ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಿನ್ಯೈಪೆ ನಿನಗಾನು ಭೀಮಸೇನ ಪ ಬನ್ನಬಡುತಿಹ ಜನರ ಭಯವ ಪರಿಹರಿಸೆಂದು ಅ.ಪ. ನೀಚರಿಂದಲಿ ಬಂದ ಭಯಗಳಿಂದಲಿ ಜನರು ಯೋಚಿಸುವರೆಮಗಾರು ಗತಿಯೆನುತಲಿ ಕೀಚಕಾಂತಕ ನಿನ್ನ ಕೀರ್ತಿ ಬಹುವಿಧ ಕೇಳಿ ಯಾಚಿಸುವೆ ನಿನಗಾನು ಎಲ್ಲರನು ಸಲಹೆಂದು 1 ಭವ ವಿಮೋಚಕನು ನೀನೆ ಸಚ ರಾಚರಕೆ ಸಂತತ ಪುರೋಚನಾರಿ ಪ್ರಾಚೀನ ಕರ್ಮಾಬ್ಧಿ ವೀಚಿಯೊಳು ಮುಳುಗಿಹ ಖೇಚರೇಂದ್ರಾಹಿಪ ತ್ರಿಲೋಚನರ ಗುರುವೆ 2 ಖಚರೋತ್ತಮನೆ ನಿನ್ನ ಸುಚರಿತೆಗಳನು ಕೇಳಿ ರಚನೆಗೈಯ ಬಲ್ಲೆನೆ ಅಚಲ ಸತ್ವ ಪ್ರಚಲಿಸುತಿಹ ಮನೋವಚನ ಕಾಯುವ ಘಟೋ ಪ್ರಚಯ ಮಾಡುವುದೆಂದು 3 ಲೋಚಿತದ ಧರ್ಮಗಳ ಸೂಚಿಸೆಮಗೆ ಪಾಚಕನೆ ನಿನ್ನಡಿಗೆ ಚಾಚುವೆನು ಶಿರ ಸವ್ಯ ಸಾಚಿ ಸೋದರನೆ ದಯದಿ ಗೋಚರಿಸಿ ಸಲಹೆಂದು 4 ವಾಚಾಮಗೋಚರ ಜಗನ್ನಾಥ ವಿಠ್ಠಲನ ಶ್ರೀ ಚರಣ ಭಜಕನೆ ನಿಶಾಚರಾರಿ ಮೈಚರ್ಮ ಸುಲಿದು ದುಶ್ಯಾಸನನ ರಕುತ ಪರಿ ಷೇಚನೆಯ ಮಾಡಿದೆ ಮಹೋಚಿತವಿದೆಂದರಿದು 5
--------------
ಜಗನ್ನಾಥದಾಸರು
ರಕ್ಷಿಸು ಕಮಲಾಕ್ಷ ಶ್ರೀ ವಕ್ಷ ಪ ರಕ್ಷಾ ಶಿಕ್ಷಾಶ್ರಿತಜನ ಸಂರಕ್ಷ ಅಕ್ಷಯ ಸುರಪಕ್ಷ ಅಧ್ಯಕ್ಷ ಅ.ಪ. ಪ್ರಾಚೀನ ಕರ್ಮಾಬ್ಧಿ ವೀಚಿಯೊಳಗೆ ಸಿಕ್ಕಿ ಪೇಚಾಡುತಲಿರೆ ತೋರದು ಯೋಚನೆ ಶ್ರೀ ಚರಣಕೆ ಶಿರಬಾಗುವೆ ಶ್ರೀಕರ ಸೂಚಿಸಿ ಘನ ಭಕ್ತಿ ವಿರಕ್ತಿ 1 ಆರ್ತ ಬಾಂಧವನೆಂದು ಕೀರ್ತಿ ಪೊತ್ತವನೆಂದು ಅರ್ತಿಯಿಂದಲಿ ಬಂದೆ ಸುತ್ತುತೆ ತಂದೆ ಕೀರ್ತಿಯ ಉಳುಹಿಕೊ ಕೀರ್ತಿಯ ತಂದುಕೊ ಭಕ್ತವತ್ಸಲ ಸ್ವಾಮಿ ಸುಪ್ರೇಮಿ 2 ಜನನಿ ಜನಕರು ಅನುಜಾ ತನುಜರು ಅನುವಾಗಿದ್ದರೆ ಎಲ್ಲ ನಮ್ಮವರೆ ಅನುವು ತಪ್ಪಿದರಾರು ಕಣ್ಣಲಿ ನೋಡರು ಅನಿಮಿತ್ತ ದಯವಂತ ಶ್ರೀಕಾಂತ 3
--------------
ಲಕ್ಷ್ಮೀನಾರಯಣರಾಯರು