ಒಟ್ಟು 5292 ಕಡೆಗಳಲ್ಲಿ , 123 ದಾಸರು , 3484 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಥೇಯವ ಕಟ್ಟಿರೊ ವೈಕುಂಠಕೆ ಪಯಣ ಸ-ಮ್ಮತವಾದರೆ ಪ. ಮಾತಾಪಿತರುಯೆಂಬೊ ಭಕ್ತಿಚಿತ್ರಾನ್ನವಪಾರ್ಥಸೂತನ ಪಾದಪದ್ಮಪತ್ರವ ಹಾಸಿ ಅ.ಪ. ಹರಿಭಕ್ತಿಹರಿಗೋಲಿಂದ ಮೆಲ್ಲನೆ ನೀವುವಿರಜಾನದಿಯ ದಾಟಿರೊಕರಜಾಗ್ರಗಳಿಂದ ಹಿರಣ್ಯಕನನು ಸೀಳಿದಪರವಾಸುದೇವನ ದರುಶನವಾಹೋದಯ್ಯ 1 ಪ್ರಳಯದ್ಹಾವಳಿಯಿಲ್ಲವೊ ಪೇಳುವುದೇನುಚಳಿ ಮಳೆ ಬಿಸಿಲಿಲ್ಲವೊಬೆಳಸು ಬಿತ್ತಿಲ್ಲದ ಬೇಕಾದ ಸಂಪತ್ತುನಳಿನನಾಭನ ಪುರದೊಳಗೆ ನೆಲಸಿಹುದಯ್ಯ 2 ಶುದ್ಧ ಸಾತ್ವಿಕ ಪುರವು ತಾಮಸರಿಗೆ[ಪೊದ್ದಲಳವಲ್ಲವೊ]ಅಧ್ಯಾತ್ಮ ಅರ್ಜುನಗೆ ನಿರ್ಧಾರ ಪೇಳಿದತದ್ಧಾಮ ಪರಮಂ ಮಮವೆಂಬೊ ಪುರವೊ 3 ಕೂಗಳತೆಗೆ ಕೊಂಚವೊ ಹರಿಯ ಪುರನಾಗರಾಜನ ಸಾಕ್ಷಿಯೊನಾಗಶಯನನಲ್ಲಿ ನಮ್ಮ ಕಂಡರೆಹೋಗಬೇಡಿರೆಂದು ಹುಟ್ಟ ತಡೆವನೊ 4 ಬರವೆಂಬ ಮಾತಿಲ್ಲವೊ ಒಂದುಕಾಸುತೆರಿಗೆಯ ಕೊಡಬ್ಯಾಡಿರೊಪರಮಕರುಣಿ ಹಯವದನ ವೈಕುಂಠದಿಸರುವಮಾನ್ಯವನಿತ್ತು ಶರಣರ ಪೊರೆವನು 5
--------------
ವಾದಿರಾಜ
ಪಾದ | ಸೋಕಿದ ಕೊನೆಧೂಳಿ ಪ ತಾಕಿದ ಮನುಜರಿಗೆ ಕಾಕುಬುದ್ಧಿಗಳೆಲ್ಲ ಪರಿಹಾರವಾಗುವವೊ | ಬೇಕಾದ ಪದವಿಯ ಕೊಡುವನು ಶ್ರೀ ಹರಿ ಅ.ಪ ಮಧ್ವಮತವೆಂಬ ಅಬ್ಧಿಯೊಳಗೆ ಪೂರ್ಣ | ಉದ್ಭವಿಸಿದ ಚಂದ್ರನಾ ಗುಣಪೂರ್ಣನಾ || ಅದ್ವೈತಮತÀ ತಮನಿಧಿ ನಿಶಿಕುಠಾರ | ವಿದ್ಯಾರಣ್ಯವ ಗರುವಕೆ ಪರಿಹಾರ 1 ತತ್ವ ವಾರಿಧಿಗಳ ತತ್ವಸುಧೆಯ ಭಾಷ್ಯ | ವಿಸ್ತರಿಸಿ ಇರಲು ಬೇಗದಲಿ || ಚಿತ್ರವಲ್ಲಭನÀ ಸೇವೆಯ ಮಾಡಿ ಟೀಕಂಗಳ || ಸುತ್ತೇಳು ಲೋಕಕ್ಕೆ ಪ್ರಕಟಿಸಿ ಮೆರೆವರ 2 ಎಂದಿಗಾದರು ಒಮ್ಮೆ ಕೊನೆ ನಾಲಿಗೆಯಿಂದ | ಬಿಂದು ಮಾತ್ರದಿ ನೆನೆಯೆ || ಮಂದ ಮತಿಯಾದರೂ ಅಜ್ಞಾನನಾಶವು | ಸುಂದೇಹÀವಿಲ್ಲವು ಅವಾವ ಕಾಲಕ್ಕೆ 3 ಜ ಎಂದು ಪೊಗಳಲು ಜಯಶೀಲನಾಗುವ | ಯ ಎನ್ನೆ ಯುಮರಾಯನಂಜುವನು || ತೀ ಎಂದು ಪೊಗಳಲು ತೀವ್ರ ಪದವಿ ಉಂಟು | ರ್ಥ ಎಂದು ಪೊಗಳಲು ತಾಪತ್ರಯುಪಶಮನ 4 ಯೋಗಿ ಅಕ್ಷೋಭ್ಯತೀರ್ಥರ ಕರಕಮಲಸಂಜಾತ | ಭಾಗವತರ ಸುಪ್ರೇಮ || ಕಾಗಿಣಿ ತೀರದ ಮಳಖೇಡ ನಿವಾಸಾ | ಶ್ರೀ ಗುರು ವಿಜಯವಿಠ್ಠಲ ಸೇವಕ ಭಕ್ತಾ 5
--------------
ವಿಜಯದಾಸ
ಪಾದ 1ಸುರರ ಮಣಿಮಕುಟಗಳು ಸೋಕಿ ಶೋಭಿಪ ಪಾದಪರಮ ಪಾವನೆ ಲಕ್ಷ್ಮಿ ಪಿಡಿದೊತ್ತುವ ಪಾದಧುರದಿ ನರರಥವೇರಿ ದೇದೀಪಿಸಿದ ಪಾದಹರಿವೈರಿಕರಗಳಲಿ ಹೊಳೆವ ಪಾದ 2ಸಿರಿಯುಳ್ಳ ಕುರುಪತಿಯ ಶಿರವೆರಗಿಸಿದ ಪಾದಪರಿದು ನಾಗನ ಶಿರಗಳೊಳು ಹೊಳೆದ ಪಾದಅರವಿಂದಮುಖಿಯರೊಡನತಿ ನರ್ತಿಸಿದ ಪಾದನೆರೆ ಜರೆದ ಶಿಶುಪಾಲನ್ನೊಳಗಿಟ್ಟ ಪಾದ 3ಕರುಗಳೊಡಗೂಡಿ ಕಾನನದಲಾಡಿದ ಪಾದಕರುಣದಿಂ ಪಾಂಡವರ ಕಾಯ್ದ ಪಾದಮರೆಯೊಕ್ಕ ಸುಜನರಿಗೆ ಮುಕ್ತಿಗೊಡುತಿಹ ಪಾದಸ್ಮರಿಸಲಘರಾಶಿಗಳ ಸಂಹರಿಪ ಪಾದ 4ಬಲಿ ಯಜ್ಞವಾಟಕ್ಕೆ ಬಂದು ನೆಲಸಿದ ಪಾದಬಲು ಬೆಳೆದು ಲೋಕಗಳ ಬಂಧಿಸಿದ ಪಾದಕಲಕಿ ಗಂಗೆಯ ಧರೆಗೆ ಕೋಡಿವರಿಸಿದ ಪಾದಸುಲಭದಿಂ ಭಕ್ತರಿಗೆ ಸುಖವೀವ ಪಾದ 5ಧ್ವಜರೇಖೆುಂ ಕೂಡಿ ಥಳಿಥಳಿಸುತಿಹ ಪಾದವಿಜಯವಹ ವಜ್ರದಿಂದೊಪ್ಪುತಿಹ ಪಾದಗಜವ ಶಿಕ್ಷಿಪಮುದ್ರೆ ಗೋಚರಿಸುತಿಹ ಪಾದನಿಜಪದ್ಮದಿಂ ಲೋಕನಿಧಿಯಾದ ಪಾದ 6ಅರೆಯಾದ ಸತಿಯನಂಗನೆಯ ಮಾಡಿದ ಪಾದಧರೆಯ ಧರಿಸಿಹ ಶೇಷ ಧ್ಯಾನಿಸುವ ಪಾದತರುಣನಾಯಕ ಪುರದಿ ಸ್ಥಿರದಿ ನೆಲಸಿದ ಪಾದತಿರುಪತಿಯ ವೆಂಕಟೇಶ್ವರ ನಿಮ್ಮ ಪಾದ 7ಓಂ ವೃಷಭಾಸುರ ವಿಧ್ವಂಸಿನೇ ನಮಃ
--------------
ತಿಮ್ಮಪ್ಪದಾಸರು
ಪಾದ ತೋರೆಂದು ಪಗುರುಸರ್ವಭೌಮರ ಅಖಂಡ ಸೇವೆಯ ಮಾಡಿವರಸುಮಂತ್ರಾಲಯದಿ ವಾಸಮಾಡಿಸುರಪನಾಲಯವು ಮಂತ್ರಾಲಯವು ಎಂಬಂತೆಹರಿದಾಸರಾಶಯವ ನಿಜಮಾಡಿ ತೋರಿಸಿದ 1ಉಡುಪಿಯೊಳು ಗುರುಸಾರ್ವಭೌಮರ ವೃಂದಾವನವಚತುರತನದಿಂದ ಪ್ರತಿಷ್ಠಾಪನೆಯ ಮಾಡಿಭರತಖಂಡದ ತೀರ್ಥಕ್ಷೇತ್ರಗಳ ಸಂಚರಿಸಿಭಕುತರಿಗೆ ಶ್ರೀ ಮಠದ ಮ'ಮೆ ತೋರಿದ ಗುರು2ಶ್ರೀ ಸ'ುೀರ ಸಮಯ ಸಂವರ್ಧಿನಿ ಸಭೆಯಸಂಸ್ಥಾಪನೆಯ ಮಾಡಿ ಪಂಡಿತರಿಗೆಭೂರಿ ಸಂಭಾವನೆ ಮೃಷ್ಟಾನ್ನ ಭೋಜನದಿತ್ಟುಗೊಳಿಸುತ ದೇಶ ದಿಗ್ವಿಜಯ ಮಾಡಿದ 3ಶ್ರೀ ಮಠದ ಕೀರ್ತಿಯನು ಶಿಖರಕ್ಕೆ ಮುಟ್ಟಿಸಿಸ್ವರ್ಣಮಂಟಪರಚಿಸಿ ವೈಭವವ ಬೆಳೆಸಿಶ್ರೀಮೂಲರಾಮ ದಿಗ್ವಿಜಯ ಜಯರಾಮರನುಭಕ್ತಿುಂದ ಪೂಜಿಸಿದ ಭಾಗ್ಯಶಾಲಿ 4ಗುರುಸಾರ್ವಭೌಮರಿಗೆ ಪರಮ ಪ್ರೀತಿಯ ಕಂದವರಮಧ್ವಮತ ಸುಧಾಂಬುಧಿಗೆ ಚಂದ್ರಪರಮಾತ್ಮ ಭೂಪತಿ'ಠ್ಠಲನ ಪೂಜಿಸುವಪರಮ ಪ್ರಶಾಂತ ಧೀರೆಂದ್ರ ಸನ್ನಿಧಿವಾಸ 5
--------------
ಭೂಪತಿ ವಿಠಲರು
ಪಾದ ನಿಜವಾಗಿ ಕಂಡೆನು ಪ್ರೇಮದಿಂದಲಿಯೆನ್ನ ಸೇರಿ ಕೊಂಡಾಡೋ ಪ ನಿತ್ಯ ನಲಿಯುತ್ತಲಿರುವದು ಕಾಲಕಾಲಕೆ ಮತ್ತೆ ಸೇವೆಗೊಳುವದು ಬಾಲರು ಪಿಡಿದರೆ ಇಷ್ಟವ ಕೊಡುವದು ಓಲೈಸಿ ಭಕ್ತಗೆ ವರವನೀಯುವÀದು 1 ಪಾದ ಮಧ್ಯದಿ ಪದ್ಮ ರೇಖೆಯ ಕಂಡೆನು ಸಾಧು ಸಜ್ಜನರು ಪೂಜೆಯ ಮಾಡುವುದನು ಖೇದವ ನೀಗುವ ಬೆರಳನು ಕಂಡೆನು ಆದ್ಯಂತವಿಲ್ಲದೆ ನಿರುತವಾದುದನು2 ಮನದಣಿ ನೋಡಿದೆ ಪಾದಯುಗ್ಮಗಳನ್ನು ಮನಲೇಪ ಮಾಡಿದೆ ಹರಿಪಾದಗಳಿಗೇ ಅನುದಿನ ದೂರ್ವಾಪುರದಿ ನೆಲೆಸಿರುವಂಥ ಘನಕೋಟಿ ತೇಜದ ಕೇಶವ ಪದವ 3
--------------
ಕರ್ಕಿ ಕೇಶವದಾಸ
ಪಾದ ಪರಮಭಕ್ತಿಲಿ ಎನ್ನ ಶಿರದ ಮೇಲ್ಪೊತ್ತು ಬಿಡದಿರುವೆನನವರತ ಪ ತಾಳಿ ವಿಮಲಭಕ್ತಿ ತಾಳದಂಡಿಗೆ ಸ ಮ್ಮೇಳದೊಡನೆ ತ್ರಿಕಾಲವು ಬಿಡದೆ ನೀಲವರ್ಣನ ಭಜನೆ ಮೇಲಾಗಿ ಮಾಡುವ ರಾಲಯದಿ ನಲಿದಾಲಿಸಾನದಿಂದಪ 1 ನಿಲಯದಂಗಳದೊಳು ತುಲಸಿವನವ ರಚಿಸ ನಿತ್ಯ ಜಲಜನಾಭಂಗೆ ಮಲತ್ರಯಂಗಳ ನೀಗಿ ಮಲಿನಗುಣವ ಕಳೆದು ಸಲಿಸಿ ಶ್ರೀಪಾದಮಂ ಒಲಿಸಿ ಸುಖಿಸುತಿರ್ಪ 2 ತಿಳಕೊಂಡು ಸಂಸಾರ ಕಳವಿನಿಂದುಳಕೊಂಡು ಹೊಳೆವ ಜ್ಞಾನಜ್ಯೋತಿ ಬೆಳಗಿನೋಳ್ನಲಿಯುತ ನಿಲಿಸಿ ಹರಿಪಾದದಿ ಚಲಿಸದೆ ಮನ ಹಂ ಬಲಿಸಿ ತಪವ ಶೇಷಾಚಲಯಾತ್ರೆ ಮಾಳ್ಪಂಥ 3 ಮರೆವು ಮಾಯವ ನೀಗಿ ಅರಿವಿನಾಲಯದೊಳು ಸಿರಿಯರರಸನ ನಿಜ ಚರಿತಂಗಳರಸುತ ಪರಮಸಾಲಿಗ್ರಾಮದ್ವರಮಹಿಮೆಯನರಿತು ನಿರುತದಿಂ ಪೂಜಿಸಿ ಪರಮಪಾವನರೆನಿಪ 4 ಕಾಮಿತಂಗಳ ನೀಗಿ ಕೋಮಲ್ಹøದಯರಾಗಿ ಪ್ರೇಮಪಿಡಿದು ಸರ್ವಭೂಮಿ ಜೀವಂಗಳೊಳ್ ನೇಮನಿತ್ಯದಿ ನಿಸ್ಸೀಮರಾಗಿ ಸತತ ಸ್ವಾಮಿ ಶ್ರೀರಾಮನಾಮಾಮೃತ ಸುರಿಯುವ 5
--------------
ರಾಮದಾಸರು
ಪಾದ ಭಕ್ತಿಯಿಂದ ಭಜಿಸು ಮನವೆ ಅರ್ಥಿಯಿಂದ ಪೂಜಿಪರಿಗೆ ವಿತ್ತಾದಿಗಳಿತ್ತು ಕಾಯ್ವ ಪ ಹಿಂದೆ ನಾರದರಿಂದಿರೇಶಗೆ ವಂದಿಸಿ ಬೆಸಗೊಳಲು ಛಂದದಿಂದಲಿ ಸಿಂಧುಶಯನ ಬಂಧಮೋಚಕವೆಂದು ಪೇಳಿದ 1 ತಿಳಿದು ನಾರದರಿಳೆಯೊಳರುಹೇ ಕಲಿತು ಜನಗಳಲ್ಲಾರಂಭಾ ಪಾಲು ಘೃತಾದಿಗಳಿಂದ ಪೂಜಿತ 2 ದ್ವಿಜವಣಿಕ್ ಭೂಭುಜರು ನಿಜಭಕುತಿಯಿಂದ ಯ್ಯಜಿಸೆ ಸೋಜಿಗವನ್ನೇ ತೋರಿದುದರಿಯ 3
--------------
ಪ್ರದ್ಯುಮ್ನತೀರ್ಥರು
ಪಾದ ಭಜಿಸುವೆ ಅ.ಪಜ್ಞಾನವೆಂಬೊ ನವರತ್ನದ ಮಂಟಪದ ಮಧ್ಯದಲ್ಲಿಗಾನಲೋಲನ ಕುಳ್ಳಿರಿಸಿಧ್ಯಾನದಿಂದ ಭಜಿಸುವೆ1ಭಕ್ತಿರಸವೆಂಬ ಮುತ್ತು ಮಾಣಿಕ್ಯದ ಹರಿವಾಣದಿಮುಕ್ತನಾಗಬೇಕು ಯೆಂದು ಮುತ್ತಿನಾರತಿ ಎತ್ತುವೆ 2ನಿನ್ನ ನಾನು ಬಿಡುವನಲ್ಲಎನ್ನ ನೀನು ಬಿಡಲು ಸಲ್ಲಘನ್ನ ಮಹಿಮ ವಿಜಯವಿಠ್ಠಲ ನಿನ್ನ ಭಕ್ತರ ಕೇಳೊ ಸೊಲ್ಲ 3
--------------
ವಿಜಯದಾಸ
ಪಾದ ಮಾಡಿದೆನೆ ಸಾಷ್ಟಾಂಗ ಬೇಡಿದೆನೆ ಮನದಭೀಷ್ಟ ಪ. ನೀಡು ಕೊಲ್ಲಾಪುರದ ನಾಡಿಗೊಡೆಯಳೆ ಲಕುಮಿ ಮಾಡಮ್ಮ ಕೃಪೆಯ ಬೇಗಾ ಈಗಾ ಅ.ಪ. ಬಂದೆನೇ ಬಹುದೂರ ನಿಂದೆನೇ ತವಪದ ದ್ವಂದ್ವ ಸನ್ನಿಧಿಯಲೀಗ ವಂದನರಿಯೆನೆ ನಿನ್ನ ಚಂದದಿ ಸ್ತುತಿಪೊದಕೆ ಮಂದಮತಿಯಾಗಿಪ್ಪೆನÉೀ ತಂದೆ ಮುದ್ದುಮೊಹನ್ನ ಗುರು ಕರುಣ ಬಲದಿಂದ ಇಂದು ನಿನ್ನನು ಕಂಡೆನೇ ಮುಂದೆನ್ನ ಮಾನಾಭಿಮಾನ ನಿನಗೊಪ್ಪಿಸಿದೆ ಸಿಂಧುಸುತೆ ಪಾಲಿಸಮ್ಮಾ ದಯದೀ 1 ಉತ್ತರಾಯಣ ಪುಣ್ಯ ದಿನದಿ ನಿನ್ನನು ಕಂಡೆ ಮುಕ್ತರಾಧೀಶೆ ಕಾಯೆ ಉತ್ತಮಾಭರಣ ನವರತ್ನ ಪದಕವು ದಿವ್ಯ ನತ್ತು ಧರಿಸಿದ ಚಲ್ವಳೇ ಮುತ್ತೈದೆಯರು ಮತ್ತೆ ಭಕ್ತ ಸಂದಣಿ ಇಲ್ಲಿ ಎತ್ತನೋಡಲು ಕಂಡೆನೇ ಸತ್ಯ ಸಂಕಲ್ಪ ಶ್ರೀ ಹರಿಯ ಪಟ್ಟದ ರಾಣಿ ಚಿತ್ತಕ್ಕೆ ತಂದು ಕಾಯೆ ಮಾಯೆ 2 ರೂಪತ್ರಯಳೆ ನಿನ್ನ ವ್ಯಾಪಾರ ತಿಳಿಯಲು ಆ ಪದ್ಮಭವಗಸದಳಾ ಶ್ರೀಪತಿಯ ಕೃಪೆ ಯಿಂದ ಸೃಷ್ಟಿಸ್ಥಿತಿಲಯಗಳನು ವ್ಯಾಪಾರ ಮಾಳ್ಪ ಧೀರೆ ಕೃಪೆಯ ನೀ ಮಾಡದಲೆ ಉಭಯ ಸುಖವೆತ್ತಣದು ಭೋಪರೀ ನಂಬಿದರಿಗೆ ಗೋಪಾಲಕೃಷ್ಣವಿಠ್ಠಲನ ಹೃದಯದಿ ತೋರಿ ನೀ ಪಾರುಗೊಳಿಸೆ ಭವದೀ ದಯದೀ 3
--------------
ಅಂಬಾಬಾಯಿ
ಪಾದ ವನಜ | ಸೂಸಿ ಭಜಿಸಿರೋ |ವ್ಯಾಸ ತೀರ್ಥ ಶಿಷ್ಯರೆಂದು | ಭಾಸಿಸಿದ್ದರೋ ಪ ಪುರಂದರ ಗಡದಿ | ವಾಸರಿದ್ದರಾಪರಮ ಲೋಭಿ ನವ ಕೋಟಿ | ದ್ರವ್ಯವಿದ್ದರಾ 1 ಬಂದ ಕಾರ್ಯ ಮರೆತನೆಂದು | ಹರಿಯು ಚಿಂತಿಸೀಇಂದಿರೇಶ ದ್ವಿಜನಾಗಿ | ಹುಡುಗನಾವೆರಸೀ ||ಬಂದು ಮಗನ ಮುಂಜಿಗಾಗಿ | ಧನವನು ಬಯಸೀ ||ನಂದ ಕಂದ ತಿರುಗುತ್ತಿದ್ದ | ಅಂಗಲಾಚಿಸೀ 2 ಭಿಕ್ಷುಕನ್ನ ಬಿಡದಂತೆ | ಅಂಗಡಿಯಲ್ಲಿಶಿಕ್ಷಿಸೀದ ಆಳುಗಳ | ಲೋಭಿ ತಾನಲ್ಲಿ ||ತ್ರ್ಯಕ್ಷಸೇವ್ಯ ತಿಂಗಳಾರು | ತಿರುಗಿದನಲ್ಲೀಲಕ್ಷಿಸಾದೆ ಮೆರೆಯುತಿದ್ದ | ಕಾಣದಂತಲ್ಲಿ3 ಕಟ್ಟಕಡೆಗೆ ಸವೆದ ನಾಣ್ಯ | ಚೀಲ ವೆಸೆಯುತ್ತಕಟ್ಟು ಮಾಡ್ದ ದುಡ್ಡೊಂದನ್ನು | ಕೊಳ್ಳೆಂದೆನುತ್ತ ||ಅಟ್ಟುಗಳಿಗೆ ಬೇಸರಿಸಿ | ಮುಂದೆ ಹೋಗುತ್ತ |ಥಟ್ಟನ್ಹೋದ ಹಿತ್ತಲಿನ | ಕದವ ಸಾರುತ್ತ 4 ಅಲ್ಲಿನಿಂತ ಲೋಭಿ ಸತಿಯ | ಬಳಿಗೆ ಪೋಗುತ್ತಬಲ್ಲ ಹರಿಯ ಧನವ ಬೇಡ್ದ | ಮುಂಜಿಗೆನ್ನುತ್ತ ||ನಲ್ಲ ಬೈವನೆಂದು ಬೆದರಿ | ಇಲ್ಲವೆನ್ನುತ್ತಚೆಲ್ವ ಸತಿಯು ಪೇಳೆ ಅವಳ | ಮೂಗ್ತಿ ನೋಡುತ್ತ 5 ತವರು ಮನೆಯ ದ್ರವ್ಯದಾನ | ಮಾಡು ನೀನೆಂದಅವಳು ತನ್ನ ಮೂಗುತಿಯ | ಕೊಟ್ಟುದೆ ಛಂದ ||ಇವನು ಅದನ ಸಾಹುಕಾರ್ನ | ಮುಂದಾಕಿ ಅಂದಜವದಿ ನಾನೂರ್ಪಾಕಿ ಹಣ | ತನಗೆ ಬೇಕೆಂದ 6 ನಾಯಕನು ಕೈಲಿ ತೆಗೆದು ನೋಡುತ್ತಲಿರೇಶ್ರೀಯರಸ ಪೋದತಾನು | ಕಣ್ಣಿಗೆ ಮರೇ ||ಕಾಯುತ್ತಿದ್ದ ಆಳು ಹಿಡುಕಿ | ಸಿಗದೆತಾಬರೇನಾಯಕನದ ಭದ್ರಮಾಡಿ | ಸತಿಬಳಿಗೆ ಬರೇ 7 ಬರಿಯ ನಾಸಿಕವ ನೋಡಿ | ಮೂಗ್ತಿ ಎಲ್ಲೆನಲುಸರಿಯ ಪಡಿಸಲಿಕ್ಕೆ ಕೊಟ್ಟು | ಇರುವೆ ನೆನ್ನಲುತ್ವರದಿ ತೋರದಿರೆ ನಿನ್ನ | ಅರೆವೆ ನೆನ್ನಲು |ಬರುವೆ ಬೇಗ ಎಂದು ಪೋಗಿ | ಗರದ ಬಟ್ಟಲು 8 ಕರದಿ ಪಿಡಿದು ತುಳಸಿ ಮುಂದೆ | ಮೊರೆಯ ನಿಡುತಿರೇಗರದ ಬಟ್ಟಲೊಳು ಬಿದ್ದ | ಶಬ್ದವು ಬರೇ ||ಹರುಷದಿ ದಿಗ್ಗನೆ ಎದ್ದು | ಪತಿಗೆ ತಾತೋರೇಗರ ಹೊಡೆದಂತವನಾಗಿ | ಮೋರೆಯ ತೋರೇ 9 ಹೆಂಡತಿಯ ಕೇಳಿ ತಿಳಿದ | ಆದ ಪರಿಯಾಮಂಡೆ ಬಾಗಿ ತಾನು ಆದ | ಹೊಸ ಪರಿಯಾ ||ಕೊಂಡಾಡಿದ ಪತ್ನಿ ಚರ್ಯ | ಹರಿಯ ಭಕ್ತಿಯಬಂಡುಣಿ ಹರಿಪಾದಾಬ್ಜದಿ | ತೊರೆದ ಮನೆಯ 10 ಪಾದ ನಮಿಸೀಬಾರಿ ಬಾರಿ ಹರಿಯ ತತ್ವ | ಕೇಳಿ ಸುಖಿಸೀ 11 ಪುರಂದರ ಸಾರ ಭಾಷೆ | ಪ್ರಾಕೃತ ವೆನಿಸೀ 12 ಮೂರ್ತಿ ಸುಂದರತೊಂಡನಾದ ಮೇಲೆ ತನ್ನ | ಹೃದಯ ಮಂದಿರ ||ಪಿಂಡ ಅಂಡದೊಳಗೆ ಕಂಡು | ಹಿಗ್ಗಿದ ವಿವರ |ಕಂಡವನೆ ಪೇಳ ಬಲ್ಲ | ಅದರ ವಿಸ್ತಾರ 13 ಪೊಂದಿ ಅಪರೋಕ್ಷವನ್ನು | ಸುಜನರುದ್ಧಾರಛಂದದಿಂದ ಮಾಡಿದಂಥ | ದಾಸವರ್ಯರ ||ಅಂದ ಚರಿತೆ ಕೇಳಿ ತೋಷ | ಪೊಂದಿದವರನಂದ ಕಂದ ಪಾಲಿಸುವ | ಬಿಡದೆ ಅವರಾ 14 ಗೋವ ಕಾವ ಗೊಲ್ಲರೊಡೆಯ | ಗೋಪಿಯ ಬಾಲತಾವಕ ಭಕ್ತರ ಪೊರೆವ | ಪಾಂಡವ ಪಾಲಆವ ದಾಸರ ಪೊರೆದಂತೆ ಮೈದುನ ಪಾಲದೇವ ದೇವ ಪೊರೆವ ಗುರು | ಗೋವಿಂದ ವಿಠಲ 15
--------------
ಗುರುಗೋವಿಂದವಿಠಲರು
ಪಾದ ಸೇವೆಯಿಂದಲಿ ಸುಖಿಸೋಳೊ ಲಕ್ಷ್ಮೀಲೋಲ ಪಾಡಿ ತೂಗುವಳೊ ಮೋಹದಲಿ ಯಶೋದ ಯೋಗಿ ಜನರು ಕೊಂಡಾಡಲ್ವಿನೋದ 1 ಜಲಧಿ ಭೂದೇವಿ ಪ್ರಜ್ವಲಿಸುವ ಆಲದೆಲೆಯು ತಾನಾಗಿ ನಿದ್ರೆಹಸಿವು ಬಿಟ್ಟು ನಿರುತದಿ ಆತನ- ಲ್ಲಿದ್ದಳಂಭ್ರಣಿ ಸ್ತೋತ್ರದಲಿ ಭೂದೇವಿ 2 ವಟದ ಎಲೆಯ ಮೇಲೆ ವಟುವಾಗಿ ಮಲಗಿ ಉಂ- ಗುಟವ ಬಾಯೊಳಗಿಟ್ಟು ಮುದದಿ ಚಪ್ಪರಿಸೆ ಕಟುತರದಲಿ ನಾಲ್ಕು ವೇದವ ತೋರುತ ಪಟುತರದಲಿ ಯೋಗನಿದ್ರೆ ಮಾಡಿದನು 3 ಹದಿನಾಲ್ಕು ಲೋಕ ತನ್ನುದರದಲ್ಲಿಡುವ ಪದುಮಾಕ್ಷ ಶ್ರೀಕೃಷ್ಣ ಪರಮಾತ್ಮ ಲಾಲಿ ಅಜಭವಸುರರೆಲ್ಲ ಭಜನೆಯ ಗೈವರು ಮುದದಿ ಶಯನವ ಮಾಡೊ ಮಧು ಮುರಾಂತಕನೆ 4 ಕಡಲಶಯನ ಹರಿ(ಯ) ತೊಟ್ಟಿಲೊಳಿಟ್ಟು ಬಿಡದೆ ನಾರಿಯರೆಲ್ಲ ಪಾಡಿ ತೂಗುವರು ಪೊಡವಿಗೊಡೆಯ ನಿನ್ನ ನಾಮ ಕೊಂಡಾಡಲು ಬಿಡದೆ ಭಕ್ತರ ಕಾಯೊ ಭೀಮೇಶಕೃಷ್ಣ 5
--------------
ಹರಪನಹಳ್ಳಿಭೀಮವ್ವ
ಪಾದ ಕಂಡೆ ಕಂಡೆನು ಕೇಶವಾ ಪ ಪದ್ಮದಳಾಕೃತಿಯಲ್ಲಿರುತಿರುವಂಥ ನಿತ್ಯ ನಿಲಿದಾಡುವಂಥ ಪದ್ಮಾಕ್ಷಿ ಶ್ರೀದೇವಿ ಸೇವಿಸುತಿರುವಂಥ ಮೋದದಿ ಹೃದಯದಿ ನೆಲೆಸಿರುವಂಥ 1 ದುಷ್ಟರ ತಲೆಯನ್ನು ಪಿಡಿದೊತ್ತಿ ತರಿದಂಥ ಭ್ರಷ್ಟರ ಯೆದೆ ಮೇಲಿಟ್ಟುರುವಂಥ ನಿತ್ಯ ಪೂಜಿಸುತಿರುವಂಥ ಶಿಷ್ಟರ ಕಷ್ಟವ ಸಿಗಿದೊಗೆವಂಥ 2 ಅಂಧಕಾರವ ಬೇಗ ಹರಿದು ಪಾಲಿಸುವಂಥ ಸೂನು ಇಚ್ಛಿಸಿದಂಥ ಚಂದದಿ ಬಲಿಯ ಪಾತಾಳಕ್ಕೆ ತುಳಿದಂಥ ಅಂದದಿ ನರನ ಸಾರಥಿಗೊಪ್ಪುವಂಥ 3 ಸುರರು ಕಿಂನರರು ಕಿಂಪುರುಷರೇ ಮೊದಲಾದ ಸುರಗಣ ಸೇವಿಪ ಭಜಿಪ ಪಾದವನು ಸರಸದಿ ಭಕ್ತರ ಸಲಹೆ ರಕ್ಕಸರನ್ನು ತರಿದ ಶ್ರೀ ಚನ್ನಕೇಶವನ ಪಾದವನು 4
--------------
ಕರ್ಕಿ ಕೇಶವದಾಸ
ಪಾದ ನಂಬಿದೆ ಜನಕೆ ಪಾರುಗಾಣಿಪ ಪರಮ ಕರುಣಿ ಶ್ರೀ ಧೀರೇಂದ್ರವರ್ಯಾ ಪ ನಿತ್ಯ ಅನವರತ ಭಕ್ತಿಯನೆ ಇತ್ತೆನ್ನ ಕಾಯೆಯ್ಯ ಕರುಣಾನಿಧೆ ಅ.ಪ. ವಸುಧೀಂದ್ರ ಕರಕಮಲ ಸಂಜಾತ ವಸುಧೆಯೊಳು ವಾಸವಾಗಿಹ ಭಕ್ತ ಜನಕೆಲ್ಲಾ ವಾಸವಾನುಜ ಶ್ರೀ ವಾಸುದೇವನ ಸರ್ವಜಗಕೆಲ್ಲಾಪಾಯನೆಂಬಾ ವಾಸುದೇವನ ಮತವ ಬೋಧಿಸುತೆ ಸಾತಾರಾ ಪುನಯಾದಿ ನಗರದ ವಾದಿಗಳನೆಲ್ಲಾ ವಾದದಿಂದಲಿ ಗೆದ್ದು ಬಹುಮಾನವನೆ ಪಡೆದು ಮಹಿಯೊಳಗೆ ಬಹು ಖ್ಯಾತಿ ಪಡೆದ ಮಹಾಮಹಿಮ 1 ಭೂರಮಣ ಶ್ರೀಕಾಂತ ಬಹುಕೋಪದಿಂದಲಿ ಕೋದಂಡಪಾಣಿಯಾಗಿ ಭವಜನಕೆ ಮೋಹವನೆ ಬೀರುವಾ ಸಮಯದಲಿ ಬಹು ಭ್ರಾಂತಿಗೊಂಡು ಇರಲು ಭಾರತೀಶನ ದಯದಿ ಭಾಗೀರಥಿಯ ಕೂಡಿ ಬಹುಭಕ್ತಿಯಿಂದ ಒಲಿಸಿ ಭೂಮಿಜೆಯ ಕಳ್ಳನನೆ ಸಂಹರಿಪ ಕಾರ್ಯದಲಿ ಬಹುಸೇವೆಗೈದಂಥ ಪುಣ್ಯಶಾಲಿ 2 ಶ್ರೀರಮಣನಾಜ್ಞೆಯಲಿ ಭಜಿಪ ಭಕ್ತರಿಗೆಲ್ಲ ಬೇಡಿದಿಷ್ಟಾರ್ಥಗಳ ಸಲಿಸುತ್ತಲೀ ಶ್ರೀಕೃಷ್ಣಭಕ್ತರಿಗೆ ಕೃಷ್ಣವಾಗಿಹ ಮನವ ಉತ್ಕøಷ್ಟಗೈಯ್ಯುತ್ತಲೇ ಶ್ರೀಸುರಪನಾಯಕೆ ಸರಿಮಿಗಿಲು ಎಂದೆನಿಪ ಬಹುಭಾಗ್ಯವನ್ನೆ ಪಡೆದು ಶ್ರೀಗುರುತಂದೆವರದ-ಗೋಪಾಲ ಅಸಿ ಬಿಟ್ಟು ಬಿಡದಲೆ ಭಕ್ತಿಯಿಂ ಭಜಿಪ ಗುರುವರ್ಯ 3
--------------
ಸಿರಿಗುರುತಂದೆವರದವಿಠಲರು
ಪಾದ ನಿತ್ಯ 1 ವಾಸುದೇವ ನಿನಗೆ ಒಲಿವ ತಾ ಭಾಸುರ ಕೀರ್ತಿ ತರುವ ಬೇಸರಿಸದೆ ಭಾಸಿ ಪಂಥದಿ ವಾಸುದೇವದಾಸರ ಸೇವಿಸು 2 ಕರುಣ ತೋರಿ ಸಲಹುವಂಥ ಗರುಡಗಮನನಿರಲು ನೀನು ಅರಿಯದಂತೆ ಇರಲು ನಿನ್ನ ಮರುಳು ಮನವೆ ಕಾರಣಿದಕೆ 3 ಕೂಡು ಸಜ್ಜನ ಸಂಗ ತವಕದಿ ಜಾಡುಕೋರ್ವ ಹರಿಭಕ್ತರ ನೋಡು ನಿನ್ನಕ್ಷಿ ತೆರೆದು ಮನುಜ 4 ಜಗಜನ್ಮಾದಿ ಕಾರಣ ಅಘಟನಘಟನಾದ ಹರಿಯ ಮಿಗೆ ಧ್ಯಾನವಿಟ್ಟು ಮನವೆ 5 ಸಲ್ಲ ದುರ್ಜನರಾಸಂಗವು ಸಜ್ಜನರಿಗೆ ಅಲ್ಲ ತಿಂದ ತಿಮ್ಮನಂದದಿ ಬೆಲ್ಲ ಬೇವಿನಂತೀ ಸಂಸಾರದಲ್ಲಿ ಸಿಲುಕಬೇಡ ಮನವೆ 6 ಹರುಷದಿಂದ ಜಡದೇಹದೊಳಗಿಹ ಶ್ರೀ ಹರಿ ಎಂದರಿದು ಪರರ ವಾರ್ತೆ ಆಡದೆ ಪರಮಪುರುಷ ಹರಿಯ ನೆನೆ ಮನುಜ 7 ಹದಿನಾಲ್ಕು ಲೋಕದೊಡೆಯ ಒದಗಿರಲು ನಿನ್ನ ಸಾಕೆ ಬರಿದೆ ಚಿಂತೆ ಮಾಡಬೇಡ ಸ್ಮರಿಸು ಹರಿಯ ಚರಣವನ್ನು8 ಸ್ವಕಾರ್ಯ ಸ್ವಾಮಿಕಾರ್ಯ ನಿನ್ನ ಅಖಿಲ ಕಾರ್ಯಾಂಗತನು ಹರಿಯು ಸಖನಂತೆ ಸಲಹುತಿರಲು ಸುಖಿಸು ಅವನ ದಾಸನೆಂದು 9 ಪಾದ ನಿತ್ಯ ಸಂಗ 10 ಸಕಲರಲ್ಲು ಅವನೇ ನಿಂತು ಸಲಹುವನೆಂದರಿತು ನೀ 11 ನಿತ್ಯ ಅಜ್ಞಾನವನ್ನು ಪರಿಹರಿಸುತ ನಿತ್ಯ ವಂದಿಸು ಮನದಿ 12 ಪಾದ ಧ್ಯಾಸದಿಂದ ಅರಿತೆನಲದೆ ಎಂದರಿತು 13 ಪ್ರಾಣನಾಥನೊ ಹರಿ ಶ್ರೀ ರಾಮಚಂದ್ರನೆಂದು ಅರುಹಿಕೊಟ್ಟು ಸಲಹುವರ 14 ತ್ರಿವಿಧ ಜೀವರಿಗೆ ಹರಿಪರದೈವನೆಂದರುಹಿದ ಪರಮಗುರು ಮತವ ಬಿಟ್ಟು 15
--------------
ಸರಸ್ವತಿ ಬಾಯಿ
ಪಾದ ನಿತ್ಯ ನಿತ್ಯ ಸುಖವೇ ಸುಖವು 1ಜ್ಞಾನ ಗಂಗಾ ನದಿಯು ವೈರಾಗ್ಯ ಯಮುನೆಯು ಸದ್ಭಕ್ತಿ ಸರಸ್ವತೀ ಈ ಬಗೆಯ ತ್ರಿವೇಣಿಸಂಗಮವು ಇವರಲ್ಲಿ ಎದ್ದು ಕಾಣುವದು ನಿತ್ಯ 'ಜಯರಾಯರ ನೆರಳಿನಿಂದಲಿ ಸರ್ವದಾ ಅವರಲ್ಲಿ ಇವರವಾಸಗುರುಭಕ್ತಿಯಲಿ ಇವರ ಸರಿ'ುಗಿಲು ಯಾರಿಲ್ಲಭಾಗಣ್ಣದಾಸರಿವರೇ ಅವರು 2ಪಂಢರಾಪುರದ ಶ್ರೀ ಪಾಂಡುರಂಗನು ಇವರ ಭಕ್ತಿಭಾವಕೆ ಮೆಚ್ಚಿದಾಬಹುದಿವಸ ತನ್ನದರುಷನಕೆ ಬರಲಿಲ್ಲೆಂದು ಕಳವಳದಿ ಪಾಂಡುರಂಗಾಕುದುರೆಯನು ಏರಿ ತಾನೆ ಅವರಬಳಿ ಪೋಗಿ 'ಆಲೆ ನಾ'' ಎಂದು ಕರೆದಾಮರುದಿನವೆ ಪಂಢರಿಗೆ ತ್ವರದಿ ಓಡುತ ಹೋಗಿಭೂಪತಿ'ಠ್ಠಲನ ಬಿಗಿದೊಪ್ಪಿಕೊಂಡಾ 3
--------------
ಭೂಪತಿ ವಿಠಲರು