ಒಟ್ಟು 13 ಕಡೆಗಳಲ್ಲಿ , 10 ದಾಸರು , 13 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಿಮಿರ ಭರದಿ ಬಿಟ್ಟೋಡಿತು ಪ ಶ್ರುತಿ ಶಾಸ್ತ್ರವೆಂಬ ಕಂಜಗಳತಿ ರಮ್ಯದಿಂದರಳಿದವುಕ್ಷಿತಿಯೋಳು ಕುಮುದದಂತೆ ದುರ್ಮತಗಳೆಲ್ಲ ಕುಗ್ಗಿದವು ||ಇತರ ದೇವಂಗಳಿಂತು ಭಜಿಸಿದೆ ರಘುಪತಿಯೆ ದೈವ ಮಧ್ವ ಮತವೆ ಸಿದ್ಧಾಂತವುಸತತವನು ಹರಿ ಸರ್ವೋತ್ತಮನೆಂದುತುತಿಸುವ ಕಾಂತಿಯು ತುಂಬಿತು ಜಗದೊಳು 1 ಚಕ್ರವಾಕ ಧ್ವನಿಗೈದವು ||ಸಾರಿ ಸಾರಿಗೆ ಹೊತ್ತು ಯೇರುವ ತೆರದಲಿಶ್ರೀರಮಣನ ಚರಣಾರವಿಂದವು ನಿತ್ಯಆರಾಧಿಸುವ ವಿಚಾರವಿದೆನುತಲಿತಾರತಮ್ಯ ಜ್ಞಾನ ತೋರಿದರಿಳಿಯೊಳು 2 ಅಂದವಾದಲಾದಿನ್ನೆ ಹನುಮಂತನೊಡೆಯ(ಮುಂದಿನ ಪಾದಗಳು ಸಿಕ್ಕಿಲ್ಲ)
--------------
ಮೋಹನದಾಸರು
ದಯಮಾಡೋ ರಂಗ ಹೇ ಕೃಪಾಂಗ ಪ ದಯಮಾಡಿ ನೀಯೆನ್ನ ಭಯವ ಪರಿಹರಿಸು ಚಿ- ನ್ಮಯ ಮೂರುತಿ ಸುಖಮಯ ಮಂದರಧರ ಅ.ಪ. ಪತಿತ ಪಾವನ ನೀನು ಪತಿತಾಗ್ರೇಸರ ನಾನು ಜತನದಿ ಭಕುತಿಯ ಪಥವ ತೋರಿ ನೀನು 1 ಮುಕ್ತಿ ಫಲಪ್ರದ ಶಕ್ತಿಯು ನಿನ್ನ ವ್ಯತಿರಿಕ್ತವಲ್ಲವೆಂದು ಭಕ್ತಿಯುವರವಳು...[?] 2 ಕಾಮಧೇನು ನೀನು ಕಾಮನಯ್ಯನು ನೀನು ಕಾಮಿತಫಲದಾತ ಮಾಮನೋಹಕ ತ್ರಾತ 3 ಸೃಷ್ಟಿಪಾಲಕ ನಿನ್ನ ಯಷ್ಟೆಂತವರ್ಣಿಪೆ ಅಷ್ಟು ಕರ್ತೃತ್ವಕ್ಕೆ ಶಿಷ್ಟಮೂರುತಿ ನೀನೆ 4 ಭಾರಿಭಾರಿಗೆ ನಿನ್ನ ಆರಾಧಿಸುವರ ಚಾರುಚರಣವನು ತೋರೊ ಮಾರಜನಕ 5 ಸಕಲಕ್ಕು ನೀ ಮುಖ್ಯ ಶಕಟಭಂಜನ ಕೇಳು ಪ್ರಕಟನಾಗಿಯೆನಗೆ ಶಕ್ತಿಯ ನೀಡೋ6 ಭೂವಲಯದೊಳು ನಾ ಆವಲ್ಯಪೋಗಲು ಕಾವಲು ನೀನೇ ಶ್ರೀವತ್ಸಾಂಕಿತನೇ 7
--------------
ಸಿರಿವತ್ಸಾಂಕಿತರು
ದುರ್ಗೆ ಪಾಲಿಸೆ ಕರುಣದಿ | ಮಹಾ ಲಕುಮಿ ದುರ್ಗೆ ಪಾಲಿಸೆ ಕರುಣದಿ ಪ. ಅಪವರ್ಗ ಪದವಿ ಇತ್ತು ದುರ್ಗಮವಾಗಿಹ ದುಃಖವ ಬಿಡಿಸಿ ಭಾರ್ಗವಿರಮಣನ ಮಾರ್ಗವ ತೋರೆ ಭೋರ್ಗರೆಯುತ ಖಳರ ನಿಗ್ರಹಿಸುವಳೆ ಅ.ಪ. ಕ್ಷೀರವಾರಿಧಿ ತನಯೆ | ಶ್ರೀ ರಮಣನ ಜಾಯೆ ನಾರಸಿಂಹನ ಅರಸಿಯೆ ಸಾರಿದೆ ನಿನ ಪದ ತೋರಿಸೆ ಹರಿಪದ ಕಾರುಣ್ಯಾತ್ಮಳೆ ಕರುಣವ ಬೀರೆ ವಾರವಾರಕೆ ನಿನ್ನ ಆರಾಧಿಸುವಂಥ ಚಾರುಮತಿಯ ನೀಡೆ ನಾರಿರನ್ನಳೆ 1 ಪದ್ಮಾವತಿಯೆ ಪದ್ಮಿನಿ | ಪದ್ಮಾಕ್ಷಿದೇವಿ ಪದ್ಮಸಂಭವೆ ಕಾಮಿನಿ ಪದ್ಮನಾಭ ಶ್ರೀ ಶ್ರೀನಿವಾಸನ ಪದ್ಮಪಾದವ ಹೃತ್ಪದ್ಮದಿ ತೋರೆ ಪದ್ಮಸರೋವರ ತೀರವಾಸಿ ಕರ ಪದ್ಮಯುತಳೆ ಮುಖಪದ್ಮವ ತೋರೆ2 ರೂಪತ್ರಯಳೆ ಕಾಮಿನಿ | ಕಾಮಪೂರಿಣೀ ತಾಪಹರಿಸೆ ಭಾಮಿನಿ ಪಾಪಗಳÉಲ್ಲವ ನೀ ಪರಿಹರಿಸುತ ಗೋಪಾಲಕೃಷ್ಣವಿಠ್ಠಲನನು ತೋರುತ ನೀ ಪರಿ ನುಡಿವೆನೆ ನೀ ಪಾಲಿಸುವುದು ಆಪವರ್ಗದಲಿ 3
--------------
ಅಂಬಾಬಾಯಿ
ನೋಡಿದ್ಯಾ ಗುರುರಾಯರ ನೋಡಿದ್ಯಾ ಪ ನೋಡಿದ್ಯಾ ಮನವೆ ನೀನಿಂದು - ಕೊಂ - ಡಾಡಿದ್ಯ ಪುರದಲ್ಲಿ ನಿಂದು - ಆಹಾ ಮಾಡಿದ್ಯ ವಂದನೆ ಬೇಡಿದ್ಯ ವರಗಳ ಈಡು ಇಲ್ಲದೆ ವರ ನೀಡುವೊ ಗುರುಗಳ ಅ.ಪ ಸುಂದರ ತಮ ವೃಂದಾವನದಿ ತಾನು ನಿಂದು ಪೂಜೆಯ ಕೊಂಬ ಮುದದಿ - ಭಕ್ತನೀ ನಂದ ನೀಡುವೆನೆಂದು ತ್ವರದಿ ಇಲ್ಲಿ ಬಂದು ನಿಂತಿಹನು ಪ್ರಮೋದಿ ಆಹಾ ಹಿಂದಿನ ಮಹಿಮವು ಒಂದೊಂದೆ ತೋರುವಾ ಮಂದಜನರ ಹೃ - ನ್ಮಂದಿರಗತರನ್ನ 1 ದೂರದಿಂದಲಿ ಬಂದ ಜನರ - ಮಹ ಘೋರ ವಿಪತ್ಪರಿಹಾರಾ - ಮಾಡಿ ಸಾರಿದಭಿಷ್ಟವು ಪೂರಾ - ನೀಡಿ ಪಾರುಮಾಡುವ ತನ್ನ ಜನರಾ - ಆಹಾ ಆರಾಧಿಸುವರ ಸಂ -ಸಾರವಾರಿಧಿಯಿಂದ ಸೂರಿ ಕೊಡುವೊರನ್ನ 2 ಪಾದ - ಯುಗ ಸತ್ಯಪೂರ್ವಕದಿ ನಂಬೀದ - ನಿಜ ಭೃತ್ಯನಪೇಕ್ಷಮಾಡೀದ - ಕಾರ್ಯ ಸತ್ಯಮಾಡುವ ಪೂಜ್ಯಪಾದ - ಆಹಾ ಮತ್ರ್ಯಾದಿ ಸುರರೊಳು - ಎತ್ತ ನೋಡಿತಗಿನ್ನು ಉತ್ತುಮರಾರಯ್ಯ - ಭತ್ಯವತ್ಯಲರನ್ನ 3 ಅಂತರದಲಿ ತಾನು ನಿಂತು ಜನ ಸಂತತ ಕಾರ್ಯಗಳಿಂತು - ಮಾಡಿ ಕಂತುಪಿತಗೆ ಅರ್ಪಿಸ್ಯಂತು ತಿಳಿಸ ದಂತೆ ಎಮ್ಮೊಳಗಿರೊವೊ ತಂತು - ಆಹಾ ಸಂತತ ಕರ್ಮಗಳಂತು ಮಾಡುತ ಜೀವ ರಂತೆ ಗತಿಯು ತಾ ಪ್ರಾಂತಕ್ಕೆ - ನೀಡುವರ 4 ಅಗಣಿತ ಮಹಿಮವಗಾಧಾ - ಬಹು ಸುಗುಣನಿಧಿ ಮಹಾ ಭೋಧ - ನಾನು ಪೊಗಳುವದೇನು ಸಮ್ಮೋದ - ತೀರ್ಥ ಮೊದಲಾದ ಸುರರ ಪ್ರಮೋದ - ಆಹಾ ಮೊಗದಿಂದ ಶ್ರೀಗುರು ಜಗನ್ನಾಥ ವಿಠಲ ಸಂ ಮೊಗನಾದ ಕಾರಣ ಜಗದಿ ಮೆರೆವೊರನ್ನ 5
--------------
ಗುರುಜಗನ್ನಾಥದಾಸರು
ಬಾರೋ ನಲಿದಾಡೋ ಜಿಹ್ವೆಯಲಿ ಮೂರಧಿಕಾರೊಡೆಯನೆ ಬಾರೋ ನಲಿದಾಡೋ ಜಿಹ್ವೆಯಲಿ ಪ ದಾಸಾ ಬಹು ಮೋಸಕ್ಕೊಳಗಾಗಿಹೆನು ಶ್ರೀಶಾ ಕರಪಿಡಿಯೆನ್ನ ದೋಷ ಮಹದಾಶಾ ವಹಿಸಿರುವೇನು ಘಾಸಿಯಾದೇನು ಮಾಡೋ ಕರುಣಾರ್ಣವದಿ ಈಶಾ ಘನವೇಷಾ ಬಹುತೋಷ ದಾಸನ ಮಾಡಿಕೊ ಎನ್ನ 1 ಕಂದೀ ನಾ ಕುಂದೀ ಗೃಹದೊಳಗೆ ಮಂದಿಯಾ ಶೇರಿದೆ ನೊಂದೇ ಬಹು ಬೆಂದೇ ಮನದೊಳಗೆ ಬಂಧನದೊಳು ಶಿಲ್ಕಿ ಸುಂದರ ಮೂರುತಿ ಸಂದಣಿಯದೆ ನಾ ಹೊಂದಿದೆನಿನಭವ ಭವ ನಾಯಿಂದೂ ದ್ವಂದ್ವಾಪದವಿಡಿದಿದೆ 2 ಘೋರಾ ನಿಸ್ಸಾರ ಭವದೊಳಗೆ ದಾರಿಗಾಣೆನು ಮಾರಾ ಬಹುದೀ ರಾಮನದೊಳಗೆ ಶೇರಿ ಕುಣಿವಾನು ಮಾರಜನಕ ನಿನ್ ಹಾರೈಶನುದಿನ ಶೇರಿ ಭಜಿಸಿ ನಿನ್ನ ನರಸಿಂಹವಿಠ್ಠಲ ಸಾರಿ ನಿನ ಕೋರಿ ಪದಶೇರಿ ಆರಾಧಿಸುವೀಗಳೆ 3
--------------
ನರಸಿಂಹವಿಠಲರು
ಭಾರತಿದೇವಿ ಭಕ್ತರತಾಯಿಭಾರತಿ ದೇವಿ ನಿಮ್ಮ ಆರಾಧಿಸುವೆವಮ್ಮನಾರಿಯರ ಸೋಲಿಸಮ್ಮಮಾರಿ ಮೇಲಾಗಿಸಮ್ಮ ಪ. ಮದನನತ್ತಿಗೆ ರಂಭೆ ಮೊದಲಿಗೆ ಬಲಗೊಂಬೆ ಮುದದಿಂದ ಗೆಲಿಸೆಂಬೆ ಸುದತೆ ಪುತ್ಥಳಿಗೊಂಬೆ1 ಸುಪ್ಪಾಣಿ ಕಲ್ಯಾಣಿ ನಿನ್ನನುಗಾಣೆ 2 ಪ್ರದ್ಯುಮ್ನನ ಮಗಳೆ ರುದ್ರಾದಿವಂದ್ಯಳೆಮುದ್ದು ರಾಮೇಶನ ಪ್ರವಾಳೆ ಶುದ್ಧಪಾತ್ರಳೆ ಕೇಳೆ 3
--------------
ಗಲಗಲಿಅವ್ವನವರು
ವಾದಿರಾಜ ಧೀರ ಯತಿವರ ವಾದದಿ ಬಹು ಶೂರ ಮೋದತೀರ್ಥರ ಮತವ ಪೊಂದಿದ ಸಾಧುಗಳನು ಉದ್ಧಾರ ಮಾಡುವ ಪ ರಂಗ ಮಂಗಳಾಪಾಂಗ ತುಂಗ ವಿಕ್ರಮ ಹರಿಯಾ ಶೃಂಗೇರಿ ಮಠದ ಧ್ವಜ ಹಾರಿಸಿದ 1 ಒಡೆಯ ಹಯವಕ್ತ್ರನಿಗೆ ಕಡಲೆ ಹೂರಣವಿತ್ತ ಕಡಲಶಯನ ಪದಬಿಡದೆ ಆರಾಧಿಸುವ 2 ಅಜಪದಕರ್ಹ ಋಜುಗಣಪತಿ ಜೀವೋತ್ತಮ ವಿಜಯವಿಠ್ಠಲದಾಸ ಸುಜನಮಂದಹಾಸ 3
--------------
ವಿಜಯದಾಸ
ಶಾರದೆ ನಿನ್ನ ಪಾದವ ಆರಾಧಿಸುವೆವುವಾರಿಜ ಭವಕ್ಕೆ ಸೇರಿಸು ಹರಸು ಪ. ನಿತ್ಯ ಭಜಿಸುವೆವುಸಚ್ಚಿದಾನಂದನ ಚಿತ್ತದಿ ನಿಲ್ಲಿಸ1 ರಂಭೆ ನಮ್ಮಯ ಹೃದಯ ಅಂಬರದೊಳು ನಿಂತುಅಂಬುಜನಾಭನ ತುಂಬಿಸು ಮನದಿ2 ಅರಿಷಿಣ ಕುಂಕುಮ ಬೆರೆಸಿದ ಪರಿಮಳಸರಸದಿ ಕೈ ಕೊಂಡು ಅರಸಿಯರ ಗೆಲಿಸ 3 ಅತ್ತಿ ಹೂವಿನಸೀರೆ ಮುತ್ತಿನಾಭರಣವಅರ್ಥಿಲೆ ಕೈ ಕೊಂಡು ಮಿತ್ರೆಯರ ಗೆಲಿಸ4 ಪತಿ ಸೌಭಾಗ್ಯವ ರಚಿಸಲುಶೀಘ್ರದಿ ತೋರಿಸೆ ಕುಗ್ಗದೆ ನಮಗೆ 5 ಪತಿ ನಿತ್ಯ ರಾಮೇಶನ ತತ್ವವ ರಚಿಸುವೆ ಸತ್ಯವ ನುಡಿಸೆ ಶಾರದಾದೇವಿ6
--------------
ಗಲಗಲಿಅವ್ವನವರು
139-5ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ವಿಠ್ಠಲನ ಮಂದಿರದಿ ತಪ್ಪದೇ ಪ್ರತಿದಿನಪಠಿಸಿ ಅರ್ಪಿಸುತ್ತಿದ್ದವಿಶ್ವವಿಷ್ಣುವಷಟ್ಕಾರ ಮೊದಲಾದ ಸಹಸ್ರನಾಮಗಳದಿಟ ಜ್ಞಾನ ಭಕ್ತಿಯಿಂ ಮಾರ್ಗದಿ ಸ್ಮರಿಸಿದರು 1ತನ್ನ ಹೊರ ಒಳಗೆ ಶ್ರೀಹರಿಯ ತಿಳಿಯುತ್ತಕಾಣುವುದು ಎಲ್ಲವೂ ಅನಘಹರಿ ಆವಾಸ್ಯತನಗೆ ಯದೃಚ್ಛದಿ ಲಭಿಸುವುವು ಹರಿಕೊಡುವುವುಎನ್ನುತ ಅನಪೇಕ್ಷಿ ನಿರ್ಭಯದಿ ನಡೆದರು 2ಮಾರ್ಗಸ್ಥ ಅಕ್ಷೋಭ್ಯ ಜಯಮುನಿಗಳಲಿಪೋಗಿ ಬಾಗಿ ಶಿರಸ್ಸಾಷ್ಠಾಂಗ ನಮಸÀ್ಕರಿಸಿ ಮುಂದುಪೋಗಿ ಕೃಷ್ಣಾ ತೀರ ಹನುಮನ್ನ ವಂದಿಸಿಚೀಕಲಪರಿವಿಗೆ ನಮಿಸಿ ಕರಮುಗಿದರು 3ಗುರುಗುಣಸ್ತವನಾದಿ ಗ್ರಂಥಗಳ ರಚಿಸಿರುವಸೂರಿವಾದೀಂದ್ರರ ನಮಿಸಿ ಅಪ್ಪಣೆಯಿಂಶ್ರೀರಾಘವೇಂದ್ರ ತೀರ್ಥರ ನಮಿಸಿ ಶರಣಾಗಿಸ್ತೋತ್ರ ಅರ್ಪಿಸಿದರು ಕವಿತಾರೂಪದಲಿ 4ಹರಿಶಿರಿ ಹನುಮ ಶಿವಗುರು ಅನುಗ್ರಹಕೊಂಡುದಾರಿಯಲ್ಲಿರುವಂಥ ಕ್ಷೇತ್ರ ಮೂರ್ತಿಗಳದರುಶನ ಮಾಡಿ ಗೋಪಾಲ ದಾಸಾರ್ಯರುಇರುವ ಸ್ಥಳ ಸೇರಿದರು ಜಗನ್ನಾಥದಾಸರು 5ಗುರುಗಳ ನೋಡಿ ಆನಂದ ಬಾಷ್ಪವ ಸುರಿಸಿಚರಣಪದ್ಮಗಳಲ್ಲಿ ನಮಿಸಿ ಶರಣಾಗಿಘೋರವ್ಯಾಧಿಹರಿಸಿ ಅಪಮೃತ್ಯು ತರಿದಂಥಕಾರುಣ್ಯ ನಿಧಿ ಉದ್ಧಾರಕರು ಎಂದರು 6ರಾಜೀವಾಲಯಪತಿವಿಜಯಗೋಪಾಲನುಭಜತರ ರಕ್ಷಿಸುವ ಕರುಣಾಸಮುದ್ರಈ ಜಗನ್ನಾಥನೇ ನಿನಗೆ ಒಲಿದಿಹನುಭುಜಗಾದ್ರಿವಾಸ ಫಂಡರಿ ವಿಠ್ಠಲ 7ನಿಜಭಕ್ತಾಗ್ರಣಿ ಗೋಪಾಲ ದಾಸಾರ್ಯರುನಿಜಭಾವದಲಿ ಈ ರೀತಿಯಲಿ ಹೇಳೆಐಜೀ ಮಹಾತ್ಮರು ಸೂಚಿಸಿದರು ಹರಿಯಭೋಜನ ಜಗನ್ನಾಥದಾಸಗೆ ಮಾಡಿಸಿದ್ದು 8ಜಗನ್ನಾಥದಾಸರು ನಡೆದ ವೃತ್ತಾಂತವಮುಗಿದು ಕರಗದ್ಗದ ಕಂಠದಲಿ ಪೇಳೆಚಕಿತರಾದರು ಅಲ್ಲಿ ನೆರೆದಿದ್ದ ಸಜ್ಜನರುಉದ್ಘೊಷ ಜಯ ಜಯ ಶಬ್ದ ಮಾಡಿದರು 9ಉತ್ತನೂರಿಗೆವೇಣಿಸೋಮಪುರದಿಂ ಪೋಗಿಮತ್ತೂವೇಣಿಸೋಮಪುರವನ್ನು ಯೈದಿಸತ್ತತ್ವ ಬ್ರಹ್ಮ ಜಿಜ್ಞಾಸವೂ ಭಾಗ -ವತ ಧರ್ಮ ಆಚರಿಸಿದರು ಮುದದಿಂದ 10ಗೋಪಾಲಕೃಷ್ಣ ಪ್ರಿಯ ಐಜೀಮಹಂತರುಗೋಪಾಲದಾಸಾರ್ಯ ªರದ ಗುರುತಂಗೋಪಾಲ ದಾಸಾರ್ಯರುಗಳ ಸಮೇತದಿಭೂಪಾಲ ಪ್ರಮುಖರು ಸಾಧುಜನಗುಂಪು 11ಶಿರಿವಾಸುದೇವಪ್ರಿಯವಾಸತತ್ವಜÕರಗುರುಗಳು ಗೋಪಾಲದಾಸರ ಅನುಗ್ರಹದಿವರದ ಗುರುತಂದೆ ಗೋಪಾಲರು ಮತ್ತೆಲ್ಲರಿಗೂಕರಮುಗಿದು ಹೊರಟರು ಅಪ್ಪಣೆಕೊಂಡು 12ಗದ್ವಾಲ ಮಾರ್ಗದಿ ಮಂತ್ರಾಲಯ ಪೋಗಿಮಧ್ವಮತ ದುಗ್ಧಾಬ್ಧಿ ಚಂದ್ರ ಶ್ರೀ ರಾಘವೇಂದ್ರ ವಾದೀಂದ್ರರ ನಮಿಸಿ ಅಲ್ಲಿಂದಯೈದಿಹರು ಪರಮಗುರುಗಳು ಇದ್ದ ಸ್ಥಳವ 13ಪರಮಗುರುಗಳು ವಿಜಯವಿಠ್ಠಲ ದಾಸಾರ್ಯರಚರಣಾರವಿಂದದಿ ಶರಣಾಗಿಅವರಕರದಿಂದ ನರಸಿಂಹ ವಿಜಯವಿಠ್ಠಲನಸುಪ್ರಸಾದವ ಕೊಂಡು ಮಾನವಿಗೆ ಹೋದರು 14ಮನುತೀರ್ಥ ತಟದಲಿ ಮನೆಯಲ್ಲಿ ವಾಸಿಸುತಹನುಮಂತಸ್ಥ ನರಹರಿ ಜಗನ್ನಾಥನ್ನಹನುಮನ್ನ ಪೂಜಿಸುತ ಗುರುಗಳ ಸ್ಮರಿಸುತ್ತಜ್ಞಾನಾರ್ಥಿ ವಿದ್ಯಾರ್ಥಿಗಳಿಗೆ ಒದಗಿಹರು 15ಇಷ್ಟರಲ್ಲೇ ಜಗನ್ನಾಥದಾಸರ ಕೀರ್ತಿಅಷ್ಟದಿಕ್ಕಲ್ಲು ಪ್ರಖ್ಯಾತಿಯ ಹೊಂದಿಇಷ್ಟಾರ್ಥ ಸಿದ್ಧಿಗೆ ಬರುವರಾದರು ಜನರುಕೃಷ್ಣನ ಒಲಿಮೆ ಈ ದಾಸರಲಿ ಪೂರ್ಣ 16ಮಾಧ್ವ ಮೂಲಗ್ರಂಥ ಟೀಕಾಟಿಪ್ಪಣಿಗಳುಸಾಧು ಹರಿದಾಸರ ಕೀರ್ತನೆಗಳುವೇದವ್ಯಾಸೋದಿತ ಪುರಾಣ ಇತಿಹಾಸವಿದ್ಯಾರ್ಥಿಗಳಿಗೆಲ್ಲ ಪಾಠ ಪ್ರವಚನವು 17ಯೋಗಿವರ ಪ್ರಾಣೇಶವಿಠ್ಠಲ ದಾಸಾರ್ಯರುಭಾಗವತವರಶ್ರೀಶ ವಿಠ್ಠಲದಾಸಾರ್ಯನಿಗಮವೇದ್ಯನ ಭಕ್ತಜನರು ಬಹುಮಂದಿಯುಬಾಗಿ ದಾಸಾರ್ಯರಿಗೆ ಶಿಷ್ಯ ಜನರಾದರು 18ಪ್ರಾಣೇಶ ದಾಸರಿಗೆ ಶರಣಾದೆ ಎಂದೆಂದುಪ್ರಾಣದೇವನು ಇವರೊಳ್ ಪ್ರಸನ್ನನಾಗಿಹನುಪ್ರಾಣದೇವಾಂತಸ್ಥ ಶ್ರಿಹರಿ ಕೇಶವನಕಾಣುತ ಭಜಿಸುವ ಭಾಗವತರೆಂದು 19ಜಗನ್ನಾಥದಾಸರ ಶಿಷ್ಯ ಸಜ್ಜನರಿಗೆಭಾಗವತವರಶ್ರೀಶ ಶ್ರೀದವಿಠ್ಠಲಾದಿಭಗವದ್ದಾಸರಿಗೆ ನಮಿಪೆ ಶ್ರೀ ಹರಿವಾಯುಝಗಝಗಿಪ ಇವರುಗಳೊಳ್ ಸಂತತ ಎಂದು 20ನೋಡಬೇಕಾಗಿದ್ದ ಕ್ಷೇತ್ರಗಳಿಗೆ ಪೋಗಿನಾಡಿನಲಿಭಾಗವತಧರ್ಮವ ಬೆಳೆಸೆಬೇಡುವ ಯೋಗ್ಯರಿಗೆ ಉಪದೇಶ ಕೊಡೆ ಶಿಷ್ಯರೊಡಗೂಡಿ ಹೊರಟರು ಜಗನ್ನಾಥದಾಸರು 21ಕರ್ಜಗಿ ಕ್ಷೇತ್ರದಲ್ಲಿ ಇರುವ ವರದಾ ನದಿಯುಸಜ್ಜನ ಸಮೂಹವು ಬಹಳ ಅಲ್ಲುಂಟುಶ್ರೀ ಜಗನ್ನಾಥನ್ನ ಭಜಿಸುತ್ತ ದಾಸರುಕರ್ಜಗಿ ಜಮೀನ್ದಾರ ಮನೆಯಲ್ಲಿ ಕುಳಿತರು 22ಸಾಧ್ವಿ ಶಿರೋಮಣಿ ಆ ಗೃಹಸ್ಥನ ಪತ್ನಿಪಾದನಮಿಸಿ ಪತಿಗೆ ಬಿನ್ನಹ ಮಾಡಿದಳುಇಂದುಲೌಕಿಕ ವಿಷಯಲಾಂಪಟ್ಯ ನಿಲ್ಲಿಸಿವಂದಿಸಿ ದಾಸರಿಗೆ ಪೂಜೆ ನೋಡೆಂದು 23ಅಹರ ಆರಾಧಿಸುವ ಕ್ರಮದಿ ದಾಸಾರ್ಯರುಸಾಯಾಹ್ನ ಸಾಮವಾಪ್ರತಿಪಾದ್ಯ ನರಸಿಂಹನವಿಹಿತದಿ ಅರ್ಚಿಸಿ ಕೀರ್ತನೆಗಳರ್ಪಿಸಿಮಹಾಹರ್ವ ಭಜಿಸುವರು ಶಿಷ್ಯರ ಸಮೇತ 24ಅಂದು ಈ ಗೃಹಸ್ಥನು ಹೆಂಡತಿ ಕೋರಿಕೆಯಂತೆಬಂದು ಕುಳಿತನು ದಾಸಾರ್ಯರ ಮುಂದೆಅಂದೇ ಆ ವಿಪ್ರನ ಅನಿಷ್ಠ ಪ್ರಾರಬ್ಧವುಚಂದದಿ ಪೋಪುವದೆಂದರಿತರು ದಾಸಾರ್ಯ 25ಪೂಜಾ ಆರಂಭ ಆಗಲಿಕೆ ಇರುವಾಗ ಆದ್ವಿಜನ ನೋಡಿ ಪ್ರಾಣೇಶ ದಾಸಾರ್ಯಗರ್ಜಿಸಿದರು ಇನ್ನಾದರೂ ಒಳ್ಳೆಋಜುಮಾರ್ಗ ಹಿಡಿ ಹರಿಯ ಒಲಿಸಿಕೊಳ್ಳೆಂದು 26ವಾಗ್ವಜ್ರಧಾರೆಯು ಪರಿಣಮಿಸಿ ವಿಪ್ರನತೀವ್ರ ಆ ಕ್ಷಣದಲ್ಲೆ ಮನಕಲುಷಕಳೆದುಶ್ರೀವರನ ಪ್ರಿಯತರ ಜಗನ್ನಾಥದಾಸರಿಗೆಸುವಿನಯದಿ ನಮಿಸಿ ಉದ್ಧರಿಸಿ ಎಂದ 27ಪ್ರಾಣೇಶ ದಾಸರಿಗು ಜಗನ್ನಾಥದಾಸರಿಗುತನ್ನ ಕೃತಜÕತೆಯನ್ನು ಚೆನ್ನಾಗಿ ತಿಳಿಸಿಮನ ಶುದ್ಧಿ ಭಕ್ತಿಯಿಂದಲಿ ಪೂಜೆ ನೋಡಲುಹನುಮಂತ ದೇವರು ಕುಳಿತಿದ್ದು ಕಂಡ 28ಶ್ರದ್ಧೆ ಭಕ್ತಿಯಿಂದ ಗೃಹಸ್ಥನುದಾಸರಪಾದಕೆರಗಿ ತನ್ನನ್ನು ಹರಿದಾಸವೃಂದದಲಿ ಸೇರಿಸಬೇಕೆಂದು ಪ್ರಾರ್ಥಿಸಿಶ್ರೀದವಿಠ್ಠಲನಾಮ ಅಂಕಿತವಕೊಂಡ29ಜಗನ್ನಾಥದಾಸಾರ್ಯಪರಮದಯಮಾಡಿಆ ಗೃಹಸ್ಥಗೆ ಶ್ರೀದವಿಠ್ಠಲಾಂಕಿತವುಭಕುತ ಜನರಿಗೆ ಫಲಮಂತ್ರಾಕ್ಷತೆ ಕೊಟ್ಟುಶ್ರೀಕರನ ಸ್ಮರಿಸಿ ಸವಣೂರಿಗೆ ಹೊರಟರು 30ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 31- ಇತಿ ಷಷ್ಠ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಕಾಯೆ ಭಾರತೀ ನಿನ್ನ ಆರಾಧಿಸುವೆ ಯನ್ನ |ಮಾಯಾಮಂದಿರನವರ ಕಿಂಕರನು ಯೆನಿಸೇ ಪವ್ಯೋಮಜ ರಮಣಿನಳಿನಭವಜಾತೆಕೃತಿಪುತ್ರೆ |ಸಾಮಜಗಮನೆ ಉರಗವೇಣಿ ಕಾಳೀ ||ಸೋಮಮುಖಿ ಬೇರೊರಸಿ ಯನ್ನ ದುರ್ಮತಿಯಳಿದು |ರಾಮಧ್ಯಾನದಲಿ ಮನ ನಿಲ್ಲಿಸುವದನಿಶ 1ಲೋಕನಾಯಿಕೆ ಶೈಲಜಾಪತಿ ಮುಖ ಪೂಜಿತಳೆ |ನೀ ಕರುಣದಲಿ ನೋಡಿಕರವಪಿಡಿಯೇ ||ಕಾಕುಮನುಜರ ಸಂಗವನು ಕೊಡದೆಯೊಂದಿನಕು |ಲೌಕಿಕವ ಸಂಪಾದಿಸಿಸಬೇಡವಮ್ಮ 2ಕೃಷ್ಣೆ ನಳನಂದಿನಿ ದ್ರುಪದ ತನುಜೆ ಶಿವಕನ್ಯೆ |ದುಷ್ಟ ಜನ ಗಿರಿಕುಲಿಶೆ ಸ್ವರ್ಣಗಾತ್ರೆ ||ಕೊಟ್ಟ ಮಾತಿಗೆ ತಪ್ಪದಲೆ ಕಾಯ್ವ ಪ್ರಾಣೇಶ |ವಿಠಲನ ಚರಣಯುಗ ಸರಸೀರುಹ ಭೃಂಗೆ3
--------------
ಪ್ರಾಣೇಶದಾಸರು
ದ್ರೌಪದಿ ಕೃಷ್ಣಾ ಪಾಂಚಾಲಿ | ದೇವಿ |ಗೋಪತಿಧ್ವಜವಂದ್ಯೆಕಾಳಿ | ಆಹಾ |ಪಾಪಗಳೆಣಿಸದೆಲೇ ಪುನೀತನ | ಮಾಡೆ |ಶ್ರೀ ಪವನನ ಕರುಣಾಪಾತ್ರೆ ಸುಚರಿತ್ರೆ ಪವಾಣಿ ಭಕ್ತಿಗೆ ಅಭಿಮಾನಿ | ತಾಯಿನೀನೆ ಗತಿಯೆಲೆ ಸುಶ್ರೋಣಿ | ಶ್ರೀಶಧ್ಯಾನವ ಮಾಡಲು ಮನ ಪೋಣಿಸುವ |ದೇನನೊಲ್ಲೆನು ಪೂರ್ಣಜ್ಞಾನಿ| ಆಹಾ ||ದೀನ ರಕ್ಷಕೆ ಮಿಕ್ಕ ಹೀನ ದೇವರಪಾದ|ಕ್ಕೆ ನಮಿಸುವ ಮತಿಯನೆಂದು ಕೊಡದಿರೆ 1ಶಾರದೆ ಹರಿಯ ಕುಮಾರಿ | ನಿನ್ನ |ಸಾರಿದೆ ಕುಜನ ಕುಠಾರಿ | ದಯಾ |ವಾರಿಧೆ ಸುಜನೋಪಕಾರಿ | ತೋರೆ |ಸಾರೆಗರಿದು ಮುಕ್ತಿ ದಾರಿ | ಆಹಾ ||ಶ್ರೀ ರಮಣ್ಯುಳಿದೆಲ್ಲ ನಾರೀ ಶಿರೋಮಣಿ |ಆರಾಧಿಸುವೆ ಯೆನ್ನ ದೂರ ನೋಡಲು ಬೇಡ 2ಹಲವರಿಗೆಲ್ಲ ಬಾಯ್ದೆರೆದು | ಬೇಡಿ |ಕೊಳುವದೇನದೆ ದಿನ ಬರಿದು | ಸಾಧು |ನೆಲೆಯದೋರರು ಹತ್ಯಾಗರೆದು | ಬುದ್ಧಿ |ಕಲಿಸೆ ಭಾರತಿಯೆನ್ನ ಮರೆದು | ಆಹಾ |ಇಳೆಯೊಳು ಶ್ರಮಪಡಿಸಲು ಸಲ್ಲ ದಿತಿಜರ |ನಳಿದ ಪ್ರಾಣೇಶ ವಿಠಲಗಚ್ಛಿನ್ನ ಭಕ್ತಳೆ 3
--------------
ಪ್ರಾಣೇಶದಾಸರು
ಸದಾ ಪೂಜಿಪೆ ನಿನ್ನ ಸೌಭಾಗ್ಯಳೆ ಪಇಂದಿರಾದೇವಿಯೆ ಮಂದರೋದ್ಧರನ ರಾಣಿಇಂದೀವರಾಕ್ಷಿ ಆನಂದದಲಿ 1ಪದ್ಮಾಕ್ಷಿ ಎನ್ನ ಹೃತ್ಪದ್ಮದಿ ಹರಿಪಾದಪದ್ಮವ ತೋರಿ ಉದ್ಧರಿಸುವಳೆ 2ಅಂಬುಜಪಾಣಿಯೆ ಅಂಜುಜಾಕ್ಷನ ರಾಣಿಅಂಬುಧಿಶಯನನ ಪೊಂದಿರ್ಪಳೆ 3ಆದಿಕಾರಿಣಿ ಪತ್ರಾದಿ ರೂಪದಿ ಹರಿಯಆರಾಧಿಸುವಿ ಸರ್ವರಾಧಾರಿಯೆ 4ಹೆದರದೆ ಭೃಗುಮುನಿ ಒದೆಯೆ ಪಾದದಿಂದಕದನವ ಮಾಡಿದ ಕಲ್ಯಾಣಿಯೆ 5ಭಕ್ತಜನರು ನಿನ್ನ ಭಕ್ತಿಯಿಂ ಪೂಜಿಸಲುಮುಕ್ತಿ ಮಾರ್ಗವ ತೋರಿ ಸಲಹುವಳೆ 6ಸರಸಿಜಾಸನ ಮಾತೆ ಸ್ಮರಿಸುವೆ ನಿಮ್ಮಪಾದಸ್ಮರಣೆ ಮರೆಯದಂತೆ ಕರುಣಿಪುದು 7ಪಂಕಜನಾಭನ ಕಿಂಕರರನ್ನು ಕಾಯ್ವಬಿಂಕನಿನ್ನದು ಸರ್ವ ಅಲಂಕಾರಿಣಿ8ಕಮಲನಯನನೆ ಶ್ರೀ ಕಮಲನಾಭ ವಿಠ್ಠಲನಕ್ಷಣ ಬಿಡದಲೆ ತೋರು ನಮಿಸುವೆನು 9
--------------
ನಿಡಗುರುಕಿ ಜೀವೂಬಾಯಿ
ಸರಸಿಜಾಲಯೆ ನಿಲಯೆ ಪಸ್ಥಳದಲ್ಲಿ ನೆಲಸಿ ಸಜ್ಜನರ ರಕ್ಷಕಳೆಂದು ಅ.ಪಕ್ಷೀರಸಾಗರಜಾತೆ ಮಾರನಯ್ಯನ ಪ್ರೀತೆಸಾರಸದಳನೇತ್ರೆಮಾರಮಣನ ಮನಸಾರ ಸೇವಿಪ ಮುದ್ದುಕೀರವಾಣಿಯ ಭಕ್ತಸ್ತೋಮ ರಕ್ಷಕಳೆಂದು 1ಅಂಬುಧಿಶಯನ ಪೀತಾಂಬರಧಾರಿಯಶಂಖು ಚಕ್ರಾಂಕಿತಹರಿಶೌರಿಯಶಂಭರಾರಿಯ ಪಿತನ ನಂಬಿಸೇವಿಪ ಜಗ-ದಂಬ ನಿನ್ನಯ ಪಾದಾಂಬುಜಕ್ಕೆರಗುತ 2ಪದ್ಮನಾಭನ ರಾಣಿ ಪದ್ಮ ಸಂಭವೆ ದೇವಿಪದ್ಮಾಕ್ಷಿ ಪದ್ಮ ಪಾಣಿಯೆ ಸುಂದರಿಪದ್ಮಾಸನನ ಮಾತೆ ಪದ್ಮಮುಖಿಯೆ ಹೃ-ತ್ಪದ್ಮದಿ ಹರಿಪಾದ ಪದ್ಮವ ತೋರೆಂದು 3ಸಾರಸಾಕ್ಷಿಯೆ ಹರಿಯ ಆರಾಧಿಸುವ ಜನರ-ಪಾರದು:ಖವನೀಗಿಪೊರೆವೆಯೆಂದುಬಾರಿಬಾರಿಗು ನಿನ್ನಚಾರುದರ್ಶನವಿತ್ತುಕೋರಿದ ವರಗಳ ಬೀರಿ ಭಕ್ತರ ಕಾಯೆ 4ಕರುಣದಿ ಭಕುತರ ಕರೆದು ಕಾಪಾಡುವಬಿರುದು ನಿನ್ನದು ತಾಯೆ ತ್ವರಿತದಿ ಕಾಯೆಕರುಣಿಸೆ ಕಮಲನಾಭ ವಿಠ್ಠಲನ ರಾಣಿಮರೆಯದೆ ಹರಿಯ ಧ್ಯಾನವ ಕೊಟ್ಟು ಸಲಹೆಂದು 5
--------------
ನಿಡಗುರುಕಿ ಜೀವೂಬಾಯಿ