ಒಟ್ಟು 4 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದ್ರಾಕ್ಷಿ ಸಲಹೆ ಬಂದು | ಸಂರಕ್ಷಿಸಿ ಇಂದ್ರಾಕ್ಷಿ ಸಲಹೆ ಬಂದು ಪ ಚಂದ್ರಶೇಖರನಂಕ ಸಂಸ್ಥಿತೆ ಚಂದ್ರ ಬಿಂಬಾನನೆ ದಯಾನ್ವಿತೆ ಇಂದ್ರ ಮುಖ ಸುರಗಣ ಸಮರ್ಚಿತೆ ತಂದ್ರ ಪರಿಹೃತೆ ಭಕ್ತತತಿ ಹಿತೆ ಅ.ಪ. ಅರಿಯದ ತರಳನಮ್ಮ | ನಿನ್ನಂಘ್ರಿ ಸೇವಿಪ ಮೆರೆವ ಭಾಗ್ಯವ ನೀಡಮ್ಮ | ಮರೆಯದಿರಮ್ಮಾ ಶರಣ ಜನರನು ಪೊರೆವೆನೆನ್ನುತ ಕರದಿ ಪಿಡಿದಿಹೆ ಬಿಡದೆ ಉನ್ನತ ದರವಿಯನು ಸಿದ್ದಾನ್ನ ಪಾತ್ರೆಯ ಕರುಣಿ ತ್ರಿಜಗಜ್ಜನನಿ ಸುಗುಣಿಯೆ 1 ನಿತ್ಯಾನಂದಿನಿ ಮೋಹಿನಿ | ಸುಗತಿ ಪ್ರದಾಯಿನಿ ಭೃತ್ಯಾನುಗ್ರಹ ಕಾರಿಣಿ | ಬುಧ್ಯಾಭಿಮಾನಿ ನಿತ್ಯಮಂಗಳೆ ಭೃತ್ಯವತ್ಸಲೆ ಸತ್ಯರೂಪಿಣಿ ಮೃತ್ಯುನಾಶಿನಿ ನಿತ್ಯತ್ವತ್ಪದ ಭಜಿಪ ಸಂಪದ- ವಿತ್ತು ಪಾಲಿಸೆ ಶ್ರೀ ಕಾತ್ಯಾಯಿನಿ 2 ಭೀಮಾ ಭೈರವನಾದಿನಿ | ಕುಮಾರ ಜನನಿ ಕಾಮನಿಗ್ರಹನ ರಾಣಿ | ವರವರ್ಣಿನಿ ಬ್ರಾಹ್ಮಿ ವೈಷ್ಣವಿ ಬ್ರಹ್ಮಚಾರಿಣಿ ಚಾಮುಂಡೇಶ್ವರಿ ಕೋಲರೂಪಿಣಿ ಭ್ರಮರಿ ಶಾಕಾಂಬರಿ ನೃಸಿಂಹಿಣಿ ಅಮಿತರೂಪಿಣಿ ಅಹಿತ ಮಾರಿಣಿ 3 ಸರ್ವಮಂಗಳ ಮಾಂಗಲ್ಯೆ | ಸರ್ವಾರ್ಥದೆ ಶಿವೆ ಶರ್ವನರ್ಧಾಂಗಿಯೆ | ಪರ್ವತನ ತನಯೆ ಶರ್ವಬ್ರಹ್ಮರ ವರದಿ ಕೊಬ್ಬಿ ಸು- ಪರ್ವರನು ಕಂಗೆಡಿಸೆ ದನುಜರು ಸರ್ವಶಕ್ತಳೆ ಮುರಿದು ಖಳರನು ಉರ್ವಿಭಾರವ ನಿಳುಹಿ ಪೊರೆದೌ 4 ಅಜಿತೆ ಭದ್ರದೆ ಆನಂದೆ | ನಿನ್ನನು ಬಿಡದೆ ಭಜಿಪರ ಪೊರೆವಳೆಂದೆ | ನಾನಿಂದು ಬಂದೆ ಕುಜನಮರ್ಧಿನಿ ಕುಟಿಲ ಹಾರಿಣಿ ಗಜಗಮನೆ ಗಂಭೀರೆ ಗುಣಮಣಿ ವೃಜಿನ ಪರಿಹರೆ ವಿಘ್ನಸಂಹರೆ ನಿಜ ಪದಾಂಬುಜ ಭಜಕನೆನಿಸಿ 5 ಶಿವದೂತಿ ಪರಮೇಶ್ವರಿ | ರುದ್ರಾಣಿ ಚಂಡಿಕೆ ಶಿವೆ ಭವೆ ಜ್ಞಾನೇಶ್ವರಿ | ಸೌಂದರ್ಯಲºರಿ ಭುವನ ಮೋಹಿನಿ ದೈತ್ಯನಾಶಿನಿ ತಾಪ ಜ್ವರ ನಿವಾರಿಣಿ ಕವಿಭಿರೀಡಿತೆ ದೇವ ಪೂಜಿತೆ ವಿವಿಧ ಫಲಗಳ ಒಲಿದು ಕೊಡುವಳೆ 6 ಶೃತಿ ಸ್ಮøತಿ ಶ್ರದ್ಧೆ ಮೇಧಾ | ವಿದ್ಯಾಸರಸ್ವತಿ ಧೃತಿ ಶಾಂತಿ ಕಾಂತಿ ವಾದಾ | ಎನಿಸುತ್ತ ಮೆರೆವ ವಿತತ ಮಹಿಮಳೆ ವಿಶ್ವತೋಮುಖೆ ಅತುಳ ಭುಜಬಲೆ ಭದ್ರಕಾಳಿಯೆ ಪಾವನಿ ಸತ್ವಶಾಲಿನಿ ಸತಿ ಶಿವಪ್ರಿಯೆ ನೀಡಿ ಸುಮತಿಯ 7 ಅರಿದರಾಂಕುಶ ಮುಸಲ | ಮುದ್ಗರಚಾಪ ಮಾರ್ಗಣ ಪಾಶ ಪರಶು ಘಂಟಾ ಶಕ್ತಿ ಪಾತ್ರೆಯು ವರಗದಾಭಯ ಕರದೊಳೊಪ್ಪುತ ದುರುಳರನು ಸಂಹರಿಸಿ ಸಂತತ ಸುರನರೋರಗರನ್ನು ಪೊರೆಯುವ 8 ಮಾರಿ ಮಸಣಿ ಹೆಮ್ಮಾರಿ | ಕರೆಕರೆದುಗೊಳಿಸುವ ಕ್ರೂರ ಶಾಕಿನಿ ಡಾಕಿನಿ | ಪೂತಣಿಯೆ ಮುಖರು ಘೋರ ರೂಪದಿ ಬಂದು ಪೋರರ ಗಾರುಗೊಳಿಸುತ್ತಿರಲು ತವಪದ ಸಾರಿ ನೆನೆದರೆ ತೋರಿ ಹಿಮ್ಮಡಿ ದೂರ ಸರಿವರು ಮುಗಿದು ಕರಗಳ 9 ತಾಪತ್ರಿತಯ ತಪ್ತರ | ಆಹ್ಲಾದಪಡಿಸಲು ಗೋಪತಿ ಮುಖವ ತೋರ | ಕೃಪಾಂಬುನಿಧಿಯೆ ತಾಪಸಾರಾಧಿತ ಪದಾಂಬುಜೆ ಶ್ರೀಪತಿಯ ಸೊದರಿಯೆ ನೀ ನಿಜ- ರೂಪುದೋರಲು ಪಾಪತಾಪ ಪ್ರ- ಳಾಪ ಮಾಡದೆ ರಾಪುಗೈವುದೆ 10 ದುರ್ಗಮ ಸಂಕಟದಿ | ಬಿದ್ದಿಹೆನಮ್ಮಾ ನಿರ್ಗಮ ಕಾಣೆನಮ್ಮಾ | ಉದ್ಧರಿಸಮ್ಮಾ ದುರ್ಗದಿಂತಾರಿಸುವೆ ಭಕ್ತರ ದುರ್ಗೆ ನಾಮಾಂಕಿತದಿ ಎಂಬರು ಕರವ ಸು- ಮಾರ್ಗ ತೋರಿಸೆ ದುರ್ಗೆ ಜನನಿಯೆ 11 ಸುರಾಸುರ ಸಂಗ್ರಾಮದಿ | ಮುರವೈರಿ ದಯದಿ ಸುರರು ಗೆಲ್ಲರು ಮುದದಿ | ಗರ್ವಿಸಲು ಭರದಿ ಹರಿಯ ರೂಪಾಂತರದಿ ತೃಣವನು ಧರೆಯೊಳಿರಿಸುತ ಬಲ ಪರೀಕ್ಷಿಸಿ ಸುರರು ಜಯಿಸದೆ ಮರುಳರಾಗಲು ಬರದೆ ಪರತತ್ವವನು ಕರುಣದಿ 12 ಕಿಂಕರ ಶಂಕರಿಯೆ | ಶತ್ರು ಭಯಂಕರೆ ಓಂಕಾರೆ ಹೂಂಕಾರೆಯೇ | ಸ್ಮಿತ ಅಟ್ಟಹಾಸೆ ಪಂಕಜಾಂಬಕಿ ರಕ್ತನಯನ ಕ ಳಂಕಮುಖಿ ಅತ್ಯುಗ್ರವದನೆ ನಿ ಶ್ಯಂಕ ಬಿಂಕದಿ ಬಂದೆ ಕಾಲದಿ ಮಂಕುಹರೆ ಸಂಕಟದೆಯೆನಿಸುವೆ 13 ರಕ್ತಬೀಜಾಸುರನ | ರಕ್ತವನು ಹೀರಿದ ಶಕ್ತಳೆಂದೆನುತ ನಿನ್ನ | ನಂಬಿದೆನು ಎನ್ನ ಉಕ್ತಿಲಾಲಿಸಿ ಒತ್ತಿ ವಿಘ್ನವ ಇತ್ತು ಜ್ಞಾನ ವಿರಾಗ ಭಕ್ತಿಯ ಮುಕ್ತಪಾವನ ಮಾಡಿ ಸಂತತ ಮುಕ್ತಿಕಾಂತನ ಸ್ಮರಣೆ ಪಾಲಿಸಿ14 ಮಹಿಷನ ಸಂಹರಿಸಿ | ಮಹಿಯನ್ನು ಪಾಲಿಸಿ ಮಹಿಸೂರೆ ನೆಲೆಯೆನಿಸಿ | ಪತಿಸಹಿತವಸಿಸಿ ಮಹಿಪತಿಗಳಾದಿಯಲಿ ಸರ್ವರಿಂ ಅಹರಹರ್ ಸೇವೆಯನು ಕೊಳುತ ಮಹಿಮೆ ತೋರುತಿರುವೆ ಪ್ರತಿದಿನ ಅಹಹ ಬಣ್ಣಿಸಲೊರೆವೆ ನರರಿಗೆ 15 ಚಂಡ ಮುಂಡರ ಮರ್ದಿಸಿ | ಚಾಮುಂಡಿಯೆನಿಸಿ ಖಂಡೆಯವನು ಝಳಪಿಸಿ | ಪುಂಡರನು ವಧಿಸಿ ಖಂಡ ಪರುಶುವಿನಂತೆ ಅದÀಟರ ರುಂಡಮಾಲೆಯ ಕೊಂಡು ಭೂತಗ- ಳ್ಹಿಂಡು ಡಿಂಡಿಮ ಡಂಡೆಣಿಸಲು ತಾಂಡವಾಡಿದ ಚಂಡಕಾಳಿಯೆ 16 ಶುಂಭ ನಿಶುಂಭರನು | ಕುಂಭಿಣಿಗೆ ಕೆಡಹೆ ಸುರರು | ಕುಂದುಭಿಯ ಹೊಡೆಯೆ ಡೊಂಬ ಕೊಳಾಸುರನ ಸೂಕರ ಡಿಂಬ ತಾಳುತ ಸೀಳಿ ದೈತ್ಯ ಕ- ದಂಬವೆಲ್ಲಕೆ ಕಂಭ ಸಂಭವ ನಿಂಬು ರೂಪವ ನಂಬಿ ತೋರಿದೆ 17 ಸಕಲ ಶಕ್ತ್ಯಾತ್ಮಕಳೆ | ಭುವಿಯಲಿ ಈ ಪರಿ ಪ್ರಕಟಳಾಗುತ ಖಳರ | ಕಟಕವನು ತರಿದು ಭಕುತವರ್ಗಕೆ ಬಂದ ಸಂಕಟ ನಿಕರ ಪರ್ವತ ವಜ್ರವೆನಿಸುತ ಮುಕುರದಂದದಿ ಪೊಳೆದು ಪೊರೆಯುವೆ ವಿಕಟನಾಮದಿ ನಿಕಟದಿರುತ 18 ಜ್ಞಾನೇಚ್ಚಾ ಕ್ರಿಯ ರೂಪಳೆ | ನಿನ್ನನು ನುತಿಸಿ ಆನತಿಸಿದವರಿಗೆ | ಪ್ರಸನ್ನಳಾಗಿ ಮಾನ ಸತಿಸುತ ಧ್ಯಾನ ಧನಮನೆ ಜ್ಞಾನ ಭಕ್ತಿ ವಿರಕ್ತಿ ಮುಂತವ ದೇನು ಬೇಡಲು ಕೊಡುವೆ ನಿನ್ನ ಸಮಾನರಾರನು ಕಾಣೆ ಜಗದೊಳು 19 ಅಂಗನಾಮಣಿಯರಿಗೆ | ಮಾಂಗಲ್ಯವೃದ್ಧಿಗೆ ಮಂಗಳಗೌರಿಯೆಂದು | ಪ್ರಸಿದ್ಧಿಗೊಂಡು ರಂಗುಮಾಣಿಕದ್ಹಸೆಯ ಪೀಠದಿ ಮಂಗಳದ್ರವ್ಯಗಳಿಂದೊಪ್ಪುತ ಮಂಗಳೇಕ್ಷಣದಿಂದ ಕುಳಿತಿಹೆ 20 ವೈದ್ಯ ಜ್ಯೋತಿಷ ಪುರಾಣ | ವೇದಾಂತ ಮುಂತಹ- ಗಾಧ ಗ್ರಂಥಗಳನು | ನಿಜಪತಿಯ ಮುಖದಿ ಸಾಧಿಸಿದೆ ಸಜ್ಜನರಿಗೋಸುಗ ಬೋಧಿಸಿದೆ ಗುಹ ಗಣಪ ಮುಖರಿಗೆ ಆದಿದೇವನ ಒಲಿಮೆ ಪಡೆಯಲು ಹಾದಿ ತೋರಿದೆ ಹೇ ದಯಾನಿಧೆ 21 ಅಷ್ಟಬಾಹುಗಳಿಂದಲಿ | ಅಷ್ಟಾಯುಧಂಗಳ ದಿಟ್ಟತೆಯಿಂ ಧರಿಸಿ | ಅಷ್ಟಾತ್ಮನಂವೆರಸಿ ಶಿಷ್ಟ ನಾಲ್ಮಡಿ ಕೃಷ್ಣ ಭೂಪನ ಇಷ್ಟದೇವತೆಯಾಗಿ ನೆಟ್ಟನೆ ಬೆಟ್ಟದಲಿ ರಂಜಿಸುವೆ ಭಕ್ತರಿಷ್ಟ ಹರಿಸುತ ಕೊಟ್ಟಭೀಷ್ಟವ 22 ಸಂತರ ನುಡಿಗಳು | ನಾನಾಂತು ನಿನ್ನಯ ಚಿಂತಿತಾರ್ಥದ ಪದವ | ಸ್ವಾಂತದಲಿ ತಂದು ಇಂತು ತುತಿಸಿದೆನರಿಯೆನನ್ಯಯಥ ಪಂಥವನು ಎನ್ನಂತರಂಗವ ನಂತು ತಿಳಿದಿಹೆ ಜನನಿ ಕೊಡು ಶ್ರೀ- ಕಾಂತ ಭಕ್ತಿಯ ಮುಂತೆ ಕರುಣದಿ 23
--------------
ಲಕ್ಷ್ಮೀನಾರಯಣರಾಯರು
ಎಂತು ಜೀವಿಪೆನಯ್ಯಾ ನಿನ್ನನಗಲಿ ನಾನು ಶಾಂತ ಮೂರುತಿ ಕೃಷ್ಣ ಕೃಷ್ಣಯ್ಯಾ ಪ ದಂತಿವರದ ಭಕ್ತ ಚಿಂತಾಮಣಿಯೆ ಲಕ್ಷ್ಮೀ ಕಾಂತ ಸಕಲ ಜಗದಂತರಾತ್ಮಕ ದೇವ ಅ.ಪ. ಅಂಗಜಪಿತ ನಿನ್ನ ಅನುಪಮ ರೂಪವ ನಿತ್ಯ ನೋಡಿ ನಲಿಯುತ ತುಂಗಮಹಿಮ ನಿನ್ನ ಘನ ಕೃಪೆಯಿಂದ ಅಂತ- ರಂಗದ ಭಕ್ತ ನಾನೆಂದೆನಿಸಿರಲಾಗಿ ಮಂಗಳಾಂಗ ಮನೋಹರ ನಿನ್ನ ಸಂಗ ಬಿಟ್ಟಿರಲಾರೆನೋ ಸ್ವಾಮಿ ರಂಗ ಎನ್ನಂತರಂಗವರಿಯಯಾ ಇಂಗಿತಜ್ಞ ನೀನಲ್ಲವೇ ಕೃಷ್ಣ 1 ಇಂದಿರೇಶನೆ ನಿನ್ನ ಚರಿತೆಯ ಕೇಳಿ ಆ- ನಂದದ ಸವಿ ಕಂಡೆ ಪುಣ್ಯಾತ್ಮರಿಗೆ ಬೇರೆ ಒಂದರಲಭಿರುಚಿ ತೋರ್ಪುದೆ ಗುಣಗಣ ಸಿಂಧು ನಿನ್ನನು ಬಿಟ್ಟೇನೊಂದ ನಾನೊಲ್ಲೆನು ಸಿಂಧು ಮಂದಿರ ಸುಂದರ ನಿನ್ನ ಪೊಂದಿಕೊಂಡಿಹನಲ್ಲವೇ ಕೃಷ್ಣ ತಂದೆ ಕೈ ಬಿಡಬೇಡವೊ ಎಳ- ಗಂದಿಯೆಂಬುದ ನೆನೆದು ಪಾಲಿಸೊ 2 ದೋಷ ರಹಿತ ಯಾದವೇಶ ಭಕ್ತರ ಪೋಷ ಶ್ರೀಶ ಕರಿಗಿರೀಶ ಸಕಲ ಲೋಕೇಶ ಪಾದ ಭೂಸುರ ಪ್ರಿಯ ಎನ್ನ ದೋಷಗಳೆಣಿಸದೆ ನೀ ಸಲಹಲಿ ಬೇಕೊ ವಾಸುದೇವ ಪರಾತ್ಪರ ಕೃಷ್ಣ ಕ್ಲೇಶ ಪರಿಹರನಲ್ಲವೆ ಸ್ವಾಮಿ ದಾಸ ಜನರಭೀಷ್ಟದಾಯಕ ನಾ ಶರಣು ಹೊಕ್ಕಿಹೆನು ರಕ್ಷಿಸು 3
--------------
ವರಾವಾಣಿರಾಮರಾಯದಾಸರು
ಗಂಗೇ ಜನನೀ ಮಂಗಳರೂಪಿಣಿ ತುಂಗ ಮಹಿಮನ ಪಾದಾಂಗುಳಿಜಾತೆ ಪ ಸಂಗತಿಯರುಹಲು ಬಂದಿರುವೆವು ಕೃಪಾ ಪಾಂಗವ ತೋರೆಲೆ ಇಂಗಿತವರಿತು ಅ.ಪ ನಾಲ್ಕು ಮೊಗನು ಹರಿ ಕಾಲಿಗೆ ಕೆಡುಹಲು ಶೂಲಧರನ ಶಿರ ಆಲಯ ಮಾಡಿದೆ ಶೈಲದಂತಿಹ ಪಾಪ ಜಾಲಿಸಿ ಕಳೆಯುವೆ ಪೇಳಲಳವೆ ನಿನ್ನ ಶೀಲವ ಸುಲಭದಿ 1 ಚಾರು ನದಿಗಳು ಹೇರಳವಿದ್ದರು ಭಾರತ ದೇಶದಿ ಭಾಗ್ಯದೇವತೆ ನೀ ದೂರ ದೂರ ದೇಶಗಳಲಿ ನೆಲೆಸಿಹ ಧೀರರು ನಿನ್ನಯ ಕೋರುತಲಿರುವರು 2 ಅಂಗಳದಲಿ ಬಿದ್ದು ಹರಿವ ಜಲವು ನಿನ್ನ ಸಂಗದಿ ಪರಮಮಂಗಲ್ಯವ ಪಡೆವುದು ಶೃಂಗಾರದ ನಿಧಿ ರಂಗನ ಸೇವೆಗೆ ಗಂಗೇ ಎನ್ನಂತರಂಗವ ಶೋಧಿಸೆ 3 ಭೂಮಿಯ ಭೇದಿಸಿ ಸುಂದರ ರೂಪದಿ ಸ್ವಾಮಿ ಶ್ರೀಮಧ್ವರ ಚರಣಕೆ ನಮಿಸಿ ಆ ಮಹಾತ್ಮರ ದರುಶನದಿ ಪ್ರಸನ್ನಳೇ ಕಾಮಿತ ಕರುಣಿಸೇ ತ್ರಿಕರಣ ಶುದ್ಧಿಯ 4
--------------
ವಿದ್ಯಾಪ್ರಸನ್ನತೀರ್ಥರು
ಸಂತೋಷವೆಂತು ನಾ ವರ್ಣಿಪೆನು ಎನ್ನಂತರಂಗವ ಸಂತೋಷವೆಂತು ನಾ ವರ್ಣಿಪೆನು ಪ ಕಂತೆ ಜೀವನವÀ ತೊರೆದು ಸಂತತ ನಿನ್ನ ಭಜಿಸುವ ಅ.ಪ ಲೇಸು ಜೀವನದ ಆಸೆಗೆ ಬೆರಗಿ ಮೋಸದಿ ದಿನ ದಿನನೂರಾರು ಮಿತ್ರ ಬಾಂಧವ ಜ ಸಾಸಿರ ದುಷ್ಕøತಿಗಳನು ರಚಿಸಿ ಕರವ ನೀಡಿದೆ 1 ನರು ಯಾರೆನ್ನವುದಕೆ ಕಾರಣರಾದರೋ ನಾನರಿಯೆ ನೀರಜಾಕ್ಷನೆ ನಿನ್ನಯ ಸಾರಸೇವೆಯನು ಮಾಡಿದ 2 ಅನ್ನವನರ್ಜಿಸುವ ಬಗೆ ಹೊರತು ಇನ್ನೊಂದನರಿಯದೆ ಸಣ್ಣತನದಲಿ ದಿನ ಕಳೆಯುತಿರೆ ಮಾನ್ಯ ಯೋಗವನರುಹಿ ಪ್ರಸನ್ನ ಶ್ರೀಹರಿಯ ನುತಿಸುವ 3
--------------
ವಿದ್ಯಾಪ್ರಸನ್ನತೀರ್ಥರು