ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಬಾಲಕೃಷ್ಣ ವರ್ಣನೆ) ಕಂಸಾರಿ ಕೃಷ್ಣಾ ಕಾಡದಿರೆನ್ನನು ಪ ಹಳ್ಳದ ತಡಿಯಲ್ಲಿ ಮಳಲು ತೋಡಿ ತೋಡಿ ಗೊಲ್ಲಿತೆರೊಡÀನಾಡಿ ಕಲಿತ್ಯೋ ಬೆಡಗಾ ಅಹಿನೇರಿ ಹುಡುಗಾ ಮಾಡಿದಿ ತುಡುಗಾ 1 ನೀರಿಗ್ಹೋಗುವಾಗ ದಾರಿಗಡ್ಡಕಟ್ಟಿ ನಾರಿ ನೀನಾರೆಂದ್ವಿಚಾರಿಸುವೀ ದೂರದಲ್ಲಿರುವಿ ಬದಿಯಲ್ಲಿ ಬರುವಿ ಬೇರೆ ಕರೆವೆ ಈ ಬುದ್ಧಿ ತರವೆ 2 ವರ ಕದರುಂಡಲಗಿ ಹನುಮಯ್ಯನೊಡೆಯನೆ ನಿನಗೆಣೆಯಿಲ್ಲವೊ ವನಜನಾಭಾ ವನಿತೆಯರೆಲ್ಲಾ ಒಲಿಸಿದೆಯಲ್ಲಾ ಮನುಜನಲ್ಲಾ ಮಾಯದ ಗೊಲ್ಲಾ 3
--------------
ಕದರುಂಡಲಗಿ ಹನುಮಯ್ಯ
ಬ್ರಹ್ಮಜ್ಞಾನ | ಬಿಡು ಬಿಡು ಬಿಡು ನೀ ಸಂಸಾರ ಧ್ಯಾನ |ಕಡೆಯಲ್ಲಿ ನಿನ್ನ ಕಳಹುವರಲ್ಲಿಗೆ | ಬಿಡದಿರು ಸದ್ಗುರುವಿನ ಧ್ಯಾನ ಪ ಯಾತಕೆ ಕಲಿತ್ಯೋ ಬಹು ಯುಕ್ತಿಗಳ | ಬರಿ ಮಾತಿಲಿ ಆಗದು ನಿಜ ಮುಕ್ತಿ | ನೀತಿಯಿಂದ ನೀ ಅರಿತು ನೋಡಲು | ಸ್ವಾತ್ಮದ ಜ್ಞಾನವು ಆಗುವದಿದಕೆ1 ಸತಿ ಸುತರಾ ನೀ ನೋಡಿ ಹಿಗ್ಗುತಿ | ಮಿತಿಯಿಲ್ಲದೆ ಅವರಿಗೆ ತಗ್ಗುತಿ | ಗತಿಯ ಕೊಡುವ ಸಂತರು ಬಂದರೆ | ಮೋತಿಯ ತಿರುವಿ ವ್ಯಸನಕೆ ತಗ್ಗುತಿ 2 ಸಾಧು ಪುರುಷರ ಸಂಗವ ಹಿಡಿಯೊ | ಬೋಧಾಮೃತವನು ನೀ ಕುಡಿಯೊ | ಆದಿಯಲಿ ಭವತಾರಕ ಭಜಕರು | ಹೋದ ಹಾದಿಯ ನೀ ಹಿಡಿಯೊ 3
--------------
ಭಾವತರಕರು