ಒಟ್ಟು 15 ಕಡೆಗಳಲ್ಲಿ , 12 ದಾಸರು , 15 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಅ) ಏನೆಂದು ಪೇಳಲೋ ರಾಮ ನಿನ್ನಾ ದೀನವತ್ಸಲತೆಯ ಆಶ್ರಿತ ಪ್ರೇಮ ಪ ಕಲ್ಲಾಗಿ ಪಥದಲ್ಲಿ ಬಿದ್ದ | ಮುನಿ ವಲ್ಲಭೆಯನು ಸಲಹಿದ ಸುಪ್ರಸಿದ್ಧ ಕಲ್ಲೆದೆಯವ ನಾನು ಸಿದ್ಧ | ಎನ್ನ ಅನಿರುದ್ಧ 1 ಪಶುಜಾತಿ ಸುಗ್ರೀವ ಮುಖರ | ನೀ ಹಸನಾಗಿ ಪೊರೆದದ್ದು ಕೇಳಿದೆ ವಿವರ ವಶವಲ್ಲದಿಂದ್ರಿಯನಿಕರವುಳ್ಳ ಪಶುಪ್ರಾಯ ನಾನಯ್ಯ ರಕ್ಷಿಸೋ ಚತುರ 2 ಚೆಂಡಾಲನಾದ ಗುಹನ | ಕೈ ಗೊಂಡು ಕಾಪಾಡಿದೆ ಕುರುಣದಿಂದವನ ಖಂಡಿತ ಪೇಳುವೆ ಘನ್ನ | ಕರ್ಮ ಚೆಂಡಾಲ ನಾನು ಶ್ರೀ ಕಾಂತ ಪ್ರಸನ್ನ 3
--------------
ಲಕ್ಷ್ಮೀನಾರಯಣರಾಯರು
(ಬಾಗಿಲು ತಡೆ) ಸಾರಸ ನಿಲಯೆ ಸಾಗರ ತನಯೆ ಸಾರೆ ಬಂದೆನು ಈಗ ಬೇಗ ಸಾರಿ ಬಾಗಿಲ ತೆಗೆ ಬೇಗ ಪ. ಸಾರು ಸಾರೆಲೊ ಸಾರಿಕೂಗುವನಾರೊ ಸಾರು ಬಾಗಿಲ ತೆಗೆ ನಾನು ಅ.ಪ. ಏಕಿಂತು ಕೋಪವೆ ಕೋಕಿಲಾರವೆ ನೀಂ ಕಟಾಕ್ಷಿಸು ಎನ್ನ ಮುನ ಸಾಕುಮಾಡುವುದಿದೆನ್ನ 1 ಸಾಕು ಸಾಕಿಂತು ಏಕೆ ಕೂಗುತಿರ್ಪೆ ಕಾಕು ನುಡಿಗಳುಸಲ್ಲ 2 ಪುಂಡರ ತಡೆವುದ ಕಂಡುಂಟು ಜಗದೊಳು ಗಂಡನ ತಡೆವರೆ ಭಾಮೆ ರಾಮೆ ಕಂಡವರೇನೆಂಬರೆ ಭಾಮೆ 3 ಗಂಡನಾರಿಗೆ ಹೆಂಡತಿಯಾರಿಗೆ ಪುಂಡಾಟವಾಡದೆ ಪೋಗು ಸಾಗು ಭಂಡನಾಗಿರ್ಪೆ ಪೋಗು 4 ವಲ್ಲಭೆ ನಿನ್ನೆದೆ ಕಲ್ಲಾಗಿರುವುದೆ ಬಲ್ಲವಳೆಂಬುವುದೆಲ್ಲೆ 5 ಬಲ್ಲೆ ಬಲ್ಲೆನೀ ಚಲ್ಲಾಟಗಳ ಸೊಲ್ಲಿಸದಾರನ್ನು 6 ದಶರಥರಾಮನೆ ಸೀತೆ ಖ್ಯಾತೆ ಪುಸಿಯಲ್ಲವೆಲೆ ಭೀತೆ 7 ನಿಶಿಚರರಿಲ್ಲಿಹರೇನೈ ಜ್ಞಾನಿ ವಿಷಮವರ್ತನವೇನೈ 8 ಅಂಗನೆ ನಿನ್ನ ಮೋಹನಾಂಗನಾದ ಶ್ರೀ ರಂಗ ನಾನೆಲೆ ಚಪ ಲಾಕ್ಷಿ ಲಕ್ಷ್ಮಿ | ಭಂಗಿಸಬೇಡೆನ್ನ ಲಕ್ಷ್ಮಿ 9 ತುಂಗ ವಿಕ್ರಮ ರಘು ರಾಮ ಶ್ಯಾಮ ರಂಗ ಕಾರುಣ್ಯಧಾಮ 10 ಪರಿ ಪೇಳುತೆ ಕೈಪಿಡಿದಳು ತ ನ್ನೋಪನ ವಂದಿಸಿ ರಾಣಿ ರಮಣಿ ಕೋಪರಹಿತೆ ಸುವಾಣಿ 11 ಭೂಪಶೇಷಾದ್ರೀಶನು ಕಾಂತೆಯ ಕೈಪಿಡಿದನು ನಲವೇರೆ ಅರರೆ ತಾಪಸನುತ ನಲವೇರೆ 12
--------------
ನಂಜನಗೂಡು ತಿರುಮಲಾಂಬಾ
ಎಲ್ಲಿರುವುದೋ ಸಿರಿವಲ್ಲಭನೆ ನಿನ ಗಲ್ಲದ ಕಾರ್ಯಗಳು ಪ ಕಲ್ಲಾಗಿದ್ದ ಅಹಲ್ಯಯೆ ನಿಮಿಷದಿ ಚಲ್ವೆಯ ಮಾಡಿದ ನಲ್ಲ ತ್ರಿಭುವನದಿ ಅ.ಪ ಶರಧಿಯೆ ವಾಸವು ಗರುಡನೆ ವಾಹನ ಉರಗಪತಿಯೆ ನಿನ್ನ ಪರಿಯಂಕ ಶರಧಿ ಕುಮಾರಿಯು ವರರಮಣಿಯು ಸುರ ವೀರರು ನಿನಗೆ ಕಿಂಕರರಾಗಿರಲು 1 ಕಂಬದಿ ಜನಿಸಿದೆ ಅಂಬಿಗರವಳನು ಸಂಭ್ರಮದಲಿ ನಿನ್ನ ಜನನಿಯೆನಿಸಿದೆ ಅಂಬುಜ ಮಿತ್ರನ ತನಯಗೆ ಮರುತನ ಬೆಂಬಲವರಿಯುತ ಉಳಿಸಿದೆ ಗೆಲಿಸಿದೆ 2 ಅಮಿತ ಕಾರ್ಯಗಳ ಕ್ರಮದಲಿ ನಡಿಸಿದೆ ವಿಮಲ ತನೋ ಸುಮನಸರೊಡೆಯನೆ ಕ್ಷಮಿಸಿ ಎನ್ನಯ ಮೋಹ ತಿಮಿರವ ತೊಲಗಿಸೊ ಸುಮನ ಪ್ರಸನ್ನನೆ 3
--------------
ವಿದ್ಯಾಪ್ರಸನ್ನತೀರ್ಥರು
ಎಲ್ಲಿಹನು ದೇವನೆಂದೆಲ್ಲು ಜನ ನುಡಿವರು ಸಲ್ಲುವುದೆ ಆಲಿಸಲು ಬಲ್ಲಗೀ ನುಡಿಯು ಇಲ್ಲೆಂದು ನುಡಿವರ್ಗೆ ಬಲ್ಲನಿತು ಪೇಳುವೆನು ಪುಲ್ಲನಾಭನ ಚರಿತವಾ ಹಿತವಾ ಪ ಕಲ್ಲಾಗಿ ಬಿದ್ದಿಪ್ಪಹಲ್ಯೆ ತಾ ಬಲ್ಲಳು ಎಲ್ಲ ಜಗ ಪಾವನನ ಸುಳ್ಳೆನ್ನಬಹುದೇ ಅಲ್ಲೆಂದರೀ ನುಡಿಗೆ ಹೊಲ್ಲ ಜಗವ ತುಂಬುವನು ಕಲ್ಲು ಮುಳ್ಳನು ಉದರದಿ ಜವನಿ 1 ತೋರೆಲವೊ ಹರಿಯನೆಂದೊದರಾಡೆ ರಕ್ಕಸನು ಘೋರ ಕಂಭದಿ ತೋರೆ ಹಾರಿ ತಲ್ಹಣವು ಘೋರ ರೂಪವ ತಾಳಿ ನಾರಸಿಂಹಾಖ್ಯದಿ ಚೂರ ಮಾಡಿದವನÀನು ಪರನು 2 ಧsÉೀನಿಪರ ಮನದೊಳಗೆ ಸಾನುರಾಗದಿ ಹರಿಯು ಸ್ಥಾನಗೊಳಿಪನು ಮನಕೆ ಆನಂದವೀವಾ ದಾನವಾಂತಕ ಶ್ರೀ ನರಸಿಂಹವಿಠಲನು ಆನತರ ನೆರೆ ಪೊರೆವನು ಬಿಡನು 3
--------------
ನರಸಿಂಹವಿಠಲರು
ಒಂದೇ ಮತ ಹರಿಯ ಮತ ಒಂದೇ ಭಾವ ಸಿರಿಯರಸನ ಭಾವ ಸಲಹಿದ ನರಹರಿ ಒಂದೇ ಮನದಂಬರೀಷನ ಕಾಯ್ದ ಹರಿ ಒಂದೇ ಮನದಿ ಧ್ರುವನ ಕಾಯ್ದ ಹರಿ ಒಂದೇ ಗಳಿಗೆಯಲಿ ತನ್ನುಂಗುಟದಿ ಸೋಕಿಸೆ ಕಲ್ಲಾಗಿದ್ದಹಲ್ಲೆಯ ಪೆಣ್ ಮಾಡಿದ ತಂದೆಯಂದದಿ ಭಕ್ತರ ಹಿಂದೆ ಕಾದಿದ್ದು ಕರುಣಾಸಿಂಧು ಭಕ್ತರ ಬಂಧು ಸುಂದರಿ ಸಿಂಧುಸುತೆಯರಸನ ನಿತ್ಯ ನೆನಯಿರಿ ಹರಿ ಭಕ್ತರು 1 ಸಾರ ನಾಲ್ಕು ಯುಗದಾಧಾರ ನಾಲ್ಕು ಮುಖದಲಿ ನೆಲಸಿ ಸೃಷ್ಟಿಕಾರ್ಯವ ನಡೆಸಿ ನಾಲ್ಕು ಮುಖ ಬೊಮ್ಮನಲಿ ನಾನಿಲ್ಲವೆನಿಸಿ ನಾಲ್ಕು ಯುಗದಲಿ ಜನಿಸಿದ ರಕ್ಕಸರಿಗೆ ತಿಳಿಸಿ ನಾಲ್ಕು ಲೋಕದಿ ಮೆರೆದ ನಾಕಚಾರ ವಂದ್ಯ ನಾಲ್ಕು ಹಸ್ತದಿ ನಾಲ್ಕು ವೇದತಂದಾ ಮೂರ್ತಿ ನಾಲ್ಕು ವೇದದ ಸಾರದಮೃತ ಭಕ್ತರಿಗಿತ್ತು ಹದಿನಾಲ್ಕು ಲೋಕಕೆ ನಾನೇ ಕರ್ತನೆಂದರಿಸಿ ನಾಲ್ಕು ವಿಧದಲಿ ಕಾವ ಶ್ರೀ ಶ್ರೀನಿವಾಸನ ಭಕ್ತರಾದರೆ ಈ ಕಲಿಯುಗದಿ ನಾಲ್ಕು ಜನರು ಮೆಚ್ಚುವರು ನಿಮ್ಮ ಹರಿ ಭಕ್ತರೆ ಕೇಳಿ2 ನಿನ್ನ ಸಹವಾಸ ಸೈ ನಿನ್ನ ಒಡನಾಟ ಸೈ ನಿನ್ನ ರೂಪ ಚತುರ ಬುದ್ಧಿ ಎನ್ನ ಸೈ ಎನ್ನಲಾಪರೆ ನಿನ್ನ ಕೈ ಚಳಕವಿಲ್ಲದಲೆ ಜೈಸುವದೆಂತೀ ಕಲಿಕಾಲದಿ ಸ್ವಾಮಿ ಜೈಲುವಾಸದಿ ಕೂತು ನಿನ್ನ ಕಲ್ಯಾಣವ ಕಟ್ಟಿದರೊ ನಿನ್ನ ಭಕ್ತರು ಜೈ ಕರುಣಾಕರ ನಿನ್ನ ಭಕ್ತರ ಮಹಿಮೆ ನಾ ಪೊಗಳುವದೆಂತೊ ಜೈ ಎನಿಸಿಕೊಳ್ಳಲು ನಿನ್ನೊಲುಮೆ ಕಾರಣವಲ್ಲವೆ ಜೈವೆಂಕಟ ಶ್ರೀಶಾ ಶ್ರೀ ಶ್ರೀನಿವಾಸ ನಿನ್ನ ಭಕ್ತರಿಗೆ ಜಯ ಅಪಜಯವೆಲ್ಲಿ ನಿನ್ನ ಭಕ್ತರಿಗೆ ಎಂದೆಂದಿಗೂ ಜೈ ಹರಿಭಕ್ತರ ನೆನೆಯಿರಿ ಹರಿಭಕ್ತರು 3 ಯನ್ನ ಯತ್ನವೇನಿಲ್ಲಿದರೋಳು ಪನ್ನಗಾದ್ರಿ ನಿವಾಸನಲ್ಲದೇ ಯನ್ನ ಯತ್ನ ಸಲ್ಲುವುದೇ ಎನ್ನ ಮನಸಿಲಿ ಬಂದು ನಿಂದು ತಾನೇ ನುಡಿಸಿದನಿಂದು ಚೆನ್ನಗಿರಿಯರಸ ಭಕ್ತ ಜನ ಬಂಧು ಬಂದು ನಿಂದು ಎನ್ನ ಮನದಭಿಲಾಷೆ ಸಲಿಸೆ ದೀನ ವತ್ಸಲನು ಎನ್ನ ಕರದಲಿ ಬರೆಸಿ ನಲಿದಾಡಿದ ತನ್ನ ವಾಣಿಯನಿತ್ತು ಎನ್ನ ಕುಲದೈವ ಶ್ರೀ ಶ್ರೀನಿವಾಸನ ಕೃಪೆ ಎನ್ನ ಮೇಲೆಂತುಟೊ ಕಾಣೆ ಇನ್ನು ಈ ವಾಣಿ ಹರಿಯದೆಂದು ನುಡಿವುದು ಹರಿಭಗವದ್ಭಕ್ತರು 4 ಪಾಮರರಿಗೆ ಕಲ್ಪತರು ಪಾಮರರಿಗೆ ಜಗದ್ಗುರು ವರವ ತೋರಿ ಪಾಮರರ ಪುನೀತರನು ಮಾಡೆ ಹರಿ ಪಾಮರೆಂದು ಲೆಕ್ಕಿಸದೇ ತಾವಲಿದು ನುಡಿಸಿದ ಪತಿತ ಪಾವನ್ನ ಶ್ರೀ ಶ್ರೀನಿವಾಸನದೇ ಈ ಉಕ್ತಿಯಲ್ಲರ ನೃತ್ರವಿಲ್ಲೆಂದು ತಿಳಿದು ಪಾಮರರನ್ನುದ್ಧರಿಸಲು ಹರಿಭಕ್ತರು ಪಠಿಸುವುದು ಈ ನುಡಿಯ 5 ಜತೆ ಶರಣು ಭಕ್ತರ ಪಾಲ ಶರಣು ಶ್ರೀಲೋಲಾ ಶರಣು ನಿನಗೆ ಸದಾ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ನೆನೆಮನವನುದಿನ ಹನುಮದೀಶನ ಕನಸಿನಲಿ ತನುಸುಖವನು ಬಯಸದೆ ನಿ ಪ. ಮನಸಿಜ ಪಿತನನೆ ನೆನೆನೆನೆದ್ಹಿಗ್ಗುತ ನಿನ ಹೃದಯದಲ್ಹರಿಯನು ನಿಲಿಸುತಲೆ ತನುಮನವರ್ಪಿಸೆ ಜನುಮ ಜನುಮದಘ ವನು ಕಳೆವನು ರಾಮನುಮಾನವೇಕೆ 1 ಆರು ಅರಿಯದ ತೋರಿ ಭಕ್ತಿಯೇ ಬಾರಿ ಪಾಶದಿ ಕಟ್ಟಿಹ ಹನುಮ ವಾರಿಜನಾಭನು ಹಿಗ್ಗಿ ನಿಲುತಲೆ ಚಾರುಸೇವೆಗೆ ಬಹೆ ಎನೆ ರಾಮನ ನೆನೆ2 ಕಲ್ಲಾಗಿದ್ದ ಅಹಲ್ಯೆಯ ರಾಮನು ನಲ್ಲೆಯ ಮಾಡಿದನರಿಯೆಯ ಮನವೆ ಚೆಲ್ಲುತ ಕರುಣವ ಶಬರಿಯ ಎಂಜಲನುಂಡ ರಮಾ ವಲ್ಲಭ ಶ್ರೀ ಶ್ರೀನಿವಾಸ ಕರುಣಿಯೊ ನೆನೆ 3
--------------
ಸರಸ್ವತಿ ಬಾಯಿ
ಭಕ್ತಿ ಪಾಶದಿ ಕಟ್ಟುತ ಹರಿಯನು ನಿತ್ಯದಲಿರು ಮನವೇ ಪ. ಭಕ್ತಿಗೆ ಮೆಚ್ಚುತ ಅಚ್ಚುತ ತಾನೆ ಬಹ ನಿಶ್ಚಯವಿದು ಮನವೆ ಅ.ಪ. ಅನುದಿನ ನಾರಾಯಣನೆಂದಣುಗಗೆ ಕ್ಷಣದಿ ಕಂಬದಿ ಬಂದ ದನುಜನ ಮುರಿದ ಗುಣನಿಧಿಯನು ನೀ ಕ್ಷಣ ಬಿಡದನುದಿನ ನೆನೆ ಮನವೇ 1 ಕಲ್ಲಾಗಿದ್ದಹಲ್ಲೆ ಪೊರೆದು ಶಿವ ಬಿಲ್ಲ ಮುರಿದ ರಾಮನ ನಲ್ಲೆ ಕುಬ್ಜೆಯ ಡೊಂಕನೆ ತಿದ್ದಿದ ಖುಲ್ಲ ಕಂಸನ ಗೆದ್ದಾ ಕೃಷ್ಣನ 2 ಅಂಬರೀಷ ದ್ವಾದಶಿ ವ್ರತವನು ಮಾಡೆ ಮುನಿ ಪುಂಗವ ಜರಿಯುತಿರೆ ರಂಗನ ಚಕ್ರದಿಂದ್ಹುಟ್ಟಿದನರಿಯ ದೇವ ಈ ಅಂಗ ಭಂಗರಕೆ ಚಾಟಿ ಶ್ರೀ ಶ್ರೀನಿವಾಸನು 3
--------------
ಸರಸ್ವತಿ ಬಾಯಿ
ಮನ್ಮನೋಹಾರಕ ಪ ರಾಮ ದಶರಥ ರಾಮ ಮಂಗಳನಾಮ ಶ್ರೀ ರಘುರಾಮ ಗುಣಗಣಧಾಮ ಸಜ್ಜನಪ್ರೇಮ ಹೇ ಜಯ ರಾಮ ಸೀತಾರಾಮ ರಘುವರ ಅ.ಪ ಕೂಡಲು ಕೋಪದಿ ಗೌತಮಮುನಿ ತರಳೆಯ ಶಪಿಸಿರಲು ಕಲ್ಲಾಗಿ ಬಿದ್ದಿರೆ ಪಾದಗಳ ರಜದಿಂ ಸುವಾರ್ತೆಯ ಕೇಳಿ ಬಂದಿಹೆ 1 ಗಿಡ ಮರವಲೆದು ತಂದು ಫಲಮೂಲಗಳನು ಒಡೆಯ ನೀ ಬರುವೆಯೆಂದು ಕೇಳುತ ತಾನು | ಬಡವರೊಡೆಯ ನೀನೆಂದರಿತು | ಕಡುಹಿತದೊಳೆಂಜಲ ಫಲಗಳುಣಿಸಲು| ಕೇಳಿ ಬಂದಿಹೆ 2 ಛಲದಲೋಡಿಸಿ ರಾಜ್ಯದಿ ಗೆಳೆಯ ಮಾರುತಿಯಿಂದಲರಿತು ಗಳಿಸಿದ್ವಾರ್ತೆಯ ಕೇಳಿ ಬಂದಿಹೆ 3 ಸತಿ ವರಪತಿವ್ರತೆ ಸೀತೆಯ ಪರಿಪರಿಯಿಂದಲಿರದೆ ದುರುಳ ರಾವಣನ ಭಂಗಿಸಿ ಹೊರದೂಡಲವ ನರಸಿ ನಿನ್ನಯ ಪರಮ ಪಾದಾಶ್ರಯವ ಬೇಡಲು ಪೊರೆದ ವಾರ್ತೆಯ ಕೇಳಿ ಬಂದಿಹೆ4 ಪರಮಪುರುಷ ನೀನೆಂದು ನಂಬಿದೆ ಸಿರಿಯರಸ ಪ್ರಭುವು ನೀನೆಂದು ಚರಾಚರ ಗುರುವು ಪ್ರಭುವು ನೀನೆಂದು ಇಂದು ತರಣಿ ಮಣಿ ಸಾರ್ವಭೌಮನೆ ಶರಣರಘ ಕೋಟಿಗಳ ಕಳೆವನೆ ಶರಣ ಬಂದಿಹೆನೆನ್ನ ಪಾಲಿಸದಿರುವರೇ ರಘುರಾಮ ವಿಠಲ 5
--------------
ರಘುರಾಮವಿಠಲದಾಸರು
ಮುಕುತಿಯ ಮಾರ್ಗವ ಹಿಡಿಯಲಿಬೇಕು ಭಕುತಿಯು ಮನದಲಿ ಮಾಡಲಿಬೇಕು ಪ ಭಕುತರು ತುಳಿವ ಕಲ್ಲಾಗಿರಬೇಕು ಲಕುಮಿಯ ರಮಣನ ದಯೆ ಬರಬೇಕು ಅ.ಪ ನೊಂದವರನು ಸಂತೈಸಲಿಬೇಕು ತಂದೆ ತಾಯಿಯರ ವಂದಿಸಬೇಕು ಬಂದುದ ಮೋದದಿ ಪಡೆಯಲಿಬೇಕು ಇಂದಿರೆಯರಸನೇ ಗತಿಯೆನಬೇಕು 1 ಸಂಗವು ಶರಣರದಾಗಿರಬೇಕು ರಂಗನೊಳೇ ಮನ ತಂಗಿರಬೇಕು ಭಂಗಿಸಿ ಕಾಮವ ವರ್ಜಿಸಬೇಕು ಮಾಂಗಿರಿನಾಥನ ದಯೆ ಬರಬೇಕು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಿಧಿಗೆ ದಯವಿಲ್ಲವಕ್ಕ ಎಮ್ಮ ಮ್ಯಾಲೆ ಯದುಪತಿಯನಗಲಿಸಿದ ಒಮ್ಮಿಂದಲೊಮ್ಮೆ ಅ.ಪ. ಎವೆಯ ಮರೆಯ ಮಾತನಾಡಿ ಪೋದ ಯಾಕೋ ವಿಧಿಯೇಸುಳಿಗುರುಳು ಕಡೆಗಣ್ಣ ನೋಟದಿಂದಲಿಕವಕವಿಸಿ ನಗುವ ಮುದ್ದು ಮುಖವನುತವಕದಿಂದ ಮರಳಿ ಮರಳಿ ನೋಡದ್ಹೋದೆವೆ 1 ಹಕ್ಕಿಯ ಮ್ಯಾಲುಳ್ಳ ದಯ ನಮ್ಮ ಮ್ಯಾಲೆಇಕ್ಕದೇಕೆ ಹೋದ್ಯೋ ವಿಧಿಯೇರೆಕ್ಕೆ ಎರಡುಳ್ಳರೆ ಮಧುರೆಗೆ ಪೋಗಿಫಕ್ಕನೆ ಶ್ರೀ ಹರಿಯೊಡನೆ ಕೂಡುತಿದ್ದೆವಲ್ಲ 2 ತಂಗೀ ನಮ್ಮೆದೆಯು ಕಲ್ಲಾಗಿ ಇದ್ದೇವೆಹಿಂಗುವರೆ ಸಖಿಯರು ಒಮ್ಮಿಂದಲೊಮ್ಮೆರಂಗವಿಠಲನ್ನ ಅಂಗ ಸಂಗವ ಬಿಟ್ಟು ಇಂಥಭಂಗ ಜೀವ ಸುಡ ಸುಡ ಸುಡಲ್ಯಾತಕೋ 3
--------------
ಶ್ರೀಪಾದರಾಜರು
ಸೈ ಸೈ ಶರಣಾಗತ ವತ್ಸಲ ನೀ ನೋಯಿಸಬಂದಸುರೆಗೆ ನಿರ್ಮಲ ಸುಖವಿತ್ತಿ ಪ. ಬೆನ್ನಿನ ಮೇಲೆ ಬೆಟ್ಟವ ಪೊರಿಸಿದ ಸುರ- ರನ್ನು ಕಾಪಾಡಿ ಸುಧೆಯನುಣಿಸಿದಿ ನೀ 1 ಹಂಜಿಯಂದದಿ ತಲೆ ನರತಿಹ ಬ್ಯಾಡತಿ ನಿರಂಜನ ಮೂರುತಿ2 ಅಟ್ಟಿ ಬರುತ ನಿನ್ನ ಕಟ್ಟಿದ ಗೋಪೆಗೆ ಪೊಟ್ಟೆಯೊಳಿಹ ಸರ್ವ ಲೋಕವ ತೋರಿದಿ 3 ಅಗ್ರಜ ಭಾರ್ಯಳನುಳುಪಿ ಕೊಲ್ಲಿಸಿದಂಥ ಸುಗ್ರೀವನ ಕೂಡೆ ಸಖ್ಯವ ಬೆಳಸಿದಿ 4 ಪಾತಕಿ ಪತಿಯಾದ- ಜಾಮಿಳನನು ತನ್ನ ನಿಲಯಕೆ ಕರೆಸಿದಿ 5 ವಿಧ ವಿಧದನ್ನವ ಕುರುಪತಿಯಲಿ ಬಿಟ್ಟು ಕುಡುತೆ ಪಾಲುಂಡುವ 6 ಕಂಡವರನು ಕೊಂದಿಹ ಕ್ರೂರನ ಮುನಿ ಮಂಡಲದಲಿ ಪ್ರಚಂಡನೆಂದೆನಿಸಿದಿ 7 ಕುಂತಿಯ ಕುವರನ ಕುದುರೆಯ ನಡೆಸುತ ಅಂತರಂಗ ಸಖ್ಯವ ಬೆಳೆಸಿದಿ ನೀ 8 ಖುಲ್ಲ ಚೇಷ್ಟೆಯ ಮಾಡಿ ಕಲ್ಲಾಗಿ ಬಿದ್ದ ಅ- ಹಲ್ಯೆ ಪತಿವ್ರತೆ ಎಂಬ ಬಿರುದ ಕೊಟ್ಟ್ಟಿ 9 ತಂದೆಯ ಕೊಲ್ಲಬೇಕೆಂದು ಸನ್ನಹಗೈದ ಕಂದನ ಸ್ವಾಂಕದೊಳಂದು ಕುಳ್ಳಿರಿಸಿದಿ 10 ಎಷ್ಟೊ ಪಾಪಗಳಟ್ಟುಳಿ ಬಿಡಿಸಿರೆ ಭ್ರಷ್ಟನೆಂದೆನ್ನೊಳು ನಿಷ್ಠುರವ್ಯಾತಕೆ 11 ಪನ್ನಗ ಗಿರಿವರ 12
--------------
ತುಪಾಕಿ ವೆಂಕಟರಮಣಾಚಾರ್ಯ
ಇದು ಭಾಗ್ಯ ಇದು ಭಾಗ್ಯ ಇದು ಭಾಗ್ಯವಯ್ಯಪದುಮನಾಭನಪಾದಭಜನೆ ಸುಖವಯ್ಯಪ.ಕಲ್ಲಾಗಿ ಇರಬೇಕು ಕಠಿಣ ಭವತೊರೆಯೊಳಗೆಬಿಲ್ಲಾಗಬೇಕು ಬಲ್ಲವರ ಒಳಗೆ ||ಮೆಲ್ಲನೇ ಮಾಧವನ ಮನದಿ ಮೆಚ್ಚಿಸಬೇಕುಬೆಲ್ಲವಾಗಿರಬೇಕು ಭಕುತಜನರೊಳಗೆ 1ಬುಧ್ಧಿಯಲಿ ತನ್ನ ಮನ ತಿದ್ದುತ್ತಲಿರಬೇಕುಮುದ್ದಾಗಬೇಕು ಮುನಿಯೋಗಿಗಳಿಗೆ ||ಮಧ್ವಮತದಬ್ಧಿಯೊಳು ಮೀನಾಗಿ ಇರಬೇಕುಶುದ್ಧ ಭಕುತಿಯಸುಕೃತಉಣಲುಬೇಕು2ವಿಷಯ ಭೋಗದ ತೃಣಕೆ ಉರಿಯಾಗಿ ಇರಬೇಕುಕುಶಲದಲಿ ಶ್ರೀ ಹರಿಯ ನೆನೆಯಬೇಕು ||ವಸುಧೆಯೊಳು ನಮ್ಮ ಪುರಂದರವಿಠಲನಹಸನಾಗಿ ನೆನೆನೆನೆದು ಸುಖಿಯಾಗಬೇಕು 3
--------------
ಪುರಂದರದಾಸರು
ಉದ್ಧಾರ ಮಾಡಿದ ಶ್ರೀರಾಮ ಅಹಲ್ಯಾ | ಉದ್ಧಾರ ಮಾಡಿದ ||ಪದ್ಮಜಾಂಡದೊಳು ಪ್ರಸಿದ್ಧವಾದ ಮಾತಿದು ಪಮುನಿ ಶಾಪದಿಂದಲಿ ವನದಿ ಕಲ್ಲಾಗಿ ಬಲುದಿನ ಚಿಂತಿಸುತಲಿಹ |ವನಿತೆಯ ದಯೆಯಿಂದ1ಮಂದಮತಿ ಮಾಟಕೀ ಇಂದುಮುಖಿಗೆ ಇಂಥಕುಂದುಬಂತಲ್ಲಾ |ಎಂದು ಇಂದ್ರರ ಪ್ರಾರ್ಥಿಸುತಿರೆ2ಮೌನಿ ಮಾತಿಗೆ ಪಾದರೇಣು ಸ್ಪರ್ಶವಿತ್ತು ಮಾನಿನಿಯ ಮಾಡಿದಾ |ಪ್ರಾಣೇಶ ವಿಠಲನು 3
--------------
ಪ್ರಾಣೇಶದಾಸರು
ಕಮಲೇಶ ನಿನ್ನ ವಿಮಲಯುಗಳಪಾದಕಮಲಕೆಅಮರರುಭ್ರಮರಗಳುಪ.ಅತಿಸುವಟು ರೂಪದಿ ವಿತರಣ ಬೇಡಲುಕ್ರತದೆಡೆ ಮೂರಡಿಕ್ಷಿತಿನೋಡೆಅತುಳಚರಿತ ವಸುಮತಿಯನಳೆಯುತಲಿದ್ವಿತಿಯ ಪದಕೆ ಅಬ್ಧಿಸತಿಯ ಪಡೆದ ಪಾದಕೆ 1ಹಲವು ಕಾಲವು ತನ್ನ ನಲ್ಲನ ಶಾಪದಿ ಅಹಲ್ಯೆಯು ತಾನಿಳೆಯಲ್ಲಿ ಕಲ್ಲಾಗಿರಲುಸುಲಭದಿ ಭಕ್ತರ ಸಲಹುವ ಬಿರುದಿಗೆಲಲನೆಯ ಮಾಡಿದ ಸುಲಲಿತ ಪಾದಕೆ 2ಚಿನ್ನತನದೊಳೆ ಉನ್ನತ ಭಕ್ತ ಧ್ರುವನ್ನ ದೃಢಮತಿಯನ್ನೆ ಕಂಡುತನ್ನ ಕರುಣದಿ ಪಾವನ ಪದವಿತ್ತ ಪ್ರಸನ್ನ ವೆಂಕಟೇಶನ ಶ್ರೀಪಾದಕೆ 3
--------------
ಪ್ರಸನ್ನವೆಂಕಟದಾಸರು
ಹೇಗೆ ಮಾಡಲಿ ಮಗುವಿಗೇನಾಯಿತೊ - ಇದರ - |ಆಗಮವ ಬಲ್ಲವರು ತಿಳಿದೆಲ್ಲ ಪೇಳಿ ಪ.ತೂಗಿ ಮಲಗಿಸೆ ಕಣ್ಣ ಮುಚ್ಚಲೊಲ್ಲನು, ಬೆನ್ನ - |ಮೇಗೆ ಬುಗುಟಿಯು, ಎದೆಯು ಕಲ್ಲಾಗಿದೆ |ರೋಗವನೆ ಕಾಣೆ ದಾಡೆಯಲಿ ನೀರಿಳಿಯುತಿದೆ |ಕೂಗುವ ಧ್ವನಿಯೊಮ್ಮೆ ಕುಂದಲಿಲ್ಲ 1ಖಂಡಸಕ್ಕರೆ ಹಣ್ಣ ಕೊಟ್ಟರೊಲ್ಲದೆ ಮಣ್ಣ |ಹೆಂಡೆಯನು ಬೇಡಿ ತಾ ಪಿಡಿವ ಕೊಡಲಿ ||ಮಂಡೆ ಜಡೆಗಟ್ಟಿಹುದು ಮಾಡಲಿನ್ನೇನಿದಕೆ |ಹಿಂಡುಸತಿಯರ ದೃಷ್ಟಿ ಘುನವಾಯಿತೇನೊ2ಮೊಲೆಯನುಂಬಾಗ ಮೈಯಂಬರವನೊದೆಯುತಿದೆ |ಕಲಕಿತದಲಿ ಎನ್ನ ಕೊಲುವುದೇಕೋ ||ತಿಳಿದಿದರ ನೆಲೆಯನರಿತವರನೊಬ್ಬರ ಕಾಣೆ |ಚೆಲುವಸಿರಿಪುರಂದರವಿಠಲ ತಾ ಬಲ್ಲ3
--------------
ಪುರಂದರದಾಸರು