ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಬಾಬು ರಾಮಚಂದ್ರ ಶೀತಾಪತೇ ಪ ದಶರಥನುದರದೊಳ್ ಶಿಶುವಾಗಿ ಪುಟ್ಟಿದೆ ದಶಕಂಠನಾಶನೇ ನೀನೆವೋಹರಿ ಶೀತಾಪತೇ 1 ತಾಪತ್ರಯಗಳಿಂದ ಪಾಪಿಯಾಗಿಹೆ ನಾನು ತಾಪವಿದಾರನೇ ನೀನೇವೋಹರಿ ಶೀತಾಪತೇ 2 ವಾಸುದೇವನೇ ನೀನು ದಾಸರ ಸಲಹುವ ಭೂಷಣ ಪೋಷಿಪ ನೀನೇವೋಹರಿ 3 ಆಶಾಪಾಶಗಳಿಂದ ಘಾಶಿಯಾದೆನು ನಾನು ದೋಷವಿದಾರನೇ ನೀನೇವೋಹರಿ 4 ಶಾಂತಿಪದದಲಿ ವಿಶ್ರಾಂತಿ ಕೊಟ್ಟಿನ್ನಾ ಭ್ರಾಂತಿಯ ತೋರಿಸುವ ನೀನೇವೋಹರಿ ಶೀತಾಪತೇ 5
--------------
ಶಾಂತಿಬಾಯಿ
ಗಣೇಶ ಪ್ರಾರ್ಥನೆವಂದಿಪೆ ನಾ ನಿನ್ನನು ಸೊಂಡಿಲ ಗಣಪ ಧಬಂದೆನ್ನ ಸಲಹೊ ನೀನು ಪಪುಂಡರೀಕಾಕ್ಷನುದ್ದಂಡ ಪರಾಕ್ರಮಕೊಂಡಾಡಿಸುವಿ ವಕ್ರತುಂಡನೆಂಬರೊ ನಿನ್ನ ಅಪಪಾಶಾಂಕುಶಧರನೇ ವೂೀದಕಹಸ್ತಭಾಷಿಗ ನೀನಹುದೋಆಶಾಪಾಶಗಳಿಂದ ಘಾಸಿಗೊಂಡಿಹ ಮನಬೇಸರ ಕಳೆದೆಮ್ಮ ಪೋಷಿಪನನು ತೋರೊ 1ಗೌರಿಯ ವರಪುತ್ರನೆ ಪ್ರಾರ್ಥಿಸುವೆ ಶ್ರೀ-ಶೌರಿಯಪಾದಸ್ಮರಣೆಗೌರವದಿಂ ಮಾಳ್ಪ ಶೌರ್ಯ ಎನಗೆ ಕೊಟ್ಟುಮಾರಪಿತನಪಾದತೋರಿಸು ತವಕದಿ2ಅಂತರಂಗದ ಶತ್ರುಗಳಿಂದಲಿ ಮನಚಿಂತೆಗೆ ಗುರಿಗೈಸಿತೊಎಂತು ಈಭವದಾಂಟುವಂಥ ಪಥವ ಕಾಣೆಕಂತÀುಪಿತನಪಾದಚಿಂತನೆ ಕೊಡಿಸಯ್ಯ3ವಾನರನಿಕರದೊಳು ಶ್ರೇಷ್ಠನ ಪ್ರಭುವಾರಿಧಿಯನು ಬಂಧಿಸೆಆದಿಮೂರುತಿ ನಿನ್ನ ಆರಾಧಿಸಿದನೆಂಬಸೋಜಿಗಸುದ್ದಿಯು ಮೂರ್ಜಗದೊಳಗುಂಟು4ಕಮಲನಾಭವಿಠ್ಠಲ ಭಕ್ತರ ಹೃದಯಕಮಲದೊಳಗೆ ಶೋಭಿಪಮಿನುಗುವ ಮಧ್ವಮಂಟಪದೊಳು ರಾಜಿಪಸನಕಾದಿವಂದ್ಯನ ಕ್ಷಣ ಬಿಡದಲೆ ತೋರು 5
--------------
ನಿಡಗುರುಕಿ ಜೀವೂಬಾಯಿ