ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾಯೆ ಕೇಳೆನ್ನ ಬಿನ್ನಪವ ಬಲು ಮಾಯ ಕಾರನು ಕೃಷ್ಣ ಮಾಡಿದೊಳಿಗವ ಪ ಮಕ್ಕಳೂಳಿಗವ ತಾಯ್ಗಳಿಗೆ ಹೇಳ ತಕ್ಕುದು ನೀತಿ ಕೇಳವ್ವ ನಿಮ್ಮಡಿಗೆ ಠಕ್ಕನ ದೆಸೆಯಿಂದ ದಣುಕೊಂಬುದೆಮಗೆ 1 ಬೆಳಗು ದೋರದ ಮುನ್ನ ಬರುವ ಕೃಷ್ಣ ನೆಲುವಿನ ಪಾಲ್ಬೆಣ್ಣೆಗಳ ಕದ್ದು ಮೆಲುವ ನಿಲುಕದಿದ್ದರೆ ಕಲ್ಲಲಿಡುವ ಒಳ ಹೊರಗೆಲ್ಲ ಕ್ಷೀರ ಸಮುದ್ರವ ಕರೆವ 2 ಉಂಡುದ ಕಳಲುವರಲ್ಲ ನೆಲನುಂಡು ಕೆಟುದು ಪಾಲು ಬೆಣ್ಣೆಗಳೆಲ್ಲ ಮೊಸರ ಬಾಂಢವೆಂದರೆ ಬರಲೊಲ್ಲ ಇವನ ಕಂಡೆನೆಂದರೆ ಸುಳುಹನೆ ಕಾಣಲಿಲ್ಲ 3 ಹೆಣ್ಣ ಮಕ್ಕಳನಿರಗೊಡನು ಬಲು ಬಣ್ಣಿಸಿ ಕರೆದು ಮುದ್ದಿಸಿ ಆಡುತಿಹನು ಚಿಣ್ಣರಂದದಿ ಕಾಣುತಿಹನು ತೊಂಡೆ ವೆಣ್ದಟಿಯ ನಗಲಿಸಿ ನೋಡಿ ನಸುನಗುತಿಹನು 4 ಆಸೆ ನಮಗೆ ಊರೊಳಿಲ್ಲ ಪರ ದೇಶಕ್ಕಾದರೂ ಹೋಗಿ ಜೀವಿಪೆವೆಲ್ಲ ಬೇಸರಾಯಿತು ನಿಮಗೆಲ್ಲ ನಮ್ಮ ಪೋಕ್ಷಿಸುತಿಹ ಲಕ್ಷ್ಮೀರಮಣನೆ ಬಲ್ಲ 5
--------------
ಕವಿ ಪರಮದೇವದಾಸರು
ಮಾಧವ ಸ್ವಾಮಿ ಪ. ಬಿಕ್ಕಿ ಬಿಕ್ಕಿಯಳುತ ಬಂದ ಗೋಪಿಯ ಕಂದಉಕ್ಕಿಹರಿವ ಕಣ್ಣನೀರ ತೊಡೆದಳೆಶೋದೆಅಕ್ಕರದಿಂದಲಿ ಮಗನ ಅತಿಮುದ್ದನಾಡಿಮಕ್ಕಳ ಮಾಣಿಕ್ಯವೆ ನೀ ಮನೆಯೊಳಗಾಡೈ 1 ಹಳ್ಳಿಯ ಮಕ್ಕಳು ಎನ್ನ ಬೈದರಮ್ಮಕಳ್ಳನೆಂದು ಎನ್ನಕೂಡೆ ಆಡಲೊಲ್ಲರುಮೆಲ್ಲನೆ ಬೈಯುತ್ತ ಬರಲು ಕಲ್ಲಲಿಟ್ಟರಮಯ್ಯಅಲ್ಲಿಂದಂಜಿ ಅಳುತ ನಾನು ಓಡುತ ಬಂದೆ 2 ಬಾಗಿಲ ಗೊಲ್ಲರು ಗೋಪಗೋಪಿಯರೆಲ್ಲಹಗಲುಗಳ್ಳ ಹಾಲು ಬೆಣ್ಣೆ ಚೋರನೆಂದರುಮಗುವೆಂದೆನಿಸಿಕೊಂಡು ಮನೆಯೊಳಗಾಡೈಹೋಗುನ್ನಂತ ಉಡುಪಿಯಲ್ಲಿ ಮುದ್ದು ಹಯವದನರಾಯ 3
--------------
ವಾದಿರಾಜ
ಸಾಲದೆ ನಿನ್ನದೊಂದು ದಿವ್ಯನಾಮ - ಅ-ಕಾಲ ಮೃತ್ಯುವಿನ ಗಂಟಲಗಾಣ ಹರಿಯೆ ಪ ರಣದೊಳಗೆ ಅಂಗಾಂಗ ಖಂಡತುಂಡಾಗಿ ಪ್ರತಿರಣವನುತ್ತರಿಸಿ ಮರಣವ ತಾಳಿರೆಪ್ರಣವ ಗೋಚರ ನೀನು ಗೋಚರಿಸಿ ಬಂದೆನ್ನಹೆಣಕೆ ಪ್ರಾಣವ ಪ್ರಯೋಗಿಸಿದಂತರಾತ್ಮ1 ಕುಂತದಿಂ ತೂಂತುಗೊಂಡೆನ್ನ ಬೆನ್ನಿಂದಿಳಿವಸಂತತ ನೆತ್ತರನೊರಸಿ ಬಿಸುಟೆತಿಂತ್ರಿಣಿಯ ಮರದಡಿಯೆ ಹಾವು ಕಡಿದೊರಗಿರಲುಮಂತ್ರಿಸಿ ಮನೆಗೆ ಕಳುಹಿದೆ ಗರುಡಗಮನ 2 ಗರಳ ತೈಲವ ಸೇವಿಸೆವೇಣುನಾದದಲಿ ಹಣೆಯನೇವರಿಸಿ ಪಂಚಪ್ರಾಣ ಪ್ರತಿಷ್ಠೆಯ ಮಾಡಿದೆ ಮಹಾತ್ಮ 3 ತಮ್ಮ ಹವಣನರಿಯದೆ ಕೊಬ್ಬಿದ ಪಿಶಾಚಿಗಳುಎಮ್ಮ ಮನೆಗೊಂದೆ ಸಮ ಕಲ್ಲಲಿಟ್ಟುಹೆಮ್ಮಕ್ಕಳ ಬಾಧಿಸುವುದನು ಕಂಡುಬೊಮ್ಮಜಟ್ಟಿಗರ ಶಿರವರಿದೆ ನರಹರಿಯೆ 4 ಓದಿ ಹೇಳಿದರೊಂದು ಕಥೆಯಾಗುತಿದೆ ಮಹಾಂಬೋಧಿಶಯನನೆ ವೇದಶಾಸ್ತ್ರ ಮುಖದಿಬಾಧಿಸುವ ದುರಿತಾಗ್ನಿಗಂಬು ಶ್ರೀ ಕಾಗಿನೆಲೆಯಾದಿಕೇಶವನ ನಾಮ ಸಂಕೀರ್ತನ 5
--------------
ಕನಕದಾಸ
ರಾಮನಾಮ ಪಾಯಸಕ್ಕೆ ಕೃಷ್ಣನಾಮ ಸಕ್ಕರೆ |ನಾಮವಿಠಲ ತುಪ್ಪ ಬೆರೆಸಿ ಬಾಯಿ ಚಪ್ಪರಿಸಿರೊ ಪಒಮ್ಮನ ಗೊದಿಯ ತಂದು | ವೈರಾಗ್ಯ ಕಲ್ಲಲಿ ಬೀಸಿ |ಸುಮ್ಮನ ಸಜ್ಜಿಗೆ ತೆಗೆದು | ಸಣ್ಣ ಸೇವಗೆ ಹೊಸೆದು 1ಹೃದಯವೆಂಬ ಪಾತ್ರೆಯೊಳಗೆ | ಮನವೆಂಬ ಎಸರನಿಟ್ಟು |ಬುದ್ದಿಯಿಂದ ಪಾಕ ಮಾಡಿ |ಹರಿವಾಣತುಂಬಿರೋ 2ಆನಂದ ಆನಂದವೆಂಬ ತೇಗು ಬಂದ ಪರಿಯಲಿ |ಆನಂದ ಮೂರುತಿ ನಮ್ಮ ಪುರಂದರವಿಠಲ 3
--------------
ಪುರಂದರದಾಸರು