ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವಿಗೆರಗೀ ತರಣೋಪಾಯವನರಿಯಲಿಲ್ಲಾ ಮನವೇ | ಮರುಳನೋ ತರಳನೋ ಬಲು ದುರುಳನು ನಾನರಿಯೇ ಪ ಶ್ರೀನಾಥನಂಘ್ರಿ ಕಮಲಾ ಧ್ಯಾನವಿಲ್ಲ ಮನವೇ | ಮಾನವನಫ ದಾನವನೋ ನೀದನವೇನೋ ನಾನರಿಯೇ 1 ರತಿಯ ಬಿಟ್ಟು ವಿಷಯದಲ್ಲಿ ಗತಿಯಾ ಜರದೀ ಮನವೇ | ಹಿತವೇನೋ ಮಿತವೇನೋ ಉನ್ಮತವೇನೋ ನಾನರಿಯೇ 2 ಪೊಡವಿಯೊಳು ನರದೇಹವ ವಿಡಿದು ಬಂದೆ ಮನವೇ | ನಡಿದೇನೋ ನುಡಿದೇನೋ ಸುಖಪಡಿದೇನೋ ನಾನರಿಯೆ 3 ಭಕ್ತಿ ಜ್ಞಾನಾ ಬಲಿವಾ ಸುವಿರಕ್ತಿ ಇಲ್ಲಾ ಮನವೇ | ಸಕ್ತನೋ ಯುಕ್ತನೋ ಆಯುಕ್ತನೋ ನಾನರಿಯೆ 4 ಗುರು ಮಹಿಪತಿ ಪ್ರಭು ಶರಣರ ಕಾಯ್ದಾ ಮನವೇ | ನರವರನೋ ಸುರವರನೋ ಕಲ್ಪತರು ವರನೋ ನಾನರಿಯೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಿನವೇ ಸುದಿನವು ಧ್ಯಾನ ಮಾಳ್ಪ ಜನವೇ ಸುಜನವು ಪ ಮಹಿಮೆಯ ಪಾಡುವ ಅ.ಪ. ಯುಕ್ತದಿ ಕೂಡಿ ಆಯುಕ್ತವಿರಕ್ತಿಯ ಮಾಡಿ ಭಕ್ತಿಗಾಗಲಿ ಭವಮುಕ್ತಿಗಾಗಲಿ ಹರಿಭಕ್ತರನೊಡಗೂಡಿ ರಕ್ತಿಲಿ ಪಾಡುವ ದಿನವೇ 1 ತಾಳ ತಂಬೂರಿಯ ತಪ್ಪದೆ ತಂದು ಮೈಳೈಸಿ-ಶ್ರುತಿಯ ಕಥೆಪೇಳವ ಕೇಳುವ 2 ಅರ್ಥಾಪೇಕ್ಷೆಯಲಿ ಕಾಲಗಳನ್ನು ವ್ಯರ್ಥಮಾಡದಲೆ ಪ್ರಾರ್ಥನೆ ಮಾಡುವ 3 ಕಾಮಕ್ರೋಧಗಳ ಕಳೆವ ರಘುರಾಮ ನಾಮಗಳ ಭವ ತಾಮಸ ಕಳೆಯುವ 4 ಹರಿವಾಸರವನು ಸಾಧಿಸಿ ಮುರುಹರ ನಾಮಗಳನು ಹರಿದಾಸರೊಡಗೂಡಿ ಹರುಷದಿಂದೆಚ್ಚತ್ತು ವರದ ವಿಠಲ ನರಹರಿಯೆಂದು ಪಾಡುವ ದಿನವೇ 5
--------------
ಸರಗೂರು ವೆಂಕಟವರದಾರ್ಯರು
ಉಗಾಭೋಗಶ್ವೇತದ್ವೀಪದಿ ಆಯುಕ್ತ ಸ್ಥಳದಲ್ಲಿಚತುರ್ಮುಖ - ಭವೇಂದ್ರಾದಿಸುರರುಬಿರುದು ಸಲ್ಲುವುದು (ನಿನಗೆ) ಶರಣಾಗತವಜ್ರಪಂಜರಸಿರಿಪುರಂದರವಿಠಲ.
--------------
ಪುರಂದರದಾಸರು