿಡಿದು ಮುಂದು | ಮ- ಹಾಮಂತ್ರಗಳ ಜಪಿಸುತಂದು | ನೇಮದೊಳೇಕೋಭಾವದೊಳಿರುತಿಹ ಸೋಮಧರನ ಕಂಡ | ಏ- ನು ಮಾಡುವದೆಂದು ಪ್ರಚಂಡಾ | ಇಕ್ಷುಧ- ನುಶರಗಳ ಕೈಕೊಂಡಾ | 20 ವಿನಯದಿಂದ ಪ್ರಾರ್ಥಿಸಿ ಮಾತಾಡಿಸು- ವೆನೆಂದು ಶಂಕರನ | ನುತಿಸಿ ಬೇಡಿ- ದನು ಶೂಲಧರನಾ | ಎಷ್ಟಾದರು ಕರಗಲಿಲ್ಲವನಮನಾ | ಪರಿಪರಿಯೋ- ಚನೆ ಮಾಡಿ ಮನ್ಮಥನು | ಬೆರಗಾಗುತಾ ನಿಂತಾ ಸಮಯನೋಡುತ- ಲಿರತಿಯ ಕಾಂತಾ | ಮನ ದಿ ಹೊಂದಿದನು ಮಹಾಚಿಂತಾ 21 ನೆಂದು ಯೋಚಿಸಿದನು | ಇ- ಕ್ಷು ಧನುವನು ಜೇ ಹೊಡೆದಾನು | ಮಹೇ- ಶನ ಮರ್ಮಸ್ಥಳಗಳನು | ಪುಷ್ಪ ಬಾಣಗಳೂಡೆಸೆಯೆ ಮ- ಶರಗಳನು ಸುರಿದಾನು | ಜ- ನರೆ ಕೇಳೀಯಾಶ್ಚರ್ಯವನು | 22 ಆ ಮಹೇಶ್ವರನ ಮೂಲ ತಿಳಿಯಲಿಂ- ದ್ರಾದಿಸುರರಿಗಳವೆ | ಕೇಳಿಯೀ ಕಾಮನೇನು ಲಕ್ಷ್ಯವೆ | ಕರಿಚರ್ಮಾಂಬರನಾ | ಮೀನ ಕೇ- ತನನ ಬಾಣಕೆ ಮನಾ | ಬಹಿರ್ಮು- ಖನಾಗಿ ನೋಡಿ ಸ್ಮರನಾ | 23 ಕಣ್ಣುತೆಗೆದು ಮುಕ್ಕಣ್ಣಯಲೋ ನಿನ- ಗೆನ್ನೊಳೇಕೆ ಪಂಥಾ | ಛೀ ಛೀನಡಿ ಹೋಗು ಹೋಗು ಭ್ರಾಂತ | ಎಂದು ತಾ- ತನ್ನನಿಜಸ್ವಾಂತ-| ವನ್ನು ಪೂರ್ವದಂದದಿ ತಪದಲ್ಲಿರಿಸಚ- ಪೋಲ್ವಂದದಲಾ ಶಾಂತಾ | ಶೂರ್ಪಕಾ- ರಿಯು ಎದುರಲಿ ನಿಂತಾ | 24 ನಾನು ಬಂದಾ ಕಾರ್ಯವ ಕೇಳದಲೆ ಇ- ದೇನೀ ಪುರಹರನು | ಛೀಹೋಗೋ- ಗೆಂದು ಗರ್ಜಿಸಿದನು | ಎನುತ ತೆ- ಗೆದೆಚ್ಚ ಪೂಶರವನು | ನಾನಾವಿಧದಲಿ ತನ್ನ | ಚಮತ್ಕಾ- ರಗಳ ತೋರಿಸಿದನು | ಮನದಿ ಭಯಗೊಳುತ ಮನಸಿಜನು | ಮುಂದಾಗುವ ಕಥೆಯ ಕೇಳಿಯಿನ್ನು 25 ಭರ್ಗಕಣ್ದೆರೆದು ನೋಡಲಾಕ್ಷಣದಿ ಭರದಿಂ ಮನ್ಮಥನಾ | ಕೋಪಕಿಡಿ- ಯಿಡುತ ಫಣೆಗಣ್ಣ | ತೆಗೆದು ನೋಡಲು ತಕ್ಷಣ | ಚಿಣ್ಣಾ ಭುಗ್ಗು ಭುಗ್ಗುಯೆಂದೇಳ್ವ ಉರಿಗಳಿಂ ದಗ್ಧನಾದ ಮದನಾ | ಭಸ್ಮದಂ- ತಿದ್ದು ಮರ್ಮಸದನಾ | ಅಗ್ನಿವ್ಯಾ ಪಿಸೆ ಬ್ರಹ್ಮಾಂಡವನಾ 26 ಸುರರು ಕಿನ್ನರರು ಗಡಗಡ ನಡುಗುತ ಬೆರಗಾದರು ನೋಡಿ | ಅವರ- ಶಿರವನಲ್ಲಾಡಿ | ಚರರು ಬಂದು ರತಿಗೀ ಸುದ್ದಿಯ ಪೇಳಿ- ದರು ದುಃಖ ಮಾಡಿ | ಕೇಳಿ ನಾರಿಯರು ಶೋಕವಮಾಡಿ | ರತಿಯು ನೆಲದೋಳ್ ಬಿದ್ಹೊರಳಾಡಿ | 27 ಹಾಹಾರಮಣಾ ಹಾ ನಿಜೇಶ ಹಾ ಪ್ರಾಣಕಾಂತಕಾಮಾ | ಎನ್ನ ಕರ್ಕಶನಿಸ್ಸೀಮ | ಸಾಹಸ ಮಾಡುವೆನೆಂದು ಪೋಗಿ ಶಂ- ಕರನಿಂದಲಿ ಮಡಿದೆ | ಪೇಳಿದಮಾ- ತ್ಕೇಳದೆ ನೀ ನಡೆದೇ | ಪೋಗಬೇ- ಡೆಂದು ನಾನು ನುಡಿದೆ 28
--------------
ಗುರುರಾಮವಿಠಲ
ಮರತಿರಲಾರೆ ನಿಮ್ಮನೂ ಹರಿಯೇ ಧೊರೆಯೆ ಪ ಸುರಮುನಿವರನುತ ಕರಿವರ ಸುಚರಿತ ಕರುಣಿಸಿ ಕಾಯೊ ಮಮದುರಿತಹರಣ ವೆಂಕಟ್ರಾಮಾನುಜ 1 ಕುಸುಮ ಶರೀರ ಭಾವಾ ಪಶುಪತಿಪ್ರಿಯಸೇವೆ ತೃಷೆಯ ನೀಗಿಸೊ ವೆಂಕಟ್ರಾಮಾನುಜ2 ಭರತಪುರೀಶನ್ಯಾರೊ ನಿಜ ಸುರತವ ತೋರೋ ಗುರುವು ತುಲಶಿರಾಮ ದೊರೆಯೆ ಸರಿಯೊ ವೆಂಕಟ್ರಾಮಾನುಜಾ 3
--------------
ಚನ್ನಪಟ್ಟಣದ ಅಹೋಬಲದಾಸರು
ಮರವೆ ಮುಸುಕಿದುದುತಾ ಪರಮ ಕೃಪೆವಂತ ಬಂದು ಪ್ರಳಾಪವೇನಿದುಯೆಂದು ನನ್ನಯತಾಪವನು ತಂಪಿಸುತ ಬಿಗಿಯಪ್ಪಿದನು ದೇಶಿಕನು 1ಕಂಗಳೊಳಗಾನಂದಜಲ ಸುರಿದಂಗದೊಳು ರೋಮಾಂಚವಾಗಿಯೆಮಂಗಳಾಕೃತಿಗಂಡು ಚರಣಕ್ಕೆರಗಿದೆನು ಮರಳಿಕಂಗಳೊರತೆಯ ತೊಡೆದು ದಿವ್ಯ ಕರಂಗಳಿಂದಲಿ ಶಿರತಡ' ಸರ್ವಾಂಗವನು ಬಿಗಿಯಪ್ಪಿಯಭಯವನಿತ್ತ ದೇಶಿಕನು 2ನಿನ್ನೊಳಾನಿಹೆನೆಲ್ಲಿ ಪೋಪೆಡೆಯನ್ನು ತೋರಿಸು ನನಗೆ ನೀನಾರೆನ್ನ ಮನ ನಿನ್ನುವನುಳಿದು ನಿಲಬಲ್ಲುದೇ ಮಗನೇಇನ್ನು ಧೈರ್ಯವ ಮಾಡು ಗಿರಿಗುಹೆಯನ್ನು ಸೇರ್ವೆನು ನಾನು ಜನತತಿಯನ್ನು ಹೊದ್ದುವದಿಲ್ಲವೆಂದುಸುರಿದನು ದೇಶಿಕನು 3ಇರಿಸಿರುವೆನೀ ಪಾದುಕೆಗಳನು ಹರುಷದಿಂದರ್ಚಿಸುತ ಭಾ'ಸುಬರಿಯ ಭ್ರಾಂತಿಯ ಬಿಟ್ಟು ಭಕ್ತಿಯ ಬಲದಿ ಮಂತ್ರವನುನಿರುತ ಜಪಿಸುತ್ತಿರು ಯಥೇಚ್ಛೆಯೊಳರಿವು ಸುಖಸಂಪತ್ತಿ ಲಭಿಪುದುಪರಮ ಭಕತನು ನೀನೆನುತ ವಾಚಿಸಿದನು ದೇಶಿಕನು 4'ಜಯದಶ'ುಯ ದಿವಸ ಲಭಿಸಿತು 'ಜಯಕರ ಮುಂದಿನ್ನು ನಿನಗೆಲೆದ್ವಿಜನೆ ಸುತ ಪೌತ್ರಾದಿ ಕುಲಪಾರಂಪರೆಗೆ ನಿನ್ನಾಸುಜನತೆಯ ಕರುಣಿಪುದು ಭಕ್ತವ್ರಜದೊಲೋಲಾಡುವದು ತಪ್ಪದು'ಜಯಸಾರಥಿ ನಿನ್ನ ವಶವೆಂದನು ಗುರೂತ್ತಮನು 5ಅನಿತರೊಳು ಜನಸಂದಣಿಯ ಧ್ವನಿಯನು ತಿಳಿದು ನಾನೆದ್ದೆ ಬೇಗದಿಘನಕೃಪಾನಿಧಿ ಗುರುವ ಕಾಣದೆ ಮತ್ತೆ ಬಳಲಿದೆನುಇನನುದಿಸಿದೊಂದರೆಘಳಿಗೆ ತಲೆಯನು ಬಿಡದೆುದ್ದಲ್ಲಿ ಪಾದುಕೆಯನು ಶಿರದಿ ತಾಳಿದೆನು ಮನೆಗೈದಿದೆನು ಹರುಷದಲಿ 6ತಿರುಪತಿಯ ವೆಂಕಟನು ಸುಖವನು ಕರುಣಿಸಲು ದೇಶಿಕನ ತನುವನುಧರಿಸಿ ಪಾದುಕೆುತ್ತು ಸಲ'ದನೊಲಿದು ಕೃಪೆುಂದಹರುಷದಿಂದೀ ದಿವಸ ಶ್ರೀ ಗುರುವರನ ಪೂಜಾಕಾರ್ಯವೆನಿಪುದುನಿರುತ ಭಜಿಸುವರಿಂಗೆ ಸಕಲೇಷ್ಟಾರ್ಥ ಸಿದ್ಧಿಪುದು * 7
--------------
ತಿಮ್ಮಪ್ಪದಾಸರು
ಮರುತನಾತ್ಮಜ ನಿನ್ನ ಚರಣ ಕಮಲಯುಗ್ಮ ನೆರೆನಂಬಿದವ ಧನ್ಯನೊ ಪ ಧರೆಯೊಳಗೆ ರಘುವರನ ಶೇವಿಸಿ ಶರಣು ಜನರನು ಪೊರೆವುದಕೆ ಭೂಸುರಗಣದಿ ರಾಜಿಸುವ ರಾಯಚೂರ ಪುರದ ಕೋಟೆಯೊಳಿರಲು ಬಂದಿಹ ಅ.ಪ ಬಹುಭರದಿವಾರಿಧಿ ಲಂಘಿಸಿ ಹರಿಭಟನೆಂದು ತಿಳಿಸಿ ತ್ವರದಿ ರಾಮನಿಗರ್ಪಿಸಿ ಧೀರನೆ ಸುರವಿನುತ ತವ ಪರಿಮಳವಿರಚಿಸಿದ ಗುರುವರರ ನೋಡಿದೆ 1 ಗೋವಿಂದನಂಘ್ರಿಯ ಭಜಿಸಿ ಮನದಿ ಭಾವಿಸಿ ನಂದಸುತನಿಗರ್ಪಿಸಿ ಪ್ರಥಮಾಂಗನೆನಿಸಿ ಸಮರ್ಥ ತವಪದ ಕೊಂದಿಸುವೆ ಮನ ಮಂದಿರದಿ ಯದುನಂದನನ ಪದದ್ವಂದ್ವ ತೋರಿಸು 2 ಪುಟ್ಟಿಯತಿರೂಪವನೆಧರಿಸಿ ಕ್ಷಿತಿಯೊಳಗಖಿಲ ದುರ್ಮತಗಳೆಂಬುವ ಮೇಘತತಿಗೆ ಮಾರುತನೆನಿಸಿ ಪ್ರತಿಪಾದ್ಯನೆಂದು ತಿಳಿಸಿ ಸುಖ ತೀರ್ಥರೆನಿಸಿ ಅತಿಹಿತದಿ ಸತ್ಪಥವ ತೋರಿದಿ ಅತುಳ ಮಹಿಮನೆನುತಿಸುವೆನು ಸತತ ಪಾಲಿಸೋ 3 ತನುಮರೆಯಲು ಧುರದಿ ಜೀವನವಿತ್ತಕಾರಣದಿ ವನಜನಾಭನು ದಯದಿ ತನ್ಮೂರ್ತಿ ಸಹಿತದಿ ತಟಿತ್ಕೋಟಿ ಸೇವಕಜನರ ಸಲಹುವಿ ಕೊಳುತಲಿ ಮೆರೆವದೇವನೆ 4 ಶಿರದಿ ಮುಕುಟ ಮಂಡಿತ ಮೂರ್ತಿ ದರುಶನವನೆ ಕೊಳ್ಳುತ ವಿಸ್ತರ ಮಂಟಪದಿರಾಜಿತ ಸುರಪೂಜಿತ ಕÀರುಣ ಶರಧಿಯೆ ಪೊರೆವದೆನ್ನನು ಶರಣು ಜನರಘ ಕರುಣವ ಪಡೆದ ಧೀರನೆ 5
--------------
ಕಾರ್ಪರ ನರಹರಿದಾಸರು
ಮರೆಯದ ಭಾವಗೋಚರವಾುತಯ್ಯಾಕರುಣಿ ವೆಂಕಟದಾಸವರ್ಯ ಸದ್ಗುರುವೆ ಪಸನ್ನಿಕರ್ಷವನಾದರಣ ಹೇತು ಮಾನವರಿಗೆನ್ನುತಾನಂದ ರಸರುಚಿ ದೋರಿಸಿನಿನ್ನನೆ ತೊಳಲಿ ಬಳಲುತ ನಿನ್ನೊಳೆರಗುವಂತುನ್ನತರ ಮಾಡಲಂತರ್ಧಾನವಡೆವೆ 1ಗೋಪಿನಾರಿಯರಿಗಾನಂದ ರೂಪವ ತೋರಿತಾಪಬಡುವಂತಗಲಿ ುದ್ಧವರ ಮುಖದಿಸೋಪಾಯವಚನದಿಂ ತಿಳು'ದರ್ಥವ ನೆನೆಯಲೀ ಪರಿಯ ತೋರಿತೆನಗೆಲೆ ದಯಾನಿಧಿಯೆ 2ನೆರೆಧನ್ಯರಾದೆವಾ'ಲ್ಲ ಸಂದೇಹ ಗುರುವರ ವಾಸುದೇವಾರ್ಯ ಚಿಕನಾಗಪುರದೀಪರತತ್ವವರುಪಿ ವೆಂಕಟದಾಸ ವೇಷದಿಂಮರಳಿ ನಿಜದೊಳು ನಿಂದೆ ಕರುಣಾಸಮುದ್ರಾ 3
--------------
ತಿಮ್ಮಪ್ಪದಾಸರು
ಮರೆಯದಿರು ಪದಾಂಬುಜ ಮರೆಯದೋಳು ಪದವಾ ಪ ಧಾರುಣಿಯನೆ ಅಳೆದೀರಡಿ ಮಾಡಿದ ಘನಪದವಾ ಮುಕಾರಿಯು ತಳ್ತ ವಾರಿಯ ಪಡದನುಪಮ ಪದವಾ 1 ಕಾಲಿಡುತಲೆ ಕಲ್ಲನು ಬಾಲೆ ಮಾಡಿದ ಪದವಾ ಕಾಳುರಗನ ಪೆಡೆಯಲಿ ಲೀಲೆಯಾಡಿದತುಳ ಪದವಾ 2 ವರಶರಣರ ನಾಲಿಗೆ ನಿರುತದಿ ನುತಿಸುವ ಪದವಾ ಉರೆ ದುರಿತವದುರಿಪ ನರಸಿಂಹವಿಠ್ಠಲನ ಪದವಾ 3
--------------
ನರಸಿಂಹವಿಠಲರು
ಮರೆಯದಿರು ಭವಶರಧಿ ಕೊನೆದೋರದು ಹರಿಯ ಮರೆತರೆ ಮನವೆ ಗತಿಯೇನು ಇಹುದು ಪ ಪಿಂತೆ ಧೃತರಾಷ್ಟ್ರ ನಿಶ್ಚಿಂತೆಯಲಿ ಸುತರಿಂದ ಎಂಥ ಸಿರಿವಂತನೆಂದೆನಿಸಿ ಮೆರೆದಾ ಕಂತುಪಿತನನು ಸುತರು ಪಂಥದಲಿ ನೆನೆಯದಿರೆ ಎಂಥವನ ಪಾಡಾದುದರಿಯೆ ನೀ ಮರುಳೇ 1 ತಾನೆ ಪರಬ್ರಹ್ಮನೆಂದರಿದಾ ಹಿರಣ್ಯಕಶು- ಪಾನೆಯೆಂದರಿದು ಮೆರೆಯೆ ಹರಿವೈರದಿ ಸೂನು ಪ್ರಲ್ಹಾದನಾನತನಾಗಿ ಮೊರೆವೋಗಲು ಹೀನ ರಕ್ಕಸನ ಪರಿಸರಿ ಏನಾಯಿತು 2 ಸತಿಸುತರ ಮುದದಿಂದ ಹಿತವಂತ ಬಳಿಗದಿಂ- ದತಿ ತೃಪ್ತವಾಗಿ ನಾನಿರುತಿರಲು ನಿನ್ನ ಧೃತಿಗುಂದಿ ಪವಡಿಸಿರೆ ಗೆಜ್ಜೆಪಾದವ ಕಂಡು ನುತಿಸುವೆನನವರತ ನರಸಿಂಹವಿಠಲರಾಯಾ 3
--------------
ನರಸಿಂಹವಿಠಲರು
ಮರೆಯದೆ ಸಲಹೊ ಮಾರುತೀಶ ಎನ್ನ ಶರಣೆಂಬೆನು ನಿನ್ನ ಪ ಶರಣಾಗತರನು ಬಿಡದೆ ಪೊರೆವ ಫನ್ನ- ಗಿರಿ ಅಂಜನೆತನಯಅ.ಪ ವನನದಿಗಿರಿಗುಹೆಗಳಲಿ ನಿನ್ನ ರೂಪ ತೋರುವುದೈ ಭೂಪ ಶರಧಿ ಲಂಘಿಸಿ ರಾವಣನಿಗೆ ತಾಪ ಪುಟ್ಟಿಸಿದೆಯೊ ರಘುಪ- ನಡಿಗಳ ಬಿಡದೆ ಸೇವಿಸುವರ ಪಾಪ ಮಾಡುವಿ ನಿರ್ಲೇಪ ಸಡಗರದಲಿ ನಿನ್ನೊಡೆಯನ ತೋರಪ್ಪ ಘನಗಿರಿ ಹನುಮಪ್ಪ 1 ಊರಿನಲಿ ಊರ್ಹೊರಗು ನಿನ್ನ ಮೂರ್ತಿ ಎಷ್ಟ್ಹೇಳಲಿ ಕೀರ್ತಿ ಪಾಡುತ ಪೊಗಳ್ವರು ನಿನ್ನಯ ಸತ್ಕೀರ್ತಿ ವರ್ಣಿಸುವುದೆ ಅರ್ಥಿ ಪಾಮರನೊಮ್ಮೆ ಪಾಡಲು ನಿನ್ನ ವಾರ್ತೆ ಪರಿಹಾರವೋ ಭೀತಿ ನಾಡೊಳು ನಿನ್ನ ಭಜಿಸುವವರ ಸಂಗ ನೀಡು ಕೃಪಾಪಾಂಗ2 ಕಡಲ ಶಯನನ ಅಡಿಗಳ ಸೇವಿಸುತ ಕಡುಹರುಷವ ಪಡುತ ಬಿಡದೆ ನಿನ್ನಯ ಸೇವಕರಿವರೆನುತ ಶ್ರೀಶಗೆ ಪೇಳುತ್ತ ಕೊಡಿಸುವಿ ಮುಕ್ತಿಯ ಧೃಡಭಕ್ತರಿಗೆ ಸತತ ರಾಮರ ಸ್ಮರಿಸುತ್ತ ಕಮಲನಾಭ ವಿಠ್ಠಲನನು ಸೇವಿಸುತಭಕ್ತರ ಸಲಹುತ್ತ3
--------------
ನಿಡಗುರುಕಿ ಜೀವೂಬಾಯಿ
ಮರೆಯುವೆ ಏತಕೋ ಗರುಡಗಮನ ಯೆನ್ನಾ ದುರಿತವನಾರ್ಜಿಸಿ ಕೊರಗುವೆನ್ನನು ನೀ ಪ ಹದಿನೆಂಟು ಸಾಸಿರ ಉದರದೊಳುದಿಸುತೇ ಹೃದಯದಿ ನಿನ್ನ ನಾಮಾ ಒದಗಲಿಲ್ಲವೋ 1 ಧರೆಯೊಳು ನರಜನ್ಮ ಹಿರಿದೆಂದು ಪೇಳ್ವರು ತ್ವರಿತದಿ ನಿನ್ನ ನಾಮಸ್ಮರಣೆಯನೀಯದೆ 2 ಸೋಮಶೇಖರನುತ ಕಾಮಜನಕ ಹರಿ ಪ್ರೇಮದಿ ಪಾಲಿಸೆನ್ನ ರಾವiದಾಸಾರ್ಚಿತಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಲಗಲೇತಕೆ ಹರಿಯೆ | ಚಲುವ ಚನ್ನಿಗ ದೊರೆಯೆ ಪ ಎಲರುಣೀವರ ಶಯ್ಯ | ಬಳಲಿಕೇಕಯ್ಯಾ ಅ.ಪ. ವೇದ ಕದ್ದನ ಹರನೆ | ಭೂಧಾರಿ ಗಿರಿಧರನೆಭೂದರಿಸಿ ಭೊಮ್ಮನಿಗೆ | ಆದರದಿ ಕೊಟ್ಟವನೇ |ಭಾದಿಸೇ ಭಕ್ತ ಪ್ರ | ಹ್ಲಾದನನ ಕಾಯ್ದವನೆಮೋದದಿಂದಲಿ ಬಲಿಯ | ಪಾದವಾ ಮೆಟ್ಟಿದನೆ 1 ಗಂಡು ಗೊಡಲಿಯ ಪಿಡಿದು | ಭಂಡ ಭೂಭುಜ ತರಿದುಲಂಡ ರಾವಣ ಶಿರ | ಚೆಂಡಾಡಿದ ಧೊರೆಯೇಕಂಡ ಕಂಡವರ ಮನೆ | ಗಂಡಲೆದು ಪಾಲ್ಮೊಸರಉಂಡುಂಡು ಚೆಲ್ಲಾಡಿ | ಭಂಡು ಮಾಡಿದೆ ಕೃಷ್ಣ 2 ಮುಪ್ಪೊರರ ಸತಿಯರನು | ಅಪ್ಪಿ ವ್ರತ ಭಂಗವನುತಪ್ಪದೇ ಮಾಡಿ ಹಯ | ವಪ್ಪಿ ಏರ್ದವನೇಇಪ್ಪರಿಯ ಚರ್ಯ ದಿಂ | ಸೊಪ್ಪಾಗಿ ಮಲಗಿದೆಯೋಗುಪ್ತ ಮಹಿಮನೆ ದೇವ | ಅವ್ವ ಶ್ರೀರಂಗ ಪುರಗ 3 ಕ್ಲೇಶ 4 ಪೂರ್ವ ವಾಹಿನಿ ಎನಿಪ | ಕಾವೇರಿ ತೀರಗನೆಪೂರ್ವದಿವಿಜರ ಹರನೆ | ಸಾರ್ವಭೌಮಾಊರ್ವಿ ಯೊಳ್ಪೆಸರಾದ | ಪಾರ್ವ ಗೌತಮ ವರದಕೋರ್ವೆ ತವ ಚರಣ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮಲಗಿದನು ಶ್ರೀರಂಗ ಶ್ರೀರಂಗ ಪ ಕಲಿಜನರ ನೋಡುತಲಿ ಅಳುಕಿದಾಮನದಿಂದ ಅ.ಪ ಜೀವ ಜಗಬಿಂಬನಿಗೆ ಯಾವುದೈ ಆಯಾಸ ಕಾವ ಸಚರಾಚರವ ಶ್ರೀವರನಿಗುಂಟೆ ನಿದ್ರೇ ಸಾರ್ವಭೌಮನಿಗೆ ಕ್ಷುದ್ರಜೀವ ಸಮರೆಂತೆಂಬ ಕೋವಿದಾಭಾಸಗಣ ಸೇವೆಕೊಳ್ಳನು ಎಂದು 1 ವೈದೀಕರೆನ್ನುತಲಿ ವೇದಮರ್ಮವ ತಿರುಚಿ ಬೌದ್ಧಮತವನೆ ಮತ್ತೆ ಬೊಧಿಪರೆ ಈ ಜನರು ಸಾಧು ಸಮ್ಮತ ಮಧ್ವವಾದ ನೋಡದೆ ಬರಿದೆ ಸಾಧು ವೇಷದಿ ತಿರಿಪ ಗರ್ದಭರ ಕಂಡಂಜಿ 2 ನಾಮಜಪವೇನಿಲ್ಲ ನೇಮ ನಿಷ್ಠೆಗಳಿಲ್ಲ ನಾಮ ಹಾಕುವ ದೊಡ್ಡ ನೇಮವಂದೇಯಿಹುದೆ ಹೇಮಗೋಸುಗ ತತ್ವ ಹೋಮಮಾಡುವ ಎಲ್ಲ ಕಾಮ ಕಾಮಿನಿ ಜನರ ವಾಮಗುಣಗಣನೆನೆದು 3 ಅನ್ನದೇವನ ತೊರೆದು ಅನ್ನಕೊಂಬರೆ ಕ್ರಯಕೆ ಅನ್ಯರೆನ್ನದೆ ಹರಿಗೆ ಇನ್ನು ಘಳಿಪರೆ ನಿರಯ ಹುಣ್ಣಂತಮವಿಪರೀತ ಕಣ್ಣಿಂದ ನೊಡದವ ಧನ್ಯಧನ್ಯನು ಎಂದು ಕಣ್ಣುಗಳ ಮುಚ್ಚುತಲಿ 4 ಶ್ರೀಲೊಲ ಮಲಗಿದಡೆ ಏಳುವುದು ಜಗವೆಂತು ವ್ಯಾಳಗುರುಹೃಸ್ಥ “ಶ್ರೀ ಕೃಷ್ನವಿಠಲ”ನೆ ತಾಳಿ ಕೃಪೆ ಹೃದಯದಲಿ ಶೀಲರೂಪವ ತೋರೊ ಕಾಲ ವಾಲಗವ ಕೈಕೊಂಡು 5
--------------
ಕೃಷ್ಣವಿಠಲದಾಸರು