ಒಟ್ಟು 6 ಕಡೆಗಳಲ್ಲಿ , 6 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ವರ್ಣಿಸಿದ ಕವೀಶ್ವರ ನಾರಿಯಜ್ಞಾನಕೆ ಹಾನಿಯ ಮುಕ್ತಿಗೆ ಮೃತ್ಯುವಕಾನನ ರೂಪು ನರಕ ಕುಂಡವೆಂಬಳತಾನು ಕೆಡಲು ಸುಳ್ಳು ಸ್ತುತಿ ಮಾಡಿದ ಪ ಗುದ್ದಲಿ ಮೂಗನು ಸಂಪಿಗೆ ನನೆ ಎಂದಬುದ್ದಲಿ ಮುಖವನು ಪದ್ಮಮುಖವೆಂದಇದ್ದಲಿ ತನುವನು ಇಂದ್ರನೀಲವೆಂದಹದ್ದಿನ ಕೈಯನು ಹರಿ ಸುಂಡಲೆಂದ 1 ಬೆಳ್ಳುಳ್ಳಿ ಹಲ್ಲನು ದಾಳಿಂಬ ಬಿತ್ತವೆಂದಹುಲ್ಲೆಗಣ್ಣೆಂದನು ಸುಳಿಗಣ್ಣಮಲ್ಲಿಗೆ ಮೊಳೆಯೆಂದನು ಮುರುಕಿ ಮಾತುಗಳನ್ನುಜೊಲ್ಲು ಸುರಿವುದಕೆ ಅಮೃತವೆಂದನು 2 ಕುಂಭ ಕುಚವೆಂದನು ಮಾಂಸದ ಮುದ್ದೆಯಬಿಂಬಾಧರವೆಂದನು ಹಂದಿಯ ತುಟಿಯಕಂಬ ಬಾಳೆ ಎಂದನು ಕೊರಡು ತೊಡೆಯನುಬಿಂಬ ಕನ್ನಡಿ ಎಂದನು ಕುಣಿಗಲ್ಲವ 3 ಕಲಹಂಸ ನಡಿಗೆಯೆಂದ ಕೋಣನ ನಡಿಗೆಯಅಳಿಕುಂತಳವೆಂದ ಮುರುಟು ಕೂದಲನುಬಲು ಸಿಂಹನಡುವೆಂದ ಮೊಸಳೆ ನಡುವನ್ನುಹೊಳೆವ ಬೊಂಬೆಯೆಂದ ಕೊಳಕು ಮೈಯನ್ನು 4 ಹೊಲಸು ಮೂಳಿಗೆ ನಾನಾ ಹೋಲಿಕೆಗಳನಿಟ್ಟುತಿಳಿದಂತೆ ಕವಿತಾನು ವರ್ಣಿಸಿದ ಕೊಂಡಾಡಿಸುಲಭ ಚಿದಾನಂದ ಸುಪಥವ ಕಾಣದಲೆಕಳಕೊಂಡ ಕವಿತಾನು ಬಹು ಪುಣ್ಯ ಪಥವ 5
--------------
ಚಿದಾನಂದ ಅವಧೂತರು
ಕಾಪಾಡೆಲೆ ಸಕಲಾಪಧ್ಹಾರಿಣಿ ಕೊಲ್ಲಾಪುರಗತ ಕಮಲೆ ಪ. ಪರಿ ಹರಿಯ ದಯಾಪಾತ್ರಳೆ ಶುಭನೂಪುರಾದಿ ಸುಕಲಾಪೆ ಶೋಭಿತೆ ಭ್ರೂ-ಚಾಪ ಚಲನದಿಂದ ಪವಮಾನನಿ-ಗೆ ಪದದೇ ಭವತಾಪಗಳಳಿದು ಅ.ಪ. ಇಂದೀವರವರಮಂದಿರನಂದಿನಿ ಚಂದ್ರಜಯಿಪ ವದನೆಬೃಂದಾರಕ ಮುನಿವಂದಿತ ಪದಯುಗೆ ಕುಂದಕುಟ್ಮಲರದನೆ ಮದನೆ ಮುಕುಂದ ಹೃದಯಸದನೆಇಂದ್ರನೀಲನಭ ಸುಂದರತನು ಗುಣ-ಸಾಂದ್ರ ಇಂದುಮುಖಿ ಮಂದರಧರಗೋ-ವಿಂದ ಬಂಧುನುತೆ ಬೃಂದಾವನಪತಿನಂದನಂದನನಾನಂದಿನಿ ವಂದಿತೆ 1 ಕನ್ಯಾಮಣಿ ಜಗನ್ಮಾನ್ಯಾಮೃತ ಪಾವನ್ನಾಧರ ಬಿಂಬೆಘನ ಕಲಶ ಕುಚವನ್ನು ಧರಿಪ ಕಟಿಸಣ್ಣ ಘನನಿತಂಬೆ ಅಂಬೆ ಚಿನ್ನಪುತ್ಥಳಿ ಬೊಂಬೆಅನ್ನವಸನ ಧನಧಾನ್ಯಕಾಗಿ ಪರ-ರನ್ನ ಯಾಚಿಸಿ ಬಲು ಖಿನ್ನನಾಗುತಲಿನಿನ್ನನು ಮರೆದೆನು ಎನ್ನವಗುಣಗ-ಳನ್ನು ಎಣಿಸದಿರು ಮನ್ನಿಸು ಬಿನ್ನಪ 2 ಕಪೋಲ ಶೋಭಿತ ಕೀಲಾಲಜಾತಪಾಣಿಕೇಳಿಲಿ ಯಮುನಾಕೂಲದಿ ಹರಿ ದು-ಕೂಲಚೋರನ ರಾಣಿ ಜಾಣೆ ಶುಶ್ರೋಣೆ ಜಗತ್ರಾಣೆಕಾಳಕೂಟಸಮ ಕೀಳು ವಿಷಯದಲಿಬೀಳುವುದೆನ್ನ ಮನ ಕೀಳಿಸಿ ಶ್ರೀಗೋ-ಪಾಲವಿಠಲನನುಗಾಲ ಸೇವಿಪಂತೆಶೀಲವೀಯೆಯೆಂದು ಕೇಳುವೆ ಲಾಲಿಸೆ 3
--------------
ಗೋಪಾಲದಾಸರು
ಪೊಗಳಲರಿಯೆನೆ ಲೋಕಮಾತೇ ನಿನ್ನ ಸೊಗಸಾದ ರೂಪುರೇಖೆಯ ಸಿಂಧುಜಾತೇ ನಿಗಮವಿಖ್ಯಾತೇ ಪ ಅಳಕ ನಿಚಯವು ಇಂದ್ರನೀಲಗಳು ತುಂಬಿಗಳು ತಳಪುಗಳು ಯೆಸೆವ ನಳಿನಗಳು ಬಾಳೆಗಳು ಚೆಲುವಹಿ ಸುನಾಸಿಕವು ಅಲಕೆ ಸುಮವು ಚಂಪಕವು ಅಲರ್ವಿಲ್ಲಿನ ಧನುವೋ ಪುರ್ಬುಗಳೋ ಪೊಳೆವರದನದಸಾಲುಗಳುಕಳಸಗಳೋ ಕುಂಡಲಗಳೋ ವಿಲಸದಧರವು ಬಿಂಬಫಲವೋ ನವವಿದ್ರುಮವೋ ಅಳವಟ್ಟ ಸವಿನುಡಿಯು ಗಿಣಿಯ ಸೋಲಿಪ ಪರಿಯೋ ಕಳೆ ಪೆರ್ಚಿದಾನನವೋ ಶಶಿಯೋ ಭಳಿರೆ ಮಳಯಜಗಂಧಿನಿ ಮಹೇಶರಿಪು ಜನನೀ 1 ಗಳವು ಶಂಖವು ಮೆರೆವ ಕದಪುಗಳು ಮುಖರಗಳು ಕುಸುಮ ಮಾಲೆಗಳು ಸುಲಲಿತವಯವವೋ ಲತಾವಳಿಗಳ ತರಂಗವೋ ತಳಿವ ಪೂಜಡೆಯೋ ಸುಲಿಪಲ್ಲವವೋ ತೊಳಗುವ ತೊಡೆಯೆನಲೋ ಸಲಿಲಜಾಗಾರೇ ಸಮ್ಮೋಹನಾಕಾರೇ ಸೌಂದರ್ಯಭರಿತೆ 2 ವರಜಂಘೆಗಳು ಪಂಚಶರನ ಶರಧಿಗಳೋ ಸರಸೀರುಹ ಕೆಂದಳಿರೋ ಚರಣಗಳು ನಖಗಳು ಸುರುಚಿರಾಂಬಕೀ ದಯಾಕಾರೇ ಶುಭಚರಿತೆ ವಿಖ್ಯಾತೆ ಪುರಹರ ಸುರೇಶ್ವರ ಸುಪೂಜಿತಾಂಘ್ರಿಸರೋಜೇ ಭಕ್ತ ಮಂದಾರೇ ವರವೇಲಾನಗರವಾಸಿ ವೈಕುಂಠಚನ್ನಿಗರಾಯನರಸಿ ಗುಣರಾಸಿ ದುರಿತಾಸಿ ನಮೋ ಪರಮಪದದಾಯಕಿಯೆ ಸೌಮ್ಯನಾಯಕಿಯೆ 3
--------------
ಬೇಲೂರು ವೈಕುಂಠದಾಸರು
ಮಹಾಲಕ್ಷ್ಮೀ ಅಷ್ಟಕಂ ಪಂಕಜ ಮಾಲಿನಿಪಾಹಿಮಾಂ ಕರವೀರವಾಸಿನಿ ಪಾಹಿ ರಾಘವ ಕಾಮಿನಿ ಪ ಚಂದ್ರಮಂಡಲ ಹಾಸ ಸನ್ಮುಖ ಮಂದಹಾಸ ಸುಶೋಭಿತೆಸಿಂಧುರೇಂದ್ರ ಕರಾಮೃತೌಘ ಸುಗಂಧ ಬಿಂದು ನಿಷೇಚಿತೆಕುಂದರೋಜ್ವಲ ಇಂದ್ರನೀಲ ಮಣೀಂದ್ರಹಾರ ವಿಲಾಸಿತೇಬಂದ್ರಿರಾಜಸುತೇವ ಸೂನುಮನಾದಿ ಬಂಧ ವಿವರ್ಜಿತೇ 1 ಸಾಂಬ ಸುಶಾಂತಿ ಕಾಂತಿ ಸಹೋದ್ಭವೆ 2 ಚಾರು ಸುರಾಳಿ ಮೌಳಿಗ ಹಸ್ತತೇ 3 ತಪ್ತಕಾಂಚನ ನೂಪುರೋಜ್ವಲ ರಕ್ತಪಾಲ ಸರೋರಹೆಚಿತ್ರಪೇಟ ಪಟೋಲ್ಲ ಸತ್ಕಟೆ ರತ್ನ ಕಾಂಚಿ ಗುಣೋದ್ಭವೇನಿತ್ಯತೃಪ್ತ ನಿರಂಜನೈಸುರ ಮೃತ್ಯುಮೋಹನ ವಿಗ್ರಹೆತತ್‍ಕೃಪೈವಪು ಮೃತ್ಯುಸಾಧನ ಸಪ್ತ ಮೋಡಿಹ ವಿದ್ಮಹೆ 4 ಅಂಬಜಾವಕ ಲಕ್ಷ್ಮೀ ಮೇಷ ಕದಂಬಿನೀನಿಲಯಸ್ಥಿತೆಕಂಬುಕಂಜರ ತಾರಿಬೇಟ ಕರಾಂಬು ಸಂಭವ ಸೇವಿತೆಶಂಭರಾರಿ ಸುತಾಂಘ್ರಿಪಂಕಜೆ ಬಿಂಬರಾಹಿ ಭೂಸುತೆಸಾಂಬಹೀಂಬ ನಿಹಾ ಸುದರ್ಶಯ ಜಂಜವೈರಿನಿ ಸೇವಿತೆ 5 ತಲ್ಪ ಮಂದ ಸೌಭಗ ಶಾಲನಂವಂದ್ಯ ಮಾನ ವಿದೇಂದ್ರ ದೈವತ ವೃಂದ ವೈಭವದಾಯಿನಂಸುಂದರಾಂಗಿಣಿ - ನಿವೇದಗೇಹ ಭವಾಂಧಿ ಪೋಪನೀ ಶೋರ್ಪಣಂ 6 ಜೀವವರ್ಗ ಹೃದಾಲಯ ಸ್ಥಿತ ಭೂವರಾಹಸಹಾನನೇಪಾವನೀತಾಹೇ ವಸೇದ್ರುಮ ಹಾನು ಭಾವ ಶಿಖಾಮಣಿಹಾವಭಾವ ವಿಲಾಸಿನಾಕಿ ಸುವಾಸಿನಿನುತ ಸದ್ಗುಣಿಸೇವಕೇಯ ವಿಭಾವಿತಾಖಿಲ ಭಾವಕಾಯದ ಶಿಕ್ಷಣಿ 7 ಇಂದಿರೇಶ ಸತೀಂದುಮೌಳಿ ಕರಾರವಿಂದ ನಿಷೇವಣೇಚಂದ್ರಮಾರುತರೇಂದು ಸೈಂದವವೀಂದ್ರ ಪೂರ್ವಸು ವಾಹನೇಅಂಧಕೂಪ ಸಮಾನ ದುರ್ಭವ ಬಂಧ ಸೇಘನೀ ಪೋಷಿಣಿನಂದನಂದನ ಮಾಸುದರ್ಶಯ ಬಂಧುರಾಮೃತ ಭಾಷಿಣಿ 8
--------------
ಇಂದಿರೇಶರು
ಸೋಮಶೇಖರ ತಾನೆ ಬಲ್ಲ ಶ್ರೀ-ರಾಮನಾಮಾಮೃತ ಸವಿಯನೆಲ್ಲ ಪ ಮದನಪಿತಾಯೆಂದು ಕುಣಿಕುಣಿದಾಡಲುಕೆದರಿದ ಕೆಂಜೆಡೆಗಳ ಪುಂಜದಿಒದಗಿದ ಗಂಗೆ ತುಂತುರು ಹನಿಗಳ ಕಂಡುಪದಮಜಾಂಡಹಿತ ರಾಮರಾಮಾ ಎಂಬ 1 ಆನಂದ ಜಲದ ಸೋನೆಗೆ ಲಲಾಟ-ದಾನೇತ್ರ ಬಡಬಾನಲನಂತಿರೆ ಏನೆನ್ನಲಿಬಹುದು ಸುಖ ಸಾಗರದೊಳುತಾನೆದ್ದು ಮುಳುಗುತ ರಾಮ ರಾಮಾಯೆಂಬ2 ಶಿರದ ಗಂಗೆಯ ವರ ಅಗ್ಗಣಿಯಾಗಿರೆಸರಸಿಜ ಬಾಂಧವ ಚೆಂದಿರ ದೀಪಉರಿಗಣ್ಣಿನ ಹೊಗೆ ಧೂಪವನೇರಿಸಿಕರಣವೆ ನೈವೇದ್ಯಯೆಂದು ರಾಮ ಎಂಬ 3 ಚಂದದ ಸ್ಫಟಿಕದ ಕರಡಿಗೆಯಲ್ಲಿಪ್ಪಇಂದ್ರನೀಲದ ಚೆನ್ನಪುತ್ಥಳಿಯಂತೆಚಂದದಿ ತನ್ನಯ ಹೃದಯ ಮಧ್ಯದಿ ರಾಮ-ಚಂದ್ರ ಹೊಳೆಯೆ ಶ್ರೀ ರಾಮ ರಾಮ ಎಂಬ4 ಫಣಿ ಮಣಿಯಾಘಾತನಾದ ತಾಳವಾಗೆ ರಾಮ ರಾಮ ಎಂಬ 5 ಒಮ್ಮೆ ಹರಿಯ ಗುಣ ಅಜಪೇಳಲಾಯೆಂಬಒಮ್ಮೆ ನಾರದ ಪಾಡೆ ತತ್ಥೈಯೆಂಬಒಮ್ಮೆ ರಾಣಿಗೆ ಪೇಳಿ ಶಿರವನೊಲಿದಾಡುವಒಮ್ಮೆ ತನ್ನೊಳು ನೆನೆಸಿ ರಾಮ ರಾಮ ಎಂಬ6 ಅರಸಂಚೆಯ ಕಂಜ ಪುಂಜಗಳಲಿಪ್ಪಅರೆ ಮುಚ್ಚಿದ ಹದಿನೈದು ನೇತ್ರಗಳಿಂಹರಿಯ ಕೊಂಡಾಡುತ ಪಂಚ ಮುಖಗಳಿಂದಸಿರಿಕೃಷ್ಣ ಮುಕುಂದ ನರಹರಿ ರಾಮ ಎಂಬ7
--------------
ವ್ಯಾಸರಾಯರು
ಪವಡಿಸು ಪರಮಾತ್ಮನೆ ಸ್ವಾಮಿಭವರೋಗ ವೈದ್ಯನೆ ಭಕ್ತರ ಪ್ರಿಯನೆ ಪಕುಂದಣದಿ ರಚಿಸಿದ ಸೆಜ್ಜೆಯ ಮನೆಯಲಿಇಂದ್ರನೀಲ ಮಣಿವiಂಟಪದಿ ||ಚಂದ್ರಕಾಂತಿಯ ಠಾಣದೀವಿಗೆ ಹೊಳೆಯಲುಸಿಂಧುಶಯನ ಆನಂದದಿಂದಲಿ 1ತೂಗುಮಂಚದಿ ಹಂಸತೂಲದ ಹಾಸಿಗೆನಾಗಸಂಪಿಗೆಯ ಹೂವಿನ ಒರಗು ||ಸಾಗರಸುತೆಯ ಸಮ್ಮೇಳದಲಿ ನಿಜಭೋಗವ ಪಡುತ ಓಲಾಡುತಿರು 2ಸದ್ದಡಗಿತು ಗಡಿಯಾರ ಸಾರಿತು ಬೇಗಮುದ್ರೆಗಳಾಗಿವೆ ಬಾಗಿಲಿಗೆ ||ತಿದ್ದಿದಧವಳ ಶಂಖಗಳ ನಾದದಿಂದಪದ್ಮನಾಭ ಶ್ರೀ ಪುರಂದರವಿಠಲ3
--------------
ಪುರಂದರದಾಸರು