ಒಟ್ಟು 44 ಕಡೆಗಳಲ್ಲಿ , 19 ದಾಸರು , 34 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(5) ಶ್ರೀನಿವಾಸ ವಿಪ್ರವಂದಿತ ಪಾಪಕೋಟಿ ಕುಲನಾಶಾ ಶ್ರೀವೆಂಕಟೇಶಾ ಪ ನಿಜನುಡಿಯ ಭೃಗುನುಡಿಯೆ ಮುನಿಮಂಡಲಿಯ ನಡೆಯೆ ತ್ರಿಜಗಾಗ್ರಪೂಜಿತ ಪರಬ್ರಹ್ಮ ನೀನೇ 1 ಪಶುವತ್ಸಗೋಪಾಲ ಸರ್ವವೂ ನೀನಾಗೆ ಬಿಸಜಭವ ಬೆದರುತ್ತ ಪದಕೆರಗಿದ 2 ಮೋಹಿನಿಯವೇಶದಿಂ ರಕ್ಕಸನ ಭಸ್ಮಿಸಿ ಪಾಹಿಮೆನಲಾ ದಕ್ಷ ವೈರಿಯ ರಕ್ಷಿಸಿದೆ 3 ಗಿರಯನೇ ಕೊಡೆವಿಡಿದು ಗೋಕುಲವನೆ ಕಾಯ್ದೆ ಸುರರಾಜ ಗರಿಮುದುರಿ ಶರಣೆಂದು ಬಂದ 4 ವಿಧವರದಿ ಬೆರೆದ ಹಿರಣ್ಯಕಶಿಪುವ ಬಗೆದು ಸದೆದೆ ಶಿವಕಾವಲಿನ ಬಾಣನಂ ಬಿಡವೇ 5 ಸಾಸಿರಗಳರವತ್ತು ಸಗರಸುತರನು ಸುಟ್ಟು ಘಾಸಿಹರಿಸಿದೆ ಜಗದೆ ಜೀವ ಜಂತುಳಿಗೆ 6 ಪಾತಕಿಯ ರಾವಣನು ಕಾರವರ ಕೊಂದೇ 7 ಬಲಿದ ಶಾಪವ ಕಳೆದು ಕಾಯ್ವ ಬಂಧೂ 8 ಸಾವುಂಡ ಶಿಶುವನು ಗುರುವಿಗೆ ನೀ ತಂದಿತ್ತೆ ನೋವುಂಡ ಇಂದ್ರಂಗೆ ಲೋಕಗಳನಳೆದೆ 9 ಅಜಕಪಾಲವ ಬಿಡಿಸಿ ಮೃತ್ಯುಂಜಯನ ಹರಸಿ ಅಜಮಿಳನ ನೀ ಮುಕ್ತಿಸ್ಥಾನಕ್ಕೆ ತಂದೆ 10 ಸರ್ವಕಾಲಗಳಲ್ಲು ಅಪರಾಧಿ ನಾನಯ್ಯ ಗರ್ವಿಯೆನಿಸದೆ ತಪ್ಪು ಕ್ಷಮಿಸಯ್ಯ ತಂದೆ 11 ಆನೆ ಅಳುವುದು ಕೇಳಿ ಮೊಸಳೆಬಾಯನು ಸೀಳ್ದೆ ನೀನೆ ಆಪದ್ಭಂದು ಕಾರುಣ್ಯಸಿಂಧು12 ಅರಗಿನ ಮನೆಯಲ್ಲಿ ಭರದಿಂದ ಬಾಂಧವರಿಗೆ ಉರಿಭಯವ ತಪ್ಪಿಸಿ ಪೊರೆದ ಪ್ರಭುವೇ13 ದ್ರುಪದ ಪುತ್ರಿಗೆ ಮಾನ ಸಂರಕ್ಷಣೆಯನು ಮಾಡಿ ಕೃಪೆತೋರಿಪಾರ್ಥಂಗೆ ಸಾರಥಿಯು ಆದೆ 14 ಕಾಲ ವಾಲಿಪ್ರಾಣಕೆ ಶೂಲ ಲೀಲೆಯಿಂ ಭಕ್ತರಂ ಪಾಲಿಸುವೆ 15 ಪಾವನದ ಪಾದಗಳನಿಂತು ಮುಡಿಯಮೇಲೆ ಭಾವಿಸುವೆ ಭವಕಳೆಯೆ ನಾತಾಳೆ ನಾಳೆ 16 ತಾಪಗಳು ಮೂರನುಂ ಹರಿಪ ಸಂಕಟದೂರ ಕಾಪಾಡು ಶ್ರೀಹರಿ ಬಂಧುಬೇರಿಲ್ಲ ಭಕ್ತಸತ್ರಾ 17 ಶರಣಸಂರಕ್ಷಣ ಬಿರುದು ಧರಸಿಹೆ ನಿತ್ಯ ಭರದಿ ಶಾಂತಿನೀಡೋ ಚರಣಕ್ಕೆ ಶರಣು 18 ಕ್ಷಾಮಡಾಮರ ಕಳೆಯೆ ಸುವೃಷ್ಟಿಯ ಕರೆವೆ ಕಾಮಿತಾರ್ಥದ ಕಾಮಧೇನು ಸ್ವಾಮಿ ತಾಯಿತಂದೆ 19 ಚಕ್ರಧರ ಚಕ್ರಧರ ಭಜಿಪ ಭಕ್ತರ ಪಾಲ ನರಸಿಂಹ ನರಸಿಂಹ 20 ಕ್ಷೇಮಕರಗರುಡನೇ ಧ್ವಜನು ವಾಹನನು ಭೀಮ ಹನುಮ ಪ್ರೇಮ ಹೆಜ್ಜಾಜಿಶ್ಯಾಮ ಸ್ವಾಮಿ21
--------------
ಶಾಮಶರ್ಮರು
(ಊ) ಕ್ಷೇತ್ರ ವರ್ಣನೆ 1. ಬೇಲೂರು ಚನ್ನಕೇಶವರಾಯ ಚೆಲುವ ಚೆನ್ನಿಗರಾಯಾ ನಿನ್ನ ಕಾಣದೇ ನಿಲ್ಲಲಾರೆ ಬೇಲೂರ ಪ ವಜ್ರ ಪದುಮ ಪತಾಕಾಂಕುಶಗಳು ನಿಜಸತಿ ಲಕುಮಿದೇವಿಯರಾ ಭುಜ ಕುಚ ಕುಂಕುಮಾಂಕಿತ ಧರಾಂಕಿತ ಭಜಕರ ಭಾಗ್ಯೋದಯ ಪಾದಯುಗಳದಾ 1 ಸುರ ವೈರಿಗಳೆದೆ ಥಲ್ಲಣವೆನಿಸುವಾ ಬಿರುದಿನ ಖಡ್ಡೆಯಪ್ಪ ಚರಣಂಗಳಾ ಗರುಡನ ಹೆಗಲೇರಿ ಉದರದಿ ವಿರಿಂಚಿಯು ಉದುಭವಿಸಿದ ವರನಾಭಿಯ ಚೆಲುವಿನಾ 2 ಪೊಂಬಟ್ಟೆಯಿಂದೆಸೆವ ಪೀತಾಂಬರ ಚೆಂಬೊನ್ನದ ಕಾಂಚಿಯದಾಮದಾ ಅಂಬುಜ ಕೌಮೋದಕಿ ಸುದರುಶನ ಕಂಬುವ ಧರಿಸಿಹ ಚತುರುಭುಜಂಗಳಾ 3 ಶ್ರೀಯಾಲಿಂಗಿಸಿ ಸುಖವ ಕಾಮಿನಿಯರ ಶ್ರೀಯೋಗವ ತೋರಿಸೆನಗೊಮ್ಮೆ ಹಾಯೆಂದು ಬಿಗಿದಪ್ಪಿ ನಂಬಿಸಿ ಚುಂಬಿಸಿ ಬಾಯ ತಂಬುಲವಿತ್ತು ಬಂದೆನ್ನ ನೆರೆಯಾ 4 ಕರೆವೆನ್ನ ಮನದಲ್ಲಿ ಕರೆವ ನಾಲಿಗೆಯಲ್ಲಿ ಕರೆವೆನ್ನ ಕಣ್ಣುಸನ್ನೆಯಲೀ ಕರೆವೆ ನೆರೆವೆ ನಿನ್ನ ಚರಣಕೆರಗುವೆ ನಾ ವರವೈಕುಂಠಕೇಶವ ಬೇಲೂರ 5
--------------
ಬೇಲೂರು ವೈಕುಂಠದಾಸರು
(ಬಾಲಕೃಷ್ಣ ವರ್ಣನೆ) ಕಂಸಾರಿ ಕೃಷ್ಣಾ ಕಾಡದಿರೆನ್ನನು ಪ ಹಳ್ಳದ ತಡಿಯಲ್ಲಿ ಮಳಲು ತೋಡಿ ತೋಡಿ ಗೊಲ್ಲಿತೆರೊಡÀನಾಡಿ ಕಲಿತ್ಯೋ ಬೆಡಗಾ ಅಹಿನೇರಿ ಹುಡುಗಾ ಮಾಡಿದಿ ತುಡುಗಾ 1 ನೀರಿಗ್ಹೋಗುವಾಗ ದಾರಿಗಡ್ಡಕಟ್ಟಿ ನಾರಿ ನೀನಾರೆಂದ್ವಿಚಾರಿಸುವೀ ದೂರದಲ್ಲಿರುವಿ ಬದಿಯಲ್ಲಿ ಬರುವಿ ಬೇರೆ ಕರೆವೆ ಈ ಬುದ್ಧಿ ತರವೆ 2 ವರ ಕದರುಂಡಲಗಿ ಹನುಮಯ್ಯನೊಡೆಯನೆ ನಿನಗೆಣೆಯಿಲ್ಲವೊ ವನಜನಾಭಾ ವನಿತೆಯರೆಲ್ಲಾ ಒಲಿಸಿದೆಯಲ್ಲಾ ಮನುಜನಲ್ಲಾ ಮಾಯದ ಗೊಲ್ಲಾ 3
--------------
ಕದರುಂಡಲಗಿ ಹನುಮಯ್ಯ
ಅಮ್ಮನ ತೊಡೆಯ ಮೇಲೆ ನಮ್ಮ ಕೃಷ್ಣ ಸುಮ್ಮನೆ ಮಲಗಿಹನು ಪ ಸುಮ್ಮೊನದಿ ಸುಖದಿಂ ನಲಿದಾಡುತ ಅ.ಪ ಮಣ್ಣ ಮೆದ್ದುದ ಕಂಡು ಗೋಪಿದೇವಿ ಚಿಣ್ಣನ ಬಾಯಿನೋಡೆ ಕಣ್ಣಿಗೆ ಬ್ರಹ್ಮಾಂಡ ತೋರಿಸಿದಂಥ ಪರಬ್ರಹ್ಮ 1 ತರಳ ತರಲೆ ಮಾಡೆ ತಾಯಿಯು ಹೊರಳೆಗೆ ಕಟ್ಟಲಾಗಿ ಸುರತರುಗಳ ಮುರಿದು ನಿಜತರವ ಗೈದ ನಿತ್ಯಾತ್ಮ 2 ಕಾಲಲೊದೆದು ಕೊಂದು ಧಾತಾ ದೇವೇಂದ್ರರ ಶಿರಬಾಗಿಸಿದ ಪೂತಗುಣ 3 ಹಾಲುಕೊಡೆನೆ ಬಾಲ ಸಂಜೆಗೆ ಹಸುವ ಕರೆವೆನೆನಲು ಲೀಲೆಯಿಂ ಕಣ್ಣ ಮುಚ್ಚಿ ಕತ್ತಲೆ ಕವಿಸಿದ ದೈವ 4 ಗೋಪೀಜನಗಳೊಡನೆ ಗೋಪಾಲನು ಸ್ತ್ರೀಲೋಲನಾಗಿ ಕುಣಿದು ರಥಾಂಗಪಾಣಿ 5 ನವನೀತ ಚೌರ್ಯಮಾಡಿದ ನಾರೀಜನರ ವಸ್ತ್ರಾಪಹರ ಗೈದ ಅವನೀಭಾರವ ಕಳೆದ ಮಾಯಾಮೂರ್ತಿ ದೇವಶಿಖಾಮಣಿ6 ಭೂಮಿಪಾಲನೆ ಮಾಡಿದ ಹಿಂಸಕರ ವಂಶವಳಿಪ ಹಂಸಲೋಲ ಜಾಜಿಶ್ರೀಶ 7
--------------
ಶಾಮಶರ್ಮರು
ಅಹಹ ಮೋಸ ಹೋದೆನಯ್ಯ ಹರಿಯೆ ನಿನ್ನ ನೆನೆಯದೆ ಪ ಇಹದ ಭೋಗ ನಿತ್ಯವೆಂದು ಮೆರೆದೆ ನಿನ್ನ ನೆನೆಯದೆ ಅ ಹೇಯವಾದ ದೇಹವನ್ನು ಶ್ಲಾಘನೀಯವೆಂದು ನಾಲ್ವರೊಡನುಪಾಯದಿಂದ ಹೇಮದಂತೆ ಬಣ್ಣಗಟ್ಟಿಬಾಯ ಬಡಿದು ತಂದು ತಂದುಕಾಯ ಕಳದೆನಲ್ಲದೆ 1 ಚಂಚಲತ್ವ ಬಲವು ಫಲವು ಜಾಲ ಕೋಪ ತಾಪದಿಂದವಂಚನಾರ್ಥ ಹಲವು ಕೆಲವು ಮಿಂಚಿನಂತೆ ಸುಳಿಸುತಸಂಚುಮಾಡಿ ಕಾಲನವರ ವಂಚನೆಗಳ ತಿಳಿಯದ್ಹೋದೆಪಂಚಬಾಣನಯ್ಯ ಕಾಯೊ ಎನ್ನವಗುಣಗಳನೆಣಿಸದೆ2 ದಿಕ್ಕುದೆಸೆಯದಾರೊ ಅಕ್ಕರದಿಂದಾರ ಕರೆವೆಉಕ್ಕಿ ಸವಿದು ಮನುಜರೊಡನೆಸೊಕ್ಕಿ ದಿನವ ಕಳೆದೆನೆನಗೆತಕ್ಕುದಾಯಿತಯ್ಯ ಕೇಳು ಒಡೆಯ ಆದಿಕೇಶವ3
--------------
ಕನಕದಾಸ
ಆವ ಬಗೆಯಲಾದರು ಕರುಣದಿ ದೇವ ಕೃಪೆದೋರೋ ಪ. ಭಾವ ಭಕುತಿಯಲಿ ತೋಯಜಾಕ್ಷನೆ ನಿನ್ನ ಕಾವ ಕರುಣಿಯೆಂದು ಭಾವಿಸಿ ಕರೆವೆನು ಅ.ಪ. ವಿಪ್ರರಾಗಮವಾದರೂ ಸರಿ ಕ್ಷಿಪ್ರದೊಳವನ ಸಂಗದಿ ಅಪ್ಪಾ ನೀ ನೆರೆಯುವ ಸಪ್ಪಳಾ ತೋರುತ ಬಪ್ಪೆ ಎಂದೆನೆವೆನು ಅಪ್ಪ ತಿಮ್ಮಪ್ಪನೇ 1 ಮಕ್ಕಳೊಳಗಾದರೊ ನಿನ್ನಯ ಆಟ ಪಕ್ಕನೆ ತೋರೋ ದೇವನೆ ಚಿಕ್ಕ ಕೃಷ್ಣನೆ ನಿನ್ನ ರೂಪವ ನೆನೆಯುತ ಪರಿ 2 ಮನೆಗೆಲಸದೊಳು ನಿನ್ನಯ ಧ್ಯಾನ ತನು ಮನ ನೆನೆಯುತಲಿ ದಿನದಿನದಲಿ ಸುಖ ದುಃಖದೊಳು ಮನಸಿಜಪಿತ ನಿನ್ನ ನೆನಸುವ ಪರಿಯಲಿ 3 ಹಿರಿಯರಾಗಮವಾಗಲು ನಾನವರೊಳು ಕಿರಿಯಳಂದದಿ ಇರುವ ಪರಿ ಮನವನಿತ್ತೂ ಪೊರೆ ಕರುಣಾಳು ಕರಣ ಶುದ್ಧಳಾ ಮಾಡಿ ಕರೆ ನಿನ್ನ ಬಳಿಗೆ 4 ಕನಸಲಾದರೂ ನಿನ್ನ ಮನಸಿಜಪಿತನೆ ಮನನ ಮಾಡುತ ನೆನೆಯುವ ಘನಕೃಪೆಯಿತ್ತು ಎನ್ನ ಜನುಮ ಸಾರ್ಥಕಗೊಳೆ ಈತನು ನಿನಗರ್ಪಿಸಿಹೆ ದಿನಮಣಿ ಶ್ರೀ ಶ್ರೀನಿವಾಸ 5
--------------
ಸರಸ್ವತಿ ಬಾಯಿ
ಎಂದೆನ್ನ ಪೊರೆವೆÀ ಶ್ರೀರಂಗಧಾಮ ಎಂದೆನ್ನ ಪೊರೆವೆ ಪ. ಎಂದೆನ್ನ ಪೊರೆವೆ ಎಂದೆನ್ನ ಕರೆವೆ ಮಂದಹಾಸ ಮುಖನೆ ಎಂದೆನ್ನನೀಕ್ಷಿಸುವೆ ಅ.ಪ. ಶ್ರೀಶ ವೈಕುಂಠದಿ ಸಾಸಿರ ಫಣೆಯುಳ್ಳ ಶೇಷಶಯನ ಎನ್ನ ಘಾಸಿಗೊಳಿಸಿದೆ 1 ಅರವಿಂದನಯನನೆ ಅರವಿಂದ ದಳ ಪೋಲ್ವ ವರಹಸ್ತವನೆ ಎನ್ನ ಶಿರದ ಮೇಲಿಡುತಲಿ 2 ಬಳಲಬೇಡೆಂತೆಂದು ನಳಿತೋಳಿನಿಂದೆತ್ತಿ ನಳಿನನಾಭನೆ ಎನ್ನ ಬಳಲಿಕೆ ಬಿಡಿಸುತ್ತ 3 ಮುಕ್ತರ ಸಂಗಡ ಮುಕ್ತೇಶ ಎನ್ನಲ್ಪ ಶಕ್ತಿ ಸೇವೆಯ ಕೊಳುತ ಮುಕ್ತಾರ್ಥದಾಯಕ4 ವ್ಯಾಪಕ ಶ್ರೀಗುರು ಸ್ಥಾಪಕ ಮನದಲ್ಲಿ ಪರಿ ದಯೆಗೈದು 5
--------------
ಅಂಬಾಬಾಯಿ
ಕೃಷ್ಣ ರುಕ್ಮಿಣಿ ವಿವಾಹದೈದು ದಿನದಲ್ಲಿ ಅರ್ಥಿ(ಯಿಂ)ಂದೋಕುಳಿಯನಾಡಿ ಕುಂಕುಮ ಗಂಧ ಬುಕ್ಕಿ ್ಹಟ್ಟಲೂ(ಲುರು?) ಟಣಿಯ ಮಾಡಿ ಆರತಿನೆತ್ತಿ ಮುತ್ತೈದೇರು ಪಾಡಿ ವೀಳ್ಯಗಳ ನೀಡಿ ಸರ್ಪಶಯನನು ತನ್ನ ಸತಿಯ ಎತ್ತಿ ಬರುವೋ ಕಾಲದಲ್ಲಿ ಚಿಕ್ಕ ಸುಭದ್ರೆ ತಾ ಬಾಗಿಲು ಕಟ್ಟಿ ತಾ ನಗುತ ನುಡಿದಳು 1 ಪಟ್ಟದರಸಿಕೂಡ ಮತ್ತೆಲ್ಲಿ ಪಯಣ ಈ ವಾರ್ತೆ ಹೇಳುವುದೆನಗೆ ಕೇಳುವೆ ಕೊಟ್ಟು ಎನಮನ ಕಾಮಿತಾರ್ಥವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 2 ನಾರಿಮಣಿಯೆ ನವರತ್ನದ ಹೆರಳು ಬಂ- ಗಾರ ರಾಗಟೆಯು ಗೊಂಡ್ಯ ಕಂಕಣ ವಂಕಿ ದ್ವಾರಾ ಹರಡಿಯು ಚೆಂದ ಒಪ್ಪುವ ಗೆಜ್ಜೆ ನಾಗಮುರಿಗೆಯು ಕಾಲ ಪೈಜಣ ಗೆಜ್ಜೆ ರುಳಿ ವೈಡೂರ್ಯದ್ವೊಡ್ಯಾಣವನೆ ಮಾಣಿಕ್ಯದ್ವಾಲೆ ಮೋಹನ್ಮಾಲೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 3 ಪಚ್ಚಮಾಣಿಕದ ಗೊಂಡ್ಯಗಳು ಬಾಜುಬಂದು ರತ್ನಹ್ಹೆರಳುಬಂಗಾರ ಕಂಕಣವಂಕಿ ಹಸ್ತಕಡಗವು ದ್ವಾರ್ಯ ಪುತ್ಥಳಿ ಏಕಾವಳಿಯ ಸರ ಚಿಂತಾಕು ಸರಿಗೆ ತೆತ್ತಿಸಿಯರಚಂದ್ರರಾಗಟೆÉ ಮತ್ತೆ ಎನಗಮ್ಮಯ್ಯಕೊಡುವಳು ಅರ್ಥಿಯಿಂದೀಗೆನ್ನ- ಮನೋರಥ ದಂiÀiಮಾಡಣ್ಣಯ್ಯ ಶ್ರೀಕೃಷ್ಣಯ್ಯ 4 ಹರದಿ ನಿನಗೆ ಹವಳದ ಕಾಲ್ವಜ್ರದ ಮಂಚ ಜರದ ಸುಪ್ಪತ್ತಿಗೆಯು ಹಾಸಿಕೆ ಲೋಡು ವರಪೀಠ ವಸನಂಗಳು ಚ- ಪ್ಪರ ಮಂಚಕ್ಕೊಲೆವೋ ಮುತ್ತಿನ ಗೊಂಚಲು ರವಿಪೋ- ಲ್ವ ರಥವು ಕರಿತುರಗ ಕರೆವೆಮ್ಮೆ ಗೋವ್ಗಳು ತರತರದ ಛತ್ತರಿಗೆ ಚಾಮರ ಜರತಾರಂಚಿನ ಸೀರೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 5 ಪನ್ನಂಗಶಯನ ಕೇಳೆನ್ನ ಗಲ್ಲದಲೊಪ್ಪೋ ಸಣ್ಣ ಮುತ್ತಿನ ಗೊಂಚಲು ದ್ರಾಕ್ಷಿಯ ಬಳ್ಳಿ ಹೊನ್ನಾ ್ವಲೆ ಸರಪಳಿಯು ಹೊಸ ಪ್ರೀತಿಯಲಿನ್ನು ನಾ ಬೇಡಿದ್ದು ಕೊಡುವನು ಮನ್ಮಥನ ಪಿತ ಎನ್ನ ಮನೋರಥ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 6 ಮುದ್ದು ಸುಭದ್ರ ಮೇಲಾದ ಜೊತೆಯ ಮುತ್ತು ವÀಜ್ರ ಕೆಂಪನು ಕೆತ್ತಿಸಿ ಕೊಡುವೆನೀಗ ತಿದ್ದಿ ಮಾಡಿದ ಮೂಗುತಿ ಪಾರ್ಥನ ರಥಕಿದ್ದು ಆಗುವೆ ಸಾರಥಿ ನಡೆಸುವೆನು ಕೀರ್ತಿ ಉಗ್ರಸೇನಗೆ ಹೇಳಿ ಇದರೊಳ- ಗರ್ಧ ರಾಜ್ಯವ ಕೊಡಿಸಿ ನಾ ನಿನ್ನುದ್ದ ಹಣ ಬಿಡು ತಂಗಿ ಕೋಮಲಾಂಗಿ 7 ಅಚ್ಚುತ ಬಲರಾಮರೆಂಬೊ ಎನಗೆ ಜೋಡು ಹೆಚ್ಚಿನ ಭುಜಗಳಿನ್ನು ಯಶೋದ ದೇವಕ್ಕಿ ರೋಹಿಣೀದೇವೇರು ಇರಲು ತಂದೆ ಶ್ರೇಷ್ಠನಾದ್ವಸುದೇವನು ನೀ ಕೊಡುವುದೇನು ಮುತ್ಯನಾಗಿದ್ದುಗ್ರಸೇನನು ಮತ್ತೆ ನಾ ಬೇಡಿದರೆ ಈ ಕ್ಷಣ ಕೊಟ್ಟು ಬಿಡನೇ- ನಧರ್À ರಾಜ್ಯವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 8 ಎಷ್ಟು ಹೇಳಿದರು ಸನ್ಮತವಿಲ್ಲೆ ಸುಭದ್ರೆ ಮತ್ತೇನು ಕೊಡಲೆ ನಾನು ಮನಕೆ ಬೇಕಾದಿಷ್ಟವ ಬೇಡೆ ನೀನು ಭಾರ ಎಷ್ಟು ತಡೆಯಲಾರೆನೆ ನೀನು ಕೈಬಿಟ್ಟು ಬಿಡುವೆನು ಬೆಟ್ಟವನು ಕಿರು ಬೆಟ್ಟಿಲಿಂದೆ ಎತ್ತಿನಿಂತಿದ್ದೇಳು ದಿವಸ ಕದವ ಬಿಡು ತಂಗಿ ಕೋಮಲಾಂಗಿ 9 ಪಕ್ಷಿವಾಹನ ನಿನ್ನ ಚೊಚ್ಚಲಮಗಳ ಎನ್ನಚ್ಛದ ಅಭಿಮನ್ಯುಗೆ ಮಾಡುವುದು ಅ- ಪೇಕ್ಷವಾಗೇದೆ ಎನಗೆ ಬೇಡುವೆನು ನಿಶ್ಚಯ ಮಾಡಿ ಜನರೊಳಗೆ ಕೊಡು ಕೀರ್ತಿ ನಿನಗೆ ಪಟ್ಟದರಸಿಯ ಸಹಿತ ನೀ ಒಡಂಬಟ್ಟು ಎನಗ್ವಚನವನೆ ಪಾಲಿಸು ಕಟ್ಟಿದ್ಹಾದಿಯ ಬಿಟ್ಟು ಪೋಗುವೆ ದಯಮಾಡಣ್ಣಯ್ಯ ನೀ ಕೃಷ್ಣಯ್ಯ 10 ತರವಲ್ಲೆ ರುಕ್ಮಣಿ ಬೀಗತನವ ಭಾಳ ಪರಿ- ಯಾಲೋಚನೆ ಮಾಡು ರುಕುಮನ ಗಡ್ಡ ಶಿರ ಪಟ್ಟಿ ಪನ್ನಿ ನೋಡು ದೊರೆ ಶಿಶುಪಾಲ ವರನವಸ್ಥೆಯ ಕೊಂಡಾಡು ಧೈರ್ಯವನೆ ಮಾಡು ಬರೆದು ಓಲೆಯ ಕಳಿಸಿ ಎನ್ನ ಕರೆಸಿ ಬೆನ್ನ ್ಹತ್ತೋಡಿಬಂದ ಬಿರುದನರಿಯೇ ನ್ವರ ಶುಭಾಂಗಿನಿ ಕದವ ಬಿಡು ತಂಗಿ ಕೋಮಲಾಂಗಿ 11 ಕೃಷ್ಣ ಸುಭದ್ರೆ ಮಾತುಗಳ ರುಕ್ಮಿಣಿ ಕೇಳಿ ಮತ್ಯಾತಕೆನ್ನ ದೂರು ಯತಿಗಳ ಬೆನ್ನ ್ಹತ್ತಿ ಹೋದವರು ದಾರು ಕೃತ್ಯವ ನಡೆಸಿದರೆನ್ನ ನಾದಿನೇರು ಚಿತ್ರಾಂಗಿಯೇರು ಹಸ್ತಿನಾವತಿ ಅರಸು ಧರ್ಮರು ಹೆಚ್ಚಿನ್ಹಿರಿ ಯಣ್ಣಯ್ಯ ಭೀಮನು ಪಾರ್ಥಸುತ ಎನ್ನ ಸೋದರಳಿಯಗೆ ಕೊಟ್ಟೇನು ತೌರುಮನಿಗ್ಹೆಣ್ಣು 12 ರಂಗ ಸುಭದ್ರೆ ಮಾತಿಗೆ ಬಪ್ಪಿ ್ವ್ವಳ್ಯವ ಕೊಟ್ಟು ಚಂದ್ರಗಾವಿಯ ಕುಪ್ಪಸ ಜರದ ಪೀ- ತಾಂಬ್ರದುಡುಗೊರೆ ಕೊಡುತ ಮುತ್ತಿನ ಹಾರ ತಂದು ಕೊರಳಿಗೆ ಹಾಕುತ ರುಕ್ಮಿಣಿಯ ಸಹಿತ ಬಂದ ಭೀಮೇಶ ಕೃಷ್ಣ ಪಾರ್ಥನ ರಂಭೆ ಕನ್ಯವಗೆದ್ದಳೆನುತಲಿ ಸಂಭ್ರಮದಿ ದೇವೇಂದ್ರ ಬ್ಯಾಗನೆ ಚೆಂದದÀಲ್ಹೂಮಳೆಯ ಕರೆದರು 13
--------------
ಹರಪನಹಳ್ಳಿಭೀಮವ್ವ
ಗಜೇಂದ್ರ ಮೋಕ್ಷ ವರಶಂಖಗದೆ ಪದ್ಮಕರದಿ ಚಕ್ರವ ಪಿಡಿದ ಗರುಡಗಮನ ನಮ್ಮ ಕರಿವರದಹರಿಯನ್ನ ನಿರುತ ನೆನೆನೆನೆದು ಬದಿಕಿರಯ್ಯಾ ಪ ಹರಿಧ್ಯಾನ ಹರಿಸೇವೆ ಹರಿಭಕ್ತಿ ಹರಿಚರಿತೆ ದುರಿತದುರ್ಗಕೆಕುಲಿಶ ವರಮುಕ್ತಿಸೋಪಾನ ಕಾಣಿರಯ್ಯಾ ಅ.ಪ. ಕ್ಷೀರಸಾಗರ ಮಧ್ಯೆ ಗಿರಿತ್ರಿಕೂಟ ದೊಳಗೆ ಇರುವುದೂ ಋತುಮಂತ ವರುಣನ ವರವನವು ಅಲ್ಲಿ ಪರಿಪರಿಯ ಲತೆಬಳ್ಳಿ ಸರಸಸ್ಥಾನಗಳಲ್ಲಿ ಮೆರೆವೋರು ಸುರಸಂಘ ನಾರಿಯರ ಸಹಿತಾ 1 ಪದ್ಮಗಾಶ್ರಯವಾದ ಪದ್ಮಕೊಳಾದೊಳಗೆ ಮದಿಸಿದಾ ಗಜವೊಂದು ಐದಿತು ಪರಿವಾರ ಸಹಿತ ವಿಧಿಯ ಬಲ್ಲವರಾರು ಮುದದಿರ್ದ ಆ ಗಜಕೆ ವಿಧಿ ವಕ್ರಗತಿಯಿಂದ ಪಾದವನೆ ಪಿಡಿಯಿತು ನಕ್ರವೊಂದು 2 ಒಂದು ಸಾವಿರ ವರುಷ ಕುಂದದೆಲೆ ಕರಿಮಕರಿ ನಿಂದು ಹೊರಾಡೆ ಸುರವೃಂದ ಬೆರಗಾಯಿತು ಬಂಧು ಬಳಗವು ಮತ್ತೆ ಅಂದ ಹೆಂಡಿರು ಎಲ್ಲ ಕುಂದು ಅಳಿಸದೆ ಇರಲು ಛಂದದಲಿ ಯೋಚಿಸಿತು ಗಜವೂ 3 ಏನಿದ್ದರೇನಯ್ಯ ಶ್ರೀನಿವಾಸನಕೃಪೆಯು ಇನ್ನಿಲದಾಮೇಲೆ ಕುನ್ನಿಗೆ ಸರಿಎಂದು ಹೀನ ಎನ್ನಯ ಜನ್ಮ ದೀನ ಭಾವದಿ ಹರಿಯ ಮಾನವನು ಬದಿಗಿಟ್ಟು ಧ್ಯಾನಿಸಿ ಸ್ತುತಿಸಿದಾ 4 ಸತ್ಯಶಾಶ್ವತಭೋಕ್ತ ಸೃಷ್ಟ್ಯಾದಿಕರ್ಮವಿಗೆ ನಿತ್ಯ ತೃಪ್ತನು ಆದ ಶಾಡ್ಗುಣ್ಯಪರಿಪೂರ್ಣನೆ ವಂದಿಸುವೆನೋ ಓತಪ್ರೋತದಿ ಜಗದಿ ವ್ಯಾಪ್ತ ಆಪ್ತನು ಆದ ಆರ್ತದಲಿ ಕರೆವೆನೋ 5 ಎಲ್ಲಕಡೆಯಲಿ ಇರ್ಪ ಎಲ್ಲರೂಪವ ತಾಳ್ವ ಎಲ್ಲ ಪ್ರೇರಣೆಮಾಳ್ವ ಎಲ್ಲರಿಂ ಭಿನ್ನನಿಗೆ ವಂದಿಸುವೆನೋ ಎಲ್ಲರಿಂ ಉತ್ತಮಗೆ ಎಲ್ಲರಾ ಬಿಂಬನಿಗೆ ಎಲ್ಲರ ವಾಚ್ಯನಿಗೆ ನಲ್ಲನೆಂತೆಂದು ನಾಕರೆವೆನೋ 6 ಎಲ್ಲರನು ಗೆದ್ದವಗೆ ಎಲ್ಲರಾನಲ್ಲನಿಗೆ ಎಲ್ಲ ದೋಷವಿಹೀನ ಒಳ್ಳೆ ಗುಣ ಪೂರ್ಣನ ಕರೆವೆನೋ 7 ನಿನ್ನ ತಿಳಿದವರಿಲ್ಲ ನಿನ್ನ ಮೀರಿದುದಿಲ್ಲ ಜನನ ಮರಣಗಳಿಲ್ಲ ನಿನಗಿಲ್ಲ ಸಮ ಅಧಿಕ ವಂದಿಸುವೆನೋ ನಿನ್ನನಾಮಕೆ ಗುಣಕೆ ನಿನ್ನ ಅವಯವಕೆ ನಿನ್ನ ಕ್ರಿಯ ರೂಪಗಳಿಗೆ ಇನ್ನಿಲ್ಲವೊ ಭೇದಸಾರಿ ನಾಕರೆವೆನೋ 8 ವೇದಗಮ್ಯನುನೀನೆ ವೇದದಾಯಕ ನೀನೆ ವೇದಾತೀತನು ನೀನೆ ಸಾಧು ಪ್ರಾಪ್ಯನುನೀನೆ ವಂದಿಸುವೆನೋ ಖೇದವರ್ಜಿತನೀನೆ ಅಂದ ಸಾರವು ನೀನೆ ಬಂಧನೀಡುವ ನೀನೆ ಅದ್ಭುತ ಅಚಿಂತ್ಯಶಕ್ತಿವಂತನ ಕರೆವೆನೋ 9 ಜ್ಞಾನಿಗೋಚರನೀನೆ ಗುಣಾತೀತನು ನೀನೆ ಗುಣಪ್ರವರ್ತಕನೀನೆ ಅನಾಥ ಸರ್ವಸಮ ವಂದಿಸುವೆನೋ ಜ್ಞಾನದಾಯಕನೀನೆ ಆನಂದಮಯನೀನೆ ನೀನೇ ಸರ್ವಾಧಾರ ನೀನೆ ಏಕನು ಎಂದು ಕೂಗಿ ನಾಕರೆವೆನೋ 10 ಸಾಕಾರ ನಿರಾಕಾರ ಆಕಾರ ಅಹೇಯ ಓಂಕಾರ ವಾಚ್ಯನೆ ಸಾಕಲ್ಯಸಿಗದವನೆ ಸ್ವೀಕಾರ ಮಾಡೋ ವಿಕಾರ ವರ್ಜಿತನೆ ಲೋಕೈಕವೀರಾನೆ ನೀ ಕೆವಲನು ಮುಕ್ತೇಶ ಸಲಹೋ 11 ಏನು ಕೊಡಲೊ ದೇವ ದೀನನು ನಾನಯ್ಯ ನಿನ್ನದೇ ಈ ಭಾಗ್ಯ ಮನ್ನಿಸುತ ದಯಮಾಡಿ ಸಲಹೋ ಘನ್ನಕರುಣಾಳುವೆ ಅನ್ಯರನು ನಾ ನೊಲ್ಲೆ ನಿನ್ನವನು ನಿನ್ನವನೋ ನಿನ್ನ ಚರಣಕೆ ಶರಣು ಶರಣೂ 12 ಕರಿ ತಾನು ಮೊರೆಯಿಡುತ ಕೂಗಲು ಸುರವೃಂದ ಯೋಚಿಸುತ ಹರಿಯಲ್ಲದನ್ಯತ್ರ ಅರಿಯೆವೀಗುಣವೆಂದು ಅರಿತು ಸುಮ್ಮನಿರಲೂ ಹರುಷದಿಂದಲಿ ಹರಿಯು ಗುರುಡನೇರುತ ಬರಲು ತರಿದು ನಕ್ರನ ಭರದಿ ಕರಿಯಪೊರೆಯೆ ಆದ 13 ಏನೆಂದು ವರ್ಣಿಸಲಿ ಶ್ರೀನಿವಾಸನ ಕರುಣ ದೀನ ಭಕ್ತರ ಮೇಲೆ ಸಾನುರಾಗದಿ ಕರಿಯ ಹಿಡಿದೆತ್ತಿದಾ ಇನ್ಯಾಕೆ ಭಯವಯ್ಯ ಘನ್ನ ಇಂದ್ರದ್ಯುಮ್ನನೆ ಏಳು ಮುನ್ನಿನಾ ದೋಷವಿದು ಇನ್ನು ನೀ ಧನ್ಯನಹುದೋ 14 ದೇವಲನ ಶಾಪದಲಿ ಆ ವರ ನಕ್ರನಾಗಿದ್ದ ಶ್ರೀವರನ ಭಕ್ತ ಹೂಹೂ ಗಂಧರ್ವನೆರಗಿ ಬಿದ್ದನು ಹರಿಗೇ ದೇವೇಶ ಹುಸಿನಗುತ ಈವೆ ವರವನು ಕೇಳಿ ಯಾವಾತ ಈ ಕಥೆಯ ಭಾವಶುದ್ಧದಿ ಭಜಿಸೆ ಉದಯದಲಿ ನಾ ಒಲಿವೆ ತವಕದಲಿ ಎಂದನೂ 15 ಹರಿಗೆ ಸಮರಾರಿಲ್ಲ ಹರಿಭಕ್ತ ಗೆಣೆಯಿಲ್ಲ ಸುರರು ಮೊರೆಯಿಟ್ಟರಾಗ ಹರಿವಾಯುಗುರುಗಳು ಕರುಣದಿಂದಲಿ ಇದನು ಮನ್ನಿಪುದು ಬುಧರೂ 16 ಮುದ್ದುಜಯತೀರ್ಥರ ಹೃದಯದಲಿನಲಿಯುವ ಮಧ್ವಾಂತಃಕರಣದಿ ಮುದ್ದಾಗಿ ಕುಣಿಯುವಂಥ ಮಾಧವ ಶ್ರೀಕೃಷ್ಣವಿಠಲರಾಯನು ಬೇಗ ಮೋದ ಸುರಿಸುವ ಈ ಪದವ ಪಠಿಸಲೂ 17
--------------
ಕೃಷ್ಣವಿಠಲದಾಸರು
ನಿನ್ನ ಕಾಣಬಂದೆನಯ್ಯ ಚೆನ್ನಕೇಶವಾ ನಿನ್ನ ಕಂಡು ನಲಿದೆ ರಮಾರನ್ನ ಮಾಧವಾ ಪ ಜಳದಿ ಮುಳುಗಿ ತೊಳಲಿ ಬಳಲಿ ಬಹಳನೊಂದೆನು ತಳವ ಬಯಸಿ ಬಳಸಿ ಬಳಸಿ ನಡುವೆ ನಿಂದೆನೊ ಬಳಿಯ ಬಳಗವಿಲ್ಲ ನೋವಿನಿಂದ ಬೆಂದೆನೋ ಸುಳಿಗೆ ಸಿಲುಕಿ ಅಳುಕಿ ಬಳುಕಿ ವಿಧಿಯ ಬೈದೆನೋ 1 ಕರವ ಮುಗಿದು ಕರೆವೆ ನಿನ್ನ ಕರುಣದಿ ಬಾರೋ ಮರುಗಿ ಮರುಗಿ ಕೊರಗಿದೆನಗೆ ಚರಣವ ತೋರೋ ಕರಿಯ ಪೊರೆದೆ ತರಳಗೊಲಿದೆ ಮರುಕವ ಬೀರೋ ಶಿರವ ಚರಣಕಿರಿಸುವೆ ಮಾಂಗಿರಿಯರಂಗ ಬಾರೋ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಾ ಉರುಟಣೆಗೆ ಕಾಂತ ಪ್ರಿಯಕಾಂತ ಪ. ಕರುಣವ ತೋರೋ ಕಮಲನಯನನೆ ತರುಣಿಮಣಿಯು ನಾ ಕರೆವೆನು ರಮಣ ಅ.ಪ. ವರ ಪನ್ನೀರಿಲಿ ಚರಣವ ತೊಳೆದು ಅರಿಶಿಣ ಹಚ್ಚುವೆ ಕಾಂತ ನಾ ವರ ಲಲಾಟಕೆ ಹರುಷದಿ ಕುಂಕುಮ ತಿಲಕವ ತಿದ್ದುವೆ ರಮಣ 1 ಅತ್ತರು ಪನ್ನೀರಿನ ಗಂಧವನು ಶಿಸ್ತಿಲಿ ಪೂಸುತಲೀಗ ವಿಸ್ತಾರವಾದ ಮಲ್ಲಿಗೆ ಮಾಲೆಯ ಚಿತ್ತಜನಯ್ಯ ಹಾಕುವೆನು ಪ್ರಿಯ 2 ಬಿಳಿಯೆಲೆ ಅಡಿಕೆ ಚೆಲುವಿನ ಸುಣ್ಣ ನಲಿದು ಕೊಡುವೆ ಬಾ ಕಾಂತ ಛಲವ್ಯಾಕೆನ್ನೊಳು ಶ್ರೀ ಶ್ರೀನಿವಾಸ ಒಲುವಿನಲಿ ಬಾ ಬೇಗ ರಮಣ 3
--------------
ಸರಸ್ವತಿ ಬಾಯಿ
ಬಾಯಂದು ಕರೆವೆನೊ ದೇವನಿನ್ನ ವೈರಿ ಮಧ್ವರಾಯರ ಪ್ರೀಯನೆ ಪ ರಾಮ ನಿರಾಮಯ ಮಾಮನೋಹರ ಶೌರಿ ಸೋಮಧತಾರ್ಚಿತ ಸಾಮನುತಾ ಭೂಮಿಜ ಸಾಮಜ ಪಾಲ ಬಾರೊ ಕಾಲ ಪ್ರೇಮದಿ 1 ಬಿಸಿಜಾಭಾಸ್ಪಜನ ಮಾನಸಗೆ ಅಸುರ ವೈರಿ ಕುಸಮಶರ ಪಿತ ಸುಮನಸ ವಂದಿತಾ ಅಸಮ ಶೂರ ಬಾರೊ ವಸುಧಿಧರ ಬಾರೊ ವೈರಿ ಕುಶಲದಿ 2 ಇಂದಿರೆ ಮಂದಿರ ಸುಂದರ ಶಿರಿಗೋವಿಂದ ವಿಠಲ ಮಂದರಧರ ಬಾರೋ ಚಂದಿರ ಮೊಗ ಬಾರೊ ಛಂದದ ದೈವ ಬಾರೊ ಇಂದಿನ ಯನ್ನ ಮನಸಿಗೆ 3
--------------
ಅಸ್ಕಿಹಾಳ ಗೋವಿಂದ
ಬಾರೆ ನೀ ಹಂಸಗಮನೆ ಮಾರನ ಪೀಠಕ್ಕೆ ಸಾರಿ ಕರೆವೆ ಲಕ್ಷ್ಮೀದೇವಿಯೇ ಪ. ಕಮಲ ಪುಷ್ಪದೊಳು ನೆಲಸಿದ ಲಕ್ಷ್ಮಿಯೆ ಕಮಲದ ಹಾಸಿಗೆ ಕಾಮಜನಕನ ಸಹಿತ 1 ಮುತ್ತು ಮಾಣಿಕ್ಯವು ಕೆತ್ತಿದ ಹಾಸಿಗೆ ಮುತ್ತೈದೆರೆಲ್ಲರೂ ಮುದದಿಂದ ಕರೆಯುವೊರು 2 ಶ್ರೀ ಲಕ್ಷ್ಮೀದೇವಿಯೆ ಶ್ರೀ ಕೃಷ್ಣನರಸಿಯೆ ಶ್ರೀನಿವಾಸನ ಕೂಡಿ ಪ್ರೀತಿಯಿಂದ ಸರಸನಯನೆ 3
--------------
ಸರಸ್ವತಿ ಬಾಯಿ
ಬಾರೆಂದು ಹಸೆಗೆ ಕರೆವೆÀನು ಕ್ಷೀರಾಬ್ಧಿಶಯನನೆ ಸಾರಸನಯನನೇ ಪ. ಕ್ಷೀರಾಬ್ಧಿಜಾವರ ಮೇರುಗಂಭೀರನೆ ನೀರಜಭವಪಿತ ಮಾರಹರಾರ್ಚಿತ ಚಾರುನೀರದಗಾತ್ರ ಪರಮ ಪವಿತ್ರ ಅ.ಪ ಧರಣೀಸುರರ ಮೊರೆಗಳನಾಲಿಸಿ ಧರೆಯೊಳಗವತರಿಸಿ ನರರೂಪಧರಿಸಿ ಧರಣಿಪ ದಶರಥತರಳನೆಂದೆನಿಸಿ ಧರೆಯ ಭಾರವನಿಳಿಸಿ ಕರುಣಿಸು ಮನವೆರಸಿ 1 ಅಸುರೆ ತಾಟಕಿಯ ಅಸುವನಳಿದು ದುಷ್ಟ ನಿಶಿಚರರನು ಸದೆದು ಅನುಜನೊಡಗೊಂಡು ಕುಶಿಕನಂದನನ ಕ್ರತುವನು ತಾ ಕಾಯ್ದು ಅಸಮ ಶೂರನೆನಿಸಿ ಅಮರರ ಮನತಣಿಸಿ 2 ಶಿಲೆಯ ಶಾಪವಕಳೆದು ಲಲನೆಯ ಪೂಜೆಗೊಲಿದು ಬಲುಹಿನಿಂದಲೆ ಬಂದು ಹರಧನು ಮುರಿದು ಲಲನೆ ಜಾನಕಿಯ ನಲವಿನಿಂ ಕೈಪಿಡಿದು ಬಲುಗರ್ವಿತ ಭಾರ್ಗವ ಮದಮುರಿದೆ ಸಲಹೆನ್ನ 3 ಈಶವಿನುತ ಶ್ರೀ ಶೇಷಾಚಲ ನಿಲಯನೆ ದಾಸರಮನದೊಳು ವಾಸವಾಗಿಹನೇ ವಾಸವಾದ್ಯಮರ ಪೋಷಕನೆನಿಸಿಹನೆ ಭಾಸುರವದನನೆ ಶ್ರೀಸತೀಸದನನೆ ನೀಂ ನಲಿದು 4
--------------
ನಂಜನಗೂಡು ತಿರುಮಲಾಂಬಾ
ಬಾರೋ ಬಾರೆಲೋ ಹೃದಯ ವಾರಿಜದೊಳುಬಾರಿ ಬಾರಿಗೆ ಕರೆವೆ ನಿನ್ನ ಮೋರೆ ತೋರೆಲೋ ಪ ಪುಟ್ಟ ಪಾದವ ಕ್ಷಿತಿಯೊಳಿಟ್ಟು ಮೋದವ ಕೊಟ್ಟು ಭಕ್ತರಿಗೆ ತೋರೋ ಕೃಷ್ಣ ರೂಪವಾ 1 ಸಿಂಧು ಮಥಿಸಿದಿ ಸುಧೆಯ ತಂದು ಬಡಿಸಿದಿ ಕೃಷ್ಣಾಚಂದದಿಂದ ದೇವತೆಗಳ ವೃಂದ ಸಲಹಿದಿ 2 ಇಂದು ವದನನೆ ಶಾಮಸುಂದರಾಂಗನೇಆನಂದದಿಂದ ತೋರೋ ಎನಗೆ ಕುಂಜಹೃದಯನೇ 3 ಇಂದಿರೇಶನೆ ಭವೇಂದ್ರ ವಂದ್ಯನೆ ಕೃಷ್ಣಾ ನಿನ್ನಕಂದನೆಂದು ಕರೆಯೋ ಎನ್ನ ನಂದ ಬಾಲನೇ4
--------------
ಇಂದಿರೇಶರು