ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ತುಳಸೀ ದೇವಿ ಪ್ರಾರ್ಥನೆ)* ಮದ್ದಾನಿಕ್ಕಿದೇನೆ ಹರಿಗೆ ಮುದ್ದು ತುಳಸಾ ದೇವಿ ಶುದ್ಧಾಮನದಿ ಪೂಜಿಸುವರಾ ಸಿದ್ಧವಾಗಿ ಕಾಯುವಿ ಪ. ಕಮಲ ಮಲ್ಲಿಕಾದಿ ನಾನಾ ಸುಮನ ತತಿಗಳಿಂದಾ ನಿತ್ಯ ನಮಿಸೆ ಭಕ್ತಿಯಿಂದಾ ಅಮಿತ ಮಹಿಮ ನಿನ್ನ ಹೊರತು ಕ್ಷಮಿಸನು ಮುಕುಂದಾ ಭ್ರಮಿತನಾದ ನಿನ್ನ ಮೇಲೆ ಕಮಲೇಶ ಗೋವಿಂದ 1 ಆದಿ ಲಕ್ಷ್ಮಿದೇವಿಯನ್ನು ಉರದೊಳಿಟ್ಟು ನಿನ್ನ ಪಾದದಲ್ಲಿ ಧರಿಸಿದನೆಂದಾದಿಪುರಷನನ್ನ ಬೋಧಿಸಿ ಕರ್ಣದಲ್ಲಿ ಮಸ್ತಕಾಧಿರೋಹವನ್ನ ಸಾಧಿಸಿ ತದ್ಭಕ್ತಜನರಿಗಾದಿ ಬಹು ಪಾವನ್ನ 2 ಸಂತತ ಹನ್ನೆರಡು ಕೋಟಿ ಸ್ವರ್ಣಪುಷ್ಪದಿಂದಾ- ನಂತಾಭವದಿ ಪೂಜಿಸುವುದಕ್ಕಿಂತಲಧಿಕಾನಂದಾ ಕಂತುಜನಕಗಹುದು ಕೋಮಲಾಂಶದಳಗಳಿಂದಾ ಇಂತು ಶೇಷಗಿರೀಶಗಾದಿ ಕಾಂತೆ ಮೋಹದಿಂದಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ಆಭರಣಗಳರ್ಪಿಸುವೆನು ಶೋಭನ ಚರಿತಾ ಪ ಮಹಾಭಾಗ್ಯಪ್ರದೆ ನಿನ್ನರಸಿ ಯುಗುಣಭರಿತಾ ಅ.ಪ ಪದನೂಪುರಗಳು ಘಂಟೆ ನಿನದದುಡಿದಾರಾ ಪರಿಯಂತ ವಿಧವಿಧಕರ ಕಂಕಣ ಹತ್ತು ಬೆರಳಿಗುಂಗೂರಾ ಕೌಸ್ತುಭ ಶ್ರೀ ವತ್ಸದ ಶೃಂಗಾರಾ 1 ಕುಂಡಲ ಕರ್ಣದಲ್ಲಿ ತುಳಸಿಯ ವನಮಾಲೆ ಶೋಭಿಪುದು ಕಂಠದಲೀ ಥಳಥಳಿಪುದು ರವಿಯಂತೆ ಕಿರೀಟಶಿರದಲ್ಲಿ ಬೆಳಗುವ ತೇಜೋಮಯ ಗಾನಾವದು ಕೊಡಲಿ 2 ಸ್ಮರ ಶತ ಸುಂದರ ವಿಗ್ರಹ ಕರುಣಾಕರನೇ ಸರಸಿಜಭವ ಜನಕ ಪರಾತ್ಪರ ಮಾಧವನೆ ಶರದಿಂದುನಿಭಾನನ ಸರ್ವತ್ಪ್ರಕಾಶನೇ ಗುರುರಾಮ ವಿಠಲ ಹರಿ ಸರ್ವೋತ್ತಮನೇ 3
--------------
ಗುರುರಾಮವಿಠಲ
ಭಾಗೀರಥೀ ಜನಕಗೆ ಭಾಗವತಪ್ರಿಯಗೆ ಆಗ ನೀರೆರೆದರವಿಂದಲೋಚನನಿಗೆ ಗೋಪಿ 1 ಸಾಗರಶಯನನ ತೂಗಿ ತೊಟ್ಟಿಲೊಳಿಟ್ಟು ನಾಗಮುರಿಗೆ ವಂಕಿ ನಂದಗೋಪನ ಸುತಗೆ ಬೆರಳಿಗುಂಗುರ ಕೋಟಿಭಾಸ್ಕರತೇಜಗೆ ಹೊಳೆವೊ ಬಿಂದಲಿ ಗುಂಡು ಭುಜಕೀರ್ತಿ ಭೂಷಣ 2 ಮಲಕು ಮುತ್ತಿನ ಹಾರ ಪದಕ ಪಚ್ಚೆಯ ಕಾಂತಿ ಕೌಸ್ತುಭ ರತ್ನ ಥಳಥಳಿಸುವ ಕರ್ಣದಲ್ಲಿ ಬಾವುಲಿ ಚೌಕುಳಿ ಚಳತುಂಬು ಮುತ್ತಿನಬಟ್ಟು ಮುಂದಲೆಗೆ 3 ಹೊಸ ವಜ್ರದರಳೆಲೆ ಹುಲಿಯುಗುರು ತಾಯಿತ ಕುಸುಮನಾಭಗೆ ಕಿರುಗೆಜ್ಜೆ ಕಾಲಲಂದಿಗೆ ಮಿಸುಣಿ ಮಾಣಿಕ್ಯದುಡಿದಾರದಡ್ಡಿಕೆ ಕಟ್ಟಿ ಗೋಪಿ 4 ಕಂಜನಯ್ಯನ ನೋಡೆ ಕಂಗಳಿನ್ನೆರಡಿಲ್ಲ ಜಿಹ್ವೆ ಒಂದೆ ಸಾಲದೆನಗೆಂದು ಅಂಗಿಟೊಪ್ಪಿಗೆ ಹಾಕ್ಯಾಲಿಂಗನೆ ಮಾಡುತ ಸತಿ ತಾನಂದಾನಂದಭರಿತಳಾಗಿ5 ತನ್ನ ಮಗನ ಮುದ್ದು ತಾ ನೋಡಿ ಸಾಲದೆ ಹೊನ್ನ ಪುತ್ಥಳಿಯಂತೆ ಹೊಳೆವೊ ಕೂಸನು ಎತ್ತಿ ನಿನ್ನ ಮಗನ ಆಟ ನೀ ನೋಡೆಂದೆನುತಲಿ ತನ್ನ ಪತಿಯ ತೊಡೆಯಲ್ಲಿಟ್ಟು ನಲಿಯುತ 6 ಹೊನ್ನ ಪುತ್ಥಳಿಗೊಂಬೆ ಹೊಸ ಚಿನ್ನದರಗಿಳಿಯೆ ಹೊನ್ನು ತಾ ಗುಬ್ಬಿತಾರಮ್ಮಯ್ಯ ಎನುತಲಿ ಬಣ್ಣ ಬಣ್ಣದ ಆಟ ವರ್ಣಿಸುತಲಿ ನೀಲ- ವರ್ಣನ ತನ್ನ ತೋಳಿಂದಪ್ಪಿ ನಲಿಯುತ 7 ಸೃಷ್ಟಿಮಾಡುವರಿಲ್ಲೀ ಶಿವ ಬ್ರಹ್ಮರೊಡೆಯನ ಸೃಷ್ಟಿಕರ್ತನಾದನನ್ಹುಟ್ಟಿಸಿದ ನಾಭಿಯಿಂದಿವನು ಹೊಟ್ಟೆಲೀರೇಳು ಜಗವಿಟ್ಟು ಸಲಹುವ ಎಷ್ಟು ಸರ್ವೋತ್ತಮ ಈಗಿಲ್ಲ್ಯವತರಿಸಿದ 8 ಚತುರವದನಗೆ ವೇದ ತಂದಿಟ್ಟು ಸಾಗರ ಮಥಿಸಿ ಮಂದರವನು ಪೊತ್ತು ಅಮೃತವ ಹೀರಿ ಪೃಥಿವಿಯನು ತಂದ ಕೋರೆಯಲಂದ್ಹಿರಣ್ಯಾಕ್ಷನ ಹತವ ಮಾಡಿದ ತಾ ಭೂಪತಿ ಎಂದೆನಿಸಿದಿವನು 9 ಪರಮಭಕ್ತನು ಕರೆಯೆ ಬಿರುದು ಕಂಬದಿ ಬಂದು ಕರುಳ ಬಗೆದ ಪುಟ್ಟ ತÀರÀಳ ರೂಪವ ನೋಡಿ ಮರುಳಾಗಿ ಬಲಿ ಮೂರು ಚರಣ ದಾನ ನೀಡೆ ಬೆಳೆದು ಬ್ರಹ್ಮಾಂಡಕ್ಕೆ ಭುವನ ವ್ಯಾಪಿಸಿಕೊಂಡ10 ಕ್ಷತ್ರ ಸಂಹಾರಿ ತಾ ಎತ್ತಿ ಧನುವ ಸೀತಾ ಸೌ- ಮಿತ್ರಿಸಹಿತ್ವನದಲ್ಲಿ ಇರುತಿರಲಾಗ ಪತ್ನಿ ಒಯ್ಯಲು ಅಸುರನ್ಹತ್ತು ಶಿರಗಳ ತರಿದ ದುಷ್ಟ- ರಂತಕನೆ ನಿರ್ದುಷ್ಟ ಸಜ್ಜನಪ್ರಿಯ 11 ದೇವಾಧಿದೇವ ದೇವಕ್ಕಿ ಜಠರದಿ ಬಂದು ಮಾಯಾ- ಪೂತಣಿಯನ್ನು ಕೊಂದು ವಿಷಮೊಲೆನುಂಡು ಕಾಲಲಿ ಶಕಟನ ಕೆಡವಿದ ಯದುವೀರ ತಾ- ಗೋಪಾಲಕ ಗೋಪೀಸುತನೆಂದೆನಿಸಿಕೊಂಡ12 ವಿಪರೀತ ಮಾಯದಿ ತ್ರಿಪುರದ ಜನರಿಗೆ ದುರ್ಮತವ ಬೋಧಿಸಿ ಅಸುರಾರಿ ಮೋಹಕ ತೋರಿ ಚಪಲ ಚೆನ್ನಿಗ ಖಡ್ಗಪಿಡಿದು ತೇಜಿಯ- ನೇರಿ ಕಪಟನಾಟಕ ಕಲಿಮರ್ದನ ಕರಿಗ್ವರವಿತ್ತ13 ಜನ್ಮಕರ್ಮವು ಜರಾಮರಣಗಳಿವಗಿಲ್ಲ ಜಗದೋ- ಪರಬ್ರಹ್ಮನ ಪಾದಾಂಘ್ರಿಸ್ಮರಣಿ (ಣೆಯಿ?)ರೆ ಪರಮಾ- ದರದಿ ಕರೆದೊಯ್ವ ತನ್ನ (ಬಳಿಯ)ಲ್ಲೆ 14 ಏಸುಜನ್ಮದ ಫಲವಿನ್ನೆಷ್ಟು ಜನ್ಮದ ಸುಕೃತ ಈ ಸಮಯದಿ ಫಲಿಸಿತೀತ ಇಲ್ಲುದಿಸಿರಲು ದೋಷವರ್ಜಿತನೆ ಸಂತೋಷಭರಿತನಿವ ಭೀ- ಮೇಶಕೃಷ್ಣ ಯಶೋದೆ ಕೂಸೆಂದೆನಿಸಿಕೊಂಡ15
--------------
ಹರಪನಹಳ್ಳಿಭೀಮವ್ವ