ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೊರಕಿಸಬಹುದು ತಂದೆ ತಾಯಿಗಳ ಜನ್ಮ ಜನ್ಮದಲಿದೊರಕಿಸಲಾಗದು ಸದ್ಗುರುನಾಥನ ಆವ ಜನ್ಮದಲಿ ಪ ತಂದೆ ತಾಯ್ಗಳ ಋಣವ ಜನ್ಮಾಂತರದಲಿ ತೀರಿಸಬಹುದುಗುರು ಋಣವು ತೀರುವುದದೆಂತೋ 1 ತಂದೆತಾಯಿ ಋಣಗಳಿಂದ ಜಾತನಾಗುವೆಮುಂದೆ ಗುರು ಋಣಗಳಿಂದ ಅಜಾತನಾಗುವೆ 2 ಗುರುವಿನ ಋಣವನು ತೀರಿಸಲಾಗದುಗುರು ಚಿದಾನಂದನ ಕೃಪೆಯಿಂ ತೀರುವುದು 3
--------------
ಚಿದಾನಂದ ಅವಧೂತರು
ಧ್ರುವತಾಳ ಹಿಂದಿನ ಜನ್ಮಜನ್ಮಾಂತರದಿ ಮಾಡಿದಘವ ನಿವಾರಿಸುವರು ನಿನ್ನ ದಾಸರು ದುರಿತ ದುರ್ಜಯ ದುಃಖವ ದೂರ ಮಾಡುವರು ನಿನ್ನ ದಾಸರು ಮುಂದಣ ಅಪಾರ ಆನಂದ ಸುಖವ ಅನವರತ ಈವರು ನಿನ್ನ ದಾಸರು ಯೆಂದು ಇಲ್ಲದಿರೆ ಬ್ಯಾರೆಗತಿಯುಂಟೆ ನಿನ್ನನರಿವ ಬಗೆ ಮತ್ತುಂಟೆ ಎಲೆದೇವ ನಂದನಂದನ ನಿನ್ನವರೆ ಜೀವನ ಅಚಲಾನಂದವಿಠಲರೇಯ ಬ್ಯಾರೆಗತಿ ಮತ್ತುಂಟೆ 1 ಮಠ್ಯತಾಳ ಭೂತದಯಾಪರ ನರನಾಥ ದೇವತೆಯೆಂಬರು ಭೂತವಿರೋಧ ಮಾಡಿ ಕೈಯ್ಯಾತು ಬೇಡುವ ದೈವವ ಸಾತ್ವಿಕವೆಂದು ಬಗೆವರು ಜನರು ಈ ರೀತಿಯೇನೆಂಬೆ ಅಜಾತ ಸಕಲದೇವರ ದಾತನೆ ಅಚಲಾನಂದವಿಠಲ ನೀನಿರೆ ಸಾತ್ವಿಕವೆಂದು ಅನ್ಯದೈವವ ಈ ಭೂತಳದ ಜನರು ಬಗೆವರು ಪ್ರತಿದಿನ 2 ತ್ರಿಪುಟತಾಳ ಮಾನವನೆ ಕೇಳು ಕಬ್ಬಿಣ ಸೋಸಿ ಕಾಸಿ ಬಡಿಯಲು ತಾನು ಪರುಷ ಸೋಕದೆ ಸುವರ್ಣ ಅಪ್ಪುದೇ ಅನಾದಿ ಅವಿದ್ಯ ತಾಪದಿಂದ ಬೆಂದು ತಾನು ನೀರೊಳು ಮಿಂದರೇ ಹೋಹುದೇನೊ ಅನಾದಿದೈವ ಅಚಲಾನಂದವಿಠಲನ ಧ್ಯಾನಮಾಳ್ಪರ ಪಾದಪರುಷ ಸೋಕದನಕ 3 ಅಟ್ಟತಾಳ ಎನ್ನ ಹಳಿಯಲಿ ಉಗುಳಲಿ ಬಂಧುಗಳೆನ್ನ ಮನ ರಂಗ ನಿನ್ನನೆ ನೆಚ್ಚಿಹ್ಯದೆನ್ನಮನ ಕೃಷ್ಣ ನಿನ್ನನೆ ನಂಬಿಹ್ಯದೆನ್ನ ಮನ ಅಚಲಾನಂದವಿಠಲರೇಯ ನಿನ್ನವರೊಲುಮೆಯ ಸಾರಿತೆನ್ನ ಮನ 4 ಆದಿತಾಳ ಹಲವು ಮಾತೇನು ಹಲಧರನನುಜನ ಚೆಲುವಿಕೆಯನೆ ಕಂಡು ಮನಸೋತೆನವ್ವ ಕೆಲಬಲದಾ ಕುಲದವರೆನ್ನ ಹಳಿಯಲಿ ಚಲಿಸದು ಚಿತ್ತ ಚಂಚಲವಾಗದೆನ್ನ ಮನ ಕೆಲಚಿತಿ ವೆಂಣೆಲ್ಲ (?) ತಾನೊಲಿವಂತೆ ಮಾಡಿದ ನಿಲುಕುವನಚಲಾನಂದವಿಠಲರೇಯ ಕ್ಯಲಬಲದ ಕುಲದವರೆನ್ನ ಹಳಿಯಲಿ 5 ಜತೆ ಬೆಂದ ಸಂಸಾರದಿ ಬಂದು ಬಂದು ಹೋದೆನೊ
--------------
ಅಚಲಾನಂದದಾಸ
ಶ್ರೀ ಕಮಲನೇತುರ | ಪುಣ್ಯಗಾತುರ | ಸಾಕಾರ ಕ್ಷಣ ಮಾತುರ | ನೀ ಕರುಣದಿಂದ | ವಾಕು ಲಾಲಿಸು | ಬೇಕು ವೇಗದಲಿ | ಗೋಕುಲಾಂಬುಧಿ ರಾಕಾಂಬುಜ ಲಾ | ವಕರ ತೊಲಗಿಸಿ | ಸಾಕುವುದೆನ್ನ ನಿ | ಜಕರ ವಿಡಿದೂ ಪ ನಿತ್ಯ ಅಜಾತಾ | ಕುಂಭ ಮಕುಟನೀತಾ | ಮಾವ ಮರ್ದನ ನಿರ್ಭೀತಾ || ದೇವಮರರ ಕಾ | ವ ಭಕ್ತರ | ಜೀವನೆ ವರ | ವೀವನನುದಿನ | ಆವು ಕಾವುತ ಪೋಗಿ | ದಾ ವಿಷ ಬಿಡಿಸದೆ || ಶ್ರೀ ವಲ್ಲಭ ನಿನಗಾವವನೆಣೆ ತ್ರಿ | ಭುವನದೊಳಗತಿ | ಸೇವಕ ಜನರಿಗೆ ಕೈವಲ್ಯವನು ಕೊಡುವಾ 1 ಪೂತನಿ ಪ್ರಾಣಾಪಹಾರಾ | ಪರಮ ಸುಂದರಾ | ಪರಿಹಾರಾ | ಮರಣಜರ ವಿದೂರಾ | ಭೂತಿ ಉಳ್ಳಿಂದ್ರ ಕುಮಾರಾ | ಸೂತ ನೀನಾಗಿ ಭೂತಳದೊಳು | ವ್ರಾತ ಯಮುನೆಯ | ಭ್ರಾತನ್ನ ನಗರಿಯ | ಯಾತನಿಗಟ್ಟಿದೆ | ಪೂತುರೆ ನಿನ್ನ ಮಾ | ಯಾತನಕೇನೆಂಬೆ | ಖ್ಯಾತಿ ಮೂರುತಿ ಬೆನ್ನಾತು ಕಾಯೊ ಪಾರಿ | ಜಾತವ ತಂದ | ಮಿತ ಮಹಿಮ ಜಗ | ತಾತಾ ಬೊಮ್ಮಾದಿ ವಿನುತಾ 2 ತೋಷ ಗೋಪಾಲ ಮಾನಿಸಾ ವೇಷ | ಆ ಪಾರ ರತುನ ಭೂಷಾ | ನಂತಪ್ರಕಾಳಾ | ತಾಪಸಿಗಳ ವಿಲಾಸಾ || ಕೋಪ ಮೊದಲಾದ ತಾಪತ್ರಯಗಳ | ನೀ ಪೋಗಾಡು ಉ | ಡುಪಿ ಸದನನೆ ಪಾಪರಹಿತ ಮಧ್ವಪತಿ ಕರದಿಂ | ದ ಪೂಜೆಗೊಂಡ ಪ್ರತಾಪನೆ ಜ್ಞಾನದ | ದೀಪ ಬೆಳಗಲಿ | ರೂಪವ ತೋರಿಸು ಯದುಪಾ ಎನ್ನ ಸಮೀಪಾ 3
--------------
ವಿಜಯದಾಸ