ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿಜಯರಾಯರ ಪಾದವ ನೀ ಮಾನವ ಪ ವೃಜಿನವೆಲ್ಲವ ಕಳೆದು ಕರುಣದಿ | ಅಜನನಯ್ಯನ ತೋರುವ ಅ.ಪ. ಜಗಕೆ ಹರಿ ಪರನೆಂದು ತಾ ಭುಜ ಯುಗಗಳೆತ್ತಿ ಸಾರಿದಾ || ಭೃಗು ಮುನಿ ಇವರೆಂದು ಭಾವಿಸಿ ಮಿಗೆ ಸುಭಕ್ತಿಲಿ ಸರ್ವದಾ 1 ವರಹಜಾ ತಟದಲ್ಲಿ ಚೀಕಲ | ಪರವಿಗ್ರಾಮದಿ ಜನಿಸಿದ || ಪರಿಪರಿಯಲನುಭವಿಸಿ ಬಡತನ ಭವ ವೈರಾಗ್ಯ ಧರಿಸಿದ 2 ಭಕುತಿ ಪೂರ್ವಕವಾಗಿ ಬಿಡದಲೆ | ಸಕಲಕ್ಷೇತ್ರವ ಚಲಿಸಿದಾ || ಮುಕುತಿ ಸುಖದಾತಾರನಾದ | ಲಕುಮಿ ರಮಣನ ತುತಿಸಿದಾ 3 ತಾ ಸುಸ್ವಪ್ನದೊಳೊಂದು ದಿನ ಶ್ರೀ ವ್ಯಾಸ ಕಾಶಿಗೆ ತೆರಳಿದಾ || ವಾಸುದೇವನ ಕಂಡು ನಮಿಸಿ ಲೇಸು ವರ ಸ್ವೀಕರಿಸಿದಾ 4 ಪುರಂದರಾರ್ಯರ ಕವನಗಳು ಮೂರೆರಡು ಲಕ್ಷಕೆ ತ್ರಯಪದ ಕೊರತೆ ತಾ ಪೂರೈಸಿದ 5 ಬಾಲೆಯೋರ್ವಳು ಬಂದು ಪ್ರಾರ್ಥಿಸೆ ಕೇಳುತಾಕೆಯ ಪತಿಯನು ಕಾಲ ಪಾಶವ ಬಿಡಿಸಿ ಕರುಣದಿ ಪಾಲಿಸಿದ ಸುಮಹಾತ್ಮರ 6 ಶ್ರೀಮನೋಹರ ಶಾಮಸುಂದರ ನಾಮ ಮಹಿಮೆಯ ವಿಧ ವಿಧ ಭೂಮಿ ಸುಮನಸ ಸ್ತೋಮಕನುದಿನ ಪ್ರೇಮದಿಂದಲಿ ಬೀರಿದ 7
--------------
ಶಾಮಸುಂದರ ವಿಠಲ
ವ್ಯಾಸರಾಯರ ಚರಣವನೆ ಸೇವಿಸಿ ಪ ವ್ಯಾಸರಾಯರ ಚರಣ ಸರಸಿಜದ ಸೇವೆ ಬಲು ಮೀಸಲ ಮನದಿ ಮಾಡೆ ಆಶೆಪಾಶೆಯ ತೊರೆದು ಕ್ಲೇಶವೆಲ್ಲವ ಹರಿಸಿ ಭಾಸಿಸುವ ಬಿಡದಲೇ ಹೃದ್ದೇಶ ಖೇಶದೊಳಗೇ ಅ.ಪ. ಬನ್ನೂರು ಪುರದಲ್ಲಿ ಮುನ್ನೋರ್ವ ಬ್ರಾಹ್ಮಣನಮನ್ನೆಯೋಳ್ಳುದಿಸಲೂ ಸ್ವರ್ಣ ಪಾತ್ರೆಲಿ ತರಿಸಿಘನ್ನ ಮಹಿಮನ ತಂದು ಬ್ರಹ್ಮಣ್ಯ ಯತಿವರರು ತಮ್ಮ ಆಶ್ರಮದಿ ಪೊರೆಯೆ ||ಉನ್ನತದ ಗುಡ್ಡದಲಿ ಗವಿಯ ಮನೆಯಾಗಿರಲು ಚಿಣ್ಣನಾ ತೊಟ್ಟಿಲಿನ ಮೇಲಿನ ಗವಾಕ್ಷದಿಂಚೆನ್ನಗೋವ್ ದಿನದಿನದಿ ಪಾಲ ಕರೆಯುತ ಚಿಣ್ಣನನು ತಾ ಬಲು ಸಲಹಿತು 1 ತಾಪಸೋತ್ತಮರಾದ ಶ್ರೀಪಾದರಾಯರ ಸ-ಮೀಪದೊಳು ಆ ಪರಮ ಶಾಸ್ತ್ರ ವ್ಯಾಸಂಗದೀಭಾಪು ಭಾಪನೆ ಮೆರೆದು ಭಕ್ತಿ ಸುಪಥವ ಪಿಡಿದು ಮೈ ಮರೆದು ಕುಣಿಯುತಿರುವ ||ಶ್ರೀಪಾದ ಮುನಿಪ ತಾ ಮುಚ್ಚಳವ ತೆರೆಯದಿಹ ಸಂಪುಟವ ತೆರೆಯುತ್ತ ಶ್ರೀ ಪತಿಯನೆ ನೋದುತಶ್ರೀಪ ಶ್ರೀ ವೇಣುಗೋಪಾಲ ಕೃಷ್ಣನ್ನ ಕಾಣುತ್ತ ಕುಣಿ ಕುಣಿದಾಡಿದ 2 ಶಾಲಿಗ್ರಾಮವ ಪಿಡಿದು ತಾಳವನೆ ಹಾಕುತ್ತಬಲುಭಕ್ತಿ ಭರದಿಂದ ಘಲ್ಲು ಘಲ್ಲನೆ ಕುಣಿಯೆಖುಲ್ಲ ಜನರಿದರ ವಳ ಮರ್ಮವನೆ ತಿಳಿಯದಲೆ ಗುಲ್ಲುಗುಲ್ಲೆಂದು ನಗಲೂ || ಬಲ್ಲಿದ ಶ್ರೀಪಾದರಾಯರಿದ ಕೇಳಿ ಕಂಗಳಲಿ ಗಂಬನಿ ಗಲ್ಲದಲಿ ಕೈಯಿಡುತ ಸೊಲ್ಲ ಕೇಳಿರಿ ಸುಜನರೆಲ್ಲರು ಶ್ರೀ ಕೃಷ್ಣ ನಮ್ಮ ವ್ಯಾಸರೋಶನಾದನು 3 ಸಾರಥಿ ಹರಿಯನಿಜ ಮತವ ಬೋಧಿಸುತ ನಿಜ ಜನರ ಪೊರೆಯುತ್ತಕುಜನ ಕುತ್ಸಿತ ಮಾಯಿಮತ ಜೈಸಿಅಜನನಯ್ಯನ ಪ್ರೀತಿ ಸಂಪಾದಿಸಿ ||ಸುಜನ ಪಾಲಕ ಕೃಷ್ಣರಾಜನಿಗೆ ಕುಹುಯೋಗಗಜಬಜಿಸಿ ಬರುತಿರ್ಪುದನು ನಿಜ ಮನದಿ ತಿಳಿದುಗಜವರದ ನಂಘ್ರಿಯನೆ ಭಜಿಸುತ್ತ ವಿಜಯ ಪುರಿ ಸಿಂಹಾಸನವನೇರ್ಧರ 4 ಪರಿ ಗ್ರಂಥ ರಚನೆಯಲಿ ಕಳೆಯೆ ಕಾಲವಕಲು ಮನದ ಜನರಿವರ ಬಲು ಪರಿಯ ಮಹಿಮೆಗಳನೂ ತಾವ್ ತಿಳಿಯಲೊಶವೆ 5 ಇಂಪುಗೊಳ್ಳುತ ಮನದಿ ತಂಪಿನಿಂದಲಿ ಮೆರೆವಪಂಪೆ ಸುಕ್ಷೇತ್ರದಲಿ ಬಾಂಬೊಳೆಯ ಜನಕನ್ನಸಂಪ್ರೀತಿಯನೆ ಪಡೆದಿರುವ ಯಂತ್ರ ಉದ್ಧಾರರನ ಸ್ಥಾಪಿಸುತಲಿ||ನೋಂಪಿನಿಂದಲಿ ಬ್ರಾಹ್ಮಲಕ್ಷ ಗುಂಪಿಗೆ ಉಣಿಸಿ |ಸಂಪುಲ್ಲ ಲೋಚನನ ಶಂಫಲಿಯ ಪುರಗನನುಸಾಂಪ್ರದಾಯಕದಿಂದ ಸಂಪ್ರೀತಿ ಬಡಿಸಿದರ ಪದ ಪಾಂಸುವನೆ ಸಾರಿರೋ 6 ಪರಿ ಪರಿಯ ಪೂಜೆಯನೆ ಗೈಯ್ಯುತಲಿ ||ಶ್ರೀಶನ ಸುಪೂಜಾ ವಿಧಾನವನೆ ಗೈಸುತ್ತದೋಷದೂರನ ಸೇವೆ ಮೀಸಲಳಿಯದ ಮನದಿ ಒಸೆದು ತಾವ್ ಗೈಯ್ಯುತ ಭಾಸಿಸುವ ಸತ್ಕೀರ್ತಿಯುತರಾಗಿ ಮೆರೆಯುತಿಹರ 7 ಪುರಂದರ ವಿಠಲ ದಾಸನೆಂದೂದಾಸ ಪೀಠದಿ ನಿಲಿಸಿ ದಾಸ ಕೂಟವ ರಚಿಸಿ ಸತ್ಪಂಥವನೆ ಸಾರಿದ ||ಆಶುಕವಿತೆಯ ರಚಿಸಿ ಪ್ರಾಕೃತ ಸುಭಾಷೆಯಲಿಕೇಶವನ ಗುಣಧಿಯಲಿ ಲೇಸಾಗಿ ಈಸುತಲಿದಾಸರೊಡನಾಡುತಲಿ ಮೀಸಲಾಗಿರಿಸಿ ತನು ಕೇಶವನ ಗುಣ ಪೊಗಳಿದ 8 ಜಯ ಜಯತು ಶುಭಕಾಯ ಜಯ ಜಯತು ವ್ಯಾಸಾರ್ಯಜಯ ಮಧ್ವಮುನಿ ಪ್ರೀಯ ಜಯ ಚಂದ್ರಿಕಾಚಾರ್ಯಜಯತು ವಿದ್ವದ್ದಾರ್ಯ ಜಯತು ಸುರಮುನಿ ಪ್ರೀಯ ಜಯ ಜಯತು ಯತಿವರ್ಯನೆ ||ಕಾಯಭವ ಪಿತ ಗುರೂ ಗೋವಿಂದ ವಿಠ್ಠಲಗೆಪ್ರೀಯ ಗುರು ವ್ಯಾಸಾರ್ಯ ಸ್ತೋತ್ರವನು ಭಾವ ಶುದ್ಧಿಯೊಳಾವ ಭಜಿಸುವನವಗೆ ಭವವನಧಿ ಉತ್ತರಿಸೆ ನಾವೆಯೆನಿಸುವುದಿದು 9
--------------
ಗುರುಗೋವಿಂದವಿಠಲರು
ಶ್ರೀ ವ್ಯಾಸರಾಜರು ಏಸು ಮಹಿಮ ನೋಡೋ | ಶ್ರೀ ವ್ಯಾಸಮುನಿಯು ತಾನೂ ಪ ದಾಸಜನರ ಹೃದ್ದೊದ್ದೋಷ ಕಳೆದು ಸಂ | ತೋಷ ಕೊಡುವ ದೊರೆ ಅ.ಪ. ರಾಮಾಚಾರ್ಯರ ಗೃಹದಿ | ಭೂಮಿ ಸೋಕದೆ ಪುಟ್ಟಿಪ್ರೇಮದಿಂದಲಿ ಪುರು | ಷೋತ್ಮ ತೀರ್ಥರ ಗುಹದಿಯಾಮ ಯಾಮಕೆ ಪಾಲು | ಆಮಹಾಮುನಿ ಕೂಡೆಸೀಮೆ ಮೀರಿದ ತೇಜ | ಕೋಮಲ ಕಾಯನು 1 ಪೂರ್ಣ ಬೋಧರ ಪೀಠ | ಬ್ರಹ್ಮಣ್ಯರಿಂಗೊಂಡುಭವಾರ್ಣ ತಾರಿಸುವಂಥ | ನ್ಯಾಯ ಗ್ರಂಥವ ಮಾಡಿಕರ್ಣ ರಹಿತನ ಸುಶಯ್ಯನ ಮಾಡಿಕೊಂಡಅರ್ಣ ಸಂಪ್ರತಿಪಾದ್ಯ | ಕೃಷ್ಣನ್ನ ಮೆರೆಸೀದ 2 ಸುಜನ ಕುಮುದ ಚಂದ್ರ | ನಿಜಭಕ್ತ ಪರಿಪಾಲ ಪರಿವ್ರಾಜಾಕಾಚಾರ್ಯ | ವಿಜಯ ನಗರಿಲಿ ನೆಲೆಸೀಅಜನನಯ್ಯನ ನಾಮ | ಭಜನೆ ಪ್ರಾಕೃತದೊಳುನಿಜಜನ ಕೊರೆಯುತ | ಅಜೇಯನೆನಿಸಿದಂಥ 3 ಮಿಥ್ಯಾಮತವಗೆದ್ದು | ತಥ್ಯಾವು ಜಗವೆಂದುಸ್ತುತ ಶ್ರೀಹರಿಯ ಸರ್ವೋತ್ತುಮನೆನುತಸತ್ಯವು ಪಂಚ ಭೇದ | ನಿತ್ಯವು ತಾರತಮ್ಯಭೃತ್ಯರು ಬ್ರಹ್ಮ ದೇವತೆಗಳೆಂದೊರೆದ 4 ಪುರಂದರ | ದಾಸರೆಂದೆನಿಸೀದ 5 ಅಹಿಪರ್ವತಾಧೀಶ | ಅಹಿತಲ್ಪನ್ನಾಸೇವೆವಿಹಿತದಿ ದ್ವಿಷಡಾಬ್ದ | ಬಹುಗೈದು ಅರಸಿನಕುಹುಯೋಗವಾರಿಸಿ | ಮಹಿಯ ಸುರರಿಗೆಲ್ಲಸಹಸ್ರಾರು ಗ್ರಾಮಗಳ್ | ಜಹಗೀರುಗಳನಿತ್ತ 6 ಛಂದದಿಂದಲಿ ನವ | ವೃಂದಾವನಕೆ ಬಂದುವೃಂದಾವನದಿ ನಿಂದು | ಇಂದೀವರಾಕ್ಷನುನಂದ ಕಂದ ಗುರು ಗೋ | ವಿಂದ ವಿಠಲನ ಹೃನ್‍ಮಂದಿರದಲಿ ನೋಡಿ | ನಂದವ ಪಡುತಿರ್ಪ7
--------------
ಗುರುಗೋವಿಂದವಿಠಲರು