ಒಟ್ಟು 6 ಕಡೆಗಳಲ್ಲಿ , 5 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಯದ ಮಾತೆಲ್ಲ | ಸುಳ್ಳದೆ | ಖರೆಯಾಗಿ ನಿಂತದೆ ಪ ಗಂಧರ್ವಪುರದಿಂದ | ನೋಡಮ್ಮಾ | ಬಂಜೆಯ ಮಗತಾ ಬಂದು | ಭೀಷ್ಮನ ಮಗಳಿಗೆ | ಮದುವ್ಯಾದ 1 ಸೊಂಟನ ಕೈಯಿಂದ | ನೋಡಮ್ಮಾ | ಗಗನ ಪುಷ್ಪವ ತರಿಸಿ |ಕೊರಳೊಳು | ಮಾಲೆಯ ಹಾಕಿದರಂತೆ 2 ಪರ್ವತ ಕೊನೆ ಮೇಲೆ | ನೋಡಮ್ಮಾ | ಮೃಗಜಲ ನದಿಯಂತೆ |ಅದರೊಳು | ಕಲ್ಲಿನ ಹರಗೋಲಂತೆ 3 ಮೊಲವೆದ್ದು ಇರಿಯಲ್ಕೆ | ನೋಡಮ್ಮ | ಹರಗೋಲನ ಹರಿದು | ಒಳಗಿದ್ದ ಬಂಜಿಯ ಮಗ ಹರಿದ್ಹೋದಾ 4 ಮೀನುಗಳಿಷ್ಟೂ ಕಂಡೂ | ನೋಡಮ್ಮ | ಶವ ತೆಗೆದು ಹೊರಗ್ಹಾಕಿ | ವನಕೊಯ್ದು | ದಹನವ ಮಾಡಿದವಂತೆ 5 ಇಷ್ಟು ಕುರುಡಾ ಕಂಡಾ | ನೋಡಮ್ಮಾ | ಹೆಳವಾ ಹೇಳಲಿ ಬಂದಾ | ಕಿವುಡನಿಗೆ | ಮೂಕ ಹೇಳಿದನಂತೆ 6 ಪರಿ ಸಂಸಾರ ನೋಡಮ್ಮಾ | ಮಾಯದ ವಿಸ್ತಾರ | ಶಿವರಾಮಾ ತಾ | ಕೇಳಿ ಬೆರಗಾದಾ 7
--------------
ಶಿವರಾಮರು
ಆರೇನು ಮಾಡುವರು ಅವನಿಯೊಳಗೆ | ಕರ್ಮ ಫಣಿಯಲ್ಲಿ ಬರೆದುದಕೆ ಪ ಮಾಡಿದಡಿಗಿಯು ಕೆಡಲು ಮನಿಯ ಗಂಡನು ಬಿಡಲು | ಸತಿ ತನ್ನ ಕುಣಿಸ್ಯಾಡಲು ನಿಜದಿ || ಗೋಡೆಗೆ ಬರೆದ ಹುಲಿ ಘಡಘಡನೆ ತಿನಬರಲು | ಆಡಿದ ಮತುಗಳು ಅಖಿಳಿರು ನಿಜವೆನಲು 1 ಹೊಲ ಬೇಲಿ ಮೆಯ್ದರೆ ಮೊಲ ಇರಿಯ ಬಂದರೆ | ತಲೆಗೆ ತನ್ನ ಕೈ ಪೆಟ್ಟು ತಾಕಿದರೆ || ಹೆರಳು ಹಾವಾದರೆ ಗೆಳೆಯ ರಿಪುವಾದರೆ | ಕಲಿಸಿದ ಅವಲಕ್ಕಿ ಕಲಪರಟಿ ನುಂಗಿದರೆ 2 ಹೆತ್ತ ತಾಯಿ ಹಿಡಿದು ಮಕ್ಕಳಿಗೆ ವಿಷ ಹಾಕಿದರೆ | ಪೆತ್ತ ತಂದೆಯು ಹೊರಗೆ ಮಾಡಿದರೆ || ತೊತ್ತು ಅರಸಿಗೆ ಪ್ರತ್ಯುತ್ತರವನಾಡಿದರೆ | ಕತ್ತಲೆ ಬೆನ್ನಟ್ಟಿ ಕರಡ್ಯಾಗಿ ಬಂದರೆ 3 ಕಣ್ಣವೊಳಗಿನ ಗೊಂಬಿ ಕಾದ ಬಂದರೆ | ಹೆಣ್ಣಿನ ಹರಟೆ ಹೆಚ್ಚಾದರೆ | ಅನ್ನವನು ಉಣ್ಣಲು ಅಜೀರ್ಣವಾದರೆ | ಪುಣ್ಯಕ್ಷೇತ್ರಗಳಲ್ಲಿ ಪಾಪ ಅಟ್ಟಿಸಿದರೆ 4 ಏರಿ ಕುಳಿತ ಕುಂಬಿ ಎರಡಾಗಿ ಮುರಿದರೆ | ವಾರಿಧಿಗಳು ಮೇರೆ ಮೀರಿದರೆ || ಆರಿದ ಇದ್ದಲಿಗಳು ಅಗ್ನಿಯಾದರೆ | ನಮ್ಮ ವಿಜಯವಿಠ್ಠಲನಿರುವ ತನಕ 5
--------------
ವಿಜಯದಾಸ
ನಾರಾಯಣ ಎಂಬ ನಾಮದ ಬೀಜವನು ನಾಲಗೆಯಕೂರಿಗೆಯ ಮಾಡಿ ಬಿತ್ತಿರಯ್ಯ ಪ ತನುವ ನೇಗಿಲು ಮಾಡಿ ಹೃದಯ ಹೊಲವನು ಮಾಡಿತನ್ವಿರಾ ಎಂಬ ಎರಡೆತ್ತ ಹೂಡಿಜ್ಞಾನವೆಂಬೊ ಮಿಣಿಯ ಕಣ್ಣಿ ಹಗ್ಗವ ಮಾಡಿಧ್ಯಾನವೆಂಬ ಧಾನ್ಯವ ನೋಡಿ ಬಿತ್ತಿರಯ್ಯ 1 ಕಾಮಕ್ರೋಧಗಳೆಂಬ ಗಿಡಗಳನು ತರಿಯಿರಯ್ಯಮದಮತ್ಸರವೆಂಬ ಪೊದೆಯ ಇರಿಯಿರಯ್ಯಪಂಚೇಂದ್ರಿಯಗಳೆಂಬ ಮಂಚಿಕೆಯ ಹಾಕಿರಯ್ಯಚಂಚಲವೆಂಬ ಹಕ್ಕಿಯ ಓಡಿಸಿರಯ್ಯ 2 ಉದಯಾಸ್ತಮಾನವೆಂಬ ಎರಡು ಕೊಳಗವ ಮಾಡಿ ಆಯುಶ್ಯದ ರಾಶಿಯನು ಅಳೆಯಿರಯ್ಯಇದು ಕಾರಣ ಕಾಗಿನೆಲೆಯಾದಿಕೇಶವನಮುದದಿಂದ ನೆನೆನೆನೆದು ಸುಖಿಯಾಗಿರಿಯ್ಯ3
--------------
ಕನಕದಾಸ
ನಾವು ಕುರುಬರು, ನಮ್ಮ ದೇವರು ಬೀರಯ್ಯಕಾವ ನಮ್ಮಜ್ಜ ನರಕುರಿಯ ಹಿಂಡುಗಳ ಪ ಅಷ್ಟಮದ ಮತ್ಸರಗಳೆಂತೆಂಬ ಟಗರುಗಳುದೃಷ್ಟಿ ಜೀವಾತ್ಮನೆಂತೆಂಬ ಆಡುಸೃಷ್ಟಿ ಸಿದ್ಧ ಪ್ರಸಿದ್ಧವೆಂತೆಂಬ ಹೋತಗಳುಕಟ್ಟಿ ಕೋಲಿನಲಿ ಇರಿಯುತಿಹ ನಮ್ಮಜ್ಜ 1 ವೇದಶಾಸ್ತ್ರ ಪುರಾಣವೆಂತೆಂಬ ಶ್ವಾನಗಳುಕಾದಿದ್ದು ನಮ್ಮಜ್ಜನ ಹಿಂಡೊಳಗೆಹಾದಿಗಾಣದೆ ಕೂಗಿ ಬಾಯಾರಿ ಕಾಲ್ಗೆಡಲುಆದರಿಸಿ ಅಂಬಲಿಯನೆರೆವ ನಮ್ಮಜ್ಜ 2 ಅರಿವೆಂಬ ಮರಿಗಳು ಹಿಂಡಿನೊಳಗಡೆ ಬರಲುಮರೆವೆಂಬ ವ್ಯಾಘ್ರ ಕಿರುಬ ತೋಳಗಳು ಹೊಕ್ಕುತರುಬಿ ಹಿಂಜಾವದಲಿ ಕುರಿಯ ಮುರಿವುದ ಕಂಡು ಅರಿತು ಅರಿಯದ ಹಾಗೆ ಇರುವ ನಮ್ಮಜ್ಜ 3 ಹುಟ್ಟುದಕೆ ಮೊದಲಿಲ್ಲ ಸಾವುದಕೆ ಕೊನೆಯಿಲ್ಲಹುಟ್ಟು ಸಾವಿನ ಹೊಲಬ ಬಲ್ಲ ನಮ್ಮಜ್ಜಅಷ್ಟು ಪ್ರಾಣಿಗಳಿಗೆ ಇಷ್ಟು ಅಂಬಲಿ ಮಾಡಿಹೊಟ್ಟೆ ತುಂಬುವ ಹಾಗೆ ಎರೆವ ನಮ್ಮಜ್ಜ 4 ಕಲಿಯುಗಕೆ ಗೌಡನಿವ ಸಂಗಾತಿ ಮಂತ್ರಿಸುತಕಲಿಯುಗಂಗಳನೆಲ್ಲ ಪೊರೆವಾತನೀತಜಲಜಾಕ್ಷ ಕಾಗಿನೆಲೆಯಾದಿಕೇಶವನ ಮನವೊಲಿಸಿ ಭಜಿಸದ ಮನುಜ ಹುಚ್ಚು ಕುರುಬ 5
--------------
ಕನಕದಾಸ
ಲೋಲನೇಳುವದಕಿನ್ನ ಮುನ್ನ ಪ ತಾಳಮೇಳದವರೆಲ್ಲಿ ಬಂದು ದ್ವಾರ ದೊಳು ಸೇರಿ ಪಾಡುತಿಹರೊ ನಿಂದು 1 ಸುರರು ಸಭೆ ಯಲಿ ಬಂದಾಗಲೆ ಓಲೈಸುತಲಿಹರು 2 ತಡಮಾಡಬೇಡಯ್ಯ ನೀನು ನಿನ್ನ ಒಡೆಯನೆದ್ದು ನಿನ್ನನು ಕೂಗ್ಯಾನೊ 3 ಕಪಿಯಾಗಿ ನೀ ಪುಟ್ಟಬೇಕಂತೆ ತಾನು ವಿಪಿನವಾಸಕಾಗಿ ತೆರಳುವನಂತೆ 4 ಶರಧಿಯ ನೀ ದಾಟಬೇಕಂತೆ ಅಲ್ಲಿ ಸಿರಿಗೆ ಮುದ್ರೆಯ ನೀನೀಯಬೇಕಂತೆ 5 ದುರುಳನ ಪುರವ ನೀನುರುಹಬೇಕಂತೆ ಅವನ ಪರಿವಾರವೆಲ್ಲವ ನೀ ತರಿಯಬೇಕಂತೆ 6 ಕುಂತೀಲಿ ನೀ ಪುಟ್ಟಬೇಕಂತೆ ತಾನು ಕಂತುವಿಗೆ ಪಿತನಾಗುವನಂತೆ 7 ಮಗಧ ಮುಖ್ಯರ ನೀ ಸೀಳಬೇಕಂತೆ ದೇವ ಜಗಕೆ ಮಂಗಳವ ನೀ ಮಾಡಬೇಕಂತೆ 8 ದುರುಳ ದುಶ್ಶಾಸನನ ಇರಿಯಬೇಕಂತೆ ಅವನ ಕರುಳ ನಿನ್ನರಸಿಗೆ ಮುಡಿಸಬೇಕಂತೆ 9 ಮುದ್ದು ಭಾರತಿಯ ನೀ ಬಿಡಬೇಕಂತೆ ನೀನು ಹೊದ್ದು ಕಾವಿಬಟ್ಟೆ ಯತಿಯಾಗಬೇಕಂತೆ 10 ಅದ್ವೈತ ಮತವನು ನೀ ಖಂಡ್ರಿಸಬೇಕಂತೆ ಗುರು ಮಧ್ವಮುನಿಯೆಂದು ನೀ ಮೆರೆಯಬೇಕಂತೆ 11 ಬದರಿಕಾಶ್ರಮಕೆ ಪೋಗಬೇಕಂತೆ ಅಲ್ಲಿ ಬಾದರಾಯಣನಾಗಿ ತಾನಿರ್ಪನಂತೆ 12 ಹಿಂಗದೆ ಶ್ರೀಶನ ನೀ ನುತಿಸಬೇಕಂತೆ ಸಿರಿ ರಂಗೇಶವಿಠಲ ನಿನಗೊಲಿದಿಹನಂತೆ 13
--------------
ರಂಗೇಶವಿಠಲದಾಸರು
ಎಚ್ಚರದಲಿ ನಡೆ ಮನವೆ - ನಡೆಮನವೆ - ಮುದ್ದುಅಚ್ಯುತನ ದಾಸರ ಒಡಗೂಡಿ ಬರುವೆ ಪ.ಧರ್ಮವ ಮಾಡುವುದಿಲ್ಲಿ - ಇನ್ನುಬ್ರಹ್ಮನ ಸಭೆಯ ತೋರುವರು ಮುಂದಲ್ಲಿಕರ್ಮಯೋಜನೆಗಳು ಇಲ್ಲಿ - ಬೆನ್ನಚರ್ಮವ ಸುಲಿಸಿ ತಿನ್ನಿಸುವರು ಅಲ್ಲಿ 1ಅನ್ನದಾನವ ಮಾಳ್ಪುದಿಲ್ಲಿ - ಮೃಷ್ಟಾನ್ನವ ತಂದು ಮುಂದಿಡುವರು ಅಲ್ಲಿಅನ್ಯಾಯ ನುಡಿಯುವುದಿಲ್ಲಿ - ಭಿನ್ನಭಿನ್ನವ ಮಾಡಿ ತಿನ್ನಿಸುವರು ಅಲ್ಲಿ 2ಮೋಸವ ಮಾಡುವದಿಲ್ಲಿ - ಸೀಸಕಾಸಿ ಬಾಯೊಳಗೆ ಹೊಯ್ಯುವರಲ್ಲಿದಾಸರ ಪೂಜಿಪುದಿಲ್ಲಿ - ಉರ್ವೀಶಾಧಿಪತಿ ಬಂದನೆಂಬರು ಅಲ್ಲಿ 3ವಂಚನೆ ಮಾಡುವದಿಲ್ಲಿ - ಕಾದಹಂಚಿನ ಪುಡಿಯ ತಿನ್ನಿಸುವರು ಅಲ್ಲಿಪಂಚಾಮೃತದ ಪೂಜೆ ಇಲ್ಲಿ ನಿನಗೆಕಂಚು - ಕಾಳಾಂಜಿಯ ಪಿಡಿದಿಹರಲ್ಲಿ 4ಚಾಡಿಯ ನುಕಿವುದು ಇಲ್ಲಿ ಅದ -ನಾಡಿದ ನಾಲಗೆ ಸೀಳುವರಲ್ಲಿಬೇಡಬಂದರೆ ಬಯ್ವುದಿಲ್ಲಿ ನಿನ್ನ -ಓಡಾಡುವ ಕಾಲು ಕತ್ತರಿಪರಲ್ಲಿ 5ಮದ್ದಿಕ್ಕಿ ಕೊಲ್ಲುವುದಿಲ್ಲಿ ಒದ್ದು -ಹದ್ದು ಕಾಗೆಗಳಿಗೆ ಈಯುವರಲ್ಲಿಕ್ಷುದ್ರ ಬುದ್ಧಿಯ ನಡೆಪುದಿಲ್ಲಿ ದೊಡ್ಡ -ಗುದ್ದಲಿ ಬೆನ್ನೊಳು ಎಳೆಯುವರಲ್ಲಿ 6ಕೊಟ್ಟಭಾಷೆಗೆ ತಪ್ಪುವುದಿಲ್ಲಿ ಕೈಯ -ಕಟ್ಟಿ ಈಟಿಯಿಂದ ಇರಿಯುವರಲ್ಲಿಕೊಟ್ಟ ಧರ್ಮವ ನಡೆಸುವುದಿಲ್ಲಿ ಬಲುಶ್ರೇಷ್ಠ ನೀನೆಂದು ಕೊಂಡಾಡುವರಲ್ಲಿ 7ಆಲಯದಾನವು ಇಲ್ಲಿ ವಿ -ಶಾಲ ವೈಕುಂಠನ ಮಂದಿರವಲ್ಲಿಆಲಯ ಮುರಿಯುವುದಿಲ್ಲಿ ನಿನ್ನ -ಶೂಲದ ಮೇಲೇರಿಸಿ ಕೊಲುವರಲ್ಲಿ 8ತಂದೆ ಮಾತನು ಮೀರುವುದಿಲ್ಲಿ ಹುಲ್ಲು -ದೊಂದೆಯಕಟ್ಟಿ ಸುಡಿಸುವರಲ್ಲಿತಂದೆ ತಾಯ್ಗಳ ಪೂಜೆ ಇಲ್ಲಿ ದೇ -ವೇಂದ್ರನ ಸಭೆಯ ತೋರುವರು ಮುಂದಲ್ಲಿ 9ಗಂಡನ ಬೈಯ್ಯುವುದಿಲ್ಲಿ ಬೆಂಕೆಕೆಂಡವ ತಂದು ಬಾಯಲಿ ತುಂಬುವರಲ್ಲಿಕೊಂಡೆಯ ನಡಿಸುವುದಿಲ್ಲಿ ಬೆಂಕೆಕುಂಡವ ತಂದು ತಲೆಯಲಿಡುವರಲ್ಲಿ 10ಹೊನ್ನು ಹೆಣ್ಣನು ಬಯಸುವುದಿಲ್ಲಿ ನಿನ್ನಕಣ್ಣಿಗೆ ಸುಣ್ಣವ ತುಂಬುವರಲ್ಲಿಕನ್ಯಾದಾನವ ಮಾಳ್ಪುದಿಲ್ಲಿ ನಮ್ಮಚಿನ್ನಪುರಂದರವಿಠಲನೊಲಿವನು ಅಲ್ಲಿ11
--------------
ಪುರಂದರದಾಸರು