ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿಜಯ ದಾಸರ ಭಜಿಸಿರೋ | ಸುಜನರೆಲ್ಲ ನೀವೂ ಪ ವಿಜಯ ದಾಸರ ಭಜಿಸೇ | ಕುಜನ ಮರ್ದನ ನಮ್ಮವಿಜಯ ವಿಠಲ ತಾನೇ | ನಿಜವ ತೋರುವ ಮನದೀ ಅ.ಪ. ಮುನ್ನ ಸುರಲೀಲಾ ನೆನಿಸಿ ತಾ |ಜನಿಸಿದ ತ್ರೇತಾಯುಗದಿ |ವನಧಿಜೆ ರಮಣ ಶ್ರೀ | ಹನುವ ಸೇವಿತನಾದಶ್ರೀನಿವಾಸನ ಚರಣ | ವನಜವ ಸೇವಿಸಿದಾ 1 ಸಕಲ ಸದ್ಗುಣ ಆಕರಾ |ನಿಖಿಲ ಲೋಕದ ಧಾರಕಾ |ಪಾಕಶಾಸನ ಪೂಜ್ಯ | ಗೋಕುಲರೊಡೆಯನನಿಕಂಪಾನೆನಿಸಿ ಜನಿಸಿ | ಕೃಷ್ಣನ್ನ ಪೂಜಿಸಿದ 2 ಸುರ ಪುರ ಮುನಿ ನಾರದಾ |ವರಕಲಿಯಲ್ಲಿ ಜನಿಸೇ |ತುರುಕರುವಾಗಿ ಅವರಾ | ಚರಣವ ಸೇವಿಸಿದಮರಳಿ ಅವರ ಪುತ್ರಾ | ಗುರುಮಧ್ವಪತಿ ಭೃಗುವಾ 3 ಪದಪಂಚ ಲಕ್ಷ ಗ್ರಂಥಕೇ |ಪಾದವೇ ನ್ಯೂನವಿರಲೂ | ಪದಪದ್ಯ ಸುಳ್ಹಾದಿಯಲಿ |ಪಾದ ಪೂರ್ತಿಯ ಮಾಡೆಮೋದದಲುದಿಸಿದಾ | ಬುಧನು ದಾಸಪ್ಪ ನೆನಿಸೀ 4 ಪರಮ ಕಾರುಣ್ಯ ಗುರುವೇ |ಕರವ ಪಿಡೀರಿ ಎನ್ನಾ |ಮರುತಾಂತಾರಾತ್ಮಾ ಗುರು | ಗೋವಿಂದ ವಿಠ್ಠಲನಚರಣವ ತೋರಿಸೀ | ಕರುಣದಿ ಪೋಷಿಸಿ5
--------------
ಗುರುಗೋವಿಂದವಿಠಲರು
ಸಂಕರ್ಷಣನ ರಾಣಿ ವೀರದುರ್ಗೆ ಕಿಂಕರರ ಪಾಲಿಸು ಖೂಳ ಜನ ಸಂಹಾರಿ ಪ ಅಮಿತ ಸದ್ಗುಣರಾಶಿ ಕುಜನಾರಿ ಸುಗನಾಪ್ತೆ ಕಾಯೆ ತಾಯೆ ಅ.ಪ ಮನದ ಖಳರಾ ಭೀತಿ ಬಹು ವೇಗ ಕೇಳಮ್ಮ ಪ್ರಣಿತ ಜನರ ಪಾಲೆ ಕೊಲ್ಲೆ ಅವರ ತನುಮನದಿ ನೆಲೆಸಿದ್ದು ಅನುದಿನವು ಪೊರೆ ನಮ್ಮ ಗುಣಪೂರ್ಣ ನಿನ್ನ ಪತಿಧ್ಯಾನ ಒದಗಿಸಿ ನಲಿಯೆ 1 ಪತಿವ್ರತವು ನೀ ಧರಿಸಿ ಪತಿವೈರಿಗಳ ಅರಿವೆ ಪತಿಹಿತರ ಕಾವ ಕಂಕಣವ ಕಟ್ಟಿ ಪತಿ ಪ್ರೀತಿಪಡಿಸುವೆ ವೀರವ್ರತ ದೀಕ್ಷೆಯಲಿ ಪತಿತಪಾವನೆ ನೀನೆ ಕಾವಲಮ್ಮಾ ನಮಗೆ2 ಕಲಿಯಲ್ಲಿ ಖಳಕೂಟ ಬಲು ಪ್ರಬಲ ಅತಿಕ್ರೂರ ಉಳಿಯಲೀಯರು ದೇವಿ ಸುಜನರನ್ನು ಬಲುಹೀನರೆಂತೆಂದು ಬಲು ಬಾಧೆಪಡಿಸುವರು ಪ್ರಳಯಗೈಸವರನ್ನು ಪಾಲಿಸು ನಿನ್ನವರ 3 ಜ್ಞಾನಮನ ತನುಕರಣ ಆಲಯದ ಅರಿಗಳ ಆಸಕ್ತಚಾರಿಗಳ ಬಿಡದೆ ಮಡುಹಿ ಆನಂದಮುನಿ ತಾಯೆ ಜಯೇಶವಿಠಲನ ಆನಂದ ನಿಜಕರುಣ ಬೆರಿಸಮ್ಮ ನಮ್ಮಲ್ಲಿ 4
--------------
ಜಯೇಶವಿಠಲ