ಒಟ್ಟು 72 ಕಡೆಗಳಲ್ಲಿ , 28 ದಾಸರು , 53 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂದಕುಮಾರ ಸಕಲಾಧಾರಾ ಪ ಇಂದೀವರಯುಗಚರಣ ಮನೋಹರ ಕುಂದವದನ ನಿಗಮಾಂತ ಸಂಚಾರಾ ಅ.ಪ ಉಡಿಗೆ ತೊಡಿಗೆಗಳ ಉಡಿಸುವೆ ತೊಡಿಸುವೆ ಮುಡಿಗೆ ಮಲ್ಲಿಗೆ ಮಲ್ಲೆಯಳವಡಿಪೆ | ರಂಗ ಉಡುಪತಿ ಫಾಲಕೆ ತಿಲಕವನಿಡುವೆ ಅಡಿಗಂದುಗೆ ಗೆಜ್ಜೆ ಪಾಡಗವಿಡುವೆ | ರಂಗ 1 ಕಿವಿಗಳಿಗೆ ಮುತ್ತು ಹವಳದಾಭರಣವ ಹವಣಿಸಿ ಸಿಂಗಾರಗೈವೆನೋ | ರಂಗ ನವಮಣಿಮಾಲೆಯ ಕೊರಳಿಗೆ ಧರಿಸುವೆ ದಿವಿಯ ಪೀತಾಂಬರವಳವಡಿಪೇ | ರಂಗಾ 2 ಬೆರಳಿಗುಂಗುರಗಳ ಹರುಷದೊಳಿಡುವೆ ಕರದೊಳಿಡುವೆ ನಿನ್ನ ಮುರಳಿಯನು | ರಂಗ ಚರಣಯುಗಕೆ ನಿನ್ನ ಸಕಲವನರ್ಪಿಪೆ ಕರುಣದಿ ಬಾರೊ ಮಾಂಗಿರಿಯೊಡೆಯಾ | ರಂಗ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀ ಗಣಪತಿಯ ಪದಾಬ್ಜಕೆ ನಮಿಸಿರಾಗದಿಂದಲಿ ಶಾರದೆಯ ಸ್ಮರಿಸಿನಾಗಭೂಷಣ ಪದಾಬ್ಜಯುಗಕೆ ತಲೆವಾಗಿ ಬಾಲೆಯರಾಶೀರ್ವಾದದ ಪದಗಳರಾಗದಿ ಪಾಡಿ ಪೊಗಳುವೆ 1 ಸಾಲಿ ಸೀರೆಯನುಟ್ಟು ಸರಮುತ್ತ ಕಟ್ಟುಬಾಲಕಿಯರೊಳು ಕಟ್ಟಾಣಿ ನೀನಾಗುಮೇಲೆನೀ ಅಷ್ಟಪುತ್ರರನು ಪಡೆದು ಸುಖಿಬಾಳು ಸ್ತ್ರೀಯರಿಗೆಲ್ಲಾ ದೊರೆಯಾಗಿರುಶ್ರೀ ಮೈಲಾರಲಿಂಗನ ಕೃಪೆಯಿಂದಾ2 ಪಲ್ಲಕ್ಕಿಯ ಸಾನಂದದೊಳೇರುಹಲ್ಲಣಿಸಿದ ಕರಿತುರಗವನೇರುಎಲ್ಲಾಭರಣವನಿಟ್ಟು ಸುಖದಿ ಪ್ರಾಣದೊಲ್ಲಭಸಹಿತ ಸಂತೋಷದೊಳಿರು ಶ್ರೀಕೊಲ್ಲೂರ ಮೂಕಾಂಬೆಯ ಕೃಪೆಯಿಂದಾ 3 ಚಂದ್ರಕಸ್ತುರಿಯ ತಿಲಕಗಳನಿಟ್ಟುಚಂದದಿ ಕುಂಕುಮ ರೇಖೆಯನಿಟ್ಟುಇಂದೀವರನೇತ್ರಕೆ ಕಪ್ಪಿಟ್ಟು ಆಚಂದ್ರಾರ್ಕವು ಸುಖಬಾಳು ಶೃಂಗೇರಿಯಚಂದ್ರಮೌಳೀಶನ ಕೃಪೆಯಿಂದಾ4 ಅರಿಶಿನ ಚೂರ್ಣವನು ಲೇಪಿಸುತಪರಿಮಳಗಂಧವ ಪಸರಿಸಿಕೊಳುತಕರಿಯಮಣಿಯ ಮುತ್ತಿನ ಸರಗಳನಿಟ್ಟುಪರಮಸಂತೋಷದೊಳಿರು ಶ್ರೀ ಹಂಪೆಯವಿರೂಪಾಕ್ಷನ ಕೃಪೆಯಿಂದ 5 ಪರಿಮಳಿಸುವ ಪುಷ್ಪಸರಗಳ ಮುಡಿದುಗುರುಹಿರಿಯರ ಆಶೀರ್ವಾದವ ಪಡೆದುಹರುಷದಿ ಪುತ್ರಪೌತ್ರರ ಸಲಹುತ ಪತಿಚರಣಸೇವೆಯ ಮಾಡಿ ಸುಖಮಿರು ಕುಕ್ಕೆಯವರ ಸುಬ್ರಹ್ಮಣ್ಯನ ಕೃಪೆಯಿಂದ 6 ಸರಸ್ವತಿಯಂತೆ ವಿದ್ಯಾವಂತೆಯಾಗುಸಿರಿಯಂತೆ ಸೌಭಾಗ್ಯವಂತೆ ನೀನಾಗುಅರುಂಧತಿಯಂತೆ ಪತಿವ್ರತೆಯಾಗುತಪರಮಾನಂದದೊಳಿರು ಶ್ರೀ ಕೆಳದಿಯಪುರದ ರಾಮೇಶನ ಕೃಪೆಯಿಂದ 7
--------------
ಕೆಳದಿ ವೆಂಕಣ್ಣ ಕವಿ
ಹೂವ ಕೊಡೆ ದೇವಿ ಹೂವ ಕೊಡೆಯಾವಾಗಲೂ ನಿಮ್ಮ ಸಿರಿಮುಡಿಯೊಳಗಿರ್ಪ ಪ ವರಮಹಾಲಕ್ಷ್ಮಿ ನಿಮ್ಮ ಸಿರಿಮುಡಿಯನೆ ಕಟ್ಟಿಪರಿ ಪರಿ ಧೂಪ ಧೂಮಗಳನಿಕ್ಕಿಪರಿಮಳಿಸುವ ಸಂಪಿಗೆಯ ಪೂಸರವ ಸಿಂ-ಗರಿಸಿರಲಾಮಾಳಿಕೆಯೊಳು ಸಂಪಿಗೆ ಹೂವ 1 ಮರುಗ ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆಸರಸಿಜ ಮೊದಲಾದ ಕುಸುಮದಿಂದಪರಿಮಳಿಸುವ ನಿಮ್ಮ ಸಿರಿಮುಡಿಯೊಳಗಿರ್ಪಅರಳಿದ ಮಲ್ಲಿಗೆ ಹೂವ ಕಂಡೆ ಹೂವ 2 ವ್ಯೋಮಗಂಗೆಯೊಳಿಂದ ಹೇಮಕಾಮರಸವಕಾಮಿನಿಯರು ಕೊಯ್‍ತಂದದನುಶ್ರೀ ಮಹಾದೇವಿ ನಿಮ್ಮ ತುರುಬಿಗೆ ಮುಡಿಸಿರ-ಲಾ ಮಹಾಕುಸುಮ ಮಾಲಿಕೆಯೊಳು ತಾವರೆ ಹೂವ 3 ಮುತ್ತಿನ ಲಹರಿಯ ರತ್ನದ ರಾಗಟೆಯಸುತ್ತ ಮುತ್ತಲೂ ರಾರಾಜಿಸುವಪುತ್ಥಳಿಯ ಚಿನ್ನದಂತೆ ಘಮಘಮಿಸುವಉತ್ತಮವಾದ ಸುವರ್ಣದ ಕೇದಗೆ ಹೂವ 4 ಜಾತಿ ರತ್ನದ ನಡುವೆ ಜ್ಯೋತಿಯ ತೆರನಂತೆನೂತನವೆನಿಸಿ ಪ್ರಜ್ವಲಿಸುತಿಹಶಾತಕುಂಭದ ಚೌರಿಯ ಮೇಲೆ ಮುಡಿಸಿದಜಾತಿಮಲ್ಲಿಗೆ ಸಂಪಿಗೆ ಸೇವಂತಿಗೆ ಹೂವ 5 ಇಂದೀವರದಳನಯನೆ ಶುಭಪ್ರದೆಇಂದು ನಿಭಾನನೆ ಹೂವ ಕೊಡೆಮಂದಗಮನೆ ನಿಮ್ಮ ತುರುಬಿನೊಳೊಪ್ಪುವಮಂದಾರದ ಮೋಹನ ಮಾಲಿಕೆಯೆಂಬ ಹೂವ 6 ಚಂದ್ರಗಾವಿಯ ಸೀರೆ ಚೆಲುವ ಮುತ್ತಿನಸರದಿಂದಲೆಸೆವ ದೇವಿಹೂವ ಕೊಡೆಮುಂದಲೆ ಮುತ್ತಿನ ಸರದ ಮೇಲೊಪ್ಪುವಬಂಧುರಪೂಗಪುನ್ನಾಗ ಪಾರಿಜಾತದ ಹೂವ 7 ದೇವಿ ನಿಮ್ಮನು ಪೂಜೆಗೈದು ಮೆಚ್ಚಿಸಬಲ್ಲನಾವನೀ ಧರೆಯೊಳುಹೂವ ಕೊಡೆಪಾವನಾತ್ಮಕಿಯ ಪರಾಕ ಮಾಡದೆ ವರ-ವೀವ ಸಮಯವಿದು ಹೂವ ಕೊಡೆ ಹೂವ 8 ಮುತ್ತೈದೆತನವನು ನಿತ್ಯ ಸೌಭಾಗ್ಯವಉತ್ತಮ ಧನಕನಕಾಂಬರವಪುತ್ರ ಸಂತಾನವ ಕೊಡುವೆನೆನುತ ಕರ-ವೆತ್ತಿ ಅಭಯವಿತ್ತು ಹೂವ ಕೊಡೆ ಹೂವ 9 ಎಂದೆಂದೂ ಈ ಮನೆಗೆ ಕುಂದದ ಭಾಗ್ಯವಚಂದವಾಗಿಹ ಛತ್ರಚಾಮರವಚಂದ್ರ ಸೂರ್ಯರ ಪೋಲ್ವ ನಂದನರನುದಯ-ದಿಂದಲಿ ಕೊಟ್ಟು ರಕ್ಷಿಪನೆಂದು ಸೂಡಿದ ಹೂವ10 ವರದಾನದಿಯ ತೀರವಾಸ ಶ್ರೀ ಕೆಳದಿಯಪುರವರಾಧೀಶ ರಾಮೇಶ್ವರನಪರಮ ಪಟ್ಟದ ರಾಣಿ ಪಾರ್ವತಿ ನಿಮ್ಮಯಸಿರಿಮುಡಿಯೊಳಗಿರ್ಪ ಹೂವ ಕೊಡೆ ಹೂವ 11
--------------
ಕೆಳದಿ ವೆಂಕಣ್ಣ ಕವಿ
(ಆ) ಶ್ರೀ ಹರಿಯ ಸ್ತುತಿ ಕೃತಿ ಆಗಿ ಹೋಗುವುದು ಜಗದೀಶನಾಕೃತಿಯು ಅಗಾಧವಿಹುದೈಯ್ಯ ಪ ಮಂದರೋದ್ಧರನಾಜ್ಞೆಯಿಂದ ಬ್ರಹ್ಮನು ತಾನು ಇಂದಿಗೆ ಸೃಷ್ಟಿ ಮಾಡುವುದಿಲ್ಲವೇನು ಇಂದೀವರಾಕ್ಷ ಮುಕುಂದನ ದಯದೀ ಪಾಂಡುನಂದನನು ಅಶ್ವಮೇಧವ ಮಾಡಲಿಲ್ಲೇ 1 ಹರಿಯ ಕೃಪೆಯಿಂದಲಿ ವರದಂಜನೇಯ ಸುತನು ಗುರು ರಾಮನಾ ಸತಿಯ ಅರಸುವುದಕ್ಕಾಗಿ ಪರಮ ದುರ್ಲಭವಾದ ಶರಧಿಯನು ಹರುಷದಲಿ ಸಿರಿನಾಮ ಸ್ಮರಿಸಿ ಹಾರಲಿಲ್ಲೇನೋ2 ಧನಭೂಮಿ ಕನ್ಯಾಗ್ರಹದಾನ ಕೊಡಲದಕೆ ಹರಿ ಅನುಕೂಲವಾದಷ್ಟೇ ಫಲಕೊಡುವನು ಮನವನೊಪ್ಪಿಸಿ ಗತಿ ಎಂದು ನೆನೆದವರಿಗೆ ಘನ ಮುಕ್ತಿಯನು ಕೊಡುವ ಹನುಮೇಶವಿಠಲ 3
--------------
ಹನುಮೇಶವಿಠಲ
(ಈ) ಮಹಾಲಕ್ಷ್ಮಿ ಇಂದೀವರನಯನ ಕೃಷ್ಣಾನಂದಕಾರಿಣಿ ಪ ಎಂದೆಂದಿಗು ಹೊಂದಿ ನೀನಾನಂದ ಕೊಡುವ ಕಾರಣದಿಂದ ಅ.ಪ. ಕಾಲ ಜನಿಸಿ ಸಿಂಧುರಾಜಗೆ ಪುತ್ರಿ ಎನಿಸಿ ಚಂದಿರನಗ್ರಜೆ ಎನಿಸಿ ಸಿಂಧುಶಾಯಿ ಮಂದಿರಳೆನಿಸಿ 1 ಕಮಲ ಚರಣೆ ಕಮಲಗಂಧೆ ಕಮಲವಾಸನೆ ಕಮಲಾಕ್ಷಣೆ ಕಮಲಾಂಗಿಯೆ 2 ನರಸಿಂಹವಿಠಲನ ಹೊಂದಿದೆ ಪರಮಭಕ್ತರಘ ಕಳೆದು ಹರಿಯ ನಾಮ ಜಿಹ್ವೆಗಿತ್ತು ನಿರುತದಿ ಯುದ್ಧ... ದೇವಿ 3
--------------
ನರಸಿಂಹವಿಠಲರು
(ಘಟಿಕಾಚಲದ ವಾಯುದೇವರನ್ನು ನೆನೆದು) ಒಲಿದು ಭಕ್ತನು ಸಲಹುವ ಘಟಿಕಾಚಲನಿವಾಸಿ ಹನುಮಾ ತ್ರಿಜಗದ್ವಲಯವÀ ನಡಸುವಿ ಪ. ಎರಡು ಭುಜಗಳನು ಧರಿಸಿ ಪ್ರಪಂಚದೊಳಗಿರುವ ನಿನ್ನ ರೂಪಾ ಸ್ಮರಿಸುವ ಜನರನು ಪೊರೆವ ದೊರೆಯೆ ಈರೆರಡು ಭುಜದಿ ಭೂಪಾ- ದರ ಸುದರ್ಶನಾಕ್ಷರ ಸಂಖ್ಯಾಂಗುಲಿ ವರಮಣಿಮಾಲೆಗಳಾ- ಧರಿಸಿ ಸನ್ಮುಖದೊಳಿರುವ ವಿಚಿತ್ರವನರಿವನಾವನಯ್ಯಾ ತೋರುವೆಯೊ 1 ಸರಮಣಿ ಹಸ್ತದಿ ಚರಿಸುವದೇನಿದು ಹರಿಯ ಗುಣಗಣಗಳೊ ಪರಿಪರಿಯಲಿ ನೀ ತರಿದಿಹ ದಿತಿಜರ ಶಿರಗಳ ಸಂಖ್ಯೆಗಳೊ ಬರುವ ಬ್ರಹ್ಮಪದ ಕುರುವರಿತಾಬ್ಧಗಳಿರವ ಚಿಂತಿಸುವುದೊ ನರಹರಿ ನಿನ್ನೊಳಗಿರಿಸಿದ ದೊರೆತನ ಚಿರತರ ಕಾರ್ಯಗಳೊ ಪರಿಹರಿಸದರನು 2 ಹಿಂದೆ ಅಂಜನಾನಂದನೆನಿಸುತ ಬಂದು ಧಾರುಣಿಯಲಿ ಇಂದಿರೇಶ ರಾಮನ ಪದಕಂಜದ್ವಂದ್ವ ಸಮಾಶ್ರೈಸಿ ಇಂದೀವರ ಸಖ ನಂದನನಿಗೆ ನಿಜ ಬಂಧುವಾಗಿ ಸಲಹಿ ಇಂದಿರಾ ಕೃತಿಗೆ ನಿಜ ರಾಮನ ಮುದ್ರೆಯ ಛಂದದಲಿ ಸಲಿಸಿ ಮುಷ್ಟಿಯಿಂಧೆಂದಿಸಿ ಮೆರೆದನೆ 3 ಸೋಮಕುಲದಿ ಜನಿಸ್ಯಾಮಹದೈತ್ಯರ ಸ್ತೋಮವ ನೆರೆ ತರಿದು ಭೂಮಿಜಾಂತಕನನೇಮದಿ ಜಗದೋದ್ದಾಮನ ಸರಿಸಿಗಿದೂ ಪಾಮರ ಕೀಚಕ ಬಕ ಕಿಮ್ಮೀರರ ನಾಮವಳಿಸಿ ಬಡಿದು ಭೂಮಿಪ ಕುರುಪನ ಹೋಮಿಸಿ ರಂಗದಿ ಕಾಮಿತಾರ್ಥಪಡದು ಧಾಮನಿರ್ಜರೋದ್ಧಾಮ ಸುಮಹಿಮ 4 ಕಲಿಯೊಳು ಮಿಥ್ಯಾವಾದಿಗಳಿಂದಲಿ ಕಲುಷಿತ ಸಜ್ಜನರ ವಾಸರ ಒಲುಮೆಯಿಂದಲುದಿಸಿ ಖಳರ ಕುಶಾಸ್ತ್ರದ ಬಲೆಗಳ ಖಂಡಿಸಿ ನಳಿನಜಾಂಡದೊಳಗೆ ಜಲಜನಾಭ ವೆಂಕಟಗಿರಿರಾಜನ ನೆಲೆಯ ತೋರಿ ಮೆರದೆ ಘಟಿಕಾಚಲದಲಿ ನೆಲಿಸಿದೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಅಂದವ ಜರೆವರಾರು ರಂಗ ನಿನ್ನ ಅಂಗವ ಹಳಿವರಾರು ಪ ಅಂದವ ಜರೆವರಾರೋ ಇಂದೀವರಾಕ್ಷ ಗೋವಿಂದ ನಿ ನ್ನಂದಕೇಣಿ ಬಂದವರಿಲ್ಲವಯ್ಯ ಅ.ಪ ನೀರಮೀನು ಎಂಬರೇನೋ ರಂಗಯ್ಯ ಭಾರಿ ಕೂರ್ಮನೆಂಬರೇ ಭಾರಿ ರೋಮ್ಯನು ಎನೆ ಭೂರಿಸಂತಸವಿತ್ತೇ 1 ಕೋರೇ ಹಲ್ಲವನೆಂಬರೇ ರಂಗಯ್ಯ ಕೇಸರಿ ಎಂಬರೇ ಕೋರೆ ಹಲ್ಲಿಗೆ ಶೃಂಗಾರ ಧರಣಿದೇವಿ ಘೋರ ಕೇಸರಿಗೆ ಹತ್ತಾರು ಕೈಗಳು ಚಂದ 2 ಕೊಡಲಿ ಹಿಡಿದನೆಂಬರೇ ಕೊಡೆಯ ಹಿಡಿದಡೇನು ಬಲಿಯ ಬಾಗಿಲ ಕಾಯ್ದೆ ಕೊಡಲಿ ಹಿಡಿದು ಕಾರ್ತವೀರ್ಯಾರ್ಜುನನ ಕೊಂದೆ 3 ಎಂಜಲ ತಿಂದರೇ ರಂಗಯ್ಯ ಗುಂಜುಗದಾತನೆಂಬರೇ ಎಂಜಲ ತಿಂದಾ ಬಲದಿ ಮಾರೀಚನ ಕೊಂದೇ ಗುಂಜುಗ ವೇಗದಿಂದ ಸತಿಯ [ಬಿಡಿಸಿ ಕಂದೆ] ಕಂಜನೇತ್ರೆಯಳ ಕೈ [ಹಿಡಿದು ಬಂದೆ] 4 ದುರುಳ ಚೋರನು ಎಂಬರೇ ರಂಗಯ್ಯ ತುರಗವನೇರಿದನೆಂಬರೇ ದುರುಳ ಕೌರವರೆದೆ ಬಿರಿವಂತೆ ಮಾಡಿದೆ ದುರಿತಾರಿ ನೀ ಮಾಂಗಿರಿಯ ರಂಗಯ್ಯ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಆತ್ಮನಿವೇದನೆ ಇಂದೀವರಾಕ್ಷ ಬಾ ಮುಕುಂದ ಮರಹರ ಗೋವಿಂದಾ ಸುಂದರಾಂಗನೆ ಬಂದು ರಕ್ಷಿಸೋ ಚೆನ್ನಿಗರ ಚಂದಾ ಪ ತಂದೆ ತಾಯಿ ಬಂಧುಬಳಗ ಇಂದೆನಗೆ ನೀನೇ ಚಂದದೆನ್ಮನ ಮಂದಿರದಿ ನೀ ನಿಂದಿರು ದಯಾಮಯನೆ 1 ನಿನ್ನ ಪಾದವನ್ನು ಪಿಡಿದನೆನ್ನ ರಕ್ಷಿಸೋ ಸನ್ನುತ ವಿಚ್ಛಿನ್ನ ಭಕುತರನ್ನು ಸೇರಿಸಿಕೋ 2 ಬೆರಸ ಬ್ಯಾಡೆನ್ನರಸ ನಿನ್ನ ಸ್ಮರಿಸದಿರ್ಪರಾ ಶಿರಿವರ ನರಸಿಂಹವಿಠ್ಠಲ ಪೊರೆಯೋ ಭೌಮಾ 3
--------------
ನರಸಿಂಹವಿಠಲರು
ಆತ್ಮನಿವೇದನೆ ಕರುಣದಿಂದಲಿ ಪೊರೆಯೊ ನೀ ಎನ್ನ| ನರಹರಿಯೆ ಮುನ್ನ | ಚರಣಕಮಲವ ಸ್ಮರಿಸುವೆನು ನಿನ್ನ ಪ ಪೊರೆಯಬಾರದೆ ಶರಣು ಶ್ರೀಹರಿಅ.ಪ ಗೋಪಾಲಕೃಷ್ಣ| ಗೋಪಸ್ತ್ರೀಯರ ಹರುಷಗೊಳಿಸಿದೆ|| ವೃಂದದಿ ನಲಿದು ಮೆರೆದೆ| ದ್ರುಪದ ಸುತೆಯಳಿಗಿತ್ತ ಶ್ರೀಹರಿ 1 ಗೋವೃಂದ ಸಲಹಿ| ಗೋವಿಂದಾಭಿಧಾನವನು ಪಡೆದೆ|| ರವನು ಹೀರಿದ ಕರುಣಿ ಶ್ರೀಹರಿ 2 ಇಂದೀವರಾಭನೆ| ಬಂಧುಬಾಂಧವರಾರು ಹಿತರಲ್ಲ|| ಇಂದಿರೇಶನೆ ನಿನ್ನ ಚರಣ| ದ್ವಂದ್ವದೊಳು ಮನವಿತ್ತೆನಾಪ | ದ್ಬಂಧುವಾದರೆ ಪ್ರೇಮವಿರಿಸುತ || ಬಂಧಗಳ ಪರಿಹರಿಸುತೆನ್ನನು 3 ಪತಿತಪಾವನ ಈಶ ಸರ್ವೇಶ| ಮಹಶೇಷಶಯನ | ಹಿತವಿಧಾಯಕ ಸರ್ವಭೂತೇಶ|| ದೊರಕುವ ತೆರದೊಳನುದಿನ 4 ಶ್ರೀಕಾಂತ ಸಲಹೈ| ಲೋಕಭರಿತನೆ ಸುಖವಿಧಾಯಕನೆ|| ಲೋಕವಂದಿತ ಲೋಕನಾಥಾ | ನಾಕಿವಂದಿತ ಭಕ್ತವತ್ಸಲ 5 ನಿನ್ನ ಪಾದವ ನಂಬಿ ನಾನಿಹೆನು| ದೇವಾದಿದೇವಾ| ನಿನ್ನ ನಾಮಾವಲಿಯ ಸ್ಮರಿಸುವೆನು|| ಮುನ್ನ ಮಾಡಿದ ಪಾಪವೆಲ್ಲವ| ನಿನ್ನ ನಾಮ ಸ್ಮರಣದಲಿ ಸಂ| ಪೂರ್ಣ ಪರಿಹರಗೊಳಿಸಿ ನಿನ್ನಯ| ಸನ್ನುತಾಂಘ್ರಿಯ ಸೇವೆಗಿರಿಸುತ 6
--------------
ವೆಂಕಟ್‍ರಾವ್
ಆರುತಿ ಬೆಳಗುವೆವು ಕೃಷ್ಣಗೆ ರಾಧಾಕೃಷ್ಣಗೆ ಬೆಳಗುವೆವು ಪ ಗೋಕುದಲಿ ಹುಟ್ಟಿ | ಗೋವುಗಳನು | ಕಾಯ್ದವಗೆ ಗೋಪಾಲಕೃಷ್ಣಗೆ ಬೆಳಗುವೆವು 1 ನಂದಕುಮಾರನಿಗೆ ಇಂದೀವರಾಕ್ಷ ಬಾಲನಿಗೆ | ರಾಧಾಕೃಷ್ಣಗೆ ಬೆಳಗುವೆವು 2 ಶಾಮಸುಂದರನಿಗೆ ಕಾಮಿತಶೀಲ ಕೃಷ್ಣನಿಗೆ ರಾಧಾಕೃಷ್ಣಗೆ 3
--------------
ಶಾಮಸುಂದರ ವಿಠಲ
ಆರುತಿ ಮಾಡೆವೆವು ನಾವು ಆನಂದನಿಲಯಗೆ ಆನಂದದಿಂದಲಿ ಪ ಗೋಕುಲದಲಿ ಪುಟ್ಟಿ | ಗೋವುಗಳನೆ ಕಾಯ್ದ ಗೋಪಾಲಕೃಷ್ಣನಿಗೆ 1 ನಂದಕುವರಗೆ | ಸಿಂಧುಶಯನಗೆ | ಇಂದೀವರಾಕ್ಷನಿಗೆ ನಾವು 2 ಶಾಮಸುಂದರಗೆ ದಾಮೋದರನಿಗೆ | ಪ್ರೇಮದಿಂದಲಿ ಶ್ರೀ ಕಮಲಾಕ್ಷಗೆ 3
--------------
ಶಾಮಸುಂದರ ವಿಠಲ
ಆರ್ತಭಾವ ಸುಳಾದಿ ಧ್ರುವತಾಳ ವೊಂದು ತೋರೆನಗರವಿಂದನಯನ ಮಂದಾಕಿನಿಯ ಪಡೆದ ಮುದ್ದು ಚರಣ ಸುಂದರಾಂಗ ತೋರೆನಗೆ ಸುರೇಂದ್ರನಾಥ ಕಂದರ್ಪಪಿತನ ಕಾಲಂದಿಗೆ ರುಳಿ ಗೆಜ್ಜೆ ಚೆಂದುಳ್ಳ ಪದ್ಮರೇಖೆಯಿಂದೊಪ್ಪುವೊ ಇಂದಿರೆ ಕರಕಮಲದಿಂದ ಪೂಜಿತನಾದ ಚಂದ್ರವದನ ನಿನ್ನ ಚೆಲುವ ಪಾದ ಇಂದ್ರಾದಿ ಹರ ನಾರಂದ ಸುರಬ್ರಹ್ಮಾದಿ ವಂದ್ಯ ನಿನಗೆ ಕೋಟಿ ನಮೋ ನಮೋ ಎಂದು ಬೇಡುವೆ ದಯಾಸಿಂಧು ಎನಿಸಿದಾತ ಕಂದನಂದದಿ ನೋಡಿ ಸಲಹೋ ಎನ್ನ ಮಂದಬುದ್ಧಿಯ ಮಹಾಮದಡ ಪಾಮರ ಭವ ಬಂಧನದೊಳು ಸಿಲುಕಿ ನೊಂದೆನಯ್ಯ ಸಂದೇಹ ಮಾಡದೆ ಸಲಹದಿದ್ದರೆ ನಿನ್ನ ಹೊಂದಿ ಬಾಳುವುದೆಂತೊ ಮುಂದರಿಯೆ ಬಿಂದು ಮಾತ್ರದಿ ನಾಮಾಮೃತವ ಭೀಮೇಶಕೃಷ್ಣ ತಂದು ನೀಡೆನಿಗೆ ಇಂದೀವರಾಕ್ಷ 1 ಮಠ್ಯತಾಳ ಯುಗಳ ಪಾದಕೆ ಕೈಯ ಮುಗಿದು ಬೇಡುವೆನಯ್ಯ ಜಗದುದರನೆ ನಿನ್ನ ಜಾಣತನವ ಬಿಟ್ಟು ಅಗಣಿತಗುಣಮಹಿಮ ಅಂತರಾತ್ಮಕ ದೇವ ಬಗೆಬಗೆಯಲಿ ಸಲಹೋ ಭಕ್ತವತ್ಸಲ ನಿನ್ನ ಮಗುವೆಂದೆನ್ನ ಕಾಯೊ ಮಂದರೋದ್ಧರ ದೇವ ನಿಗಮಗೋಚರ ಸ್ವಾಮಿ ನಿಂತು ನೋಡುತ ಎನ್ನ ಚಿಗುರುದೋಷದಕುಡಿಯ ಚಿವುಟಿ ಹಾಕುತ ನಿನ್ನ ಸುಗುಣಗಳನೆ ಬಿಟ್ಟೆನ್ನವಗುಣವೆಣಿಸಿದರೆ ಇಗೋ ನಿನಗಪಕೀರ್ತಿ ಈಗ ಒಪ್ಪಿಸುವೆನು ಬಿಗಿದ ಭವಪಾಶ ಬಿಚ್ಚಿ ಭೀಮೇಶಕೃಷ್ಣ ತೆಗೆಯದೆ ನಿನ್ಹೊರತೀ ಜಗದೊಳಗುಂಟೇನಯ್ಯ 2 ವಚನ ಸಕಲ ಸ್ನಾನವು ನೇಮ ಹೋಮ ಜಪಂಗಳು ಸಕಲ ಪುಣ್ಯಕ್ಷೇತ್ರ ಮೂರ್ತಿನಾಮಂಗಳು ಸಕಲ ಪುರಾಣ ವೇದಾದಿಗ್ರಂಥಗಳು ಸಕಲ ಕಾರ್ಯವು ಸರ್ವೇಷ್ಟ ಫಲಂಗಳು ಸಾಯುಜ್ಯ ಪದವಿಗಳು ಲಕುಮೀಶ ಇವು ನಿನ್ನ ನಖಶಿಖ ಪರಿಯಂತ್ರ ಸಾರಥಿ ಸಮದೃಷ್ಟಿಲಿ ನೋಡಲು ಸಕಲಸಿದ್ಧ್ದಿಯು ಸರಿಯಾಗಿ ಕೈಗೂಡೋದು ಶಕಟಸುರಾಂತಕ ಕಕುಲಾತಿ ಮಾಡದೆ ಬಕನ್ವೈರಿಯೆನ್ನ ಭಾರವ ನೀ ವಹಿಸಲಿ ಬೇಕೊ ಇಕೋ ನಿನ್ನ ಚರಣಕ್ಕೆ ಈ ದೇಹ ಅರ್ಪಿಸುವೆ ಗೋಕುಲಾವಾಸ ನಿನ್ನ ಪಾದಕೆ ನಮಸ್ಕರಿಸುವೆ ಮುಕುತಿದಾಯಕ ಮುದ್ದು ಭೀಮೇಶಕೃಷ್ಣನೆ ಭಕುತಿಜ್ಞಾನದಲಿಡೊ ಭಯಹಾರಿ ಎನ್ನ 3 ಗೋಪಸುತನೆ ನಿನ್ನ ಗುರುವಿನ್ವಲ್ಲಭೆ ಮಹ ದಪರಾಧವೆಣಿಸದೆ ನೀ ಕರುಣದಲೆ ಸಾಂ- ದೀಪಗೆ ಸುತರನಿಟ್ಟ ಪಯಾಂಬುಧಿವಾಸ ಕೋಪದಿ ಬಯ್ದ್ದಾ ಶಿಶುಪಾಲಗೊಲಿದೆಯೊ ಶ್ರೀಪತಿ ಶರಣೆಂದಾ ದ್ರೌಪದಿ ಕಾಯ್ದಂತೆ ಕಾಪಾಡೊ ಈ ಭವಕೂಪದೊಳಗೆ ಬಿದ್ದೆ ನೀ ಪಿಡಿಕೈಯ ದಯಾಪರಮೂರುತಿ ಆಪತ್ತು ಬಾಂಧವ ಈ ದೇಹವೃಕ್ಷದಲಿ ದ್ವಾ- ಸೂಪರಣನಂತೆ ದೂರೇನೋ ಎನ್ನ ಸ- ಮೀಪದಲ್ಲಿದ್ದು ಸ್ವರೂಪ ತೋರದಲೆ ಸಂ- ತಾಪ ಬಡಿಸದಿರೆಂದಾಪನಿತು ಪೇಳ್ವೆ ಭೂಪಾಲ ಭೀಮೇಶಕೃಷ್ಣ ನಿನ್ನ ಪಾದ ನಾ ಪೊಂದಿದೆನೊ ದೊರೆ ನೀ ಪೊರೆಯೆಂದು 4 ಜತೆ ಏಸೇಸು ಕಾಲಕೆ ಬ್ಯಾಸರದೆ ಭೀಮೇಶಕೃಷ್ಣ ಲೇಸು ನೀಡೆನಗೆ ಸದಾ ಸುಮಂಗಳವ 5
--------------
ಹರಪನಹಳ್ಳಿಭೀಮವ್ವ
ಇಂದಿರೆ ಪ ಸಿಂಧು ಸಂಭೂತೆ | ಪೂರ್ಣ ಚಂದಿರ ಮುಖಿ ಸುಖದಾತೆ ಅ.ಪ ಇಂದೀವರಾಕ್ಷಿಯೆ | ಪೊಂದಿ ತ್ವತ್ವಾದಕೆ ವಂದಿಪೆ ಮನ್ಮನ ಮಂದಿರದೊಳು ಬಾರೆ || ಕೃತಿ ಶಾಂತಿ ಜಯಮಾಯೆ ಸೀತೆ ದೇವಿ ಪತಿತಪಾವನೆ ಕ್ಷಿತಿಜಾತೆ | ವಿಧಿ ಶಿತ ಕಂಧರಾದಿ ನಮಿತೆ | ಮಹ | ಪತಿವ್ರತೆ ಪರಮವಿಖ್ಯಾತೆ ಆಹಾ ಶೃತಿವಿನುತಳೆ ಸದಾ | ನುತಿಸಿ ಬೇಡಿ ಕೊಂಬೆ ಅತಿಹಿತದಲಿ ತವ ಪತಿಯ ಪಾದವ ತೋರೋ 1 ಹರಿಣಲೋಚನೆ | ಶ್ರೀರುಕ್ಮಿಣೀ | ಮದ ಕರಿ ಮಂದಗಮನೆ ಕಲ್ಯಾಣಿ ದ್ವಿಜ ಪರಿವಾರ ಸಂಸ್ತುತೆ ಜಾಣೆ | ಚಾರು ಚರಿತೆ ಚಂಚರೀಕ ಸುವೇಣಿ || ಆಹಾ || ಸಿರಿ ಸತ್ಯಭಾಮೆಯ | ಮರೆಯದೆ ಎನ್ನಯ ದುರಿತ ವಿಚ್ಛೇದಿಸಿ | ಹರಿಸ್ಮರಣೆ ನೀಡೆ 2 ಕಂಬು ಕಂಧರೆ ಕಾಮನ ತಾಯೆ ಅರ ಭವ ಚಂದನ ಗಂಧಿಯೆ | ನಂದ ನಂದನ ಶಾಮ ಸುಂದರವಿಠಲನ್ನ ಸಂದರುಶನವೀಯೆ 3
--------------
ಶಾಮಸುಂದರ ವಿಠಲ
ಇಂದಿರೆ ಇಂದೀವರಾಕ್ಷಿ- ಸುಂದರಿ ಅರ- ವಿಂದ ಮಂದಿರೆ ಪೂರ್ಣೆ | ಪ ಇಂದುವದನೆ ಅಮರೇಂದ್ರ ವಂದಿತೆ | ಸಿಂಧುಸುತೆ ಆನಂದ ಫಲದೆ ಅಪ ರಾರರಮಣನ ಸೋಲಿಪ ನಖದಕಾಂತಿ | ಚಾರು ಚರಣತಳ ವಾರಿಜಾಂಕುಶ ಧ್ವಜ | ವಾರಣ ಕನಕ ಮಂಗಳರೇಖೆವೊಪ್ಪೆ | ನೂ- ಪುರ ಕಡಗ ಪೆಂಡ್ಯೆ ಪರಡೆ ಜಾನು ಜಂಘೆ | ಕಟಿ ನಾಭಿ ಉದರ ತ್ರಿವಳಿ | ಧಾರ ಶೋಭನವಾದ ಹೊನ್ನುಡಿ | ಧಾರ ಕಿಂಕಿಣಿ ತೋರಮುತ್ತಿನ- ಹಾರ ಉರವಿಸ್ತಾರ ಗುಣವಂತೆ 1 ಕಂಬು - ಗ್ರೀವ ಸರಿಗೆ ದಿವ್ಯಚಂದನ ಲೇಪಿಸಿ | ಕಂಚುಕ ಹಸ್ತಕಡಗ ಮುದ್ರೆ ಪ್ರವಳಮಣಿಯು ಕೇಯೂರ ದಂಡೆಯ ಸರ | ಬೇವಿನೆಸಳಂತೆ ಪುಬ್ಬು ಢಾಳಿಪ | ತಾವರೆಯ ಫಣೆಯೂ ಸಂಪಿಗೆ | ನಾಸಿಕ ವೇಣಿ | ಹಾವಿನಂದದಿ ಒಪ್ಪುತಿರೆ ದೇವಿ 2 ವಾಲೆಮೂಗುತಿ ಹೊನ್ನಹೂವು ತೂಗುವ ತುಂಬು | ಕದಪು ಮುಂಗೂದಲು | ಮೇಲೆ ರ್ಯಾಕಟೆ ಚೌರಿ ಮುಡಿದ ಕುಸುಮವು | ಸಾಲು ಮುತ್ತಿನ ಜಾಳಿಗೆ ಗೊಂಡ್ಯ ಶಿರದಲ್ಲಿ | ಪಾಲ ಸಾಗರ ಶಾಯಿ ವಿಜಯವಿ- ಠ್ಠಲರೇಯನ ಉತ್ಸಾಹದಲಿ | ತೋಳಿನಲ್ಲಿ ಬಿಗಿದಪ್ಪಿ ಪವಳಿಪ | ಶ್ರೀ ಲಕುಮಿ ತ್ರೈಲೋಕ್ಯ ಮಾತೆ 3
--------------
ವಿಜಯದಾಸ
ಇಂದಿರೆಯರಸನಾಡಿದ ಆಟನೋಡಿ|ನಲಿದಾಡಿ| ಬಂದರಜಮುಖ್ಯರೋಡಿ|ಬಹುಜನ ಕೂಡಿ ಪ ಅರುಣ ತಳದಿರಂಜಿಪ ದ್ವಯ|ಚರಣದಿಂದ ಕಾಳಿ ಅಹಿ| ವರನಸಿರವ ಮೆಟ್ಟಿಸೂರ್ಯ|ಕಿರಣದಂತೆ ಪೊಳೆವಾ| ಸ್ಪುರಣಗೆಜ್ಜಯ ಝಣ ಝಣ|ಝಣಕು ಝಣಕೆಂಬ ತೆರದಿಂದ| ಕರುಣ ಧಿಗಿ ಧಿಗಿಯೆಂದು|ವಾರುಣದಲಿ ಕುಣಿಯೇ 1 ವೀಣೆಯಲಿತಾಸರಿಗ ಮಪಧನಿ|ಸೆಂಬಮೆಟ್ಟಿಕೆಯೊಳ| ತ್ರಾಣದಿಂದ ಝಿಂ ಝಿಂ ಝಿಂ ಝಿಂ ಕೆನಿಪ ದ್ವನಿಯಗಳನು| ಮಾಣುತಲಿ ಸಿರಿರಾಗ ಘನಮಲಾಹರ ಮೊದಲು| ವಾಣಿಪತಿಸುತ ಪಾಡಿದ ನಾನಾ ರಾಗದಲಿ 2 ಅಂಬುಜಾಕ್ಷಪ್ರಿಯನಾದ|ಅಂಬುಜಭವ ಪದ ಕರ್ತ| ಕುಂಭಿಯೊಳಹಸ್ತಿನಿಕು|ರಂಬಾರಿ ಕೋಟಿ ದ್ವನಿ| ವೆಂಬಂತೆ ಕಹಳೆಗಳು|ತುಂಬಿ ಪೂರೈಸಿದನು| ಭುಂ ಭುಂ ಭುಂ ಭುಂ|ಭುಂ ಮೆಂದು ಗಂಭೀರ ಸಪರದಿ 3 ತತ್ತಥೈಯ್ಯಾ ಥೈಯ್ಯಾ ಥರಿಕೆಂದು|ಧತ್ತೆರಿಕುಥಲಿ| ಒತ್ತಿ ಖಿಣಿ ಖಿಣಿ ಖಿಣಿಲೆಂಬ|ಮೊತ್ತತಾಳು ವಿಡಿದು| ಮತ್ತ ಏಕತಾಳ ಝಂಪೆ|ತಾಳ ಅಟ್ಟತಾಳಗಳು| ಉತ್ತುಮದಾ ಕರದಿ ಹರ ಅರ್ಥಿಯಲಿ ನಿಂದಾ 4 ಇಂದೀವರಜ ಮದ್ಯಸ್ಥಲ ಒಂದು ನೆಗೆದು ಜವದಿಂದಾ| ದಂ ದಂ ದಂ ದಂ ದಮುಕೆಂದು|ಛಂದದಿ ಮುಟ್ಟಿದನು| ಧಿಂಧಿಂಧಿಂಧಿಂಧಿಮಿಕೆಂದು|ದುಂಧುಂಪೊಡದರು ಸುರರು| ತಂದೆ ಮಹಿಪತಿ ನಂದನ ವಂದ್ಯನೊಲುವಂತೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು