ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧನ್ಯನಾದೆನು ವಿಠಲನ ಕಂಡು ಓಡಿತು ಅಘದ್ಹಿಂಡು ಪ ಧನ್ಯನಾದೆನೂ ಕಾಮನ್ನ ಪಿತನ ಲಾ ವಣ್ಯ ಮೂರುತಿಯ ಕಣ್ಣಿಲೆ ಕಂಡು ಅ.ಪ. ದೇವವರೇಣ್ಯ ಸದಾ ವಿನೋದಿ ವೃಂ ದಾವನ ಸಂಚರ ಗೋವನ ಕಂಡು 1 ಮಂಗಳಾಂಗ ಕಾಳಿಂಗ ಮಥsÀನ ಮಾ ತಂಗವರ ವರದ ರಂಗನ ಕಂಡು 2 ಹಾಟಕಾಂಬರ ಕಿರೀಟ ಸಾರಥಿ ತಾಟಕಾರಿ ವೈರಾಟನ ಕಂಡು 3 ಚಿಂತಿತ ಫಲವ ಕೃತಾಂತನಾತ್ಮಜಾ ದ್ಯಂತರಹಿತ ನಿಶ್ಚಿಂತನ ಕಂಡು 4 ಮಾತುಳಾಂತಕ ವಿಧಾತಪಿತ ಜಗ ನ್ನಾಥ ವಿಠಲ ವಿಖ್ಯಾತನ ಕಂಡು 5
--------------
ಜಗನ್ನಾಥದಾಸರು
ನದೀದೇವತೆಗಳು ಕಂಗಳಿಂದಲಿ ನಿನ್ನ ಕಂಡೆ ನಾನೀಗ ಹಿಂಗಿತೇ ಎನ್ನ ಅಘದ್ಹಿಂಡು ಕಾವೇರಿ ಪ. ಮಂಗಳಾಂಗಿಯೆ ಶ್ರೀ ರಂಗನಾಥನ ಪದ ಭೃಂಗಳೆನಿಸಿ ಜನರ ಪಾವನಗೈವೆ ತುಂಗವಿಕ್ರಮ ಹರಿಗೆ ಮೂಲರೂಪಳಾಗಿ ಅಂಗ ಶುದ್ಧಿಯಗೈವೆ ಪಾಪಿಗಳ ಸತತ 1 ಎಲ್ಲೆಲ್ಲಿ ನೋಡೆ ಶ್ರೀರಂಗನ್ನ ಸೇವಿಸುವೆ ಪುಲ್ಲಲೋಚನೆ ನಿನ್ನ ಬಗೆಯರಿವೆನೆ ಬಲ್ಲ ಭಕ್ತರು ಬಂದು ನಿನ್ನಲ್ಲಿ ಸ್ನಾನವಗೈದು ಉಲ್ಲಾಸದಿಂದ ಆನಂದಪಡುತಿಹರೆ 2 ನೊರೆಸುಳಿಗಳಿಂದ ಭೋರ್ಗರೆಯುತ್ತ ಹರಿ ಇರುವ ಅರಮನೆಯೆ ವೈಕುಂಠವೆಂದು ಸೂಚಿಸುತ ಹರಿಸದನ ಸುತ್ತಿರುವೆ ವಿರಜೆ ನಾನೆಂದೆನುತ ಅರುಹುವಾ ತೆರದಿ ಬಹು ರಭಸದಿಂ ಪರಿವೆ 3 ನಿನ್ನ ಧ್ವನಿ ಇಂಪೆಂದು ಆನಂದದಿಂದಾಲಿಸುತ ಚನ್ನ ಶ್ರೀರಂಗ ತಾ ಪವಡಿಸಿಹನೆ ಘನ್ನ ಮಹಿಮಳೆ ಸಕಲ ಜೀವರಾಶಿಯ ಪೊರೆವೆ ಎನ್ನ ಮನ ಹರಿಪದದಿ ನಲಿವಂತೆ ಮಾಡೆ 4 ನಿನ್ನನೇ ವಿರಜೆ ಎಂತೆಂದು ಭಾವಿಸಿ ಈಗ ಎನ್ನ ಗುರುಗಳ ದಯದಿ ಸ್ನಾನಗೈದೆ ಇನ್ನು ಶ್ರೀ ವೈಕುಂಠದೊಡೆಯನಾ ತೋರಮ್ಮ ಘನ್ನ ಶ್ರೀ ಗೋಪಾಲವಿಠ್ಠಲನ 5
--------------
ಅಂಬಾಬಾಯಿ