ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈತÀನೀಗ ವಿಜಯ ವಿಠ್ಠಲಾ ಯಾತನೆಯನು ಕಳೆದು ಪೊರೆವಾ ಪ ಕರೆದರೊಂದೆ ನುಡಿಗೆ ಬಂದು ಕರುಣದಿಂದ ಮುಂದೆ ನಿಂದು ಕರವ ಪಿಡಿದು ಅಂದು ಅಭಯ ಕರವ ಪಾಲಿಸಿದ ದಯಾಸಿಂಧು ಪರಿಪರಿಯಿಂದಲಿ ಹಿಂದು ಮುಂದು ದುರಿತದಿಂದ ನೊಂದು ಬಂದು ಮೊರೆ ವಿಚಾರಿಸಿ ಸಾಕಿದನಿಂದು 1 ಅಚ್ಯುತಾನಂತನೆಂಬ ನಾಮಾ ಅಚ್ಚು ಸುಧೆಯೆನಗೆ ನೇಮಾ ನಿಚ್ಚ ಉಣಲಿಕಿತ್ತ ಪ್ರೇಮಾ ಚಚ್ಚಲದಲಿ ಪೂರ್ಣಕಾಮಾ ಹೆಚ್ಚಿ ಬಪ್ಪ ಮದದಾ ಸ್ತೋಮಾ ನುಚ್ಚು ಮಾಡಿ ಬಿಡುವ ಭೀಮಾ ಸುಚ್ಚರಿತ ಸಾರ್ವಭೌಮಾ2 ಮೊದಲೆ ಗುರು ಪುರಂದರದಾಸರಾ ಹೃದಯದೊಳಗೆ ನಿಂದಾ ಶೃಂಗಾರಾ ಉದಧಿಯೋ ಇದು ಬಣ್ಣಿಸಿಬಲ್ಲ್ಲಿರಾ ತ್ರಿದಶರೊಳಗೆ ಕಾಣೆ ಜ್ಞಾನರ ಸದಮಲಾನಂದ ಪೂರ್ಣ ಇಂದಿರಾ ಸದನಾ ಪ್ರತಾಪಗುಣ ಪಾರಾವಾರಾ ಪದೋಪದಿಗೆ ಎನ್ನಯ ಮನೋಹರಾ3
--------------
ವಿಜಯದಾಸ
ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ತಾನಾ ತಂದನಾನಾ ಧ್ರುವ ಬಲ್ಲೆ ಬಲ್ಲೆನೆಂಬರು ಬಲ್ಲರಿಯದಿಹದನು ಬಲ್ಲರೆ ನೀವಿನ್ನು ಹೇಳುವುದು ತಾನಾ 1 ಕಣ್ಣು ಕಾಂಬುವದೇನು ಕಣ್ಣಿನೊಳಿಹುದೇನು ಕಣ್ಣು ಕಾಂಬುವ ಗತಿ ತಿಳಿಯುವುದು ತಾನಾ 2 ಕಿವಿಯ ಕಿವಿಯೆಂಬುದೇನು ಕಿವಿಯ ಕೇಳುವುದೇನು ಕಿವಿಯ ಕೇಳುವ ಗತಿ ತಿಳಿಯುವದು ತಾನಾ 3 ಮೂಗು ಮೂಗೆಂಬುದೇನು ಮೂಗಿನೊಳಾಡುವದೇನು ಆಡುವ ಗತಿಗಳ ತಿಳಿಯುವದು ತಾನಾ 4 ಬಾಯಿ ಬಾಯೆಂಬುದೇನು ಬಾಯಿಯೊಳ ನುಡಿವದೇನು ಬಾಯಿ ನುಡಿವ ಗತಿ ತಿಳಿಯುವದು ತಾನಾ 5 ದೇಹ ದೇಹೆಂಬುದೇನು ದೇಹದೊಳಿಹುದೇನು ದೇಹದೊಳಿಹ ವಸ್ತು ತಿಳಿಯುವದು ತಾನಾ 6 ಪ್ರಾಣವೆಂಬುದೇನು ಕರಣವೆಂಬುದೇನು ತತ್ತ್ವವೆಂಬುದೇನು ತಿಳಿಯುವದು ತಾನಾ 7 ಜೀವ ಅಂಬುದೇನು ಜೀವಭಾಗಗಳೇನು ಜೀವ ಶಿವದ ಗತಿ ತಿಳಿಯುವದು ತಾನಾ 8 ಆರುವ್ಹೆಂಬುದೇನು ಮರವ್ಹುವೆಂಬುದೇನು ಇದರೊಳು ಖೂನ ಕುರುಹು ತಿಳಿಯುವುದು ತಾನಾ 9 ಕನಸುವೆಂಬುದೇನು ಕನಸು ಕಾಂಬುವದೇನು ಕನಸು ಹೇಳುವದೇನು ತಿಳಿಯುವುದು ತಾನಾ 10 ಹಗಲು ಎದ್ದಿಹದೇನು ಇರಳು ಮಲಗುವದೇನು ಇದರ ಹಗರಣವನು ತಿಳಿಯುವದು ತಾನಾ 11 ಹುಟ್ಟಿ ಬಾಳುವದೇನು ಸತ್ತು ಹೋಗುವದೇನು ಸತ್ತು ಹುಟ್ಟುವದೇನು ತಿಳಿಯುವದು ತಾನಾ 12 ಹೆಣ್ಣು ಗಂಡೆಂಬುವದೇನು ಹೆಣ್ಣು ಗಂಡು ಕೂಡುವದೇನು ಕೂಡುವದೇನೆಂದು ತಿಳಿಯುವದು ತಾನಾ 13 ಅನುಭವ ಗತಿಗಳ ತಿಳಿಯಲು ಆತ್ಮದೊಳು ತಿಳಿಯಲು ಜನ್ಮವು ಅಳಿಯುವದು ತಾನಾ 14 ಆತ್ಮ ಅನುಭವವು ತಿಳಿಯುವದು ಗುರುಕೃಪೆಯು ತಿಳಿಯಲು ಜೀವನ್ಮುಕ್ತಿಯು ತಾನಾ 15 ಮಹಿಪತೆಂಬ್ಹೆಸರನು ಕರೆದರೊ ಎಂಬುವದೇನು ಓ ಎಂಬುವದೆನಗಿನ್ನು ತಿಳಿಯಿತು ತಾನಾ 16 ಇಂತು ಪರಿಯಾಯವು ತಿಳುಹಿದ ಗುರುರಾಯ ಎನ್ನೊಳು ಭಾಸ್ಕರ ಗುರು ತಾನೆ ತಾನಾ 17
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿನ್ನ ನಾಮವೆ ಘನವಆಗಿದೆ ನೆನೆವರಕಾವ ಕರುಣಿಯೆಂದು ಪ ಪಾದ ಯುಗವನಾ ಕಾಣಬಲ್ಲನೆ ಕೇಳಿ ಗರುಢಾ ರೂಢ ನಾಗಿ ಬಂದು ಗಜವ ಕಾಯ್ದವನೆಂದು 1 ಸಂಗದಿಂದಲಿ ಯಿರುತಿರಲು ಬಂದು ಯಮನ ದೂತರೆಳೆಯೆ ಭಯದಿ ತನ್ನ ನಂದನ ಕರೆದರೊಂದು ನಾಮವೆ ಕಾದುದೆಂದು 2 ದುರುಳ ಕಶ್ಯಪುಸುತನ ಭಾಧಿಸೆ ಮೊರೆಯಿಡಲದನುಕೇಳಿ ಭರದಿ ಕಂಬದಿ ಬಂದು ನರಹರಿಯಾಗಿ ನಿಂದು ಕರದೊಳವನ ಕೊಂದು ತರಳನ ಕಾಯ್ದೆಯೆಂದು 3 ಅಂಬುಧಿಶಯನ ನಿನ್ನ ರುಕ್ಮಾಂಗದ ಮೃತ್ಯವೆಂಬುದೆಲ್ಲವಗೆದ್ದು ಕುಂಭಿನಿಯೊಳು ಪೆಸರೊಡೆದರೆಂಬುದ ಕೇಳಿ 4 ಓಲಗದೊಳು ಶಾಲೆಯ ಸುಲಿಯೆ ದ್ರುಪದ ಭೀಮನಕೋಣೆ ಲಕ್ಷ್ಮೀ ಲೋಲ ಸೀರೆಯ ಸೆರಗ ಬೆಳೆಸಿದ ನಾಮವೆಂದು 5
--------------
ಕವಿ ಪರಮದೇವದಾಸರು
ಪರಮ ಸುಗುಣಸಾಂದ್ರ ಗುರುರಾಘವೇಂದ್ರ ಪ ಕರುಣಾಳೋ ಮುನಿ | ವಂಶಸುಧಾಕರ | ಗುರುರಾಜ ಪ್ರಭೋ | ಶ್ರೀ ರಾಘವೇಂದ್ರ ಅ.ಪ ಮುರುಕುಮಂಟಪದೊಳು | ಹರಕುಚಿಂದಿಯನ್ಹೊದ್ದು | ಉರಿಯ ಬೆಳಕಿನಲ್ಲಿ | ಪರಿಮಳ ರಚಿಸಿದೆ || ಗುರುಗಳಾಕ್ಷಣ ಕಂಡು | ಪರಮಸಂಭ್ರಮದಿಂದ | ಪರಿಮಳಾಚಾರ್ಯನೆಂಬ | ಬಿರುದಿತ್ತು ಕರೆದರೊ 1 ಜಡಮತಿ ಬ್ರಾಹ್ಮಣ | ಮಿಡುಕಿ ನಿರೂಪಿಸೆ | ವಡನೆ ಗಂಧವ ತೇದೆ | ಅನಲನ ಜಪಿಸುತೆ || ಒಡಲ ಬೇಗೆಯಿಂ ಜನರು | ಬಡಬಡಿಸಿದ ಕಂಡು | ಕಡಲರಸನ ದಯದಿ | ಕಡುಶಾಂತಿ ಇತ್ತೆಯೊ2 ಬಾದರಾಯಣಮುನಿ | ಭೇದಮತವ ಬಿತ್ತೆ | ಮೋದತೀರ್ಥರು ತರುವ | ಸಾದರಗೈದರೊ || ಸ್ವಾದಫಲಂಗಳು | ನಿನ್ನಿಂದ ತೋರ್ದವು | ಸಾಧುಜನಾರ್ಚಿತ | ಶ್ರೀಶಕೇಶವಪ್ರಿಯ 3
--------------
ಶ್ರೀಶ ಕೇಶವದಾಸರು
ಅಮ್ಮ ಬಾರೊ ರಂಗಮ್ಮ ಬಾರೊ ಪುಟ್ಟತಮ್ಮ ಬಾರೊ ಮುದ್ದಿನುಮ್ಮ ತಾರೊ ಪ.ಅಯ್ಯ ಬಾರೊಅಜನಯ್ಯಬಾರೊ ಚಿನುಮಯ್ಯ ಬಾರೊ ಬೆಣ್ಣೆಗಯ್ಯ ಬಾರೊ 1ಕಂದ ಬಾರೊ ಪೂರ್ಣಾನಂದ ಬಾರೊ ಸುರವಂದ್ಯ ಬಾರೊ ಬಾಲ್ಮುಕುಂದ ಬಾರೊ 2ಅಣ್ಣ ಬಾರೊ ತಾವರೆಗಣ್ಣ ಬಾರೊ ಎನ್ನಚಿನ್ನ ಬಾರೊ ಶಿಶುರನ್ನ ಬಾರೊ 3ನಲಿದು ಬಾರೊ ಕರುಣಾಜಲಧಿ ಬಾರೊ ಆಡಿಬಳಲ್ದೆ ಬಾರೊ ಕರೆದರೊಲಿದು ಬಾರೊ 4ಶ್ರೀಶ ಬಾರೊ ಹಸುಗೂಸೆ ಬಾರೊಪರಿತೋಷ ಬಾರೊ ಪ್ರಸನ್ವೆಂಕಟೇಶ ಬಾರೊ 5
--------------
ಪ್ರಸನ್ನವೆಂಕಟದಾಸರು