ಒಟ್ಟು 315 ಕಡೆಗಳಲ್ಲಿ , 68 ದಾಸರು , 295 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಘಾಸಿ ತಿಮಿರದಿನಪ ಪ ಈಶನ ವರಸುತ ದಾಸ ಜನರ ಹಿತ ಪಾಶಾಂಕುಶ ಹಸ್ತ ಅ.ಪ ವಿದ್ಯೆ ಪ್ರದಾಯಕ ಬುದ್ಧಿ ಪ್ರಬೋಧಕ ಸಿದ್ಧಿದ ಶ್ರೀ ಬೆನಕ ಹೊದ್ದಿ ನೆನೆವ ಭಕ್ತರುದ್ಧರಿಸುವ ಶಕ್ತ ಮುದ್ದು ಮುಖವ ತೋರಿತ್ತ 1 ಗಿರಿಜೆ ಸತ್ಕುವರನೆ ದ್ವಿರದ ಸುವದನನೆ ಶರಣರ ಪಾಲಿಪನೆ ಪೊರೆಯನ್ನ ಸದ್ದಯದಿ 2 ಕಿಂಕರ ಶಂಕರ ಶತ್ರುಭಯಂಕರ ಶಂಖಚಕ್ರಾಬ್ಜಧರ ಪಂಕಜ ಮುಖವ ತೋರ 3 ರಕ್ತ ವಸ್ತ್ರಾನ್ವಿತ ರಕ್ತ ಗಂಧಾಕ್ಷತ ರಕ್ತ ಮಾಲಾದಿಧೃತ ಭಕ್ತ ಜನಾವನ ಶಕ್ತನೆ ನೀ ಎನ್ನ ಚಿತ್ತದಿ ಪೊಳೆಯೊ ಘನ್ನ 4 ವೇದನಿಕರ ಸುಗೀಯ ಸಾಧು ಸಜ್ಜನ ಸಮ್ಮತ 5 ಇಂಬಿಟ್ಟಿಯೆಂದು ನಿನ್ನ ಅಂಬರೊ ಸುಗುಣಸಿಂಧು 6 ವಕ್ರವ ತುಂಡಿಪ ಕತದಿಂದಲಪ್ಪ ವಕ್ರತುಂಡನು ನೀನಪ್ಪ ಶಕ್ರ ಪೂಜಿಸಿದನು ವೃತ್ರನ ವಧೆಗಿನ್ನುಪಕ್ರಮದಲೆ ತಾನಿನ್ನು 7 ಪರಿವಾರಸಹಿತ ಘನ್ನ ಧುರದಲ್ಲಿ ಬಿದ್ದನು ವರ ಧರ್ಮ ಗೆದ್ದನು ಎರಗಿ ಅರ್ಚಿಸಿ ನಿನ್ನನು 8 ದುರಳ ದಶಾನನ ಸರಕುಮಾಡದೆ ನಿನ್ನ ಗರುವದಿಂದಿರಲವನ ಪರಿಭವ ಕಾರಣವಾದುದೆಂಬರು ಕಣ ಶರಣಜನಾಭರಣ 9 ನೇಮದಿರುತಿದ್ದು ಹೇ ಮಹಿಮ ಖರ ದಶಶಿರನನ್ನು ಧುರದಲ್ಲಿಗೆದ್ದನು ಕರುಣೆಯೆ ಒರೆಯಲೇನು 10 ಕೋರಲು ಸಿದ್ಧಿ ಅಂದು ತೋರಿದೆ ಕರುಣವ ಚಾರುಕರದಿ ಅವನಾರೈಸಿ ಕರುಣಾರ್ಣವ 11 ಮುಪ್ಪುರ ಗೆದ್ದನು ಮುಕ್ಕಣ್ಣ ನಿನ್ನನು ತಪ್ಪದೆ ನೆನೆದವನು ಅಪ್ಪನೆ ನಿನ್ನಯ ಗೊಪ್ಪ ಚರಿತ್ರೆಯ ಇಪ್ಪಂತೆ ಪೇಳಿಸಯ್ಯ 12 ಸೃಷ್ಟಿಕರ್ತನು ತನ್ನ ಸೃಷ್ಟಿಗೈಯ್ಯಲು ಮುನ್ನ ಮುಟ್ಟಿಭಜಿಸಿದ ನಿನ್ನ ಎಷ್ಟೆಂತ ಪೇಳಲಿ ಶ್ರೇಷ್ಠಗುಣಾವಳಿ ಅಷ್ಟೆಲ್ಲ ನೀನೆ ಬಲ್ಲಿ 13 ಮಾಧವ ಪೊಂದಿದ ನಿನ್ನನವ ದ್ವಂದ ವಿವಾಹಾದುದು 14 ಭಾರತ ಬರೆಯಲು ಆಕಾರ ನೋಡಲು ತೋರದೆ ಇರುತಿರಲು ಶೂರನೆ ನಿನ್ನನು ಅರಿಸಿ ವ್ಯಾಸನು ಬೀರಿದ ಮಹಿಮೆಯನು 15 ಏನು ಕರುಣವಯ್ಯ ಶ್ರೀನಿಕೇತನಿಗೈಯ್ಯಾ ತಾನೆ ಇತ್ತಿಹನಯ್ಯ ಆನತಿಸಲು ಇಷ್ಟ ಮಾಣಲು ಸಂಕಟ ನೀನು ಕೊಡೆನುತದಟ 16 ಭಜಿಪರ ಭಾಗ್ಯದ ಯಜಿಪರಭೀಷ್ಟದ ತ್ಯಜಿಪರ ಸಂಕಟದ ಪಡಿ 17 ಜಯ ಜಯ ಕಾಪಿಲನೆ ಫಾಲ ಜಯ ಗಜಮುಖನೆ 18 ದ್ವಾದಶ ನಾಮವ ಆದರದಿಂದಾವ ಓದುವ ಕೇಳುವವ ಆದಿ ಪೂಜಿತನೊಲಿವ 20 ವಿದ್ಯಾರಂಭದಿ ಮುದ್ದು ವಿವಾದÀದಿ ಪೊದ್ದಲ್ಲಿ ನಿರ್ಗಮದಿ ಯುದ್ಧದಿ ನಿನ್ನನು ಬದ್ಧದಿ ನೆನೆವನು ಗೆದ್ದಪನೈ ಅವನು 21 ಏಕವಿಂಶತಿಪದ ಕೋಕನಪುಷ್ಪದ ಶ್ರೀಕರ ಮಾಲೆ ಇದ ಶ್ರೀಕಾಂತ ವರಭಕ್ತ ನೀ ಕರುಣಿಸೆಂದಿತ್ತ ಸ್ವೀಕರಿಸೈ ಮಹಂತ 22 ಬೆಂಗಳೂರಿನಲಿ ತುಂಗರೂಪದಲ್ಲಿ ಕಂಗೊಳಿಸುತಲಿಲ್ಲಿ ಹಿಂಗದೆ ಪೊರೆವೆನೆಂದ 23 ಬಾಲಕೃಷ್ಣಾರ್ಯರ ಬಾಲ ಲಕ್ಷ್ಮೀನಾರಾಯಣನೆಂಬ ಸತ್ಪೆಸರ ತಾಳಿದ ಶರಣನು ಮೇಳೈಸೀನುತಿಯನು ಓಲಗಿಸಿದ ನಿನ್ನನು 24 ಪೊಂದುವ ಮೋದವನು ಇಂದುಧರನ ಸುತನಂದದಿ ಸದ್ಭಕ್ತವೃಂದ ರಕ್ಷಿಪ ಸಂತತ 25 ನಮೋ ಸಾಕುವ ಮಹಿಮ ನಮೋ ಭೀಕರ ಬಿಡಿಸೆನ್ನ ನೀ ಕರುಣಿಸು ಮುನ್ನ ಶ್ರೀಕಾಂತ ಭಕ್ತಿಘನ್ನ 26 ಮಂಗಳ ಸದ್ವಿದ್ಯಾಬುದ್ಧಿದ ಜಯ ಜಯ ಮುಂಗಳ ಸಿದ್ಧದನೆ ಮಂಗಳ ವರ್ಧಿತನೆ 27
--------------
ಲಕ್ಷ್ಮೀನಾರಯಣರಾಯರು
ಪಾಲಿಸೈ ತಿಮ್ಮಪ್ಪ ಪರಮ ಪಾವನನಪ್ಪ ಪ್ರಾಣದಾಸೆಗಳಿಂದ ಕಾಣ ಬರುವೆವೆಂದ ಆಣೆ ಭಾಷೆಯನೊಂದ ಮಾಣೆನೊ ಗೋವಿಂದ ಕಾಣಿಕೆಯ ಕರದಿಂದ ತ್ರಾಣ ಮೀರಿಯೆ ಬಂದ ಜಾಣರಾಯನೆ ಚಂದಗಾಣಿಸೊ ಶುಭದಿಂದ 1 ಸ್ವಾಮಿ ನೀನೇ ಹೊಣೆ ಭೂಮಿಯೊಳು ರಕ್ಷಣೆ ಕಾಮಿತ ಸೈರಣೆ ನಾಮಕಲ್ಪನೆಯು ಪ್ರೇಮವಾಗಿಹ (ಹಣೆ)1 ನಾಮದ ಮನ್ನಣೆ ಸೌಮನಸ್ಯದ ಮಾಣೆ ತಾಮಸಕ್ಕಿಡಿಗಾಣೆ 2 ಸೇವಕ ಸಂಕಲ್ಪ ಕಾವನಾಯಕನಿಪ್ಪ ಠಾವಿಗಾಗಿಯೇ ಪೋಪ ಭಾವದಿಯಿರುತಿಪ್ಪ ಜೀವನ ತಾನಪ್ಪ ದೇವ ಕಾಣು ಈ ಕಪ್ಪ ಈವೆನೆನುತ ಬಪ್ಪ ಭೂವರಾಹತಿಮ್ಮಪ್ಪ 3
--------------
ವರಹತಿಮ್ಮಪ್ಪ
ರಂಗನಾಡಿದನೊ ಮನ್ನಾರಿ ಕೃಷ್ಣನಾಡಿದನೊ | ಶೃಂಗಾರದಿಂದ ಗೋಪಾಂಗನೆಯ ಕೂಡ | ತುಂಗ ವಿಲಾಸ ತಾ ರಂಗ ಕೇಳಿಯಲಿ | ಸಂಗೀತ ಪಾಡುತ ಸಾಂಗೋಪಾಂಗದಿಂದಾ ಪ ಹೊಳಿಯ ಜನಕೋಕುಳಿಯ ಕಲಿಸಿ | ಗೆಳೆಯರೊಂದಾಗೆ ಕಳೆಯೆವೇರುತ್ತ | ಅಳಿಯ ಗರುಳಬಲಿಯರರಸಿ | ಇಳಿಯಾಳಗೋಕುಳಿ ವಸಂತವಾ | ಹಳೆಯ ಬೊಮ್ಮನ ಬಳಿಯವಿಡಿದು | ಪಳಿಯ ಚಲುವ ತಿಳಿಯಗೊಡದೆ 1 ಸಕ್ಕರೆದುಟಿ ಹೆಮ್ಮಕ್ಕಳು ಯೆಲ್ಲರು | ನಕ್ಕು ಕೈಯ ಹೊಯಿದ | ಕ್ಕರದಿಂದ ತಾ | ವರ್ಕರಾಗಿ ನಿಂದೂ ತೆಕ್ರ್ಕೊರಂಗಯೆಂದು | ಜಿರ್ಕೊಳವಿಲಿಂದಲಿಕ್ಕಿದರು | ಸೊಕ್ಕಿದಾ ನೆಡಸಿ ಹೊಕ್ಕು ಎರಗಿದಂ | ತೊಕ್ಕಟರಾಗಿ ದೇವಕ್ಕಿ ತನುಜನ ಸಿಕ್ಕಿಸಿಕೊಂಡರು | ಅಕ್ಕಟಾಬ್ಜಗಬ್ಧಿ ಉಕ್ಕಿದಂತೆ ಮನ | ಉಕ್ಕುತಲಿ 2 ನಾರಿಯರಿಂದ ಉತ್ತರವ ಲಾಲಿಸಿ | ತುಂಬಿ ಅ | ಪಾರನಾರಿ ಪರಿವಾರದವರ ಶರೀರವ ಮೇಲೆ | ವಿ | ಸ್ತಾರವಾಗಿ ಕಾರಿ ವಾರಿದನು ನೀರೆರದಂತಾಗೆ | ಆರೊಂದು ಬುದ್ಧಿಗೆ ಮೀರಿತಿದೊ ಎಂದು | ವಾರುಣಿಪತಿ ಪಂಕೇರುಹಾಭವ ಕಂ || ದರವ ಬಾಗಿಸಿ ಸಾರಿದರು 3 ಮೃಗ ಧ್ವನಿದೆಗೆದು ಪಾಡಲು | ನಗ ಬೆವರಿ ಪನ್ನಂಗ ನೋಡಾಗಲು | ಅಗಣಿತ ಮುನಿ ಚಿಗಿದು ಪಾಡಲು | ನಗ ಬೆವರಿ ಪನ್ನಂಗ ನೋಡಾಗಲು | ಅಗಣಿತ ಮುನಿ ಚಿಗಿದು ಪಾಡಲು ಪೊಗಳ ಬಗೆಯಿಂದ | ಮಣಿ ತಾರೆಗಳು ಚಂದ್ರ ನಗುತ ತಮ್ಮ ಪಥಗಳು ನಿಲಿಸಿ | ಮಂಗಳಕರವ ಮುಗಿದು ಸೋಜಿಗ ಜಗದೊಳಗಿದು ಮಿಗಿಲೆನುತಲಿ 4 ದುಂದುಭಿ ಮೊರಿಯೆ ಧಂ ಧಂ ಧಳಾ ಎಂದು | ವೃಂದಾರಕ ವೃಂದ ಚಂದದಿ ಪೂಮಳೆಯಂದುಗರಿಯಲು | ಚಂದಣಗಂದಿಯ ಒಂದಾಗಿ ನಿಂದರು ವಂದಿಸುತ | ಮಂದಹಾಸನಖ ದುಂದುಭಿ ಓಕಳಿಂದಲೆರಾರೈಪಾ ಸಿಂಧು ಮೆರೆದ ನಾರಂದವರದ ವಿಜಯವಿಠ್ಠಲ | ಪುರಂದರದಾಸರ ಮುಂದಾಡಿz ||5
--------------
ವಿಜಯದಾಸ
* ಸೂರ್ಯ | ನಾರಾಯಣ ರಥ ಸೂರ್ಯ ಪ. ಸೂರ್ಯ ರಥವನು ಭಾರಿ ವಸನಾಭರಣ ತೊಡುತಲಿ ಮೂರುಲೋಕವ ಬೆಳಗು ಮಾಡುತ ಭಾರಿ ತಮವನು ಛೇದಿಸುತ್ತ ಅ.ಪ. ಸಪ್ತ ಹಯೆಗಳ್ ಕಟ್ಟುತ | ಚಕ್ರೇಕ ರಥಕೆ ಸಪ್ತ ಋಷಿಗಳ್ ಪೊಗಳುತ | ಅರುಣ ಸಾರಥ್ಯ ಸಪ್ತ ಜಿಹ್ವನ ತೆರದಿ ತೋರುತ ಸಪ್ತ ಶರಧಿಯ ದಾಟಿ ಸಾರುತ ಸಪ್ತಗಿರಿ ಮೇರು ಸುತ್ತುತಾ ರಥ ಶುಭ ದಿವಸದಲ್ಲಿ 1 ವಾಲಖಿಲ್ಯರು ಎದುರಲಿ | ಅರವತ್ತು ಸಾವಿರ ಓಲಗ ತೊಡುತಲಲ್ಲೀ | ಹಿಂದು ಮುಂದಿನಲಿ ಗಾಲಿದಬ್ಬುವ ರಕ್ಕಸೊಬ್ಬನು ವ್ಯಾಳನೊಬ್ಬನು ರಜ್ಜರೂಪಕೆ ಮೇಲೆ ಯಕ್ಷಕಿನ್ನರರು ಸುತ್ತಲು ಕರ್ಮ ಸಾಕ್ಷಿಯು 2 ಉತ್ತರಾಯಣ ಮಾಘದಿ | ಸ್ನಾನವಗೈದು ಉತ್ತಮರಘ್ರ್ಯ ಕರದಿ | ಪಿಡಿಯುತ್ತ ಭರದಿ ಉತ್ತಮ ಗಂಗಾದಿ ತೀರ್ಥದಿ ಉದಿಸಿ ಬರುವಗೆ ಕೊಡುವ ಕತದಿ ಚಿತ್ತ ನಿರ್ಮಲದಿಂದ ಕಾದಿರೆ ಹತ್ತಿ ಛಾಯೆಯೆ ಸಹಿತ ರಥದಿ 3 ಜಗಚಕ್ಷುವೆನಿಸಿದನೂ | ಧರ್ಮಜಗೆ ವಲಿದು ಮಿಗೆ ಅಕ್ಷಪ್ರದನಾದನೂ | ಸವಿತೃ ನಾಮಕನೂ ಬಗೆ ಬಗೆಯ ಜೀವರುಗಳಯುವ ತೆಗೆದು ಸೆಳೆಯುತ ದಿನದಿನದಲಿ ನಿಗಮಗೋಚರ ನಾಜ್ಞೆಧಾರಕ ಸುಗುಣರಿಗೆ ಸುಜ್ಞಾನವೀಯುತ 4 ಕಮಲ | ಗದೆಯ ಧರಿಸಿ ಕಿಂಕರಾದ್ಯರ ನುತಿಗಳ | ಕೇಳುತ್ತ ಬಹಳ ಶಂಖ ಚಕ್ರಾಂಕಿತನು ಶಿರಿಸಹ ಶಂಕಿಸದೆ ತನ್ನ ಹೃದಯದಲ್ಲಿರೆ ಬಿಂಕ ಗೋಪಾಲಕೃಷ್ಣವಿಠಲಗೆ ಕಿಂಕರನು ತಾನÉಂದು ಪೊಗಳುತ 5
--------------
ಅಂಬಾಬಾಯಿ
ಶ್ರೀ ಮಧ್ವನಾಮ ಜಯ ಜಯ ಜಗತ್ರಾಣ ಜಗದೊಳಗೆ ಸುತ್ರಾಣಅಖಿಳ ಗುಣ ಸದ್ಧಾಮ ಮಧ್ವನಾಮ ಪ ಆವ ಕಚ್ಚಪ ರೂಪದಿಂದ ಲಂಡೋದಕವಓವಿ ಧರಿಸಿದ ಶೇಷಮೂರುತಿಯನುಆವವನ ಬಳಿವಿಡಿದು ಹರಿಯ ಸುರರೆಯ್ದುವರುಆ ವಾಯು ನಮ್ಮ ಕುಲಗುರುರಾಯನು 1 ಆವವನು ದೇಹದೊಳಗಿರಲು ಹರಿ ನೆಲಸಿಹನುಆವವನು ತೊಲಗೆ ಹರಿ ತಾ ತೊಲಗುವಆವವನು ದೇಹದ ಒಳ ಹೊರಗೆ ನಿಯಾಮಕನುಆ ವಾಯು ನಮ್ಮ ಕುಲಗುರುರಾಯನು 2 ಸುರರು ಮುಖ್ಯಪ್ರಾಣ ತೊಲಗಲಾ ದೇಹವನುಅರಿತು ಪೆಣವೆಂದು ಪೇಳುವರು ಬುಧಜನ 3 ಸುರರೊಳಗೆ ನರರೊಳಗೆ ಸರ್ವ ಭೂತಗಳೊಳಗೆಪರತರನೆನಿಸಿ ನಿಯಾಮಿಸಿ ನೆಲಸಿಹಹರಿಯನಲ್ಲದೆ ಬಗೆಯ ಅನ್ಯರನು ಲೋಕದೊಳುಗುರು ಕುಲತಿಲಕ ಮುಖ್ಯ ಪವಮಾನನು 4 ತರಣಿ ಬಿಂಬಕ್ಕೆ ಲಂಘಿಸಿದಈತಗೆಣೆಯಾರು ಮೂರ್ಲೋಕದೊಳಗೆ 5 ತರಣಿಗಭಿಮುಖನಾಗಿ ಶಬ್ದ ಶಾಸ್ತ್ರವ ರಚಿಸಿಉರವಣಿಸಿ ಹಿಂದು ಮುಂದಾಗಿ ನಡೆದಪರಮ ಪವಮಾನಸುತ ಉದಯಾಸ್ತ ಶೈಲಗಳಭರದಿಯೈದಿದಗೀತಗುಪಮೆ ಉಂಟೇ 6 ಅಖಿಳ ವೇದಗಳ ಸಾರಪಠಿಸಿದನು ಮುನ್ನಲ್ಲಿನಿಖಿಳ ವ್ಯಾಕರಣಗಳ ಇವ ಪಠಿಸಿದಮುಖದಲ್ಲಿ ಕಿಂಚಿದಪಶಬ್ದ ಇವಗಿಲ್ಲೆಂದುಮುಖ್ಯಪ್ರಾಣನನು ರಾಮನನುಕರಿಸಿದ 7 ತರಣಿಸುತನನು ಕಾಯ್ದು ಶರಧಿಯನು ನೆರೆದಾಟಿಧರಣಿಸುತೆಯಳ ಕಂಡು ದನುಜರೊಡನೆಭರದಿ ರಣವನೆ ಮಾಡಿ ಗೆಲಿದು ದಿವ್ಯಾಸ್ತ್ರಗಳಉರುಹಿ ಲಂಕೆಯ ಬಂದ ಹನುಮಂತನು 8 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಬಲು ರಕ್ಕಸರನುಒರಸಿ ರಣದಲಿ ದಶಶಿರನ ಹುಡಿಗುಟ್ಟಿದಮೆರೆದ ಹನುಮಂತ ಬಲವಂತ ಧೀರ 9 ಉರಗ ಬಂಧಕೆ ಸಿಲುಕಿ ಕಪಿವರರು ಮೈಮರೆಯೆತರಣಿ ಕುಲತಿಲಕನಾಜ್ಞೆಯ ತಾಳಿದಗಿರಿಸಹಿತ ಸಂಜೀವನವ ಕಿತ್ತು ತಂದಿತ್ತಹರಿವರಗೆ ಸರಿಯುಂಟೆ ಹನುಮಂತಗೆ 10 ವಿಜಯ ರಘುಪತಿ ಮೆಚ್ಚಿ ಧರಣಿಸುತೆಯಳಿಗೀಯೆಭಜಿಸಿ ಮೌಕ್ತಿಕದ ಹಾರವನು ಪಡೆದಅಜಪದವಿಯನು ರಾಮ ಕೊಡುವೆನೆನೆ ಹನುಮಂತನಿಜಭಕುತಿಯನೆ ಬೇಡಿ ವರವ ಪಡೆದ 11 ಆ ಮಾರುತನೆ ಭೀಮನೆನಿಸಿ ದ್ವಾಪರದಲ್ಲಿ ಸೋಮಕುಲದಲಿ ಜನಿಸಿ ಪಾರ್ಥನೊಡನೆ ಭೀಮ ವಿಕ್ರಮ ರಕ್ಕಸರ ಮುರಿದೊಟ್ಟಿದಆ ಮಹಿಮನಮ್ಮ ಕುಲಗುರು ರಾಯನು 12 ಕರದಿಂದಶಿಶುಭಾವನಾದ ಭೀಮನ ಬಿಡಲುಗಿರಿವಡೆದುಶತಶೃಂಗವೆಂದೆನಿಸಿತುಹರಿಗಳ ಹರಿಗಳಿಂ ಕರಿಗಳ ಕರಿಗಳಿಂಅರೆವ ವೀರನಿಗೆ ಸುರ ನರರು ಸರಿಯೇ 13 ಕುರುಪ ಗರಳವನಿಕ್ಕೆ ನೆರೆ ಉಂಡು ತೇಗಿಹಸಿದುರಗಗಳ ಮ್ಯಾಲೆ ಬಿಡಲದನೊರಸಿದಅರಗಿನರಮನೆಯಲ್ಲಿ ಉರಿಯನಿಕ್ಕಲು ವೀರಧರಿಸಿ ಜಾಹ್ನವಿಗೊಯ್ದ ತನ್ನನುಜರ14 ಅಲ್ಲಿರ್ದ ಬಕ ಹಿಡಿಂಬಕರೆಂಬ ರಕ್ಕಸರನಿಲ್ಲದೊರಸಿದ ಲೋಕಕಂಟಕರನುಬಲ್ಲಿದಸುರರ ಗೆಲಿದು ದ್ರೌಪದಿಯ ಕೈವಿಡಿದುಎಲ್ಲ ಸುಜನರಿಗೆ ಹರುಷವ ತೋರಿದ 15 ರಾಜಕುಲ ವಜ್ರನೆನಿಸಿದ ಮಾಗಧನ ಸೀಳಿರಾಜಸೂಯ ಯಾಗವನು ಮಾಡಿಸಿದನುಆಜಿಯೊಳು ಕೌರವರ ಬಲವ ಸವರುವೆನೆಂದುಮೂಜಗವರಿಯೆ ಕಂಕಣ ಕಟ್ಟಿದ 16 ಮಾನನಿಧಿ ದ್ರೌಪದಿಯ ಮನದಿಂಗಿತವನರಿತುದಾನವರ ಸವರಬೇಕೆಂದು ಬ್ಯಾಗಕಾನನವ ಪೊಕ್ಕು ಕಿಮ್ಮೀರಾದಿಗಳ ತರಿದುಮಾನಿನಿಗೆ ಸೌಗಂಧಿಕವನೆ ತಂದ 17 ದುರುಳ ಕೀಚಕನು ತಾಂ ದ್ರೌಪದಿಯ ಚಲುವಿಕೆಗೆಮರುಳಾಗಿ ಕರೆÀಕರೆಯ ಮಾಡಲವನಾಗರಡಿ ಮನೆಯಲ್ಲಿ ವರೆಸಿ ಅವನನ್ವಯದಕುರುಪನಟ್ಟಿದ ಮಲ್ಲಕುಲವ ಸದೆದ 18 ಕೌರವರ ಬಲ ಸವರಿ ವೈರಿಗಳ ನೆಗ್ಗೊತ್ತಿಓರಂತೆ ಕೌರವನ ಮುರಿದು ಮೆರೆದವೈರಿ ದುಶ್ಯಾಸನ್ನ ರಣದಲ್ಲಿ ಎಡೆಗೆಡಹಿವೀರ ನರಹರಿಯ ಲೀಲೆಯ ತೋರಿದ 19 ಗುರುಸುತನು ಸಂಗರದಿ ನಾರಾಯಣಾಸ್ತ್ರವನುಉರವಣಿಸಿ ಬಿಡಲು ಶಸ್ತ್ರವ ಬಿಸುಟರುಹರಿಕೃಪೆಯ ಪಡೆದಿರ್ದ ಭೀಮ ಹುಂಕಾರದಲಿಹರಿಯ ದಿವ್ಯಾಸ್ತ್ರವನು ನೆರೆ ಅಟ್ಟಿದ 20 ಚಂಡ ವಿಕ್ರಮನು ಗದೆಗೊಂಡು ರಣದಿ ಭೂಮಂಡಲದೊಳಿದಿರಾಂತ ಖಳರನೆಲ್ಲಾಹಿಂಡಿ ಬಿಸುಟಿಹ ವೃಕೋದರನ ಪ್ರತಾಪವನುಕಂಡುನಿಲ್ಲುವರಾರು ತ್ರಿಭುವನದೊಳು21 ದಾನವರು ಕಲಿಯುಗದೊಳವತರಿಸಿ ವಿಬುಧರೊಳುವೇನನ ಮತವನರುಹಲದನರಿತುಜ್ಞಾನಿ ತಾ ಪವÀಮಾನ ಭೂತಳದೊಳವತರಿಸಿಮಾನನಿಧಿ ಮಧ್ವಾಖ್ಯನೆಂದೆನಿಸಿದ 22 ಅರ್ಭಕತನದೊಳೈದಿ ಬದರಿಯಲಿ ಮಧ್ವಮುನಿನಿರ್ಭಯದಿ ಸಕಳ ಶಾಸ್ತ್ರವ ಪಠಿಸಿದಉರ್ವಿಯೊಳು ಮಾಯೆ ಬೀರಲು ತತ್ವಮಾರ್ಗವನುಓರ್ವ ಮಧ್ವಮುನಿ ತೋರ್ದ ಸುಜನರ್ಗೆ23 ವಿಶ್ವ ವಿಶ್ವ ಗೀರ್ವಾಣ ಸಂತತಿಯಲಿ 24 ಅಖಿಳ ವೇದಾರ್ಥಗಳನುಪದುಮನಾಭನ ಮುಖದಿ ತಿಳಿದು ಬ್ರಹ್ಮತ್ವಯ್ಯೆದಿದ ಮಧ್ವಮುನಿರಾಯಗಭಿವಂದಿಪೆ 25 ಜಯಜಯತು ದುರ್ವಾದಿಮತತಿಮಿರ ಮಾರ್ತಾಂಡಜಯಜಯತು ವಾದಿಗಜ ಪಂಚಾನನಜಯಜಯತು ಚಾರ್ವಾಕಗರ್ವಪರ್ವತ ಕುಲಿಶಜಯ ಜಯ ಜಗನ್ನಾಥ ಮಧ್ವನಾಥ26 ತುಂಗಕುಲ ಗುರುವರನ ಹೃತ್ಕಮಲದಲಿ ನಿಲಿಸಿಭಂಗವಿಲ್ಲದೆ ಸುಖದ ಸುಜನಕೆಲ್ಲಹಿಂಗದೆ ಕೊಡುವ ನಮ್ಮ ಮಧ್ವಾಂತರಾತ್ಮಕರಂಗವಿಠಲನೆಂದು ನೆರೆ ಸಾರಿರೈ 27 “ಮಧ್ವನಾಮ” ಕೃತಿಗೆ ಶ್ರೀ ಜಗನ್ನಾಥದಾಸರ ಫಲಶ್ರುತಿ ಸೋಮ ಸೂರ್ಯೋಪರಾಗದಿ ಗೋಸಹಸ್ರಗಳಭೂಮಿದೇವರಿಗೆ ಸುರನದಿಯ ತೀರದಿಶ್ರೀಮುಕುಂದಾರ್ಪಣವೆನುತ ಕೊಟ್ಟ ಫಲಮಕ್ಕುಈ ಮಧ್ವನಾಮ ಬರೆದೋದಿದರ್ಗೆ 1 ಪುತ್ರರಿಲ್ಲದವರು ಸತ್ಪುತ್ರರೈದುವರುಸರ್ವತ್ರದಲಿ ದಿಗ್ವಿಜಯವಹುದು ಸಕಲಶತ್ರುಗಳು ಕೆಡುವರಪಮೃತ್ಯು ಬರಲಂಜವುದುಸೂತ್ರನಾಮಕನ ಸಂಸ್ತುತಿ ಮಾತ್ರದಿ 2 ಶ್ರೀಪಾದರಾಯ ಪೇಳಿದ ಮಧ್ವನಾಮ ಸಂತಾಪಕಳೆದಖಿಳ ಸೌಖ್ಯವನೀವುದುಶ್ರೀಪತಿ ಜಗನ್ನಾಥವಿಠಲನ ತೋರಿ ಭವಕೂಪಾರದಿಂದ ಕಡೆ ಹಾಯಿಸುವುದು 3
--------------
ಶ್ರೀಪಾದರಾಜರು
(40ನೇ ವರ್ಷದ ವರ್ಧಂತಿ) ಕ್ಷಿಪ್ರ ಪ್ರಸಾದಕರ ದೊರೆಯೆ ಅಜಭವಾ- ದ್ಯ ಪ್ರಮೇಯಾ ಸಂತಸುಗುಣಾಬ್ಧಿ ಹರಿಯೆ ಪ. ಇಳೆಯೊಳಗೆ ನಾ ಬಂದು ಕಳೆದೆ ನಾಲ್ವತ್ವರುಷ ಉಳಿದ ಪರಿಮಿತಿಯರಿಯೆ ಗಳಿತವಾಯಿತು ದೇಹ ಬಳಲಿದೆನು ಬಯಲಾಸೆ ಬಲೆಯೊಳಿಂದಿನವರೆಗು ನಳಿನನಾಭನೆ ನಿನ್ನ ನಂಬಿದೆನು ಮನವರಿತು ಮುಳುಗಲಾರೆನು ಮೋಹ ಕಡಲ ಮಾಧವನೆ ತಿಳಿಯದೆ ನಿನಗೆ ಪೊನ್ನೊಡಲ ಮುಂದಿಂತು ದುರಿತ ಸಿಡಿಲ 1 ದೇವಾಧಿದೇವ ತವ ಸೇವಾನುಕರನ ಹೊ- ನ್ನಾವರದೊಳಿರಿಸಲಿನ್ಯಾವನರಸಲಿ ಕೃಷ್ಣ ಭಾವ ಶುದ್ಧಿಯನರಿತು ಭಜನೆ ಮಾಡುವದೆಂತು ಸಾವಕಾಶವಿದ್ಯಾಕೆ ಸಾಹಿತ್ಯಗಳು ಜೋಕೆ ನಿತ್ಯ ಕೈಗೊಂಬ ಕೀರ್ತಿ ಸಂ- ಭಾವನಾ ಸುಖವ ನಾನುಂಬಾ ತರವ ಸಂ- ಭಾವಿಸು ದಯಾಂಬೋಧಿ ದೀನಾವಲಂಬ 2 ರಕ್ಕಸಾಂತಕ ನೀನೆ ದಿಕ್ಕೆಂದು ನಿನ್ನಿದಿರು ಬಿಕ್ಕಿ ಬಿರಿದಳಲುವೆನು ಸೊಕ್ಕಿ ಕಾಡುವ ದೊಡ್ಡ ಜಕ್ಕಣಿಯ ಕಾಲಿಂದ ತಿಕ್ಕಿ ತೀರಿಸು ನಿನಗ- ಶಕ್ಯವಾವುದು ಸ್ವರ್ಣಪಕ್ಷ್ಯೇಂದ್ರಗಮನಕರ ಚಕ್ರಭೂಷಣ ವೆಂಕಟೇಶದಾಸ ಜನ ಕಕ್ಕರದಿ ತೋರು ಸಂತೋಷ ಭಕ್ತಿಫಲ ದಕ್ಕುವಂದದಿ ಮಾಡು ದುರಿತಾಬ್ಧಿಶೋಷ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಅ) ಶ್ರೀಹರಿಸ್ತುತಿಗಳು ಮಾನಸಗಣ್ಯ ಚಿನ್ಮಯನ ಪ ವನಮಾಲಿಕಾಗಳನ ಮಿಂಚನು ಸೋಲಿಸುತಿಹನ 1 ಹೃದಯಾತಂಕಮೋಚನನ ಜನನೀ ಕುಚಕುಂಕುಮಾಂಕಿತನ 2 ಗುಣವೃಂದಪೂರಿತನ ಚಕೋರಾನಂದ ಚಂದಿರನ 3 ಭೂಷಣನಿಕರ ಭೂಷಿತನ ನಿತ್ಯದಿ ಸುಖದಾಯಕನ 4 ಶರಣೆಂದು ಕರದಿ ತೋರುವನ ಧರಣೀನೀಳೆಯರಿಹ ಕೆಲನ ಪುಲಿಗಿರಿಯೊಳು ನೆಲಸಿಹ ವರದವಿಠಲನ 5
--------------
ವೆಂಕಟವರದಾರ್ಯರು
(ಅನಂತೇಶ್ವರ ದೇವರನ್ನು ನೆನೆದು) ಯಾಕಿಲ್ಲಿ ಬಂದು ಮಲಗಿದೆಯೊ ಎಲಾ ಹರಿಯೇ ಲೋಕೋತ್ತಮಾನಂತೇಶ್ವರ ದೇವಾಲಯದಿ ಪ. ಬಿಡದೆ ಪಾಲ್ಗಡಲೊಳಗೆ ಕಡು ವೈಭವದಿ ತಡಿಗೆ ಝಡಿದು ಬರುತಿಹುದು ಭೋರ್ಗುಡಿಪ ತೆರೆಯ ಝಡಿವ ನಾದಕೆ ಒಡಂಬಡದೇಕಾಂತದಿ ಬಂದು ಮಡದಿ ಶ್ರೀದೇವಿ ಸಹಿತೊಡನೆ ಮಲಗಿದೆಯೋ 1 ನೀರೊಳಗೆ ಮುಳುಗಿ ವೇದವÀ ತಂದು ಬೆನ್ನಿನೊಳು ಭಾರವನು ಪೊತ್ತು ಬಹಳಾಲಸ್ಯವೋ ಧಾರುಣಿಯ ಸಲಹೆ ಭೋರ್ಗುಡಿಸಿ ಸ್ತಂಭದಿ ಬಂದ ಕ್ರೂರತನಕಿದುವೆ ವಿಸ್ತಾರ ಸಮಾಧಾನತೆಯೋ 2 ರೂಢಿಗೊಡೆಯ ತಾನಾಗಿ ಮೋಡಿಯೊಳು ಭೂದಾನ- ಬೇಡಿದೆನು ಎಂಬ ನಾಚಿಕೆಯ ಮನವೋ ಖೋಡಿ ನೃಪತಿಯರ ಹೋಗಾಡಿಸುತ ಕಾಡಿನೊಳು ಕೋಡಗರ ಕೂಡಿ ರಥ ಓಡಿಸಿದ ಬೇಸರವೋ 3 ಲೋಲಾಕ್ಷಿಯರ ವ್ರತವ ಹಾಳುಮಾಡುತ ಕಲಿಯ ಕಾಲದೊಳು ಗೈವಂತಮೇಲುಕಾರಿಯದ ಕಾಲೋಚಿತವ ಮನದೊಳಾಲೋಚಿಸುತ್ತಹಿಯ ಮೇಲೆ ಪವಡಿಸಿ ನಿದ್ರಾಲೋಲನಾಗಿಹೆಯೋ 4 ಯುಗಯುಗದೊಳವತಿರಿಸ ಜಗದ ಭಾರವನಿಳುಹಿ ಬಗೆಬಗೆಯ ನಾಟಕದಿ ಮಿಗೆ ಪಟ್ಟ ಶ್ರಮವ ತೆಗೆಯಲೋಸುಗ ಚರಣಯುಗವ ಮೃದುಕರದಿ ಶ್ರೀ ಸೊಗಸಿನಿಂದೊತ್ತುವ ಸೊಂಪೊಗರಿತೋ ನಿನಗೆ 5 ಲಲಿತ ವೈಕುಂಠದೊಳಗೆ ಜಲಜಭವಮುಖ್ಯಸುರ- ಗಲಭೆಯುಂಟೆಂದಲ್ಲಿ ನಿ¯ದೆ ಈಗ ಲಲನೆಯಳ ಕೂಡೆ ಸರಸಗಳನಾಡಲು ತನಗೆ ಸ್ಥಳವಿಲ್ಲವೆನುತಿಲ್ಲಿ ನೆಲಸಿಕೊಂಡಿಹೆಯೋ 6 ಸೇರಿರ್ದ ಶರಣ ಸಂಸಾರಿ ನೀನೆಂದು ಶ್ರುತಿ ಸಾರುವುದು ಕರುಣವನು ತೋರೆನ್ನ ದೊರೆಯೇ ದಾರಿದ್ರ್ಯದೋಷವಪಹಾರಿಸುತ ಇಷ್ಟಾರ್ಥ- ಸೇರಿಸೈ ಶ್ರೀ ಲಕ್ಷ್ಮೀನಾರಾಯಣನೆ ಹರಿಯೇ 7
--------------
ತುಪಾಕಿ ವೆಂಕಟರಮಣಾಚಾರ್ಯ
(ಋ) ತಾತ್ತ್ವಿಕ ಕೃತಿಗಳು ಜಗವ ಪೆತ್ತಿಹ ಪ್ರಭು ನೀನಯ್ಯ ಶ್ರೀರಂಗದ ವಿಜಯ ಪ ಸಾಸಿರ ಶೀರ್ಷನೆ ಸಾಸಿರನೇತ್ರನೆ ಭಾಸಿಸುವಾನಂತ ಪಾದನೆ ಹಸ್ತನೆ 1 ಆದಿಮಧ್ಯಾಂತರಹಿತ ಅಸಂಖ್ಯನಾಮನೆ ಆಧಾರಮೂರುತಿ ಸಾಧುಸಂರಕ್ಷಕ 2 ಆಖಿಲಾಂಡಕೋಟಿ ಬ್ರಹ್ಮಾಂಡ ನಾಯಕನೆ ಸಕಲಚರಾಚರ ಕರ್ತೃವು ನೀನೆ 3 ಚರಂಗಳೆಲ್ಲ ಯೀ ಭೂಮಿತಳವೋ ಪರಮನಾಭಿಯೆ ಆಕಾಶವಯ್ಯ 4 ಶಿರವೇ ವೈಕುಂಠ ಕವಿಗಳೆ ದಶದಿಕ್ಕು ಉರುತರ ಮನಸೇ ಮನ್ಮಥನಹುದು 5 ಹರಿಯ ಪಾಶ್ರ್ವಂಗಳೆ ಹಗಲು ರಾತ್ರಿಗಳು ಪರಮವೇದಂಗಳು ಸಕಲಶರೀರವು 6 ಮುಖ ಭುಜ ತೊಡೆ ಪಾದಗಳಲಿ ವರ್ಣಂಗಳ ಸುಕರದಿ ಪಡೆದ ಭೂಸೂತ್ರಧಾರಿಯು ನೀಂ7 ಇಂದ್ರ ಮೊದಲಾದ ದೇವರೆಲ್ಲ ನಿನ್ನಯ ಮುಖ ಚಂದ್ರಸೂರ್ಯರ ಕಣ್ಣಿನಿಂದ ಪಡೆದಾತನೆ 8 ಮಗುವಾದೆನ್ನ ಪಿಡಿ ಮೂಜಗದೊಡೆಯ ಹಗರಣ ಹರಿಯೊ ಜಾಜಿಕೇಶವ 9
--------------
ಶಾಮಶರ್ಮರು
(ಕಾಣೂರು ಮಠದ ನರಸಿಂಹ) ನೋಡಿರಯ್ಯ ನರಸಿಂಹ ಮೂರ್ತಿಯ ಪಾಡಿರೋ ಕೀರ್ತಿಯನು ಪ. ಚಿಕ್ಕವನ ಗೋಳಿಕ್ಕಿಸುತಲತಿ ಸೊಕ್ಕಿದಸುರನನು ಧಿಕ್ಕರಿಸುತಿಹ ಕಕ್ಕುಲತೆಯಿಂದುಕ್ಕಿ ರೋಷವನು ಮಿಕ್ಕ ದೇವರ ಲೆಕ್ಕಿಸದವನ ತಿಕ್ಕಿ ತೊಡೆಯೊಳಗಿಕ್ಕಿ ನಖಗಳನಿಕ್ಕರಿಸಿ ಸಾಲಿಕ್ಕಿ ತರುವ ಕರುಳಕ್ಕರದಿ ತೆಗೆದ್ಹಕ್ಕಿಗಮನನ 1 ವೇದಮುಖ ಸುರರೆಲ್ಲ ದೂರದಿ ಕಾದುಕೊಂಡಿರಲು ಸಿರಿನಡು ಹಾದಿಯಲಿ ಚಿನ್ಮೋದನಿರಕಾಲ್ಹಾದ ಬಡುತಿರಲು ಪಾದಪದ್ಮಗಳನ್ನು ಭಕ್ತಿರಸಾರದರದಿ ಶಿರಕಿಕ್ಕಿರುವ ಪ್ರ- ಲ್ಹಾದನನು ಪಿಡಿದೆತ್ತಿ ಪರಮವಿನೋದಗೊಂಡ ಪರಾಪರೇಶನ 2 ಅರ್ಥಿಯಿಂದಲಿ ಬಂದಿರುವರು ಪೂರ್ಣಾರ್ಥದಾಯಕನಾ ವ್ಯರ್ಥವೈರದ ದ್ವ್ಯರ್ಧಿದೈತ್ಯರ ಮೂರ್ತಿದಹಿಸುವನಾ ಅರ್ತಿಹರ ಶೇಷಾದ್ರಿವರ ಪುರುಷಾರ್ಥ ಪಾಲಿಪೆನೆಂದು ವಾಮನ ತೀರ್ಥ ಕೃತ ಪೂಜಾರ್ಥವಿಲ್ಲಿಗೆ ಕೀರ್ತಿಕರ ನಿಲಯಾರ್ಥದಾತನ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಧನ್ವಂತ್ರಿಯ ಪ್ರಾರ್ಥನೆ) ವೇದ ವೇದ್ಯ ವೈದ್ಯನಾದನು ಭಕ್ತಜನ್ಮಾದಿ ವ್ಯಾಧಿಗಳನ್ನು ಬಾಧಿಸಿ ದುಗ್ಧ ಮಹೋದಧಿ ಮಥಿಸಿದ ಸಮಯದಿ ಪಾರಿಜಾ ತೋದಯವಾದ ಮೇಲಾದರದಿ ಪ. ಧೀರದಿತೆಯಸುರಾರಿ ನಾಯಕರೆಲ್ಲ ಸೇರಿ ಕ್ಷೀರಾಂಬುಧಿ ತೀರದ ತಡೆಗಾಗಿ ಭಾರಿ ಮಂದರವೆತ್ತಿ ತಾರಲಾರದೆ ಮಧ್ಯ ದಾರಿಯೊಳಗೆ ಬಿದ್ದು ಚೀರಲಂದು ನೀರದನಿಭ ಕೃಪೆದೋರಿ ಬಂದಲ್ಲಿ ಸ- ರ್ಪಾರಿಯ ಶಿರದ ಮೇಲೇರಿಸಿ ಗಿರಿಯ ಗಂ- ಭೀರ ರವದಿ ಮುಂದೆ ಸಾರಿದ ಸುರಮೋದ- ಕಾರಿ ಸಂಸ್ಕøತಿ ಭಯವಾರಣನು 1 ಅಮರದೈತ್ಯರ ಭುಜ ಭ್ರಮಣೆಗೆ ನಿಲ್ಲದ ಕ್ಷಮೆಯಧರನ ಕಂಡು ಸುಮನಸ ಗಣಕಾಗಿ ಕಮಠಾವತಾರದಿಂದಮಿತಭಾರವ ಲಕ್ಷ್ಮೀ ರಮಣ ಬೆಂಬನಿಂದಲಾಕ್ರಮಿಸಿದ್ದನೂ ಕ್ಷಮೆಯಿಂತು ತೋರಿ ಸಂಭ್ರಮದಿಂದ ಸುರಕಲ್ಪ- ದ್ರುಮಕಂಠರತ್ನ ಚಂದ್ರಮ ಮುಖ್ಯರುದಿಸಲು ರಮೆಯೊಂದು ರೂಪದಿ ನಮಿಸುತ್ತ ಬರೆ ತನ್ನ ರಮಣೀಯ ಮದುವಿಯಾ ಕ್ರಮವ ತೋರಿ 2 ಇಂತು ವಿವಾಹದನಂತರದಲಿ ಶ್ರೀ- ಕಾಂತನು ದೇವರ್ಕಳಂತವರಿತು ನಿ- ಬೋಧ ಚಿನ್ಮಯನು ನಿರ್ಭಯದಿ ಧ- ನ್ವಂತರಿಯಾದುದನೆಂತೆಂಬೆನು ಕಂತುಕೋಟಿಯ ಗೆಲುವಂತೆ ಸಕಲ ಸುಜ ನಾಂತರ್ಬಹಿರ್ಗತ ಸಂತಾಪಗಳ ಬಲ- ವಂತದಿಂದಲಿ ಕಳವಂಥ ಮೂರುತಿಯಾಗಿ ನಿಖಿಳ ವೇದಾಂತೇಶನು 3 ಕುಂಡಲ ಹಾರ ವನರುಹಾಂಬಕ ವಲ್ಲುಹಾಸ ಕೌಸ್ತುಭಧರ ಕರಿ ಕರೋರುತರ ಕ್ಷಣಿತ ಕಿಂಕಿಣಿ ಕಾಂಚೀವರ ಮಂಜೀರಾ ಸುನಸ ಸುಂದರದಂತ ಶುಭನೀಲಕೇಶಾಂತ ವನಜ ಸಂಭವನೀಗರುಹುತಾಯುರ್ವೇದಾಂತ ನೆನೆಸುವವರಪಮೃತ್ಯುಹಾರಿ ರೂಪವ ತೋರಿ ವಿನಯದಿ ವಿಬುಧಾರ ಸೇರಿದನು 4 ಪಾತಕ ಸಂಘಾಧಾರದಿಂದ್ಯಮಪರಿ ವಾರವೆಂದೆನಿಪತ್ತಿ ಸಾರವ ಸ್ಮಾರಕ್ಷಯೋರಗಜ್ವರಕಫ ಗೂರು ಪ್ರಮೇಹಾದಿ ವಾರಕ ವರಸುಖ ಕಾರಕನು ಥೋರ ಕರದಿ ಸುಧಾಪೂರಿತ ಕಲಶವ ತೋರಿ ದಾನವ ಮೋಹಕಾರಿ ನಾರಾಯಣಿ ಸ್ತ್ರೀ ರೂಪದಿಂದ ದೈತ್ಯಾರಿಗಳಿಗೆ ಕೊಟ್ಟ ಧೀರ ವೆಂಕಟ ಶಿಖರಾರೂಢನು 5
--------------
ತುಪಾಕಿ ವೆಂಕಟರಮಣಾಚಾರ್ಯ
(ಭೀಮಸೇನ ಪ್ರಾರ್ಥನೆ) ಭೀಮಸೇನ ಸಕಲಸತ್ವಧಾಮ ರಕ್ಷಿಸೆನ್ನ ಬೇಗ ಸಾಮಗಾನ ಲೋಲ ಕೃಷ್ಣ ಪ್ರೇಮರಸಕೆ ಪಾತ್ರನಾದ ಪ. ಮಂಗಲಾಚರಿತ್ರ ನಿನ್ನ ಅಂಗಸಂಗದಿಂದ ಬಹು ತುಂಗ ಗಿರಿಯು ಒಡೆದು ಶತಶೃಂಗವೆನಿಸಿತು ಅಂಗುಲಿ ಪ್ರಹಾರದಿಂದ ಶಿಂಗತತಿಗಳನ್ನು ಬಹಳ ಭಂಗಬಡಿಸಿ ಬಾಲಲೀಲ ರಂಗದಲ್ಲಿ ಬಲುಹ ತೋರ್ಪ 1 ಹಸಿದ ವೇಳೆಯಲ್ಲಿ ಮೆದ್ದ ವಿಷದ ಭಕ್ಷ್ಯ ಜೀರ್ಣಗೊಳಿಸಿ ಉಶನ ಮಂತ್ರದಿಂದ ಹಲ್ಲ ಮಸೆಯುತಾ ಬಂದ ಅಸುರ ವೇಶದಷ್ಟಾಕ್ಷಿಗಳ ಮಶಕದಂತೆ ಬಡಿದು ಕೆಡಹಿ ಕುಶಲದಿಂದ ನಿದ್ರೆಗೈದ ಅಸಮಶಕ್ತಿ ಪೂರ್ಣಮೂರ್ತಿ 2 ನಗಗಳ ಮೇಲೇರುತ್ತ ಹಣ್ಣುಗಳನೊಂದೊಂದಾಗಿ ಕರದಿ ತೆಗೆದು ತಿಂಬ ಕೌರವರನು ನಗುತ ನೋಡುತಾ ನೆಗೆದು ಬೀಳ್ವ ತೆರದಿ ತರುಮೂಲಗಳಾ ತುಳಿದು ಕೆಡಹಿ ದೇವಾ- ಕೊಂಡ 3 ಗೂಗೆಯಂತೆ ನಿನ್ನ ಬಳಿಗೆ ಸಾಗಿ ಬಂದು ಶಕುನಿಮುಖರು ಯೋಗನಿದ್ರೆ ತಿಳಿಯದೆ ಚೆನ್ನಾಗಿ ಬಂಧಿಸಿ ಭಾಗೀರಥಿಯ ಜಲದಿ ದೂಡೆ ವೇಗದಿ ಪಾತಾಳವೈದಿ ನಾಗಕನ್ಯೆರಿತ್ತ ರಸವ ಬೇಗ ಸವಿದು ತಿರುಗಿ ಬಂದ 4 ದುರುಳರಿಂದ ರಚಿತವಾದ ಅರಗಿನ ಮನೆಗೆ ಹೋಗಿ ಕಾಲ ನಿರುತಕಿನಿಸಿಲಿ ಇರುಳಿನಲ್ಲಿ ತಾನೆ ಅಗ್ನಿ ಇರಿಸಿ ಬೇಗಲೆದ್ದು ಸಹೋ ದರರನೆತ್ತಿ ಬಹು ಯೋಜನಕೆ ಸರಿದು ಪೋದ ಶಕ್ತರರಸ 5 ಡೊಂಬಿಮಾಳ್ಪನೆಂದು ಬಹಳ ಡಂಬರದಿಂದಿದಿರಾ ಹಿ- ಕದಂಬ ವೈರಿಯ ಅಂಬರದೊಳಗೈದಿ ವಜ್ರಕಂಬದಂತೆ ಹೊಳವ ಬಹು ಸ್ತಂಭದಿಂದ ಕೆಡಹುತ ಹೈಡಿಂಬನೆಂಬ ಮಗುವ ಪಡೆದ 6 ನಗರ ದೊಳ್ವೈದಿಕರಂತೆ ವಾಸವಾಗಿ ಪೋಕ ಬಕನ ಬಾಧೆಯಿಂದ ಶೋಕಗೊಳುವರ ಸಾಕುವೆನೆಂದೆದ್ದು ನಾನಾ ಶಾಖ ಭಕ್ಷಾನ್ನಗಳ ತಾನೆ ಸ್ವೀಕರಗೊಂಡಸುರನನ್ನು ಸೋಕಿ ಸೀಳಿ ಬಿಸುಟ ದೊರೆಯೆ 7 ವಿಪ್ರ ವೇಷದಿಂದ ದ್ರುಪದಸುತೆಯನೊಲಿಸಿ ಕೃದ್ಧ ನೃಪರ ಗೆದ್ದು ರುಕ್ಮಿಣೀಶ ಕೃಪೆಯಾ ಬಲಕೊಂಡು ಅಪರಿಗಣ್ಯ ಪೌರುಷಕಿಂನುಪಮೆಯಿಲ್ಲವೆಂದು ಸರ್ವ ಖಪತಿವರರು ಪೊಗಳುತಿರಲು ತ್ರಿಪುರವೈರಿಯಂತೆ ಮೆರೆದ 8 ಅಂಧ ನೃಪನ ಮಾತ ಕೇಳಿ ಇಂದ್ರಪ್ರಸ್ಥ ಪುರಕೆ ರಾಜ ನೆಂದು ನಿಂದು ಮಗಧಾದಿಗಳ ನೊಂದೆ ನಿಮಿಷದಿ ಕೊಂದು ರಾಜಸೂಯಮೇಧದಿಂದ ಸಕಲಯಜ್ಞೇಶಗೋ- ಕೊಂಡ 9 ದ್ಯೂತ ನೆವದಿ ಸಕಲ ರಾಜ್ಯ ಸೋತು ವನಕೆ ಪೋಗಿ ಲಕ್ಷ್ಮೀ- ನಾಥ ಕರುಣ ಬಲದಿಂದ ಸುರವ್ರಾತವಡಗಿಸಿ ಭೂತನಾಥನೋರದಿ ಬಹಳ ಖ್ಯಾತ ಕೀಚಕಾದಿಗಳನು ಘಾತಿಸಿ ಗಂಧರ್ವನೆಂದಜ್ಞಾತವಾಸ ಕಳದ ಧೀರ 10 ದುರುಳ ಕೌರವರನು ಗದೆಯ ತಿರುಹಿ ಕೆಡಹಿ ಧರಣಿಭರವ ಸುರಪಸೂನು ಸಹಿತಲ್ಲಿಳುಹಿ ಪರಮ ಹರುಷದಿ ಹರಿಯ ನೇಮದಿಂದ ನಾಗಪುರವನಾಳಿ ವಿಷ್ಣುಭಕ್ತಿ ಸುಜನ ತತಿಯ ಪೊರೆದು ಪದ್ಮಜಾತನಾಹ11 ದುಷ್ಟವೈರಿ ಜನರ ಗೆದ್ದು ಅಷ್ಟ ಭಾಗ್ಯ ಸಹಿತ ದೇಹ ಪುಷ್ಟಿ ಜ್ಞಾನ ದೃಷ್ಟಿಗಳನು ಕೊಟ್ಟು ಕರುಣಿಪಾ ಸೃಷ್ಟಿಗೊಡೆಯ ಸರ್ಪರಾಜ ಬೆಟ್ಟದಲ್ಲಿ ನಿಂದು ಭಕ್ತ- ಭೀಷ್ಟವರದನೊಲಿಪ ತೆರದಿ ಸುಷ್ಠುಪ್ರೇಮವಿಟ್ಟು ಕಾಯೊ 12
--------------
ತುಪಾಕಿ ವೆಂಕಟರಮಣಾಚಾರ್ಯ
(ಶೇಣಿಯ ಗೋಪಾಲಕೃಷ್ಣನನ್ನು ನೆನೆದು) ತಾಪವ ಬಿಡಿಸು ದಯಾಪರ ಶ್ರೀ ಗೋಪಾಲ ಕೃಷ್ಣ ನೀ ಕಾಪಾಡು ಸಂಸಾರ ಪ. ಲೋಕನಾಯಕ ನಿನ್ನ ಕರುಣವಂದಿದ್ದರೆ ಸಾಕೆಂಬೆ ಜ್ಞಾನಾನಂದಕರ ಪಾಕಶಾಸನ ಸುತಗೊಲಿದಾತನ ಭಂಡಿ ನೂಕಿ ನಡೆಸಿದ ಕೃಪಾಕರ ಮೂರುತಿ 1 ನಡೆವುದು ನುಡಿವುದು ಕೊಡುವುದು ಕೊಂಬುದು ಮಡದಿ ಮಂದಿರ ಮಮತಾಸ್ಪದದ ಒಡವೆ ವಸ್ತುವು ಮೊದಲಾದುದೆಲ್ಲವನು ಶ್ರೀ- ಮುಡಿಯ ಸಂವರಿಸುವ ಕರದಿ ಸಂಗ್ರಹಿಸುತ2 ನಿನ್ನಡಿಗಳ ನಂಬಿ ನಿಂದಿಹೆನಿಲ್ಲಿ ಪ್ರ- ಸನ್ನ ಮುಖಾಂಬುಜ ಪಾಲಿಸೆಂದು ಅನ್ಯರಿಗೆಂದೆಂದು ದೈನ್ಯ ತೋರಿಸಲಾರೆ ಪನ್ನಗಾಚಲವಾಸ ಪರಮ ದಯಾಳೊ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀ ರಮಣನೆಲ್ಲಿಹ ಕರೆತಾರೆ ಸಖಿಯಳೆ ) * ಪ ಮನು ಕಮಂಡಲ ಕೂಪದಲ್ಲಿ ಹಿಡಿಯದಂತೆ ಬೆಳೆದು ಅವರ ಶರಧಿ ಒಳಗೆ ಹರಿದಾಡುತಿರುವ ಕೇಳ್ ಸಖಿಯಳೆ ಶರಧಿ ಒಳಗೆ ಹರಿದಾಡುತಲೆ ವೇದತಂದು ತೋರಿದ್ಹೊಳೆವ ಮಚ್ಛನ್ನ ಬಲಗೊಂಬೆ ಕೇಳ್ ಸತಿಯಳೆ 1 ಸೃಷ್ಟಿಗೆ ಅಧಿಕ ಸ್ತ್ರೀಯಳ ದೈತ್ಯರು ಮೋಹಿಸಲು ಕಂಡು ಹುಟ್ಟಿಸಿದ ಸುಧೆಯ ಸುರರಿಗೆರೆದ ಕೇಳ್ ಸಖಿಯಳೆ ಹುಟ್ಟಿಸಿದ ಸುಧೆಯ ಸುರರಿಗೆರೆದು ಬೆಟ್ಟವನು ಬೆನ್ನ- ಲಿಟ್ಟ ಕೂರ್ಮನ ಬಲಗೊಂಬೆ ಕೇಳ್ ಸತಿಯಳೆ 2 ವಾಸುದೇವ ಕ್ರೋಡರೂಪಿಲಿಂದ ಹಿರಣ್ಯಾಕ್ಷನ ನಾಶವ ಮಾಡಿ ಕೋರೆಯಿಂದ ಕೇಳ್ ಸಖಿಯಳೆ ನಾಶವ ಮಾಡಿ ಕೋರೆಯಿಂದ ಧರಣಿ ತಂದು ಹರ್ವಿ (ರವಿ?)ದ ಭೂಪತಿವರ್ಹ(ರಾಹ?)ನ್ನ ಬಲಗೊಂಬೆ ಕೇಳ್ ಸತಿಯಳೆ 3 ಒಡೆದು ಕಂಬ ಕಡೆಗೆ ಕಿತ್ತು ಬಿಡದೆ ಅರಿಯ ತೊಡೆಯಲಿಟ್ಟು ಒಡಲ ತಾ ಬಗೆದ ಭಕ್ತರೊಡೆಯ ಕೇಳ್ ಸಖಿಯಳೆ ಒಡಲ ತಾ ಬಗೆದ ಭಕ್ತರೊಡೆಯನಾಗಿದ್ದ ಲಕ್ಷ್ಮೀ- ನಾರಸಿಂಹನ್ನ ಬಲಗೊಂಬೆ ಕೇಳ್ ಸತಿಯಳೆ 4 ಪಾದ ದಾನ ಬೇಡಿ ಪೃಥ್ವಿ ಆಕ್ರಮಿಸಿದ ಪರಮಾತ್ಮ ಕೇಳ್ ಸಖಿಯಳೆ ಪೃಥ್ವಿ ಆಕ್ರಮಿಸಿದ ಪರಮಾತ್ಮನಾದ ನಮ್ಮ ಕಶ್ಯಪರ ಸುತ ವಾಮನನ ಬಲಗೊಂಬೆ ಕೇಳ್ ಸಖಿಯಳೆ 5 ಋಷಿಗಳಲ್ಲಿ ಜನಿಸಿ ಕರದಿ ಧರಿಸಿ ಕುಠಾರವನ್ನು ಅರಸು ಕ್ಷತ್ರಿಯರಿಗಂತಕನ ಕೇಳ್ ಸಖಿಯಳೆ ಅರಸು ಕ್ಷತ್ರಿಯರ ಕುಲಕೆ ಅಂತಕನಾಗಿದ್ದ ನಮ್ಮ ಪರÀಶುರಾಮನ್ನ ಬಲಗೊಂಬೆ ಕೇಳ್ ಸಖಿಯಳೆ 6 ಮುದ್ರೆ ಕಳುವಿ(ಹಿ?) ಲಂಕಾಪುರದಲ್ಲಿದ್ದ ವಾರ್ತೆ ಕೇಳಿ ಸ- ಮುದ್ರ ಸೇತುಗಟ್ಟಿ ಜಾನಕಿಯ ಕೇಳ್ ಸಖಿಯಳೆ ಸ- ಮುದ್ರ ಸೇತುಗಟ್ಟಿ ಜಾನಕಿಯ ಕೂಡಿ ಬಂದ ಅ- ಯೋಧ್ಯಾರಾಮನ್ನ ಬಲಗೊಂಬೆ ಕೇಳ್ ಸಖಿಯಳೆ7 ಎಲ್ಲ ಜಗವ ತನ್ನ ಉದರದಲ್ಲೇ ಇಟ್ಟು ಗೋಕುಲದ ಗೊಲ್ಲತಿಯರ ಮನೆಯ ಪಾಲ್ಬೆಣ್ಣೆ ಕೇಳ್ ಸಖಿಯಳೆ ಗೊಲ್ಲತಿಯರ ಮನೆಯ ಪಾಲ್ಬೆಣ್ಣೆ ಕದ್ದು ಮೆಲ್ಲುವಂಥ ಚೆಲ್ವ ಕೃಷ್ಣನ್ನ ಬಲಗೊಂಬೆ ಕೇಳ್ ಸುಖಿಯಳೆ 8 ಮಾಯಾಶಿಶುರೂಪ ತಾನಾಗಿ ವೇದನಿಂದ್ಯವನ್ನು ಮಾಡಿ ಬೋಧಿಸಿದ ದುರ್ಮತವ ಕೇಳ್ ಸಖಿಯಳೆ ಮಾಡಿ ಬೋಧಿಸಿದ ದುರ್ಮತವ ತ್ರಿಪುರಜನರಿಗೆಲ್ಲ ಬೋಧಿಸಿದ ಬೌದ್ಧನ್ನ ಬಲಗೊಂಬೆ ಕೇಳ್ ಸಖಿಯಳೆ 9 ಕಲಿಸಮಾಪ್ತಿ ಕಾಲದಲ್ಲಿ ಚೆಲುವ ಅಶ್ವಾರೂಢನಾಗಿ ಬಿಡದೆ ಪಾಲಿಸಿದ ಶರಣಜನರ ಕೇಳ್ ಸಖಿಯಳೆ ಬಿಡದೆ ಪಾಲಿಸಿದ ಶರಣಜನರನು ಭೀಮೇಶಕೃಷ್ಣನ ಚರಣಕಮಲಕೆರಗಿ ಬಲಗೊಂಬೆ ಕೇಳ್ ಸಖಿಯಳೆ 10
--------------
ಹರಪನಹಳ್ಳಿಭೀಮವ್ವ
(ಶ್ರೀ ವಾದಿರಾಜರು) ದಿಟ್ಟದಿ ನಿನ್ನಯ ಪದಪದ್ಮವನ್ನು ಮನಮುಟ್ಟಿ ಭಜಿಸುವೆ ಕೃಷ್ಣರಾಯ ಪ ಸೃಷ್ಟಿ ನಿನ್ನಂಥ ಇಷ್ಟ ಪುಷ್ಟನ ಕಾಣೆ ಶ್ರೀ ಕೃಷ್ಣರಾಯ ಅ.ಪ ಇಷ್ಟನು ದುಷ್ಟ ಪಾಪಿಷ್ಠನಾಗುವುದುಚಿತವೇ ಕೃಷ್ಣರಾಯಾ ನಿನ್ನ ದೃಷ್ಟೀಲಿ ನೋಡೆನ್ನ ಶ್ರೇಷ್ಠ ಶ್ರೀಷ್ಮಿಪನಿಷ್ಟ ಕೃಷ್ಣರಾಯಾ 1 ಪಾಲನ ಪಾಲಿಪನನಿಲ್ಲಿಸಿದೇ ಕೃಷ್ಣರಾಯಾ 2 ಗರಳ ಸೇವಿಸಲು ಕಂಡುತ್ಯಜಿಸಿದೆ ಕೃಷ್ಣರಾಯಾತರಳೆಗೆ ನೀ ನಿನ್ನ ಸುಧಿಮಳೆಗರೆಯುತ ಅರಳಿಸೊ ಕೃಷ್ಣರಾಯಾ3 ವಡವುಟ್ಟಿದವರಂತೆ ದುಷ್ಟ ಪಾಪಿಷ್ಟ ಬೆನ್ನಟ್ಟುವನೋ ಕೃಷ್ಣರಾಯಾಗುಟ್ಟದಿ ನಿನ್ನಯ ದೃಷ್ಟಿಲಿ ನೋಡಿ ಆ ದುಷ್ಟನ ಸುಟ್ಟು ಹಾಕೊ ಕೃಷ್ಣರಾಯಾ4 ಮಧ್ಯಾನ್ಹ ಸಮಯದಿ ಮಧ್ವದಾಸನ ಭೂಷಿಪ ಶೇಷನ ವೈರಿಯ ಕೃಷ್ಣರಾಯಾದಾನವ ಗೈದು ದೂತಿಯ ಕರದಿಂದ ದೋಷಿಯೆಂದೆನಿಸಾದೆಸಲಹಿದೊ ಕೃಷ್ಣರಾಯಾ 5 ಅರಿಯದೆ ಪೋಗಿ ನಾಥಾ ತ್ರಿನಾಮನ ಕೂಡ ಭುಂಜಿಸಿದೆ ಕೃಷ್ಣರಾಯಾಅರಿಯು ನೀನಲ್ಲದೆ ಅನ್ಯರ ನಾಕಾಣೆ ಮೈಗಣ್ಣ ಕೃಷ್ಣರಾಯಾ 6 ಎನ್ನ ತನುಮನ ಧನಧಾನ್ಯ ಮನೆಯ ಮಕ್ಕಳೆಲ್ಲಾ ನಿನ್ನ ಚರಣಾಲಯವೋ ಕೃಷ್ಣರಾಯಾನಿನ್ನ ಗುಣಗಣಗಳೆಲ್ಲಾ ಅಗಣಿತವೋ ಅನ್ನಪೂರ್ಣೆಗೆಕೃಷ್ಣರಾಯಾ7 ಆದಿ ಅನಾದಿ ಅನೇಕನಾದಿ ಜನುಮದಿ ಎನ್ನಲ್ಲಿದ್ಯೋ ಕೃಷ್ಣರಾಯಾ ದೇವ ದೇವೇಶ ನೀನೆಂದು ದಯದಿಂದ ತೋರೋಕೃಷ್ಣರಾಯಾ 8 ಚರಣದ ಚರ್ಮಲ ಚಂದಸುವಸನ ತೋದ್ರ್ಯೋ ಕೃಷ್ಣರಾಯಾ ಆಲಸ್ಯ ಮಾಡುತ ತಾಳದೆ ನಿನ್ನ ಬಲಿನ ತೋದ್ರ್ಯೋಕೃಷ್ಣರಾಯಾ 9 ನಾರಂಗಿ ಫಲವನ್ನು ತಿಂದು ನೀ ನವರಸ ಭರಿತದಿ ನಿಂತ್ಯೋ ಕೃಷ್ಣರಾಯಾ ನಾರಿಯ ಮನವ ನೀನರಿತು ನಿನ್ನ ಮನವನಿತ್ತೆ ಕೃಷ್ಣರಾಯಾ 10 ಮೂರಾರು ಎರಡೊಂದು ನಿಂದಿಪ ಮತವನ್ನು ಛಂದದಿಖಂಡಿಸಿದೊ ಕೃಷ್ಣರಾಯಾಗಂಗಾದಿ ಕ್ಷೇತ್ರವು ಹಾಗದೇ ಚರಿಸಿ ತುಂಗದಿ ಬಂದು ಮೈಗಂಧ ತೋದ್ರ್ಯೋ ಕೃಷ್ಣರಾಯಾ 11 ಅಂಗದಿದ್ದುಕೊಂಡು ಪಂಚಭೇದವ ನರುಹಿದೆ ಕೃಷ್ಣರಾಯಾ ತಾರತಮ್ಯವನಿತ್ತು ನಿರುತದಿ ಸ್ಮರಿಸೆಂದು ತರುಳರಿಗುಪದೇಶಿಸಿದೆ ಕೃಷ್ಣರಾಯಾ 12 ಅರ್ಥಿಯಿಂದಲಿ ವೇದ ವೇದ್ಯತೀರ್ಥರ ಪ್ರಬಂಧ ತೀರ್ಥವ ತೋರಿ ನೀ ಕೃತಾರ್ಥನ ಮಾಡಿದೋ ಕೃಷ್ಣರಾಯಾಸತಿಸುತ ಜನನಿ ವಡಗೂಡಿ ವಿರೋಧಿಸೆ ಶಾಪವನಿತ್ತೆಕೃಷ್ಣರಾಯಾ 13 ಸತಿಜಾರನರಿತು ಮನದಲ್ಲಿ ಯೋಚಿಸಿ ಚೋರನಂದದಿ ಜರಿದು ಚರಿಸಿದಿ ಕೃಷ್ಣರಾಯಾಚರಿಸುತ ಧರೆಯೊಳು ಚೋರ ಜಾರನ ಪೊರೆದೆ ಕೃಷ್ಣರಾಯಾ14 ಅಂಗದಿ ಅಂಗಿತೊಟ್ಟು ಭಂಗವಿಲ್ಲದೆ ಕೂಡಲಗಿರಿಯಲಿ ಭುಂಜಿಸಿದೆ ಕೃಷ್ಣರಾಯಾತೀರ್ಥಗಿಂಡಿಯ ಮುಟ್ಟೆಂದು ಅಂಧಕರಾಯನು ಪೇಳಲು ಮುಟ್ಟಲಂಜದೆ ಗಾಡಿ ಧರಿಸಿದೆ ಕೃಷ್ಣರಾಯಾ 15 ತಂಡುಲವಿಲ್ಲದೆ ಪವಾಡತನದಿ ಕೂತುದ್ದಂಡ ಭೀಮನ ಸ್ಮರಿಸಿದೊ ಕೃಷ್ಣರಾಯಾ ತೊಂಡನ ಸತಿಯ ಕೈಗೊಂಡು ಪುಂಡ ಕಂಸಾರಿಯ ಸ್ಮರಿಸಿದೊ ಕೃಷ್ಣರಾಯಾ16 ಸ್ವಾದಿ ಕ್ಷೇತ್ರದಿ ಪೋಗಿ ಛತ್ರದಿ ಅರ್ಚಿಸಿಕೊಂಡ್ಯೋ ಕೃಷ್ಣರಾಯಾ ಮನವನ ಚರಿಸುತ ತಪವನೆಗೈಯುತ ಕಪಿಯನ್ನೇ ಪುಡುಕಿದ್ಯೊ ಕೃಷ್ಣರಾಯಾ 17 ಚಿಕ್ಕ ಬದಿರಲಿ ಪೋಗಿ ಬಲು ಅಕ್ಕರದಿ ನಿನ್ನ ಪಡೆದನ ಕಪ್ಪುಗೊರಳನ ರೂಪದಿ ಕಂಡ್ಯೋ ಕೃಷ್ಣರಾಯಾ ಸ್ವಪ್ನದಿ ಸರ್ವರ ಕಾಣುತ ಸ್ವಪದವಿಯನೇರಿದ್ಯೋಕೃಷ್ಣರಾಯಾ 18 ತಾಮಸ ಜೀವನು ಜವನಂತೆ ಜೂಜಿಸೆ ಜೀವನವರಿಸಿದ್ಯೋ ಕೃಷ್ಣರಾಯಾಲೇಖವು ಬರೆಯಲು ಲೋಕಾವಧರಿಸಿದ ವಾರುಣೀಶನಂತೆ ಪೌರುಷ ತೋರಿ ಫಣಿರೋಗ ನಿತ್ಯೋ ಕೃಷ್ಣರಾಯಾ 19 ಎನ್ನ ಜನ್ಮವಾದ ದಿನದಲ್ಲಿ ಜೀವೇಶರಾಯನ ಪೂಜಿಸಿದ್ಯೋ ಕೃಷ್ಣರಾಯಾಪೂಜಾದಿ ಪೂಜಿಸಿ ಪೂರ್ಣ ಆಯುವಿತ್ತು ಜೀವನುದ್ಧರಿಸಿ ಜೋಕೆಯೋ ಕೃಷ್ಣರಾಯಾ 20 ಅಕ್ಕನ ಕೈಯಲ್ಲಿ ದಿಕ್ಕಿಲ್ಲದವರಂತೆ ಸಿಕ್ಕು ಸುಖಬಟ್ಯೋ ಕೃಷ್ಣರಾಯಾ ದಿಟ್ಟದಿ ನಿನ್ನಯ ಗುಟ್ಟು ತಿಳಿಸಿ ಬೆಟ್ಟದೊಡೆಯ ತಂದೆವರದಗೋಪಾಲವಿಠಲನಪದಪದ್ಮಗಳನ್ನೆ ಮುಟ್ಟಿ ಭಜಿಸುವಂತೆ ದಿಟ್ಟನ ಮಾಡುಶ್ರೀ ಗುರು ಕೃಷ್ಣರಾಯಾ 21
--------------
ತಂದೆವರದಗೋಪಾಲವಿಠಲರು