ಒಟ್ಟು 8 ಕಡೆಗಳಲ್ಲಿ , 5 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಲ್ಲೆಂದೆ ಇಲ್ಲೆಂದೆ ಭಕ್ತಜನಕೆ ಭಯ ಇಲ್ಲೆಂದೆ ಇಲ್ಲೆಂದೆ ಪ ಪಾದ ಎಲ್ಲ ಸಂಪದವೆಂದು ಬಲ್ಲಂಥ ಭಕ್ತರಿಗೆಲ್ಲರೀತಿಲಿ ಭಯಅ.ಪ ವಂದಿಸಿ ನುಡಿದರೆ ಬಂತೇನೆಂದೆ ನಿಂದಿಸಿ ನುಡಿಯಲು ಕುಂದೇನೆಂದೆ ಸಿಂಧುಶಯನನ ತಂದು ಮಾನಸವೆಂಬ ಮಂದಿರದಿಟ್ಟವರಿಗೆಂದೆಂದಿರದು ಭಯ 1 ಬಡತನ ಬಂದರೆ ಮಿಡುಕೇನೆಂದೆ ಕಡುಸಿರಿಯಿರ್ದರೆ ನಿಜವೇನೆಂದೆ ಜಡಭವ ಕನಸೆಂದು ದೃಢವಹಿಸೊಡಲೊಳು ಮೃಡಸಿಧರನೆ ನಿಮ್ಮ ಆಡುವರಿಗೆ ಭಯ 2 ಪೊಡವಿಪ ಮೆಚ್ಚಲು ಕೊಡುವುದೇನೆಂದೆ ಕಡುಕೋಪಗೊಂಡರೆ ಕೆಡುವುದೇನೆಂದೆ ಪೊಡವೀರೇಳನು ಒಡಲೊಳಗಿಟ್ಟವನಡಿ ಬಿಡುದಿರುವರಿಗಿಡಿ ಭುವನದ ಭಯ 3 ಸತಿಸುತರಿದ್ದರೆ ಹಿತವೇನೆಂದೆ ಸತಿಸುತರಿಲ್ಲದಿರೆ ಅಹಿತವೇನೆಂದೆ ರತಿಪತಿಪಿತನಡಿ ಸತತದಿ ಗೂಡಿಟ್ಟು ನುತಿಪ ಭಕ್ತರಿಗೆ ಕ್ಷಿತಿಮೇಲೇತರ ಭಯ 4 ಭೂಷಣ ಮಾಡಲದೊಂದೇ ಅಂದೆ ದೂಷಣ ಮಾಡಲದೊಂದೇ ಅಂದೆ ಶ್ರೀಶ ಶ್ರೀರಾಮನ ಸಾಸಿರ ನಾಮದ ಧ್ಯಾಸದಿಟ್ಟವರಿಗೇಸು ಕಾಲದಿ ಭಯ 5
--------------
ರಾಮದಾಸರು
ಈ ದೇಹಾಭಿಮಾನವೇ ಸಂಸಾರಮೂಲವಯ್ಯ ಕೇಳೀಗಲೇ ಜ್ಞಾನದಿಂದಾ ನೀ ದೂಡನಿನ್ನಭಿಮಾನ ವಿಷಯಾಭಿಲÁಷಾ ಮನದಲ್ಲಿ ಮೂಡಿ ಜೀವಂಗೆ ಗುಣದಲ್ಲಿ ಅನುರಾಗ ಕೂಡಿ ಇದೇ ಭೋಗನೇ ಮುಂದೆ ಸುಖದುಃಖವಾಗಿ ಜನುಮಕ್ಕೆ ಮೂಲಾದಿದೇ ವಾಸನಾಳಿ ಇದೇ ವಾಸನಾಳಿ ಇದೇ ಬಾಳುವೆ ಇದೇ ಬಾಳುನೆ ಇದೇ ಬಾಳು ದೇಹಾಭಿಮಾನಾಸ್ಪದಾ ಮೂಲ ಕೇಳಿಗಲೇ ಜ್ಞಾನದಿಂದ 1 ಮನದೇಹಗಳು ನಿನ್ನ ನಿಜರೂಪವಲ್ಲ ಇವುತೋರಿ ಬಯಲಾಗುತಿಹವಾಗಿವೆಲ್ಲ ನಿಜರೂಪವಲ್ಲ ಇದರಾಚೆಗಿಹ ಶುದ್ಧ ಚೈತನ್ಯ ನಾನೇ ಅದೇನಾನಿಹೆ ಅದೇ ನಾನಿಹೆ ಅದೇ ಸತ್ಯನೆಂದಾಗ ಹರಿವುದು ದೇಹಾಭಿಮಾನ ನೋಡುನೀ ಜ್ಞಾನದಿಂದ 2 ಈ ರೀತಿ ಸುವಿಚಾರವನು ಮಾಡಿಕÉೂಂಡು ನಿಜನನ್ನು ಕಂಡು ಸ್ವರೂಪಾತ್ಮನೋಳು ನಾನು ನೆಲೆ ನಿಂತು ಕೊಂಡು ಇದೆಲ್ಲ ಈ ಸಂಸಾರ ಕನಸೆಂದು ಕಂಡು ಪರಮಾತ್ಮನನೆ ವೃತ್ತಿಯೊಳು ತುಂಬಿಕೊಡು ಆನಂದ ಉಂಡು ಬಿಡೋ ಚಿಂತೆಯ ಬಿಡೋ ಚಿಂತೆಯಾ ಬಿಡೋ ಬಾಳ ಚಿಂತೆಯಾ ಶ್ರೀ ಶಂಕರಾಚಾರ್ಯರಿ ಬÉೂೀಧದ ಜ್ಞಾನದಿಂದ 3
--------------
ಶಂಕರಭಟ್ಟ ಅಗ್ನಿಹೋತ್ರಿ
ತಿಳಿ ಆದೆ ದೇವನು ಇರುತಿಹೆ ನೀ ಪ ಅದು ಕೊನೆಯಾಚೆಗೆ ಬೇರಿಲ್ಲ ಅದು ಮನಸಿಗೆ ನಿಲುಕುವದಲ್ಲ ಅದನನು ಭವದಲಿ ತಿಳಿಯಲ್ಲ ಬಿಡು ಮನಸಿನ ಗೊಡವೆಯನೆಲ್ಲ ಇದೆ ಜ್ಞಾನಾಗ್ನಿಯು ಸುಡುತಿಹುದೋ ಒದಗಿದ ಕರ್ಮದ ಕಾಷ್ಮಗಳ 1 ಮನವಡಗಿದ ಪದ ಪರಿಚಯವ ತನಿನಿದ್ರೆಯ ಮೀರಿದ ಸ್ಥಿತಿಯ ಅನುಭವದಲಿ ತರುವುದೆ ಯೋಗ ಅದನೇ ಯತ್ನದಿ ಸಾಧಿಸು ತಾ ನನಸಿನಲೇ ಗುರು ಮುಖದಿಂದ ಕೇಳಿ ನಿವೇಕದಿ ತಿಳಿ ಬೇಗಾ 2 ಎಚ್ಚರವಿದು ತಿಳಿ ಕನಸೆಂದು ಅಚ್ಚಳಿಯದ ಸ್ಥಿತಿ ನಾನೆಂದು ನಿಚ್ಚಳದಲಿ ನಿಶ್ಚಯಿಸುವದು ತುಚ್ಛದ ತೋರಿಕೆ ಎಂದು ತಿಳಿ ಸಚ್ಚಿತ್‍ಶಂಕರ ಬೋಧವನಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ನೀನೊಲಿಯಬೇಕು ನೀನೊಲಿಯಬೇಕು 'ಜ್ಞಾನ'ೀನನಿಗೆ ನಿತ್ಯಾನಂದ ಮೂರುತಿಯೆ ವಾಸುದೇವಾರ್ಯ ಪನರಳಿ ಬಹುಭವದಿ ನಾನಾ ಯೋನಿಮುಖಗಳಿಂದುರುಳಿ ಕೋಟಲೆಗೊಂಡು ಪುಳು ಪಕ್ಷಿ ಪಶು ಜಲಜತರು ಶಿಲೆಗಳೆನಿಪ ಹಲವಲಿ ನವೆಸವೆದು ಸ್ತ್ರೀಪುರುಷತ್ವ ಭೇದವಹ ನರಜನುಮ ಬಹರೆ 1ಪುರುಷನೆನಿಸಿದರು ಪಾದೋರು ಬಾಹುಜ ಭೇದವರಿತು 'ಪ್ರತ್ವ 'ದ್ಯಾ ನಯ 'ಜ್ಞಾನಶರಧಿಯೆನಿಸುವ ಭಾಗ್ಯ ಬರುವ ಸಾಧನಗಳನುಕರುಣಿಸುವ ಪರಮೇಶನೊಲಿವಂತೆನಗೆ 2'ವೃತ ಫಲವಹ ಸಶಾಸ್ತ್ರ ನಿಗಮಾಧೀತಿಯೊಪ್ಪದಿತದುಕ್ತ ಕರ್ಮಾಚರಣೆಗೈಯುತ ಸಮರ್ಪಿಸುತ್ತೀಶ್ವರಗೆ ತತ್ಫಲವ ಬಯಸದೆತೆಪ್ಪಗಿರುವಧಿಕಾರಿಯಪ್ಪ ಸತ್ಪಥಕೆ3ಶೃತಿಯುಕ್ತಿ ಸ್ವಾನುಭವಗಳ ಬಲದಿ ಮನನಗೈಯುತಲಿ ನಿತ್ಯಾನಿತ್ಯ ವಸ್ತುಗಳ ತಿಳಿದನರ್ಥತೆಯರ್ಥಗಳೊಳು ವೈರಾಗ್ಯ ಭಾಗ್ಯವನೀವಮತಿ ಬಂದು ಭಕತಿ ಜ್ಞಾನಗಳಳವಡುವರೆ 4ಬಂದ ವೈರಾಗ್ಯ ನೆಲೆಗೊಂಡು ಬಳಸಿದ ಕ್ರಿಯಾದಂದುಗವು ಸಡಿಲಿ ಬ'ರಂಗ ವ್ಯಾಪಿಸಿ ಕನಸೆಂದು ಕಾಣುತಲೂಡಲುಣುತಲುಡಿಸಿದರುಡುತತಿಂದು ತೇಗುವ ಕರ್ಮ ಬೆಂದು ಸುಖಿಯಹರೆ 5ಹೊರಗೊಳಗುಗಾಣದಾಗಸದಂತೆ ಬಯಲಾಗಿಕರಣಗಳ ಕಾಲಾಟವುಡುಗಿ ಸ್ವ ವ್ಯತಿರಿಕ್ತವರಸಿದರು ಸಂತೃಪ್ತಿ ತೋರದೆ ಸ್ವಾನುಭವಬರಿಯರಿವೆ ನೆಲೆಯಾಗಿ ತಾನೆ ತಾನಹರೆ 6ನಿಂತವೇದಾಂತ ಪದ್ಧತಿಯ ನಿಲಿಸುವರೆ ಮೊದಲಂತೆ ಕೃಷ್ಣಾವತಾರದಿ ಪಾರ್ಥಗೊರೆದ ಕೃಪೆವಂತ ನೀ ಮರಳಿ ಚಿಕನಾಗಪುರದಲಿ ಹೊಳೆದನಂತಮ'ಮನಾಗಿರುವೆ ವಾಸುದೇವಾರ್ಯ 7
--------------
ತಿಮ್ಮಪ್ಪದಾಸರು
ಮಾವಿನಕೆರೆ ಎಲ್ಲಿರುವೆ ಬಾರಂಗ ಬಾ ಮೋಹನಾಂಗ ಎಲ್ಲಿರುವೆ ನೀಲಾಂಗ ಮಾಂಗಿರಿರಂಗ ಪ ಇಲ್ಲಿರುವೆಯಾರಂಗ ಸಲ್ಲಲಿತ ರಂಗ ಮೆಲ್ಲನೇ ರಂಗ ಓ ಮುದ್ದುರಂಗಾ ಅ.ಪ ಅಲ್ಲಿ ನೋಡಿದರಿಲ್ಲ ಇಲ್ಲಿ ಕಾಣಿಸಲಿಲ್ಲ ಬಲ್ಲೆ ನಾನೀ ಚೆಲ್ಲ ವರದಾತನಲ್ಲ ಇಲ್ಲಿ ತಿಳಿಗೊಳವಿಲ್ಲ ಮಲ್ಲಿಗೆಯ ಹೂವಿಲ್ಲ ಇಲ್ಲಿರುವ ಧೃಢವಿಲ್ಲ ನೀ ಬರುವೆ ಅರಿವಿಲ್ಲ 1 ಗಜರಾಜ ಕರೆದನೆ ಅಜಾಮಿಳನು ಕೂಗಿದನೆ ಅಜನು ಬಾರೆಂದನೆ ಲೋಕವಂದಿತನೆ ರಜತಾದ್ರಿ ವಾಸನೆ ಪೂಜಿಸಲು ಕರೆದನೊ ಸುಜನ ವರದಾಯಕನೆ ವಿಜಯ ಪೂರಿತನೇ 2 ವನವನದಿ ಸಂಚರಿಸಿ ದನಿದನಿಯನನುಸರಿಸಿ ಮನದಿ ನೋವನನುಭವಿಸಿ ಕನಸೆಂದು ಭಾವಿಸಿ ಕನವರಿಪ ಯೆನ್ನೊಳಗೆ ಕನಿಕರವ ಸೂಸಿ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹೃದಯಾಧಿವಾಸಾ ಚಿನ್ಮಂiÀi ಪಾವನ ಅವನೆ ದೇವಾಧಿದೇವ ಮೂರು ಕಾಲದ ಸಾಕ್ಷಿ ಪರಮಾತ್ಮನೇ ಅವನೇ ಜಗದಾಧಿವಾಸ ಪ ಆಕಾರದೊರ ಏಕಾಂತಪೂರ ಏಕಾಂತಘನಪೂರ ತಾ ನಿರ್ವಿಕಾರ ಮನೋವಾಣಿದೂರ ಮನೋವಾಣಿಗೆದೂರ ಜಗಕೆಲ್ಲ ಆಧಾರ ತಾನಾಗಿಹ ಇವನೆ ಪರಮಾತ್ಮ ಈಶ ಹೃದಯಾಧಿವಾಸ 1 ಮನವೆಲ್ಲ ಉಡುಗಿ ಅನಿಸಿಕೆಯಡಗಿ ಅನಿಸಿಕೆ ತಾನಡಗಿ ತನಿನಿದ್ರೆಯಲ್ಲಿ ಇವು ಎಲ್ಲ ಮುಳುಗಿ ತಾನೇ ತಾನಾಗಿರ್ದ ಚಿನ್ಮಾತ್ರನೆ ಅವನೆ ಆನಂದರೂಪ ಹೃದಯಾಧಿವಾಸ 2 ಅವನೇ ನಾನೆಂದು ತಿಳಿ ಈಗ ನಿಂದು ಜಗವೆಲ್ಲ ಕನಸೆಂದು ಪರಮಾರ್ಥ ಸತ್ಯ ಶ್ರೀನಾರಾಯಣ ಇವನೇ ಗುರುಶಂಕರೇಶ ಹೃದಯಾಧಿವಾಸ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಧನ್ಯರಲ್ಲವೆ ಬಹು ಮಾನ್ಯರಲ್ಲವೆ ಪಸನ್ನುತಾಂಗ ಹರಿಯಚರಣಕಣ್ಣಿನೋಳ್ಕಂಡು ಹಿಗ್ಗುವರು ಅ.ಪಭಿನ್ನಭೇದವಳಿದು ಪರರತನ್ನ ಸ್ವರೂಪತಿಳಿದುಪರಮಪನ್ನಂಗಶಾಯಿ ಉನ್ನತಚರಿತವನ್ನು ಬರೆದು ಪಾಡುವವರು 1ವಿಷಮಸಂಸಾರ ಕನಸೆಂದುವಿಷಯಸುಖಕೆ ಮೋಹಿಸದೆಕುಸುಮನಾಭನ ಅಸಮನಾಮರಸನೆಯಿಂದ ಪೊಗಳುವರು 2ಕಡುಬಂಧ ಈ ಜಡಭವದಜಡರನಳಿದು ದೃಢವಹಿಸಿಒಡೆಯ ಶ್ರೀರಾಮನಡಿಯ ಭಕುತಿಪಡೆದು ಆನಂದದಾಡುವವರು 3
--------------
ರಾಮದಾಸರು
ಲೊಳ್ಳ ಕಳ್ಳೊಟ್ಟೆ ಜಂಬಾಳಗಟ್ಟೆ ಸಂಸಾರ ನೋಡಮ್ಮಲೊಳ್ಳ ಕಳ್ಳೊಟ್ಟೆ ಸರಸನಂಬಲುಗತಿಯದು ಲೊಳ್ಳಟ್ಯಮ್ಮಮ್ಮಪಹೆಂಡಿರು ಮಕ್ಕಳು ತಂದೆ ತಾಯಿಗಳುಭಾಗ್ಯವು ಲೊಳ್ಳಟ್ಯಮ್ಮಮ್ಮಚಂಡ ಯಮದೂತರುಮಂಡೆತಿವಿವಾಗಬಿಡಿಸುವರಾರು ಇಲ್ಲಮ್ಮ1ಶ್ರೇಷ್ಠತೆ ಚೆಲುವಿಕೆ ವಸ್ತ್ರವು ಪ್ರಾಯವುಸಿದ್ಧಿಯು ಲೊಳ್ಳಟ್ಯಮ್ಮಮ್ಮದುಷ್ಟಮದೂತರು ದುಬುದುಬು ಬಡಿವಾಗಬಿಡಿಸುವರಾರು ಇಲ್ಲಮ್ಮ2ವಾರೆ ಮುಂಡಾಸವು ಗೀರು ಗಂಧಗಳುಪೋರತನವು ಲೊಳ್ಳಟ್ಯಮ್ಮಮ್ಮಘೋರ್ಯಮದೂತರು ಘರ್ಜಿಸುತ ಒಯ್ವಾಗಬಿಡಿಸುವರಾರು ಇಲ್ಲಮ್ಮ3ಕನಸಿನ ತೆರವಿದು ಸಂಸಾರವೆಂಬುದುಅನುಮಾನವಿದಕಿಲ್ಲಮ್ಮಮ್ಮಕನಸೆಂದು ನಿಶ್ಚೈಸೆ ಕಾಲನು ಬಾರನುಮನದಲಿ ತಿಳಿದುಕೊ ನೀನಮ್ಮ4ತನ್ನನು ಮರೆತು ಸಂಸಾರ ನೆಚ್ಚಲುತಿರುಗುವ ಜನ್ಮವ ನಮ್ಮಮ್ಮಚೆನ್ನ ಚಿದಾನಂದ ಗುರುವೆಂದು ನಂಬಲುಜನ್ಮವ ಕಳೆವುವು ತಿಳಿಯಮ್ಮ5
--------------
ಚಿದಾನಂದ ಅವಧೂತರು