ಒಟ್ಟು 8 ಕಡೆಗಳಲ್ಲಿ , 5 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆತ್ಮನಿವೇದನೆ ಅಗಲಿ ನಾ ಸೈರಿಸಲಾರೆ ಪ-À್ನಗರಾಜಶಯನನ ತೋರೆ ಪ. ಖಗರಾಜಗಮನ ನಿಗಮಗೋಚರನಜಗದೇಕವಂದ್ಯನ ಜಾಣೆ ರಂಗಯ್ಯನ ಅ.ಪ. ಮಾರನು ಮನೆಗ್ಹೋದÀನಮ್ಮ ಎನ್ನಸೇರದೆ ಮುನಿದ ಕಾಣಮ್ಮಯಾರಿಗೆ ಉಸುರಲೆ ನೀರಜಾಕ್ಷಿಯೆ ಎನ್ನಬಾರದೆ ಮುನಿದು ತಾಳಲಾರೆ ನೋಡಮ್ಮ 1 ಹೆಣ್ಣುಜನ್ಮ ವ್ಯರ್ಥಕಾಣಮ್ಮ ಎನ್ನಪುಣ್ಯವಿನ್ನಿಂತಾಯಿತಮ್ಮಬಣ್ಣ ಸರವನೀವೆ ಭಾಮಿನಿರನ್ನಳೆಕಣ್ಣಾಣೆ ಕರೆತಾರೆ ಪುಸಿಯಲ್ಲ ಕೃಷ್ಣನ 2 ಅಂತರಂಗವ ತಿಳಿದೇನಮ್ಮ ಪ್ರಾಣ-ಕಾಂತ ಮನೆಗೆ ಬಂದನಮ್ಮಪಂಥವ ಬಿಟ್ಟೀಗ ಬಂದೆ ನಾ ಪಾಲಿಸುವಕಂತುಜನಕ ಹಯವದನ ರಂಗಯ್ಯನ 3
--------------
ವಾದಿರಾಜ
ಓ ಎನ್ನಬಾರದೆ ಓಂಕಾರ ಪ್ರತಿಪಾದ್ಯ ಪ ಕರಿರಾಜ ಕರೆಯಲು ತ್ವರಿತದಿಂದಲಿ ಬಂದು ಪೊರೆಯಲು ನಿನಗವ ಮರಿಮಗನೇನೋ 1 ಅಂದು ಅಜಾಮಿಳ ಕಂದನ ಕರೆಯಲು ಬಂದು ಸಲಹಿದೆ ಬಂಧು ನೀನವಗೇನೋ 2 ಕರುಣಾಸಾಗರ ದೊರೆ ಶ್ರೀದವಿಠ್ಠಲ ಕರವ ಮುಗಿದು ಕೂಗೆ ಬರದಿರೆ ಘನವೇನೋ 3
--------------
ಶ್ರೀದವಿಠಲರು
ಓ ಎನ್ನಬಾರದೇ ಹರಿಯೆ | ಶ್ರೀಯರಸನೇ ನೀನೇ ಗತಿಯೆಂದು ಅನ್ಯ ಉ| ಪಾಯವನರಿಯದ ಬಾಲಕ ಕರೆದರೆ ಪ ಹಾಲವ ಬೇಡುವ ಮೊರೆಯಿಡಲುಪಮನ್ಯು ಆ | ಬಾಲಗ ಧ್ವನಿ ದೋರಿದಂತೆ | ಚಾಲವರಿದು ಸರೋವರದಲಿ ಕರೆದ ಶುಂ| ಡಾಲಗೆ ಧ್ವನಿ ದೋರದಂತೆ | ವ್ಯಾಳ್ಯೆಕ್ಕ ಒದಗೆಂದು ರಾತ್ರಿಲಿ ಕರೆದ ಪಾಂ| ಚಾಲಿಗೆ ಧ್ವನಿ ದೋರಿದಂತೆ | ಕಾಲಕಾಲಕ ಬಂದು ಮೊರೆಯಿಡೆ ಸುರಮುನಿ | ಜಾಲಕ ಮೈದೋರಿ ಧ್ವನಿ ದೋರಿದಂತೀಗ 1 ಆವಾಗ ಧ್ವನಿದೋರಿದಂತೆ | ಗೋವ ಮೇಯಿಸಿ ತೆರಳಲು ಗೊಲ್ಲರೊದರುವ ಭಾವಕ ಧ್ವನಿದೋರಿದಂತೆ | ದೇವ ನೀಮರಿಯಾಗೆ ಹುಂಕರಿಸ್ಸೊದರಲು | ಆವಿಗೆ ಧನಿ ದೋರಿದಂತೆ | ಕಾವನೈಯ್ಯನೆ ನಿನ್ನ ನೆನೆದ ಗೊಲ್ಲತೆರಾ | ಜೀವನ ಹಿತವಾಗಿ ಧನಿದೋರಿದಂತೀಗ 2 ಬಂದೂಳಗಕ ನಿನ್ನ ಪಾಂಡವರೊದಲು | ನಿಂದು ನೀ ಧನಿದೋರಿದಂತೆ | ಇಂದಾದಾ ಕಲಿಯುಗದ ದಾಸರ ಮಾತಿಗೆ | ಬಂದು ನೀ ಧನಿ ದೋರಿದಂತೆ | ಕಂದನಳುವ ಧ್ವನಿ ಕೇಳುತ ಜನನಿ ಅ | ನಂದದಿ ಧನಿದೋರುವಂತೆ | ತಂದೆ ಮಹಿಪತಿ - ನಂದನ ಪ್ರಭು ಗೋ | ವಿಂದ ಮುಕುಂದೆನ್ನ ಸಲಹೆಂಬ ಮೂಢನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕನ್ನಡ ಮಂತ್ರ ವಾಸುದೇವ ಲಕ್ಷ್ಮೀಪತಿ ಜಗಜನ್ಮಾದಿ ಕಾರಣ ನಾರಾಯಣ ನರಕಾಂತಕ ನಾರದಪ್ರಿಯ ನರಸಖನಾದ ನಾರಸಿಂಹಮೂರ್ತಿಗೆ ನಮಸ್ಕಾರಗಳು ಗೋಕುಲದರಸು ಯಾದವಶಿರೋಮಣಿಯೆನ್ನ ಬಿನ್ನಪವ ಲಾಲಿಸಿ ಕೇಳಯ್ಯ ಕೃಷ್ಣ ಕಾಮ ಕ್ರೋಧ ಮದ ಮತ್ಸರ ದುರ್ಬುದ್ಧಿ ದುರಾಚಾರ ದುರ್ವಿಷಯಗಳ ಮೋಹ ಲೋಭಗಳ ಮರೆಸಿ ಮುಂದೆ ಬಿರುದಿನಿಂದ ಭಕÀ್ತಜನ ಬಂಧು ನೀ ದಯಾಸಿಂಧು ನಾ ಬೇಡಿಕೊಂಬುವೆನು ಬಂದು ಸಜ್ಜನರಕ್ಷಕ ದುರ್ಜನಶಿಕ್ಷಕ ಅರ್ಜುನ ಸಾರಥಿಯಾದ ನಿತ್ಯ ಮುಕ್ತ ದ್ವಾರಾವತೀ ಮಧ್ವಮುನಿಗೊಲಿದಂಥ ಮೂರ್ಜಗಾಧೀಶ ಉದ್ಧಾರ ಮಾಡಯ್ಯ ಉರಗಾದ್ರಿವಾಸ ಪದ್ಮಾವತೀಕಾಂತ ಶ್ರೀ ವೆಂಕಟೇಶ ಜ್ಞಾನಭಕ್ತಿ ಘನ ವೈರಾಗ್ಯ ಆಯುಷ್ಯ ಆರೋಗ್ಯ ಶ್ರೇಯಸ್ಸು ಸೌಭಾಗ್ಯ ಶ್ರೇಷ್ಠವಾದ ಸಂತಾನ ಸಕÀಲಾಭೀಷ್ಟಗಳ ಕೊಡುವನೆಂದು ನಾ ಬೇಡಿಕೊಂಬುವೆನು ಬಂದು ಎನ್ನಬಾರ ಎನ್ನ ಪರಿವಾರ ನಿನ್ನಗೊಪ್ಪಿಸುವೆನು ಮನ್ಮಥನಪಿತ ಎನಗೆ ಇನ್ನು ಧರ್ಮಾರ್ಥ ಕಾಮಿತ ಫಲಗಳನು ಸನ್ಮಾನದಲಿ ಕೊಟ್ಟು ಮನ್ನಿಸಿ ನೀಡೆನಗೆ ಮಂಗಳವ ಅನುದಿನದಿ ಸುಜ್ಞಾನಿಗಳೊಡೆಯ ಸುರರಿಂದ್ವಂದಿತವಾದ ನಿನ್ನ ಪದ್ಮಪಾದಗಳಿಗೆ ಬಿದ್ದೆ ್ಹೀಳಿಕÉೂಂಬುವೆನು
--------------
ಹರಪನಹಳ್ಳಿಭೀಮವ್ವ
ಹರಿ ಹರಿ ಎನ್ನಬಾರದೇ ಮನವೇ ನೀನು ಪ ಕಂಡವರಾ ಬಿಡ ಮಾತುಗಳಾಡುತ | ಭಂಡತನದಿ ಫಲವೇನು 1 ಊರಗುದ್ದಲಿ ಕೊಂಡು ನಾಡಗಾವಲಿಯಾ | ದಾರಿ ತಿದ್ದುವರೇ ತಾನು 2 ಮಹಿಪತಿ ಸುತ ಪ್ರಭು ನಾಮವ ನೆನೆದರೆ | ಪರ ಸುಖಕರ ಧೇನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಕೆ ಕಡೆಗಣ್ಣಿಂದ ನೋಡುವೆ - ಕೃಷ್ಣ |ನೀ ಕರುಣಾಕರನಲ್ಲವೆ ? ಪಭಕ್ತ ವತ್ಸಲ ನೀನಲ್ಲವೆ -ಕೃಷ್ಣ |ಚಿತ್ಸುಖದಾತ ನೀನಲ್ಲವೆ ? ||ಅತ್ಯಂತ ಅಪರಾಧಿ ನಾನಾದಡೇನಯ್ಯ|ಇತ್ತಿತ್ತ ಬಾ ಎನ್ನಬಾರದೆ ರಂಗ 1ಇಂದಿರೆಯರಸ ನೀನಲ್ಲವೆ - ಬಹುಸೌಂದರ್ಯನಿಧಿ ನೀನಲ್ಲವೆ ? ||ಮಂದಮತಿ ನಾನಾದಡೇನು ಕೃಪಾ-ಸಿಂಧುನೀ ರಕ್ಷಿಸಬಾರದೆ ರಂಗ2ದೋಷಿಯು ನಾನಾದಡೇನಯ್ಯ - ಸರ್ವ -ದೋಷರಹಿತ ನೀನಲ್ಲವೆ ? ||ಗಾಸಿಯೇತಕೆ ನಿನ್ನ ನಂಬಿದೆ ಸಲಹಯ್ಯ |ಶೇಷಶಾಯಿ ಶ್ರೀಪುರಂದರವಿಠಲ3
--------------
ಪುರಂದರದಾಸರು
ನಾರಾಯಣ ಎನ್ನಬಾರದೆ - ನಿಮ್ಮ |ನಾಲಿಗೆಯೊಳು ಮುಳ್ಳು ಮುರಿದಿಹುದೇ ? ಪ.ವಾರಣಾಸಿಗೆ ಪೋಗಿ ದೂರ ಬಳಲಲೇಕೆ |ನೀರ ಕಾವಡಿಯನು ಪೊತ್ತು ತಿರುಗಲೇಕೆ ||ಊರುರು ತಪ್ಪದೆ ದೇಶಾಂತರವೇಕೆ |ದಾರಿಗೆ ಸಾಧನವಲ್ಲವೆ ಹರಿನಾಮ ? 1ನಿತ್ಯ ಉಪವಾಸವಿದ್ದು ಹಸಿದು ಬಳಲಲೇಕೆ |ಮತ್ತೆ ಚಳಿಯೊಳು ಗಂಗೆ ಮುಳಗಲೇಕೆ ||ಹಸ್ತವ ಪಿಡಿದು ಮಾಡುವ ಜಪ - ತಪವೇಕೆಮುಕ್ತಿಗೆ ಸಾಧನವಲ್ಲವೇ ಹರಿನಾಮ ? 2ಸತಿ - ಸುತರನು ಬಿಟ್ಟು ಯತಿಗಳಾಶ್ರಮವೇಕೆವ್ರತ - ಕೃಚ್ಛ್ರ ನೇಮ - ನಿಷ್ಟೆಗಳೇತಕೆ ||ಪೃಥಿವಿಯೊಳಗೆ ನಮ್ಮ ಪುರಂದರವಿಠಲನ |ಅತಿ ಭಕುತಿಯಿಂದೊಮ್ಮೆ ನೆನೆದರೆ ಸಾಲದೆ 3
--------------
ಪುರಂದರದಾಸರು
ಯಾಕೆ ಕಡೆಗಣ್ಣಿಂದ ನೋಡುವೆ-ಕೃಷ್ಣನೀ ಕರುಣಾಕರನಲ್ಲವೆ? ಪಭಕ್ತವತ್ಸಲ ನೀನಲ್ಲವೆ-ಕೃಷ್ಣ ಚಿತ್ತಸುಖದಾತ ನೀನಲ್ಲವೆ?ಅತ್ಯಂತ ಅಪರಾಧಿ ನಾನಾದಡೇನಯ್ಯಇತ್ತಿತ್ತ ಬಾ ಎನ್ನಬಾರದೆ ರಂಗ 1ಇಂದಿರೆಯರಸ ನೀನಲ್ಲವೆ ಬಹು ಸೌಂದರ್ಯನಿಧಿ ನೀನಲ್ಲವೆ?ಮಂದಮತಿ ನಾನಾದಡೇನು ಕೃಪಾಸಿಂಧುನೀ ರಕ್ಷಿಸಬಾರದೆ ರಂಗ2ದೋಷಿಯು ನಾನಾದಡೇನಯ್ಯ-ಸರ್ವ ದೋಷರಹಿತ ನೀನಲ್ಲವೆ?ಗಾಸಿಯೇತಕೆ ನಿನ್ನ ನಂಬಿದೆ ಸಲಹಯ್ಯಶೇಷಶಾಯಿ ಶ್ರೀಪುರಂದರವಿಠಲ3
--------------
ಪುರಂದರದಾಸರು