ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದವ ತೊಳೆದು ಪಾವನರಾಗಿಹರುಷದಿ ತಲೆದೂಗಿಪಾದವ ತೊಳೆದು ಪಾವನರಾಗಿಭಾವೆ ವಿನೋದದಿ ಕೃಷ್ಣನಗುತಲಿ ಪ. ಗುಜ್ಜೆಯರ ಕಾಲಿಗೆ ತಕ್ಕ ವಜ್ರಕಲ್ಲನೆಪಿಡಿದುಅರ್ಜುನನÀ ಮಡದಿ ಸುಭದ್ರಾಅರ್ಜುನನÀ ಮಡದಿ ಸುಭದ್ರಾ ಹರುಷದಿಕಂಜನೇತ್ರಿಯರ ಉಪಚರಿಸಿ 1 ಪಾದ ಕಾಲ ತೊಳೆದಳು2 ಮಂದಗಮನೆಯರಿಗೆಲ್ಲ ಗಂಧ ಕಸ್ತೂರಿಯಿಟ್ಟುಅಂದವಾಗಿದ್ದ ಅರಿಷಿಣಅಂದವಾಗಿದ್ದ ಅರಿಷಿಣ ಕುಂಕುಮದಿಂದ ಇಂದುವದನೆಯರ ಉಪಚರಿಸಿ3 ಶ್ರೀದೇವಿಯರಿಗೆ ದಿವ್ಯ ಕ್ಯಾದಿಗೆ ಮಲ್ಲಿಗೆ ಮುಡಿಸಿ ಸುಗಂಧಿ ಕೇಶರ ವೀಳ್ಯವ ಸುಗಂಧಿಕೇಶರ ವೀಳ್ಯ ಅಡಿಕೆ ಕೊಟ್ಟುಮಾಧವನ ಮಡದಿಯರ ಉಪಚರಿಸಿ4 ಪಾದ ತೊಳೆದು ಪಾವನರಾಗಿ5
--------------
ಗಲಗಲಿಅವ್ವನವರು
ಬಂದಾ ಸುಂದರವದನ ಮಂದಹಾಸದಿ ರಘು ನಂದನ ಧನು ಬಳಿಗೆ ಪ ವಂದಿಸಿ ಕೌಶಿಕಗೆ ತಂದೆಯ ನೆನೆದು ಆ ನಂದ ಮನದಲಿ ಮುಂದೆ ಮುಂದಕೆ ನಡೆದು ಚಂದದಿ ಬರುತಿಹ ಅಂದನೋಡಿ ಮುನಿ ವೃಂದ ಮನದೊಳಾನಂದವ ಪೊಂದುತ ಇಂದಿರೇಶನಿವನೆಂದು ತಿಳಿದು ಭೂ ನಂದನೆ ಇವನವಳೆವಂದು ಪೇಳುತಿರೆ ಅ.ಪ. ಸಿಂಧುಶಯನ ಭಜಕ ಮಂದಾರ ಮುನಿಜನ ವೃಂದ ಕುಮುದ ಚಂದ್ರ ಮಂದಜಾಸನ ವಂದ್ಯ ಸಿಂಧುಸುತಾಲೋಲ ಸಿಂಧೂರ ಪರಿಪಾಲ ಸಿಂಧೂರ ಗಮನದಿ ಸಿಂಧೂ ಗಂಭೀರ ಬರೆ ಇಂದುವದನೆಯರು ಚಂದವ ನೋಡುತ ಇಂದೀವಗೇ ಜಯವೆಂದು ನುಡಿಯುತಿರೆ ಇಂದುಧರನ ಧನು ಬಂಧನ ಮಾಡಲು ಇಂದಿರೇಶ ಶ್ರೀ ಕರಿಗಿರಿ ಮಂದಿರ 1
--------------
ವರಾವಾಣಿರಾಮರಾಯದಾಸರು
ರಂಗ ಕೊಳಲನೂದುತ ಬಂದಯಶೋದೆಯ ಕಂದ ಪ ಕೊಳಲ ಧ್ವನಿಗೆ ವಿರಹವು ನಾರಿಯರಿಗೆಕಳಕಳÀವಾಗಲು ಕಳಕಳಿಸುತ ಅ.ಪ. ಶೃಂಗಾರ ಕೊಳಲ ಗಾಯನ ಮಾಡೆಸ್ತ್ರೀಯರು ನೋಡೆ ರಂಗನ ಪಾದದಲಿ ಮನ ಹೂಡೆಭೃಂಗಾಮೃತ ತೈಲದಿಅಂಗನೆಯರು ಝಳಕವ ಮಾಡೆದೇವರ್ಕಳು ನೋಡೆತುಂಗವಿಹಂಗ ಭುಜಂಗ ನವಿಲು ಸಾ -ರಂಗ ಗಿಣಿಯು ಮಾತಂಗ ಮರಿಯು ಕು-ರಂಗ ಮಧ್ಯೆ ಚರಣಂಗಳೆಡೆಗೆ ವೇ-ದಂಗಳೆರಗೆ ಕಾಮಂಗಳಲುಗೆ ನೇ-ತ್ರಂಗಳಿಗತಿ ಚಿತ್ರಂಗಳಾಗೆ ಆರಂಗನೂದ್ವ ಸಾರಂಗ ಕೇಳಿ ಋಷಿಪುಂಗಸಹಿತ ತಾವುಗಳು ಬರೆ ನರ-ಸಿಂಗನೂದಿದ ಜಗಂಗಳ ಮೋಹಿಸಿ1 ಬಂಗಾರ ಬಟ್ಟಲೊಳಗೆ ಅಂದುಕ್ಷೀರವ ತಂದು ರಂಗಗರ್ಪಿಸುವೆವು ನಾವೆಂದುಹರುಷದೊಳಂದು ಅಂಗನೆಯರು ಮೈಮರೆತು ನಿಂದುಒಲಿಯಬೇಕೆಂದು ಮಂಗಳ ಮಹಿಮನು ನೀನೆಂದುಅತಿಭಕುತಿಯೊಳಂದುತುಂಗ ವಿಕ್ರಮನ ಪದಂಗಳಿಗೆರಗಲುರಂಗ ನೆಗಹಿ ಕರಂಗಳ್ಹಿಡಿಯ ಮೋ-ಹಂಗಳಿಂದ ವಿರಹಗಳ್ಹೆಚ್ಚಿ ರವಿಕೆಂಗಳುಡೆಯ ಕುಚಂಗಳು ಬಿಟ್ಟಾ-ಲಿಂಗಿಸುತಿರೆ ಶ್ರೀ ಮಂಗಳಾಂಗಗೆ ಪು-ಷ್ಪಂಗಳಿಂದ ವರುಷಂಗಳು ಮೇಲ್ ಸುರ-ರಂಗಳು ಸುರಿಯೆ ಉತ್ತುಂಗ ಮಹಿಮ ಹರುಷಂಗಳ ಬೀರುತ ಅಂಗನೆಯರಿಗೆ 2 ಮಂದಿರ ಮಾನಿನಿಯರು ಬಿಟ್ಟುಮನದಲಿ ಕಂಗೆಟ್ಟುಮಂದರೋದ್ಧರನಲ್ಲೆ ಮನವಿಟ್ಟುಕರೆಕರೆಯ ಬಿಟ್ಟುಚಂದದಿ ಕರ್ಪೂರ ವೀಳ್ಯವನಿಟ್ಟುಸಡಗರವ ತೊಟ್ಟುಒಂದಾಗಿ ಚೆದರುತ ತೋಷವ ತೊಟ್ಟುತ್ವರೆ ಬರುವರು ಅಷ್ಟುಅಂದದಿಂದಲಾನಂದವೇರಿ ಮು -ಕುಂದನಂಘ್ರಿ ಮುದದಿಂದ ಸ್ಮರಿಸಿ ಬರು-ವಂದ ನೋಡಿ ಗೋವಿಂದ ಕೊಳಲ ಬಹುಅಂದದೊಳಿಡೆ ಈ ಇಂದುವದನೆಯರುಚಂದ್ರನುದಯವಾದಂತೆ ಆಯ್ತು ಮನಗಂಧ ಕಸ್ತೂರಿ ತಂದು ಆಗ ಹರಿಕಂದರದೊಳಗಿಡೆ ರಂಗವಿಠಲ ದಯದಿಂದ ನೋಡ್ದ ಪುರಂಧ್ರಿಯರನ್ನು3
--------------
ಶ್ರೀಪಾದರಾಜರು
ಲವಕುಶರ ಹಾಡು ಹರಿಹರ ಬ್ರಹ್ಮ ತ್ರಿಮೂರ್ತಿಗಳ ಬಲಗೊಂಡು *ಗುರುಹಿರಿಯರ ಪಾದಕ್ಕೆರಗೀ | ಅಜನ ಪಟ್ಟದ ಶ್ರೀ ಸರಸ್ವತಿಯನೆ ಬಲಗೊಂಡು ತೊಡಗುವೆ ರಾಮರ ಕಥೆಯಾ 1 ಬಣ್ಣದ ಅಕ್ಷತೆ ಕಣ್ಣು ತುಂಬೆ ಪುಷ್ಪ ಸು ವರ್ಣ ದಕ್ಷಿಣೆ ತಾಂಬೂಲಾ | ಉಮ್ಮಿಯ ಪುತ್ರ ಗಣೇಶಗೆ ಅರ್ಪಿಸಿ ವರ್ಣಿಪೆ ಲವಕುಶರ ಕಥೆಯಾ 2 ಕುಲದ ಸ್ವಾಮಿ ಕದ್ರಿ ನರಸಿಂಹನ ಬಲಗೊಂಡು | ಗುರು ಮಧ್ವರಾಯರ ನೆನೆದು | ಮನದಲ್ಲಿ ವಿಷ್ಣು ದೇವತೆಗಳ ಬಲಗೊಂಡು ತೊಡಗುವೆ ರಾಮರ ಕಥೆಯಾ 3 ವೇದಪಾರಾಯಣ ಅಂತ್ಯದ ಪೀಠಕ ಮಾಧವ ಹರಿ ಸುಗೋತ್ರ | ವೇದ ಮೂರುತಿ ಕೊಂಡಪ್ಪನ ಪುತ್ರಿಕೆಗೆ (?) ಹೇಳಿದಳುಹರಿನಾಮ ಕಥೆಯಾ 4 ಯಗ್ನ ಸಂತತಿಯೂ ಪೀಠಕವೂ | ಅಜ್ಞಾನಿ ಮೂಢಜೀವರಿಗೆ 5 ಹರುವುಳ್ಳ ನಿರಯಾಗಿಗಳೂ | ಹರವುಳ್ಳ ಕೈ(?)ಮುನಿವಳ್ಳೇರು ಜಾಣರು ತಿಳಿವೂದು ಅರ್ಥಸಂದೇಶ 6 ನಾಡನ ಕಥೆಯಲ್ಲ ಬೇಡುಂಬ ಪದನಲ್ಲ ನಾಡೊಳಗೆ ಹರಿನಾಮ ಕೇಳಿದ ಜನರಿಗೆ | ವಿಲ್ಲವಾಗುವುದು 7 ಪ್ರಚಂಡರು ರಾಮಲಕ್ಷ್ಮಣರು | ಇತ್ತಬೇಟೆಯನಾಡುವ ಕ್ರಮಗಳ ಚಂದವಿನ್ನೆಂತು ವರ್ಣಿಸಲೆ 8 ತಾಂಬೂಲ ಶ್ರೀಮೊಗದಿಂದೆ | ಇಂದುವದನೆಯ ಬಿಗಿದಪ್ಪಿ ಮುದ್ದಾಡಿದ ಇಂದುವದನೆ ಗರ್ಭವೆಂದ 9 ನಳಿನನಾಭನು ತನ್ನ ಲಲನೇಯ ಮುಖನೋಡಿ ಲಲನೆ ನಿನ್ನ ಪ್ರೇಮವೇನೆ | ಮುನಿಯು ಆಮುನಿಗಳು ಕೂಡಿದ ನಂತ್ರ ವನಭೋಜನ ತನಗೆಂದ್ಲೂ 10 ಹಲವು ಕಾಲವು ಸೀತೆ ಅಸುರರ ವಡನಾಡಿ ನೆನದಳು ಋಷಿಗಳಾಶ್ರಮವಾ | ಹಸನವಲ್ಲವು ಸೀತೆ ಇನ್ನು ನೀನುಳಿವದು ಋಷಿಗಳಾಶ್ರಮಕೆ ಹೋಗೆಂದಾ 11 ಅಯೋಧ್ಯಾಪುರದ ವಾನರರೆಲ್ಲಾ ಬಿಟ್ಟು ಕೈಹಿಡಿದ ಪುರುಷನ ಬಿಟ್ಟು | ನೆನದಾಳು ಋಷಿಗಳಾಶ್ರಮವ 12 ಅಂದು ಶ್ರೀರಾಮರು ಬೇಟೆಗ್ಹೋದೇವೆಂದು ಇಂದು ಡಂಗುರವ ಸಾರಿದರೂ | ಒಂದು ಗಳಿಗೆ ಮುಹೂರ್ತತಡೆಯಲಾಗದು ಎಂದು ಮಂದಿ ಮಕ್ಕಳ ಕರಸಿದರೂ 13 ಬಂದರು ಮಂತ್ರಿ ಮಾನ್ಯರು ಪ್ರಹಸ್ತರು ಬಂದರು ಪ್ರಧಾನೇರು | ಬಂದರು ರವಿಗುರಿನವಿಗುರಿಕಾರರು (?) ಬಂದರು ವಾಲಗದೋರೊಪ್ಪಿದರು 14 ಆಟಪಾಟದೋರು ನೋಟಕ್ಕೆ ದಾರಾರು ಸೂತ್ರದವರು ಸುವ್ವಿಯವರು | ಪಾಟಕ್ಕೆ ದಾರಾರು ಪೊಗಳುವ ಭಂಟರು ರಘು ನಾಥನೋಲಗದಲೊಪ್ಪಿದರೂ 15 ಹೊನ್ನು ಹಲಗೆಯವರು ಬೆನ್ನಬತ್ತಲೆಯವರು ಚಿನ್ನಬಿನ್ನಾಣನಾಯಕರೂ | ಚೆನ್ನಿಗರಾಮರ ಪೊಗಳುವ ಭಂಟರು ಬಿನ್ನಾಣದಿಂದೊಪ್ಪುತಿಹರೂ 16 ಪಟ್ಟಾವಳಿ ಹೊಸಧೋತರವು ಇಟ್ಟರು ಆಭರಣವನ್ನೂ | ಮಕರಕುಂಡಲ ಕಿರೀಟವೂ ಇಟ್ಟರು ನೊಸಲ ಕಸ್ತುರಿಯಾ 17 ಹಾರಮಾಣಿಕನಿಟ್ಟು ಕಾಲುಪೆಂಡೆಯನಿಟ್ಟು ನ್ಯಾವಳದ ಉಡುದಾರನಿಟ್ಟು ಸೂರ್ಯನ ಕುಲದ ಕುಮಾರರು ನಾಲ್ವರು ಏರಿದರು ಹೊನ್ನ ರಥವಾ 18 ವಾಯುವೇಗ ಮನೋವೇಗವೆಂಬೋ ರಥ ಏರಿದರೆ ರಾಮಲಕ್ಷ್ಮಣರೂ | ಸೂರ್ಯ ತಾನೆ ರಥವ ನಡೆಸೆ ಕೂಡ ಬೇಟೆಗೆ ತೆರಳಿದರು 19 ಅತ್ತಿ ಆಲದ ಮರ ಸುತ್ತ ಹೆದ್ದುಮ್ಮರಿ ಉತ್ತತ್ತಿ ಬೆಳಲು ದಾಳಿಂಬ ಉತ್ತಮ ಅಶ್ವತ್ಥ ಇಪ್ಪಿಯ ವನಗಳು ವಿಸ್ತರವನವೊಪ್ಪುತಿಹವೂ 20 ನಾರಂಗ ಬೆರಸಿದ ಕಿತ್ತಳಿ ಹರಿಸಿಣದ ತೋಪು ಎಲಿತ್ವಾಟ ಅರಸುಮಕ್ಕಳು ರಾಮಲಕ್ಷ್ಮಣರೆಲ್ಲರು ಬೆರಸಿ ಬೇಟೆಯ ನಾಡುತಿಹರೂ 21 ಯಾರಾಡಿಗಿಡಗಳು ಕ್ಯಾದೀಗಿವನಗಳು ನಾಗಸಂಪಿಗೆಯ ತೋಪುಗಳು | ಜೋಡೀಲಿ ಭರತ ಶತ್ರುಘ್ನರೆಲ್ಲರು ಕಾಲಾಳು ಬೇಟೆನಾಡಿದರೂ 22 ಉದ್ದಂಡ ಕೇಕಾಪಕ್ಷಿ ಚಂದಾದ ಬಕನ ಪಕ್ಷಿಗಳೂ | ಅಂದಾದ ಆಲಿವಾಣ ಆಲಹಕ್ಕಿಯು ರಾಮ ಚಂದ್ರನು ಬೇಟೆಯಾಡಿದನು 23 ಬೇಟೆನಾಡಿ ಬಂದು ನಿಂತಾರು ನೆರಳಲ್ಲಿ ಒಂದುಗಳಿಗೆ ಶ್ರಮವ ಕಳೆದು ನಂದನವನದಲ್ಲಿ ತನಿಹಣ್ಣು ಮೆಲುವೋರು ಗಂಗೆಯ ಉದಕ ಕುಡಿಯುವೋರು 24 ನಳಿನನಾಭನು ತಾನು ಬಳಲಿ ಬೇಟೆಯನಾಡಿ ನೆರಳಲ್ಲಿ ತುರಗ ಮೇಯಿಸಿದ ಕಿರಿಯಲಕ್ಷ್ಮಣ ದೇವ ತೊಡೆಯನ್ನೆ ಕೊಡು ಎಂದು ಮಲಗೀದ ಒಂದು ನಿಮಿಷವನೂ 25 ಮುಂದಿನ ಆಗೆಂತ್ರವ(?) ಕಂಡನು ಕನಸಿನಲಿ ರಾಮ ಕಂಗೆಟ್ಟು ಮೈಮುರಿದೆದ್ದಾ | ಕಂದ ಲಕ್ಷ್ಮಣ ಕೇಳೊ ಇಂದೆನ್ನ ಸೊಪ್ನದಲಿ ಬಂದಿಹಳೊಬ್ಬ ತಾಟಕಿಯೂ 26 ಇಂದುವದನೆಮುಡಿ ಪಿಡಿದಳೆವೊ ದುಕಂಡೆ ತುಂಡರಾವಣ ಕುಯೋದು ಕಂಡೆ | ಇಂದು ನೀ ಸೀತೆಯ ಕರೆದೊಯಿದು ಕಾನನದಿ ದಿಂಜಾರಿಳಿಸೋದು ಕಂಡೆ 27 ಮುನ್ನ ಅರಿಯದೆ ನಾವು ಬಂದೆವೋ ಲಕ್ಷ್ಮಣ ಇನ್ನು ಸೀತೆಗೆ ಜಯವಿಲ್ಲಾ | ಅಂದು ಶ್ರೀರಾಮರಾ ಬೇಟೆ ಮೂಲಕದಿಂದೆ ಬಂದಾಳು ಮಾಯದ ಗರತಿ | 28 ಬಂದು ಅಯೋಧ್ಯಾಪುರದ ಬೀದಿಯವಳಗೆ ಚಂದದಿ ಕುಣಿದಾಡುತಿಹಳು | ಅಂದು ಶ್ರೀ ರಾಮರ ಅರಮನೆ ಬಾಗಿಲಿಗೆ ಚಂದುಳ್ಳ ದ್ವಾರಪಾಲಕರೂ 29 ಬಂದು ಅಸುರೆ ನಿನ್ನ ಬಿಡವಲ್ಲೆನೆಂದರೆ ಬಂದಡರಿದಳರಮನೆಗೆ ಕಂಡು ಜಾನಕಿ ತಾನು ಕರಸಿದಳಾಗಲೆ ಬಂದಳು ಮಾಯದ ಗರತಿ 30 ಬಂದು ಪಾದಕ್ಕೆರಗಿ ಕೈಮುಗಿದು ನಿಂತಳು ತಂದಳು ನಾಗ ಸಂಪಿಗೆಯಾ | ಅಂಗನೆ ಜಾನಕಿ ನೀಮುಡಿಯೆಂದು ಕೊಟ್ಟರೆ ಸಂದೇಹ ಬಟ್ಟಳಾ ಸೀತೆ 31 ಈನಾಡ ಗರತಿ ನೀನಲ್ಲ | ದಾರು ಬಂಧುಗಳುಂಟು ದಾರ ಬಳಿಗೆ ನೀ ಬಂದೀ 32 ಈರೇಳು ಲೋಕವ ಸುತ್ತಿ ತಿರುಗಿ ಬಂದೆ ನಾಗಲೋಕಕ್ಕೆ ಬಾಹೆನೆಂದು ನಾಗಲೋಕದಿಂದ ದೇವಲೋಕಕ್ಕೆ ಬಂದೆ ದೇವಿಗೆ ಕಾಣಿಕೆ ತಂದೇ 33 ಹೊನ್ನು ಹಣವನೀವೆ ಅನ್ನವಸ್ತ್ರವನೀವೆ ಇನ್ನು ನೀವಲಿದದ್ದು ಈವೆ | ಇನ್ನು ನೀವಲಿದದ್ದು ಚೆನ್ನಾಗಿ ಕೊಡುವೆನು ಬಿನ್ನವಿಸೆ ಗರತಿ ನೀ ಅಂದ್ಲೂ 34 ಹೊನ್ನು ಹಣವನೊಲ್ಲೆ ಅನ್ನವಸ್ತ್ರವನೊಲ್ಲೆ ನಿನ್ನ ಭಾಗ್ಯವು ನಾನೊಲ್ಲೆ | ಮುನ್ನಿನ ಅಸುರರೂಪ ಇನ್ನು ನೀಬರೆದರೆ ಹರಣ ಹೊರುವೆನು 35 ಮುನ್ನವನು ಕಂಡು ಕೇಳರಿಯ | ಪನ್ನಂಗಧರ ರಾಮ ಬಂದರೆ ಬೈದಾರು ಗಮನ ಮಾಡಂದ್ಲೂ36 ಅಂದರೆ ಸೀತೆ ತನ್ನಂಗಕ್ಕೆ ಬರಲೆಂದು ತಂದು ತೊಡೆದಳು ಭಸುಮವನು | ಅಂದೆನ್ನ ವನಕೆ ಪ್ರದಕ್ಷಿಣೆ ಬರುವಾಗ ಉಂಗುಷ್ಟವನು ಕಂಡುಬಲ್ಲೆ 37 ಉಂಗುಷ್ಟದಂದಕ್ಕೆ ಮುಂದೆ ಪಾದವ ಬರಿ ಹಿಂದೆ ಹಿಂಬುಡ ಮೊಣಕಾಲು | ಹೊಂದಿಸಿ ಬರೆ ಎಂದಳವಳು 38 ಚಂದಾದ ಕಾಗದ ಲೆಕ್ಕಣಿಕೆ ಪಿಡಿದು ತಂದು ಕೊಟ್ಟಳು ಸೀತೆ ಕೈಗೆ | ಒಂದು ಕಾಯಕೆ ಹತ್ತು ಸಿರಗಳ ಬರೆದಳು ಮುಂದೆರಡು ಪಾದವ ಬರೆದಳು 39 ಒಂದರ ಹಿಂದೊಂದು ವರ್ಣಿಸಿ ಬರೆದಳು ತಂದು ನಿಲಿಸಿದಳು ರಾವಣನಾ | ಚಂದವಾಯಿತು ದೇವಿ ವರವಕೊಡೆನುತಲಿ ಎಂದೆಂದಿಗೂ ಅಳಿಯದ್ಹಾಗೇ 40 ಅಳಿದು ಉಳಿಯದಿರು ಉಳಿದು ನೀ ಕೆಡದಿರು ಧರಿಯವಳಗೆ ಅಡಗದಿರು | ಕಿರಿಯ ಲಕ್ಷ್ಮಣದೇವ ಹೊಡೆದರೆ ಮಡಿ ಎಂದು ವರವ ಕೊಟ್ಟಳು ಸೀತೆ ಪಠಕೆ 41 ಮರೆ
--------------
ಹೆಳವನಕಟ್ಟೆ ಗಿರಿಯಮ್ಮ