ಒಟ್ಟು 9 ಕಡೆಗಳಲ್ಲಿ , 8 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆದಿಕೇಶವಗರ್ಥಿಯಲಿ ನಾನಾರ್ತಿ ಮಾಡುವೆನು ಆರ್ತಿ ಮಾಡುವೆ ನಾ ಮಂಗಲಾರ್ತಿ ಮಾಡುವೆನು ಪ ಶೀಳಿ ದೈತ್ಯನ ಲೀಲೆಯಲಿ ಮಂಗಳೋಲೆ ತಂದವಗೆ ವ್ಯಾಲತಪ್ಪಿದ ಶೈಲವನು ಬೆನಮ್ಯಾಲೆ ಪಿಡಿದವಗೆ ಖೂಳಗೆ ತೋರಿದ ... ಪದಗೋಲ ತಂದವಗೆ ಬಾಲಗೆ ಪಿತ ಗೋಳು ಮಾಡಿದ ಕೇಳಿ ಆ ದೈತ್ಯನ ಶೀಳ್ದವಗೆ 1 ಭೂಮಿಯ ಬೇಡಿ ನಿಸ್ಸೀಮ ಬಲಿನೃಪನಾ ಹಮ್ಮು ಕರಗಿಸಿ ಪಾತಾಳಕಟ್ಟಿದವಗೆ ನೇಮದಲಿ ಕ್ಷಾತ್ರಸ್ತೋಮವ ನಿರ್‍ನಾಮ ಮಾಡ್ದವಗೆ ದಶಶಿರ ನಾಮವಳಿದ ಶ್ರೀರಾಮ ಚಂದಿರಗೆ ಸೋಮಕುಲದ ಸುನಾಮಿ ವರ್ಗಕೆ ಪ್ರೇಮರಸ ಸತ್ಯಭಾಮಾವರಗೆ 2 ಹರನ ಬಲಪಿಡಿದರೀ ತ್ರಿಪುರಸಂಹರೀಸಿದ ಶಿರಿವರಗೆ ಹರಿಯನೇರಿ ದನುಜಾರನ್ನೆಲ್ಲ ಸವರೀದ ಭೂವರಗೆ ಶರಣಜನರೊಳು ಕರುಣವಿರಿಸಿ ನಿರುತ ಪೊರೆದವಗೆ ಶ್ರೀ ನರಸಿಂಹವಿಠಲನಿಗೆ 3
--------------
ನರಸಿಂಹವಿಠಲರು
ಎಣಿಸಿಕೊ ನಿನ್ನೊಳಗಣ ದೋಷಗಣವಾಗಣಿಸು ಪರರೊಳಿಪ್ಪ ಶುಭಕರ ಗುಣವಾ ಪಪರರ ಬಾಗಿಲ ಕಾಯ್ದು ಪರಿಪರಿ ನುತಿಗೈದುಕರಗಿಸಿ ಮನವ ಬೋಧಿಸಿ ತತ್ವವಾಪಿರಿದಾಗಿಯವರ 'ತ್ತಾದಿಗಳೊಳು ಮನ'ರಿಸಿ 1ದೊರೆಯದಿರೆ ಪರಸತಿ ಪರಧನ ಪರರನ್ನಪರನಾಗಿ ಪರಿಪರಿಯುಪಚಾರಗೈದವರಪರ[ವಶ]ವ ಪಡೆದಿರುತವರೊಳು ದೋಷವೆರಸಿದ ಗುಣಗಳನರಸಿ ಕೆಡುವೆಯಾಕೆ 2ನಿನ್ನೊಳುದಿಸಿದ ಸದ್ಗುಣ ನಿನ್ನ ಭೂಸಿಯುನ್ನತನೆನಿಸಿಯೆ ರಕ್ಷಿಪುದೂನಿನ್ನೊಳಗಣ ದುರ್ಗುಣ ನಿನ್ನುವ ದೂಸಿಕಣ್ಣುಗೆಡಿಸಿ ಕೊಂದು ಕೂಗುವದದರಿಂದಾ3ಮೂಳ ಹೆಮ್ಮೆಯ ಬಿಡು ತಾಳುಖೂಳವಾದವ ಸುಡು ಹರುಷ ಬಿಡುಶೀಲತನವ ಹೂಡು ಬಾಳುವದನು ನೋಡುನಾಳೆ ತಾನಿರುವದೊ ಬೀಳುವದೋ ಗೂಡು 4ಪರರ ನಿಂದಿಸಿ ದೋಷ ಪಿರಿದಾಗಲಾಯಷ್ಯಕಿರಿದಾಗಿಯೂ ಕರ್ಮ ಸೂಕರ ಜನ್ಮಗೊಡದೆ ತೊಲಗಿ ಪೋಗುವುದರಿಂದಾ 5ವರಜನ್ಮಾಂತರದೆ ಸದ್ಗುಣ ಲೇಶ'ರಲದನೆ ಗಣಿಸುತ 'ಗ್ಗಲುಕರಗಿ ನಿನ್ನಯ ದೋಷ 'ರಿದುಮ್ಮಳವ ಪಡೆದಿರುವೆ ಸುಖ ಮತ್ತೆ ಪರಗತಿ ಪಡೆಯುವೆ 6ಗುರುವಾಸುದೇವಾರ್ಯ ಚರಣದೊಲವ ಪಡೆಯುವರೆಪರಗುಣಗಳ ಗಣಿಸು ಕಂಡ್ಯಾಕರುಣದಿಂ ಚಿಕನಾಗಪುರಪತಿ ವೆಂಕಟಗಿರಿವಾಸ ಸನ್ನಿಧಿ ದೊರೆಯುವದಿದರಿಂದಾ 7
--------------
ತಿಮ್ಮಪ್ಪದಾಸರು
ಚಿಂತೆಯಾತಕೆ ಮನವೆ ನಿನಗಿದು ಸತತ ಸಲ್ಲದು ಕಾಣೊ ಪುರಂದರ ದಾಸರನುದಿನ ಇಂತು ಬಗೆಯಲಿ ಪಾಲಿಸೊ ಪ ಅಗ್ರ ಬುದ್ಧಿಯ ತಾಳು ನಿನಗೆ ಸಾ ಮಗ್ರಿ ಆಲೋಚನಿ ಯಾತಕೆ ಸ ಮಗ್ರ ಸೋಪಸ್ಕರವನು ಅನುಗ್ರಹವನು ಮಾಡುತಾ ಉಗ್ರ ಮನುಜರ ಕೂಡಿಸದೆ ಪಾ ಅಂದು ಪೊಗಳಲು ಶೀಘ್ರದಲಿ ನಿಂದಿಹರೊ 1 ಹರಿಗುರುಗಳ ಸಂಕಲ್ಪ ತಪ್ಪದು ಗಿರಿಗಹ್ವರದೊಳಗಿದ್ದರು ಅದು ಬರಿದೆಯಾಗದು ಕೇಳು ಸ್ಮರಿಸಿ ಬಳಲಿ ನಲಿದಾಡಿ ಪರಿದ ಕಾಲಕೆ ಬಿಡದೆ ಅಹಿಕದ ಚರಿತೆ ಅವರಿಗೆ ಗಣಣೇನೊ2 ತೆತ್ತಗಿನ ಸ್ವಭಾವ ಆವದೊ ಎತ್ತಲಟ್ಟಿದರತ್ತ ತೊಲಗದೆ ಹೊತ್ತುಹೊತ್ತಿಗೆ ಪೋಗಿ ಬಾಗಿ ತೊತ್ತಿನಂದದಿ ಪ್ರಯೋಜನ ಹೊತ್ತು ಮೀರದೆ ಮಾಳ್ಪುದು ಧರ್ಮ ಮೊತ್ತವಲ್ಲದೆ ಇನ್ನೊಂದಿಲ್ಲವೊ ಇತ್ತ ಭಾಗ್ಯವಿತ್ತ ನಿರ್ಮಳ ಚಿತ್ತದಲಿ ಅರ್ಪಿಸುತಿರು3 ನೀನು ಮಾಡಿದ ಪುಣ್ಯಗಳಿಗೆ ತಾ ನಡದು ಬರುವುದೇ ಮರುಳೆ ನಾನಾ ಪರಿಯಲಿ ತಿಳಿದು ನೋಡು ಧ್ಯಾನದಿಂದಲಿ ದಿನಪ್ರತಿ ಜ್ಞಾನನಿಧಿ ನಿಜಗುರು ಶಿರೋಮಣಿ ಅನಂತಾನಂತ ಜನುಮದಲೀಗ ಗಾನಮಾಡಿದ ನಿಷ್ಟ ಪುಣ್ಯವು ತಾನೊಲಿದು ಫಲವಿತ್ತದೋ4 ಕಲ್ಲು ಕರಗಿಸಿ ಬೆಣ್ಣಿ ತೆಗುವಂಥ ಬಲ್ಲಿದರು ನಿನ ಗೊಲಿದಿರಲು ಎಲ ಎಲ್ಲಿ ಇಲ್ಲವೆಂಬೊ ಸೊಲ್ಲುಗಳಲ್ಲದೆ ಇದು ಸಲ್ಲದೊ ಸಕಲ ಮನೋಭೀಷ್ಟಾ ತುಲ್ಯ ವಲ್ಲಭ ಮಲ್ಲದಲ್ಲಣ ನಿಲ್ಲದಲೆ ವೊಲಿದಿಹನೊ 5 ನೂನ್ಯಪೂರ್ಣವು ಅವರನ ಕೂಡಿ ತನ್ನ್ಯೋಪಾಯವು ಯಾಕೆ ನಿನಗೆ ಕಣ್ಣೆವೆ ಇಡುವನಿತರೊಳು ಕಾರುಣ್ಯವರುಷಗರೆದು ಬಿಡುವ ದೈನ್ಯವೃತ್ತಿಯ ಬಿಡಿಸಿ ನಿಷ್ಕಾಮ ಪುಣ್ಯವನಧಿಯೊಳಿಡುವರೊ 6 ಊರ್ವಿಗೀರ್ವಾಣರಿಗೆ ಉಣಿಪುದು ಗರ್ವವನು ತಾಳದಲೆ ಚೆನ್ನಾಗಿ ಸರ್ವಬಗೆಯಲಿ ನಾನು ಎಂಬೊ ದುರ್ವಚನಗಳ ನುಡಿಯದೆ ಪೂರ್ವತನೆ ಬಯಸುತಾರಾಧಿಸು ಶರ್ವಸನ್ನುತ ವಿಜಯವಿಠ್ಠಲ ಪೂರ್ವನೆಂತ ಪ್ರಬಲನೆ7
--------------
ವಿಜಯದಾಸ
ತೊಲಗು ನೀ ತೊಲಗಿನ್ನು ಅಭಿಮಾನವೆಅಲೆಬಡಿಸದಿರೆನ್ನನೂ ಹಲವು ಜನರಕಾಲಕೆಳಗೆ ನಿಲ್ಲಿಸಿಯನ್ನ ಹೊಲೆಗೆಲಸವ ಮಾಡಲೆಳಸಿ ನೆಗ್ಗಿದೆಯಲ್ಲ ಪಸತಿಸುತ ಪೋಷಣೆಯು ಮುಖ್ಯವು ಮಾತಾಪಿತೃಗಳಾರಾಧನೆಯು ಬಳಗ ಬಂಧು ತತಿಗಳ ಮನ್ನಣೆಯು ಕುಲ ಜಾತಿ ದೇವತೆಯ ಪೂಜಿಪ ಹಬ್ಬವು ಬಿಡಕೂಡದುವ್ರತ ಉಪವಾಸವಾರತಿಯಕ್ಷತೆಯು ಮುಂಜಿಯುಸುತೆಗೆ ಮದುವೆಯೆಂದು ಮತಿಗೆಡಿಸಿದೆಯಲ್ಲ 1 ಅರೆಘಳಿಗೆಯು ನಿಲ್ಲಲು ವೇಳೆಯ ಕೊಡದೆರಗಿಸಿ 'ಷಯದೊಳು ನಾನಾ ಬಗೆಹರುಬಿಗೆ ಹರುಸಲು ಮನವನೀಕೊರಗಿಸಿ ಕುಣಿಸುತಲು ಒಂದೇ ಕ್ಷಣಹರಿನಾಮ ಸ್ಮರಣೆಗೆ ತೆರಹುದೋರಿಸದಾಯುಹರಿದು ಪೋಗುವ ಹಾಗೆ ಕರಗಿಸಿದುದೆ ಸಾಕು 2ಶ್ರವಣಕೆ ಮನ'ತ್ತೆಯಾ ನಾಮ ಸ್ಮøತಿ ಸ'ಯ ಸೇ'ಸಬಿಟ್ಟೆಯ ಸಜ್ಜನರೊಳೊಂದುವ ದಾರಿಯ [ತೋರಿ]ದೆಯ ಎಂದಾದರು ಶಿವಸೇವೆಗಳ ತಂದೆಯ 'ೀಗಾಗುವ ಹವಣನರಿಯದೆ ಸಂಗವ ಮಾಡಿ ನಿನ್ನೊಳಗ'ವೇಕವನು ಪಡೆದವನಾದೆನಯ್ಯಯ್ಯೊ 3ಕಂಡವರೊಡವೆಯನು ತಂದು ಕರೆದು'ಂಡು ಬಳಗವನ್ನು ಮನ್ನಿಸಿಯವರ್ಕೊಂಡಾಡೆ ಹರುಷವನು ತೋರಿಸಿ ಬಹಭಂಡಾಟನಡತೆಯನು ಕರೆಸಿಯನ್ನಗುಂಡಿಗೆ ನೂಕಿಸೆ ಕಂಡೆ ನಿನ್ನಾಟವಮೊಂಡಮುಂಡೇದೆನ್ನೀ ಕೂಗಕೇಳಿ ಬೇಗ 4ಶ್ರೌತ ಸ್ಮಾರ್ತದ ಬಟ್ಟೆಯ ಹೊಂದುವರೆ ನೀನೋತು ಮಾರ್ಗವ ತೊಟ್ಟೆಯ ಅನ್ಯಾಯದ ರೀತಿಯ ನೀ ಬಿಟ್ಟೆಯ ನರಕಬಪ್ಪ ಭೀತಿಯ ನೀತೊಟ್ಟೆಯ ಯೇನೆನ್ನದೆಲೆಕಾತರಿಸುತ ಕಾಮಕಾತು ಕ್ರೋಧವ ಮಾಡಿಮಾತಿಗಾದರು ಒಮ್ಮೆ ಸೋತವನಾದೆಯ 5ಕಲಹವ ಜನರೊಳಗೆ ಗಂಟಿಕ್ಕಿತುತೊಲಗಿಸಿ ಬಯಲೊಳಗೆ ನಿಲ್ಲಿಸಿಯೆನ್ನಹಲವು ಬಗೆಯ ಮಾತಿಗೆ ಗುರಿಯ ಮಾಡಿಬಳಲಿ ಬಾಡುವ ರೀತಿಗೆ ಕಂಗೆಡಿಸಿದೆಕಾಲದೊಳು ಧನದೊಳು ಬಲದೊಳು ಛಲದೊಳುನೆಲೆಗೊಂಡು ನೀಯೆನ್ನ ಥಳಿಸಿದುದೇ ಸಾಕು 6ಅರಿಯದಾದೆನು ನಿನ್ನನು ಅದರಿನಿಂದಹುರಿದೆ ನೀನೆನ್ನುವನು ಚಿಕ್ಕನಾಗಪುರದೊಳಗಜ್ಞರನು ರಕ್ಷಿಸಲಾಗಿಗುರುವಾಸುದೇವಾರ್ಯನು ನೆಲಸಿಹನುಮರೆಯೊಕ್ಕೆರಗಿ ನಿನ್ನ ಪರಿಯ ಪೇಳಲು ಜ್ಞಾನದುರಿಯೊಳು ದ'ಪನೆಚ್ಚರ ನಿಲಬೇಡಿನ್ನು 7
--------------
ವೆಂಕಟದಾಸರು
ನಾರಾಯಣನಲ್ಲದಿಲ್ಲ ಜಗದಿ ಪ ನಾರಾಯಣನೆ ವಾರಿಶಾಯಿಯಾದ ಮೇಲೆ ವಾರಿಸಂಪರ್ಕವಿಲ್ಲದ ವಸ್ತುವುಂಟೆಅ.ಪ ತೃಣ ಲತೆ ತರು ವನಸ್ಪತಿ ಸಂತತಿಯೊಳೆಲ್ಲ ಗಣನೆಯಿಲ್ಲದ ಪ್ರಾಣಿವರ್ಗದೊಳೆಲ್ಲ ಅಣುಮಹತ್ತೆನಿಪ ಚರಾಚರಗಳೊಳೆಲ್ಲ ಅಣಗಿ ಪೋಷಿಪ ರಸ ವಾರಿಯಾದ ಮೇಲೆ 1 ಧರೆಯೊಳಗಡಗಿಹ ಧಾತುಜಾಲವ ಕರಗಿಸಿ ನೆರೆ ವನಸ್ಪತಿವರ್ಗಕೆ ಉಣಿಸನಿತ್ತು ಪರಿ ಧಾನ್ಯ ಫಲಂಗಳ ರಚಿಸುತ್ತ ಹರಹಿ ಲೋಕದೊಳೆಲ್ಲರನು ಪೋಷಿಪ ಪ್ರಭು 2 ಒಂದೇ ಸ್ಥಳದಲಿ ಮೊಳೆತು ಬೆಳೆವ ಬೀಜಕ್ಕೆಲ್ಲ ಒಂದೇ ವಾಸನೆ ಗುಣ ರುಚಿಗಳುಂಟೇ ಸಂದೇಹ ಬೇಡ ನಿರ್ಲಿಪ್ತ ತಾನವುಗಳ ಕುಂದಿಸದೆ ಗುಣ ಸ್ವಭಾವಗಳ ಪೋಷಿಸುವ 3 ಸರ್ವವಸ್ತುಗಳಲ್ಲು ಅಂತರ್ಯಾಮಿಯಾಗಿ ಸರ್ವ ಚರಾಚರಕೆ ನಿಯಾಮಕನಾಗಿ ಸರ್ವರೊಳಡಗಿ ಪೋಷಿಪ ಘನಪ್ರಭುವಾಗಿ ಸರ್ವರುತ್ಪತ್ತಿ ಸ್ಥಿತಿಗೆ ಕಾರಣನಹ 4 ಪರಮಪುರುಷ ತನ್ನನಂತ ಮಹಿಮೆಯೊಳು ಕಿರಿದೊಂದಂಶದಿ ವಾರಿರೂಪದೊಳಿಂತು ಸರುವ ಚರಾಚರದಿರುತಂತರ್ಗತನಾಗಿಪೊರೆವ ಜನವ ರಘುರಾಮವಿಠಲ ಪ್ರಭು 5
--------------
ರಘುರಾಮವಿಠಲದಾಸರು
ಶ್ರೀ ಕಲ್ಯಾಣಿ ಸುಗುಣಮಣಿ ಗಿರಿಜೆ ಪ-ರಾಕೆ ಬಾಗಿಲ ತೆಗೆಯೆಸಾಕು ನೀನಾರು ನಿನ್ನಯ ನಾಮವನು ಪ-ರಾಕು ಮಾಡದೆ ಪೇಳಯ್ಯ 1 ಕಾಮಿನಿಯರೊಳು ಕಟ್ಟಾಣಿ ಪಾರ್ವತಿ ಕೇಳೆಕೌಮಾರಿ ಕಾಣೆ ಜಾಣೆಕೌಮಾರಿಯಾದರೊಳ್ಳಿತು ನಡೆ ಋಷಿಗಳಸ್ತೋಮದ ವನಕಾಗಿ 2 ಕಾಳ ಪನ್ನಗವೇಣಿ ಕಲಕೀರವಾಣಿಕೇಳೆ ಶೂಲಿ ಕಾಣೆಲೆ ಕೋಮಲೆಶೂಲಿ ನೀನಾದರೊಳ್ಳಿತು ನಡೆ ವೈದ್ಯರಜಾಲವಿದ್ದೆಡೆಗಾಗಿ3 ನೀಲಕುಂತಳೆ ನಿಗಮಾಗಮನುತೆ ಕೇಳೆನೀಲಕಂಠನು ಕಾಣೆನೀಲಕಂಠನು ನೀನಾದರೆ ತರುಗಳ ಮೇಲೆಕುಳ್ಳಿರು ಪೋಗಯ್ಯ4 ಸೋನೆ ಕೋಕಿಲಗಾನೆಸ್ಥಾಣು ನಾನೆಲೆ ಜಾಣೆನೀನಾದರೊಳ್ಳಿತು ನಡೆ ವಿಪಿನಸ್ಥಾಣದೊಳಿರು ಪೋಗಯ್ಯ5 ಎಸಳುಗಂಗಳ ಬಾಲೆ ಎಸವ ಮೋಹನಮಾಲೆಪಶುಪತಿ ಕಾಣೆ ಕೋಮಲೆಪಶುಪತಿಯಾದರೊಳ್ಳಿತು ನಡೆಗೋಗಳವಿಸರವ ಕಾವುದಕೆ 6 ಜಾತಿನಾಯಕಿ ಕೇಳೆ ನೂತನವೇತಕೆಭೂತೇಶ ಕಾಣೆ ಜಾಣೆಭೂತೇಶನಾದರೊಳ್ಳಿತು ನಡೆ ಭೂತವ್ರಾತದ ವನಕಾಗಿ7 ಮಿಂಚಿನ ಗೊಂಚಲ ಮುಂಚಿ ಪಳಂಚುವಚಂಚಲನೇತ್ರಯುಗೆಅಂಚಿತಮಾದ ವಿಪಂಚಿಯ ಸ್ವರವ ಪಳಂಚುವಿಂಚರದಬಲೆ 8 ಕರಗಿಸಿ ಕರುವಿಟ್ಟೆರದ ಚಿನ್ನದ ಬೊಂಬೆಸುರುಚಿಕರ ಸುನಿತಂಬೆಪರಿಪೂರ್ಣ ಶರದಿಂದುವದನೆ ಕುಂದರದನೆವರಸುಗುಣಾವಲಂಬೆ 9 ಕುಂಕುಮರೇಖಾಲಂಕೃತೆ ಪರತರೆಪಂಕಜಸಮಪಾಣಿಶಂಕರಿ ಪಾಪಭಯಂಕರಿ ಸರ್ವವಶಂಕರಿ ಶುಭವಾಣಿ10 ಚಂಡಮುಂಡಾಸುರಖಂಡನ ಪಂಡಿತೆಮಂಡಲತ್ರಯನಿಲಯೆಮಂಡಿತ ನವರತ್ನಖಚಿತ ಮಹೋಜ್ವಲಕುಂಡಲೆ ಮಣಿವಲಯೆ 11 ವರದಾನದಿಯ ತೀರವಾಸ ಶ್ರೀ ಕೆಳದಿಯಪುರದ ರಾಮೇಶ ಕಾಣೆಪುರದ ರಾಮೇಶನಾದರೆ ನೆರೆಬಾಯೆಂದುಕರೆದಳು ಗಿರಿಜಾತೆ12 ಗಿರಿಜಾ ಶಂಕರರ ಸಂವಾದದ ಪದಗಳಬರೆದೋದಿ ಕೇಳ್ದರಿಗೆಪರಮ ಸೌಭಾಗ್ಯ ಸಂತಾನಗಳನು ಕೊಟ್ಟುಪೊರೆವನು ರಾಮೇಶ13
--------------
ಕೆಳದಿ ವೆಂಕಣ್ಣ ಕವಿ
ಹುಚ್ಚರಾಗಿ ಕೆಡಬೇಡಿರೆಚ್ಚರವ ಪಡಿರೋ ಮೆಚ್ಚಿ ಸ್ತ್ರೀಯರ ಇಚ್ಛೆಗೊಳಗಾಗದಿರಲೊ ಪ ಬಡಿವಾರತನದಿಂದ ಕಡುದೈನ್ಯದೋರುವರು ಒಡಲೊಳಗಿನ ಹರಳು ಒಡೆದರಳುವಂತೆ ಒಡಲೊಳೊಂಚನೆ ಬಿಡರು ಕಡೆತನಕ ಸ್ಥಿರವಲ್ಲ ಕಡುಪಾಪಿರೂಪಿನ ಮಡದಿಯರ ಮನವು 1 ಮನವ ಕರಗಿಸಿ ತನ್ನ ಮನೆಯ ಪುರುಷನ ಜರೆದು ಮನಮೋಹಿಸಿನ್ನೊಬ್ಬ ಗೆಣೆಯನಂ ಕೂಡಿ ತಿನುವಳು ಬಿಡದೊಂದುದಿನ ಪತಿಯ ಪ್ರಾಣಮಂ ಘನಪಾಪಿ ವನಿತೆಯರ ಮನನಂಬಿಗಲ್ಲ 2 ತನ್ನ ಪುರುಷನಮುಂದೆ ಬಣ್ಣದಮಾತಾಡಿ ಹಣ್ಣಿಗೆತಂದವನ ತನ್ನೊಶದಲಿರಿಸಿ ಮುನ್ನ ಜನನೀ ಜನಕರನ್ನು ಅಗಲಿಸಿ ಒಡನೆ ತನ್ನಯ ಅನುಕೂಲವನ್ನೆ ಸಾಧಿಪಳು 3 ಅವಗೆ ಹಿತವನೆ ತೋರಿ ಇವಗೆ ಕಾಲನೆ ಎತ್ತಿ ಅವನಿಗೆ ಕೈಕೊಟ್ಟು ದಿವರಾತ್ರಿಯೆನದೆ ಭ ಭವ ಭವವ ತಿರುಗುವರು ಜೀವಘಾತಕಿಯರದಾವ ಭರವಸವೊ 4 ಹರಿದಿಯರ ಒಡನಾಟ ನರಕಕ್ಕೆ ಮೂಲವು ದುರಿತಕ್ಕೆ ತವರಿದು ಮರೆಮೋಸದುರುಲು ದುರುಳೆಯರ ಚರಿತಕ್ಕೆ ಮರುಳಾಗಿ ಕೆಡದೆ ಭವ ಹರ ಶ್ರೀರಾಮನ ಪದಸ್ಮರಣೆ ಸಂಪಾದಿಸಿರೊ 5
--------------
ರಾಮದಾಸರು
ಭಕ್ತರ ಪ್ರೇಮಿ ಫಕೀರ ಸ್ವಾಮಿ | ಭಕ್ತರ ನಿರ್ಮಿಸಿಭಕ್ತಿಯ ಪ್ರಕಟಿಸಿ | ಯುಕ್ತಿಯ ಬೋಧಿಸಿ | ಶಕ್ತಿಯನೊದಗಿಸಿ | ತ್ಯಕ್ತ ವಿಷಯ ವಿರಕ್ತಿಯ ಸೇರಿಸಿ |ಮುಕ್ತನೆನಿಸಿ ಅವ್ಯಕ್ತವ ಕರಗಿಸಿ1<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಬೋಧವ ಬೋಧಿಸಿ ಭೇದವ ಛೇದಿಸಿ |ವಾದವ ಅರಗಿಸಿ ಕ್ರೋಧವ ಕರಗಿಸಿ |ಛೇದ-ವಿಚ್ಛೇದದ ಹಾದಿಯ ಹಾರಿಸಿಓದುವ ನುಡಿ ವೇದಾಗಮವಾದವು2ನೀನೇ ನಿನ್ನ ನೀನೆ ನಿನ್ನೊಳು ನೀನೆ ಜಗದೊಳುನೀನೆ ಎನ್ನೊಳು ನೀನೆ ಸರ್ವವು ನೀನೆ ಎಲ್ಲವು |ನೀನೆ ನಿನ್ಹೊರತೇನೊಂದಿಲ್ಲ3ಶ್ರುತಿಸ್ವ .............. ನಿಂತವುಸ್ಮøತಿಗಳು ನಿಂತವು .........................ಮತಿಗಳು ಸ್ತುತಿಗಳದ ನಿಮ್ಮ ನಾ ಕಂಡು4ಮಾರಮದ ಸಂಹಾರ ತಿಸರ ಆಸಾರ ಸುಖ ಸಾಕಾರಾ |ಶಂಕರ ಶೂರಾಭವಭಯಹಾರಾಶ್ರೀ ಫಕೀರ................... ಜಗದೋದ್ಧಾರ ಸದ್ಗುರು5
--------------
ಜಕ್ಕಪ್ಪಯ್ಯನವರು