ಒಟ್ಟು 5 ಕಡೆಗಳಲ್ಲಿ , 2 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಡುಪಿ ಪರಿಸರದ ದೇವತೆಗಳು ಕಣ್ವ ಋಷಿ ತಪಗೈದ ಅಜ್ಜರ್ಕಾಡೆಂಬಲ್ಲಿ ಅವನಿಗೊಲಿದಿರುವ ದುರ್ಗೆ ವಾಸವಾಗಿಹಳು ಒಳಕಾಡು ಎಂಬ ತಾನವೆ ಚಂದ್ರನ ತಪೋ ಭೂಮಿ ಇಲ್ಲಿಯೇ ಸಕಲ ವಿದ್ಯಾಲಯವಾಯ್ತು 132 ಬೆಳ್ಳಿ ಮಂಚದ ಕಾಲುಗಳು ನಾಲ್ಕು ಎಂಬಂತೆ ಆರ್ಮೊಗನ ರೂಪಗಳು ನಾಲ್ಕು ದೆಸೆಗಳಲಿ ಮಾಂಗೋಡು ತಾಂಗೋಡು ಆರಿತೋಡು ಮುಚ್ಲಿಕೋಡು ನಾಮದಿಂ ಬೆಳಗುವವು ಷಷ್ಠಿದಿನದಂದು 133 ಕಡಿಯಾಳಿ ಎಂಬಲ್ಲಿ ಮಹಿಷಮರ್ದಿನಿಯಾಗಿ ದುರ್ಗಾಲಯವು ಉಡುಪಿ ಪೂರ್ವದ್ವಾರದಲ್ಲಿ ಪುತ್ತೂರು ಬೈಲೂರು ಬಡಗು ತೆಂಕು ದೆಸೆಯಲ್ಲಿ ಕೃಷ್ಣ ಸೇವೆಗೆ ದುರ್ಗೆ ಕಟಿಬದ್ಧಳಿಹಳು 134 ಸತ್ಯ ನುಡಿಯಲ್ಲಿರಲಿ ಧರ್ಮ ನಡೆಯಲ್ಲಿರಲಿ ಸ್ವಾಧ್ಯಾಯದಲಿ ಎನಗೆ ಎಚ್ಚರವದಿರಲಿ ಅಜ್ಞಾನದಂಧಕಾರದ ದಿಕ್ಕಿನಿಂದೆನ್ನ ನಿನ್ನ ಬೆಳಕಿನ ಕಡೆಗೆ ಕರೆದೊಯ್ಯು ದೇವಾ 135 ಪರಶುರಾಮಕ್ಷೇತ್ರ ಹುಟ್ಟುಭೂಮಿಯು ಎನಗೆ ಪರಶುರಾಮನು ನೀನೆ ನಿನ್ನ ಕ್ಷೇತ್ರವಿದು ಪರಮಹಂಸಾಖ್ಯಯತಿಗಳ ಮಾನಸಹಂಸ ಸೋಹಂ ಎನ್ನುವ ಬ್ರಹ್ಮ ಎನ್ನೊಳಗೆ ಇರುವೆ 136 ಕೃಷ್ಣಾರ್ಪಣವದಿಲ್ಲದಾವುದು ಫಲ ಕೊಡದು ಅದರಿಂದ ಕೃಷ್ಣನಿಗೆ ಕೃತಿಯನರ್ಪಿಸುತ ಸಾಲೋಕ್ಯ ಸಾಮೀಪ್ಯವನ್ನು ಬಯಸುವೆ ನಾನು ಯೋಗ್ಯತಾನುಗುಣವಾಗಿ ಫಲವ ಕೊಡು ಹರಿಯೆ137 ಪರಶುರಾಮನು ರಾಮ ಪರಶು ರಾಮನು ಕೃಷ್ಣ ರಾಮದಾಸನು ನಾನು ಕೃಷ್ಣದಾಸನಿಹೆ ಬರೆದ ಕೃತಿಯಿಂದ ನೀನ್ ಸುಪ್ರಸನ್ನತೆ ಪಡೆದು ಭಕ್ತಿ ಮುಕ್ತಿಗಳ ಕೊಟ್ಟು ರಕ್ಷಿಸು ಶ್ರೀಶ 138 ಉಡುಪಾನ್ವಯಜ ನಾನು ಉಡುಪಾನ್ವಯದ ನೀನು ಉಡುಪಿ ಹುಟ್ಟೂರೆನಗೆ ನೀನುಡುಪಿಗತಿಥಿ ಮಧ್ವ ಹೃದಯವು ನಿನಗೆ ವಾಸದ ಸ್ಥಾನವಿರೆ ಮಾಧ್ವಕೋಟಿಗಳಲ್ಲಿ ಕೀಟನಾಗಿಹೆ ನಾನು 139 ವಿಷ್ಣು ಪದದೊಳಗಿರುವ ಜ್ಯೋತಿಲೋಕದ ಒಡೆಯ ಆ ಜ್ಯೋತಿಲೋಕಕ್ಕೆ ಕರೆದೊಯ್ಯುತ ನನ್ನ ಭಕುತರಿಗೆ ಮುಕುತಿ ಕೊಡುವುದೆ ನಿನ್ನ ಸಂಕಲ್ಪ ಅದರಿಂದ ನಿನ್ನನ್ನು ಶರಣು ಶರಣೆಂಬೆ 140 ಚಾಂದ್ರಮಾನದ ಪಿಂಗಳಾಖ್ಯ ಸಂವತ್ಸರದಿ ಚೈತ್ರ ಮಾಸದ ನವಮಿಯ ದಿನದಲ್ಲಿ ಕಾಲ ಇದನರ್ಪಿಸುತ ನಾನು ಕೃತಕೃತ್ಯನಾದೆ ಶ್ರೀಕೃಷ್ಣ ಕಾಪಾಡು 141
--------------
ನಿಡಂಬೂರು ರಾಮದಾಸ
ಗುರುವಚನದಲಿ ನಂಬನು ನರಭಾವ ಅವರೊಳು ಕಾಂಬನು ಕರಣ ತ್ರಯದಲಿ ಶುಂಭನು ಗುರು ಭಕ್ತ ನೆನಿಸದರೇನು ಮಾ 1 ಸರ್ವರೊಳು ಹರಿ ನೋಡದೇ ಗರ್ವದ ಗುಣಗಳೀಸಾಡದೆ ನಿಜ | ದರ್ವಿನೊಳು ಮನ ಕೂಡದೇ | ಭಾಗವತರೆನಿಸಿದರೇನು ಮಾ 2 ವಾಸನಿಯ ಬಲ ಕಡಿಯಾ ದೇವೆ | ಆಸೆಯಲಿ ಮನ ಜಡಿಯದೆ ನಿಜ | ದ್ಯಾಸದಂಡವ ಪಿಡಿಯದೆ ಸ | ನ್ಯಾಸಿಯೆನಿಸಿದರೇನು ಮಾ 3 ನುಡಿಯ ಬೀರುತ ಸಂತರಾಜನ | ರೊಡನೆ ಹಾಕುತ ಸಿಂತರಾ ತಮ್ಮ | ನಡತಿ ನೋಡಲು ಭ್ರಾಂತರಾ ತಾ | ಸಂತ ನೆನಿಸಿದರೇನು ಮಾ 4 ತಂದೆ ಮಹಿಪತಿ ಪಾದವಾ ಬೆರೆ | ಭವ | ಬಂಧ ಮಾಡದೇ ವಾತಾ | ಬಂದ ಜನಮಕಿದೇನು ಮಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವ ಜಯದೇವ ಜಯದೀನದಯಾಳಾ ಜಯಜಯ ಶ್ರೀಗುರು ಮಹಿಪತಿ ಭವತಾರಕ ಲೀಲಾ ಪ ಮರವಿನ ಕತ್ತಲಿಯೊಳಗೆ ಮುಂದುಗಾಣದಲಿರಲಿ ಅರವಿನದೀಪವ ಹೆಚ್ಚಿ ದೋರುತಲೀ ಸ್ಥಿರವನು ಗೊಳ್ಳದ ಚಿತ್ತವ ಭಜನಿಗೆಲಿಸುತಲಿ ಹರಿಸಿದ ವಿದ್ಯದಗೃಂಥಿಯ ಸಂಶಯ ಬಿಡಿಸುತಲಿ 1 ಪರಿಪರಿಯಿಂದಲಿಗರದು ಬೋಧನಾಮೃತನುಡಿಯಾ ಅರಹಿಸಿಯೋಗದ ಮಾರ್ಗವ ಸಾಂಖ್ಯದನಿಲ್ಲ ಕಡಿಯಾ ಕರಣೀಂದ್ರಿಯಗಳ ವಡದಾಸ್ವಾನಂದದಯಡಿಯಾ ಕರುಣಿಸಿ ವಿಶ್ವಂಭರಿತದ ತೋರಿದೆ ಇತ್ಥಡಿಯಾ 2 ನಿನಗುತ್ತೀರ್ಣವಕಾಣದೇ ತನುವಾರತಿ ಮಾಡೀ ಮನವೇದೀಪವು ಸದ್ಭಾವನೆ ಆಜ್ಯನೀಡಿ ಅನುದಿನ ಬೆಳಗುವ ನಂದನುಮಹಿಮೆಯ ಕೊಂಡಾಡಿ ಚಿನುಮಯಸುಖದೊಳು ಬೆರೆದಾಹಂಭ್ರಮ ಈಡಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮರೆಯದಿರುವರೋ ನಿನ್ನ ಸ್ಮರಣೆಯಾ ನೀನು ಪ ಗರಿಯಾ ಚರಿಯಾ ಮರಿಯಾ ನೆರಿಯಾ | ಸೇರಿ ಕ್ರೂರ ಮಾರಿದಾರಿ ಜಾರಿ ದೂರಸಾರದೇ ಅ.ಪ ಕಡಲಶಯನೆಚ್ಚರಾ ಕಳೆದು ಹೊರಿಯಲುದರಾ | ಬಿಡದೋಲೈಸಿ ಘನಮದರಾ | ಕಡಿಯಾ ಕಿಡಿಯಾ ನುಡಿಯಾ ಪಡಿಯಾ | ಬೇಡಿ ಕಾಡಿ ಓಡಿ ಆಡ ಬ್ಯಾಡ ಗಾಢ ಮೂಢನೇ 1 ತರಳ ಪ್ರಾಯ ಮುಪ್ಪಿಂದೆ ತೀರಲಾಯುಷ್ಯ ಬರುದೇ | ಯರಗುವಾಯಮ ತಾ ನಿಲದೇ | ತ್ವರಿಯಾ ಧರಿಯಾ ಕುರಯಾ ಮರಿಯಾ | ವೈರಿ ಮೀರಿ ಹಾರಿ ತೂರಿ ಹೊರುವಂದದಿ 2 ಮಿನಗು ಬೆಳಗ ಘನ ಮಹಿಪತಿ ಸುತ ಪ್ರಿಯನಾ | ಅನುಭದಿಸದಿಹುದೇನಾ | ಅನುವೇ ಮನವೇ ಗುಣವೇ ದನವೇ | ಜ್ಞಾನ ಹೀನ ಮಾನ ದೀನ ಆನನದಲೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾನವನೇನಣ್ಣಾ | ಅವನೀಗ | ತಾನುದ್ಧರಿಸಲುದೆರಿಯನು ಕಣ್ಣಾ ಪ ಭಕುತಿಗೆ ಕಾಯವ ಕದ್ದಾ | ವಿ | ರಕುತಿಗೆ ಮನವನುತಿದ್ದಾ | ಸಕುತಲಿ ವಿಷಯ ಮೆದ್ದಾ | ಮುಕುತಿ ಪಥದಿಂ ಜಾರಿ ಬಿದ್ದಾ 1 ಸಿಂತರ ಗುಣಗಳ ಕಡಿಯಾ | ಈ | ಭ್ರಾಂತರ ಸಂಗದಿ ಸಿಡಿಯಾ | ಸಂತರ ಕೇಳದೇ ನುಡಿಯಾ | ಅಂತರಂಗದ ಸುಖವನು ಪಡಿಯಾ 2 ಅರ | ವಿಂದನ ಭಜನೆಯ ಸ್ವಾದಾ | ಮಂದನು ತಿಳಿಯದೆ ಮರೆದಾ | ತಂದೆ ಮಹೀಪತಿ ನಂದನ ಸಾರಿದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು