ಒಟ್ಟು 3 ಕಡೆಗಳಲ್ಲಿ , 1 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರನಕುಮಾರನ ಚರಣಕಮಲಗಳಿಗೆರಗಿ ಶಾರದೆಗೆ ವಂದಿಸುತ ಶರಧಿಶಯನಗೆ ಸೆರಗೊಡ್ಡಿ ಬೇಡಿಕೊಂಬೆ ಶರಧಿಸುತÉಯ ಕತೆಗ್ವರವ 1 ಸಾಕ್ಷಾತ ಶ್ರೀಹರಿ ವಕ್ಷಸ್ಥಳ ವಾಸಿಯೆ ಇಕ್ಷುಚಾಪದವನ ಪಡೆದ ಮೋಕ್ಷದಾಯಕಳೆ ಮಾಲಕ್ಷುಮಿ ಕರುಣಾಕ- ಟಾಕ್ಷದಿ ನೋಡಬೇಕೆನ್ನ 2 ಶ್ರಾವಣಮಾಸದಿ ಮೊದಲ ಶುಕ್ಕುರುವಾರ ಮಾ- ಧವನರಸಿ ಮಾಲಕ್ಷ್ಮಿ- ದೇವೇರ ಮಹಿಮೆ ಕೊಂಡಾಡುವೋದೀ ಕಥÉ ಕಿವಿಗೊಟ್ಟು ಕೇಳೋದು ಜನರು 3 ಬಡವ ಬ್ರಾಹ್ಮಣನೊಂದು ಪಟ್ಟಣದೊಳಗಿದ್ದ ಮಡದಿ ಮಕ್ಕಳ ಸಹಿತಾಗಿ ಹಿಡಿದು ತಂಬೂರಿ ತಂಬಿಗೆಯ ಗೋಪಾಳಕ್ಕೆ ಬಿಡದೊಂದು ಮನೆಯ ತಿರುಗುತಲಿ 4 ಸೊಸೆಯರು ನಾಲ್ಕು ಮಂದಿಯು ಗಂಡುಮಕ್ಕಳು ಹಸುಗೂಸುಗಳು ಮನೆತುಂಬ ಅಶನ ವಸನವಿಲ್ಲ ಹಸಿದ ಮಕ್ಕಳಿಗ್ಹಾಲು ಮೊಸರು ಅನ್ನವು ಮೊದಲಿಲ್ಲ5 ಅತಿಗುಣವಂತರು ಗತಿಯಿಲ್ಲ ಗ್ರಾಸಕ್ಕೆ ಮಿತಭೋಜನವ ಮಾಡುವರು ವ್ರತ ನೇಮ ನಿಷ್ಠೆ ನಿರುತ ದರಿದ್ರವನು ಶ್ರೀಪತಿ- ಸತಿ ದಯದಿ ನೋಡಿದಳು 6 ಒಂದು ದಿನದಿ ಬಂದ ಮಂದಿ ಮಂದಿರದಲ್ಲಿ ಚೆಂದಾದ ಸುಣ್ಣ ಸಾರಣೆಯು ರಂಗವಲ್ಲಿ ಚಿತ್ರ ಬಣ್ಣಕಾರಣೆ ಮಣಿ- ಮುಂದೆ ತೋರಣ ಕಟ್ಟುತಿರಲು 7 ಮನೆಮನೆಯಲ್ಲಿ ಮಾಲಕ್ಷ್ಮಿದೇವಿಯರ ಚಟ್ಟಿಗೆ ಬರೆವು- ದನು ತಾ ಕಂಡು ಇದು ಏನು ನೋವಿ (ನೋಂಪಿ?) ಎನಗೆ ಹೇಳಬೇಕೆಂದು ಘನ ಭಕ್ತಿಯಿಂದ ಕÉೀಳಿದನು 8 ಕ್ಷೀರಸಾಗರದಲ್ಲಿ ಹುಟ್ಟಿದ ಮಾಲಕ್ಷ್ಮಿದೇವಿ ದೇವರ ಪಟ್ಟದರಸಿ ಶ್ರಾವಣಮಾಸ ಸಂಪತ್ತು ಶುಕ್ಕುರುವಾರ ನಾವು ಪೂಜೆಯ ಮಾಡಬೇಕು9 ಎನಗೊಂದು ಚಟ್ಟಿಗೆ ಬರೆದುಕೊಟ್ಟರೆ ಎನ್ನ ಮನೆಯಲ್ಲಿ ಇಟ್ಟು ಪೂಜೆಪೆನು ವಿನಯದಿಂದ್ಹೇಳಿಕೊಂಡರೆ ಒಂದು ಚಟ್ಟಿಗೆ ಬರೆದÀುಕೊಟ್ಟರು ಬಲಗೈಲಿ 10 ಸಿರಿದೇವಿಚಟ್ಟಿಗೆ ಹಿಡಿದು ಗೋಪಾಳಕ್ಕೆ ಹೋದನು ಮನೆ ಮನೆಯಲ್ಲಿ ಗೂಡೆ ಅಕ್ಕಿ ಬ್ಯಾಳೆ ಬೆಲ್ಲತುಪ್ಪವ ತಂದು ನೀಡೋರು ಹಿಡಿ ಹಿಡಿರೆಂದು 11 ಕುಸುಮ ಮಲ್ಲಿಗೆ ಪತ್ರಫಲಗಳು ಪೂಜಾ ಸಾಧನ ಪದಾರ್ಥಗಳು ಆದಿಲಕ್ಷ್ಮಿದಯ ಆದಕಾರಣದಿಂದ ಆದರದಿಂದ ಕೊಡುವರು 12 ತಂದ ಪದಾರ್ಥ ತನ್ನ್ಹೆಂಡತಿ ಕರೆದು ಮುಂದಿಟ್ಟು ವಾರ್ತೆಗಳ ಹೇಳಿದನು ಇಂದು ಪೂಜೆಯ ಮಾಡು ಆ- ನಂದವ ಕೊಡುವಳು ನಮಗೆ13 ಕಬ್ಬು ಬಿಲ್ಲ್ಹಿಡಿವೋ ಕಾಮನ ಮಾತೆ ಮಾಲಕ್ಷ್ಮಿ ಉರ್ವಿಯೊಳುತ್ತಮಳೀಕೆ ಹಬ್ಬದೂಟಕÉ ಹೇಳಿ ಬಂದೆ ಬ್ರಾಹ್ಮಣಗÉ ಮ- ತ್ತೊಬ್ಬ ಮುತ್ತೈದೆಗ್ಹೇಳೆಂದ14 ಚಿಕ್ಕಸೊಸೆ ಎಣ್ಣೆ ಕುಂಕುಮ ಕೈಯಲ್ಲಿ ತಕ್ಕೊಂಡು ನಡೆದಳ್ಹಾದಿಯಲಿ ಚೊಕ್ಕ ಚಿನ್ನದ ಗೊಂಬೆಯಂಥ ಮುತ್ತೈದೆ ತಾ ಗಕ್ಕನೆ ಬಂದು ಕೇಳಿದಳು 15 ಹುಡುಗಿ ನೀ ಎತ್ತ ಪೋಗುವಿಯೆ ನಿಮ್ಮನೆಯೆಲ್ಲೆ ಅಡಿಗೆಯೇನೇನು ಮಾಡುವರು ಹಿಡಿದೆಣ್ಣೆ ಕುಂಕುಮ ಕೊಡುವೋದಿನ್ನ್ಯಾರಿಗೆ ಕೊಡಬಾರದೇನೆ ನೀಯೆನಗೆ 16 ದಾರಾದರೇನಮ್ಮ ದಾರಿ ನೋಡದ ಮುಂಚೆ ನೀನೇ ಬಾ ನಮ್ಮ ಮಂದಿರಕÉ ಹೇಳಿ ಮುತ್ತೈದೆಗೆ ಹಿಗ್ಗಿಲೆ ಬಂದತ್ತೆ ಮಾವನ ಮುಂದರುಹಿದಳು 17 ಮನೆಯ ಸಾರಿಸಿ ಸುಣ್ಣ ಕಾರಣೆ ರಂಗೋಲಿಯ ಬರೆದು ಬಾಗಿಲಿಗೆ ಬಣ್ಣವನು ಎರೆದು ಕೊಂಡೆಲ್ಲರು ಬ್ಯಾಗ 18 ಕಮಲ ಕ್ಯಾದಿಗೆ ಕಬ್ಬು ಕದÀಳಿ ಕಂಬವು ಬಾಳೆಗೊನೆ ಕಟ್ಟಿ ಚಿತ್ರ ಮಂಟಪವ ನಡುವ್ಯ್ಹಾಕಿ ಪದ್ಮ ಪೀಠಗಳ 19 ಚಟ್ಟಿಗೆಯೊಳಗಕ್ಕಿ ಐದು ಫಲವ ತುಂಬಿ ಮುತ್ತೈದೇರೆಲ್ಲ ನೆರೆದು ಕಟ್ಟಿದರ್ ಕೊರಳ ಮಾಂಗಲ್ಯ ಮಾಲಕ್ಷ್ಮಿ ಪ್ರತಿಷ್ಠೆ ಮಾಡಿದರು ಸಂಭ್ರಮದಿ 20 ಅರಿಷಿಣ ಕುಂಕುಮ ಗಂಧ ಬುಕ್ಕಿ ್ಹಟ್ಟು ಗೆಜ್ಜೆ- ವಸ್ತ್ರವು ಪಾರಿಜಾತ ಸಂಪಿಗೆಯು ಮುಡಿಸಿ ಮಲ್ಲಿಗೆದಂಡೆ ಒಡೆಸೆ ತೆಂಗಿನಕಾಯಿ ಉಡಿ ತುಂಬುತ್ತತ್ತಿ ಫಲಗಳು 21 ಭಕ್ಷ್ಯಶಾವಿಗೆ ಪರಮಾನ್ನ ಚಿತ್ರಾನ್ನ ಸಣ್ಣಕ್ಕಿ ಶಾಲ್ಯಾನ್ನ ಸೂಪಗಳು ಚಕ್ಕುಲಿ ಗಿಲಗಂಜಿ ಚೆಂದ ಚಿರೋಟಿ ಹಪ್ಪಳ ಸಂಡಿಗೆ ಆಂಬೊಡೆಗಳು22 ಘೃತ ಕ್ಷೀರ ಸಕಲ ಪಕ್ವಾನ್ನ ಮಂಡಿಗೆ ಬೀಸೋರಿಗೆ ಗುಳ್ಳೋರಿಗೆಯು ಚಂದ್ರನಂತ್ಹೊಳೆವೊ ಶಾವಿಗೆಯ ಫೇಣಿಯು ದಿವ್ಯ ಬುಂದ್ಯ ಬುರುಬುರಿ ಅನಾರಸವು23 ಬೇಕಾದ ಬೇಸನ್ನು ಬಿಳಿಯದಳಿಯದುಂಡೆ (?) ಮೋತಿಚೂರು ಚೂರ್ಮಲಾಡು
--------------
ಹರಪನಹಳ್ಳಿಭೀಮವ್ವ
ಪಕ್ಷಿವಾಹನ ಸತ್ಯಭಾಮೆ ಸದನದ್ವಾರದಿ ನಿಂತು ಸದನದ್ವಾರದಿ ಮಿತ್ರೆ ಎನಗೆ ಕದವ ತೆಗೆಯೆ ಬರುವೆ ತೀವ್ರದಿ 1 ಸಾಕೊ ಸಾಕೊ ನಿನ್ನ ಸಂಗ ಯಾಕೊ ಕೃಷ್ಣನೆ ನಮಗಿನ್ಯಾಕೊ ಕೃಷ್ಣನೆ ಅ- ನೇಕ ಸ್ತ್ರೀಯರಿಂದ ರಮಿಸ್ಹೋಗಾದಿ ಪುರುಷನೆ 2 ವಾಕು ವಾಕು ತಿಳಿಯದೊ ವಿ- ವೇಕದಿಂದ ನಿಂತು ಪೇಳೆ ಮಾತುಯೆನ್ನೊಳು 3 ಎನ್ನ ಬಿಟ್ಟು ಅನ್ಯಸ್ತ್ರೀಯರ ಮನೆಗೆ ಪೋಗುವಿ ಸ್ತ್ರೀಯರ ಮನೆಗೆ ಪೋಗುವಿ ಘನ್ನ ಘಾತಕತನದಿಂದಿಲ್ಲಿಗಿನ್ನು ಬರುವರೆ 4 ನಿನ್ನ ಸರಿಯಸವತೇರೆನಗೆ ಸತಿಯರಲ್ಲವೆ 5 ಅತ್ತಸಾಗೊ ರುಕ್ಮಿಣಿ ಒಲವು ಚಿತ್ತವ್ಹಿಡಿಯದೆ ಆಕೆ ಚಿತ್ತವ್ಹಿಡಿಯದೆ ಲೆತ್ತಪಗಡೆನಾಡದ್ಹೀಗೆ ಇತ್ತ ಬರುವರೆ6 ಕಾಳಕತ್ತಲು ಪ್ರಳಯಜಲದಿ ಕಾದುಕೊಂಡೆನ್ನ ಇರುವೋಳು ಕಾದುಕೊಂಡೆನ್ನ ಆದಿಲಕ್ಷ್ಮಿ ಮುನಿದರೆನಗಿನ್ನಾ ್ಹ್ಯಗೆ ಭಾಮಿನಿ 7 ಜಾಂಬುವಂತೇರ್ಹಂಬಲಬಿಟ್ಟು ಬಂದ ಕಾರಣ ನೀನು ಬಂದ ಕಾರಣ ಆ- ನಂದ ಬಡಿಸುತವರ ಗೃಹದಲ್ ಹೊಂದಿಕೊಂಡಿರು 8 ಜಾಂಬುವಂತೇರಿಂದ ಬಂದ ನಿಂದ್ಯ ಕಳೆದನೆ ನಾ ಅಪನಿಂದ್ಯ ಕಳೆದೆನೆ ತಂದು ರತ್ನತೋರಿ ನಿನ್ನ ತಂದೆ ಭಾಮಿನಿ 9 ಕಮಲನಾಭ ಕಾಳಿಂದಿ ಕಳವಳಿಸುವಳೊ ಕಾಣದೆ ಕಳವಳಿಸುವಳೊ ಕಾಣದೆ ಕಾಲಕಳೆಯೊದ್ಯಾ ್ಹಗಿನ್ನಾಕೆ ಆಲಯಕೆ ಪೋಗೊ 10 ಭಾಳ ತಪಸಿಲ್ವಲಿಸಿ ಭಾರ್ಯಳಾದ ಬಗೆ ನೀ ಅರಿಯದೆ 11 ನೀಲವರ್ಣ ನೀಲಾದೇವಿ ನಿನ್ನ ಕಾಣದೆ ಇರುವಳು ನಿನ್ನ ಕಾಣದೆ ಗಮನ ನಿಲ್ಲದೆ ನೀ ಪೋಗೊ 12 ಸಪ್ತಗೂಳಿ ಕಟ್ಟಿ ನಾ ಸಮರ್ಥನೆನಿಸಿದೆ ಬಲು ಸಮರ್ಥನೆನಿಸಿದೆ ನೀಲ ನನಗೆ ಶ್ರೇಷ್ಠಳಲ್ಲವೆ 13 ಎದ್ದು ಪೋಗಾಕಿದ್ದಸ್ಥಳಕಿಲ್ಲಿರಲು ಸಲ್ಲವೊ 14 ಅರಸರಾಕೆ ಅಗ್ರಜರೈವರು ಕರೆಸಿ ಕೇಳೋರೆ ಎನ್ನ ಕರೆಸಿ ಕೇಳೋರೆ ಹೋಗಿ ಹರುಷ ಬಡಿಸದಿರಲು ಆಕೆನ್ನರಸಿ ಅಲ್ಲವೆ 15 ಆಕೆ ಸಿಟ್ಟಿಲಿಂದ ದೃಷ್ಟಿತೆಗೆದು ಎನ್ನ ನೋಡಳೆ 16 ನಿನಗೆ ಇಷ್ಟು ಕ್ರೋಧ ನಿಷ್ಠೂರ್ವಚನ ಬ್ಯಾಡೆ ಭಾಮಿನಿ 17 ಲಕ್ಷಣ ದೇವೇರಲ್ಲಿ ಭಾಳಾಪೇಕ್ಷವಲ್ಲವೆ18 ನಾನು ಲಕ್ಷಣೆಯನೆ ತಂದೆ ಕೇಳೆ ಸತ್ಯಭಾಮೆ ನೀ 19 ಹತ್ತು ಆರು ಸಾವಿರ-ಶತ ಪತ್ನೇರಿಲ್ಲವೆ ನಿನಗೆ ಪತ್ನೇರಿಲ್ಲವೆ ತಿರುಗಿ ಸುತ್ತಿ ಸುತ್ತಿ ಹಾದಿ ಹೀಗೆ ತಪ್ಪಿಬರುವರೆ 20 ದಾರಮನೆಗೆ ಹೋಗಲೆನ್ನ ದೂರು ಮಾಡೋರೇ ಹೀಗೆ ದೂರು ಮಾಡೋರೇ ಸ್ವಾಮಿ ಪಾರಿಜಾತಕೊಟ್ಟ ಸತಿಯಲ್ಲೊ ್ಹೀಗಿರೆಂಬರೆ 21 ಸರಸವಾಡದಿರೊ ಶ್ರೀರಮಣ ಅರಸೇರ್ಯಾತಕೊ ನಿನಗೆ ಅರಸೇರ್ಯಾತಕೊ ಹರುಷದಿಂದ ಎರಗದೆನ್ನ ಶಿರಸಿದ್ಯಾತಕೊ 22 ಶ್ರೀಶ ಎನ್ನ ಮನದಲಿರೊ ಭೀಮೇಶಕೃಷ್ಣನೆ ಇರೊ ಭೀಮೇಶಕೃಷ್ಣನೆ ನಿನ್ನ ವಿಲಾಸ ಬಯಸದಿರುವರ್ಯಾರೊ ಇಂದಿರೇಶನೆ 23
--------------
ಹರಪನಹಳ್ಳಿಭೀಮವ್ವ
ಯಾಕೆ ಮಲಗಿದೆಯೊ ಶ್ರೀಕಾಂತ ದ್ವಾರಕಾವಾಸ ಸೂರ್ಯ ಉದಯಾಯಿತು ಗೋಕುಲದೊಳಗಿದ್ದ ಗೋಮಕ್ಕಳೆಲ್ಲ ಧ್ವಜ- ರೇಖಾ ಚರಣಕಮಲಕೆರಗಿ ಕರೆಯುತಲಾಗ ಪ ಅಂಬುಧಿ ಒಳಗಾಡಿ ತಂದು ವೇದವನು ಕೊಡು ಮಂದರೋದ್ಧಾರ ಸುರರಿಗೆ ಸುಧೆಯ ನೀಡು ತಂದು ದಾಡಿಂದ ಧರೆಯನು ಹರವಿ ಧರಾಪತಿಯೆ ಕೊಂದು ರಕ್ಕಸನ ನಂದನಗೆ ದಯಮಾಡದಲೆ 1 ಬೇಡಿ ದಾನವ ಭುವನ ಮಾಡಿದೆಲೆ ಮೂರ್ಹೆಜ್ಜೆ ಆಡಿದ್ವಚÀನವ ನಡೆಸುತಾರಣ್ಯವಾಸದಲಿ ಆದಿಲಕ್ಷ್ಮಿಯನೆ ಕದ್ದಸುರನ್ನ ಸಂಹರನೆ 2 ಗೊಲ್ಲ ಸತಿಯರ ಕೂಡ ಸಲ್ಲಾಪ ಸಾಲದಲೆ ಎಲ್ಲ ತ್ರಿಪುರರ ಸತಿಯರಲ್ಲಿ ಪೋಗುವರೆ ಎಲ್ಲಿ ಓಡ್ಯಾಡಿದ್ಹೇಳಿಲ್ಲಿ ವಾರಿಧಿಶಯನ 3
--------------
ಹರಪನಹಳ್ಳಿಭೀಮವ್ವ