ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀವಾಯು ದೇವರು ಅನುದಿನ ಸ್ತುತಿಸುವೆ ದೀನಮನುಜನ ಜನುಮಗಳಳಿಸೋ ಪ ವಾಣಿವಂದಿತ ಪಾದಪದ್ಮನೆ ಕಾಯೋ ಈಗಲೇ ಅ.ಪ. ಜಾನಕೀರಮಣನ ಪ್ರಿಯ ದಾನವಾಂತಕ ಕಾಯ ಮಣಿಮಂತಾದಿಗಳ ಶೂಲ ಘನ ಪರಾಕ್ರಮ ಭೀಮ ಜ್ಞಾನದಾಯಕ ವಪುಷ ಆನಂದ ತೀರ್ಥಪ್ರಖ್ಯಾತ ಮೌನಿಮಾನಸ ಚಂದ್ರ ಅನಿಮಿಶೇಷಗಳಾದಿಗೊಡೆಯ ಭಾನುಕುಲತಿಲಕ ದೂತನೆ ಭಾನುಕೋಟಿತೇಜರೂಪನೆ ಗಣಿಸಲಾಗದ ಸತ್ವಮಂದಿರ ಮೌನಿಗಳ ಕಲಶ ಪ್ರಾಯನೆ ಕನಕವರ್ಣದಶುಭಗಾತ್ರನೆ ಧ್ಯಾನಗೋಚರ ವಿಶ್ವರೂಪನೆ ಮಾನದಿಂದಲಿ ಪಾಲಿಸಯ್ಯ 1 ವಾರಿಧಿ ದಾಟಿದಶೂರ ಭಾರಿವನವ ಕಿತ್ತವೀರ ಜರಾಸಂಧನ ಕೊಂದ ಧೀರ ವೈರಿತಿಮಿರಕೆ ಸೂರ್ಯ ಹರಿಯ ಹರಡಿದ ರಾಯ ಪರಾಶರಾತ್ಮಜಪ್ರಿಯ ಕರಿರಾಜವರದನೆ ಪ್ರಥಮಾಂಗ ಭಾರತಿ ರಮಣಮುಖ್ಯಪ್ರಾಣ ಹರಿಯು ಆಗಿ ಹರಿಯ ಒಲಿಸಿದೆ ವೀರಮಾರುತಿ ದೇವ ದೇವನೆ ಬಗೆದು ಧರಿಸಿ ಮೆರೆದೇ ಎಂದು ಸಾರಿದೆ ತೋರಿಸಿ ಕಾಯೊ ಸೂತ್ರನೆ 2 ಅಕ್ಷಯನ ಕೊಂದು ಮೆರೆದ ಲಕ್ಷ್ಮಣನ ಪ್ರಾಣವನುಳಿದ ರುಕ್ಮಿಣೀ ಪತಿಯ ಕಿಂಕರನಾದ ಲಕ್ಷ್ಯವಿಲ್ಲದೆ ಸೈನ್ಯಗಳಳಿದಾ ಪಕ್ಷವಾಹನನೆ ದೈವವೆಂದ ಮೋಕ್ಷಸಾಧನಗಳ ತೋರಿನಿಂದ ವೈರಿ ಅನಿಲ ರಕ್ಷಿಸು ರಕ್ಷಿಸು ತತ್ವೇಶರೊಡೆಯ ಲಕ್ಷ್ಮಿಮಾತೆಯಕಂಡುವಂದಿಸಿ ಲಂಕೆ ಸುಟ್ಟು ಸೊಕ್ಕೂ ಮುರಿದೆ ಅಕ್ಷನಾಟವ ಸೋತುನಟಿಸಿ ಕಾಂತೆಗಭಯವ ನೀಡಿ ಪೊರೆದೆ ಅಕ್ಷರೇಡ್ಯನ ಕರುಣದಿಂದಲಿ ಸೂತ್ರಭಾಷ್ಯವ ರಚಿಸಿ ಮೆರೆದೇ ಇಕ್ಷುಚಾಪನ ಪಿತನ ತೋರಿಸೋ ದಕ್ಷಿಣಾಕ್ಷಿಗವತ್ಸರೂಪಿಯೆ 3 ವಿಷಉಂಡುಪೊರೆದ ರೋಮರೋಮಕೆ ಕೋಟಿ ಲಿಂಗಗಳುದುರಿಸಿ ಬಂದ ಧಾಮಸಕಲ ಗುಣಕೆಂದೆನಿಕೊಂಡ ಅನಾದಿ ಅಪರೋಕ್ಷದೇವ ರಾಮಭಕ್ತಾಗ್ರೇಸರನೆನಿಸಿದ ತಾಮಸಾಂತಕ ವಿಜಯರಥಧ್ವಜ ಭಾಮೆಯರೂಪವ ತಾಳಿಮೆರೆದ ಭೀಮವಿಕ್ರಮ ಸಪ್ತಶಿವಧರ ಸಾಮಗಾಯನ ಲೋಲ ಕೃಷ್ಣನ ಪ್ರಿಯದಾಸ ಮೋದಮುನಿಯೆ ಎನಿಸಿಮೆರೆಯುವೆ 4 ವಾನರರೂಪಿಲಿ ಬಂದ ಜಾನಕಿ ಗುಂಗುರಕೊಟ್ಟು ನಿಂದ ರಾಜಸೂಯವ ಮಾಡಿನಿಂದ ಹರಿಯು ಎಂದ ವನಜನಾಭನಮುಖ್ಯ ಪ್ರತಿಬಿಂಬ ಕ್ಷಣದಿ ಸಂಜೀವನವ ತಂದೆ ವಾನರರ ಪ್ರಾಣ ಉಳಿಸಿದೆ ದ್ರೋಣಸುತನ ಅಸ್ತ್ರನಿಲಿಸಿದೆ ಸಾಮ ದೂರ ಖ್ಯಾತನಾಮನೆ ವಾಯು ಅಂತರ ವಿಶ್ವ ಚರಣ ನಂಬಿದೇ 5
--------------
ಕೃಷ್ಣವಿಠಲದಾಸರು
ಕೃಷ್ಣೇತಿ ಮಂಗಳಂ ದಿವ್ಯನಾಮ ಪಇಷ್ಟರಿಂದಲಿ ಭವಬಂಧನನಷ್ಟವಾಗಿ ಹೋಹುದೋ ಅ.ಪನಾರದಮುನಿ ತಾನು ನರಕ ಪಟ್ಟಣಕೆ ಹೋಗಿವಾರೀಜನಾಭ ಎಂದು ಒದರಿದಾಗ ||ಘೋರ ಪಾತಕವೆಲ್ಲ ದೂರವಾಗಿ ಹೋಯ್ತುಸೂರೆಯಾಯಿತು ಸ್ವರ್ಗಲೋಕವೆಲ್ಲ 1ಅಜಮಿಳನು ಈ ನಾಮ ಅಂತ್ಯಕಾಲಕೆ ಸ್ಮರಿಸೆನಿಜಪದವಿಯೈದಿದನು ನಿಮಿಷದಲಿ ||ಭುಜಗಭೂಷಣನು ತಾ ಶ್ರೀರಾಮನಾಮವನಿಜಕಾಂತೆಯನು ಕರೆದು ಉಪದೇಶವಿತ್ತ 2ಪಂಚಪಾಂಡವರನು ಪರಿಪಾಲಿಸಿತು ನಾಮಪಾಂಚಾಲೀ ಮೊರೆಕೇಳಿ ಪೊರೆಯಿತು ನಾಮ ||ವಂಚನೆ ಮಾಡಿ ಕೌರವರ ಮಡುಹಿ ನಿ -ಶ್ಚಿಂತೆಯಲಿ ಪಾಂಡವರ ಪಟ್ಟಗಟ್ಟಿದ ನಾಮ 3ಸರಸಿಯೊಳಗೆ ಮುಳುಗಿ ಅರಿಯ ಬಾಧೆಗೆ ಸಿಲುಕಿಕರಿರಾಜ ಹರಿಯೆಂದು ಮೊರೆಯಿಡಲು ||ತ್ವರಿತದಿಂದಲಿ ಬಂದು ಕರಿಯನುದ್ಧರಿಸುತಕರಿರಾಜವರದನೆಂದೆನಿಸಿಕೊಂಡ ನಾಮ 4ಧ್ರುವ ತನ್ನ ತಂದೆ ತೊಡೆಯ ಮೇಲೇರಲು ಪೋಗೆಅವನ ಮಲತಾಯಿ ಗರ್ಜಿಸಿದಳಾಗ ||ಧ್ರುವ ಸುಖಬಿಟ್ಟು ವನಕೆ ಪೋಗಿ ತಪ ಮಾಡಿಸವಿಯಾದಚಲಪದವ ಪಡೆದನಾಗ 5ಹಿರಣ್ಯಕಶಿಪು ತನ್ನ ಮಗನ ಬಾಧೆಯ ಪಡಿಸೆಗಿರಿಯ ಶಿಖರದಿಂದೀಡಾಡಲು ||ನರಹರೆ ನರಹರೆ ರಕ್ಷಿಸೆಂದನ್ನಲುನರಸಿಂಹ ರೂಪದಿಂದವನ ಪಾಲಿಸಿದ 6ಕಂದನ ಅಪರಾಧವ ಕೇಳದೆ ನೃಪನು ತಾನಂದತಿ ದಾರುಣ ಕಡಹದೋಳು ಕೆಡಹೆ ||ಅಂದು ಸುಧನ್ವ ಶ್ರೀಕೃಷ್ಣನೆಂದೆನಲಾಗಿಬೆಂದು ಕಂದಿವ ಎಣ್ಣೆ ತಣ್ಣೀರಾಯಿತು 7ಅಸುರ ಬಾಧೆಗೆ ಸಿಲುಕಿ ಅಶೋಕವನದಲಿಶಶಿಮುಖಿ ಬೀಜಮಂತ್ರವ ಜಪಿಸೆ ||ಅಸುರನ ಕೊಂದು ಅಶೋಕವನವ ಬಿಡಿಸಿವಸುಧೀ ಸುತೆಯ ಸಲಹಿದ ರಾಮನಾಮ 8ಪರಿಪರಿ ಭಕ್ತರನು ಪಾಲಿಸಿತು ಈ ನಾಮಪರಮ ಮಂಗಲವು ಪಾವನವು ಈ ನಾಮ ||ಸುರರು ಬ್ರಹ್ಮಾದಿಗಳು ಸ್ರೋತ್ರ ಮಾಡುವ ನಾಮಧರೆಯೊಳುಸಿರಿಪುರಂದರ ವಿಠಲ ನಾಮ9
--------------
ಪುರಂದರದಾಸರು
ದಯಮಾಡೋ ದಯಮಾಡೋ ದಯಮಾಡೋ ರಂಗ ಪದಯಮಾಡೋ ನಾ ನಿನ್ನ ದಾಸನೆಂತೆಂದು ಅ.ಪಹಲವು ಕಾಲವು ನಿನ್ನ ಹಂಬಲವೆನಗೆಒಲಿದು ಪಾಲಿಸಬೇಕುವಾರಿಜನಾಭ1ಇಹಪರದಲಿ ನೀನೆ ಇಂದಿರೆರಮಣಭಯವೇಕೋ ನೀನಿರಲು ಭಕ್ತರಭಿಮಾನಿ 2ಕರಿರಾಜವರದನೆ ಕಂದರ್ಪನಯ್ಯಪುರಂದರವಿಠಲ ಸದ್ಗುಣ ಸಾರ್ವಭೌಮ 3
--------------
ಪುರಂದರದಾಸರು