ಒಟ್ಟು 10 ಕಡೆಗಳಲ್ಲಿ , 7 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದೇ ಇದೇ ಬ್ರಹ್ಮಮಯ ಸದಮಲಾನಂದೋದಯ ಉದಯಾಸ್ತಮಾನವಿಲ್ಲದೆ ಸದೋದಿತ ಭಾಸುತಿದೆ ಧ್ರುವ ವಸ್ತುವಿದೆ ನಿತ್ಯವಾದ ಅತ್ತ್ಯೋತ್ತಮಾನಂದಬೋಧ ಎತ್ತ ನೋಡಿದರತ್ತ ಹತ್ತಿಲೆ ಸೂಸುತಲ್ಯದೆ 1 ಸತ್ಯಸದಾನಂದೋಬ್ರಹ್ಮ ನಿತ್ಯತೃಪ್ತ ನಿರುಪಮ ಅತ್ತಿತ್ತಲಾಗದೆ ಪೂರ್ಣಮತ್ತವಾಗ್ಯೆನ್ನೊಳಗದೆ 2 ಗುಪಿತ ನಿಜ ಸಕಲಾಗಮ ಪೂರಿತ ಶುಕಾದಿಗಳೂ ಸೇವಿತ 3 ಸರ್ವಸಾಕ್ಷಿ ಸರ್ವಾಧಾರ ಸರ್ವರೊಳು ಸರ್ವೇಶ್ವರ ಸರ್ವಮಿದÀಂ ಖಲುಬ್ರಹ್ಮವೆಂದು ಶ್ರುತಿ ಸಾರುತಿದೆ 4 ಇಹಪರ ಪರಿಪೂರ್ಣ ಮಹಾಗುರು ನಿರಂಜನ ಮಹಿಪತಿ ಬಾಹ್ಯಾಂತ್ರದೊಳು ಸಹಕಾರ ಸಾಕ್ಷಾತ್ಮವಿದೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡಿರೋ ಸಂಧ್ಯಾನ ಸದಾ ಆತ್ಮಾನುಸಂಧಾನ ಧ್ರುವ ತಿಳಿಯದೆನಗೆ ತ್ರಿಕಾಲಾ ಹೊಳವುತಿಹ್ಯದು ಸೂರ್ಯಅಚಲಾ ಇಳೆಯೊಳಾಯಿತು ಧರ್ಮಾನುಕೂಲ 1 ಚಂಚಲೆಂಬುದೆ ಅಚಮನ ಮುಂಚೆ ಸಂಧ್ಯಾನಕಿದೆ ಸಾಧನ ವಂಚÀನಿಲ್ಲದಾಯಿತು ಅಘ್ರ್ಯದಾನಾ 2 ಪರಮೇಷ್ಠಿ ಪರಬ್ರಹ್ಮಋಷಿಃ ಅರಿತು ಪ್ರಣಮ್ಯ ಸಾಧಿಸಿ ತಿರುಗಿನೋಡಿಘನ ಸ್ಮರಿಸಿ ಕರಿಗಿ ಹೋಯಿತು ಪಾಪದ ರಾಶಿ 3 ಆ ಹಪವೆ ಗಾಯತ್ರಿಮಂತ್ರ ಬೀಜಾಕ್ಷರವಿದು ಪವಿತ್ರ ರಾಜಿಸುತಿಹ್ಯದು ಸರ್ವಾಂತರಾ ನಿಜಗುಹ್ಯ ಋಷಿಮುನಿಗೋತ್ರ 4 ಸದೋದಿತ ಗುರುಭೋಧಪೂರ್ಣ ಇದಕಿಲ್ಲ ಉದಯಾಸ್ತಮಾನ ಇದೇ ಮಹಿಪತಿ ಸಂಧ್ಯಾನ ಸದಾ ನಿತ್ಯಾನುಂಸಂಧಾನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎಲ್ಲಿ ಭಯಗಳು ಹರಿಯ ಭಕುತರಿಗೆ ಇಲ್ಲ ಪ ಇಲ್ಲವೋ ಕಾಣೋ ಎಂದಿಗಾದರು ಮರುಳೆ ಅ.ಪ ಹುಲಿ ಇಲಿಯಾಗುವುದು ತೋಳ ಕೋಳ್ಯಾಗುವುದು | ಕಲಿ ಬಂದು ಹಿತ್ತಲನ್ನೀಗ ಬಳಿವ ಜಲಜಾಕ್ಷನ ಕೃಪೆಯ ಪಡೆದ ದಾಸರಿಗೆ 1 ಕರಡಿ ಕರುವಾಗುವುದು ಉರಿ ಮಂಜು ಆಗುವುದು | ಕರಿ ನಾಯಿಯಾಗುವುದು ಕಂಡವರಿಗೆ | ಭರದಿಂದ ಸುರಿವ ಮಳೆ ನಿಲ್ಲೆನಲು ನಿಲ್ಲುವುದು | ನರಹರಿಯ ನಾಮಗಳ ನಂಬಿ ಭಜಿಪರಿಗೆ 2 ಫಣಿ ಸರಿವೆಯಾಗುವುದು ದಣುವಾಗುತಿಹ ಮಾರ್ಗ | ಕ್ಷಣದೊಳಗೆ ಪೋದಂತೆ ಕಾಣಿಸುವುದು | ಘನ ಪಾಷಾಣಗಳು ತೃಣಸಮವು ಎನಿಸುವುವು | ವನಜಾಕ್ಷನ ಕೃಪೆಯ ಪಡೆದ ದಾಸರಿಗೆ 3 ಕ್ಷುಧೆ ತೃಷೆಯಾಗುದು ಕ್ಷುದ್ರ ಸಂಗವಾಗದು | ಪದೆಪದೆಗೆ ರೋಗಗಳು ಬೆನ್ನಟ್ಟವು | ಉದಯಾಸ್ತಮಾನಗಳೆಂಬ ಭಯ ಸುಳಿಯದು | ಪದಮನಾಭನ ಕೃಪೆಯ ಪಡೆದ ದಾಸರಿಗೆ 4 ಬಾರವು ಭಯಗಳು ಬಂದರೂ ನಿಲ್ಲವು | ಹಾರಿ ಹೋಗುವುವು ದಶ ದಿಕ್ಕುಗಳಿಗೆ | ಘೋರ ದುರಿತಾರಿ ಶ್ರೀ ವಿಜಯವಿಠ್ಠಲನಂಘ್ರಿ | ಸೇರಿದ ಜನರಿಗೆ ಇನಿತು ಭಯವುಂಟೆ5
--------------
ವಿಜಯದಾಸ
ದೃಷ್ಟಿ ಇರಬೇಕಯ್ಯ ಬ್ರಹ್ಮದಿ ದೃಷ್ಟಿಯಿರಬೇಕುದೃಷ್ಟಿಯಿಲ್ಲದಿರಲು ಅನುಭವ ಪಟು ದೊರಕದು ಪ ಆಲಿಯು ನಿಂತೆ ಆಲಿಯ ಗೊಂಬೆಯು ತಿರುಗದಲಿರಬೇಕುಆಲಿಯು ಮುಚ್ಚದೆ ಆಲಿಯ ರೆಪ್ಪೆಯು ಬಡಿಯದಲಿರಬೇಕು 1 ಅನಿಮಿಷ ದೃಷ್ಟಿಯಂದದಿ ಬ್ರಹ್ಮವ ಆಲಿಸುತಿರಬೇಕುಅನಿಮಿಷದಂದದಿ ಕಣ್ಣಿನ ಗುಡ್ಡೆ ತಿರುಗದಲಿರಬೇಕು2 ದೃಷ್ಟಿಯು ಕುಳಿತಾ ದೃಷ್ಟಿಯು ಮುಂದಕೆ ಸಾಗಲಿರಬೇಕುದೃಷ್ಟಿಯು ತಾನೆಡಬಲಕೆ ಸರಿಯದೆ ದೃಷ್ಟಿಯು ಇರಬೇಕು 3 ಕುಳಿತಾ ಸ್ಥಳವು ತಪ್ಪಲು ಮತ್ತೆಯು ಕುಳಿತುಕೊಳ್ಳಬೇಕುಥಳಥಳ ಹೊಳೆಯುವ ಬೆಳಗದ ಪಸರಿಸಿ ತರನಾಗಿರಬೇಕು 4 ಉದಯಾಸ್ತಮಾನವು ದಿವರಾತ್ರಿಯುಡುಗಿ ಇರಬೇಕುಚಿದಾನಂದ ಸದ್ಗುರು ತಾನಾಗಿಯೆ ತಾನೆ ಇರಬೇಕು 5
--------------
ಚಿದಾನಂದ ಅವಧೂತರು
ನಾರಾಯಣ ಎಂಬ ನಾಮದ ಬೀಜವನು ನಾಲಗೆಯಕೂರಿಗೆಯ ಮಾಡಿ ಬಿತ್ತಿರಯ್ಯ ಪ ತನುವ ನೇಗಿಲು ಮಾಡಿ ಹೃದಯ ಹೊಲವನು ಮಾಡಿತನ್ವಿರಾ ಎಂಬ ಎರಡೆತ್ತ ಹೂಡಿಜ್ಞಾನವೆಂಬೊ ಮಿಣಿಯ ಕಣ್ಣಿ ಹಗ್ಗವ ಮಾಡಿಧ್ಯಾನವೆಂಬ ಧಾನ್ಯವ ನೋಡಿ ಬಿತ್ತಿರಯ್ಯ 1 ಕಾಮಕ್ರೋಧಗಳೆಂಬ ಗಿಡಗಳನು ತರಿಯಿರಯ್ಯಮದಮತ್ಸರವೆಂಬ ಪೊದೆಯ ಇರಿಯಿರಯ್ಯಪಂಚೇಂದ್ರಿಯಗಳೆಂಬ ಮಂಚಿಕೆಯ ಹಾಕಿರಯ್ಯಚಂಚಲವೆಂಬ ಹಕ್ಕಿಯ ಓಡಿಸಿರಯ್ಯ 2 ಉದಯಾಸ್ತಮಾನವೆಂಬ ಎರಡು ಕೊಳಗವ ಮಾಡಿ ಆಯುಶ್ಯದ ರಾಶಿಯನು ಅಳೆಯಿರಯ್ಯಇದು ಕಾರಣ ಕಾಗಿನೆಲೆಯಾದಿಕೇಶವನಮುದದಿಂದ ನೆನೆನೆನೆದು ಸುಖಿಯಾಗಿರಿಯ್ಯ3
--------------
ಕನಕದಾಸ
ಯಾಕೆ ಮೈ ಮರೆತಿದ್ದೆ ಹೇಳೋ ಎಲೆ ಮರುಳೆ ಜೋಕÉ ತೀರೀತು ನಿನ್ನ ಬಾಳು ಪ ನಿಟ್ಟೆಲುಗಳಿಂದ ಕೈ ಕಾಲ್ಗಳೆಂಬುವನು ಮಾಡಿ ಚಿಟ್ಟೆಲುಗಳನು ಸಂದಕೂಡಿ ಪಟ್ಟಿನಲ್ಲಿ ತನುಪುರವ ಕಟ್ಟಿದರು ನರದಿಂದ ಪಟ್ಟಣವ ನಿರ್ಮಿತವ ಮಾಡಿ ಅಷ್ಟಪುರ ಕಲ್ಲಲ್ಲಿ ನವಕವಾಟವ ರಚಿಸಿ ದುಷ್ಟದುರ್ಜನರೆಲ್ಲ ಕೂಡಿ ಕಟ್ಟಿದರು ಜೀವನಿಗೆ ಇವರ ಕೂಡಾಡಿ 1 ರಕ್ತಮಾಂಸವು ಚರ್ಮಪೂಡಿ ಮತ್ತೆ ಮಲ ಮೂತ್ರ ಕ್ರಿಮಿ ಕೀಟ ರುಜೆಬಾಧೆಯಲಿ ವಿಸ್ತರದಲಿದಕೆÉ ನಲಿದಾಡಿ ವ್ಯರ್ಥದಲಿ ದಿನವ ನೀಗಾಡಿ ಅಸ್ಥಿರದ ದೇಹವನು ನಚ್ಚಿಭವ ಶರಧಿಯೊಳು ಕುಸ್ತರಿಸಿ ಬಿದ್ದು ಈಜಾಡಿ 2 ಹೊಲಸು ಹೆಬ್ಬಡಿಕೆ ನಾರುವನರಕ ಕೀವು ಕ್ರಿಮಿ ಯಲು ನರಂಗಳು ಮಜ್ಜೆ ಮಾಂಸ ಕೊಳಕು ನಾರುವ ಹಡಿಕೆಗೆಳಸುತಿಹ ನಾಯಂತೆ ಬಲಿದಿಹುದು ನಿನ್ನ ಮೇಲಂಶ ಬಳಲಿ ಬಸವಳಿದೆಲೋನ ಪುಂಸ ಕೊಳೆಯ ಮೇಧ್ಯದ ಪುಂಜ ತನುವಿದನು ನೆರೆನಂಬಿ ಫಲವಿಲ್ಲ ಹರಿಯಧ್ಯಾನಿಸೋ ಪರಮಹಂಸ 3 ಸತಿ ಹೊಂದುವರು ನಿನ್ನ ಕಣ್ಣಾರೆ ಕೇಳ್ವೆ ಕಿವಿಯಿಂದ ಗುರಿಯಾಗಿ ಇಂದಿರೇಶನ ಪೂಜಿಸಲು ನಾಕೈಯಾರೆ4 ಇದರೊಳಗೆ ಬಾಲ್ಯಕೆನೊರ್ಯ ಯೌವ್ವನವೆಂಬ ಉದಯಾಸ್ತಮಾನ ಪರಿಯಂತರವು ಸುದತಿ ಸುತರಲಿ ಮೋಹವಿರಿಸಿ ದಣಿಯದಿರು ಮನವ ನೆರೆನಿಲಿಸಿ ಲಕ್ಷ್ಮೀರಮಣನನು ಹೃದಯದೊಳುಸ್ಮರಿಸಿ 5
--------------
ಕವಿ ಪರಮದೇವದಾಸರು
ಯೆಲ್ಲಿ ಭಯಗಳು ಹರಿಯ ಭಕುತರಿಗೆ ಇಲ್ಲಾ | ಇಲ್ಲವೋ ಕಾಣೋ ಯೆಂದಿಗಾದರು ಮರುಳೆ ಪ ಹುಲಿ ಇಲಿಯಾಗುವದು ತೋಳ ಕೋಳ್ಯಾಗುವುದು | ಕಲಿ ಬಂದು ಹಿತ್ತಿಲನ್ನೀಗ ಬಳಿವಾ || ಮೂಲ ಮಹಾಚೋರ ಚೊಚ್ಚಿಲ ಗೌಡಿಮಗನಾವಾ | ಜಲಜಾಕ್ಷನ ಕೃಪೆಯ ಪಡೆದ ದಾಸರಿಗೆ 1 ಕರಡಿ ಕರು ಆಗುವದು ಉರಿ ಮಂಜು ಆಗುವದು | ಕರಿ ನಾಯಿ ಆಗುವದು ಕಂಡವರಿಗೆ || ಭರದಿಂದ ಸುರಿವ ಮಳೆ ನಿಲ್ಲೆನಲು ನಿಲುವದು | ನರಹರಿಯ ನಾಮಗಳ ನಂಬಿ ಪಠಿಪರಿಗೆ 2 ಘಣಿ ಸರವೆ ಆಗುವದು ದಣುವಾಗುತಿಹ ಮಾರ್ಗ ಕ್ಷಣದೊಳಗೆ ಪೋದಂತೆ ಕಾಣಿಸುವದು || ಘನ ಪಾಷಾಣಗಳು ತೃಣ ಸಮವು ಯೆನಿಸುವವು ವನಜಾಕ್ಷನ ಕೃಪೆಯ ಪಡದ ದಾಸರಿಗೆ 3 ಕ್ಷುಧೆ ತೃಷೆಯಾಗದು ಕ್ಷುದ್ರ ಸಂಗ ಬಾರದು | ಪದೇ ಪದೆಗೆ ರೋಗಗಳು ಬೆನ್ನಟ್ಟವು || ಉದಯಾಸ್ತಮಾನವೆಂಬೋ ಭಯವು ಸುಳಿಯದು | ಪದುಮನಾಭನ ಕೃಪೆಯ ಪಡೆದ ದಾಸರಿಗೆ4 ಬಾರವು ಭಯಗಳು ಬಂದರು ನಿಲ್ಲವು | ಹಾರಿ ಹೋಗುವವು ದಶದಿಶಗಳಿಗೆ || ಘೋರ ದುರಿತಾರಿ ಶ್ರೀ ವಿಜಯವಿಠಲನಂಘ್ರಿ | ಸೇರಿದಾ ಜನರಿಗೆ ಇನಿತಾಹುದುಂಟೇ 5
--------------
ವಿಜಯದಾಸ
ನಾರಾಯಣನೆಂಬ ನಾಮದ ಬೀಜವ ನಿಮ್ಮನಾಲಿಗೆ ತುದಿಯಿಂದಲಿ ಬಿತ್ತಿರಯ್ಯ ಪ.ಹೃದಯಹೊಲವನು ಮಾಡಿ ಮನವ ನೇಗಿಲ ಮಾಡಿ |ಶ್ವಾಸೋಚ್ವಾಸ ಎರಡೆತ್ತಮಾಡಿ ||ಜಾÕನವೆಂಬ ಹಗ್ಗ ಕಣ್ಣಿಯ ಮಾಡಿ ||ನಿರ್ಮಮವೆಂಬ ಗುಂಟೆಲಿ ಹರಗಿರಯ್ಯ 1ಮದಮತ್ಸರಗಳೆಂಬ ಮರಗಳನೆ ತರಿದು |ಕಾಮಕ್ರೋಧಗಳೆಂಬ ಕಳೆಯ ಕಿತ್ತಿ ||ಪಂಚೇಂದ್ರಿಯವೆಂಬ ಮಂಚಿಕೆಯನೆ ಹಾಕಿ |ಚಂಚಲವೆಂಬ ಹಕ್ಕಿಯ ಹೊಡಿಯಿರಯ್ಯ 2ಉದಯಾಸ್ತಮಾನವೆಂಬ ಎರಡು ಕೊಳಗದಲಿ |ಆಯುಷ್ಯವೆಂಬ ರಾಶಿ ಅಳೆಯುತಿರೆ ||ಸ್ವಾಮಿ ಶ್ರೀ ಪುರಂದರವಿಠಲನ ನೆನೆದರೆ |ಪಾಪ ರಾಶಿಯ ಪರಿಹರಿಸುವನಯ್ಯ 3
--------------
ಪುರಂದರದಾಸರು
ನಿಜವಿರಬೇಕು ಸಜ್ಜನರಿಗೆ ಒಂದು ಪಅಜಜನಕಾನೆ ಈ ತ್ರಿಜಗಕೆ ಒಡೆಯನೆಂದು ಅ.ಪಉದಯಾಸ್ತಮಾನ ಮಾಡುವ ವ್ಯಾಪಾರವುಪದುಮಾಕ್ಷ ಕೃಷ್ಣನ ಸೇವೆಯೆಂದುಸುದತಿಯೊಡನೆ ಕೂಡಿ ಮಧುರ ಮಾತುಗಳಾಡಿಮಧುವೈರಿಚರಿತೆಯ ಮುದದಿ ಕೇಳುವಂಥ1ಮಡದಿ ಮಕ್ಕಳು ತನ್ನ ಒಡಹುಟ್ಟಿದವರೆಲ್ಲಒಡೆಯನ ಅಡಿಗೆ ಸೇವಕರು ಎಂದುದೃಢದಿ ತಿಳಿದು ಮೃಡನೊಡೆಯನ ಪಾದವಬಿಡದೆ ಭಜಿಸುವಂಥ ದೃಢ ಬುದ್ಧಿ ಎಂಬುವ 2ಮಾತಾಪಿತರು ಸುತ ಭ್ರಾತರಿಷ್ಟಾಬಂಧುವ್ರಾತರೆಲ್ಲರು ಹರಿಗೆ ದೂತರೆಂದುಮಾತುಳಾಂತಕತಂದೆಮುದ್ದುಮೋಹನವಿಠಲಖ್ಯಾತಾನೆಂದು ಪ್ರೀತಿ ಪೊಂದುವುದಕ್ಕೆ 3
--------------
ತಂದೆ ಮುದ್ದುಮೋಹನ ವಿಠಲರು
ಯೋಗಿಗೆ ಸೃಷ್ಟಿ ಬರುವುದೆಂತು ವಿದ್ಯದಲಲ್ಲದೆಯೋಗ ವಿದ್ಯೆದಲ್ಲಿ ಎಂತು ಅನ್ನಬಹುದೆ ಇಂತುಯೋಗಿಯೆ ಈಶ್ವರ ತಾನೀಗೇಕೆಯೋಗಿಯು ಈಶ್ವರ ಬೇರೆ ಎನೆ ನರಕವುಪಆಲಿಯು ನಿಂತೆ ಆಲಿಯ ಗೊಂಬೆಯು ತಿರುಗದಲಿರಬೇಕುಆಲಿಯು ಮುಚ್ಚದೆ ಆಲಿಯು ರೆಪ್ಪೆಯು ಬಡಿಯದಲಿರಬೇಕು1ಆನಿಮಿಷ ದೃಷ್ಟಿಯಂದಲಿ ಬ್ರಹ್ಮವ ಆಲಿಸುತಿರಬೇಕುಅನಿಮಿಷದಂದದಿ ಕಣ್ಣಿನ ಗುಡ್ಡೆ ತಿರುಗದಲಿರಬೇಕು2ದೃಷ್ಟಿಯು ಕುಳಿತಾ ದೃಷ್ಟಿಯು ಮುಂದಕೆ ಸಾಗಲಿರಬೇಕುದೃಷ್ಟಿಯು ತಾನೆಡಬಲಕೆ ನಲಿಯದೆ ದೃಷ್ಟಿಯು ಇರಬೇಕು3ಕುಳಿತಾ ಸ್ಥಳವು ತಪ್ಪಲು ಮೆತ್ತೆಯು ಕುಳಿತುಕೊಳ್ಳಬೇಕುಥಳಥಳ ಹೊಳೆಯುತ ಬೆಳಗದ ಪಸರಿಸಿ ಗೂಢನಿರಲುಬೇಕು4ಉದಯಾಸ್ತಮಾನವು ದಿವರಾತ್ರಿಯುಡಗಿ ಇರಬೇಕುಚಿದಾನಂದ ಸದ್ಗುರು ತಾನಾಗಿಯೆ ತಾನೆ ಇರಬೇಕು5
--------------
ಚಿದಾನಂದ ಅವಧೂತರು