ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಂದಿಸಿದ್ದು ಕುಂದಾದದ್ದೇನೊ ಮಂದಮತಿಗಳು ನಿಂದು ಸುಜನರಿಗೆಲ್ಲ ಪ. ಅಂದನುವಾಗಿಲ್ಲೆ ಇಂದಿರೇಶನು ಮಂದಗಮನೆ ದ್ರೌಪದಿಗೆ ಅ.ಪ. ಕಂದನೆಂದು ಕೌರವನ ಸೇವೆಗೆ ಆ ನಂದದಿಂದ್ಯವರ ಬೇಡೆಂದ ಮುನಿ ಬಂದರತ್ನವ ಬಿಟ್ಟನ್ನವ ಬೇಡಿಬಾರೆನೆ ಇಂದು ಮುಖಿ ಕೈಯಿಂದಿಡಿಸಿದ ಕೃಷ್ಣ 1 ಖಡ್ಗ ತೋರಿ ಬಳ ಪ್ರಹ್ಲಾದನಂಜಿಸೆ ಗುಡ್ಡ ಪೊತ್ತ ನರಹರಿಯಾಗ ಹೆಡ್ಡನೆ ತೋರುವೆನೆಂದು ಕಂಬದಿ ದೊಡ್ಡ ಮೃಗರೂಪದಲಂಜಿಸಿದ 2 ತೊಡೆಯನು ಬಿಡು ಎನುತೊಡನೆ ನೂಕಲು ಪೊಡವಿಯಲ್ಲಿಹುದು ನಡೆ ಬಾಲಕನೆನೆ ಕಡುಭಯದಲಿ ಧೃವ ಒಡನೆ ಹರಿಯ ಪಾದ ಬಿಡದೆ ಧ್ಯಾನಿಸೆ ದೃಢವರವಿತ್ತ ಹರಿ (ಕಡೆ ಹಾಯಿಸಲು) 3 ಕರಿಯ ಕಂಬದ ತೆರದಿ ನಿಲಿಸೆ ನಕ್ರ ಪೊರೆದವನಾರೋ ಹರಿಯಲ್ಲದೆ ಶರಣಾಗತ ಚಿಂತಾಮಣಿ ಎನೆ ಕರಿ ಪರಿದು ಚಕ್ರನಿ ನಕ್ರನ ಬೇಗ 4 ಏಕಾದಶಿವ್ರತ ಏಕಭುಕ್ತನ ನೀರೆಡಿಸೆ ಮಾನುನಿ ಬರಲು ಹರಿತಾ ಕರುಣಿಪನೆಂದು ತರಳನ ಶಿರಕೆ ಕೈಹಾಕೆ ಶ್ರೀ ಶ್ರೀನಿವಾಸನ ಸುತತಾ ಕರುಣಿಸಿದ 5
--------------
ಸರಸ್ವತಿ ಬಾಯಿ
ಹರಿನಾಮ ಜಪಕಿನ್ನು ಸರಿಯಾದುದಿಲ್ಲ ಸರಸಿಜಾಸನಿದರ ಸಾರವನು ಬಲ್ಲ ಪ. ಬಡವಾಗ್ನಿ ಸುತ್ತಿದರು ಕೊಡುವದನುಪಮ ತಂಪ ನಡುನೀರೊಳಗೆ ಮುಳುಗಲುಡುಪವಹದು ಕಡುಭಯದ ಕಾಡಲ್ಲಿ ಮಿಡುಕುತಿಹ ಸಮಯದಲಿ ಒಡೆಯನನು ನೆನೆದವನ ಕಡೆಹಾಯಿಸುವ ನಮ್ಮ 1 ಘೋರ ರಿಪು ರಾಜಾಗ್ನಿ ಘೋರಾಹಿ ಪಕ್ಷಿ ಮೃಗ ಮಾರಿ ಮೊದಲಾದಭಯಕಾರಿಗಳನು ದೂರ ಓಡಿಸಿ ದಡವ ಸೇರೆ ಸಲಹುವ ನಮ್ಮ ಕಾರುಣ್ಯ ನಿಧಿಯನ್ನು ಸಾರಿಸಾರಿಗೆ ನೆನೆವ 2 ಆವ ಕಾಲಕು ಸುಖವನೀವ ಶೇಷ ಗಿರೀಶ ಶ್ರೀವರನ ಸರ್ವತ್ರ ಸ್ಮರಿಸಿರೆಂದು ದೇವಋಷಿಯೆಂದುದನು ದಿಟವೆನುತ ನಂಬುವರ ಕಾವನನುಭವ ಸಿದ್ಧ ಕಮಲಾಕ್ಷ ಗತಿಯೆಂಬ 3
--------------
ತುಪಾಕಿ ವೆಂಕಟರಮಣಾಚಾರ್ಯ
ಹರಿಯೇ ಧೊರೆಯೇ ಪ ಕಂದನ ನುಡಿಕೇಳಿ ಕಂಬದಿಂದ ಬಂದೆ ಅಂದು ಅಹಲ್ಯೆಯ | ಬಂಧನ ಬಿಡಿಸಿದೆ ಕರಿಮೊರೆಯಿಡಲಾಕ್ಷಣ ಬಂದು ನೀ ನಕ್ರನ್ನ ಸೀಳಿದ ಚಕ್ರಧರನೆ ನೀನು 1 ತರಳ ಧೃವನ್ನಾ ತೊಡೆಯಿಂದ ನೂಕಲು ಕಡುಭಯದಿಂದ ವನದಲ್ಲಿ ಚರಿಸುತ್ತ ಘನತಪಗೈಯಲು ಧೃಡ ಭಕುತಿಗೆ ಮೆಚ್ಚಿ ಒಡನೆ ಓಡಿ ಬಂದು ಘನತರ ಸಂಪದವತ್ತೆ 2 ಪರಮ ಪುರುಷೋತ್ತಮ ನೀನಲ್ಲವೆ ಮೊರೆಹೊಕ್ಕೆನು ನಿನ್ನ ಕರುಣಿಗಳರಸನ್ನ ತ್ವರಿತದಿಂದಲಿ ಕಾಯೊ ವೆಂಕಟವಿಠಲಾ 3
--------------
ರಾಧಾಬಾಯಿ